Subscribe to Updates
Get the latest creative news from FooBar about art, design and business.
- ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
- ತಿಪಟೂರು: ಜೂನ್ 1ರಿಂದ ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
- ತುಮಕೂರು: ವಾಟರ್ ಟ್ಯಾಂಕ್ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು, ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
- ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
- ತುರುವೇಕೆರೆ: ಜೂ. 4ರಂದು ಉಚಿತ ಯೋಗ, ಪ್ರಾಣಾಯಾಮ ತರಗತಿಗಳ ಉದ್ಘಾಟನೆ
- ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
- ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ
Author: admin
ತುಮಕೂರು: ಜಿಲ್ಲೆಗೆ ಮಂಜೂರಾಗಿರುವ ನೀರನ್ನು ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಮೂಲಕ ಮಾಗಡಿ ತಾಲೂಕಿಗೆ ತೆಗೆದುಕೊಂಡು ಹೋಗಲು ರೂಪಿಸಿರುವ ಯೋಜನೆಯಿಂದ ತುಮಕೂರು ಜಿಲ್ಲೆಗೆ ಬಹಳ ಅನ್ಯಾಯವಾಗುತ್ತದೆ. ಯಾವುದೇ ಕಾರಣಕ್ಕೂ ಈ ಯೋಜನೆಯನ್ನು ಕಾರ್ಯಕತವಾಗಲು ಬಿಡುವುದಿಲ್ಲ ಎಂದು ಜೆಡಿಎಸ್ ಮುಖಂಡ ಶಾಂತಕುಮಾರ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಪ್ರತಿಭಟನೆ ಕೈಗೊಂಡಿರುವುದರಿಂದ ಸರ್ಕಾರ ಯೋಜನೆಯನ್ನು ನಿಲ್ಲಿಸಬೇಕು. ತಿಪಟೂರು ಜಾತ್ಯಾತೀತವಾಗಿ ಸಂಪೂರ್ಣ ಬಂದ್ ಗೆ ಕರೆ ನೀಡಲಾಗಿದೆ. ತಿಪಟೂರಿಗೆ ಅನ್ಯಾಯವಾಗಲು ನಾವು ಬಿಡುವುದಿಲ್ಲ. ಮೊದಲೇ ತುಮಕೂರು ಜಿಲ್ಲೆಗೆ ಮಂಜೂರಾಗಿರುವ ನೀರನ್ನು ತೆಗೆದುಕೊಂಡು ಹೋಗುತ್ತಿದ್ದಾರೆ. ನಮ್ಮ ಜಿಲ್ಲೆಯ ನೀರಿಗೆ ಕೈ ಹಾಕಿದರೆ ನಾವು ಸುಮ್ಮನಿರುವುದಿಲ್ಲ ಎಂದು ಅವರು ಎಚ್ಚರಿಸಿದರು. ವಿರೋಧ ಪಕ್ಷದಲ್ಲಿದ್ದಾಗ ಮೇಕೆದಾಟು ಯೋಜನೆ ಜಾರಿಗೆ ತೊಡೆತಟ್ಟಿ ನಿಂತಿದ್ದ ಮುಖಂಡರು ಈಗ ಅವರ ಪಕ್ಷದವರೇ ಅಧಿಕಾರವಿದ್ದಲ್ಲಿದ್ದಾಗ ಸುಮ್ಮನಿರುವುದು ಏಕೆ ಎಂದು ಪ್ರಶ್ನಿಸಿದ ಅವರು, ಮಾಗಡಿ ತಾಲೂಕಿಗೆ ಮೇಕೆದಾಟು ಯೋಜನೆಯಿಂದ ನೀರು ಪಡೆದುಕೊಳ್ಳಲಿ ಎಂದರು. ಈ ಸುದ್ದಿಗೋಷ್ಠಿಯಲ್ಲಿ ಬತ್ತಿಹಳ್ಳಿರಾಜಣ್ಣ ನಾರಾಯಣಪ್ಪ…
ತುಮಕೂರು: ಜಿಲ್ಲೆಯಲ್ಲಿ ಜೂನ್ ೧೪ ರಿಂದ ೨೧ರವರೆಗೆ ಎಲ್ಲ ತಾಲೂಕಿನಿಂದ ೨೧೭೬೪ ರೈತರನ್ನು ಮಾತ್ರ ಬೆಳೆ ವಿಮೆಗೆ ನೋಂದಾಯಿಸಲಾಗಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ರೈತರಲ್ಲಿ ಅರಿವು ಮೂಡಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ರಾತ್ರಿ ಜಿಲ್ಲೆಯ ಮಳೆ–ಬೆಳೆ ಪರಿಸ್ಥಿತಿ ಕುರಿತು ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ಪ್ರಕೃತಿ ವಿಕೋಪ/ಕೀಟ ಅಥವಾ ರೋಗಬಾಧೆಯಿಂದ ಬೆಳೆ ನಷ್ಟ ಸಂಭವಿಸಿದ ಸಂದರ್ಭದಲ್ಲಿ ವಿಮಾ ಮೊತ್ತ ರೈತರ ಕೈ ಹಿಡಿಯಲಿದ್ದು, ಈ ನಿಟ್ಟಿನಲ್ಲಿ ಬೆಳೆ ವಿಮೆಗೆ ರೈತರ ನೋಂದಣಿ ಮಾಡುವ ಸಂಖ್ಯೆಯನ್ನು ಇನ್ನಷ್ಟು ಚುರುಕುಗೊಳಿಸಬೇಕು ಎಂದು ನಿರ್ದೇಶನ ನೀಡಿದರು. ಜಂಟಿ ಕೃಷಿ ನಿರ್ದೇಶಕ ರಮೇಶ್ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡುತ್ತಾ ಬೆಳೆ ವಿಮೆಗೆ ನೋಂದಣಿ ಮಾಡಿಸುವ ಬಗ್ಗೆ ಜಿಲ್ಲಾದ್ಯಂತ ಜೂನ್ ೨೪ ರಿಂದ ಗ್ರಾಮ ಪಂಚಾಯತಿ ಮಟ್ಟದಲ್ಲಿ ರೈತರಿಗೆ ತರಬೇತಿ ನೀಡುವ ಮೂಲಕ ಅರಿವು ಮೂಡಿಸಲು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಬಿತ್ತನೆ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಜಿಎಸ್ಟಿ ಕೌನ್ಸಿಲ್ ಸಭೆ ನಡೆಯಿತು. ಸಭೆಯಲ್ಲಿ ಹಲವಾರು ಪ್ರಮುಖ ನಿರ್ಧಾರಗಳನ್ನ ತೆಗೆದುಕೊಳ್ಳಲಾಯಿತು. ತೆರಿಗೆ ಪಾವತಿಸುವವರಿಗೆ ಅನೇಕ ಸಕಾರಾತ್ಮಕ ನಿರ್ಧಾರಗಳನ್ನ ತೆಗೆದುಕೊಳ್ಳಲಾಗಿದೆ. ಸಣ್ಣ ವ್ಯಾಪಾರಿಗಳ ಅನುಕೂಲಕ್ಕಾಗಿ ಜಿಎಸ್ಟಿ ಮಂಡಳಿಯಲ್ಲಿ ನಿರ್ಧಾರಗಳನ್ನ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್,ಸಭೆಯಲ್ಲಿ ಕೆಲವು ವಸ್ತುಗಳ ಮೇಲಿನ ಜಿಎಸ್ಟಿಯನ್ನ ಕಡಿಮೆ ಮಾಡಲಾಗಿದೆ. ರೈಲ್ವೆ ಪ್ಲಾಟ್ಫಾರ್ಮ್ ಟಿಕೆಟ್ ಗಳು, ಕಾಯುವಿಕೆ, ಲಾಕರ್ ಕೊಠಡಿಗಳು, ಬ್ಯಾಟರಿ ಚಾಲಿತ ಸೇವೆಗಳು ಮತ್ತು ಅಂತರ್ ರೈಲ್ವೆ ಸೇವೆಗಳ ಮೇಲಿನ ಜಿಎಸ್ಟಿಯನ್ನ ಮನ್ನಾ ಮಾಡಲಾಗಿದೆ. ಇದಲ್ಲದೆ, ಹಾಲಿನ ಕ್ಯಾನ್ ಗಳು ಮತ್ತು ಕಾರ್ಟನ್ ಬಾಕ್ಸ್ ಗಳ ಮೇಲಿನ ಜಿಎಸ್ಟಿಯನ್ನ ಶೇಕಡಾ 18 ರಿಂದ 12ಕ್ಕೆ ಇಳಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಸೌರ ಕುಕ್ಕರ್ ಗಳ ಮೇಲಿನ ಜಿಎಸ್ ಟಿಯನ್ನ ಶೇ.18ರಿಂದ ಶೇ.12ಕ್ಕೆ ಇಳಿಸಲಾಗಿದೆ. ಇದಲ್ಲದೆ, ಶಿಕ್ಷಣ ಸಂಸ್ಥೆಗಳೊಂದಿಗೆ ಸಂಬಂಧ ಹೊಂದಿರದ ಹಾಸ್ಟೆಲ್ಗಳಿಗೆ ಜಿಎಸ್ಟಿಯಿಂದ…
ಹಾಸನ: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ರೇವಣ್ಣ ಅವರ ಬಂಧನವಾಗಿರುವ ಬಗ್ಗೆ ವರದಿಯಾಗಿದೆ. ಶನಿವಾರ ರಾತ್ರಿಯಿಂದ ಸಿಇಎನ್ ಠಾಣೆಯಲ್ಲಿ ಸೂರಜ್ ಅವರನ್ನು ವಿಚಾರಣೆಗೊಳಪಡಿಸಿದ್ದ ತನಿಖಾಧಿಕಾರಿ ಸಕಲೇಶಪುರ ಡಿವೈಎಸ್ಪಿ ಪ್ರಮೋದ್ ಅವರು ಆರೋಪಿಯನ್ನು ಬಂಧಿಸಿದ್ದಾರೆ. ಮಧ್ಯಾಹ್ನದ ವೇಳೆಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಒಂದೆಡೆ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನದಲ್ಲಿರುವಾಗಲೇ ಅವರ ಅಣ್ಣ ಡಾ.ಸೂರಜ್ ಬಂಧನವಾಗಿದ್ದು ರೇವಣ್ಣ ಅವರ ಇಬ್ಬರು ಪುತ್ರರೂ ಗಂಭೀರ ಅಪರಾಧ ಪ್ರಕರಣಗಳಲ್ಲಿ ಸಿಲುಕಿ ಜೈಲು ಸೇರುವಂತಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣಡ ಮಂಡಳಿ ನೊಂದಾಯಿತ ಕಾರ್ಮಿಕರಿಗೆ ಸಿಹಿಸುದ್ದಿ ನೀಡಿದ್ದು, ಮಂಡಳಿಯು ನೋಂದಾಯಿತ ಕಾರ್ಮಿಕರ ಮದುವೆಗೆ ಅಥವಾ ಅವರ ಮಕ್ಕಳ ಮದುವೆಗೆ ಸಹಾಯಧನವನ್ನು ನೀಡುತ್ತದೆ. ನೋ೦ದಾಯಿತ ಕಾರ್ಮಿಕರ ಮದುವೆ ಅಥವಾ ಅವರ ಮಕ್ಕಳ ಮದುವೆಗೆ ಮ೦ಡಳಿಯು ಸಹಾಯಧನವನ್ನು ನೀಡುತ್ತದೆ. ನೋ೦ದಣಿ ದಿನಾ೦ಕದಿ೦ದ ಮದುವೆ ದಿನಾ೦ಕದವರೆಗೆ ಮ೦ಡಳಿಯಲ್ಲಿ ಕನಿಷ್ಠ ಒಂದು ವರ್ಷ ಸದಸ್ಯತ್ವವನ್ನು ಪೂರೈಸಿರಬೇಕು. ಒ೦ದು ಕುಟು೦ಬವು ಎರಡು ಬಾರಿ ಮಾತ್ರ ಸಹಾಯಧನ ಪಡೆಯಲು ಅವಕಾಶವಿರುತ್ತದೆ.ಸಹಾಯಧನವನ್ನು ಪಡೆಯಲು ವಿವಾಹ ನಿಯಮದಡಿ ಸೂಚಿಸಿರುವ ವಯಸ್ಸನ್ನು ತಲುಪಿರಬೇಕು.ಮದುವೆಯ ದಿನಾ೦ಕದಿಂದ 6 ತಿಂಗಳ ಒಳಗೆ ಅರ್ಜಿ ಸಲ್ಲಿಸಬೇಕು. ಕಾರ್ಮಿಕರ ಮದುವೆ ಅಥವಾ ಅವರ ಎರಡು ಮಕ್ಕಳ ಮದುವೆಗೆ ಕಟ್ಟಡ ಕಾರ್ಮಿಕ ಮಂಡಳಿಯು 60,000/- ಸಹಾಯಧನವನ್ನ ನೀಡುತ್ತದೆ. ಹಾಗು ಮಂಡಳಿಯ ವತಿಯಿಂದ ನೋಂದಣಿ ಮಾಡಿಕೊಂಡಿರುವ ಕಟ್ಟಡ ಕಾರ್ಮಿಕರು ತಮಗೂ ಹಾಗೂ ತಮ್ಮ ಮಕ್ಕಳ ಮದುವೆಗಾಗಿ ಸಹಾಯಧನ ಪಡೆಯಬಹುದು. ಕರ್ನಾಟಕ ಕಟ್ಟಡ ಮತ್ತು ಇತರೆ ಕಾರ್ಮಿಕ ಕಲ್ಯಾಣ ಮಂಡಳಿ ನೋಂದಣಿಗೆ ನಮೂನೆ 5-1ರ ಅರ್ಜಿಯಲ್ಲಿ…
NEET ಮತ್ತು UGC NET ಪರೀಕ್ಷೆ ನಡೆದ ಅಕ್ರಮದ ಆರೋಪದ ಬಗ್ಗೆ ಈಗಾಗಲೇ ಭಾರೀ ಚರ್ಚೆಯಾಗುತ್ತಿದೆ. ಇನ್ನು ಕೆಲವರು ಕೇಂದ್ರ ಸರ್ಕಾರವನ್ನು ಟೀಕೆ ಮಾಡಿದ್ದಾರೆ. ಇದೀಗ ಕೇಂದ್ರ ಇದಕ್ಕೆಲ್ಲ ಉತ್ತರ ನೀಡಬೇಕು ಎಂದು ಸಾರ್ವಜನಿಕ ಪರೀಕ್ಷೆಗಳ ಕಾಯಿದೆ ಜಾರಿಗೆ ತಂದಿದೆ. ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಒಂದು ಮಹತ್ವ ನಿರ್ಧಾರವನ್ನು ತೆಗೆದುಕೊಂಡಿದೆ.ಕೇಂದ್ರ ಶಿಕ್ಷಣ ಸಚಿವಾಲಯ ಸಾರ್ವಜನಿಕ ಪರೀಕ್ಷೆಗಳ ಕಾಯಿದೆಯನ್ನು ಜಾರಿಗೆ ತರಲು ಅಧಿಸೂಚನೆ ನೀಡಿದೆ. ಕಾನೂನಿನಲ್ಲಿ ಒಬ್ಬ ವ್ಯಕ್ತಿ ಅಥವಾ ವ್ಯಕ್ತಿಗಳ ಗುಂಪು ಪರೀಕ್ಷಾ ಪ್ರಾಧಿಕಾರ, ಸೇವಾ ಪೂರೈಕೆದಾರರು ಅಥವಾ ಯಾವುದೇ ಇತರ ಸಂಸ್ಥೆ ಸೇರಿದಂತೆ ಸಂಘಟಿತ ಅಪರಾಧವನ್ನು ಮಾಡಿದರೆ ಅವರಿಗೆ 5ರಿಂದ 10ವರ್ಷದ ವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ ಹಾಗೂ 1 ಕೋಟಿ ರೂ. ದಂಡ ವಿಧಿಸಲಾಗುವುದು ಎಂದು ಹೇಳಲಾಗಿದೆ. ತರಬೇತಿ ಏಜೆಂಟ್ ಅಥವಾ ಕೋರ್ಸ್ ಸೆಂಟರ್ ಗಳು ಪೇಪರ್ ಸೋರಿಕೆ ಅಪರಾಧದಲ್ಲಿ ಭಾಗಿಯಾಗಿರುವುದು ಕಂಡುಬಂದಲ್ಲಿ ಆ ಸಂಸ್ಥೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಕಾನೂನು ನಿಬಂಧನೆಗಳನ್ನು ಹೊಂದಿದೆ…
ಟಿಬೆಟಿಯನ್ ಧಾರ್ಮಿಕ ಮುಖಂಡ ದಲೈಲಾಮಾ ಅವರು ಕಳೆದ 65 ವರ್ಷಗಳಿಂದ ಭಾರತದಲ್ಲಿ ನೆಲೆಸಿದ್ದಾರೆ. ಭಾರತ ಅವರಿಗೆ ರಾಜಕೀಯ ಆಶ್ರಯ ನೀಡಿದೆ.ದಲೈಲಾಮಾ ಭಾರತಕ್ಕೆ ಬಂದ ಕಥೆ ತುಂಬಾ ಆಸಕ್ತಿದಾಯಕವಾಗಿದೆ. 1959 ರ ಚಳಿಗಾಲವು ಪ್ರಾರಂಭವಾದಾಗ, ಚೀನಾ ಟಿಬೆಟ್ನಲ್ಲಿ ಮಿಲಿಟರಿ ಕಾರ್ಯಾಚರಣೆಯನ್ನು ಹೆಚ್ಚಿಸಿತು. ಒಂದು ವರ್ಷದ ಹಿಂದೆ, 1958 ರಲ್ಲಿ, ಪೂರ್ವ ಟಿಬೆಟ್ನ ಕೆಲವು ಖಂಪಾಗಳು ಚೀನಾದ ಸೈನಿಕರ ವಿರುದ್ಧ ಶಸ್ತ್ರಾಸ್ತ್ರಗಳನ್ನು ತೆಗೆದುಕೊಂಡರು, ಆದರೆ ಹೀನಾಯ ಸೋಲನ್ನು ಅನುಭವಿಸಿದರು. 1959 ರ ಹೊತ್ತಿಗೆ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿತು. ಟಿಬೆಟ್ನಲ್ಲಿ ವಾಸಿಸುವುದು ಸುರಕ್ಷಿತವಲ್ಲ ಎಂದು ದಲೈಲಾಮಾ ಭಾವಿಸಿದರು. ಅವರು ಟಿಬೆಟ್ ತೊರೆಯಲು ನಿರ್ಧರಿಸಿದರು. ಭಾರತದಿಂದ ರಾಜಕೀಯ ಆಶ್ರಯ ಕೇಳಿದೆ. ಜವಾಹರಲಾಲ್ ನೆಹರು ಅವರ ಸರ್ಕಾರವು ದಲೈ ಲಾಮಾಗೆ ಆಶ್ರಯ ನೀಡಲು ಒಪ್ಪಿಕೊಂಡಿತು. ದಲೈಲಾಮಾ ಅವರು ಟಿಬೆಟ್ನಿಂದ ಭಾರತಕ್ಕೆ ಹೇಗೆ ಹೋಗುವುದು ಎಂದು ಕಷ್ಟಪಡುತ್ತಿದ್ದರು? ಏಕೆಂದರೆ ಚೀನಾದ ಸೈನಿಕರು ಮತ್ತು ಗೂಢಚಾರರು 24 ಗಂಟೆಯೂ ಅವರ ಮೇಲೆ ಕಣ್ಣಿಟ್ಟಿದ್ದರು. ದಲೈ ಲಾಮಾ ಅವರು ತಮ್ಮ ಕೆಲವು ನಿಕಟ…
ಕೊರಟಗೆರೆ: ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯ ಪಕ್ಕದಲ್ಲಿರುವ ದೇವಸ್ಥಾನದ ಬಳಿ ಕಾರು ನಿಲ್ಲಿಸಿ, ಇಬ್ಬರು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ. ಬೈರಗೊಂಡ್ಲು ಗ್ರಾಮದ ರಂಗಶಾಮಣ್ಣ(50) ಹಾಗೂ ಲಕ್ಕಯ್ಯನಪಾಳ್ಯದ ಯುವತಿ ಅನನ್ಯ (19) ಕೆರೆಗೆ ಹಾರಿ ಸಾವಿಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ. ಮೂರು ದಿನದ ಹಿಂದೆ ಮನೆ ಬಿಟ್ಟು ಇಬ್ಬರು ಬಂದಿದ್ದರು. ಇದೀಗ ಕೆರೆಯ ಬಳಿಯಲ್ಲಿ ಕಾರು ಹಾಗೂ ಚಪ್ಪಲಿ ಪತ್ತೆಯಾಗಿದೆ. ಹೀಗಾಗಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ ಶಂಕೆ ಮೂಡಿದೆ. ಘಟನೆ ಹಿನ್ನೆಲೆ ಅಗ್ನಿಶಾಮಕ ದಳದ ಕೆಲವು ಈಜುಪಟುಗಳುಮಾವತ್ತೂರು ಕೆರೆಯಲ್ಲಿ ತೀವ್ರ ಶೋಧ ಕಾರ್ಯ ನಡೆಸಿದರು. ಬೋಟ್ ಸಹಾಯದಿಂದ ಹುಡುಕಾಟ ನಡೆಸಲಾಯಿತು. ಕೊರಟಗೆರೆ ಪೊಲೀಸ್ ಠಾಣೆಯ ಸಿಪಿಐ ಅನಿಲ್, ಕೊಳಲ ಪೊಲೀಸ್ ಠಾಣೆಯ ಪಿಎಸ್ ಐ ಯೋಗೇಶ್, ಸಬ್ ಇನ್ಸ್ಪೆಕ್ಟರ್ ರೇಣುಕಾ ಯಾದವ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ವರದಿ: ಮಂಜುಸ್ವಾಮಿ ಎಂ.ಎನ್.ಕೊರಟಗೆರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ತುಮಕೂರು: ಹೇಮಾವತಿ ಎಕ್ಸ್’ಪ್ರೆಸ್ ಲಿಂಕ್ ಕೆನಾಲ್ ವಿರೋಧಿ ಹೋರಾಟ ಸಮಿತಿ ತುಮಕೂರು, ಜೂನ್ 25ರಂದು ತುಮಕೂರು ಬಂದ್ ಗೆ ಕರೆ ನೀಡಿದ್ದು, ಎಲ್ಲ ತಾಲೂಕು ಕೇಂದ್ರಗಳಲ್ಲಿ ಬಂದ್ ಆಚರಿಸಿ ಪ್ರತಿಭಟನೆ ಮಾಡಲಾಗುವುದು ನಡೆಸಲಾಗುವುದು ಎಂದು ತಿಳಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಸೊಗಡು ಶಿವಣ್ಣ, ಗುಬ್ಬಿ ತಾಲೂಕನ್ನು ಸುತ್ತುವರಿದಂತೆ ಬಂದಿರುವ 100 ಕಿ.ಮೀ. ಚಾನಲ್ ಸುತ್ತಳತೆ ಹೊರತುಪಡಿಸಿ ಡಿ.ರಾಂಪುರದಿಂದ 34.5 ಕಿ.ಮೀ. ಲಿಂಕ್ ಕೆನಾಲ್ ಪೈಪ್ಲೈನ್ ಮೂಲಕ ರಾಮನಗರ ಜಿಲ್ಲೆ ಮಾಗಡಿಗೆ ಹೇಮಾವತಿ ನೀರು ತೆಗೆದುಕೊಂಡು ಹೋಗಲು ಸುಮಾರು 1 ಸಾವಿರ ಕೋಟಿ ರೂಪಾಯಿ ಅಂದಾಜು ಮೊತ್ತದ ಕಾಮಗಾರಿಗೆ ಅನುಮೋದನೆ ಪಡೆದುಕೊಂಡು ಕಾಮಗಾರಿಯನ್ನು ಆರಂಭಿಸಿದ್ದಾರೆ. ಈ ಯೋಜನೆ ಅನುಷ್ಠಾನವಾದರೆ ನಮ್ಮ ಜಿಲ್ಲೆಯ ತಿಪಟೂರು, ಗುಬ್ಬಿ, ತುರುವೇಕೆರೆ, ಶಿರಾ, ಮಧುಗಿರಿ, ಕೊರಟಗೆರೆ, ಚಿಕ್ಕನಾಯಕನಹಳ್ಳಿ, ಸಿ.ಎಸ್.ಪುರ, ಸಂಪಿಗೆ, ಬುಗುಡನಹಳ್ಳಿ, ತುಮಕೂರು ನಗರ, ತುಮಕೂರು ಗ್ರಾಮಾಂತರ, ಹೊನ್ನುಡಿಕೆ, ನಾಗವಲ್ಲಿ, ತುಮಕೂರು ಅಮಾನಿಕೆರೆ, ಹೆಣ್ಣೂರು — ಗೂಳೂರು ಏತ ನೀರಾವರಿ ಯೋಜನೆಯ 52 ಕೆರೆಗಳು ಹಾಗೂ ಜಿಲ್ಲೆಯ…
ತುಮಕೂರು: ಜಿಲ್ಲೆಯ ಕಂದಾಯ ಇಲಾಖೆಯ ಭೂಸ್ವಾಧೀನ ಹಾಗೂ ಇತರೆ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಕಾನೂನು ಸಲಹೆ ನೀಡಲು ಕಾನೂನು ಸಲಹೆಗಾರ(ಕಾನೂನು ಕೋಶ)ರ ಹುದ್ದೆಯನ್ನು ಭರ್ತಿ ಮಾಡಲು ನಿವೃತ್ತ ಜಿಲ್ಲಾ ನ್ಯಾಯಾಧೀಶರು ಅಥವಾ ನಿವೃತ್ತ ಸಿವಿಲ್ ನ್ಯಾಯಾಧೀಶರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ತಮ್ಮ ವೈಯಕ್ತಿಕ ಮಾಹಿತಿಯ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜುಲೈ 8ರೊಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ. ಆಯ್ಕೆಯಾದವರಿಗೆ ಸರ್ಕಾರದ ಆದೇಶದನ್ವಯ ಮಾಸಿಕ ಸಂಚಿತ ವೇತನವನ್ನು ಪಾವತಿಸಲಾಗುವುದು. ಆಯ್ಕೆಯ ವಿಚಾರದಲ್ಲಿ ಜಿಲ್ಲಾಧಿಕಾರಿಗಳ ತೀರ್ಮಾನವೇ ಅಂತಿಮವಾಗಿದ್ದು, ಯಾವುದೇ ವ್ಯಾಜ್ಯ ತಕರಾರುಗಳಿಗೆ ಅವಕಾಶವಿರುವುದಿಲ್ಲವೆಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA