Author: admin

ಸಾಮೂಹಿಕ ಅತ್ಯಾಚಾರಕ್ಕೊಳಗಾದ ಮಹಿಳೆ ಅರೆಬೆತ್ತಲಾಗಿ ಸುಮಾರು 1.5 ಕಿ.ಮೀ. ಓಡಿ ತನ್ನ ಪ್ರಾಣ ಉಳಿಸಿಕೊಂಡ ಘಟನೆ ಮಧ್ಯಪ್ರದೇಶದ ಉಜ್ಜಯಿನಿ ಬಳಿ ನಡೆದಿದ್ದು, ನಾಗರಿಕ ಸಮಾಜ ಬೆಚ್ಚಿಬಿದ್ದಿದೆ. ಮಹಿಳೆ ಅರೆನಗ್ನವಾಗಿ ಓಡಿಬರುತ್ತಿರುವುದನ್ನು ನೋಡಿದ ಸಾರ್ವಜನಿಕರು ಪನ್ವಾಸ ಪೊಲೀಸ್‌ ಠಾಣೆಗೆ ಕರೆ ಮಾಡಿ ತಿಳಿಸಿದ್ದಾರೆ. ಪೊಲೀಸರು ಮಹಿಳೆಯನ್ನು ರಕ್ಷಿಸಿ, ವಿಚಾರಣೆ ಮಾಡಿದಾಗ ನಡೆದ ವಿಷಯವನ್ನು ಹೇಳಿದ್ದಾಳೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಜಬಲ್ಪುರ ಮತ್ತು ಮಾಂಡ್ಲಾದ ಇಬ್ಬರು ಪ್ರೇಮಿಗಳು ಉಜ್ಜಯಿನಿಗೆ ಓಡಿಬಂದಿದ್ದರು. ಆದ್ರೆ ಉಳಿಯಲು ಮನೆ ಹಾಗೂ ಮಾಡೋಕೆ ಕೆಲಸ ಇರಲಿಲ್ಲ. ಇಬ್ಬರೂ ಕೆಲಸ ಹುಡುತ್ತಿದ್ದಾಗ ರವಿ ಎಂಬ ಹುಡುಗನ ಪರಿಚಯವಾಗಿದೆ.. ಆತ ಕೆಲಸ ಕೊಡಿಸುತ್ತೇನೆ ಎಂದು ಹೇಳಿ ತಾಜ್‌ ಪುರಕ್ಕೆ ಕರೆದೊಯ್ದಿದ್ದಾನೆ. ಬಳಿಕ ಅಲ್ಲಿ ಗುಡಿಸಲೊಂದರಲ್ಲಿ ಇಬ್ಬರನ್ನೂ ಇರುವಂತೆ ಸೂಚನೆ ನೀಡಿದ್ದರು. ನಂತರ ಮಹಿಳೆಯ ಪ್ರಿಯಕರನನ್ನು ಅಗತ್ಯ ವಸ್ತುಗಳನ್ನು ತೆಗೆದುಕೊಂಡು ಬರುವಂತೆ ಹೊರಗೆ ಕಳುಹಿಸಿದ್ದು,  ಇದೇ ವೇಳೆ ಆರೋಪಿ ರವಿ ತನ್ನ ಇನ್ನೊಬ್ಬ ಸ್ನೇಹಿತ ಇಮ್ರಾನ್‌ ಎಂಬಾತನನ್ನು ಗುಡಿಸಲಿಗೆ ಕರೆಸಿಕೊಂಡಿದ್ದಾನೆ.…

Read More

ಮಹಿಳೆಯ ಮೈಮಾಟ ನೋಡಿ ಸಾಲ ನೀಡಿದ ಬ್ಯಾಂಕ್‌ ಸಿಇಒ ಇದೀಗ ಬೀದಿಗೆ ಬಿದ್ದಿದ್ದು, ಅಂತಿಮವಾಗಿ 4 ಕೋಟಿ ರೂಪಾಯಿಗಳನ್ನು ಕಳೆದುಕೊಂಡು ವಿಧಿ ಇಲ್ಲದೆ ಈಗ ಪೊಲೀಸರ ಮೊರೆ ಹೋಗಿದ್ದಾನೆ. ಮಹಾರಾಷ್ಟ್ರದ ಥಾಣೆಯ ಕೋ ಆಪರೇಟಿವ್‌ ಬ್ಯಾಂಕ್‌ನ ವಡಾಲಾ ಬ್ರಾಂಚ್‌ಗೆ 2016ರಲ್ಲಿ ಮಹಿಳೆಯೊಬ್ಬರು ಲೋನ್‌ಗಾಗಿ ಭೇಟಿ ನೀಡಿದ್ದಳು.. ಈ ವೇಳೆ ಆಕೆ ಕೊಟ್ಟ ಮನೆಯ ದಾಖಲೆಗಳ ಬಗ್ಗೆ ಸಿಬ್ಬಂದಿಗೆ ಅನುಮಾನ ಬಂದಿತ್ತು.. ಹೀಗಾಗಿ ಥಾಣೆಯ ಕೊಪ್ರಿ ಬಳಿ ಇರುವ ಆನಂದ್ ನಗರ ಪ್ರದೇಶದಲ್ಲಿರುವ ಮಹಿಳೆಯ ಮನೆಯ ಸಮೀಕ್ಷೆ ಮಾಡಲು ನಿರ್ಧರಿಸಲಾಗಿತ್ತು.. ಅದಕ್ಕಾಗಿ ಸಿಇಒ ಆಕೆಯ ಮನೆಗೆ ಹೋಗಿದ್ದರು. 2017ರ ಫೆಬ್ರವರಿಯಲ್ಲಿ ಕೊ ಆಪರೇಟಿವ್‌ ಬ್ಯಾಂಕ್‌ ನ ಸಿಇಒ, ಮಹಿಳೆಯ ಮನೆಗೆ ಹೋಗಿದ್ದು, ಪರಿಶೀಲನೆ ಮಾಡಿದ್ದಾರೆ.. ಈ ವೇಳೆ ದಾಖಲೆ ಸರಿ ಇಲ್ಲ ಅನ್ನೋದು ಗೊತ್ತಾಗಿದೆ.. ಆದ್ರೆ ಈ ವೇಳೆ ಆಕೆ ಮೈಮಾಟ ಪ್ರದರ್ಶನ ಮಾಡಿದ್ದಾಳೆ. ಸಿಇಒನನ್ನು ಮಂಚಕ್ಕೆ ಕರೆದಿದ್ದಾಳೆ. ಆಕೆಯ ಮೋಹಕ್ಕೆ ಬಿದ್ದ ಸಿಇಒ 3 ಲಕ್ಷ ರೂಪಾಯಿ ಸಾಲ ಮಂಜೂರು ಮಾಡಿ,…

Read More

ಹಾವೇರಿ: ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದ ಹುಡುಗನ ಮೇಲೆ ದುಷ್ಕರ್ಮಿಗಳ ಗುಂಪೊಂದು ಏಕಾಏಕಿ ದಾಳಿ ಮಾಡಿ ಪರಾರಿಯಾಗಿರುವ ಘಟನೆ ನಡೆದಿರೋದು ಹಾವೇರಿ ಜಿಲ್ಲೆ ಸವಣೂರು ಪಟ್ಟಣದ ಗೋಕಾಕ್‌ ಸರ್ಕಲ್‌ ನಡೆದಿದೆ. ಆಬಿದ್‌ ಅಲ್ಲಾಭಕ್ಷ್‌ ಚೌದ್ರಿ( 30) ಹಲ್ಲೆಗೊಳಗಾದ ಯುವಕನಾಗಿದ್ದಾನೆ.  ಈತ ಸವಣೂರಿನಲ್ಲಿ ಗ್ಯಾರೇಜ್‌ ಕೆಲಸ ಮಾಡುತ್ತಿದ್ದ. ಈ ವೇಳೆ ಎರಡು ಬೈಕ್‌ ಗಳಲ್ಲಿ ಬಂದ ದುಷ್ಕರ್ಮಿಗಳು, ಮಾರಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿದ್ದಾರೆ.. ಮಚ್ಚಿನಿಂದ ಕೊಚ್ಚಿದ್ದರಿಂದ ಆಬಿದ್‌ ಅಲ್ಲಾಭಕ್ಷ್‌ ಚೌದ್ರಿ ಸ್ಥಿತಿ ಚಿಂತಾಜನಕವಾಗಿದೆ.. ಆತನನ್ನು ಸವಣೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.  ಸವಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ದೂರಸಂಪರ್ಕ ಕಾಯ್ದೆ-2023ರ ಅಡಿಯಲ್ಲಿ ನಿರ್ಮಿಸಿದ ಕೆಲ ನಿಯಮಾವಳಿಗಳನ್ನು ಜೂನ್ 26ರಿಂದ ಜಾರಿಗೆ ತರಲಾಗುತ್ತದೆ. ಈ ಸಂಬಂಧ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ಭಾರತೀಯ ಟೆಲಿಗ್ರಾಫ್ ಕಾಯ್ದೆ–1885, ವೈರ್‍ಲೆಸ್ ಟೆಲಿಗ್ರಫಿ ಕಾಯ್ದೆ-1993 ಮತ್ತು ಟೆಲಿಗ್ರಾಫ್ ವೈರ್ಸ್ (ಕಾನೂನುಬಾಹಿರ ಸ್ವಾಧೀನ) ಕಾಯ್ದೆ–1950ರ ಆಧಾರದಲ್ಲಿ ರಚಿಸಿದ್ದ ದೂರಸಂಪರ್ಕ ವಲಯದ ನಿಬಂಧನಾ ಚೌಕಟ್ಟಿನ ಬದಲು ಹೊಸ ನಿಯಮಾವಳಿ ಜಾರಿಗೆ ಬರಲಿದೆ. ದೂರಸಂಪರ್ಕ ಕಾಯ್ದೆ–2023ರ ಸೆಕ್ಷನ್ 1,2, 10ರಿಂದ 30, 42ರಿಂದ 44, 46, 47, 50 ರಿಂದ 58, 61 ಮತ್ತು 62 ಜೂನ್ 26ರಂದು ಜಾರಿಗೆ ಬರಲಿದೆ ಎಂದು ಅಧಿಸೂಚನೆ ಹೇಳಿದೆ. ಈ ನಿಯಮಾವಳಿಗಳ ಅಡಿಯಲ್ಲಿ ಸರ್ಕಾರ ಯಾವುದೇ ಅಥವಾ ಎಲ್ಲ ದೂರಸಂಪರ್ಕ ಸೇವೆಗಳು ಅಥವಾ ನೆಟ್‍ ವರ್ಕ್‍ಗಳನ್ನು ಹಾಗೂ ಪೈಲಟ್ ಪ್ರಾಜೆಕ್ಟ್‍ ಗಳನ್ನು ರಾಷ್ಟ್ರೀಯ ಭದ್ರತೆ, ವಿದೇಶಗಳ ಜತೆಗಿನ ಸ್ನೇಹಸಂಬಂಧ ಅಥವಾ ಯುದ್ಧ ಕಾಲದಲ್ಲಿ ನಿಯಂತ್ರಿಸುವ ಅಥವಾ ನಿರ್ವಹಣೆಯನ್ನು ಸ್ವಾಧೀನಪಡಿಸಿಕೊಳ್ಳಬಹುದಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…

Read More

ಬೆಂಗಳೂರು: ಕಾರುಗಳನ್ನು ಬಾಡಿಗೆಗೆ ಪಡೆದು ಬಳಿಕ ಜಿಪಿಎಸ್ ಕಿತ್ತೆಸೆದು ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಅಥವಾ ಗಿರವಿ ಇಡುತ್ತಿದ್ದ ಪ್ರಕರಣದಡಿ ಆರೋಪಿಯೊಬ್ಬನನ್ನು ಇಲ್ಲಿನ ಹುಳಿಮಾವು ಠಾಣೆ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಲಗ್ಗೆರೆ ನಿವಾಸಿ ಶ್ರೀನಿವಾಸ್(35) ಎಂಬಾತ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆತನಿಂದ ವಿವಿಧ ಕಂಪೆನಿಗಳ 9 ಕಾರುಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ಕಾಳೇನ ಅಗ್ರಹಾರದ ಎಂಎಲ್‍ ಎ ಲೇಔಟ್ ನಿವಾಸಿ ಮಹೇಶ್ ಎಂಬುವವರ ಕಾರನ್ನು ಒಂದು ತಿಂಗಳ ಮಟ್ಟಿಗೆ ಬಾಡಿಗೆಗೆ ಪಡೆದು ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದ. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ತನಿಖೆ ನಡೆಸಿ ಶಿವಮೊಗ್ಗದಲ್ಲಿ ಆರೋಪಿಯನ್ನು ಬಂಧಿಸಿ ಕರೆತರಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಶ್ರೀನಿವಾಸ್, ಫೇಸ್‍ಬುಕ್, ಒಎಲ್‍ ಎಕ್ಸ್ ಸೇರಿದಂತೆ ಇತರೆ ಜಾಲತಾಣಗಳಲ್ಲಿ ಕಾರು ಬಾಡಿಗೆಗೆ ಇರುವ ಅಥವಾ ಮಾರಾಟಕ್ಕೆ ಇರುವ ಜಾಹೀರಾತು ಹಾಕುವ ವ್ಯಕ್ತಿಗಳನ್ನು ಸಂಪರ್ಕಿಸುತ್ತಿದ್ದ. ಕಾರಿನ ಸಾಲದ ಕಂತು ಪಾವತಿಸಲು ಪರದಾಡುವ ವ್ಯಕ್ತಿಗಳನ್ನು ಗುರುತಿಸಿ,…

Read More

ಕೋಲಾರ:  ಆನಂದಮಾರ್ಗ ಆಶ್ರಮಕ್ಕೆ ಸೇರಿದ ಆಸ್ತಿ ವಿವಾದ ಹಿನ್ನೆಲೆ, ಇಬ್ಬರು ಸ್ವಾಮೀಜಿಗಳ ನಡುವೆ ಮಾರಾಮಾರಿ ನಡೆದು ಆಚಾರ್ಯ ಚಿನ್ಮಯಾನಂದ ಸ್ವಾಮೀಜಿ(76) ಹತ್ಯೆಯಾಗಿದೆ. ಜಿಲ್ಲೆಯ ಮಾಲೂರು ತಾಲೂಕಿನ ಸಂತಹಳ್ಳಿಯಲ್ಲಿರುವ ಆನಂದ ಮಾರ್ಗ ಆಶ್ರಮದಲ್ಲಿ ಶನಿವಾರ ಉಭಯ ಸ್ವಾಮೀಜಿಗಳ ಗುಂಪುಗಳ ನಡುವೆ ಆದ ಜಗಳ ಸ್ವಾಮೀಜಿಯೊಬ್ಬರ ಕೊಲೆಯಲ್ಲಿ ಅಂತ್ಯಗೊಂಡಿದೆ. ಶನಿವಾರ ಬೆಳಗ್ಗೆ ಆಚಾರ್ಯ ಚಿನ್ಮಯಾನಂದ ಸ್ವಾಮೀಜಿ ಸ್ನಾನ ಮಾಡುತ್ತಿದ್ದ ಸಂದರ್ಭದಲ್ಲಿ ಅದೇ ಆಶ್ರಮದ ಆಚಾರ್ಯ ಧರ್ಮ ಪ್ರಾಣಾನಂದ ಹಾಗೂ ಸಹಚರರು ಸ್ನಾನದ ಕೋಣೆಯಿಂದ ಹೊರಗೆಡೆ ಎಳೆದಾಡಿ ದೊಣ್ಣೆಗಳಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.ಇದನ್ನು ಗಮನಿಸಿದ ಆಶ್ರಮದಲ್ಲಿನ ಕೆಲವರು ಕೂಡಲೇ ಗಾಯಗೊಂಡಿದ್ದ ಆಚಾರ್ಯ ಚಿನ್ಮಯಾನಂದ ಸ್ವಾಮೀಜಿ ಅವರನ್ನು ಕೋಲಾರದ ಜಾಲಪ್ಪ ಆಸ್ಪತ್ರೆಗೆ ಸಾಗಿಸಿದರು.  ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಆನಂದ ಮಾರ್ಗ ಆಶ್ರಮಕ್ಕೆ ಸೇರಿರುವ ಪಾಲಿಟೆಕ್ನಿಕ್​ ಕಾಲೇಜು ಆಸ್ತಿ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ 22 ವರ್ಷಗಳಿಂದ ನ್ಯಾಯಾಲಯದಲ್ಲಿ ವ್ಯಾಜ್ಯ ನಡೆಯುತ್ತಿದೆ. ಜೂ.24ರಂದು ವಿಚಾರಣೆಯು ಇತ್ತು, ಇದನ್ನು ಮನಸ್ಸಿನಲ್ಲಿ ಇಟ್ಟುಕೊಂಡಿದ್ದ…

Read More

ಮಹಿಳಾ ಸಾಹಿತಿಗಳ ಪೈಕಿ ಅತಿ ಹೆಚ್ಚು ಕೃತಿಗಳನ್ನು ಕಮಲಾ ಹಂಪನಾ ಬರೆದಿದ್ದಾರೆ. ಆದರೆ ನಾವು ಕನ್ನಡದ ಉತ್ತಮ ಸಾಹಿತಿಯನ್ನು  ಕಳೆದುಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ರವೀಂದ್ರಕಲಾ ಕ್ಷೇತ್ರದಲ್ಲಿ ಹಿರಿಯ ಸಾಹಿತಿ ಕಮಲ ಹಂಪನಾ ಅವರ ಪ್ರಾರ್ಥಿವ ಶರೀರದ ದರ್ಶನ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. “ಕಮಲಾ ಹಂಪನಾ ಅವರನ್ನು ನಾಲ್ಕೈದು ತಿಂಗಳ ಹಿಂದೆ ಭೇಟಿಯಾಗಿದ್ದೆ. ಮಹಿಳಾ ಸಾಹಿತಿಗಳ ಪೈಕಿ ಅತಿ ಹೆಚ್ಚು ಅಂದರೆ 48 ಕೃತಿಗಳನ್ನು ಬರೆದಿದ್ದಾರೆ. ಬೋಧಕರಾಗಿ, ಸಂಶೋಧಕರಾಗಿ, ಸಾಹಿತಿಯಾಗಿ ಕನ್ನಡ ಭಾಷೆಗಾಗಿ ಬಹಳ ಶ್ರಮಿಸಿದ್ದಾರೆ. ಪ್ರಾಕೃತ ಭಾಷೆಯ ಕುರಿತು ಸಂಶೋಧನೆ ಮಾಡಿದ್ದಾರೆ. ಬೆಂಗಳೂರು, ಮೈಸೂರು, ವಿಜಯನಗರಗಳಲ್ಲಿ ಕನ್ನಡ ಬೋಧಕರಾಗಿ ಕೆಲಸ ಮಾಡಿದ್ದಾರೆ” ಎಂದರು. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ, ಹಂಪನಾ ಮತ್ತು ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಎನ್ನು ಭಗವಂತ ನೀಡಲಿ ಎಂದು ಪ್ರಾರ್ಥನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…

Read More

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ, ಕೊಲೆ ಆರೋಪ ಪ್ರಕರಣಗಳನ್ನು ಪ್ರಸ್ತಾಪಿಸಿ ನಟ ದರ್ಶನ್‌, ಪ್ರಜ್ವಲ್‌ ರೇವಣ್ಣ, ಬಿಜೆಪಿ ಹಿರಿಯ ನಾಯಕ ಬಿ.ಎಸ್‌.ಯಡಿಯೂರಪ್ಪ, ಸೂರಜ್‌ ರೇವಣ್ಣ ವಿರುದ್ದ ನಟಿ ರಮ್ಯಾ ಹರಿ ಹಾಯ್ದಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ನಲ್ಲಿ ವಿವರವಾಗಿ ಬರೆದುಕೊಂಡಿದ್ದಾರೆ.ಇತ್ತೀಚೆಗೆ ಬೆಳಕಿಗೆ ಬಂದ ಹೆಚ್ಚಿನ ಪ್ರಕರಣಗಳಲ್ಲಿ ಶ್ರೀಮಂತರು, ಶಕ್ತಿಶಾಲಿಗಳು ಕಾನೂನು ಉಲ್ಲಂಘಿಸಿ ಕೃತ್ಯವೆಸಗಿದ್ದಾರೆ. ಇವರಿಂದಾಗಿ ಬಡವರು, ಮಹಿಳೆಯರು ಮತ್ತು ಮಕ್ಕಳ ಭವಿಷ್ಯ ಮಂಕಾಗುತ್ತಿದೆ. ಈ ಅಪರಾಧ ಕೃತ್ಯಗಳನ್ನು ಬೆಳಕಿಗೆ ತಂದ ಪೊಲೀಸರು ಮತ್ತು ಮಾಧ್ಯಮಗಳಿಗೆ ಅಭಿನಂದನೆಗಳು. ಈ ಎಲ್ಲಾ ಅಪರಾಧ ಕೃತ್ಯಗಳು ಶೀಘ್ರ ವಿಚಾರಣೆಯಾಗಿ ಪ್ರಕರಣ ತಾರ್ಕಿಕ ಅಂತ್ಯ ಕಂಡಾಗ ಮಾತ್ರ ನ್ಯಾ ಗೆಲ್ಲುತ್ತದೆ. ನ್ಯಾಯವು ಮೇಲುಗೈ ಸಾಧಿಸದಿದ್ದರೆ, ನಾವು ಸಾರ್ವಜನಿಕರಿಗೆ ಯಾವ ಸಂದೇಶ ನೀಡುತ್ತೇವೆ?’ ಎಂದು ಪೋಸ್ಟ್‌ ಮಾಡಿದ್ದಾರೆ. ಮಹಿಳೆಯರು ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್‌ ರೇವಣ್ಣ ನ್ಯಾಯಾಂಗ ಬಂಧನದಲ್ಲಿದ್ದಾರೆ. ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇಲೆ ಬಿಜೆಪಿಯ…

Read More

ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಬಹಿರ್ದೆಸೆಗೆ ತೆರಳಿದ್ದಾಗ ಆಕೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ ಎಸಗಿ ಬಳಿಕ ಪ್ರಕರಣ ಮುಚ್ಚಿ ಹಾಕಲು ಆಕೆಯನ್ನು ಕೊಲೆಗೈಯಲು ಯತ್ನಿಸಿದ ಘಟನೆ ರಾಯಚೂರಿನ ಲಿಂಗಸುಗೂರು ತಾಲೂಕಿನ ಗುಂಡಸಾಗರ ಗ್ರಾಮದಲ್ಲಿ ನಡೆದಿದೆ. ಆರೋಪಿಯನ್ನು ಬಸವರಾಜ ಎಂದು ಗುರುತಿಸಲಾಗಿದೆ. ಈತ ಶಾಲಾ ಬಾಲಕಿಯೋರ್ವಳು ಬಹಿರ್ದೆಸೆಗೆಂದು ಹೋಗಿದ್ದಾಗ ಆಕೆಯನ್ನು ಹಿಂಬಾಲಿಸಿಕೊಂಡು ಹೋಗಿ ಅಕ್ಕಪಕ್ಕದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿ ಏಕಾಏಕಿ ಹಿಂದಿನಿಂದ ಬಂದು ಬಾಲಕಿಯನ್ನು ಗಟ್ಟಿಯಾಗಿ ಹಿಡಿದು ಬಾಯಿಗೆ ಬಟ್ಟೆಯನ್ನು ತುರುಕಿದ್ದಾನೆ. ಆತನ ಮುಷ್ಠಿಯಿಂದ ಬಿಡಿಸಿಕೊಳ್ಳಲು ಆಗದಿದ್ದಾಗ ಬಾಲಕಿಯ ಅಸಹಾಯಕತೆಯನ್ನೇ ದುರುಪಯೋಗ ಮಾಡಿಕೊಂಡು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಲೈಂಗಿಕ ದೌರ್ಜನ್ಯ  ಎಸಗಿದ ಬಳಿಕ ಸಿಕ್ಕಿ ಬೀಳುವ ಭೀತಿಯಲ್ಲಿ ಕಾಮುಕ ಬಸವರಾಜ, ಅಸ್ವಸ್ಥಳಾಗಿದ್ದ ಬಾಲಕಿ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೆ ಯತ್ನಿಸಿದ್ದಾನೆ. ಆದರೆ ಬಾಲಕಿ ಆತನಿಂದ ತಪ್ಪಿಸಿಕೊಂಡು ಬಂದಿದ್ದು, ನಡೆದಿದ್ದ ಎಲ್ಲ ಘಟನೆಯನ್ನು ಪೋಷಕರಿಗೆ ತಿಳಿಸಿದ್ದಾಳೆ. ತಕ್ಷಣ ಪೋಷಕರು ಸಂತ್ರಸ್ತೆ ಜತೆಗೂಡಿ ಆರೋಪಿ ವಿರುದ್ಧ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಲಿಂಗಸಗೂರು ಪೊಲೀಸರು ಕೃತ್ಯ…

Read More

ವಿವಾಹಿತನನ್ನು ಪ್ರೀತಿಸಿದ ಯುವತಿ ಆತನೊಂದಿಗೆ ಮದುವೆ ಮಾಡಿಕೊಳ್ಳಲು ಬಯಸಿದ್ದು,  ಆದರೆ ಯುವತಿಯ ಪೋಷಕರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇಬ್ಬರೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ. ಸದ್ಯ ಯುವತಿಯ  ಮೃತದೇಹ ಪತ್ತೆಯಾಗಿದ್ದು, ವಿವಾಹಿತನಿಗಾಗಿ ಹುಡುಕಾಟ ನಡೆದಿದೆ. ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ಮಾವತ್ತೂರು ಗ್ರಾ.ಪಂ. ಕೇಂದ್ರ ಸ್ಥಾನದಲ್ಲಿನ ಮಾವತ್ತೂರು ಕೆರೆಯ ಸಮೀಪ ಅಪರಿಚಿತ ಕಾರು, ಕಾರಿನಲ್ಲಿದ್ದ ಮೊಬೈಲ್ ಮತ್ತು ದಡದಲ್ಲಿದ್ದ ಇಬ್ಬರ ಚಪ್ಪಲಿಗಳು ಆಧರಿಸಿ ಕೋಳಾಲ ಪೊಲೀಸರ ತಂಡ ತನಿಖೆ ನಡೆಸಿದರು. ಆಗ, ಇಬ್ಬರೂ ತಮ್ಮ ಮನೆಯಿಂದ ಕಾಣೆಯಾಗಿ ವೈವಾಹಿಕ ಜೀವನದಲ್ಲಿ ಜಿಗುಪ್ಸೆಗೊಂಡು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವುದು ತಿಳಿದು ಬಂದಿದೆ. 19 ವರ್ಷ ವಯಸ್ಸಿನ ಅನನ್ಯ ಹಾಗೂ 45 ವರ್ಷ ವಯಸ್ಸಿನ ರಂಗಶಾಮಯ್ಯ ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ.  ಬೈರಗೊಂಡ್ಲು ಗ್ರಾಮದ ಅಳಿಯ ಆಗಿರುವ ರಂಗಶಾಮಯ್ಯನಿಗೆ ಮಡದಿ ಗಂಗರತ್ನಮ್ಮ ಮತ್ತು ಇಬ್ಬರು ಗಂಡು ಮಕ್ಕಳಿದ್ದು, ಅವರು 11 ಮತ್ತು 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಈತ ಕೋಳಾಲದಲ್ಲಿ ಗ್ರಾಮ-1 ಕೇಂದ್ರ…

Read More