Author: admin

ಬೆಂಗಳೂರು:  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ‌ ಪ್ರಕರಣದ ತನಿಖೆ ಪಕ್ಷದ ಆಧಾರದ ಮೇಲೆ ನಡೆಯುತ್ತಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಸ್ಪಷ್ಟಪಡಿಸಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ತಪ್ಪಿತಸ್ಥರು ಯಾವುದೇ ಪಕ್ಷದಲ್ಲಿದ್ದರು ತಪ್ಪಿತಸ್ಥರೇ ಆಗಿರುತ್ತಾರೆ. ಬೇರೆ ಪಕ್ಷದಲ್ಲಿದ್ದಾರೆ ಎಂಬುದನ್ನು ಮುಖ್ಯವಾಗಿ ತೆಗೆದುಕೊಳ್ಳುವುದಿಲ್ಲ. ಏನು ತಪ್ಪು ಮಾಡಿದ್ದಾರೆ ಎಂಬ ಆಧಾರದ ಮೇಲೆ ತನಿಖೆ, ವಿಚಾರಣೆ ನಡೆಯುತ್ತದೆ ಎಂದು ಹೇಳಿದರು. ದರ್ಶನ್ ಪ್ರಕರಣದ ಕುರಿತು ಪ್ರತಿಕ್ರಿಯಿಸಿ, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ನನ್ನು ವಿಚಾರಣೆ ನಡೆಸಲು ಇನ್ನೊಂದು ವಾರ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ‌ ಪೊಲೀಸರು ಕೇಳಿದ್ದರು. ಆದರೆ ಎರಡು ದಿನ ಕಸ್ಟಡಿಗೆ ನೀಡಿದೆ. ಎರಡು ದಿನದ ಬಳಿಕ ವಿಚಾರಣೆ ಮುಗಿದರೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುತ್ತಾರೆ ಎಂದು ತಿಳಿಸಿದರು‌. ರೇಣುಕಾಸ್ವಾಮಿ ಪ್ರಕರಣದ ಕೊಲೆ ಆರೋಪ ಹೊತ್ತಿರುವ ನಟ ದರ್ಶನ್ ವಿಚಾರದಲ್ಲಿ ಯಾರು ನನ್ನ ಬಳಿ ಬರಬೇಡಿ ಎಂದು ಮುಖ್ಯಮಂತ್ರಿಯವರ ಸೂಚಿಸಿದ್ದಾರೆ‌ ಎಂಬುದರ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ,…

Read More

ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ– ಬೆಂಗಳೂರು(National Institute of Mental Health and Neuro Sciences) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಯ ಮಾಹಿತಿ: NMHS ಸರ್ವೇ ಕೋಆರ್ಡಿನೇಟರ್​ –1 NMHS ಸರ್ವೇ ಫೀಲ್ಡ್​ ಡೇಟಾ ಕಲೆಕ್ಟರ್ –7 ಒಟ್ಟು 8 NMHS ಸರ್ವೇ ಫೀಲ್ಡ್​ ಡೇಟಾ ಕಲೆಕ್ಟರ್, ಸರ್ವೇ ಕೋಆರ್ಡಿನೇಟರ್​ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜೂನ್ 22, 2024 ಅಂದರೆ ನಾಳೆ ಬೆಳಗ್ಗೆ 10.30ಕ್ಕೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಬೆಂಗಳೂರಿ​​ನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಿ. ಶೈಕ್ಷಣಿಕ ಅರ್ಹತೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ​ ಪೂರ್ಣಗೊಳಿಸಿರಬೇಕು. ವಯೋಮಿತಿ: NMHS ಸರ್ವೇ ಕೋಆರ್ಡಿನೇಟರ್​ – 45 ವರ್ಷ…

Read More

ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಮ್ಮ ಸರಕಾರ ಅಧಿಕಾರಕ್ಕೆ ಬಂದ ದಿನದಿಂದ ಕನ್ನಡದ ವಿಚಾರದಲ್ಲಿ ರಾಜಿಯಾಗದೆ ಕೆಲಸ ಮಾಡುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧ ಆವರಣದಲ್ಲಿ ನಡೆದ ನಾಡದೇವಿ ಭುವನೇಶ್ವರಿ ಕಂಚಿನ ಪ್ರತಿಮೆಯ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ವಿಧಾನಸೌಧದ ಆವರಣದಲ್ಲಿ ಅಂಬೇಡ್ಕರ್ ಅವರ, ಬಸವಣ್ಣನವರ, ಕೆಂಪೇಗೌಡರು ಸೇರಿದಂತೆ ಅನೇಕ ನಾಯಕರ ಪ್ರತಿಮೆಗಳಿವೆ. ಈ ಶಕ್ತಿ ಕೇಂದ್ರದಲ್ಲಿ ನಾಡ ದೇವಿ ಭುವನೇಶ್ವರಿ ತಾಯಿ ಪ್ರತಿಮೆ ಇರಬೇಕು. ಇಲ್ಲಿಗೆ ಭೇಟಿ ನೀಡುವವರು ದೇವಿಯ ಆಶೀರ್ವಾದ ಪಡೆದುಕೊಳ್ಳಬೇಕು ಎಂಬುದು ನಮ್ಮ ಆಶಯ. ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷಗಳಾಗಿದ್ದು, ಈ ನೆನಪಿಗಾಗಿ 25 ಅಡಿಯ ಕಂಚಿನ ಪ್ರತಿಮೆ ಸ್ಥಾಪಿಸಲಾಗುತ್ತಿದೆ” ಎಂದರು. “ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಕಡ್ಡಾಯ ಮಾಡಿ ಮೊದಲ ಬಾರಿಗೆ ಕಾನೂನು ಮಾಡಲಾಯಿತು. ಇದಕ್ಕೆ ಅನೇಕ ಕನ್ನಡ ಸಂಘಟನೆಗಳು ಹೋರಾಟ ಮಾಡಿವೆ. ಒಂದಷ್ಟು ಬಾರಿ ಕಾನೂನು ಕೈಗೆ ತೆಗೆದುಕೊಂಡಾಗ ರಾಜಿಯಾಗದೆ ಕೆಲಸ ಮಾಡಿದ್ದೇವೆ. ಜೊತೆಗೆ ಕನ್ನಡ ಉಳಿಸುವ ಕೆಲಸವನ್ನು ಮಾಡಿದ್ದೇವೆ” ಎಂದು…

Read More

ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣಗಳ ಮಾಹಿತಿಯನ್ನು ಸರಕಾರಕ್ಕೆ ನೀಡಿದವರಿಗೆ ಆರೋಗ್ಯ ಇಲಾಖೆಯಿಂದ ನೀಡಲಾಗುತ್ತಿದ್ದ ಬಹುಮಾನದ ಮೊತ್ತವನ್ನು 50 ಸಾವಿರ ರೂ.ಗಳಿಂದ ಒಂದು ಲಕ್ಷ ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ. ರಾಜ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಹೆಣ್ಣು ಭ್ರೂಣ ಪತ್ತೆಯಾಗುತ್ತಿದ್ದಂತೆ ಗರ್ಭಪಾತ ಮಾಡಲಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ತಡೆಯಲು ಆರೋಗ್ಯ ಇಲಾಖೆ ನೂತನ ಯೋಜನೆಯನ್ನು ರೂಪಿಸಿದೆ. ಭ್ರೂಣಲಿಂಗ ಪತ್ತೆ ಹಾಗೂ ಹತ್ಯ ನಡೆಯುತ್ತಿದ್ದರೆ ಈ ಬಗ್ಗೆ ಸಾರ್ವಜನಿಕರು ಇಲಾಖೆಗೆ ಸುಳಿವು ನೀಡಿದರೆ ಬರೋಬ್ಬರಿ ಒಂದು ಲಕ್ಷ ರೂ. ಬಹುಮಾನ ನೀಡಲಾಗುತ್ತದೆ. ಗರ್ಭಪೂರ್ವ ಮತ್ತು ಪ್ರಸವಪೂರ್ವ ಲಿಂಗ ಪತ್ತೆ ತಂತ್ರವಿಧಾನಗಳು(ಲಿಂಗ ಆಯ್ಕೆ ನಿಷೇಧ) ಕಾಯ್ದೆ 1994 ಅನುಷ್ಠಾನಕ್ಕೆ ಸಂಬಂಧಿಸಿದಂತೆ, ಯಶ್ವಸಿಗೊಂಡ ಗುಪ್ತಕಾರ್ಯಾಚರಣೆಗೆ, ಮಾಹಿತಿ ನೀಡುವ ಮಾಹಿತಿದಾರರಿಗೆ ಈಗಾಗಲೇ 50 ಸಾವಿರ ರೂ.ಬಹುಮಾನವಾಗಿ ನೀಡಲಾಗುತ್ತಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ ಡಿಸೆಂಬರ್ 4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ ಮೃತಪಟ್ಟ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆಯ ಸಮಾಧಿ ಸ್ಥಳದಲ್ಲಿ ಸ್ಮಾರಕ ನಿರ್ಮಾಣಕ್ಕೆ ಜುಲೈನಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಗುರುವಾರ ವಿಧಾನಸೌಧದ ಮುಂಭಾಗದಲ್ಲಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಸಫಾರಿಗಾಗಿ ವಿಶೇಷ ವಿನ್ಯಾಸದೊಂದಿಗೆ ಸಿದ್ಧವಾಗಿರುವ 3 ಹೊಸ ಮಿನಿ ಬಸ್ ಗಳಿಗೆ ಹಸಿರು ನಿಶಾನೆ ತೋರಿದ ಬಳಿಕ ಅವರು ಮಾತನಾಡಿದರು. ಹಾಸನ ಜಿಲ್ಲೆ ಯಸಳೂರು ಬಳಿ ಅರ್ಜುನ ಆನೆಯ ಸಮಾಧಿ ಸ್ಥಳದಲ್ಲಿ ಮತ್ತು ಅರ್ಜುನನ ಆವಾಸಸ್ಥಾನವಾಗಿದ್ದ, ನಾಗರಹೊಳೆಯ ಬಳ್ಳೆ ಆನೆ ಶಿಬಿರದಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗುವುದು. ಈ ಎರಡೂ ಸ್ಮಾರಕಗಳಲ್ಲಿ ಅರ್ಜುನ ಪ್ರತಿಕೃತಿಯನ್ನು ನಿರ್ಮಿಸಿ ಪ್ರತಿಷ್ಠಾಪಿಸಲಾಗುವುದು ಎಂದು ಅವರು ಹೇಳಿದರು. ಜೊತೆಗೆ ಚಿನ್ನದ ಅಂಬಾರಿ ಹೊತ್ತ ಅರ್ಜುನನ ಚಿತ್ರಗಳು, ಅರ್ಜುನ ವಿವಿಧ ಆನೆ ಕಾರ್ಯಾಚರಣೆ, ಹುಲಿ ಮತ್ತು ಚಿರತೆ…

Read More

ಎಕ್ಸ್‌ ಬಾಕ್ಸ್ ಕಂಟ್ರೋಲರ್ ಅರ್ಡರ್ ಮಾಡಿದ್ದ ದಂಪತಿಗೆ ಅಮೆಜಾನ್ ಬಾಕ್ಸ್‌ನಲ್ಲಿ ಬಂದಿದ್ದು ಮಾತ್ರ ಜೀವಂತ ನಾಗರ ಹಾವು. ಈ ಘಟನೆ ನಡೆದಿರುವುದು ಬೇರೆಲ್ಲೂ ಅಲ್ಲ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ. ದಂಪತಿಗಳಿಗೆ ಬಂದ ಅಮೆಜಾನ್ ಪ್ಯಾಕೇಜ್‌ ನಲ್ಲಿ ಜೀವಂತ ನಾಗರಹಾವು ಕಂಡುಬಂದಿದ್ದು, ಈ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ  ವೈರಲ್  ಆಗಿದೆ. ಬೆಂಗಳೂರಿನ ಸರ್ಜಾಪುರ ರಸ್ತೆಯಲ್ಲಿ ವಾಸವಿರುವ ಇಂಜಿನಿಯರ್ ದಂಪತಿ ಆನ್‌ ಲೈನ್ ವಿತರಣಾ ಪ್ಲಾಟ್‌ ಫಾರ್ಮ್‌ ಅಮೆಜಾನ್‌ ನಲ್ಲಿ ಎಕ್ಸ್‌ ಬಾಕ್ಸ್ ಕಂಟ್ರೋಲರ್ ಅನ್ನು ಆರ್ಡರ್ ಮಾಡಿದ್ದರು. ಆದರೆ, ಅವರು ಪ್ಯಾಕೇಜ್ ಸ್ವೀಕರಿಸಿದಾಗ ಮಾತ್ರ ಪಾರ್ಸಲ್‌ನಲ್ಲಿ ಇದ್ದದ್ದು ನಾಗರಹಾವು. ದಂಪತಿಗಳ ಹೇಳಿದ ಪ್ರಕಾರ, “ನಾವು ಅಮೆಜಾನ್‌ನಿಂದ 2 ದಿನಗಳ ಹಿಂದೆ ಎಕ್ಸ್‌ ಬಾಕ್ಸ್ ಕಂಟ್ರೋಲರ್ ನ್ನು ಆರ್ಡರ್ ಮಾಡಿದ್ದೆವು. ಅಮೆಜಾನ್‌ನಿಂದ ಬಂದ ಪ್ಯಾಕೇಜ್‌ ನಲ್ಲಿ ಜೀವಂತ ಹಾವು ಬಂದಿದೆ. ಪ್ಯಾಕೇಜ್ ಅನ್ನು ನೇರವಾಗಿ ಡಿಲೆವರಿ ಪಾರ್ಟ್ನರ್ ನಮಗೆ ನೀಡಿದ್ದಾರೆ. ಅವರು ಹೊರಗೆ ಇಟ್ಟು ಹೋಗಿಲ್ಲ. ಇಡೀ ಘಟನೆಯನ್ನು ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದೇವೆ, ಜೊತೆಗೆ ನಮ್ಮಲ್ಲಿ…

Read More

ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿದ್ದಾರೆ. ಲೋಕಸಭೆ ಚುನಾವಣೆ ಮುಗಿದು NDA ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಜೂನ್ 24 ರಿಂದ ಮೊದಲ ಲೋಕಸಭಾ ಅಧಿವೇಶನ ಕೂಡ ನಡೆಯಲಿದೆ. ಈ ಬೆನ್ನಲ್ಲೇ ಭಾರೀ ಕುತೂಹಲ ಕೆರಳಿಸಿದ ಲೋಕಸಭಾ ಸ್ಪೀಕರ್ ಆಯ್ಕೆ ಇನ್ನೂ ತಣಿಯದಾಗಿದೆ. ಆದರೆ ಈ ನಡುವೆ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಅವರನ್ನು ರಾಷ್ಟ್ರಪತಿಗಳು ನೇಮಕ ಮಾಡಿದ್ದಾರೆ. ಈ ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಗುರುವಾರ ಮಾಹಿತಿ ನೀಡಿದ್ದು, ಒಡಿಶಾ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ‘ಸಂವಿಧಾನದ ಪರಿಚ್ಛೇದ 95(1)ರ ಅಡಿಯಲ್ಲಿ ಲೋಕಸಭಾ ಸದಸ್ಯರಾದ…

Read More

10ನೇ ವರ್ಷದ ಯೋಗ ದಿನದ ಅಂಗವಾಗಿ ಕೊರಟಗೆರೆ ತಾಲ್ಲೂಕಿನ ಅರಸಪುರ ಸರ್ಕಾರಿ ಶಾಲೆಯ ಮಕ್ಕಳು ಯೋಗಾಭ್ಯಾಸ ಮಾಡಿದರು. ವಿಶೇಷ ಮಕ್ಕಳಿಗೆ ಯೋಗಭ್ಯಾಸ ಹೇಳಿಕೊಟ್ಟ ಶಿಕ್ಷಕ ವೃಂದ, ಮಕ್ಕಳ ಜೊತೆಗೆ ಯೋಗಾಭ್ಯಾಸ ಮಾಡಿದರು. ಈ ವೇಳೆ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕರಾದ ಆನಂದ್, ಯೋಗ ಎನ್ನುವುದು ನಮ್ಮ ಪೂರ್ವಿಕರಿಂದ ಬಂದ ಬಹುದೊಡ್ಡ ಕೊಡುಗೆ, ಯೋಗವನ್ನ ಮಕ್ಕಳು ತಮ್ಮ ಬಾಲ್ಯದಲ್ಲಿ ಅಭ್ಯಾಸ ಮಾಡಿದರೆ ದೇಹದಲ್ಲಿ ಉತ್ತಮ ಆರೋಗ್ಯ ವೃದ್ಧಿಸುತ್ತದೆ. ಯಾವುದೇ ರೋಗ ರೂಜಿನಗಳು ಬರದಂತೆ ದೇಹವನ್ನು  ಕಾಪಾಡಿಕೊಳ್ಳಬಹುದು ಎಂದು ತಿಳಿಸಿದರು. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ತುಮಕೂರು: ಭಾರತ ದೇಶದ ಪರಂಪರೆ, ಸಂಸ್ಕೃತಿಯು ತುಂಬಾ ಪ್ರಾಚೀನವಾಗಿದ್ದು, ಜಗತ್ತಿಗೆ ಆದರ್ಶವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪ್ರಯತ್ನದಿಂದ ಯೋಗವು ಜಗತ್ತಿಗೆ ಪರಿಚಯಿಸಲ್ಪಟ್ಟು ಅಂತರರಾಷ್ಟಿಯ ಯೋಗ ದಿನಾಚರಣೆ ಮೂಲಕ ವಿಶ್ವದ ೧೮೭ಕ್ಕೂ ಹೆಚ್ಚು ದೇಶಗಳಲ್ಲಿ ಆಚರಿಸಲ್ಪಡುತ್ತಿದೆ ಎಂದು ಜಲಶಕ್ತಿ ಮತ್ತು ರೈಲ್ವೆ ರಾಜ್ಯ ಖಾತೆ ಸಚಿವರಾದ ವಿ.ಸೋಮಣ್ಣ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ಆಶ್ರಯದಲ್ಲಿ ೧೦ನೇ ಅಂತರರಾಷ್ಟ್ರೀಯ ದಿನಾಚರಣೆ ಅಂಗವಾಗಿ ನಗರದ ಪೊಲೀಸ್ ಕವಾಯತು ಮೈದಾನದಲ್ಲಿಂದು ಹಮ್ಮಿಕೊಳ್ಳಲಾಗಿದ್ದ “ತನಗಾಗಿ ಮತ್ತು ಸಮಾಜಕ್ಕಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿಶ್ವಸಂಸ್ಥೆಯಲ್ಲಿ ನಡೆದ ೨೦೧೪ರ ಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಯೋಗದ ಮಹತ್ವವನ್ನು ವಿವರಿಸಿ, ಜಗತ್ತಿನ ಆರೋಗ್ಯಕ್ಕಾಗಿ ಯೋಗದ ಅನಿವಾರ್ಯತೆಯನ್ನು ಪ್ರತಿಪಾದಿಸಿದರು. ಪ್ರಧಾನ ಮಂತ್ರಿಗಳ ಪ್ರಯತ್ನದಿಂದ ವಿಶ್ವಸಂಸ್ಥೆಯು ೨೦೧೪ರ ವರ್ಷದಿಂದ ಪ್ರತಿ ವರ್ಷ ಜೂನ್ ೨೧ನ್ನು ಅಂತರಾಷ್ಟ್ರೀಯ ಯೋಗ ದಿನಾಚರಣೆಯಾಗಿ ಘೋಷಣೆ ಮಾಡಿದ್ದು, ಭಾರತಕ್ಕೆ ಸೀಮಿತವಾಗಿದ್ದ…

Read More

ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಸಿನಿಮಾದಲ್ಲಿ ಮಾತ್ರವಲ್ಲದೆ ನಿಜ ಜೀವನದಲ್ಲೂ ಹೀರೋ ಆಗಿದ್ದಾರೆ. ಇತ್ತೀಚಿಗಷ್ಟೇ ಮಹೇಶ್​​ ಬಾಬು ಅನಾರೋಗ್ಯ ದಿಂದ ಹಾಸಿಗೆ ಹಿಡಿದ ತನ್ನ ಅಭಿಮಾನಿಯ ಕುಟುಂಬವನ್ನು ದತ್ತು ಪಡೆದು ಬೀದಿಗೆ ಬಿದ್ದಿದ್ದ ಕುಟುಂಬಕ್ಕೆ ಆರ್ಥಿಕವಾಗಿ ಮಾತ್ರವಲ್ಲದೆ ಇಡೀ ಕುಟುಂಬದ ಜವಾಬ್ದಾರಿ ವಹಿಸಿಕೊಂಡು ಸಹಾಯ ಮಾಡಿದ್ದಾರೆ. ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ರಾಜೇಶ್ ಎಂಬವರು ಮಹೇಶ್ ಬಾಬು ಅವರ ಕಟ್ಟಾ ಅಭಿಮಾನಿ ಎನ್ನಲಾಗಿದೆ. ಆದರೆ, ಕೆಲ ದಿನಗಳಿಂದ ರಾಜೇಶ್​​ ತೀವ್ರ ಆರೋಗ್ಯ ಸಮಸ್ಯೆಯಿಂದ ಬಳಲಿ ಹಾಸಿಗೆ ಹಿಡಿದ್ದಿದ್ದರು. ಮನೆಯ ಆಧಾರ ಸ್ಥಂಭವಾಗಿದ್ದ ರಾಜೇಶ್ ಹಾಸಿಗೆ ಹಿಡಿದಿದ್ದರಿಂದ ಆತನ ಕುಟುಂಬ ಆರ್ಥಿಕ ಸಮಸ್ಯೆ ಅನುಭವಿಸಿದೆ. ಈ ವಿಷಯ ಸಾಮಾಜಿಕ ಜಾಲತಾಣಗಳ ಮೂಲಕ ಮಹೇಶ್ ಬಾಬು ಗಮನಕ್ಕೆ ಬಂದಿದೆ. ಕೂಡಲೇ ಸ್ಪಂದಿಸಿದ ಅವರು ರಾಜೇಶ್ ಕುಟುಂಬದ ಬೆಂಬಲಕ್ಕೆ ನಿಂತಿದ್ದಾರೆ. ಅಭಿಮಾನಿಯ ಮೂವರು ಮಕ್ಕಳನ್ನು ದತ್ತು ಪಡೆದು ಅವರ ಶಿಕ್ಷಣದ ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಸದ್ಯ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ತಂದೆ ರಾಜೇಶ್…

Read More