Subscribe to Updates
Get the latest creative news from FooBar about art, design and business.
- ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
- ತಿಪಟೂರು: ಜೂನ್ 1ರಿಂದ ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
- ತುಮಕೂರು: ವಾಟರ್ ಟ್ಯಾಂಕ್ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು, ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
- ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
- ತುರುವೇಕೆರೆ: ಜೂ. 4ರಂದು ಉಚಿತ ಯೋಗ, ಪ್ರಾಣಾಯಾಮ ತರಗತಿಗಳ ಉದ್ಘಾಟನೆ
- ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
- ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ
Author: admin
ಚಿತ್ರದುರ್ಗದ ರೇಣುಕಾಸ್ವಾಮಿ ಕಿಡ್ನಾಪ್ ಹಾಗೂ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾ ಗೌಡ ಜೈಲು ಸೇರಿದ್ದಾರೆ. ಸಾಕಷ್ಟು ದಿನಗಳ ವಿಚಾರಣೆ ಬಳಿಕ ಪವಿತ್ರಾ ಕೃತ್ಯದಲ್ಲಿ ಭಾಗಿಯಾಗಿರುವುದು ಕನ್ಪಾರ್ಮ್ ಆದ ಹಿನ್ನೆಲೆಯಲ್ಲಿ ಆಕೆಯನ್ನು ಜೈಲಿಗೆ ಕಳುಹಿಸಲಾಗಿದೆ. ಕೋರ್ಟ್ನಲ್ಲಿ ವಿಚಾರಣೆ ಮುಗಿಸಿ ಪೊಲೀಸ್ ವ್ಯಾನ್ ಹತ್ತಿದಾಗ ಪವಿತ್ರಾ ಗೌಡ ನೋಡಲು ಪುತ್ರಿ ಖುಷಿಗೌಡ ಆಗಮಿಸಿದ್ದರು. ನೂಕುನುಗ್ಗಲಿನ ನಡುವೆ ತಾಯಿ ಜೊತೆ ಮಾತನಾಡಲು ಖುಷಿ ಗೌಡ ಹರಸಾಹಸ ಪಡಬೇಕಾಯಿತು. ಕೋರ್ಟ್ ಹೊರಗಡೆ ಪವಿತ್ರಾ ಗೌಡ ತಾಯಿ ಹಾಗೂ ಮಗಳು ಕಾಯುತ್ತಾ ನಿಂತಿದ್ದರು. ಪವಿತ್ರಾ ಗೌಡ ಕೋರ್ಟ್ನಿಂದ ಹೊರ ಬಂದು ಪೊಲೀಸ್ ವ್ಯಾನ್ ಹತ್ತುತ್ತಿದ್ದಂತೆಯೇ ಇಬ್ಬರು ಕೂಡ ಪವಿತ್ರಾ ಗೌಡ ಅವರನ್ನು ಕಂಡು ಕಣ್ಣೀರು ಹಾಕಿದ್ದಾರೆ. ಇನ್ನು ಪವಿತ್ರಾ ಗೌಡ ಕೂಡ ಇಬ್ಬರನ್ನು ನೋಡಿ ಗದ್ಗದಿತರಾಗಿದ್ದು ಬಳಿಕ ಅಮ್ಮ ಹಾಗೂ ಮಗಳನ್ನು ಸಮಾಧಾನ ಪಡಿಸಿದ್ದಾರೆ. ಪವಿತ್ರಾ ಗೌಡ ಅವರ ಕುಟುಂಬದ ಇತರೆ ಸದಸ್ಯರು ಕೂಡ ಪೊಲೀಸ್ ವ್ಯಾನ್ನ ಪಕ್ಕದಲ್ಲಿ ನಿಂತು ಮಾತನಾಡಿದರು. ಕಣ್ಣೀರು ಹಾಕುತ್ತಾ ಇದ್ದ ಮಗಳಿಗೆ,…
ಬೆಂಗಳೂರು : ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ದೊರಕಿಸಿಕೊಡುವಲ್ಲಿ ಕೇಂದ್ರ ಕೃಷಿ ಬೆಲೆ ಆಯೋಗದ ಪಾತ್ರ ಬಹಳ ಮಹತ್ವ ವಾದದ್ದು ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ. ಕೇಂದ್ರ ಸರ್ಕಾರದ ಕೃಷಿ ವೆಚ್ಚ ಹಾಗೂ ಬೆಲೆಗಳ ಆಯೋಗ ಮತ್ತು ರಾಜ್ಯ ಕೃಷಿ ಇಲಾಖೆ ಸಹಭಾಗಿತ್ವದಲ್ಲಿ ನಗರದ ಕೃಷಿ ಆಯುಕ್ತಾಲಯದ ಸಂಗಮ ಸಭಾಂಗಣದಲ್ಲಿ ಏರ್ಪಡಿಸಿದ್ದ ಹಿಂಗಾರು ಹಂಗಾಮಿನ ಬೆಳೆಗಳ ಬೆಲೆ ನೀತಿ: 2025- 26 ನೇ ಸಾಲಿನ ಮಾರಾಟ ಅವಧಿ ಕುರಿತು ದಕ್ಷಿಣ ರಾಜ್ಯಗಳ ಪ್ರತಿನಿಧಿಗಳ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ರೈತರು ಬೆಳೆಯುವ ಬೆಳೆಗಳಿಗೆ ಉತ್ಪಾದನಾ ವೆಚ್ಚ ಹಾಗೂ ಸಾಗಾಟ, ಮಾರಾಟ ವೆಚ್ಚ ಪರಿಗಣಿಸಿ ವೈಜ್ಞಾನಿಕವಾದ ಬೆಂಬಲ ಬೆಲೆ ನಿಗದಿಯಾಗಬೇಕು. ಡಾ.ಸ್ವಾಮಿನಾಥನ್ ಅವರ ವರದಿ ಜಾರಿಯಾಗಬೇಕು ಎಂದು ಸಚಿವರು ಹೇಳಿದರು. ಜಾಗತಿಕ ಕೃಷಿಯಲ್ಲಿ ಭಾರತ ದೇಶ ಮತ್ತು ಕರ್ನಾಟಕ ರಾಜ್ಯದ ಪಾತ್ರ ಮಹತ್ವದ್ದು.ಅನೇಕ ಏಳು ಬೀಳುಗಳ ನಡುವೆಯೂ ನಾವು ಸ್ಥಿರತೆ ಕಂಡುಕೊಂಡಿದ್ದೇವೆ. ಕಳೆದ ಎರಡು ದಶಕಗಳಲ್ಲಿ ಬಹುತೇಕ ವರ್ಷ…
ಕಾರವಾರ: ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಯೋಗ ಅತ್ಯಂತ ಸಹಾಯಕಾರಿಯಾಗಿದ್ದು, ಪ್ರತಿಯೊಬ್ಬರು ತಮ್ಮ ದೈನಂದಿನ ಜೀವನ ಶೈಲಿಯಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಹೇಳಿದರು. ಅವರು ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಆಯುಷ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್, ಆರೋಗ್ಯ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ, ಶಿಕ್ಷಣ ಇಲಾಖೆ, ನಗರಸಭೆ ಎನ್.ಸಿ.ಸಿ, ಎನ್.ಎಸ್.ಎಸ್, ರೆಡ್ ಕ್ರಾಸ್, ರೋಟರಿ ಕ್ಲಬ್ ಜಿಲ್ಲಾ ನೌಕಕರ ಸಂಘ ಹಾಗೂ ವಿವಿಧ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ 10 ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜಿಲ್ಲಾ ಅಧಿಕಾರಿಗಳ ಕಚೇರಿಯ ಆವರಣದಲ್ಲಿ ಅಯೋಜಿಸಲಾದ ಯೋಗ ನಡಿಗೆ ಜಾಥಕ್ಕೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು. ಪತಂಜಲಿ ಮಹರ್ಷಿ ಗಳು ಯೋಗದ ಮಹತ್ವವನ್ನು ಕ್ರಿ.ಶ 5 ಶತಮಾನದಲ್ಲಿ ತಿಳಿಸಿಕೊಟ್ಟರು. ಮನುಷ್ಯನಿಗೆ ಸ್ವಾಭಾವಿಕವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಲು ಇರುವಂತ ದೊಡ್ಡ…
ಕಾರವಾರ: ಎಲ್ಲಾ ಸಮಸ್ಯೆಗಳಿಗೆ ಸಾವು ಒಂದೇ ಅಂತಿಮ ಪರಿಹಾರವಲ್ಲ. ದೇಶಕ್ಕೆ ಅನ್ನ ನೀಡುವ ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆಯಂತಹ ಕಠಿಣ ನಿರ್ಧಾರ ಕೈಗೊಳ್ಳಬಾರದು, ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಜಿಲ್ಲಾಡಳಿತ ಸಂಪೂರ್ಣ ನೆರವು ನೀಡಲಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರೈತರ ಆತ್ಮಹತ್ಯೆ ಪ್ರಕರಣ ಕುರಿತ ವಿಡಿಯೋ ಕಾನ್ಫರೆನ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇಶದ ಬೆನ್ನೆಲುಬಾದ ರೈತರು ಯಾವುದೇ ಕಾರಣಗಳಿಗೂ ಆತ್ಮಹತ್ಯೆ ಮಾಡಿಕೊಳ್ಳಬಾರದು. ಜಿಲ್ಲೆಯಲ್ಲಿ 2019 ರಿಂದ 2023-24ನೇ ಸಾಲಿನ ವರೆಗೆ 43 ರೈತರು ಆತ್ಮಹತ್ಯೆ ಮಾಡಿ ಕೊಂಡಿದ್ದು, ಮುಂಡಗೋಡ ತಾಲ್ಲೂಕಿನಲ್ಲಿ ಹೆಚ್ಚಿನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರು ಆತ್ಮಹತ್ಯೆ ಮಾಡಿಕೊಂಡರೆ ಅವರ ಕುಟುಂಬ ಸಾಕಷ್ಟು ಸಂಕಷ್ಟ ಅನುಭವಿಸುವುದರಿಂದ ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆ ಹಾದಿ ತುಳಿಯಬಾರದು ಎಂದರು. ಸರ್ಕಾರ ಮತ್ತು ಜಿಲ್ಲಾಡಳಿತ ಸದಾ , ರೈತರೊಂದಿಗಿದ್ದು, ರೈತರಿಗೆ ಯಾವುದೇ ಸಮಸ್ಯೆ ಎದುರಾದರೆ ಸ್ಥಳೀಯ ತಹಶೀಲ್ದಾರರಿಗೆ, ಜಿಲ್ಲಾಡಳಿತಕ್ಕೆ ಅಥವಾ ಜಿಲ್ಲಾ ಉಚಿತ…
ರಾಯಚೂರು: ಇಲ್ಲಿ ಪ್ರಸಿದ್ಧಯಾತ್ರಾ ಸ್ಥಳ ಮಂತ್ರಾಲಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಕಟ್ಟಿಸಿದ ಛತ್ರಗಳು ಉದ್ಘಾಟನೆಗೊಂಡ ಕೆಲವೇ ದಿನಗಳಲ್ಲಿ ಸೋರುತ್ತಿವೆ. ಕಳಪೆ ಕಾಮಗಾರಿ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಮಂತ್ರಾಲಯಕ್ಕೆ ಬರುವ ಭಕ್ತರಿಗೆ ತಂಗಲು 100 ಕೊಠಡಿಗಳ ಅತಿಥಿಗೃಹ ನಿರ್ಮಾಣಕ್ಕೆ 5 ಕೋಟಿ ರೂ.ಗಳನ್ನು ಸರ್ಕಾರ ನೀಡಿತ್ತು. ಈ ಹಣದಲ್ಲಿ 100 ಕೊಠಡಿಗಳ ಛತ್ರ ನಿರ್ಮಾಣ ಮಾಡಲಾಗಿತ್ತು. ಇವುಗಳನ್ನು ಉದ್ಘಾಟನೆ ಮಾಡಿ ಭಕ್ತರಿಗೆ ತಂಗಲು ಅವಕಾಶ ನೀಡಲಾಗಿತ್ತು. ಆದರೆ ಉದ್ಘಾಟನೆಯಾದ ಎರಡು ವರ್ಷಗಳಾಗಿಲ್ಲವಾದರೂ ಇವು ಕಳಪೆ ಕಾಮಗಾರಿಯಿಂದ ಸೋರಲು ಆರಂಭವಾಗಿವೆ. ಕರ್ನಾಟಕ ಭವನದ ಕಟ್ಟಡ ಸೋರುತ್ತಿರುವುದು ಮಾತ್ರವಲ್ಲ, ಗೋಡೆಗಳಿಂದ ನೀರು ಜಿನುಗುತ್ತಿದೆ. ಇಲ್ಲಿ ಉಳಿಯಲು ಸಾಧ್ಯವಿಲ್ಲ ಎಂಬುದು ಭಕ್ತರ ಅಳಲು. ಗೋಡೆಗಳು ಬಿರುಕುಬಿಟ್ಟಿವೆ. ಬೇಕಾಬಿಟ್ಟಿ ಅಳವಡಿಸಿದ ಗೀಸರ್, ಪ್ಲಗ್ ಗಳು ಕಿತ್ತು ಬಂದಿವೆ. ತಂಗಿದ ಭಕ್ತರು ಕರೆಂಟ್ ಶಾಕ್ ಭೀತಿಯಲ್ಲಿ ಇರಬೇಕಾದ ಸ್ಥಿತಿ ಇದೆ. ಈಗ ಮಳೆ ಆರಂಭವಾಗಿದ್ದು ಸ್ಥಿತಿ ಇನ್ನೂ ಹದಗೆಟ್ಟಿದೆ. ಸಣ್ಣ ಮಳೆಯಾದರೂ ಸಾಕು ಕೊಠಡಿಗಳು…
ನೂರಾರು ಕ್ವಿಂಟಾಲ್ ಅಕ್ಕಿ ಗೋಧಿ, ಪೌಷ್ಟಿಕ ಆಹಾರ ನಾಶವಾಗಿದೆ. ಗೋದಾಮಿನಲ್ಲಿ ಸಂಗ್ರಹಿಸಲಾಗಿದ್ದ ಲಕ್ಷಾಂತರ ರೂ. ಮೌಲ್ಯದ ಅಕ್ಕಿ ಗೋಧಿ ಹುಳಗಳ ಪಾಲಾಗಿದೆ. ಗದಗ ಜಿಲ್ಲೆಯ ಮುಂಡರಗಿ ಬಳಿ ಇರುವ ಗೋದಾಮಿನಲ್ಲಿ ಅಕ್ಕಿ ಗೋದಿ ಸಂಗ್ರಹಿಸಲಾಗಿತ್ತು. ಹೀಗೆ ಸಂಗ್ರಹಿಸಿಟ್ಟು ವರ್ಷಗಳೇ ಕಳೆದಿದ್ದು, ಯಾರಿಗೂ ಉಪಯೋಗವಾಗದೇ ಆಹಾರ ಪದಾರ್ಥ ಹಾಳಾಗಿದೆ. ಅಂಗನವಾಡಿ ಮೂಲಕ ಗರ್ಭಿಣಿಯರು, ಮಕ್ಕಳ ಹೊಟ್ಟೆ ಸೇರಬೇಕಾದ ಆಹಾರ ಹುಳುಗಳ ಪಾಲಾಗಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಲಕ್ಷಾಂತರ ರೂಪಾಯಿ ಮೌಲ್ಯದ 50 ಟನ್ ಕ್ಕೂ ಅಧಿಕ ಅಕ್ಕಿ ಹಾಗೂ ಗೋದಿ ನಾಶವಾಗಿದ್ದು, ಎಂಎಸ್ ಪಿಸಿ ಸಂಸ್ಥೆ ಮೂಲಕ ಮುಂಡರಗಿ, ಶಿರಹಟ್ಟಿ ತಾಲೂಕಿನ ಅಂಗನವಾಡಿ ಕೇಂದ್ರಕ್ಕೆ ಸರಬರಾಜು ಮಾಡಬೇಕಿದ್ದ ಆಹಾರ ಪದಾರ್ಥ ವ್ಯರ್ಥವಾಗಿದೆ. ಇದೆಲ್ಲಾ ಆಗಿದ್ರೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಾಗಲೀ, ಆಹಾರ ಇಲಾಖೆಯಾಗಲೀ ಯಾವುದೇ ಕ್ರಮ ವಹಿಸಿಲ್ಲ ಎಂಬುದು ಸಾರ್ವಜನಿಕರ ಸಿಟ್ಟಿಗೆ ಕಾರಣವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ಕೊರಟಗೆರೆ: ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ ನಡೆಯಿತು. ಪೆಟ್ರೋಲ್ ಡೀಸೆಲ್ ಬೆಲೆ ಶೀಘ್ರವಾಗಿ ಕಡಿಮೆ ಮಾಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಬಿಜೆಪಿ ಮುಖಂಡರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದೆ. ಗ್ಯಾರಂಟಿ ಹೆಸರಿನಲ್ಲಿ ರಾಜ್ಯ ಸರ್ಕಾರ ಜನರ ಹಣವನ್ನು ಲೂಟಿ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೊರಟಗೆರೆಯ ಎಸ್ ಎಸ್ ಆರ್ ವೃತ್ತದಲ್ಲಿ ಬಿಜೆಪಿ ತಾಲೋಕ್ ಮಾಜಿ ಅಧ್ಯಕ್ಷ ಪವನ್ ಕುಮಾರ್ ಹಾಗೂ ಮಂಡಲಾ ಅಧ್ಯಕ್ಷ ದರ್ಶನ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಣಕು ಭಾವಚಿತ್ರ ದಹನ ಮಾಡಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ತಾಲ್ಲೂಕು ಮಂಡಲಾ ಅಧ್ಯಕ್ಷ ದರ್ಶನ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸ್ವಾಮಿ ಹಾಗೂ ಕೆಲವು ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು. ಕೊರಟಗೆರೆಯ ಪಿಎಸ್ ಐ ಚೇತನ್ ಕುಮಾರ್ ತಂಡ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದರು. ಇದೇ ಸಂದರ್ಭದಲ್ಲಿ ಪಟ್ಟಣ…
ಹೂವಿನ ಹೆಸರು ಮತ್ತು ಹಣ್ಣಿನ ಹೆಸರಿನಲ್ಲಿರುವ ಈ ಮೂನ್ ತುಂಬಾ ಸ್ಪೆಷಲ್ ಅಂತೆ. ಹೌದು, ಜೂನ್ 21ಕ್ಕೆ ಆಗಸದಲ್ಲಿ ಪೂರ್ಣ ಚಂದಿರ ಕಾಣಿಸಲಿದ್ದು, ಬಣ್ಣದಲ್ಲೂ ಎಲ್ಲರನ್ನೂ ಆಕರ್ಷಿಸಲಿದೆ. ಮುಖ್ಯವಾಗಿ ರೋಸ್ ಮೂನ್ ಅಥವಾ ಸ್ಟ್ರಾಬೆರಿಮೂನ್ ಸಾಮಾನ್ಯಕ್ಕಿಂತ ತುಸು ಹೆಚ್ಚಾದ ಹಳದಿ ಮಿಶ್ರಿತ ಚಿನ್ನದ ಬಣ್ಣದಲ್ಲಿ ಕಂಗೊಳಿಸಲಿದೆ. ಇನ್ನು ಈ ಚಂದ್ರನಿಗೆ ಹಣ್ಣಿನ ಹೆಸರು ಬರಲು ಕಾರಣ ಏನೆಂದರೆ ಉತ್ತರ ಅಮೆರಿಕದಲ್ಲಿ ಸ್ಟ್ರಾಬೆರಿ ಮೂನ್ ಗೋಚರಿಸಿದ ಬಳಿಕ ಸ್ಟ್ರಾಬೆರಿ ಹಣ್ಣಿನ ಬೆಳೆ ಬೆಳೆಯಲು ಆರಂಭಿಸುತ್ತಾರೆ ಎಂದು ಹೇಳಲಾಗಿದೆ. ಅಲ್ಲದೇ ಜೂನ್ ತಿಂಗಳಲ್ಲಿ ಅಂತಿಮ ವಾರದಲ್ಲಿ ಮಳೆ ಹೆಚ್ಚಾಗಲಿದ್ದು, ಕೃಷಿ ಚಟುವಟಿಕೆಗಳು ಹೆಚ್ಚಾಗಿರುತ್ತದೆ. ಬಿತ್ತನೆ ಮಾಡುವುದು ಮುಂತಾದ ಬೆಳೆ ಬೆಳೆಯುವುದು. ಇದೇ ವೇಳೆ ಗುಲಾಬಿ ಹೂವುಗಳು ಹೆಚ್ಚಾಗಿ ಹೂವು ಬಿಡುತ್ತದೆ. ಹೀಗಾಗಿ ರೋಸ್ ಮೂನ್ (Rose Moon) ಎಂಬ ಹೆಸರಿನಿಂದಲೂ ಕರೆಯುತ್ತಾರೆ. ವಿಶೇಷ ಅಂದ್ರೆ ಉತ್ತರ ಅಮೆರಿಕ ಹಾಗೂ ಯೂರೋಪ್ ದೇಶಗಳಲ್ಲಿ ಸ್ಟ್ರಾಬೆರಿ ಮೂನ್ ಬಳಿಕ ಮದುವೆಗಳು ಹೆಚ್ಚಾಗಿ ನಡೆಯುತ್ತದೆಯಂತೆ. ಮದುವೆ ಬಳಿಕ ನವ…
ಆಲಿಯಾ ಭಟ್, ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ, ನಟಿ ಕತ್ರಿನಾ ಕೈಫ್, ನಟಿ ಕಾಜೋಲ್ ಹೀಗೆ ಹಲವು ಸೆಲೆಬ್ರೇಟಿಗಳು ಈಗಾಗಲೇ ಡೀಪ್ ಫೇಕ್ ಗೆ ಗುರಿಯಾಗಿದ್ದಾರೆ. ಅದರಲ್ಲೂ ಭಾರತೀಯರಲ್ಲಿ ಶೇ. 75ರಷ್ಟು ಮಂದಿ ಡೀಪ್ ಫೇಕ್ ಜಾಲಕ್ಕೆ ಸಿಕ್ಕಿದ್ದು, ಶೇಕಡಾ 22ರಷ್ಟು ಮಂದಿಗೆ ಮಾತ್ರ ಇದು ಗಮನಕ್ಕೆ ಬಂದಿದೆ ಎನ್ನಲಾಗಿದೆ. ಈ ಡೀಪ್ ಫೇಕ್ ಗೆ ಹೆಚ್ಚಾಗಿ ನಟಿಯರು ಒಳಗಾಗುತ್ತಿದ್ದು, ಇದೀಗ ವೈಷ್ಣವಿ ಗೌಡ ಈ ಹಿಂದೆ ಧರಿಸಿದ್ದ ಕೆಂಪು ಬಣ್ಣದ ಗೌನ್ ಬಟ್ಟೆಯ ಫೋಟೋವನ್ನು ಎಡಿಟ್ ಮಾಡಿರುವ ಕಿಡಿಗೇಡಿಗಳು ಫೋಟೋವನ್ನು ಹರಿಬಿಟ್ಟಿದ್ದಾರೆ. ಬಿಗ್ ಬಾಸ್ ಖ್ಯಾತಿ ಹಾಗೂ ಈಗ ಅಗ್ನಿಸಾಕ್ಷಿ, ಸೀತಾರಾಮ ಸೀರಿಯಲ್ ಖ್ಯಾತಿಯ ನಟಿ ವೈಷ್ಣವಿ ಗೌಡಗೆ ಕಿಡಿಗೇಡಿಗಳಿಂದ ಡೀಪ್ ಫೇಕ್ ಕಾಟ ಎದುರಾಗಿದೆ. ಈ ಫೋಟೋದಲ್ಲಿ ವೈಷ್ಣವಿ ಅವರು ರೆಡ್ ಕಲರ್ ಡ್ರೆಸ್ನಲ್ಲಿರುವ ಫೋಟೊವನ್ನು ಪೋಸ್ಟ್ ಮಾಡಿದ್ದರು. ಕೆಲ ಕಿಡಿಗೇಡಿಗಳು ಈ ಫೋಟೊಗೆ ಬೋಲ್ಡ್ ಆಗಿ ಎಡಿಟ್ ಮಾಡಿ ಇಂಟರ್ ನೆಟ್ ನಲ್ಲಿ ವೈರಲ್ ಆಗುವಂತೆ ಮಾಡಿದ್ದಾರೆ.…
ಕರ್ನಾಟಕದ ಎಲ್ಲ ಸರ್ಕಾರಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆ ಮಾಡದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದರ ಬಗ್ಗೆ ನಾವು ಕೇಳಿದ್ದೆವು, ನೋಡಿದ್ದೆವು. ಆದರೀಗ ಅಚ್ಚರಿ ಎಂಬಂತೆ ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು, ಮಠಾಧೀಶರು ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ಇನ್ನುಮುಂದೆ ಆಚರಿಸುವಂತಿಲ್ಲ ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಯಾಕೆ ಈ ಆದೇಶ?: ಸಂಸ್ಥೆಗಳಲ್ಲಿ ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳು, ಬಾಲ ಕಾರ್ಮಿಕ ಪದ್ಧತಿಯಿಂದ ರಕ್ಷಿಸಲ್ಪಟ್ಟ, ಬಾಲ್ಯ ವಿವಾಹಕ್ಕೆ ಒಳಗಾದ, ಅತ್ಯಾಚಾರಕ್ಕೆ ಒಳಗಾದ, ತಂದೆ-ತಾಯಿಯಿಂದ ತಿರಸ್ಕರಿಸಲ್ಪಟ್ಟ, ತಾಯಿ ಅಥವಾ ತಂದೆ ಇಲ್ಲದ, ಭಿಕ್ಷಾಟನೆಯಿಂದ ರಕ್ಷಿಸಲ್ಪಟ್ಟ ಇತ್ಯಾದಿ ಪಾಲನೆ ಮತ್ತು ರಕ್ಷಣೆಯ ಅವಶ್ಯವಿರುವ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ/ಬಾಲನ್ಯಾಯ ಮಂಡಳಿಗಳ ಆದೇಶದ ಮೂಲಕ ಮಕ್ಕಳ ಪಾಲನಾ ಸಂಸ್ಥೆಗಳಿಗೆ ದಾಖಲು ಮಾಡಲಾಗಿರುತ್ತದೆ.…