Author: admin

ಬೇಲೂರು: ವ್ಯಾಪಾರ ಮಾಡುವ ನೆಪದಲ್ಲಿ ಅಂಗಡಿಗೆ ಬಂದ ವ್ಯಕ್ತಿ ಮಾಲೀಕನನ್ನು ಯಾಮಾರಿಸಿ ಗಲ್ಲಾ ಪೆಟ್ಟಿಗೆ ಬೀಗ ಮುರಿದು 2 ಲಕ್ಷ ರೂ. ನಗದು ದೋಚಿ ಪರಾರಿಯಾಗಿರುವ ಘಟನೆ ಬೇಲೂರು ತಾಲೂಕು ಹಗರೆಯಲ್ಲಿ ನಡೆದಿದೆ. ಹಗರೆಯ ಸಿದ್ದಲಿಂಗೇಶ್ವರ ಟ್ರೇಡರ್ಸ್ ಕೀಟನಾಶಕ ಅಂಗಡಿಗೆ ಚೀಲ ಕೊಳ್ಳುವ ನೆಪದಲ್ಲಿ ಬಂದ ಅಪರಿಚಿತ ವ್ಯಕ್ತಿ ಮೊದಲು ಇಪ್ಪತ್ತು ಚೀಲ ಕೊಂಡು ಕೊಂಡು ಹಣ ನೀಡಿದ್ದಾನೆ. ನಂತರ ಮತ್ತೆ ನೂರೈವತ್ತು ಚೀಲ ಬೇಕೆಂದು ಕೇಳಿದ್ದಾನೆ. ಅಷ್ಟು ಚೀಲ ಅಂಗಡಿಯಲ್ಲಿ ದಾಸ್ತಾನಿಲ್ಲದ ಕಾರಣಕ್ಕಾಗಿ ಪಕ್ಕದ ಮಳಿಗೆಯಿಂದ ಚೀಲ ಇರುವುದಾಗಿ ತಿಳಿಸಿದ ಮಾಲೀಕ ಶಿವಣ್ಣ ನೂರೈವತ್ತು ಚೀಲದ ಹಣ ಪಡೆದು ಚೀಲ ತರುವುದಾಗಿ ಅನತಿ ದೂರದಲ್ಲಿರುವ ಮಳಿಗೆಗೆ ಹೋಗಿದ್ದಾರೆ. ಆ ಸಮಯವನ್ನೇ ಕಾಯುತ್ತಿದ್ದ ವ್ಯಕ್ತಿ ಗಲ್ಲಪೆಟ್ಟಿಗೆಯನ್ನು ಕಬ್ಬಿಣದ ಸರಳಿನಿಂದ ಮೀಟಿ ಬೀಗವನ್ನು ಹೊರ ತೆಗೆದು ಎರಡು ಲಕ್ಷ ರೂ.ಗೂ ಹೆಚ್ಚು ಹಣವನ್ನು ದೋಚಿ ಪರಾರಿಯಾಗಿದ್ದಾನೆ. ಮಾಲೀಕ ಚೀಲ ತೆಗೆದುಕೊಂಡು ಬಂದು ನೋಡಿದಾಗ ಹಣ ಕಳುವಾಗಿರುವುದು ಕಂಡು ಬಂದಿದ್ದು ಕೂಡಲೇ ಬೈಕ್ ನಲ್ಲಿ…

Read More

ನರಸಿಂಹರಾಜಪುರ:ಸಾರ್ವಜನಿಕ ಸ್ಥಳದಲ್ಲಿ ಲಾಂಗ್ (ತಲವಾರ್) ಝಳಪಿಸುತ್ತ ಸೆರೆಹಿಡಿದ ಚಿತ್ರವನ್ನು ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡ ಹಾಗೂ ವಾಹನದಲ್ಲಿ ಲಾಂಗ್ ಇರಿಸಿಕೊಂಡು ಸಂಚರಿಸಿದ ಆರೋಪದ ಮೇಲೆ ಯುವಕರಿಬ್ಬರನ್ನು ಪೊಲೀಸರು ಸಂಜೆ ಬಂಧಿಸಿದ್ದಾರೆ. ಪಟ್ಟಣದ ೬ನೇ ವಾರ್ಡ್ ಬೆಟ್ಟಗೆರೆ ನಿವಾಸಿಗಳಾದ ಮೆಕಾನಿಕ್ ಸೈಯದ್ ಸಲ್ಮಾನ್ (೨೨) ಮತ್ತು ಕಾರ್ಪೆಂಟರ್ ಮಹಮ್ಮದ್ ಸಾದಿಕ್ (೨೫) ಬಂಧಿತರು. ಇಬ್ಬರು ವ್ಯಕ್ತಿಗಳು ಕಪ್ಪು ಕಾರಿನಲ್ಲಿ ಲಾಂಗ್ ಇರಿಸಿಕೊಂಡು ಹೆದರಿಕೆ ಹುಟ್ಟಿಸುವ ರೀತಿಯಲ್ಲಿ ಶೆಟ್ಟಿಕೊಪ್ಪ ಗ್ರಾಮದ ಕಡೆಯಿಂದ ಬರುತ್ತಿದ್ದಾರೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಇನ್ ಸ್ಪೆಕ್ಟರ್ ಗುರುದತ್ ಕಾಮತ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ಮಾಡಿದ್ದರು. ತಾಲ್ಲೂಕಿನ ಸೌತಿಕೆರೆ ಗ್ರಾಮದ ಬಳಿ ಕಾರನ್ನು ತಡೆದು ಪರಿಶೀಲಿಸಿದಾಗ ಲಾಂಗ್ ಕಂಡುಬಂದಿತ್ತು. ನಮ್ಮನ್ನು ನೋಡಿ ಜನರು ಹೆದರಿಕೊಳ್ಳಬೇಕು ಎಂಬ ಉದ್ದೇಶ ದಿಂದ ಲಾಂಗ್ ತೋರಿಸುತ್ತ ಓಡಾಡಿದ್ದೆವು ಎಂದು ಆರೋಪಿಗಳು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆಯುಧ ಮತ್ತು ಕಾರು ವಶಪಡಿಸಿ ಕೊಂಡಿರುವ ಪೊಲೀಸರು ಆಯುಧ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಯುವರಾಜ್,…

Read More

ವಿಜಯಪುರ: ಗ್ಯಾರಂಟಿ ಯೋಜನೆ ಜಾರಿಗೆ ತಂದು ಸರ್ಕಾರದ ಖಜಾನೆ ಖಾಲಿಯಾಗಿದೆ. ಬ್ರಿಟಿಷ್ ಮಾದರಿಯಲ್ಲಿ ಉಪ್ಪಿನ ಮೇಲೆ ಕರ ವಿಧಿಸಿದಂತೆ ದರ ಏರಿಕೆ ಮಾಡಿದ್ದಾರೆ. ಗ್ಯಾರಂಟಿ ಯೋಜನೆಗಳನ್ನೇ ಸರಿಯಾಗಿ ನೀಡುತ್ತಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದೇ ವೇಳೆ ವಕ್ಫ್ ಆಸ್ತಿ ಕುರಿತು ಪ್ರಸ್ತಾಪಿಸಿದ ಯತ್ನಾಳ್, ದೇಶದಲ್ಲಿ 12 ಲಕ್ಷ ಎಕರೆ ಜಮೀನು ವಕ್ಫ್ ಆಸ್ತಿ ಇದೆ. ಇದನ್ನು ಬಡವರಿಗೆ ಹಂಚಿಕೆ ಮಾಡಿ. ಇವೆಲ್ಲವನ್ನು ಮಾಜಿ ಪ್ರಧಾನಿ ದಿ.ನೆಹರೂ ಮಾಡಿದ್ದಾರೆ. ವಕ್ಫ್ ನವರು ಇದು ನಮ್ಮ ಆಸ್ತಿ ಎಂದರೆ ನ್ಯಾಯಾಲಯಕ್ಕೆ ಹೋಗಲಾಗೊಲ್ಲ. ವಿಶೇಷ ನ್ಯಾಯಾಲಯಕ್ಕೆ ಹೋಗಬೇಕು. ಅಲ್ಲಿ ನ್ಯಾಯವಾದಿಯೂ ಮುಸ್ಲಿಂ ಇರುತ್ತಾನೆ. ಎಲ್ಲರೂ ಅವರೇ ಅಲ್ಲಿ ನಮಗೆ ನ್ಯಾಯ ಸಿಗೊಲ್ಲ. ನಮಗೆ ನೆಹರು ಮಾಡೆಲ್ ಬೇಡ, ನಮಗೆ ಮೋದಿ ಯೋಜನೆ ಬೇಕು ಎಂದರು. ವಿಜಯಪುರದಲ್ಲಿ ವಕ್ಫ್ ಆಸ್ತಿ ಕುರಿತು ಹೈಕೋರ್ಟ್‌ಗೆ ಹೋಗುತ್ತೇನೆ. ದೇಶದ 12 ಲಕ್ಷ ಎಕರೆ ವಕ್ಫ್ ಆಸ್ತಿ ಬಡವರಿಗೆ ಹೋಗಬೇಕು. ಬಡವರಿಗೆ…

Read More

ವಿಶ್ವದಾದ್ಯಂತ ಮೊಟ್ಟೆಗಳನ್ನು ಪ್ರೋಟೀನ್ ಗಳ ನಿಧಿ ಎಂದು ಹೇಳಲಾಗುತ್ತದೆ. ಪ್ರಪಂಚದಾದ್ಯಂತ ಜನರು ಬೆಳಗಿನ ಉಪಾಹಾರದಲ್ಲಿ ಮೊಟ್ಟೆಗಳನ್ನು ತಿನ್ನಲು ಇಷ್ಟಪಡುತ್ತಾರೆ.ಮೊಟ್ಟೆ ಆರೋಗ್ಯಕ್ಕೆ ಹೇಗೆ ಪ್ರಯೋಜನಕಾರಿಯಾಗಿದೆ ಎಂದು ಪೌಷ್ಟಿಕತಜ್ಞರು ಹೇಳುತ್ತಿದ್ದರೂ, ನೀವು ಅದನ್ನು ಹೇಗೆ ತಯಾರಿಸುತ್ತೀರಿ ಎಂಬುದರ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ಅವಲಂಬಿತವಾಗಿರುತ್ತದೆ. ಬಹುತೇಕ ಮಂದಿ ಮೊಟ್ಟೆಯ ಹಳದಿ ಭಾಗವನ್ನು ತ್ಯಜಿಸುತ್ತಾರೆ. ಆದರೆ ನಿಮಗೆ ಮೊಟ್ಟೆಯಿಂದ ಹೆಚ್ಚಿನ ಪೋಷಕಾಂಶ ಬೇಕು ಅನ್ನೋದಾದರೆ ಮೊಟ್ಟೆಯ ಹಳದಿಭಾಗವನ್ನೂ ತಿನ್ನಬೇಕು. ಏಕೆಂದರೆ ಮೊಟ್ಟೆಯಲ್ಲಿರುವ ಹೆಚ್ಚಿನ ಪೋಷಕಾಂಶಗಳು ಅದರ ಹಳದಿ ಲೋಳೆಯಲ್ಲಿಯೇ ಹೆಚ್ಚಾಗಿರುತ್ತವೆ. ಮೊಟ್ಟೆಯಹಳದಿ ಬಿಳಿ ಭಾಗವನ್ನೂ ತಿನ್ನೋದ್ರಿಂದ ಹೊಟ್ಟೆ ತುಂಬಿದಂತಿರುತ್ತದೆ. ಬಹಳ ಸಮಯ ಹೊಟ್ಟೆ ಹಸಿಯುವುದಿಲ್ಲ. ಹೀಗಾಗಿ ಇದನ್ನು ಡಯಟ್ ನಲ್ಲಿ ಸೇರಿಸೋದು ಬಹುಮುಖ್ಯ ಎನ್ನುತ್ತಾರೆ ನ್ಯೂಟ್ರಿಷಿಯನ್ಸ್. ಬಿ-5 ಶೇ.7, ವಿಟಮಿನ್ ಬಿ-12 ಶೇ.9 ರಂಜಕ ಶೇ.9, ವಿಟಮಿನ್ ಬಿ2 ಶೇ.15, ಸೆಲೆನಿಯಮ್ ಶೇ.22, ಇರುವುದರಿಂದ ಮೊಟ್ಟೆಯನ್ನು ತಿನ್ನುವಾಗ ಹಳದಿ ಭಾಗಕ್ಕೂ ಗಮನ ಕೊಡಿ ಸಂಪೂರ್ಣ ಪೋಷಕಾಂಶ ಹೊಂದಿ. ಒಂದು ಮಧ್ಯಮ ಗಾತ್ರದ ಮೊಟ್ಟೆ (53 ಗ್ರಾಂ)…

Read More

ಭಾರತೀಯರಲ್ಲಿ ಉಪವಾಸ ಎನ್ನುವುದು ಒಂದು ಸಂಪ್ರದಾಯ. ಒಂದು ದಿನ ಉಪವಾಸ ಮಾಡುವುದು ಆರೋಗ್ಯಕ್ಕೆ ಒಳ್ಳೆಯದು ಎಂಬ ಮಾತು ಕೇಳುತ್ತಿರುತ್ತೇವೆ. ಆದರೆ ಮೂರು ದಿನಗಳ ಕಾಲ ನೀರನ್ನು ಕುಡಿಯದೆ ಉಪವಾಸ ಮಾಡುವುದರಿಂದ ದೇಹದ ಮೇಲೆ ಅಪಾಯಕಾರಿ ಪರಿಣಾಮ ಬೀರುತ್ತದೆ ಎಂಬುದು ಸಂಶೋಧನೆಯಲ್ಲಿ ತಿಳಿದುಬಂದಿದೆ. ಇಷ್ಟು ದಿನ ನಿರ್ಜಲ ವ್ರತವನ್ನು ಆಚರಿಸಿದಾಗ ದೇಹದಲ್ಲಿ ಶಕ್ತಿಯ ಕೊರತೆ ಉಂಟಾಗಿ ದೇಹದಲ್ಲಿ ಸಂಗ್ರಹವಾಗಿರುವ ಗ್ಲೈಕೋಜನ್ ಕಡಿಮೆಯಾಗುತ್ತದೆ. ಇದರಿಂದಾಗಿ ರಕ್ತದಲ್ಲಿನ ಸಕ್ಕರೆಯ ಪ್ರಮಾಣವು ಕಡಿಮೆಯಾಗುತ್ತದೆ. ನಿರ್ಜಲ ಉಪವಾಸ ಮುಂದುವರಿದಂತೆ ದೇಹದಲ್ಲಿ ಕೀಟೋಸಿಸ್ ಪ್ರಮಾಣವು ಹೆಚ್ಚಾಗಲು ಪ್ರಾರಂಭಿಸುತ್ತದೆ. ಇದರಿಂದ ದೇಹದಲ್ಲಿ ಸಂಗ್ರಹವಾದ ಕೊಬ್ಬು ಕೂಡ ಕಡಿಮೆಯಾಗಲು ಪ್ರಾರಂಭಿಸುತ್ತದೆ. ಉಪವಾಸದ ಸಮಯದಲ್ಲಿ ಇನ್ಸುಲಿನ್ ಮಟ್ಟವು ಸಂಭಾವ್ಯವಾಗಿ ಕಡಿಮೆಯಾಗುತ್ತದೆ. 72 ಗಂಟೆಗಳ ಕಾಲ ಉಪವಾಸವು ಒಟ್ಟು 7,000 ಕ್ಯಾಲೋರಿಗಳ ನಷ್ಟಕ್ಕೆ ಕಾರಣವಾಗುತ್ತದೆ. ಇದು ಸರಿಸುಮಾರು ಎರಡು ಪೌಂಡ್ಗಳಷ್ಟು ಕೊಬ್ಬಿನ ನಷ್ಟಕ್ಕೆ ಸಮನಾಗಿರುತ್ತದೆ ಎನ್ನಲಾಗಿದೆ. ಬದಲಾಯಿಸಲಾಗದ ಮೂತ್ರಪಿಂಡದ ಗಾಯ, ಹೈಪೊಟೆನ್ಷನ್, ಆರ್ಹೆತ್ಮಿಯಾ, ಮತ್ತು ಹೈಪರ್ಯುರಿಸೆಮಿಯಾ, ಕಡಿಮೆ ಸೋಡಿಯಂ, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಕ್ಯಾಚೆಕ್ಸಿಯಾ / ನೇರ…

Read More

ಚೂಯಿಂಗ್ ಗಮ್ ಅನ್ನು ನುಂಗುವುದರಿಂದ ಯಾವುದೇ ಅಡ್ಡ ಪರಿಣಾಮವಿದೆಯೇ? ದೇಹದ ಭಾಗಗಳ ಮೇಲೆ ಇದು ಯಾವುದಾದರು ಪರಿಣಾಮ ಬಿರುತ್ತದೆಯೇ? ಚೂಯಿಂಗ್ ಗಮ್ ಸುಮಾರು 7 ವರ್ಷಗಳ ಕಾಲ ಹೊಟ್ಟೆಯಲ್ಲಿ ಇರುತ್ತದೆ ಎಂಬ ಮಾತಿದೆ. ಚೂಯಿಂಗ್ ಗಮ್ ಅನ್ನು ನುಂಗುವುದರಿಂದ ಅದು ಹೊಟ್ಟೆಯ ಮೂಲಕ ಹಾದುಹೋದ ನಂತರ ಕರುಳನ್ನು ನಿರ್ಬಂಧಿಸಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಚ್ಯೂಯಿಂಗ್ ಗಮ್ ಜೀರ್ಣವಾಗುವುದಿಲ್ಲ ಎಂದು ಹೇಳಲಾಗುತ್ತದೆ. ಏಕೆಂದರೆ.. ಇದು ಕರಗದ ವಸ್ತುವಿನಿಂದ ಮಾಡಲ್ಪಟ್ಟಿದೆ. ಆದರೂ, ಅದನ್ನು ನುಂಗಿದರೆ, ಅದು ಕೆಲವು ಗಂಟೆಗಳಲ್ಲಿ ಅಥವಾ ಕೆಲವು ದಿನಗಳ ನಂತರವೂ ಮಲದಲ್ಲಿ ಸ್ವತಃ ಹಾದುಹೋಗುತ್ತದೆ ಎಂದು ಹೇಳಲಾಗುತ್ತದೆ. ಚೂಯಿಂಗ್ ಗಮ್ ಅನ್ನು ಯಾವಾಗಲೂ ಸೀಮಿತ ಪ್ರಮಾಣದಲ್ಲಿ ಸೇವಿಸಬೇಕು. ಚೂಯಿಂಗ್ ಗಮ್ ಅನ್ನು ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಹಾನಿಗೊಳಿಸುತ್ತದೆ. ಇದು ಆರೋಗ್ಯಕ್ಕೆ ಹಾನಿಕಾರಕ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ:…

Read More

ಹಲ್ಲು ನೋವನ್ನು ಮನೆಮದ್ದುಗಳಿಂದ ಸುಲಭವಾಗಿ ಗುಣಪಡಿಸಬಹುದು. ಅಡುಗೆ ಮನೆಯಲ್ಲೇ ಇರುವ ಕೆಲವು ವಸ್ತುಗಳನ್ನು ಬಳಸಿ ಮದ್ದು ತಯಾರಿಸಬಹುದು.. ಲವಂಗದಿಂದ ಹಲ್ಲು ನೋವನ್ನು ನಿವಾರಿಸಬಹುದು. ಹಲ್ಲುನೋವು ಸಮಸ್ಯೆಗೆ ಲವಂಗದ ಎಣ್ಣೆ ತುಂಬಾ ಒಳ್ಳೆಯದು. ಲವಂಗದ ಎಣ್ಣೆಯಿಂದ ಹಲ್ಲುನೋವು ನಿವಾರಣೆಯಾಗುತ್ತದೆ. ಲವಂಗದ ಎಣ್ಣೆಯು ಯುಜೆನಾಲ್ ಎಂಬ ಸಂಯುಕ್ತವನ್ನು ಹೊಂದಿರುತ್ತದೆ. ಇದು ಹಲ್ಲುನೋವು, ಸೋಂಕುಗಳು, ಬ್ಯಾಕ್ಟೀರಿಯಾದ ಬೆಳವಣಿಗೆಯನ್ನು ತಡೆಯುತ್ತದೆ. ಇದಲ್ಲದೆ, ಲವಂಗ ಎಣ್ಣೆಯು ಬ್ಯಾಕ್ಟೀರಿಯಾ ವಿರೋಧಿ, ಆಂಟಿಫಂಗಲ್ ಮತ್ತು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ಹಲ್ಲುನೋವು ಕಡಿಮೆ ಮಾಡಲು ಇದು ಉಪಯುಕ್ತವಾಗಿದೆ. ಲವಂಗದ ಎಣ್ಣೆ ತಯಾರಿಸುವ ವಿಧಾನ ಲವಂಗವನ್ನು ತೆಗೆದುಕೊಂಡು ಚೆನ್ನಾಗಿ ರುಬ್ಬಿಕೊಳ್ಳಿ, ಗಾಜಿನ ಪಾತ್ರೆಯಲ್ಲಿ ಹಾಕಿ, ಲವಂಗವನ್ನು ಮುಚ್ಚುವಷ್ಟು ಆಲಿವ್ ಎಣ್ಣೆಯನ್ನು ಸುರಿಯಿರಿ ಮತ್ತು ಅದನ್ನು ಮುಚ್ಚಿ. ನಂತರ ಒಂದು ವಾರ ಅಥವಾ ಎರಡು ವಾರಗಳ ಕಾಲ ನೇರ ಸೂರ್ಯನ ಬೆಳಕಿನಲ್ಲಿ ಇರಿಸಿ, ಅದನ್ನು ಫಿಲ್ಟರ್ ಮಾಡಿ ಮತ್ತು ಲವಂಗ ಎಣ್ಣೆಯನ್ನು ಮತ್ತೊಂದು ಗಾಜಿನ ಪಾತ್ರೆಯಲ್ಲಿ ಸುರಿಯಿರಿ ಮತ್ತು ಅದನ್ನು ಬಳಸಿ.. ನೋವು ಎಲ್ಲಿದೆಯೋಮ…

Read More

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು (ಎಎಸ್‌ಐ) ನಡೆಸಿದ ಉತ್ಖನನದ ವೇಳೆ ‘ಶೇಷಶಾಯಿ ವಿಷ್ಣು’ ವಿಗ್ರಹ ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯ ಸಿಂಧಖೇಡ್ ರಾಜಾ ಪಟ್ಟಣದಲ್ಲಿ ಪತ್ತೆಯಾಗಿದೆ. ಲಖುಜಿ ಜಾಧವರಾವ್ ಮಹಾರಾಜ್‌ ಛತ್ರಿ ಎಂಬ ಸಭಾಮಂಟಪವನ್ನು ಅನ್ವೇಷಿಸುವಾಗ ಶಿಲ್ಪ ಪತ್ತೆಯಾಗಿದೆ ಎಂದು ನಾಗ್ಪುರದ ಪುರಾತತ್ವಶಾಸ್ತ್ರಜ್ಞರು ತಿಳಿಸಿದ್ದಾರೆ. ಸಭಾಮಂಟಪದ ಪತ್ತೆಗೆ ಉತ್ಖನನದ ವೇಳೆ ಆಳವಾಗಿ ಪರಿಶೀಲನೆ ನಡೆಸಿದಾಗ ಮೊದಲಿಗೆ ಲಕ್ಷ್ಮಿ ದೇವಿಯ ವಿಗ್ರಹ ಪತ್ತೆಯಾಗಿದೆ, ನಂತರ ಶೇಷಶಾಯಿ ವಿಷ್ಣುವಿನ (ಮಲಗಿದ ರೂಪದಲ್ಲಿರುವ) ಬೃಹತ್‌ ವಿಗ್ರಹ ಪತ್ತೆಯಾಗಿದೆ. ಈ ಶಿಲ್ಪವು ಕ್ಲೋರೈಟ್ ಶಿಸ್ಟ್ ಶಿಲೆಯಿಂದ ಮಾಡಲ್ಪಟ್ಟಿದೆ. ಈ ರೀತಿಯ ಶಿಲ್ಪಗಳನ್ನು ಹೆಚ್ಚಾಗಿ ದಕ್ಷಿಣ ಭಾರತದಲ್ಲಿ ಹೊಯ್ಸಳು ತಯಾರಿಸುತ್ತಿದ್ದರು. ಇದರಲ್ಲಿ ವಿಷ್ಣು, ಶೇಷ ನಾಗನ ಮೇಲೆ ಮಲಗಿರುವ ಮತ್ತು ಲಕ್ಷ್ಮಿ ದೇವಿಯು ಕುಳಿತುಕೊಂಡು ವಿಷ್ಣುವಿನ ಪಾದಗಳನ್ನು ಒತ್ತುತ್ತಿರುವ ದೃಶ್ಯವಿದೆ. ವಿಗ್ರಹದ ಸುತ್ತಲೂ ವಿಷ್ಣು ದಶಾವತಾರ, ಸಮುದ್ರಮಂಥನವನ್ನು ಚಿತ್ರಿಸಲಾಗಿದೆ. ಸಮುದ್ರಮಂಥನದ ಅಶ್ವ, ಐರಾವತ ಮುಂತಾದವುಗಳೂ ವಿಗ್ರಹದ ಮೇಲೆ ಕಾಣಸಿಗುತ್ತವೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ನಟಿ ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ ಭಾನುವಾರ ವಿವಾಹವಾಗಿದೆ.ಇತ್ತೀಚೆಗಷ್ಟೇ ನಟಿಯ ಕುಟುಂಬಕ್ಕೆ ಅವರ ಮದುವೆಯಲ್ಲಿ ಸಂತೋಷವಿಲ್ಲ ಎಂಬ ವದಂತಿಗಳು ಹಬ್ಬಿದ್ದವು. ಈ ವರದಿಗಳಿಗೆ ಅಂತ್ಯ ಹಾಡುವ ಮೂಲಕ, ಶತ್ರುಘ್ನ ಸಿನ್ಹಾ ಇತ್ತೀಚೆಗೆ ಜಹೀರ್ ಮನೆಯಲ್ಲಿ ಕಾಣಿಸಿಕೊಂಡರು. ಮದುವೆ ಕಾರ್ಯಕ್ರಮದ ಕೆಲವು ಫೋಟೋಗಳು ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​ ಆಗಿದೆ. ನಟಿ ಸೋನಾಕ್ಷಿ ಸಿನ್ಹಾ ಬಹುಕಾಲದ ಗೆಳೆಯ ಜಹೀರ್‌ ಇಕ್ಬಾಲ್‌ ಜತೆ ಮದುವೆ  ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆದಿದೆ, ಸೋನಾಕ್ಷಿ ಸಿನ್ಹಾ ಮದುವೆಯ ಬಳಿಕ ಜಹೀರ್‌ ಇಕ್ಬಾಲ್‌ ಅವರ ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳಲಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ. ಇದೀಗ ಈ ಬಗ್ಗೆ ಜಹೀರ್ ಅವರ ತಂದೆ, ಉದ್ಯಮಿ ಇಟ್ಬಾಲ್ ರತ್ನಾಸಿ ಅವರು ಸ್ಪಷ್ಟನೆ ಕೊಟ್ಟಿದ್ದಾರೆ. ಜಹೀರ್ ಮದುವೆ ಸ್ಪೆಷಲ್ ಮ್ಯಾರೇಜ್ ಆಕ್ಟ್ ಅಡಿಯಲ್ಲಿ ನಡೆಯಲಿದೆ. ಮದುವೆ ಬಳಿಕ ಸೋನಾಕ್ಷಿ ಇಸ್ಲಾಂಗೆ ಮತಾಂತರಗೊಳ್ಳುವುದಿಲ್ಲ. ಈ ಮದುವೆ ಹಿಂದೂ ಅಥವಾ ಮುಸ್ಲಿಂ ಆಚರಣೆಗಳನ್ನು ಹೊಂದಿರುವುದಿಲ್ಲ ಮತ್ತು ವಿಭಿನ್ನವಾಗಿರಲಿದೆ ಎಂದಿದ್ದಾರೆ. ನಟಿ ಸೋನಾಕ್ಷಿ ಮತ್ತು ಇಕ್ಬಾಲ್‌ 2022ರಲ್ಲಿ ಬಿಡುಗಡೆಯಾದ…

Read More

ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್‌ ಊಟ ಸೇರದೆ ನಿದ್ದೆ ಬಾರದೇ ಒದ್ದಾಡುತ್ತಿದ್ದಾರೆ.. ಕ್ವಾರಂಟೀನ್‌ ಬ್ಯಾರಕ್‌ನಲ್ಲಿ ದರ್ಶನ್‌ರನ್ನು ಇರಿಸಲಾಗಿದ್ದು, ಕಳೆದ ರಾತ್ರಿ ಅವರಿಗೆ ಸರಿಯಾಗಿ ನಿದ್ದೆ ಬಂದಿಲ್ಲ. ಜೊತೆ ಜೈಲೂಟವೂ ಅವರಿಗೆ ಸೇರುತ್ತಿಲ್ಲ ಎನ್ನಲಾಗಿದೆ.ಸರಿಯಾಗಿ ಜೈಲೂಟ ಸೇವಿಸದಿದ್ದರಿಂದ ನಿದ್ದೆ ಕೂಡಾ ಬಾರದೆ ಅವರು ಒದ್ದಾಡಿದ್ದಾರೆ ಎಂದು ತಿಳಿದುಬಂದಿದೆ.. ಇನ್ನು ದರ್ಶನ್‌ ಪತ್ನಿ ದರ್ಶನ್‌ ಅವರಿಗೆ ಬೇಲ್‌ ಕೊಡಿಸಲು ಕಸರತ್ತು ಮಾಡುತ್ತಿದ್ದಾರೆ.. ಅದಕ್ಕಾಗಿ ಖ್ಯಾತ ವಕೀಲ ಸಿ.ವಿ.ನಾಗೇಶ್‌ ಅವರನ್ನು ನೇಮಿಸಿದ್ದಾರೆ.ನಾಗೇಶ್‌ ಅವರು ದರ್ಶನ್‌ ಅವರ ಪರವಾಗಿ ಬೇಲ್‌ ಅಪ್ಲಿಕೇಷನ್‌ಗೆ ಸಿದ್ಧತೆ ನಡೆಸಿದ್ದಾರೆ.ಶೀಘ್ರದಲ್ಲೇ ದರ್ಶನ್‌ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗುತ್ತದೆ.ಆದ್ರೆ ಕೋರ್ಟ್‌ ಅವರಿಗೆ ಜಾಮೀನು ಕೊಡುತ್ತಾ ಇಲ್ಲವಾ ಅನ್ನೋದೇ ಕುತೂಹಲ.ದರ್ಶನ್‌ಗೆ ಜಾಮೀನು ಸಿಕ್ಕರೆ ಅವರ ಮೇಲೆ ಹೂಡಿಕೆ ಮಾಡಿರುವ ಚಿತ್ರ ನಿರ್ಮಾಪಕ ನಿಟ್ಟುಸಿರು ಬಿಡಲಿದ್ದಾರೆ.ಆದ್ರೆ ಸಿ.ವಿ.ನಾಗೇಶ್‌ ಯಾವ ರೀತಿ ವಾದ ಮಾಡುತ್ತಾರೆ.? ಕೋರ್ಟ್‌ ಅದಕ್ಕೆ ಮನ್ನಣೆ ಕೊಡುತ್ತದಾ ನೋಡಬೇಕು.. ಇನ್ನೂ ಎಲ್ಲಾ 17 ಆರೋಪಿಗಳನ್ನೂ ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿಡಲಾಗಿದೆ.. ಆದ್ರೆ ಒಂದೇ…

Read More