Author: admin

40 ವರ್ಷದ ತಾಯಿ ತನ್ನ ಮೂವರು ಗಂಡು ಮಕ್ಕಳನ್ನು ಬಿಟ್ಟು 25 ವರ್ಷದ ಯುವಕನೊಂದಿಗೆ ಪ್ರೀತಿಸಿ ಓಡಿ ಹೋದ ಘಟನೆ ಬೆಳಗಾವಿಯ ಗಣೇಶಪುರದಲ್ಲಿ ವರದಿಯಾಗಿದೆ. ಸರ್ಕಾರಿ ನೌಕರನಾಗಿದ್ದ ಗಂಡನ ಅಕಾಲಿಕ ನಿಧನದಿಂದ ಅನುಕಂಪದ ಮೇಲೆ ಸಿಕ್ಕ ಸರ್ಕಾರಿ ನೌಕರಿ ಮಾಡಿಕೊಂಡು ಬದುಕು ನಡೆಸುತ್ತಿದ್ದ ಮಹಿಳೆಗೆ 10, 15, 19 ವರ್ಷ ವಯಸ್ಸಿನ ಗಂಡು ಮಕ್ಕಳಿದ್ದಾರೆ. ಆದರೆ, 25 ವಯಸ್ಸಿನ ಯುವಕನೊಂದಿಗೆ ಪ್ರೀತಿಸಿ ಮನೆ ಬಿಟ್ಟು ಮಕ್ಕಳನ್ನು ಅನಾಥ ಮಾಡಿ ನಾಪತ್ತೆಯಾಗಿದ್ದಾಳೆ ಎನ್ನಲಾಗಿದೆ. ಮಕ್ಕಳು ನ್ಯಾಯಕ್ಕಾಗಿ ತಾಯಿ ಕಾಣೆಯಾದ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಬಾಡಿಗೆ ಮನೆಯಲ್ಲಿದ್ದ ಈ ಮಕ್ಕಳಿಗೆ ಬಾಡಿಗೆ ಹಣ ಕಟ್ಟಲು ಆಗದೇ ಅಜ್ಜಿ ಮನೆಯಲ್ಲಿ ಉಳಿದುಕೊಂಡಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಆಸ್ಪತ್ರೆಯಲ್ಲೇ ಡಾಕ್ಟರ್‌ ಮತ್ತು ನರ್ಸ್ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿರುವ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಪೆನ್‌ ಡ್ರೈವ್‌ ಹಾಗೂ ಒಂದು ಪತ್ರದ ಜೊತೆಯಲ್ಲಿ ಇಂಗ್ಲಿಷ್ ಮಾಧ್ಯಮವೊಂದಕ್ಕೆ ಈ ವಿಡಿಯೋವನ್ನು ವ್ಯಕ್ತಿಯೊಬ್ಬ ಕಳುಹಿಸಿದ್ದಾನೆ. ವಿಡಿಯೋದಲ್ಲಿರುವ ವ್ಯಕ್ತಿಯನ್ನು ಡಾ. ಸುಬ್ಬಯ್ಯ ಷಣ್ಮುಗಂ ಎಂದು ಗುರುತಿಸಲಾಗಿದೆ. ನಗರದ ರಾಯಪೆಟ್ಟಾ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಡಾಕ್ಟರ್ ಆಪರೇಷನ್‌ ಥಿಯೇಟರ್‌ ನಲ್ಲಿ ಕೆಲಸ ಮಾಡುವ ನರ್ಸ್‌ ಜೊತೆ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಘಟನೆ ಮತ್ತು ವಿಡಿಯೋ ಕುರಿತು ಸಂಬಂಧಪಟ್ಟ ಅಧಿಕಾರಿಗಳಲ್ಲಿ ಕೇಳಿದಾಗ, ವೈದ್ಯರ ವಿರುದ್ಧ ದೂರು ಬಂದಿಲ್ಲ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ. ಆ ಬಳಿಕ ಸಂಸ್ಥೆಯಿಂದ ತನಿಖೆಯನ್ನು ಆರಂಭಿಸಲಾಗಿದೆ ಎಂದು ವರದಿ ತಿಳಿಸಿದೆ. ಈ ಹಿಂದೆ 2020 ರಲ್ಲೂ ಡಾ. ಷಣ್ಮುಗಂ ಮೇಲೆ ಕಿರುಕುಳ ಆರೋಪ ಕೇಳಿಬಂದಿತ್ತು. ಪಾರ್ಕಿಂಗ್‌ ವಿಚಾರಕ್ಕೆ ಪಕ್ಕದ ಮನೆಯವರ ಗೇಟ್‌ ಗೆ ಮೂತ್ರ ವಿಸರ್ಜನೆ ಮಾಡಿ ರಾದ್ಧಾಂತ ಸೃಷ್ಟಿಸಿದ್ದರು ಎನ್ನಲಾಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ಜಮ್ಮು ಮತ್ತು ಕಾಶ್ಮೀರದಲ್ಲಿ ಬುಧವಾರ ನಡೆದ ಎನ್‌ ಕೌಂಟರ್‌ ನಲ್ಲಿ ಇಬ್ಬರು ಭಯೋತ್ಪಾದಕರು ಹತರಾದ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ. ಬಾರಾಮುಲ್ಲಾದ ಸೋಪೋರ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ, ಕೇಂದ್ರಾಡಳಿತ ಪ್ರದೇಶವಾದ ಬಂಡಿಪೋರಾದ ಅರ್ಗಾಮ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಭದ್ರತಾ ಪಡೆಗಳಿಗೆ ಭಾನುವಾರ ರಾತ್ರಿ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು 2 ದಿನ ಕಾರ್ಯಾಚರಣೆ ನಡೆಸಿ ಪತ್ತೆಹಚ್ಚಿದ್ದಾರೆ. ಇದನ್ನು ಗಮನಿಸಿದ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್…

Read More

ಕೆನಡಾದ ಸಂಸತ್ತು  ಹೌಸ್ ಆಫ್ ಕಾಮನ್‌ ನಲ್ಲಿ ಒಂದು ನಿಮಿಷ ಮೌನ ಆಚರಿಸುವ ಮೂಲಕ ಹತ್ಯೆಯಾದ ಭಾರತದ ಮೋಸ್ಟ್ ವಾಂಟೆಡ್ ಉಗ್ರ, ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್‌ ಗೆ ಗೌರವ ಸಲ್ಲಿಸಿ ಸುದ್ದಿಯಾಗಿದೆ. ಖಲಿಸ್ತಾನಿ ಭಯೋತ್ಪಾದಕನಿಗೆ ಕೆನಡಾ ಸಂಸತ್ತು ಗೌರವ ಸಲ್ಲಿಸಿದ್ದಕ್ಕೆ ಭಾರತ ಖಂಡಿಸಿದೆ. ಈ ಬಗ್ಗೆ ವ್ಯಾಂಕೋವರ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಪ್ರತಿಕ್ರಿಯೆ ನೀಡಿದೆ. ಏರ್ ಇಂಡಿಯಾ ವಿಮಾನ ‘ಕನಿಷ್ಕಾ182’ ಮೇಲೆ ನಡೆದ ಬಾಂಬ್ ದಾಳಿಯನ್ನು ಜಗತ್ತಿಗೆ ನೆನಪಿಸಿದೆ. ಕೆನಡಾ ಹರ್ದೀಪ್ ಸಿಂಗ್‌ಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರತಿಯಾಗಿ ವ್ಯಾಂಕೋವರ್‌ ನಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ 1985ರಲ್ಲಿ ಏರ್ ಇಂಡಿಯಾ ಕಾನಿಷ್ಕಾ ವಿಮಾನದ ಮೇಲೆ ಖಲಿಸ್ತಾನಿ ಬಾಂಬ್ ದಾಳಿಯಲ್ಲಿ ಸಾವನ್ನಪ್ಪಿದ 329 ಜನರನ್ನು ಸ್ಮರಿಸಲು ತೀರ್ಮಾನಿಸಿದೆ, ಇದರಲ್ಲಿ ಉಗ್ರ ಹರ್ದೀಪ್ ಸಿಂಗ್ ಮುಖ್ಯ ರೂವಾರಿಯಾಗಿದ್ದ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296…

Read More

Zepto ಮೂಲಕ ಆರ್ಡರ್ ಮಾಡಿದ ಹರ್ಷೆಯ ಚಾಕೊಲೇಟ್ ಸಿರಪ್ ಬಾಟಲಿಯಲ್ಲಿ ಸತ್ತ ಇಲಿ ಪತ್ತೆಯಾಗಿದೆ. ಪ್ರಮಿ ಶ್ರೀಧರ್ ಯವರು ಚಾಕೊಲೇಟ್ ಸಿರಪ್ ಆರ್ಡರ್ ಮಾಡಿದ ವ್ಯಕ್ತಿಯಾಗಿದ್ದಾರೆ. Zepto ಮೂಲಕ ಆರ್ಡರ್ ಮಾಡಿದ ಹರ್ಷೆಯ ಚಾಕೊಲೇಟ್ ಸಿರಪ್ ನ ಬಾಟಲಿಯಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ತಕ್ಷಣವೇ ಅವರು ಅದರ ವೀಡಿಯೊವನ್ನು ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಹರ್ಷೆಯ ಬಾಟಲಿಯಲ್ಲಿ ಸತ್ತ ಇಲಿ ಇರುವುದು ತಿಳಿಯುವ ಮೊದಲು ಕುಟುಂಬದ ಮೂವರು ಸದಸ್ಯರು ಈ ಸಿರಪ್ ಅನ್ನು ಕುಡಿದಿದ್ದಾರೆ. ತಕ್ಷಣ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಬಗ್ಗೆ ಪ್ರಮಿ ಇನ್ ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ. ತಮ್ಮ ಪೋಸ್ಟ್ ನ ಕೊನೆಯಲ್ಲಿ, ಯಾವುದೇ ಉತ್ಪನ್ನವನ್ನು ಮನೆಯಲ್ಲಿ ಮಕ್ಕಳಿಗೆ ನೀಡುವ ಮೊದಲು ಅದನ್ನು ಪರೀಕ್ಷಿಸಲು ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಕಂಪನಿಯು ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಭರವಸೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಇನ್ನು ಪೋಸ್ಟ್…

Read More

ತುಮಕೂರಿನಲ್ಲಿ ಹುಚ್ಚುನಾಯಿ ಹಾವಳಿ ಹೆಚ್ಚಾಗಿದ್ದು 5ಕ್ಕೂ ಹೆಚ್ಚು ಮಂದಿ ಮೇಲೆ ದಾಳಿ ಮಾಡಿವೆ. ಓರ್ವ ಬಾಲಕಿಗೆ ಗಂಭೀರ ಗಾಯಗಳಾಗಿರುವ ಘಟನೆ ತುಮಕೂರು ನಗರದ ಗೋಕುಲ ಬಡಾವಣೆಯಲ್ಲಿ ನಡೆದಿದೆ. ಸಂಜೆ 5ಗಂಟೆ ಸುಮಾರಿಗೆ ಗೋಕುಲ ಬಡಾವಣೆಯಲ್ಲಿ ಕಾಣಿಸಿಕೊಂಡ ಹುಚ್ಚುನಾಯಿ, ಮನೆ ಮುಂದೆ ಆಟವಾಡುತ್ತಿದ್ದ 9 ವರ್ಷ ಬಾಲಕಿ ಮೇಲೆ ದಾಳಿ ಮಾಡಿದೆ. ಬಾಲಕಿಯ ಕೈ, ಕಾಲಿಗೆ ಗಂಭೀರವಾಗಿ ಕಚ್ಚಿರುವ ಹುಚ್ಚುನಾಯಿ, ಅದಲ್ಲದೇ ಮನೆಯಲ್ಲಿ ಸಾಕಿದ್ದ ಎರಡು ನಾಯಿಗಳ ಮೇಲೆಯೂ ದಾಳಿ ಮಾಡಿದೆ. ಹೊರಗಡೆಯಿಂದ ಬರ್ತಿರುವ ನಾಯಿಗಳ ಹಾವಳಿಯಿಂದ ಸ್ಥಳೀಯರಲ್ಲಿ ಹೆಚ್ಚಿದ ಆತಂಕ ಹೆಚ್ಚಾಗಿದೆ. ರಿಂಗ್ ರಸ್ತೆ ಸಮೀಪ ಇರುವ ಹಿನ್ನೆಲೆ, ಬೇರೆ ಕಡೆಯಿಂದ ರಿಂಗ್ ರಸ್ತೆ ಬಳಿ ನಾಯಿಗಳನ್ನ ತಂದು ಬಿಟ್ಟು ಹೋಗುತ್ತಿರುವ ಆರೋಪ ವ್ಯಕ್ತವಾಗಿದೆ. ಸ್ಥಳೀಯರ ಮೇಲೆ ದಾಳಿ ನಡೆಸಿ ನಾಯಿಗಳು ಆತಂಕ ಸೃಷ್ಟಿಸಿವೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರಿಂದ ಒತ್ತಾಯ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಭೇಟಿ ಕೊಟ್ಟ ತುಮಕೂರು ಮಹಾನಗರ ಪಾಲಕೆ ಕಮಿಷನರ್ ಬಿ.ವಿ.…

Read More

ಜೂನ್ 18ರಂದು ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆಯನ್ನೇ (NET 2024) ಕೇಂದ್ರ ಸರ್ಕಾರವು ರದ್ದುಗೊಳಿಸಿದೆ. ಅಕ್ರಮ ಆರೋಪದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಿ ಕೇಂದ್ರ ಸರ್ಕಾರವು ಆದೇಶ ಹೊರಡಿಸಿದೆ. ಜೂನ್ 18ರಂದು ಕರ್ನಾಟಕ ಸೇರಿ ದೇಶಾದ್ಯಂತ 317 ನಗರಗಳ 1,205 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಸುಮಾರು 11 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೆಟ್ ಗೆ ಹಾಜರಾಗಿದ್ದರು. ಈಗ ಪರೀಕ್ಷೆಯನ್ನು ರದ್ದುಗೊಳಿಸಿರುವ ಕಾರಣ ಶೀಘ್ರದಲ್ಲೇ ಹೊಸ ದಿನಾಂಕ ಘೋಷಿಸಲಾಗುತ್ತದೆ ಎಂದು ತಿಳಿದುಬಂದಿದೆ. ನ್ಯಾಷನ್ ಸೈಬರ್ ಕ್ರೈಮ್ ಥ್ರೆಟ್ ಅನಾಲಿಟಿಕ್ಸ್ ಯುನಿಟ್ ಆಫ್ ಇಂಡಿಯನ್ ಸೈಬರ್ ಕ್ರೈಮ್ ಕೋ-ಆರ್ಡಿನೇಷನ್ ಸೆಂಟರ್‌ನಿಂದ ಯುಜಿಸಿಗೆ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. “ಪರೀಕ್ಷೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು, ಭಾರತ ಸರ್ಕಾರದ ಶಿಕ್ಷಣ ಸಚಿವಾಲಯವು UGC-NET ಜೂನ್ 2024 ಪರೀಕ್ಷೆಯನ್ನು ರದ್ದುಗೊಳಿಸಲು ನಿರ್ಧರಿಸಿದೆ” ಎಂದು ಶಿಕ್ಷಣ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. Government is committed to ensure the sanctity of examinations and…

Read More

ಕಾರವಾರ: ಜಿಲ್ಲೆಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಗುತ್ತಿಗೆವಹಿಸಿ ಕೊಂಡಿರುವ ಗುತ್ತಿಗೆದಾರರು ಮತ್ತು ಗುತ್ತಿಗೆ ಕಂಪನಿಗಳು ನಿಗಧಿ ಅವಧಿಯೊಳಗೆ ಕಾಮಗಾರಿಗಳನ್ನು ಮುಕ್ತಾಯಗೊಳಿಸದೇ ಇದ್ದಲ್ಲಿನ ಅಂತಹವರನ್ನು ಕಪ್ಪುಪಟ್ಟಿಗೆ ಸೇರ್ಪಡೆ ಮಾಡುವಂತೆ ಎಲ್ಲಾ ಅಧಿಕಾರಿಗಳಿಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ 450 ಹಾಸಿಗೆಯ ಸೂಪರ್ ಸ್ಪೆಷಾಲಟಿ ಆಸ್ಪತ್ರೆಯ ಕಟ್ಟಡ ಕಾಮಗಾರಿಯು ನಿಗಧಿತ ಒಪ್ಪಂದದಂತೆ ಮುಕ್ತಾಯಗೊಂಡು ಮಾರ್ಚ್ ತಿಂಗಳಲ್ಲಿ ಕಟ್ಟಡ ಹಸ್ತಾಂತರವಾಗಬೇಕಿತ್ತು. ಆದರೆ ಇಲ್ಲಿಯವರೆಗೆ ಹಸ್ತಾಂತರವಾಗದ ಹಿನ್ನಲೆಯಲ್ಲಿ ರೋಗಿಗಳಿಗೆ ಹಾಗೂ ಸಾರ್ವಜನಿಕರಿಗೆ ಯೋಜನೆಯ ಪ್ರಯೋಜನ ದೊರೆಯದೇ ಚಿಕಿತ್ಸೆಗೆ ಪರದಾಡುವಂತಾಗಿದೆ. ಅಲ್ಲದೇ ಜಿಲ್ಲೆಯಲ್ಲಿ ಕೈಗೊಂಡಿರುವ ಹಲವು ಅಭಿವೃದ್ದಿ ಕಾಮಗಾರಿಗಳ ಗುತ್ತಿಗೆ ವಹಿಸಿಕೊಂಡಿರುವ ಇತರೆ ಗುತ್ತಿಗೆದಾರರು ಮತ್ತು ಗುತ್ತಿಗೆ ಕಂಪನಿಗಳು ನಿಗಧಿತ ಅವಧಿಯೊಳಗೆ ಕಾಮಗಾರಿಗಳನ್ನು ಮುಕ್ತಾಯಗೊಳಿದೇ ಇದ್ದಲ್ಲಿ ಅವರನ್ನು…

Read More

ಮಡಿಕೇರಿ: ಅಂತರರಾಷ್ಟ್ರೀಯ 10 ನೇ ಯೋಗ ದಿನಾಚರಣೆ ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರ ಅಧ್ಯಕ್ಷತೆಯಲ್ಲಿ ವಿಡಿಯೋ ಸಂವಾದದ ಮೂಲಕ ಪೂರ್ವಭಾವಿ ಸಭೆಯು ಬುಧವಾರ ನಡೆಯಿತು. ಸಭೆಯಲ್ಲಿ ಜೂನ್, 21 ರಂದು ನಡೆಯುವ ಅಂತರರಾಷ್ಟ್ರೀಯ 10ನೇ ಯೋಗ ದಿನಾಚರಣೆ ಆಚರಿಸುವ ನಿಟ್ಟಿನಲ್ಲಿ ಸರ್ಕಾರದ ಜೊತೆ ಸರ್ಕಾರೇತರ ಸಂಸ್ಥೆಗಳು ಕೈಜೋಡಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಕೋರಿದರು. ಅಂತರರಾಷ್ಟ್ರೀಯ ಯೋಗ ದಿನಾಚರಣೆ ಮಹತ್ವ ಅರಿತು ಸಂಬಂಧಪಟ್ಟ ವಿವಿಧ ಇಲಾಖೆಗಳು ಕಾರ್ಯಕ್ರಮ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡಬೇಕು. ಶಾಲಾ ಕಾಲೇಜು ಹಾಗೂ ಹಾಸ್ಟೇಲ್ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಲು ಮತ್ತು ಬರಲು ಅಗತ್ಯ ಜವಾಬ್ದಾರಿ ವಹಿಸಿಕೊಂಡು ಕಾರ್ಯಕ್ರಮ ಯಶಸ್ಸಿಗೆ ಸಹಕರಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ನಿರ್ದೇಶನ ನೀಡಿದರು. ಸ್ವಚ್ಚತೆ ಕಾಪಾಡುವುದು ಮತ್ತು ಕುಡಿಯುವ ನೀರು ಕಲ್ಪಿಸುವುದು ಮತ್ತಿತರ ಸಂಬಂಧ ನಗರಸಭೆ ಅಧಿಕಾರಿಗಳು ಅಗತ್ಯ ಸಹಕಾರ ನೀಡುವಂತೆ ಸೂಚಿಸಿದರು. ಜಿಲ್ಲಾ ಆಯೂಷ್ ಅಧಿಕಾರಿ ಡಾ.ರೇಣುಕಾ ದೇವಿ ಅವರು ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಜೂನ್, 21 ರಂದು…

Read More

ಮಡಿಕೇರಿ: ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ಆಯೋಜಿಸಲು ಚಿಂತಿಸಲಾಗಿದ್ದು, ಆ ನಿಟ್ಟಿನಲ್ಲಿ ಸ್ಥಳೀಯ ಸಮಸ್ಯೆ ಬಗೆಹರಿಸಲು ಶ್ರಮಿಸಲಾಗುವುದು ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ವಿರಾಜಪೇಟೆಯ ಕಾವೇರಿ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ಜನಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜನಸ್ಪಂದನ ಕಾರ್ಯಕ್ರಮ ಮೂಲಕ ಜನರ ಸಮಸ್ಯೆ ಪರಿಹರಿಸುವುದು ಉದ್ದೇಶವಾಗಿದೆ. ಆ ದಿಸೆಯಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವುದು ಪ್ರಮುಖವಾಗಿದೆ ಎಂದರು. ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸುವುದು ಅತಿಮುಖ್ಯ. ಸಾಧ್ಯವಾದಷ್ಟು ಸರ್ಕಾರದ ಕೆಲಸಗಳನ್ನು ತಲುಪಿದಲ್ಲಿ ಸಾರ್ಥಕವಾಗಲಿದೆ ಎಂದು ಎ.ಎಸ್.ಪೊನ್ನಣ್ಣ ಅವರು ಹೇಳಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ, ಯಾವುದೇ ರೀತಿಯ ಕುಂದುಕೊರತೆ ಇದ್ದಲ್ಲಿ ಮನವಿ ಮಾಡುವಂತಾಗಬೇಕು. ಬಗೆಹರಿಸುವಂತಹಗಳನ್ನು ಸ್ಥಳದಲ್ಲಿಯೇ ತಿಳಿಸಲಾಗುವುದು. ಇಲ್ಲದಿದ್ದಲ್ಲಿ 15 ದಿನದೊಳಗೆ ಬಗೆಹರಿಸಲಾಗುವುದು ಎಂದರು. ಸಾರ್ವಜನಿಕರ ಮನೆ ಬಾಗಿಲಿಗೆ ಬಂದು ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಲಾಗುತ್ತಿದೆ.…

Read More