Subscribe to Updates
Get the latest creative news from FooBar about art, design and business.
- ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
- ತಿಪಟೂರು: ಜೂನ್ 1ರಿಂದ ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
- ತುಮಕೂರು: ವಾಟರ್ ಟ್ಯಾಂಕ್ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು, ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
- ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
- ತುರುವೇಕೆರೆ: ಜೂ. 4ರಂದು ಉಚಿತ ಯೋಗ, ಪ್ರಾಣಾಯಾಮ ತರಗತಿಗಳ ಉದ್ಘಾಟನೆ
- ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
- ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ
Author: admin
ಹದಿನೇಳು ವರ್ಷದ ಪರ್ವೀನಾ ಎಂಬ ಬಾಲಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹರಿಯಾಣದ ಫರಿದಾಬಾದ್ನಲ್ಲಿ ನಡೆದಿದೆ.ಘಟನೆಗೆ ಸಂಬಂಧಿಸಿದಂತೆ ಈಕೆಯ ತಾಯಿ ಅನೀತಾ ಬೇಗಂಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.. ಸೌದಿಯಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿಯ ತಂದೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಬಾಲಕಿಯ ತಾಯಿಯನ್ನು ಬಂಧಿಸಲಾಗಿದೆ.. ಘಟನೆಯ ವಿವರ: ಅನೀತಾ ಬೇಗಂನ ಗಂಡ ತಾಹೀರ್ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಾರೆ. ತಾಹೀರ್ ಪತ್ನಿ ಹಾಗೂ ಮಗಳು ಫರೀದಾಬಾದ್ನಲ್ಲಿ ವಾಸಿಸುತ್ತಿದ್ದರು.ಗಂಡ ಯಾವಾಗಲೂ ಕರೆ ಮಾಡಿ ಇಬ್ಬರನ್ನೂ ಮಾತನಾಡಿಸುತ್ತಿದ್ದ.ಆದ್ರೆ ಕೆಲ ದಿನಗಳಿಂದ ಪತ್ನಿ ಮಾತ್ರ ಮಾತನಾಡುತ್ತಿದ್ದಳು. ಮಗಳ ಬಗ್ಗೆ ಕೇಳಿದರೆ ಏನೇನೋ ಸಬೂಬು ಹೇಳುತ್ತಿದ್ದಳು.ಇದರಿಂದ ಅನುಮಾನಗೊಂಡ ತಾಹೀರ್ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಪೊಲೀಸರು ಮನೆಗೆ ಹೋಗಿ ವಿಚಾರಣೆ ಮಾಡಿದಾಗ ಮಗಳು ಪರ್ವೀನಾ ಅಲ್ಲಿ ಇರಲಿಲ್ಲ. ಅನುಮಾನಗೊಂಡ ಪೋಲಿಸರು ಬಾಲಕಿಯ ತಾಯಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದಾಗ ಮನೆಯಲ್ಲೇ ಮಗಳನ್ನು ಹೂತುಹಾಕಿದ್ದಾಗಿ ಆಕೆ ಹೇಳಿಕೊಂಡಿದ್ದಾಳೆ. ನಾನು ಮಗಳನ್ನು ಕೊಲೆ ಮಾಡಿಲ್ಲ. ಮಗಳು ಪರ್ವೀನಾ ಹುಡುಗನೊಬ್ಬನನ್ನು ಪ್ರೀತಿಸುತ್ತಿದ್ದಳು. ಹೀಗಾಗಿ…
ತೆಂಗಿನ ಎಣ್ಣೆಯ ಅನೇಕ ಆರೋಗ್ಯ ಪ್ರಯೋಜನಗಳಿಂದಾಗಿ ಅಪಾರ ಜನಪ್ರಿಯತೆಯನ್ನು ಗಳಿಸಿದೆ. ಇದನ್ನು ಪ್ರತಿನಿತ್ಯ ಸೇವಿಸುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು. ಪ್ರತಿದಿನ ಬೆಳಗ್ಗೆ ಬರಿ ಹೊಟ್ಟೆಯಲ್ಲಿ ಒಂದು ಚಮಚ ತೆಂಗಿನೆಣ್ಣೆಯನ್ನು ಸೇವಿಸಿದರೆ ಒಂದು ತಿಂಗಳೊಳಗೆ ದೇಹಕ್ಕೆ ಹಲವಾರು ಅದ್ಭುತವಾದ ಲಾಭಗಳು ಸಿಗುತ್ತವೆ. ಚಯಾಪಚಯ ವರ್ಧನೆ; ತೆಂಗಿನ ಎಣ್ಣೆಯಲ್ಲಿ ಮಧ್ಯಮ ಸರಪಳಿ ಕೊಬ್ಬಿನಾಮ್ಲಗಳು ಇರುವುದರಿಂದ ನಮ್ಮ ದೇಹಕ್ಕೆ ಸುಲಭವಾಗಿ ಲಭ್ಯವಿರುವ ಶಕ್ತಿಯ ಮೂಲವನ್ನು ಒದಗಿಸುತ್ತದೆ. ಇದು ನಮ್ಮ ಚಯಾಪಚಯವನ್ನು ವೇಗಗೊಳಿಸುತ್ತದೆ. ತೆಂಗಿನ ಎಣ್ಣೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಜ್ವರ ಮತ್ತು ರೋಗಗಳನ್ನು ದೂರವಿಡುತ್ತದೆ. ಜೀರ್ಣಕ್ರಿಯೆ; ತೆಂಗಿನ ಎಣ್ಣೆ ಸೇವನೆಯು ಕರುಳಿನ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದರ ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳು ಅನಗತ್ಯ ಕರುಳಿನ ಬ್ಯಾಕ್ಟೀರಿಯಾವನ್ನು ಕೊಲ್ಲುತ್ತವೆ. ಇದು ಹೊಟ್ಟೆಯುಬ್ಬರ, ಮಲಬದ್ಧತೆ ಮತ್ತು ಇತರ ಜೀರ್ಣಕಾರಿ ಅಸ್ವಸ್ಥತೆಗಳನ್ನು ಸಹ ನಿವಾರಿಸುತ್ತದೆ. ತೆಂಗಿನ ಎಣ್ಣೆಯು ಅಜೀರ್ಣಕ್ಕೆ ಕಾರಣವಾಗುವ ವಿವಿಧ ಬ್ಯಾಕ್ಟೀರಿಯಾ ಮತ್ತು ಶಿಲೀಂಧ್ರಗಳ ವಿರುದ್ಧ ಹೋರಾಡುತ್ತದೆ. ತೆಂಗಿನ ಎಣ್ಣೆಯಲ್ಲಿ ವಿಟಮಿನ್…
ಜೆಡಿಎಸ್ ವಿಧಾನಪರಿಷತ್ ಸದಸ್ಯ ಡಾ ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯದ ಆರೋಪದ ಪ್ರಕರಣವನ್ನು ಸಿಐಡಿಗೆ(CID) ವರ್ಗಾವಣೆ ಮಾಡಲಾಗಿದೆ. ಈಗಾಗಲೇ ಬಂಧನವಾಗಿರುವ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಹಿತೇಂದ್ರ ಆದೇಶ ಹೊರಡಿಸಿದ್ದಾರೆ ಎಂದು ವರದಿ ತಿಳಿಸಿದೆ. ಕಾನೂನು ಸುವ್ಯವಸ್ಥೆಯ ಎಡಿಜಿಪಿ ಹಿತೇಂದ್ರ ಸೂರಜ್ ರೇವಣ್ಣ ವಿರುದ್ಧದ ಪ್ರಕರಣವನ್ನು ಸಿಐಡಿಗೆ ವಹಿಸಿದ್ದು, ಈ ಸಂಬಂಧ ಹಾಸನ ಎಸ್ಪಿ, ಸಿಐಡಿ ಡಿಜಿಪಿಗೆ ಪತ್ರ ಬರೆದಿದ್ದಾರೆ. ಖುದ್ದು ಸಿಐಡಿ ಕಚೇರಿಗೆ ತೆರಳಿ ಕೇಸ್ ಫೈಲ್ ನೀಡುವಂತೆ ಸೂಚನೆ ನೀಡಿದ್ದಾರೆ. ಅಲ್ಲದೇ ತನಿಖೆಗೆ ತಯಾರಿ ಮಾಡಿಕೊಳ್ಳಲು ಸಿಐಡಿ ಅಧಿಕಾರಿಗಳಿಗೆ ಸಹ ಸೂಚಿಸಿದ್ದಾರೆ. ಈ ಸಂಬಂಧ ಗೃಹ ಸಚಿವ ಡಾ ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಕಂಪ್ಲೇಂಟ್ ಬಂದಿದೆ, ಎಫ್ಐಆರ್ ಸಹ ದಾಖಲಾಗಿದೆ. ಪ್ರಕರಣದ ತನಿಖೆ ಸಿಐಡಿಗೆ ವಹಿಸುತ್ತೇವೆ. ಇಂತಹ ಪ್ರಕರಣಗಳನ್ನ ಸಿಐಡಿಗೆ ಕೊಡಬೇಕಾಗುತ್ತದೆ ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಡಿಎಸ್ಪಿಯೊಬ್ಬರು ಮಹಿಳಾ ಪೊಲೀಸ್ ಪೇದೆ ಜೊತೆ ಲಾಡ್ಜ್ ವೊಂದರಲ್ಲಿ ಸಿಕ್ಕಿಬಿದ್ದು, ತನ್ನ ಉನ್ನತ ಹುದ್ದೆಯಿಂದೆ ಕೆಳದರ್ಜೆಯ ಪೊಲೀಸ್ ಪೇದೆ ಹುದ್ದೆಗೆ ಹಿಂಬಡ್ತಿ ಪಡೆದ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ. ಉನ್ನಾವೋದ ಬಿಘಪುರ್ ಠಾಣೆಯಲ್ಲಿ ಶಂಕರ್ ಕನೌಜಿಯಾ ಎಂಬವರು ಮೊದಲು ಸರ್ಕಲ್ ಆಫೀಸರ್ ಆಗಿ ಸೇವೆ ಸಲ್ಲಿಸಿದ್ದರು. ಆ ಬಳಿಕ ಡಿಎಸ್ಪಿ ಆಗಿ ಬಡ್ತಿ ಪಡೆದಿದ್ದರು. ಡಿಎಸ್ಪಿ ಆಗಿ ಹುದ್ದೆಗೇರಿದ ಬಳಿಕ ಅವರು ಮಹಿಳಾ ಪೇದೆಯೊಬ್ಬರ ಜೊತೆ ಸಂಬಂಧ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ. ಡಿಎಸ್ಪಿ ಶಂಕರ್ ಕನೌಜಿಯಾ ತನಗೆ ಕೌಟುಂಬಿಕ ವಿಚಾರದ ಕಾರಣದಿಂದ ತುರ್ತಾಗಿ ಒಂದು ವಾರದ ರಜೆ ಬೇಕಾಗಿದೆ ಎಂದು ರಜೆಯನ್ನು ತೆಗೆದುಕೊಂಡಿದ್ದರು. ರಜೆ ತೆಗೆದುಕೊಂಡು ಮನೆಗೆ ಹೋಗುವ ಬದಲು ಮಹಿಳಾ ಪೇದೆ ಜೊತೆ ನೇರವಾಗಿ ಕಾನ್ಪುರದ ಹೊಟೇಲ್ ವೊಂದರಲ್ಲಿ ತೆರಳಿ ಚೆಕ್ ಇನ್ ಆಗಿದ್ದಾರೆ ಎನ್ನಲಾಗಿದೆ.. ಈ ವೇಳೆ ತನ್ನ ಎರಡು ಮೊಬೈಲ್ ಫೋನ್ ನ್ನು ಸ್ವಿಚ್ಡ್ ಆಫ್ ಮಾಡಿಕೊಂಡಿದ್ದಾರೆ. ಇತ್ತ ಗಂಡ ಮನೆಗೆ ಬಾರದೇ ಇರುವುದರಿಂದ ಶಂಕರ್ ಅವರಿಗೆ…
ಸೂರಜ್ ರೇವಣ್ಣನ ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸುತ್ತಿದ್ದಂತೆಯೇ ಇತ್ತ ಹೊಳೆನರಸೀಪುರದಲ್ಲಿ ಸಂತ್ರಸ್ತನ ವಿರುದ್ಧವೇ ದೂರು ದಾಖಲಾಗಿದೆ. ಸೂರಜ್ ರೇವಣ್ಣನ ಆಪ್ತ ಶಿವಕುಮಾರ್ ಎನ್ನುವಾತ ಸಂತ್ರಸ್ತನ ವಿರುದ್ಧ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಬ್ಲ್ಯಾಕ್ ಮೇಲ್ ದೂರು ನೀಡಿದ್ದಾನೆ. ಆದ್ರೆ, ಇದೀಗ ಸಂತ್ರಸ್ತನ ದೂರಿನ ಅನ್ವಯ ಸೂರಜ್ನನ್ನು ಪೊಲೀಸರು ಅರೆಸ್ಟ್ ಮಾಡುತ್ತಿದ್ದಂತೆಯೇ ಸಂತ್ರಸ್ತನ ವಿರುದ್ಧ ದೂರು ನೀಡಿದ್ದ ಶಿವಕುಮಾರ್ ನಾಪತ್ತೆಯಾಗಿದ್ದಾನೆ. ಸೂರಜ್ ರೇವಣ್ಣ ಪರವಾಗಿ ದೂರು ನೀಡಿದ ನಂತರ ಶಿವಕುಮಾರ್ ಸಂಪರ್ಕ ಸಾಧ್ಯವಾಗುತ್ತಿಲ್ಲ. ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಶಿವಕುಮಾರ್ ನಾಪತ್ತೆಯಾಗಿದ್ದಾನೆ. ಸಂತ್ರಸ್ತನ ವಿರುದ್ಧ ಶಿವಕುಮಾರ್ ನೀಡಿದ್ದ ದೂರಿಗೆ ಸಾಕ್ಷಿ ನೀಡಲು ಹೋಗಿಯೇ ಸೂರಜ್ ರೇವಣ್ಣ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಈಗ ಶಿವಕುಮಾರ್, ಸೂರಜ್ ರೇವಣ್ಣ ಜೊತೆಗಿದ್ದೇ ಪಿತೂರಿ ನಡೆಸಿದ್ನಾ? ಎನ್ನುವ ಅನುಮಾನಗಳು ಎಡೆಮಾಡಿಕೊಟ್ಟಿವೆ. ‘ಸೂರಜ್ ರೇವಣ್ಣ ವಿರುದ್ಧದ ದೂರುದಾರ ಲೈಂಗಿಕ ಕಿರುಕುಳ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದ. ಐದು ಕೋಟಿ ಹಣ ನೀಡದಿದ್ದರೆ…
ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಸಾವನಪ್ಪಿದ ಘಟನೆ ಕಾರ್ಕಳದ ಬೆಳ್ಮಣ್ ಸಮೀಪದ ನಂದಳಿಕೆ ಕ್ರಾಸ್ ನಲ್ಲಿ ನಡೆದಿದೆ. ನಂದಳಿಕೆ ನಿವಾಸಿ ಪ್ರಣಮ್ಯ ಶೆಟ್ಟಿ (14) ಮೃತ ಬಾಲಕಿಯಾಗಿದ್ದಾರೆ. ನಂದಳಿಕೆಯ ಲಕ್ಷ್ಮೀ ಜನಾರ್ದನ ದೇವಾಲಯದ ಪೂಜೆಗೆಂದು ಹೆದ್ದಾರಿ ಬದಿ ನಡೆದುಕೊಂಡು ಹೋಗುವ ಸಂದರ್ಭದಲ್ಲಿ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ನಾಗ್ ಅಶ್ವಿನ್ ನಿರ್ದೇಶನದ ಸೈನ್ಸ್ ಫಿಕ್ಷನ್ ಫ್ಯಾಂಟಸಿ ಸಿನಿಮಾ ‘ಕಲ್ಕಿ 2898 AD’. ಪ್ರಭಾಸ್ ಜೊತೆಗೆ ಅಮಿತಾಬ್ ಬಚ್ಚನ್, ದೀಪಿಕಾ ಪಡುಕೋಣೆ ಹಾಗೂ ಕಮಲ್ ಹಾಸನ್ ರೀತಿಯ ಘಟಾನುಘಟಿ ಕಲಾವಿದರು ಚಿತ್ರದ ತಾರಾಗಣದಲ್ಲಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್ ಅಡಿಯಲ್ಲಿ ಅಶ್ವಿನಿ ದತ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಹೊಸ ಟ್ರೈಲರ್ ನೋಡಿ ಸಿನಿರಸಿಕರು ಬೆರಗಾಗಿದ್ದಾರೆ. ಸಿ.ಅಶ್ವಿನಿ ದತ್ ಮತ್ತು ಅವರ ಇಬ್ಬರು ಪುತ್ರಿಯರಾದ ಸ್ವಪ್ನಾ ಮತ್ತು ಪ್ರಿಯಾ ಅವರ ನೇತೃತ್ವದಲ್ಲಿ, 50 ವರ್ಷ ವಯಸ್ಸಿನ ನಿರ್ಮಾಣ ಸಂಸ್ಥೆಯು ಕಲ್ಕಿ 2898 ADಯನ್ನು ತಯಾರಿಸಲು 600 ಕೋಟಿ ರೂ. ಹೂಡಿಕೆ ಮಾಡುತ್ತಿದೆ. ಕಲ್ಕಿ 2898 AD ಇಷ್ಟೊಂದು ಹೈ ಬಜೆಟ್ನಲ್ಲಿ ತಯಾರಾದ ಮೊದಲ ಭಾರತೀಯ ಚಲನಚಿತ್ರವಾಗಿದೆ. ಕಲ್ಕಿ USA ಒಂದರಲ್ಲೇ 210 IMAX ಸ್ಕ್ರೀನ್ಗಳನ್ನು ಪಡೆಯುವಲ್ಲಿ ಗಮನಾರ್ಹವಾದ ಸಾಧನೆಯನ್ನು ಸಾಧಿಸಿದೆ, ಇದುವರೆಗಿನ ಯಾವುದೇ ಭಾರತೀಯ ಚಿತ್ರಕ್ಕೆ ಇಷ್ಟು ಸ್ಕ್ರೀನ್ ದೊರೆತಿರಲ್ಲಿಲ್ಲ. USAನಲ್ಲಿ ಮುಂಗಡ ಮಾರಾಟವು 2 ಮಿಲಿಯನ್ USD ಗಳಿಸಿದೆ ಎಂದು ವರದಿಯೊಂದರಿಂದ ತಿಳಿದುಬಂದಿದೆ.…
ನಟ ಯುವ ರಾಜ್ ಕುಮಾರ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಯುವ ರಾಜ್ ಕುಮಾರ್ ತಮ್ಮ ಪತ್ನಿ ಶ್ರೀದೇವಿಯಿಂದ ವಿಚ್ಛೇದನ ಬಯಸಿ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದಾರೆ. ವಿಚ್ಛೇದನ ಅರ್ಜಿಯಲ್ಲಿ ಸಹ ಅನೈತಿಕ ಸಂಬಂಧದ ಆರೋಪ ಮಾಡಲಾಗಿತ್ತು. ನಟಿ ಸಪ್ತಮಿ ಗೌಡ ಹೆಸರು ಈ ಪ್ರಕರಣದಲ್ಲಿ ಪ್ರಮುಖವಾಗಿ ಕೇಳಿ ಬಂದಿತ್ತು. ಇದೀಗ ಆಡಿಯೋ ಒಂದು ವೈರಲ್ ಆಗಿದ್ದು, ಅದು ಸಪ್ತಮಿ ಗೌಡ ಅವರದ್ದೇ ಎನ್ನಲಾಗುತ್ತಿದೆ. ಈ ಆಡಿಯೋವನ್ನು ಸಪ್ತಮಿ, ವಿಜಯ್ ಕಿರಗಂದೂರು ಅವರಿಗೆ ಕಳಿಸಿದ್ದಾರೆ ಎನ್ನಲಾಗುತ್ತಿದೆ. ‘ಯುವ’ ಸಿನಿಮಾದ ಸೆಟ್ ನಲ್ಲಿಯೇ ಶ್ರೀದೇವಿ ಬಂದು ಜಗಳ ಸಹ ಮಾಡಿದ್ದರು ಎಂಬ ಮಾತುಗಳು ಸಹ ಈ ಹಿಂದೆ ಕೇಳಿ ಬಂದಿದ್ದವು. ಇದೇ ಕಾರಣಕ್ಕೆ ನಿರ್ಮಾಪಕ ವಿಜಯ್ ಕಿರಗಂದೂರು ಅವರು ಸಪ್ತಮಿ ಹಾಗೂ ಯುವ ಇಬ್ಬರನ್ನೂ ತರಾಟೆಗೆ ತೆಗೆದುಕೊಂಡಿದ್ದರು ಎನ್ನಲಾಗಿತ್ತು. ಆ ಸಮಯದಲ್ಲಿ ಸಪ್ತಮಿ ಅವರು ನಿರ್ಮಾಪಕ ವಿಜಯ್ ಕಿರಗಂದೂರು ಅವರಿಗೆ ಈ ಕಳಿಸಿದ್ದ ಆಡಿಯೋ ಇದು ಎನ್ನಲಾಗುತ್ತಿದೆ. ಈಗ ವೈರಲ್ ಆಗಿರುವ ಆಡಿಯೋ ಮಹಿಳೆಯೊಬ್ಬರು…
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ದೇಶಾದ್ಯಂತ ಭಾರೀ ಸದ್ದು ಮಾಡ್ತಿದೆ. ಈ ಪ್ರಕರಣದಲ್ಲಿ ಈಗ ನಟ ದರ್ಶನ್ ಸೇರಿದಂತೆ 17 ಮಂದಿ ಅರೆಸ್ಟ್ ಆಗಿ, ಜೈಲಿಗೆ ಹೋಗಿದ್ದಾರೆ. ಇದೀಗ ಮತ್ತೊಂದು ಸುದ್ದಿ ಸಂಚಲನವಾಗಿದೆ.ರೇಣುಕಾಸ್ವಾಮಿ ಫೇಕ್ ಅಕೌಂಟ್ಗಳ ಮೂಲಕ ಸಾಕಷ್ಟು ಜನರಿಗೆ ಇದೇ ರೀತಿ ಕೆಟ್ಟ ಮೆಸೇಜ್ ಕಳುಹಿಸುತ್ತಿದ್ದ ಎನ್ನುವ ಆರೋಪ ಕೇಳಿಬರುತ್ತಿದೆ. ಇದೀಗ ‘ಬಿಗ್ ಬಾಸ್’ ಖ್ಯಾತಿಯ ಚಿತ್ರಾಲ್ ರಂಗಸ್ವಾಮಿ ಒಂದು ಗಂಭೀರ ಆರೋಪ ಮಾಡಿದ್ದಾರೆ. ಅದೇನೆಂದರೆ, ರೇಣುಕಾ ಸ್ವಾಮಿ ಕ್ರಿಯೆಟ್ ಮಾಡಿದ್ದ ಫೇಕ್ ಅಕೌಂಟ್ ಗಳಿಂದ ನನಗೂ ಅಶ್ಲೀಲ ಮೆಸೇಜ್ ಬಂದಿತ್ತು ಎಂದಿದ್ದಾರೆ. ಈ ಕುರಿತು ಚಿತ್ರಾಲ್ ರಂಗಾಸ್ವಾಮಿ ಅವರು, “ಸದ್ಯ ಏನು ನಡೆಯುತ್ತಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ನಾನು ಯಾರಿಗೂ ಸಪೋರ್ಟ್ ಮಾಡುವುದಕ್ಕೆ ಬಂದಿಲ್ಲ. ರೇಣುಕಾ ಸ್ವಾಮಿ ಫ್ಯಾಮಿಲಿಗೆ ದೇವರು ಆದಷ್ಟು ಶಕ್ತಿ ಕೊಡಲಿ. ಆದರೆ ಈ ರೇಣುಕಾ ಸ್ವಾಮಿ ಇನ್ನೂ ಒಂದಿಬ್ಬರಿಗೆ ಇದೇ ಮೆಸೇಜ್ ಕಳುಹಿಸಿದ್ದರು, ಅದಕ್ಕೆ ಸಂಬಂಧಿಸಿದಂತೆ ದೂರು ಕೂಡ ದಾಖಲಾಗಿತ್ತು. ಅವರು ಮೆಸೇಜ್ ಕಳುಹಿಸುತ್ತಿದ್ದ…
ತುಮಕೂರು: ಸಾಹಿತಿ ಡಾ.ಕಮಲಾ ಹಂಪನಾ ರವರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನುಡಿನಮನ ಸಲ್ಲಿಸಲಾಯಿತು. ಇದೇ ವೇಳೆ ಮಾತನಾಡಿದ ಜಿಲ್ಲಾ ಕಸಾಪ ಅಧ್ಯಕ್ಷರಾದ ಕೆ.ಎಸ್.ಸಿದ್ಧಲಿಂಗಪ್ಪ, ಕಮಲಾ ಹಂಪನಾರವರು ಅಧ್ಯಯನ, ಅಧ್ಯಾಪನ, ಲೇಖನ, ಭಾಷಣ ಮತ್ತು ಸಂಶೋಧನೆಗಳಿಂದ ೬೦ ವರ್ಷಗಳ ಕಾಲ ಸಾಹಿತ್ಯ ಕ್ಷೇತ್ರದಲ್ಲಿ ಅವಿರತವಾಗಿ ಕೃಷಿ ಮಾಡುತ್ತಾ ಬಂದಿದ್ದಾರೆ. ಸಮಕಾಲೀನ ಕನ್ನಡ ಸಾಹಿತ್ಯದ ಹಿರಿಯ ಬರಹಗಾರ್ತಿ. ಅವರ ದೀರ್ಘಕಾಲಿಕ ಹಾಗೂ ಮೌಲಿಕ ಕೊಡುಗೆಗೆ ಸಂದ ಗೌರವಗಳಲ್ಲಿ ಪ್ರಮುಖವಾದುವು, ಮೂಡುಬಿದರೆಯಲ್ಲಿ ನಡೆದ ಅಖಿಲ ಭಾರತ ೭೧ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, ಸರ್ಕಾರದ ಪುರಸ್ಕಾರವಾದ ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯವು ಕೊಡಮಾಡುವ ನಾಡೋಜ ಪ್ರಶಸ್ತಿ. ಡಾ. ಕಮಲಾ ಹಂಪನಾ ಅವರ ಬರವಣಿಗೆಯ ಹರಹು ದೊಡ್ಡದು ಎಂದರು. ಅವರ ಸಮಗ್ರ ಸಾಹಿತ್ಯವನ್ನು ಒಳಗೊಂಡ ಒಂಬತ್ತು ಬೃಹತ್ ಸಂಪುಟಗಳು ಹೊರಬಂದಿವೆ. ಸಂಶೋಧನೆ ಅವರ ಮೊದಲ ಆಯ್ಕೆ. ಪ್ರಕಟವಾದ ೬೦ಕ್ಕೂ ಹೆಚ್ಚು ಕೃತಿಗಳಲ್ಲಿ ಸೃಜನಕೃತಿಗಳೂ ಸೇರಿವೆ. ನಾಟಕ, ಕತೆಗಳು ಮತ್ತು ವಚನಗಳಲ್ಲಿ…