Author: admin

ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ಹಗರಣದ ಆರೋಪ ಕೇಳಿ ಬಂದಿದ್ದು, ಸೂರಜ್ ರೇವಣ್ಣ ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ, ದೌರ್ಜನ್ಯ ಎಸಗಿದ್ದಾರೆ ಎಂದು ಅರಕಲಗೂಡಿನ ಚೇತನ್ ಎಂಬಾತ ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಗಳಿಗೆ ಸುಮಾರು 14ರಿಂದ 15 ಪುಟದ ದೂರು ಸಲ್ಲಿಸಿದ್ದಾರೆ ಎನ್ನಲಾಗಿದೆ. ಈ ಆರೋಪದ ಬೆನ್ನಲ್ಲೇ ದೂರುದಾರ ಚೇತನ್ ವಿರುದ್ಧ ಬ್ಲಾಕ್ ಮೇಲ್ ಆರೋಪ ಹೊರಿಸಿ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಹಾಗೂ ಸೂರಜ್ ಬ್ರಿಗೇಡ್ ನ ಖಜಾಂಚಿ ಶಿವಕುಮಾರ್ ಎಚ್.ಎಲ್. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ದೂರು ನೀಡಿದ್ದಾರೆ. ತನ್ನ ಮೇಲೆ ಎಂಎಲ್ ಸಿ ಸೂರಜ್ ರೇವಣ್ಣ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದಾರೆ ಎಂದು ಚೇತನ್ ಎಂಬ ಯುವಕ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಲಿಖಿತ ದೂರು ನೀಡಿದ್ದಾರೆ ಎಂದು ಹೇಳಲಾಗಿದೆ. ಸೂರಜ್ ರೇವಣ್ಣ ವಿರುದ್ಧ ದೂರು ನೀಡಿರುವ ಚೇತನ್ ವಿರುದ್ಧ ಹೊಳೆನರಸೀಪುರ ಪಟ್ಟಣ ಠಾಣೆಯಲ್ಲಿ ಸೂರಜ್ ರೇವಣ್ಣ…

Read More

ಆಂಧ್ರಪ್ರದೇಶದ ಪುಟ್ಟಹಳ್ಳಿಯ ಹೆಣ್ಣುಮಕ್ಕಳ ಪ್ರೌಢಶಾಲೆ ಬಳಿ ಪೊದೆಯಲ್ಲಿ ಶುಕ್ರವಾರ 21 ವರ್ಷ ವಯಸ್ಸಿನ ಮಹಿಳೆಯ ಶವ ನಗ್ನಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿದೆ. ಮಹಿಳೆಯ ಹತ್ಯೆಗೆ ಮುನ್ನ ಅತ್ಯಾಚಾರ ನಡೆದಿರಬೇಕು ಎಂದು ಪೊಲೀಸರು ಶಂಕಿಸಿದ್ದಾರೆ. ಬಾಪಟ್ಲಾ ಜಿಲ್ಲೆಯ ಎಪುರುಪಲೇಂ ಗ್ರಾಮದ ಮಹಿಳೆ ಬೆಳಿಗ್ಗೆ ಶೌಚಕ್ಕಾಗಿ ರೈಲು ಹಳಿ ಪಕ್ಕದಲ್ಲಿರುವ ಶಾಲೆಯ ಬಳಿ ತೆರಳಿದ್ದರು. ಆದರೆ ಆ ಬಳಿಕ ವಾಪಸ್ಸಾಗಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಮುಂಜಾನೆ 5.30 ರಿಂದ 5.45ರ ವೇಳೆ ಮನೆಯಿಂದ ಹೊರಟಿದ್ದ ಮಹಿಳೆ ಬಾರದೇ ಇದ್ದಾಗ, ಕುಟುಂಬದವರು ಹುಡುಕಾಟ ಆರಂಭಿಸಿದರು. ಈ ವೇಳೆ ಆಕೆಯ ಮೃತದೇಹ ಪೊದೆಯಲ್ಲಿ ಪತ್ತೆಯಾಯಿತು ಎಂದು ಬಾಪಟ್ಲಾ ಜಿಲ್ಲೆಯ ಎಸ್ಪಿ ವಕುಲ್ ಜಿಂದಾಲ್ ಹೇಳಿದ್ದಾರೆ. ಈ ಶಂಕಿತ ಅತ್ಯಾಚಾರ ಮತ್ತು ಮಹಿಳೆಯ ಹತ್ಯಾ ಪ್ರಕರಣವನ್ನು ಬೇಧಿಸಲು ಐದು ತನಿಖಾ ತಂಡಗಳನ್ನು ರಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ತಕ್ಷಣ ಗ್ರಾಮಕ್ಕೆ ಭೇಟಿ ನೀಡುವಂತೆ ಗೃಹ ಸಚಿವರಾದ ವಂಗಲಪುಡಿ ಅನಿತಾ ಅವರಿಗೆ ಸಿಎಂ ಚಂದ್ರಬಾಬು ನಾಯ್ಡು ಸೂಚಿಸಿದ್ದಾರೆ. ಮಾದಕ…

Read More

ಆಧುನಿಕ ತಂತ್ರಜ್ಞಾನ ಬಳಸಿ ಆನ್ ಲೈನ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದ ಆಮಿಷಗಳನ್ನು ಒಡ್ಡಿ ವಂಚನೆ ಮಾಡುತ್ತಿರುವ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನಸಾಮಾನ್ಯರು ಮುಂಜಾಗ್ರತೆ ವಹಿಸುವ ಮೂಲಕ ವಂಚನೆಗೊಳಗಾಗುವುದನ್ನು ತಡೆಗಟ್ಟಬಹುದಾಗಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಡಾ. ವಿಕ್ರಮ ಅಮಟೆ ತಿಳಿಸಿದರು. ಅವರು ಇಂದು ಚಿಕ್ಕಮಗಳೂರು ಪ್ರಸ್‌ಕ್ಲಬ್‌ನಲ್ಲಿ ಏರ್ಪಡಿಸಲಾಗಿದ್ದ ತಿಂಗಳ ಅತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಹಿತಿ ನೀಡಿದರು. ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗುತ್ತಿದ್ದು, ವಿದ್ಯಾವಂತ ಸುಶಿಕ್ಷಿತರೇ ಹೆಚ್ಚು ವಂಚನೆಗೊಳಗಾಗುತ್ತಿದ್ದಾರೆ, ದೊಡ್ಡ ಜಾಲವನ್ನು ಹೊಂದಿರುವ ವಂಚಕರ ಜಾಲವು ಇಲ್ಲಸಲ್ಲದ ಆಮಿಷ ಒಡ್ಡಿ ವಿವಿಧ ರೀತಿಯಲ್ಲಿ ವಂಚನೆ ಮಾಡುತ್ತಿದ್ದು, ಯಾರೂ ಕೂಡ ಅಪರಿಚಿತರೊಂದಿಗೆ ತಮ್ಮ ವಯಕ್ತಿಕ ಮಾಹಿತಿಗಳನ್ನು ನೀಡಬಾರದು ಎಂದು ಮನವಿ ಮಾಡಿದರು. ಮೂರು ಪ್ರಕರಣಗಳಲ್ಲಿ ಸೈಬರ್ ಅಪರಾಧಗಳು ನಡೆಯುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋಗಳನ್ನು ವೈರಲ್ ಮಾಡಿ ಬ್ಲಾಕ್‌ಮೇಲ್ ರೂಪದಲ್ಲಿ ವಂಚನೆ ಮಾಡಲಾಗುತ್ತಿದೆ. ಬ್ಯಾಂಕ್ ಹಾಗೂ ಇತರ ವ್ಯವಹಾರಗಳಲ್ಲಿ ವಯಕ್ತಿಕ ಮಾಹಿತಿ ಪಡೆದುಕೊಂಡು ತಂತ್ರಜ್ಞಾನ ಬಳಸಿ ಹಣ ಅಪಹರಿಸುವ ಮೂಲಕ ವಂಚನೆ…

Read More

ಮುಸ್ಲಿಂ ಬಾಹುಳ್ಯದ ದೇಶವಾಗಿರುವ ತಜಿಕಿಸ್ತಾನ ಇದೀಗ ಹಿಜಾಬ್ ನಿಷೇಧಿಸಲು ಮುಂದಾಗಿದ್ದು, ಶೀಘ್ರದಲ್ಲಿಯೇ ಈ ಕಾನೂನು ಜಾರಿಯಾಗುವ ಸಾಧ್ಯತೆ ಇದೆ. ದೇಶದ ಸಂಸತ್ ನ ಮೇಲ್ಮನೆಯಲ್ಲಿ ಜೂನ್ 19ರಂದು ಹಿಜಾಬ್ ನಿಷೇಧ ಸಂಬಂಧಿ ವಿಧೇಯಕವನ್ನು ಅಂಗೀಕರಿಸಲಾಗಿದೆ. ಶಾಲಾ–ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ನಿರಾಕರಿಸಿದ ಘಟನೆ ಕರ್ನಾಟಕ(Karnataka) ಸೇರಿದಂತೆ ಭಾರತದ ವಿವಿಧ ರಾಜ್ಯಗಳಲ್ಲಿ ಗದ್ದಲ ಏರ್ಪಟ್ಟು ಭಾರೀ ಚರ್ಚೆ ಆಗಿತ್ತು. ಆದರೀಗ ಅಚ್ಚರಿ ಎಂಬಂತೆ ಮುಸ್ಲಿಂ ರಾಷ್ಟ್ರಗಳೇ ಹಿಜಾಬ್ ನಿಷೇಧಕ್ಕೆ ಮುಂದಾಗಿವೆ. ಅಂತೆಯೇ ಇದೀಗ ಸುಮಾರು 1 ಕೋಟಿ ಜನಸಂಖ್ಯೆ ಹೊಂದಿರುವ ತಜಕಿಸ್ತಾನದಲ್ಲಿ ಶೇ.96ರಷ್ಟು ಜನರು ಮುಸ್ಲಿಮರಿದ್ದಾರೆ. ಆದರೆ ಹಾಲಿ ಆಡಳಿತದಲ್ಲಿರುವ ಅಧ್ಯಕ್ಷ ಎಮೋಮಲಿ ರೆಹಮಾನ್ ಸರ್ಕಾರವು, ತಜಕಿಸ್ತಾನವನ್ನು ಜಾತ್ಯತೀತ ದೇಶ ಎಂದು ಜಗತ್ತಿನ ಮುಂದೆ ತೆರೆದಿಡುವ ಭಾಗವಾಗಿ ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ತಜಿಕಿಸ್ತಾನದ ಸಂಸತ್ ನ ಮೇಲ್ಮನೆಯಾದ ಮಜಿಲಿ ಮಿಲ್ಲಿಯಲ್ಲಿ ಸ್ಪೀಕರ್ ರುಸ್ತಮ್ ಎಮೋಮಲಿ ಅವರ ಅಧ್ಯಕ್ಷತೆಯಲ್ಲಿ ನಡೆದ 18ನೇ ಅಧಿವೇಶನದ ವೇಳೆ ವಿಧೇಯಕಕ್ಕೆ ಅನುಮೋದನೆ ದೊರಕಿದೆ.…

Read More

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣದ ಅಗತ್ಯವಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ಕೆಂಪೇಗೌಡ ವಿಮಾನ ನಿಲ್ದಾಣ ಹಾಗೂ ನಮಗೂ ಒಪ್ಪಂದವಿದೆ. ಆ ಒಪ್ಪಂದದ ಪ್ರಕಾರ 2033ರವರೆಗೆ ಬೇರೊಂದು ವಿಮಾನ ನಿಲ್ದಾಣ ಮಾಡುವುದಕ್ಕೆ ಅವಕಾಶ ಇಲ್ಲ. 2033ಕ್ಕೆ ಆ ಒಪ್ಪಂದ ಮುಗಿಯುತ್ತೆ. ಆಗ ನಾವು ಎರಡನೇ ಏರ್ಪೋರ್ಟ್ ಮಾಡಬೇಕಾಗುತ್ತೆ ಎಂದರು. ಪ್ರಯಾಣಿಕರ ಲೋಡ್ ಬಗ್ಗೆ ನಿನ್ನೆ ನಡೆದ ಸಭೆಯಲ್ಲಿ ಪರಾಮರ್ಶೆ ಮಾಡಲಾಗಿದೆ. 2032ರ ಸುಮಾರಿಗೆ ಕೆಐಎನಲ್ಲಿ ಜನಸಂದಣಿ ಹೆಚ್ಚಾಗಲಿದೆ. ಹಾಗಾಗಿ ಮತ್ತೊಂದು ಏರ್ ಪೋರ್ಟ್ ನಮಗೆ ಬೇಕಾಗುತ್ತದೆ. ಮುಂಬೈ, ಗೋವಾ, ದೆಹಲಿಯಲ್ಲಿ ಹೊಸ ಏರ್ ಪೊರ್ಟ್ ಗಳಿವೆ. ಮುಂದಿನ ದಿನಗಳಲ್ಲಿ ಬೆಂಗಳೂರಿಗೆ 2ನೇ ಏರ್ ಪೋರ್ಟ್ ಅಗತ್ಯವಿದೆ. ಎಲ್ಲಿ, ಎಷ್ಟು ಎಕರೆ ಜಾಗದಲ್ಲಿ ನಿರ್ಮಾಣ ಮಾಡಬೇಕು ಎಂಬ ಬಗ್ಗೆ ನಿರ್ಧಾರ ಮಾಡಿಲ್ಲ. ಈ ಬಗ್ಗೆ ಚರ್ಚಿಸಿದ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.…

Read More

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಬಾಲಿವುಡ್ ನ ಖ್ಯಾತ ಗಾಯಕ, ನಟ ಲಕ್ಕಿ ಅಲಿ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನ ನ್ಯೂ ಯಲಹಂಕ ಟೌನ್ ಬಳಿ ಇರುವ ಟ್ರಸ್ಟ್ ಒಂದಕ್ಕೆ ಸೇರಿರುವ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಗಾಯಕ ಲಕ್ಕಿ ಅಲಿ ದೂರು ನೀಡಿದ್ದಾರೆ ಎನ್ನಲಾಗಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಅವರ ಪತಿ ಸುಧೀರ್ ರೆಡ್ಡಿ ಹಾಗೂ ಮಧುಸೂಧನ ರೆಡ್ಡಿ ವಿರುದ್ಧ ದೂರು ನೀಡಿದ್ದಾರೆ. ಜೊತೆಗೆ ಸಲ್ಲಿಸಿರುವ ದೂರಿನ ಪ್ರತಿಯನ್ನು ಎಕ್ಸ್ ನಲ್ಲಿ ಖ್ಯಾತ ಗಾಯಕ ಲಕ್ಕಿ ಆಲಿ ಅವರು ಪೋಸ್ಟ್ ಮಾಡಿದ್ದಾರೆ. ಯಲಹಂಕ ನ್ಯೂ ಟೌನ್ ವ್ಯಾಪ್ತಿಯಲ್ಲಿರುವ ತಮ್ಮ ಟ್ರಸ್ಟ್ ಗೆ ಸಂಬಂಧಿಸಿದ ಭೂಮಿಯನ್ನು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಮಧುಸೂಧನ ಅವರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ಇದೇ ಬರುವ ಜೂನ್ 27 ರಿಂದ ಜುಲೈ 2ರ ವರೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ರ್ಯಾಲಿಯನ್ನು ಏರ್ಪಡಿಸಲಾಗಿದೆ. ಈ ಬಗ್ಗೆ ಅಗತ್ಯ ಸಿದ್ಧತೆ ನಡೆಸುವಂತೆ ಸಮಾಜ ಕಲ್ಯಾಣ ಇಲಾಖೆಗೆ ಜಿಲ್ಲಾಧಿಕಾರಿ ವೆಂಕಟರ್ ರಾಜಾ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಪೂರ್ವ ಭಾವಿ ಸಭೆಯನ್ನು ಆಯೋಜಿಸಲಾಗಿತ್ತು. ಈ ವೇಳೆ ಯಾವುದೇ ರೀತಿಯ ತೊಂದರೆಗೆ ಆಸ್ಪಂದ ನೀಡದಂತೆ ಕರ್ತವ್ಯ ನಿರ್ವಹಿಸಲು ಹಾಗೂ ಊಟೋಪಚಾರದ ವ್ಯವಸ್ಥೆಯನ್ನು ಮಾಡಿಕೊಳ್ಳುವಂತೆ ಡಿಸಿ ತಿಳಿಸಿದ್ದಾರೆ. ಸೈನಿಕ ಭರ್ತಿ ಕಾರ್ಯಾಲಯದ ನಿರ್ದೇಶಕ ಕರ್ನಲ್ ಗೌರವ್ ತಾಪ ಅವರು ಮಾತನಾಡಿ,”ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಕಲ್ಪಿಸಬೇಕಿದೆ. ಲೋಕೋಪಯೋಗಿ, ಸೆಸ್ಕ್, ಪದವಿ ಪೂರ್ವ ಶಿಕ್ಷಣ, ಅಗ್ನಿಶಾಮಕ ದಳ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವೈದ್ಯಕೀಯ ಶಿಕ್ಷಣ, ಸೆಸ್ಕ್, ಬಿಎಸ್ ಎನ್ ಎಲ್ ಹೀಗೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಅಗತ್ಯ ಸಹಕಾರ ನೀಡಬೇಕು. ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ನೋಡಲ್ ಅಧಿಕಾರಿ ಮೇಜರ್ ಬಾಲಸುಬ್ರಹ್ಮಣ್ಯಂ…

Read More

ನಟಿ ದೀಪಿಕಾ ಪಡುಕೋಣೆ ಅಮ್ಮನಾಗುವ ಖುಷಿಯಲ್ಲಿದ್ದಾರೆ.’ಕಲ್ಕಿ 2898 ಎಡಿ’ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ತೊಡಿಗಿಸಿಕೊಂಡಿದ್ದಾರೆ. ಈ ವೇಳೆ ನಟಿ ದುಬಾರಿ ಮೊತ್ತದ ಡ್ರೆಸ್ ಧರಿಸಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಪ್ರೀ ರಿಲೀಸ್ ಇವೆಂಟ್​ನಲ್ಲಿ ನಟಿ ದೀಪಿಕಾ ಪಡುಕೋಣೆ ಮುಖ್ಯ ಆಕರ್ಷಣೆಯಾಗಿ ಕಾಣಿಸಿಕೊಂಡಿದ್ರು. ಇನ್ನು, ನಟಿ ದೀಪಿಕಾ ಧರಿಸಿದ್ದ ಕಪ್ಪು ಬಣ್ಣದ ಗೌನ್ ಬೆಲೆ ಎಷ್ಟು ಗೊತ್ತಾ ಕೇಳಿದ್ರೆ ಶಾಕ್ ಆಗ್ತಿರಾ! ಲೋವೆ ಅಧಿಕೃತ ವೆಬ್‌ಸೈಟ್‌ನಲ್ಲಿ ಹತ್ತಿಯ ಅನಗ್ರಾಮ್ ಪೆಬಲ್ ಡ್ರೆಸ್‌ ನ ಬೆಲೆ ಬರೋಬ್ಬರಿ ₹1,14,000 ರೂಪಾಯಿ ಇದೆ. ಬೆಲೆ ಕೇಳಿದ ಫ್ಯಾನ್ಸ್ ಈ ಸಿಂಪಲ್ ಡ್ರೆಸ್​ಗೆ ಇಷ್ಟೋಂದು ದೀಪಿಕಾ ಇಷ್ಟೊಂದು ಹಣ ಕೊಟ್ಟಿದ್ದಾರಾ ಎಂದು ಕೇಳ್ತಿದ್ದಾರೆ. ದೀಪಿಕಾ ಧರಿಸಿದ ಕಪ್ಪು ಬಣ್ಣದ ಡ್ರೆಸ್‌ಗೆ 1,14,000 ಲಕ್ಷ ರೂ.ಎನ್ನಲಾಗುತ್ತಿದೆ. ನಟಿ ಕಲ್ಕಿ ಸಿನಿಮಾದಲ್ಲಿ ನಟಿಸಿದ್ದು ಪ್ರಭಾಸ್ ಜೊತೆ ಸ್ಕ್ರೀನ್ ಶೇರ್ ಮಾಡಿದ್ದಾರೆ. ಈ ಚಿತ್ರ ಭಾರೀ ನಿರೀಕ್ಷೆ ಹುಟ್ಟಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…

Read More

KSRTC ಬಸ್ ಚಾಲಕರಾಗಬೇಕು ಎಂದು ಅಂದುಕೊಂಡವರಿಗೆ ಇಲ್ಲಿದೆ ಸುವರ್ಣಾವಕಾಶ. ಖಾಲಿ ಇರುವ KSRTC ಬಸ್ ಚಾಲಕರ ಹುದ್ದೆಗಳನ್ನು ಆಯಾ ಬಸ್ ಡಿಪೋಗಳು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಕನಿಷ್ಠ 7ನೇ ತರಗತಿ ಪಾಸ್ ಆಗಿರಬೇಕು.. ಹೆವಿ ಮೋಟಾರ್ ವಾಹನ ಚಾಲಕರಾಗಿ 2 ವರ್ಷಗಳ ಅನುಭವ ಹೊಂದಿರಬೇಕು.. ಕರ್ನಾಟಕದ ಮಾನ್ಯತೆ ಪಡೆದಿರುವ ಸರಕು ವಾಹನ ಬ್ಯಾಡ್ಜ್ ಹೊಂದಿರಬೇಕು. ಮಾಸಿಕ ವೇತನ : ರೂ.23,000. ಇಎಸ್‌ ಐ, ಇಪಿಎಫ್ ಸೌಲಭ್ಯ ಇರುತ್ತದೆ. ಹೊರಗುತ್ತಿಗೆ ಆಧಾರದ ಚಾಲಕರನ್ನು ಆಯ್ಕೆ ಮಾಡಲಾಗುತ್ತದೆ.ಚಾಮರಾಜನಗರ, ರಾಮನಗರ, ಆನೇಕಲ್ ಡಿಪೋದಲ್ಲಿ ಚಾಲಕ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಚಾಮರಾಜನಗರ ಡಿಪೋದಲ್ಲಿ ಕೆಲಸ ಬೇಕಿದ್ರೆ 8050980889, 8618876846. ಹಾಗೂ ರಾಮನಗರ, ಅನೇಕಲ್ ನಲ್ಲಿ ಕೆಲಸ ಬೇಕಿದ್ರೆ 8050980889, 8618876846 ಸಂಪರ್ಕಿಸಬಹುದಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್…

Read More

ಮೈಸೂರು: ಮೈಸೂರಿನ ಅಧಿದೇವತೆ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 2024ನೇ ಸಾಲಿನ ಆಷಾಢ ಶುಕ್ರವಾರ ಹಾಗೂ ಅಮ್ಮನವರ ಜನ್ಮೋತ್ಸವ ಧಾರ್ಮಿಕ ಕಾರ್ಯಕ್ರಮಗಳಿಗೆ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಕೆ.ವಿ.ರಾಜೇಂದ್ರ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಆಷಾಢ ಶುಕ್ರವಾರ ಹಾಗೂ ಅಮ್ಮನವರ ಜನ್ಮೋತ್ಸವ ಧಾರ್ಮಿಕ ಕಾರ್ಯಕ್ರಮ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವರ್ಷ ಜುಲೈ 12 ರಂದು ಮೊದಲನೇ ಆಷಾಢ ಶುಕ್ರವಾರ, ಜುಲೈ  19 ರಂದು ಎರಡನೇ ಆಷಾಢ ಶುಕ್ರವಾರ, ಜುಲೈ 26 ರಂದು ಮೂರನೇ ಆಷಾಢ ಶುಕ್ರವಾರ, ಜುಲೈ 27 ರಂದು ಶನಿವಾರ ರಂದು ಶ್ರೀ ಚಾಮುಂಡೇಶ್ವರಿ ಅಮ್ಮನವರ ಜನ್ಮೋತ್ಸವ ವರ್ಧಂತಿ ಕಾರ್ಯಕ್ರಮ ಹಾಗೂ ಆಗಸ್ಟ್ 2 ರಂದು ಕೊನೆಯ ಆಷಾಢ ಶುಕ್ರವಾರಕ್ಕೆ ಹೆಚ್ಚಿನ ಭಕ್ತರು ಆಗಮಿಸುವ ನಿರೀಕ್ಷೆ ಇದ್ದು, ಸೂಕ್ತ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಅವರು ತಿಳಿಸಿದರು. ಜುಲೈ ಮೊದಲ…

Read More