Author: admin

ಬೆಂಗಳೂರು:  ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ನನಗೆ ಯಾವುದೇ ರೀತಿಯ ಪತ್ರ ಬಂದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪವರ್ ಟಿವಿ ಸುದ್ದಿ ವಾಹಿನಿಯಲ್ಲಿ ಪ್ರಸಾರವಾಗಿರುವುದನ್ನು ಗಮನಿಸಿದ್ದೇನೆ. ಈವರೆಗೆ ಯಾವುದೇ ರೀತಿಯ ಅಧಿಕೃತ ದೂರು ದಾಖಲಾಗಿಲ್ಲ. ನನಗೆ ಯಾವುದೇ ಪತ್ರ ಬಂದಿಲ್ಲ. ಶಿವಕುಮಾರ್ ಎನ್ನುವರು ದೂರು ಕೊಟ್ಟಿದ್ದಾರೆ ಎಂದರು. ಪತ್ರ ಬರೆಯುವುದಕ್ಕು, ದೂರು ಕೊಡುವುದಕ್ಕು ಸಾಕಷ್ಟು ವ್ಯತ್ಯಾಸವಿದೆ. ನೈಜತೆಯನ್ನು ಪರಿಶೀಲಿಸಬೇಕಾಗುತ್ತದೆ. ಪೊಲೀಸ್ ಠಾಣೆಗೆ ದೂರು ಕೊಟ್ಟರೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಬಹುದು. ಪವರ್ ಟಿವಿಯರನ್ನು ಕರೆಸಿ, ಎಲ್ಲಿ‌ ಮಾಹಿತಿ ಸಿಕ್ಕಿದೆ ಎಂಬುದುನ್ನು ಪಡೆಯಲಾಗುವುದು ಎಂದು ಹೇಳಿದರು. ರಾಜ್ಯ ಸರ್ಕಾರಕ್ಕೆ ಹಣಕಾಸು ವ್ಯವಸ್ಥೆಯನ್ನು ಸರಿಯಾಗಿ ನೋಡಿಕೊಳ್ಳಲು ಆಗುತ್ತಿಲ್ಲ. ಏಜೆನ್ಸಿಗೆ ಕೊಟ್ಟಿದ್ದಾರೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ತಮ್ಮ ಅಧಿಕಾರವಧಿಯಲ್ಲಿ ರಾಜ್ಯದ ಹಣಕಾಸಿನ ಸ್ಥಿತಿ ಯಾವ ರೀತಿ ಇಟ್ಟಿದ್ದರು‌ ಎಂಬುದು ಇಡೀ ದೇಶಕ್ಕೆ ಗೊತ್ತಿದೆ. ಸಾಲ ಎಷ್ಟು ಮಾಡಿದ್ದರು,…

Read More

ತುಮಕೂರು: ಜಿಲ್ಲೆಯ ತಿಪಟೂರು ನಗರದ ಮಾರನಗೆರೆ ಕೊರಚರ ಕಾಲೋನಿ 16ನೇ ವಾರ್ಡ್‌ನಲ್ಲಿ ಮಳೆ ಬಂದರೆ ಚರಂಡಿ ನೀರು ಮುಂದೆ ಹೋಗದಂತೆ ಕಟ್ಟಿಕೊಂಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಸ್ಥಳ ಪರಿಶೀಲಿಸಿ, ಚರಂಡಿಯಲ್ಲಿ ನಿಂತಿರುವ ಹೂಳನ್ನು ತೆಗೆದು ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ವ್ಯವಸ್ಥೆ ಮಾಡಿದ್ದು, ಈ ಪ್ರದೇಶದಲ್ಲಿರುವ ಸಾರ್ವಜನಿಕರೊಂದಿಗೆ ಚರ್ಚಿಸಿ ಕುಂದುಕೊರತೆಗಳಿಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಇನ್ನೂ ಸಾರ್ವಜನಿಕರು ಸ್ಥಳೀಯವಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನಕ್ಕೆ ತರಲು @osd_cmkarnataka ಎಕ್ಸ್ ಖಾತೆಗೆ ಟ್ಯಾಗ್ ಮಾಡಬಹುದಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು:  ಬೆಂಗಳೂರು ಕೃಷಿ ವಿಶ್ವವಿದ್ಯಾಲಯವೂ ಅಭಿವೃದ್ಧಿಪಡಿಸಲಾದ ವಿವಿಧ ತಾಂತ್ರಿಕತೆಗಳ ಉತ್ಪನ್ನ ಹಾಗೂ ಕೃಷಿ ಪರಿಕರಗಳ’ ಕೃಷಿ ವಿಶ್ವವಿದ್ಯಾನಿಲಯ ಉತ್ಪನ್ನಗಳ ಸಂತೆ’ ಎಂಬ ವಿನೂತನ ಕಾರ್ಯಕ್ರಮಕ್ಕೆ  ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಇಂದು ಚಾಲನೆ ನೀಡಿದರು‌‌. ಜಿಕೆವಿಕೆ ಆವರಣದಲ್ಲಿ ಆಯೋಜಿಸಿದ್ದ ಈ ವಿನೂತನ ಕಾರ್ಯಕ್ರಮಕ್ಕೆ ಸಚಿವರು ಚಾಲನೆ ನೀಡಿ, ಈ ಸಂತೆಯಲ್ಲಿ ಬೆಂಗಳೂರು ಕೃಷಿ ವಿವಿಯ ವ್ಯಾಪ್ತಿಗೊಳಪಡುವ ವಿವಿಧ ಕೃಷಿ ಸಂಶೋಧನಾ ವಿಸ್ತರಣಾ ಹಾಗೂ ಕೃಷಿ ಮಹಾವಿದ್ಯಾಲಯಗಳಲ್ಲಿ ಸಂಶೋಧನೆಗೊಳಪಟ್ಟು ಉತ್ಪಾದಿಸಲಾದ ಕೃಷಿ ಉತ್ಪನ್ನಗಳು ಹಾಗೂ ಕೃಷಿ ತಂತ್ರಜ್ಞಾನಗಳನ್ನು ಪರಿಚಯ ಮಾಡುವ ನಿಟ್ಟಿನಲ್ಲಿ ಆಯೋಜಿಸಿದ್ದ ಸಂತೆಯನ್ನು ವೀಕ್ಷಿಸಿದರು. ಸಂತೆಯಲ್ಲಿ ಬಿತ್ತನೆ ಬೀಜಗಳು, ಸಿರಿಧಾನ್ಯಗಳ ಮೌಲ್ಯವರ್ಧಿತ ಉತ್ಪನ್ನಗಳು, ಸಾವಯವ ಉತ್ಪನ್ನಗಳು, ವಿವಿಧ ಸಸ್ಯಾಭಿವೃದ್ದಿ ಸಾಮಾಗ್ರಿಗಳು, ಜೈವಿಕ ಗೊಬ್ಬರಗಳು, ಜೇನು ಕೃಷಿ, ಕೇಕ್ ಪ್ರದರ್ಶನ, ಇನ್ನೂ ಮುಂತಾದವುಗಳನ್ನು ಈ ಸಂತೆಯಲ್ಲಿ ಪ್ರದರ್ಶನ ಮತ್ತು ಮಾರಾಟದ ವ್ಯವಸ್ಥೆಯನ್ನು ಕಂಡು ಸಚಿವರು ಸಂತಸ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಜಿಕೆವಿಕೆ ಉಪ ಕುಲಪತಿ ಸುರೇಶ್, ಹಾಗೂ ಸಿಬ್ಬಂದಿ ವರ್ಗ ಭಾಗವಹಿಸಿದ್ದರು‌‌‌. ನಮ್ಮತುಮಕೂರಿನ ಕ್ಷಣ…

Read More

ಬೆಂಗಳೂರು: ಮೂರು ವರ್ಷದ ಮಗುವಿನ ಸಿಗರೇಟ್‌ನಿಂದ ಸುಟ್ಟು ಮಲತಂದೆಯೊಬ್ಬ ಮೃಗೀಯ ವರ್ತನೆ ತೋರಿರುವ ಘಟನೆ ಬೆಂಗಳೂರಿನಲ್ಲಿ ಈ ಘಟನೆ ನಡೆದಿದೆ. ಜರೀನಾ ತಾಜ್‌ ಎಂಬ ಮಹಿಳೆ ಹಾಗೂ ಆಕೆಯ ಮೂರು ವರ್ಷದ ಮಗು ತೀವ್ರ ಹಲ್ಲೆಗೊಳಗಾದವರು. ಜರೀನಾ ತಾಜ್‌ ಮೂರನೇ ಪತಿ ಅಜ್ಮಂತ್‌ ಎಂಬಾತ, 3 ವರ್ಷದ ಮಗುವಿನ ಮುಖ, ಕತ್ತು ಹಾಗೂ ತಲೆ ಭಾಗದಲ್ಲಿ ಸಿಗರೇಟ್‌ ನಿಂದ ಸುಟ್ಟು ಗಾಯಗೊಳಿಸಿದ್ದಾನೆ. ಕಾಲಿನ ಮೇಲೆ ದಾಳಿ ಮಾಡಿರುವುದರಿಂದ ಕಾಲು ಕತ್ತರಿಸಿದಂತಾಗಿದೆ. ತೀವ್ರ ಗಾಯಗೊಂಡಿರುವ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜರೀನಾ ತಾಜ್‌ ಮೂರು ಮದುವೆಯಾಗಿದ್ದು, ಮೊದಲ ಗಂಡನಿಂದ ಎರಡು ಹೆಣ್ಣು ಮಕ್ಕಳು ಆಗಿದ್ದವು. ಎರಡನೇ ಪತಿಯಿಂದ ಒಂದು ಹೆಣ್ಣು ಮಗು ಆಗಿತ್ತು. ಆ ಹೆಣ್ಣು ಮಗುವಿನ ಮೇಲೆ  ಇದೀಗ ಕ್ರೌರ್ಯ ನಡೆದಿದೆ.  ಮೊದಲ ಇಬ್ಬರು ಗಂಡಂದಿರನ್ನು ತೊರೆದಿದ್ದ ಜರೀನಾ ತಾಜ್‌, ಅಜ್ಮಂತ್‌ ಜೊತೆ ಮೂರನೇ ಮದುವೆಯಾಗಿದ್ದಳು. ಈಗ ಮೂರನೇ ಗಂಡ ಚಿತ್ರಹಿಂಸೆ ನೀಡುತ್ತಿದ್ದಾನೆ ಎಂದು ಜರೀನಾ ತಾಜ್‌ ಆರೋಪಿಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ…

Read More

ಬೆಂಗಳೂರು:  ಐಸ್‌ ಕ್ರೀಮ್‌ ಕೊಡಿಸುವುದಾಗಿ ಆಮಿಷವೊಡ್ಡಿ 9 ವರ್ಷದ ಬಾಲಕನನ್ನು ಕಿಡ್ನ್ಯಾಪ್‌ ಮಾಡಿ, ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ಸಮೀಪದ ಚಿಕ್ಕತೋಗೂರು ಬಳಿ ಈ ಘಟನೆ ನಡೆದಿತ್ತು.. ಜಾರ್ಖಂಡ್‌ ಮೂಲದ ಮೊಹಮದ್ ಜಶಿಮುದ್ದೀನ್ ಶೇಕ್‌(24)  ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ.. ಮೊಹಮದ್ ಜಶಿಮುದ್ದೀನ್ ಶೇಕ್‌(24) ಬ್ಯುಸಿನೆಸ್‌ ನಲ್ಲಿ ಲಾಸ್‌ ಆಗಿ ಸಾಕಷ್ಟು ಸಾಲ ಮಾಡಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಆತ ಮನೆ ಬಳಿ ಆಟವಾಡುತ್ತಿದ್ದ ಬಾಲಕನಿಗೆ ಐಸ್‌ ಕ್ರೀಮ್‌ ಕೊಡಿಸುವ ಆಮಿಷ ತೋರಿಸಿ ಕಿಡ್ನ್ಯಾಪ್‌ ಮಾಡಿಕೊಂಡು ಹೋಗಿದ್ದ. ಜೂನ್‌ 17ರಂದು ಕಿಡ್ನ್ಯಾಪ್‌ ಮಾಡಲಾಗಿತ್ತು. ನಂತರ ಬಾಲಕನ ಪೋಷಕರಿಗೆ ಕರೆ ಮಾಡಿದ್ದ ಆರೋಪಿ 10 ಲಕ್ಷ ರೂಪಾಯಿ ತಂದುಕೊಡುವಂತೆ ಬೇಡಿಕೆ ಇಟ್ಟಿದ್ದ. ಪದೇ ಪದೇ ಲೊಕೇಷನ್‌ ಬದಲಿಸುತ್ತಾ ಆತ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ.. ಕೊನೆಗೂ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಬಾಲಕನನ್ನು ರಕ್ಷಣೆ ಮಾಡಿದ್ದಾರೆ. ಜೂನ್‌ 18ರಂದೇ ಬಂಧನವಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.. ಎಲೆಕ್ಟ್ರಾನಿಕ್‌ ಸಿಟಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.…

Read More

ಬೆಂಗಳೂರು: ಗೂಡ್ಸ್‌ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ಅಂಗಡಿಗೇ ನುಗ್ಗಿದ ಘಟನೆ ಬೆಂಗಳೂರಿನ ಸುಬ್ರಮಣ್ಯನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ. ನೆನ್ನೆ ಮಧ್ಯಾಹ್ನ ಗೂಡ್ಸ್‌ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿದೆ. ಅದು ಒಮ್ಮಲೆ ಫುಟ್‌ ಪಾತ್‌ ಗೆ ನುಗ್ಗಿದೆ.. ಅಲ್ಲಿಂದ ದಾಟಿಕೊಂಡು ಅಂಗಡಿಯೊಂದಕ್ಕೆ ನುಗ್ಗಿದೆ. ಮಧ್ಯಾಹ್ನ 2:30ರ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯಲ್ಲಿ ವ್ಯಕ್ತಿಯೊಬ್ಬರ ಕಾಲು ಮುರಿದಿದೆ.. ಫುಟ್‌ ಪಾತ್‌ನಲ್ಲಿ ಬೈಕ್‌ ನಿಲ್ಲಿಸುತ್ತಿದ್ದವನ ಮೇಲೆ ನುಗ್ಗಿದ್ದರಿಂದ ಆತನ ಕಾಲು ಮುರಿದಿದೆ ಎಂದು ತಿಳಿದು ಬಂದಿದೆ. ಗಾಯಾಗೊಂಡ ಸವಾರನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲ್ಲೇಶ್ವರಂ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು: ಗಂಡ–ಹೆಂಡತಿ ಮನೆ ಟೆರೇಸ್‌ ಮೇಲಿದ್ದರು. ಈ ವೇಳೆ ಪತ್ನಿ ಜಾರಿ ಕೆಳಗೆ ಬೀಳುತ್ತಿದ್ದರು. ಆಗ ಗಂಡ ಆಕೆಯ ಕೈಹಿಡಿದು ರಕ್ಷಿಸಲು ಪಟ್ಟ ಕಷ್ಟ ಅಷ್ಟಿಷ್ಟಲ್ಲ. ಪತ್ನಿ ಗಂಡ ಕೈಯಿಂದ ನೇತಾಡುತ್ತಿದ್ದರೆ, ಕೆಳಗೆ ನಿಂತಿದ್ದ ಜನ ರಕ್ಷಣೆ ಮಾಡೋಕೆ ಸಿದ್ಧತೆ ಮಾಡ್ತಿದ್ದರು.. ಆದ್ರೆ, ಆಕೆ ಗಂಡನ ಕೈಜಾರಿ ಕೆಳಗೆ ಬಿದ್ದಿದ್ದಾಳೆ. ಕೆಳಗೆ ಬೈಕ್‌ಗಳು ಪಾರ್ಕ್‌ ಮಾಡಿದ್ದರಿಂದ ಅದರ ಮೇಲೆ ಬಿದ್ದು ತೀವ್ರ ಗಾಯಗೊಂಡಿದ್ದಾಳೆ.. ಕೋಮಾಗೆ ಜಾರಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ನಡೆದದ್ದು ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಕನಕನಗರದ ಬಡಾವಣೆಯಲ್ಲಿ.  27 ವರ್ಷದ ಮಹಿಳೆ ರುಬಾಯ್‌ ಎಂಬಾಕೆಯೇ ಮನೆ ಮೇಲಿಂದ ಕಾಲುಜಾರಿ ಬಿದ್ದಾಕೆ. ಸದ್ಯ ಆಕೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತನ್ನ ಪತಿಯ ಜೊತೆ ಕಟ್ಟಡದ ಮೇಲೆ ಆಕೆ ಕೆಲಸ ಮಾಡ್ತಿದ್ದಳು. ಕೆಲಸ ಮಾಡುವ ವೇಳೆ ಆಕಸ್ಮಿಕವಾಗಿ ಜಾರಿ ಬಿದ್ದಿದ್ದಾಳೆ.. ನೀರಿನ ಮೇಲೆ ಕಾಲಿಟ್ಟಿದ್ದರಿಂದ ಕಾಲು ಜಾರಿ ಕೆಳಗೆ ಬಿದ್ದಿದ್ದಾಳೆ ಎಂದು ತಿಳಿದುಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ…

Read More

ಪಾವಗಡ: ಕೃಷಿ ಬೆಳೆಗಳಲ್ಲಿ ಬಿತ್ತನೆ ಹಂತದಿಂದ ಕಟಾವು ಹಂತದ ವರೆಗೆ ಬರ, ಆಲಿಕಲ್ಲುಮಳೆ, ಭೂಕುಸಿತ ಮುಂತಾದ ಪ್ರಕೃತಿ ವಿಕೋಪಗಳಿಂದ ಇಳುವರಿ ನಷ್ಟ ಸಂಭವಿಸಿದಲ್ಲಿ ಸಮಗ್ರ ವಿಮಾ ಭದ್ರತೆಯನ್ನು ಒದಗಿಸುವ ಸಲುವಾಗಿ 2024 ರ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ತಾಲೂಕಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಸಹಾಯಕ ಕೃಷಿ ನಿರ್ದೇಶಕರಾದ ಅಜಯ್ ಕುಮಾರ್ ತಿಳಿಸಿದರು. ಸದರಿ ಯೋಜನೆ ಇಡೀ ವಿಮಾ ಪರಿಹಾರ ಮೊತ್ತವನ್ನು ಪಡೆಯಲು ಬೆಳೆ ಸಮೀಕ್ಷೆ ಕಾರ್ಯಕ್ರಮದಲ್ಲಿ ರೈತರು ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಬೆಳೆದಿರುವ ಬೆಳೆಗಳು ದಾಖಲಾಗುವುದು ಕಡ್ಡಾಯವಾಗಿರುತ್ತದೆ ಆದ್ದರಿಂದ ಪ್ರಸ್ತುತ ಹಂಗಾಮಿನ ಬೆಳೆ ವಿಮೆ ಯೋಜನೆಯಲ್ಲಿ ವಿಮೆಗೆ ಒಳಪಡುವ ವಿಮಾ ಘಟಕಗಳು ಬೆಳೆಗಳು ಪ್ರೀಮಿಯಂ ಮೊತ್ತ ಬೆಳೆವಾರು ವಿಮಾ ಮೊತ್ತ ಹಾಗೂ ಅಂತಿಮ ದಿನಾಂಕಗಳ ಬಗ್ಗೆ ಮತ್ತು ಬೆಳೆ ಸಮೀಕ್ಷೆ ಕಾರ್ಯಕ್ರಮ ಮಾಡಿ ರೈತರ ತಮ್ಮ ಮೊಬೈಲ್ ಮುಖಾಂತರ ತಮ್ಮ ಜಮೀನಿನಲ್ಲಿರುವ ಬೆಳೆಗಳನ್ನು ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ ದಾಖಲು ಮಾಡುವುದರ ಕುರಿತು ದಿನಾಂಕ…

Read More

ದಿಲ್ಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯವು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮಂಜೂರು ಮಾಡಿರುವ ಜಾಮೀನನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯವು ಸಲ್ಲಿಸಿರುವ ತುರ್ತು ಅರ್ಜಿ ಆಲಿಸಿದ ದಿಲ್ಲಿ ಹೈಕೋರ್ಟ್, ಅರವಿಂದ್ ಕೇಜ್ರಿವಾಲ್ ರ ಬಿಡುಗಡೆಗೆ ತಡೆ ನೀಡಿದೆ. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ 1 ಲಕ್ಷ ರೂ. ಬಾಂಡ್ ನ ಮೇಲೆ ದಿಲ್ಲಿಯ ರೌಸ್ ಅವೆನ್ಯೂ ನ್ಯಾಯಾಲಯ ಗುರುವಾರ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ನೆನ್ನೆ ಇಡಿ ಹೈಕೋರ್ಟ್ ಮೆಟ್ಟಿಲೇರಿತ್ತು. ಜಾರಿ ನಿರ್ದೇಶನಾಲಯದ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಸಲ್ಲಿಸಿದ್ದ ತುರ್ತು ಅರ್ಜಿಯ ವಿಚಾರಣೆಯು ನ್ಯಾ. ಸುಧೀರ್ ಕುಮಾರ್ ಜೈನ್ ಹಾಗೂ ರವೀಂದರ್ ದುದೇಜ ಅವರನ್ನೊಳಗೊಂಡ ರಜಾಪೀಠದ ಮುಂದೆ ಬಂದಿದೆ. ಅರವಿಂದ್ ಕೇಜ್ರಿವಾಲ್ ಅವರಿಗೆ ವಿಚಾರಣಾ ನ್ಯಾಯಾಲಯವು ಮಂಜೂರು ಮಾಡಿರುವ ಜಾಮೀನಿಗೆ ತಡೆ ನೀಡಬೇಕು ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್…

Read More

2023–24 ಸಾಲಿಗೆ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಹೊರಡಿಸಿರುವ ಅಧಿಸೂಚನೆಯಲ್ಲಿ 2017-18ನೆ ಸಾಲಿನ ಗೆಜೆಟೆಡ್ ಪ್ರೊಬೇಷನರಿ(ಕೆಎಎಸ್) ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಸೀಮಿತಗೊಳಿಸಿ ಅರ್ಜಿ ಸಲ್ಲಿಸಲು 15 ದಿನಗಳ ವಿಶೇಷ ಅವಕಾಶವನ್ನು ನೀಡಲು ಸರಕಾರ ನಿರ್ಧರಿಸಿದೆ. ಶುಕ್ರವಾರ ಈ ಕುರಿತು ಆದೇಶ ಹೊರಡಿಸಿದ್ದು, ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕಾತಿ ನಿಯಮಗಳು, 1997 ರನ್ವಯ 2023–24ನೆ ಸಾಲಿಗೆ ಕರ್ನಾಟಕ ಲೋಕಸೇವಾ ಆಯೋಗವು ಕೆಎಎಸ್ ಹುದ್ದೆಗಳ ರಿಕ್ತ ಸ್ಥಾನಗಳಿಗೆ ಫೆ.26ರಂದು ಹೊರಡಿಸಿರುವ ಅಧಿಸೂಚನೆ ಹೊರಡಿಸಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯಗೊಳಿಸಿದೆ. ಅಧಿಸೂಚನೆಯಲ್ಲಿ ಈಗಿರುವ ನಿಯಮಗಳ ಮೇಲೆ 2017-18ನೆ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲ ಅಭ್ಯರ್ಥಿಗಳಿಗೆ ವಯಸ್ಸಿನ ನಿಬರ್ಂಧವಿಲ್ಲದೆ ಒಂದು ಬಾರಿಗೆ ಸೀಮಿತಗೊಳಿಸಿ ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡಿ ಸರಕಾರವು ಆದೇಶಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More