Subscribe to Updates
Get the latest creative news from FooBar about art, design and business.
- ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
- ತಿಪಟೂರು: ಜೂನ್ 1ರಿಂದ ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
- ತುಮಕೂರು: ವಾಟರ್ ಟ್ಯಾಂಕ್ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು, ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
- ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
- ತುರುವೇಕೆರೆ: ಜೂ. 4ರಂದು ಉಚಿತ ಯೋಗ, ಪ್ರಾಣಾಯಾಮ ತರಗತಿಗಳ ಉದ್ಘಾಟನೆ
- ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
- ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ
Author: admin
ಯುವತಿ ತನ್ನ ಮದುವೆಯನ್ನು ಸಂಭ್ರಮಿಸುತ್ತಲೇ ಹೊಸ ಬದುಕಿನ ಕನಸು ಕಾಣುತ್ತಲೇ ಕೊನೆಯುಸಿರೆಳೆದ ಘಟನೆ ಉತ್ತರಾಖಂಡದ ಡೆಹ್ರಾಡೂನ್ನಲ್ಲಿ ನಡೆದಿದೆ. ಮೃತರನ್ನು ಶ್ರೇಯಾ ಜೈನ್ (28) ಎಂದು ಗುರುತಿಸಲಾಗಿದೆ. ಈಕೆ ಎಂಬಿಎ ಪದವಿದರೆಯಾಗಿದ್ದರು. ವರ ಲಕ್ನೋದ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ದೆಹಲಿ ಮೂಲದ ಶ್ರೇಯಾ ಅವರ ಕುಟುಂಬ ಡೆಹ್ರಾಡೂನ್ ನಲ್ಲಿ ಮದುವೆ ಕಾರ್ಯಕ್ರಮಕ್ಕಾಗಿ ಐಷಾರಾಮಿ ರೆಸಾರ್ಟ್ ಅನ್ನು ಬುಕ್ ಮಾಡಿತ್ತು. ಮದುವೆಗೆ ಎರಡು ದಿನಗಳ ಮೊದಲು, ಶ್ರೇಯಾ ಜೈನ್ ತನ್ನ ಕುಟುಂಬ ಮತ್ತು ಸ್ನೇಹಿತರೊಂದಿಗೆ ನಕುಚಿಯಾಟಲ್ ನಲ್ಲಿರುವ ಐಷಾರಾಮಿ ರೆಸಾರ್ಟ್ಗೆ ತಲುಪಿದ್ದಾರೆ. ವಿವಾಹದ ನಿಮಿತ್ತ ಅದ್ಧೂರಿಯಾಗಿ ಮೆಹಂದಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅದರಂತೆ ಸಂಗೀತ ಕಾರ್ಯಕ್ರಮಗಳೊಂದಿಗೆ ಮೆಹೆಂದಿ ಕಾರ್ಯಕ್ರಮ ಆರಂಭವಾಗಿತ್ತು. ಆದರೆ ಮೆಹಂದಿ ದಿನದಂದು ಡ್ಯಾನ್ಸ್ ಮಾಡುವಾಗ ವಧು ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅದಾಗಲೇ ಯುವತಿ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ. ಹೃದಯ ರಕ್ತನಾಳದ ತೊಂದರೆಯಿಂದ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಹಾಡಹಗಲೇ ಗುಂಡಿನ ದಾಳಿ ನಡೆದಿದ್ದು ಇಬ್ಬರ ಹೆಣ ನಿಗೂಢ ರೀತಿಯಲ್ಲಿ ಪತ್ತೆಯಾಗಿದೆ. ಹಾಸನದ ಹೊಯ್ಸಳ ನಗರ ಬಡಾವಣೆಯಲ್ಲಿ ಗುರುವಾರ ಶೂಟೌಟ್ ನಡೆದಿದೆ. ಒಬ್ಬ ವ್ಯಕ್ತಿಯ ಶವ ಕಾರಿನ ಒಳಗೆ ಕಂಡುಬಂದಿದ್ದು, ಕಾರಿನ ಹೊರಗಡೆ ಮತ್ತೊಂದು ಶವ ಪತ್ತೆಯಾಗಿದೆ. ಆಸ್ತಿ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಎಸ್ ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು ತಜ್ಞರು, ಎಫ್ ಎಸ್ ಎಲ್ ತಜ್ಞರಿಂದ ಪರಿಶೀಲನೆ ನಡೆಸಲಾಗಿದೆ. ಹಾಸನದ ಕೆಆರ್ ಪುರಂ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಮಧ್ಯಾಹ್ನ 12:30ರ ಸುಮಾರಿಗೆ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒಬ್ಬರ ಶವ ಕಾರಿನ ಹೊರಭಾಗದಲ್ಲಿ ಬಿದ್ದಿದ್ದು, ಇನ್ನೊಬ್ಬರು ಕಾರಿನ ಎದುರು ಸೀಟ್ ನಲ್ಲಿ ಬಿದ್ದಿದ್ದರು. ಇಬ್ಬರಿಗೂ ಗುಂಡು ತಗುಲಿದ್ದು, ಸ್ಥಳದಲ್ಲೇ ಅಸುನೀಗಿದ್ದಾರೆ. ಒಬ್ಬರಿಗೆ ಮತ್ತೊಬ್ಬ ಗುಂಡು ಹೊಡೆದು ಇನ್ನೊಬ್ಬರು ತಾನೇ ಗುಂಡು ಹಾರಿಸಿಕೊಂಡ ರೀತಿ ಮೇಲ್ನೋಟಕ್ಕೆ ಕಂಡು ಬಂದಿದೆ. ಇನ್ನು ತನಿಖೆಯ ಬಳಿಕ ಸಂತ್ಯಾಂಶ ಬಯಲಾಗಲಿದೆ ಎಂದು ಪೊಲೀಸರು…
ಟೀಮ್ ಇಂಡಿಯಾದ ಮಾಜಿ ಆಟಗಾರ, ಕನ್ನಡಿಗ ಡೇವಿಡ್ ಜಾನ್ಸನ್(52) ಮಾನಸಿಕ ಖಿನ್ನತೆಗೆ ಒಳಗಾಗಿ ಕಟ್ಟಡದಿಂದ ಧುಮುಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಬೆಂಗಳೂರಿನ ಕೊತ್ತನೂರು ಬಳಿ ಇರುವ ಅಪಾರ್ಟ್ಮೆಂಟ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಅರಸಿಕೆರೆ ಮೂಲದ ಡೇವಿಡ್ ಜಾನ್ಸನ್ 1996ರಲ್ಲಿ ಭಾರತ ಪರ 2 ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಇದಾಗಿತ್ತು. ಬ್ಯಾಟಿಂಗ್ ಆಲ್ ರೌಂಡರ್ ಆಗಿದ್ದ ಅವರು ಟೆಸ್ಟ್ ನಲ್ಲಿ 8 ರನ್ ಮತ್ತು 3 ವಿಕೆಟ್ ಕಿತ್ತಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಅವರಿಗೆ ಭಾರತ ಪರ ಕೊನೆಯ ಪಂದ್ಯವಾಗಿತ್ತು. ಇದಾದ ಬಳಿಕ ಅವರಿಗೆ ತಂಡದಲ್ಲಿ ಅವಕಾಶ ಸಿಕ್ಕಿರರಿಲ್ಲ ಎನ್ನಲಾಗಿದೆ. ವಿಪರೀತ ಕುಡಿತದ ಚಟ ಹೊಂದಿದ್ದ ಡೇವಿಡ್ ಜಾನ್ಸನ್ ಕೆಲ ವರ್ಷಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. 1971ರ ಅಕ್ಟೋಬರ್ 16ರಂದು ಹಾಸನ ಜಿಲ್ಲೆಯ ಅರಸಿಕೆರೆಯಲ್ಲಿ ಜನಿಸಿದ ಡೇವಿಡ್ ಇತ್ತೀಚೆಗೆ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ…
ಪೊಲೀಸರ ವಶದಲ್ಲಿದ್ದ ಕೊಲೆ ಆರೋಪಿ ಒಬ್ಬ ಸಿನಿಮೀಯ ರೀತಿಯಲ್ಲಿ ಪರಾರಿಯಾಗಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ. ಈ ಬಗ್ಗೆ ಪೊಲೀಸರ ನಿರ್ಲಕ್ಷ್ಯದ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸ್ ಇಲಾಖೆ ಮುಂದಾಗಿದೆ. ಮಧ್ಯಪ್ರದೇಶ ಮೂಲದ ಕೊಲೆ ಆರೋಪಿ ಒಬ್ಬನನ್ನು ಗುಜರಾತ್ ರಾಜ್ಯಕ್ಕೆ ಕರೆ ತಂದಿದ್ದರು. ಈ ವೇಳೆ ಆರೋಪಿಯ ಜೊತೆ ಗುಜರಾತ್ ನ ಪಾವಗಡ ಎಂಬ ಪುಣ್ಯ ಕ್ಷೇತ್ರದಲ್ಲಿ ಇರುವ ಮಹಾಕಾಳಿಯ ದರ್ಶನ ಪಡೆಯಲು ಪೊಲೀಸರು ಮುಂದಾಗಿದ್ದಾರೆ. ಹೇಗಿದ್ದರೂ ಇಷ್ಟು ದೂರ ಬಂದಿದ್ದೇವೆ, ತಾಯಿಯ ಆಶೀರ್ವಾದ ಪಡೆದೇ ಹೋಗೋಣ ಎಂದು ಪೊಲೀಸರು ನಿರ್ಧರಿಸಿದ್ದರು. ಆದರೆ, ಪೊಲೀಸರ ಈ ದೇಗುಲ ದರ್ಶನವೇ ದೊಡ್ಡ ಎಡವಟ್ಟಿಗೆ ಕಾರಣವಾಗಿದೆ. ಮಹಾಕಾಳಿಯ ದರ್ಶನ ಪಡೆಯಲು ದೇಗುಲಕ್ಕೆ ತೆರಳಿದ ವೇಳೆ ಭಾರೀ ಜನ ಜಂಗುಳಿ ಇತ್ತು. ಈ ಸಂದರ್ಭವನ್ನು ತನ್ನ ಲಾಭಕ್ಕೆ ಬಳಸಿಕೊಂಡ ಕೊಲೆ ಆರೋಪಿ, ಪೊಲೀಸರಿಗೆ ಚಳ್ಳೇಹಣ್ಣು ತಿನ್ನಿಸಿ ಪರಾರಿಯಾಗಿದ್ದಾನೆ. ಈ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಕಾನೂನು ನಿಯಮಗಳ ಪ್ರಕಾರ ಯಾವುದೇ ವಿಚಾರಣಾಧೀನ ಕೈದಿಯನ್ನು ಪೊಲೀಸರು…
ತುಮಕೂರು : ಮಧುಗಿರಿಯ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಯೋಗ ದಿನಾಚರಣೆಯಲ್ಲಿ ಸಿದ್ದರಬೆಟ್ಟದ ಶ್ರೀ ರಂಭಾಪುರಿ ಶಾಖ ಪೀಠದ ಸ್ವಾಮೀಜಿ ಯೋಗಾಸನ ಮಾಡುವ ಮೂಲಕ ಯೋಗಾ ದಿನಾಚರಣೆಯಲ್ಲಿ ಪಾಲ್ಗೊಂಡರು. ಇದೇ ವೇಳೆ ಮಾತನಾಡಿದ ಸ್ವಾಮೀಜಿ, ನಮ್ಮ ದೈನಂದಿನ ಬದುಕಿಗೆ ಅಗತ್ಯವಿದೆ ಹೀಗಾಗಿ ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಇದನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಯೋಗಾಸನವನ್ನು ನಿಯಮಿತವಾಗಿ ಮಾಡುವ ಮೂಲಕ ಅನೇಕ ಕಾಯಿಲೆಗಳನ್ನು ದೂರ ಮಾಡಬಹುದಾಗಿದೆ. ಅಲ್ಲದೆ ಆರೋಗ್ಯಕರ ಸಮಾಜಕ್ಕೂ ಕೂಡ ಇದು ಪೂರಕವಾಗಿದೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಚಿತ್ರದುರ್ಗದ ರೇಣುಕಾಸ್ವಾಮಿ ಕಿಡ್ನಾಪ್ ಹಾಗೂ ಕೊಲೆ ಪ್ರಕರಣದ ಬಳಿಕ ಪಟ್ಟಣಗೆರೆ ಶೆಡ್ ಭಾರೀ ಸುದ್ದಿಯಾಗಿದೆ. ಈ ಬೆನ್ನಲ್ಲೇ ಪಟ್ಟಣಗೆರೆ ಶೆಡ್ ಮಾಲಿಕನಿಗೆ ಬಿಬಿಎಂಪಿ ಶಾಕ್ ನೀಡಿದೆ. ರೇಣುಕಾಸ್ವಾಮಿಯನ್ನ ಹತ್ಯೆ ಮಾಡಿದ ಸ್ಥಳವಾದ ಪಟ್ಟಣಗೆರೆ ಶೆಡ್ ಮಾಲೀಕರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ನೋಟಿಸ್ ನೀಡಿದೆ. 2008 –- 09 ರಿಂದ ಆಸ್ತಿ ತೆರಿಗೆ ಪಾವತಿ ಆಗಿಲ್ಲ ಎಂದು ಕೆಂಗೇರಿ ಉಪ ವಲಯದಲ್ಲಿ ಸಹಾಯಕ ಕಂದಾಯ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ನೋಟೀಸ್ ನಲ್ಲಿ 15 ದಿನಗಳ ಒಳಗೆ ಆಸ್ತಿ ತಮ್ಮದೇ ಅಂತಾ ಘೋಷಿಸಿಕೊಂಡು ತೆರಿಗೆ ಪಾವತಿಸುವಂತೆ ಸೂಚನೆ ಕೊಟ್ಟಿದ್ದಾರೆ. ಒಂದು ವೇಳೆ 15 ದಿನಗಳ ಒಳಗೆ ತೆರಿಗೆ ಪಾವತಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ದರ್ಶನ್ ಕೇಸ್ ನಲ್ಲಿ ಶೆಡ್ ಸುದ್ದಿಯಾದ ಬಳಿಕ ಬಿಬಿಎಂಪಿ ಎಚ್ಚೆತ್ತುಕೊಂಡಿದೆ. ಇನ್ನೂ ಅದೆಷ್ಟೋ ಆಸ್ತಿಗಳ ತೆರಿಗೆ ಈ ರೀತಿಯೇ ಬಾಕಿ ಇರಬಹುದು ಎಂದು ಶಂಕಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ನೀಟ್ (NEET) ಮತ್ತು ಯುಜಿಸಿ ನೆಟ್ (UGC-NET) ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮದ ಬಗ್ಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾತನಾಡಿದ್ದಾರೆ. ಕೇಂದ್ರ ಸರ್ಕಾರ ಸರಿಯಾಗಿ ಪರೀಕ್ಷೆಗಳನ್ನು ನಡೆಸಲು ಆಗದಷ್ಟು ಭ್ರಷ್ಟವಾಗಿದೆ ಎಂದು ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಯುದ್ಧ ನಿಲ್ಲಿಸುವ ಪ್ರಧಾನಿಗಳಿಗೆ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಯಾಕೆ ತಡೆಯಲು ಆಗಲಿಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ. ಚುನಾವಣೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಮಾನಸಿಕವಾಗಿ ಕುಸಿದಿದ್ದಾರೆ. ಸರ್ಕಾರವನ್ನು ಸಮರ್ಥವಾಗಿ ನಡೆಸಲು ಹೆಣಗಾಡುತ್ತಿದ್ದಾರೆ ಎಂದು ರಾಹುಲ್ ಹೇಳಿದ್ದಾರೆ. ಶಿ ಶಿಕ್ಷಣ ಸಂಸ್ಥೆಗಳನ್ನು ಆರ್ ಎಸ್ ಎಸ್ ಮತ್ತು ಬಿಜೆಪಿ ವಶಪಡಿಸಿಕೊಳ್ಳುತ್ತಿದ್ದು, ಅದನ್ನು ಬದಲಾಯಿಸದ ಹೊರತು ಪ್ರಶ್ನೆ ಪತ್ರಿಕೆ ಸೋರಿಕೆ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ಉಕ್ರೇನ್–ರಷ್ಯಾ ಯುದ್ಧ ಮತ್ತು ಇಸ್ರೇಲ್-ಗಾಜಾ ಯುದ್ಧವನ್ನು ನಿಲ್ಲಿಸಿದರು ಎಂದು ಹೇಳಲಾಗುತ್ತಿದೆ, ಆದರೆ ಅವರಿಗೆ ಪರೀಕ್ಷೆಯ ಪತ್ರಿಕೆ ಸೋರಿಕೆಯನ್ನು ತಡೆಯಲು ಸಾಧ್ಯವಾಗಲಿಲ್ಲ ಅಥವಾ ತಡೆಯುವುದು ಬೇಕಾಗಿರಲಿಲ್ಲ ಎಂದು ರಾಹುಲ್ ವಾಗ್ದಾಳಿ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ…
ತುಮಕೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ಕೇಂದ್ರ ಸಚಿವ ಸೋಮಣ್ಣ ಜಿಲ್ಲಾ ಪೊಲೀಸ್ ಕೇಂದ್ರದ ಆವರಣದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸಾಮೂಹಿಕ ಯೋಗಾಸನ ಕಾರ್ಯಕ್ರಮದಲ್ಲಿ ಅನೇಕ ಆಸನಗಳನ್ನು ಮಾಡಿದರು. ಅಂದು ಪ್ರಧಾನಿ ಮೋದಿಯವರು ಯೋಗ ದಿನಾಚರಣೆ ಕುರಿತು ಪ್ರಸ್ತಾಪಿಸಿದ ವೇಳೆ ಇಡೀ ವಿಶ್ವಸಂಸ್ಥೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ಆಚರಿಸಲು ನಿರ್ಧಾರಕ್ಕೆ ಬಂದಿದೆ ಎಂದು ಕೇಂದ್ರ ಸಚಿವ ಸೋಮಣ್ಣ ಇದೆ ವೇಳೆ ತಿಳಿಸಿದರು. ಇಂದು ಏಕಕಾಲದಲ್ಲಿ ಪ್ರಪಂಚದ 176 ದೇಶಗಳು ಜೂನ್ 21ರಂದು ಯೋಗ ದಿನಾಚರಣೆಯನ್ನು ಆಚರಿಸುತ್ತಿವೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಪೊಲೀಸ್ ಕಸ್ಟಡಿಯಲ್ಲೇ ಇರುವ ಆರೋಪಿ ದರ್ಶನ್ ಇನ್ನೂ ಎರಡು ದಿನಗಳ ಕಾಲ ಕಸ್ಟಡಿ ಮುಂದುವರೆಯಲಿದೆ. ನಿನ್ನೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಪೊಲೀಸರು ಕೆಲವು ದಿನಗಳ ಕಾಲ ಮತ್ತೆ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಅದರಂತೆ ಕೋರ್ಟ್ ಆದೇಶ ಹೊರಡಿಸಿದೆ. ಅಷ್ಟಕ್ಕೂ ದರ್ಶನ್ ನ ಮೂರನೇ ಬಾರಿ ಕಸ್ಟಡಿಗೆ ಪಡೆದಿದ್ಯಾಕೆ ಗೊತ್ತಾ..? ಯಾವೆಲ್ಲಾ ಕಾರಣ ಹೇಳಿ ದರ್ಶನ್ ನ ಮತ್ತೆ ಕಸ್ಟಡಿಗೆ ಪಡೆದಿದ್ದು..? ರಿಮ್ಯಾಂಡ್ ಅಪ್ಲಿಕೇಶನ್ ನಲ್ಲಿರೋ ಎಕ್ಸ್ ಕ್ಲೂಸಿವ್ ಮಾಹಿತಿ ಇಲ್ಲಿದೆ ನೋಡಿ. 16 ಅಂಶಗಳನ್ನ ಉಲ್ಲೇಖಿಸಿ ದರ್ಶನ್ ಸೇರಿ ನಾಲ್ವರನ್ನ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. 1. ದರ್ಶನ್ ಸೇರಿ, ಎ9, ಎ10 ಮತ್ತು ಎ14 ಆರೋಪಿಗಳು ಪ್ರಕರಣದಲ್ಲಿ ತನಿಖೆಗೆ ಸರಿಯಾಗಿ ಸ್ಪಂದಿಸ್ತಿಲ್ಲ.. ಕೇಸ್ ಗೆ ಸಂಬಂಧಿಸಿದಂತೆ ವಿಚಾರಗಳನ್ನ ಮರೆ ಮಾಚುತ್ತಿದ್ದು ಈ ವಿಚಾರಗಳನ್ನ ಬಾಯಿ ಬಿಡಿಸಬೇಕು.. 2. ನಿನ್ನೆ ದರ್ಶನ್ ಮನೆಯಲ್ಲಿ ಮತ್ತೆ 37,40,000/- ರೂಗಳ ನಗದು ಹಣವನ್ನು ವಶ.. ಅಲ್ಲದೇ ದರ್ಶನ್ ತನ್ನ ಹೆಂಡತಿಗೆ ನೀಡಿದ್ದ ರೂ 3,00,000/-…
ಕನ್ನಡದ ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ವಿಚ್ಛೇದನ ಪಡೆದ ಬೆನ್ನಲ್ಲೇ ಚಂದನ್ ಶೆಟ್ಟಿ ಹಲವು ಸಂದರ್ಶನಗಳಲ್ಲಿ ಹಾಗೇ ಸಿನಿಮಾ ಪ್ರಮೋಷನ್ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ. ಇದೀಗ ಚಂದನ್ ಸಂದರ್ಶನವೊಂದರಲ್ಲಿ ತಮ್ಮ ವೈಯಕ್ತಿಕ ಜೀವನ ಬಗ್ಗೆ, ಹಾಗೇ ಕರಿಯರ್ ಕುರಿತಾಗಿ ಹಲವಾರು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆಂಕರ್ ರ್ಯಾಪಿಡ್ ರಶ್ಮಿ ಅವರ ಯುಟ್ಯೂಬ್ ಚಾನೆಲ್ ಗೆ ಸಂದರ್ಶನ ನೀಡಿರುವ ಚಂದನ್ ಶೆಟ್ಟಿಯವರು ತಮ್ಮ ಲೈಫ್ನ ಹಲವಾರು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ತಾವು ನಡೆದು ಬಂದ ದಾರಿ, ಬಸ್ಸಿನಲ್ಲಿ ಹೋಗುತ್ತಿದ್ದ ತಾವು ಇಂದು ಈ ಮಟ್ಟಿಗೆ ಬೆಳೆಯಲು ಕಾರಣ ಎಲ್ಲವುಗಳ ಬಗ್ಗೆ ವಿವರವಾಗಿ ತಿಳಿಸಿದ್ದಾರೆ. ಜೀವನ ಕಲಿಸಿದ ಪಾಠದ ಕುರಿತು ಮಾತನಾಡಿದ ಅವರು, ನಾನು ಸಿಕ್ಕಾಪಟ್ಟೆ ಖರ್ಚು ಮಾಡುತ್ತಿದ್ದೆ. ಗೆಜೆಟ್ಗಳನ್ನು ವಿಪರೀತ ಖರೀದಿ ಮಾಡುತ್ತಿದ್ದೆ. ಕೋವಿಡ್ ನನಗೆ ಪಾಠ ಕಲಿಸಿತು , ನಾನು ಮಾಡಿದ ಪ್ರಾಜೆಕ್ಟ್ಗಳಿಂದ ತುಂಬಾ ಸಕ್ಸಸ್ ಸಿಗುತ್ತದೆ ಎಂದು ಅಂದುಕೊಳ್ಳುವಷ್ಟರಲ್ಲಿಯೇ ಕೋವಿಡ್ ಬಂದು ಬರಸಿಡಿಲು ಬಡಿಯಿತು. ಆಗಷ್ಟೇ ನನ್ನ ಮದುವೆಯಾಯಿತು. ಮದುವೆಗೆ…