Subscribe to Updates
Get the latest creative news from FooBar about art, design and business.
- ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
- ತಿಪಟೂರು: ಜೂನ್ 1ರಿಂದ ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
- ತುಮಕೂರು: ವಾಟರ್ ಟ್ಯಾಂಕ್ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು, ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
- ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
- ತುರುವೇಕೆರೆ: ಜೂ. 4ರಂದು ಉಚಿತ ಯೋಗ, ಪ್ರಾಣಾಯಾಮ ತರಗತಿಗಳ ಉದ್ಘಾಟನೆ
- ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
- ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ
Author: admin
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಅವರು ಮೌನ ಮುರಿದಿದ್ದಾರೆ. ಇದು ವರೆಗೆ ಪ್ರಕರಣದ ಬಗ್ಗೆ ಏನೂ ಮಾತನಾಡದ ಅವರು, ಈಗ ಸೋಷಿಯಲ್ ಮೀಡಿಯಾ ಮೂಲಕ ತಮ್ಮ ನೋವನ್ನು ಹಂಚಿಕೊಂಡಿದ್ದಾರೆ. ಇಂದು ತಮ್ಮ ಇನ್ ಸ್ಟಾಗ್ರಾಂನಲ್ಲಿ ಪ್ರಕರಣದ ಕುರಿತು ಉಲ್ಲೇಖಿಸಿರುವ ಅವರು, ರೇಣುಕಾಸ್ವಾಮಿ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಜೊತೆಗೆ ಈ ಘಟನೆಯಿಂದಾಗಿ ನನಗೆ ಹಾಗೂ ನನ್ನ ಹದಿಹರೆಯದ ಮಗನಿಗೆ, ದರ್ಶನ್ ಅವರ ಸ್ನೇಹಿತರಿಗೆ, ಅಭಿಮಾನಿಗಳಿಗೆ ತುಂಬ ದುಃಖವಾಗಿದೆ ಎಂದಿದ್ದಾರೆ. ತಾಯಿ ಚಾಮುಂಡೇಶ್ವರಿ ಹಾಗೂ ನಮ್ಮ ಕಾನೂನು ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ. ನ್ಯಾಯವು ಮೇಲುಗೈ ಸಾಧಿಸಲಿದೆ. ನ್ಯಾಯಾಲದಿಂದ ಪ್ರಕಟವಾಗಲಿರುವ ತೀರ್ಪು ದರ್ಶನ್ ಹಾಗೂ ಅಭಿಮಾನಿಗಳಿಗೆ ನೆಮ್ಮದಿಯ ಭಾವ ಮೂಡಿಸಲಿದೆ ಎಂದು ನಾನು ಭಾವಿಸುತ್ತೇನೆ. ಸತ್ಯ ಮೇವ ಜಯತೆ ಎಂದು ಬರೆದಿದ್ದಾರೆ. ಇದೇ ವೇಳೆ ಮಾಧ್ಯಮಗಳ ವಿರುದ್ಧ ಅಸಮಾಧಾನ ಹೊರಹಾಕಿರುವ ಅವರು, ವಿವಿಧ ಮಾಧ್ಯಮಗಳು ಹಾಗೂ ಸೋಷಿಯಲ್ ಮೀಡಿಯಾಗಳಲ್ಲಿ ಸತ್ಯಕ್ಕೆ ದೂರವಾದ ಸುದ್ದಿಗಳು ಪ್ರಸಾರವಾಗುತ್ತಿವೆ. ದಯವಿಟ್ಟು…
ಚಂದ್ರಬಾಬು ನಾಯ್ಡು ಸರ್ಕಾರ ಹಿರಿಯ ನಾಗಕರಿಗೆ ಒಳ್ಳೆಯ ಸುದ್ದಿ ನೀಡಿದೆ. ಹಿರಿಯ ನಾಗರಿಕರಿಗೆ ಯಾವುದೇ ಒತ್ತಡವಿಲ್ಲದೆ ಆರಾಮದಾಯಕವಾಗಿ ತಿರುಪತಿ ತಿಮಪ್ಪನ ದರ್ಶನ ಪಡೆಯಲು ವಿಶೇಷ ವ್ಯವಸ್ಥೆ ಮಾಡಲಾಗಿದೆ. ಹಿರಿಯ ನಾಗರಿಕರು ಸರತಿಸಾಲಿನಲ್ಲಿ ನಿಲ್ಲಬೇಕಾದ ಅಗತ್ಯವಿಲ್ಲ. ಅವರು ಯಾವುದೇ ಮೆಟ್ಟಿಲುಗಳನ್ನು ಹತ್ತದೇ ಸೇತುವೆ ಕೆಳಗೆ ಇರುವ ಗ್ಯಾಲರಿಯ ಮೂಲಕ ಪ್ರವೇಶಿಸಬಹುದಾಗಿದೆ. ತಿರುಪತಿಗೆ ಭೇಟಿ ನೀಡುವ ಹಿರಿಯ ನಾಗರಿಕರಿಗೆ ಹಲವು ಸೌಲಭ್ಯಗಳು ಲಭ್ಯವಿದೆ. ವೆಂಕಟೇಶ್ವರ ದೇವರ ಉಚಿತ ದರ್ಶನಕ್ಕೆ ಎರಡು ವಿಶೇಷ ಸಮಯ ಸ್ಲಾಟ್ಗಳನ್ನು ವ್ಯವಸ್ಥೆ ಮಾಡಲಾಗಿದೆ.ಬೆಳಿಗ್ಗೆ 10 ಗಂಟೆಗೆ ಹಾಗೂ ಮಧ್ಯಾಹ್ನ 3 ಗಂಟೆಗೆ ವಿಶೇಷ ಸ್ಲಾಟ್ನಲ್ಲಿ ಹಿರಿಯ ನಾಗರಿಕರು ವೆಂಕಟೇಶ್ವರನ ದರುಶನ ಪಡೆಯಬಹುದಾಗಿದೆ.ಟಿಟಿಡಿ ನೀಡುತ್ತಿರುವ ಈ ಸೌಲಭ್ಯ ಪಡೆಯಲು ಹಿರಿಯ ನಾಗರಿಕರು ತಮ ಫೋಟೊ ಗುರುತಿನ ಚೀಟಿ (ಆಧಾರ್ ಅಥವಾ ಇತರೆ ದಾಖಲೆಗಳು) ಜೊತೆಗೆ ವಯಸ್ಸಿನ ಪುರಾವೆಯನ್ನು ಹಾಜರುಪಡಿಸಬೇಕು. ಈ ದಾಖಲೆಗಳನ್ನು ಎಸ್–1 ಕೌಂಟರ್ನಲ್ಲಿ ಸಲ್ಲಿಸಬೇಕು. ಹೆಚ್ಚಿನ ವಿವರಣೆಗಳಿಗೆ ಟಿಟಿಡಿ ವಿಶೇಷ ಸಹಾಯವಾಣಿ ಸಂಖ್ಯೆ 08772277777 ಯಲ್ಲಿ ಸಂಪರ್ಕಿಸಬಹುದಾಗಿದೆ. ನಮ್ಮತುಮಕೂರಿನ ಕ್ಷಣ…
ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಇಂದಿರಾ ಕ್ಯಾಂಟೀನ್ ನಲ್ಲಿ ಇಂದಿನಿಂದ ಹೊಸ ಮೆನು ಜಾರಿಗೆ ಬಂದಿದ್ದು, ಬೆಳಗ್ಗೆಯ ತಿಂಡಿ ಹಾಗೂ ಮಧ್ಯಾಹ್ನದ ಊಟ, ರಾತ್ರಿ ಊಟದಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿದೆ. ರಾಜ್ಯದ ಇಂದಿರಾ ಕ್ಯಾಂಟೀನ್ ಗಳಲ್ಲಿ ಇಂದಿನಿಂದ ಊಟ ಮತ್ತು ಉಪಾಹಾರಗಳಲಿ ಬದಲಾವಣೆ ಮಾಡಲಾಗಿದ್ದು, ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ಭಾಗಕ್ಕೆ ಬೇರೆ ಬೇರೆ ಮೆನು ಪರಿಚಯಿಸಲಾಗಿದೆ. ಇಲ್ಲಿದೆ ಮೆನುವಿನ ಸಂಪೂರ್ಣ ಮಾಹಿತಿ: ಭಾನುವಾರ ಬೆಳಗ್ಗೆ : ಇಡ್ಲಿ ಚಟ್ನಿ / ಖಾರಾ ಬಾತ್ / ಬ್ರೆಡ್ ಮತ್ತು ಜಾಮ್ ಮಧ್ಯಾಹ್ನ : ಅನ್ನ ಸಾಂಬಾರ್ / ಮೊಸರಾನ್ನ / ರಾಗಿಮುದ್ದೆ ಸೊಪ್ಪು ಸಾರು ರಾತ್ರಿ : ಅನ್ನ ಸಾಂಬಾರ್ / ರಾಗಿಮುದ್ದೆ ಸೊಪ್ಪು ಸಾರು ಸೋಮವಾರ ಬೆಳಗ್ಗೆ : ಇಡ್ಲಿ ಸಾಂಬಾರ್ / ಪಲಾವ್ ರೈತ / ಬ್ರೆಡ್ & ಜಾಮ್ ಮಧ್ಯಾಹ್ನ : ಅನ್ನ ಸಾಂಬಾರ್ + ಕೀರ್ / ರಾಗಿಮುದ್ದೆ ಸೊಪ್ಪು ಸಾರು ಮತ್ತು…
ತುಮಕೂರು: ಜಿಲ್ಲೆಯ ಇರಕ ಸಂದ್ರ ಕಾಲೋನಿ, ಕೊಳವನಹಳ್ಳಿ ಗ್ರಾಮಗಳ ಗುಡಿಸಲು ನಿವಾಸಿಗಳು ಸೇರಿದಂತೆ ಜಿಲ್ಲೆಯ ಭೂಮಿ ವಸತಿ ವಂಚಿತರಿಂದ ನಿವೇಶನಗಳಿಗೆ ಹಕ್ಕು ಪತ್ರ ಮತ್ತು ಭೂ ಸಾಗುವಳಿ, ಖಾತೆ ಪಹಣಿ ಕುಡಿಯುವ ನೀರು ಮತ್ತು ವಿದ್ಯುತ್ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಭೂಮಿ ಮತ್ತು ವಸತಿ ಹಕ್ಕು ವಂಚಿತ ಹೋರಾಟ ಸಮಿತಿಯಿಂದ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ನಡೆಯಿತು. ಪ್ರತಿಭಟನಾಕಾರರ ಮನವೊಲಿಸಲು ತಡ ರಾತ್ರಿ 10 ಗಂಟೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸ್ಥಳಕ್ಕೆ ಭೇಟಿ ನೀಡಿದರು. ನಿರಾಶ್ರಿತರ ಬೇಡಿಕೆಗಳು ಈಡೇರುವವರೆಗೂ ಮುಷ್ಕರವನ್ನ ಕೈ ಬಿಡುವುದಿಲ್ಲ ಎಂದು ಸಾಮಾಜಿಕ ಹೋರಾಟಗಾರ ಹಂದ್ರಾಳು ನಾಗಭೂಷಣ್ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರಕ್ಕೆ ನೂರಾರು ಮನವಿ ಸಲ್ಲಿಸಿದರು ಸಹ ನಿರಾಶ್ರಿತರ ಬೇಡಿಕೆಗಳನ್ನು ಬಗೆಹರಿಸುವಲ್ಲಿ ಅಧಿಕಾರಿ ವರ್ಗ ಮತ್ತು ಸರ್ಕಾರ ವಿಫಲವಾಗಿದೆ ಎಂದು ಎಂದು ಆಕ್ರೋಶ ಹಿರಿಯ ಹೋರಾಟಗಾರ ಸಿರಿಮನೆ ನಾಗರಾಜು ಆಕ್ರೋಶ ವ್ಯಕ್ತಪಡಿಸಿದರು. ಸುರಿಯುವ ಮಳೆಯಲ್ಲಿ ವಿದ್ಯುತ್, ಶೌಚಾಲಯ, ಕುಡಿಯುವ ನೀರು, ಇಲ್ಲದೆ ನಿರಾಶ್ರಿತರು ಪರದಾಡುತ್ತಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿಯೇ…
ಬೆಂಗಳೂರಿನ ಪಟ್ಟಣಗೆರೆ ಶೆಡ್ಡಿನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ವಿಚಾರಣೆ ನಡೆಸಲಾಗುತ್ತಿದ್ದು, ನಿತ್ಯ ಹೊಸ ಹೊಸ ವಿಚಾರಗಳು ಹೊರಬರುತ್ತಿವೆ ರೇಣುಕಾ ಸ್ವಾಮಿ ಹತ್ಯೆ ಕೇಸ್ ನ ಆರೋಪಿ, ನಟ ದರ್ಶನ್, ಪ್ರಕರಣಕ್ಕೆ ಸಂಬಂಧಿಸಿ ಸ್ವ ಇಚ್ಛೆ ಹೇಳಿಕೆ ನೀಡಿದ್ದಾರೆ ಎನ್ನಲಾದ ಮಾಹಿತಿಯೊಂದು ಹೊರಬಿದ್ದಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ಮುಚ್ಚಿ ಹಾಕಲು ನಟ ದರ್ಶನ್ 30 ಲಕ್ಷ ಡೀಲ್ ಮಾಡಿಕೊಂಡಿರುವುದಾಗಿ ಒಪ್ಪಿಕೊಂಡಿದ್ದಾರೆ.ಪೊಲೀಸ್, ಲಾಯರ್, ಶವ ಸಾಗಿಸುವವರಿಗಾಗಿ 30 ಲಕ್ಷ ವೆಚ್ಚ ಮಾಡಿರುವುದಾಗಿ ಡಿ ಬಾಸ್ ಹೇಳಿದ್ದಾರೆ. ಈ ಕೇಸ್ನಲ್ಲಿ ತಮ್ಮ ಹೆಸರು ಬಾರದಂತೆ ನೋಡಿಕೊಳ್ಳಲು ಪರಮಾಪ್ತ ಪ್ರದೂಶ್ಗೆ ಹಣ ನೀಡಿರುವುದಾಗಿ ದರ್ಶನ್ ವಿಚಾರಣೆ ವೇಳೆ ಹೇಳಿಕೊಂಡಿದ್ದಾರೆ. ಆದರೆ ಪಟ್ಟಣಗೆರೆಯ ಶೆಡ್ನಲ್ಲಿ ನಡೆದ ಹಲ್ಲೆಯಲ್ಲಿ ತಾನು ಭಾಗಿಯಾಗಿದ್ದೇನೆ ಎಂದು ದರ್ಶನ್ ಒಪ್ಪಿಕೊಂಡಿಲ್ಲ. ಶೆಡ್ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳು, ಜೂನ್ 8ರಂದು ರಾತ್ರಿ ದರ್ಶನ್ ತನ್ನ ಜೀಪಿನಲ್ಲಿ ಶೆಡ್ ಕಡೆಗೆ ಆಗಮಿಸಿದ್ದನ್ನು ತೋರಿಸಿವೆ. ಹತ್ಯೆಯ ನಂತರ ದರ್ಶನ್ ಆರೋಪಿಗಳ ಜೊತೆಗೆ ಪಾರ್ಟಿ…
ಬಡವರು, ದಲಿತರ ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳಲು ಆಗದಿದ್ದರೆ ನೀವು ಸೇವೆಯಲ್ಲಿರಲು ನಾಲಾಯಕ್. ವಸತಿ ಶಾಲೆಗಳು ಬಡಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಬೇಕು. ಬುದ್ಧಿವಂತರನ್ನು ಇನ್ನಷ್ಟು ಬುದ್ಧಿವಂತರಾಗಿಸುವುದು ಮಾತ್ರವಲ್ಲ, ಕಲಿಕೆಯಲ್ಲಿ ಹಿಂದುಳಿದವರನ್ನೂ ಬುದ್ಧಿವಂತರಾಗಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ. ಮಂಗಳವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ‘ಇಲಾಖೆಯ ಒಟ್ಟಾರೆ ಆಯವ್ಯಯದಲ್ಲಿ ಬಿಡುಗಡೆಯಾದ ಮೊತ್ತ 1,884ಕೋಟಿ ರೂ.ಗಳ ಪೈಕಿ 1,879ಕೋಟಿ ರೂ.ವೆಚ್ಚವಾಗಿದ್ದು, ಶೇ.99.75ರಷ್ಟು ಸಾಧನೆಯಾಗಿದೆ’ ಎಂದು ಹೇಳಿದರು. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ 389 ವಿದ್ಯಾರ್ಥಿ ನಿಲಯಗಳು, ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳು-39,541 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಒದಗಿಸಿದ್ದು, 194.71 ಕೋಟಿ ರೂ.ಒದಗಿಸಲಾಗಿದೆ. ಎಸೆಸೆಲ್ಸಿ ಯಲ್ಲಿ ಶೇ.77ರಷ್ಟು ಫಲಿತಾಂಶ ಬಂದಿದ್ದು, ಫಲಿತಾಂಶವನ್ನು ಇನ್ನಷ್ಟು ಉತ್ತಮ ಪಡಿಸಬೇಕು ಎಂದು ಅವರು ನಿರ್ದೇಶಕ ನೀಡಿದರು. ಹಾಸ್ಟೆಲ್ಗಳಿಗೆ ಸಂಜೆ ವೇಳೆಗೆ ಭೇಟಿ ನೀಡಿ,…
ಗ್ಯಾರಂಟಿ ತೆಗೆದರೆ ಝೀರೋ ಆಗುತ್ತೇವೆಂದು ತೈಲ ದರ ಏರಿಕೆ ಮಾಡುತ್ತಿದ್ದಾರೆ ಎಂದು ಶಾಸಕ ಯತ್ನಾಳ್ ಹೇಳಿದ್ದಾರೆ. ಪಕ್ಷದ ಮುಂದಿನ ಹೋರಾಟಗಳ ಕುರಿತು ಎನ್ ರವಿಕುಮಾರ್, ವೀರಣ್ಣ ಚರಂತಿಮಠ, ಅಭಯ ಪಾಟೀಲರೊಂದಿಗೆ ಚರ್ಚಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕಾಂಗ್ರೆಸ್ನ ದುರಾಡಳಿತದ ವಿಚಾರವಾಗಿ ಅಧಿವೇಶನದಲ್ಲಿ ಚರ್ಚೆ ಮಾಡುವುದು ಸೇರಿದಂತೆ, ನಾವೆಲ್ಲರೂ ಒಂದಾಗಿ ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡುವ ವಿಚಾರವಾಗಿ ಚರ್ಚೆ ಆಗಿದೆ ಎಂದರು. ಗ್ಯಾರಂಟಿ ತೆಗೆದರೆ ಝೀರೋ ಆಗುತ್ತೇವೆ ಎಂಬ ಕಾರಣದಿಂದ ತೈಲದ ದರವನ್ನು ಏರಿಕೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ನೈತಿಕ ಹಕ್ಕಿಲ್ಲ, ಗ್ಯಾರಂಟಿ ಸಂಪೂರ್ಣವಾಗಿ ವಿಫಲವಾಗಿದೆ ಎಂದರು. ಸಾರಿಗೆ ಬಸ್ಗಳು ಲಾಭದಲ್ಲಿ ಇವೆ ಎಂದು ಹೇಳುವ ನೀವು ಗಂಡಸರಿಗೂ ಫ್ರೀ ಮಾಡಿ. ಈ ಒಂದು ವರ್ಷದಲ್ಲಿ ಒಂದೇ ಒಂದು ಭೂಮಿ ಪೂಜೆಯನ್ನು ನಾನು ಮಾಡಿಲ್ಲ. ಸಚಿವ ಚಲುವರಾಯಸ್ವಾಮಿ ಗ್ಯಾರಂಟಿ ಯೋಜನೆ ಕೈಬಿಟ್ಟು ಅಭಿವೃದ್ಧಿಗೆ ಹಣ ಕೊಡಿ ಎಂದಿದ್ದಾರೆ. ಇನ್ನೊಂದು ತಿಂಗಳಲ್ಲಿ ಕಾಂಗ್ರೆಸ್ನ ಶಾಸಕರೇ ಬಂಡಾಯ ಏಳುತ್ತಾರೆ. ರಾಜ್ಯದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯ…
ಇವಿಎಂ ಕಾರಣಕ್ಕೆ ಜೆಡಿಎಸ್ ಮತ್ತು ಬಿಜೆಪಿಗೆ ನಿರೀಕ್ಷೆಗಿಂತ ಹೆಚ್ಚು ಸ್ಥಾನಗಳು ಬಂದಿವೆ. ಇದರ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸಬೇಕಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಮಂಗಳವಾರ ವಿಧಾನಸೌಧ ಹಾಗೂ ಬಿಬಿಎಂಪಿ ಮುಖ್ಯ ಕಚೇರಿ ಬಳಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಇವಿಎಂ ತೊಲಗಬೇಕು ಬ್ಯಾಲೆಟ್ ಮತದಾನ ಮತ್ತೆ ಬರಬೇಕು. ಈಗಾಗಲೇ ಫಲಿತಾಂಶ ಬಂದಾಗಿದೆ. ಈಗೇನೂ ಮಾಡಲು ಆಗುವುದಿಲ್ಲ ಎಂದರು. ಮತ್ತೊಮ್ಮೆ ಫಲಿತಾಂಶವನ್ನು ಪರಿಶೀಲನೆ ನಡೆಸಬಹುದು. ಮಧ್ಯಪ್ರದೇಶದಲ್ಲಿ ಬ್ಯಾಲೆಟ್ ಮತದಾನ ಇದ್ದಾಗ ಮೂರರಲ್ಲಿ ಎರಡು ಭಾಗದಷ್ಟು ಮತಗಳು ಕಾಂಗ್ರೆಸ್ ಪರವಾಗಿ ಬೀಳುತ್ತಿದ್ದವು. ಇವಿಎಂ ಕಾರಣಕ್ಕೆ ಈಗ ಪರಿಸ್ಥಿತಿ ಬದಲಾಗಿದೆ. ಇದರ ಬಗ್ಗೆ ಮತ್ತಷ್ಟು ಆಳವಾಗಿ ಚಿಂತನೆ ನಡೆಸಬೇಕಿದೆ ಎಂದು ಅವರು ಹೇಳಿದರು. ಬಿಬಿಎಂಪಿ ಆಸ್ತಿಗಳನ್ನು ಸರಕಾರ ಅಡವಿಡುತ್ತಿದೆ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್, ಯಾವ ಅಡಮಾನವೂ ಇಲ್ಲ. ನಮ್ಮ ಬಿಬಿಎಂಪಿಯ ಆಸ್ತಿಯಗಳ ರಕ್ಷಣೆ ಹಾಗೂ ಎಷ್ಟು ಆಸ್ತಿಗಳಿವೆ ಎನ್ನುವ ಮರು ಸಮೀಕ್ಷೆ, ಗುತ್ತಿಗೆ ನವೀಕರಣ ಸೇರಿದಂತೆ ಇತರೇ ಕೆಲಸಗಳಿಗಾಗಿ ನಮ್ಮ…
ಆದಾಯ ತೆರಿಗೆ ಇಲಾಖೆಯಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನಿಸಲಾಗಿದೆ.ಆದಾಯ ತೆರಿಗೆ ನೇಮಕಾತಿ 2024 ರ ಅಧಿಕೃತ ಅಧಿಸೂಚನೆಗೆ ಅನುಗುಣವಾಗಿ, ನೇಮಕಾತಿಯು ಡೆಪ್ಯುಟೇಶನ್ ಆಧಾರದ ಮೇಲೆ ಇರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳನ್ನು 03 ವರ್ಷಗಳಿಗೆ ಮೀರದ ಸೂಕ್ತ ಅವಧಿಗೆ ನೇಮಕ ಮಾಡಲಾಗುತ್ತದೆ. ಆದಾಯ ತೆರಿಗೆ ನೇಮಕಾತಿ 2024 ರ ಅಧಿಕೃತ ಅಧಿಸೂಚನೆಯ ಆಧಾರದ ಮೇಲೆ, ಎಲ್ಲಾ ವಿಷಯಗಳಲ್ಲಿ ಸ್ಥಾನದ ಪ್ರಕಾರ ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು,. ಸೂಕ್ತವಾದ ವಿಧಾನದ ಮೂಲಕ ಕೆಳಗೆ ನಮೂದಿಸಿದ ವಿಳಾಸಕ್ಕೆ ಫಾರ್ವರ್ಡ್ ಮಾಡುವ ಮೂಲಕ ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅಗತ್ಯವಿದ್ದಲ್ಲಿ ಅಥವಾ ಸಮಿತಿಯು ಕೇಳಿದರೆ ಸರಿಯಾಗಿ ಭರ್ತಿ ಮಾಡಿದ ಅರ್ಜಿಗಳೊಂದಿಗೆ ತಮ್ಮ ಸಂಬಂಧಿತ ದಾಖಲೆಗಳನ್ನು ಲಗತ್ತಿಸಬೇಕು. ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಮಿತಿಯು ನೀಡಿದ ನಿಗದಿತ ದಿನಾಂಕದಂದು ಅಥವಾ ಮೊದಲು ಸಲ್ಲಿಸಬೇಕು. ಆದಾಯ ತೆರಿಗೆ ನೇಮಕಾತಿ 2024 ಗಾಗಿ ಪೋಸ್ಟ್ ಹೆಸರು ಮತ್ತು ಹುದ್ದೆಗಳು ಇನ್ಸ್ ಪೆಕ್ಟರ್ ಮತ್ತು ಅಸಿಸ್ಟೆಂಟ್ ಹುದ್ದೆಗೆ ಅವಕಾಶ ತೆರೆಯಲಾಗಿದೆ. ಆದಾಯ ತೆರಿಗೆ ನೇಮಕಾತಿ…
ವೀಳ್ಯದೆಲೆ ಮತ್ತು ಸುಣ್ಣದ ಜೊತೆ ವೀಳ್ಯದೆಲೆಯನ್ನು ತಿನ್ನುವುದು ಆರೋಗ್ಯಕ್ಕೆ ಪ್ರಯೋಜನಕಾರಿಯಲ್ಲ, ಆದರೆ ತುಳಸಿ ಬೀಜಗಳೊಂದಿಗೆ ವೀಳ್ಯದೆಲೆಯನ್ನು ತಿನ್ನುವುದು ತುಂಬಾ ಪ್ರಯೋಜನಕಾರಿಯಾಗಿದೆ. ಹಾಗಾದರೆ ತುಳಿಸಿ ಬೀಜ ಹಾಗೂ ವೀಳ್ಯದೆಲೆ ತಿನ್ನೋದರ ಪ್ರಯೋಜನಗಳೇನು ಅನ್ನೋದನ್ನು ತಿಳಿಯೋಣ . ಬಾಯಿಯ ಆರೋಗ್ಯಕ್ಕೆ ಒಳ್ಳೆಯದು. ವೀಳ್ಯದೆಲೆಗೆ ಬಾಯಿಯ ದುರ್ವಾಸನೆ ಕಡಿಮೆ ಮಾಡುವ ಗುಣವಿದೆ. ವಾಸ್ತವವಾಗಿ, ಇದರಲ್ಲಿರುವ ಅಂಶವು ಬ್ಯಾಕ್ಟೀರಿಯಾದ ಪರಿಣಾಮವನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ, ಇದು ಬಾಯಿಯಿಂದ ಬರುವ ಕೆಟ್ಟ ವಾಸನೆಯನ್ನು ಕಡಿಮೆ ಮಾಡುತ್ತದೆ. ಬಾಯಿಯ ದುರ್ವಾಸನೆಯ ಸಮಸ್ಯೆ ಅಥವಾ ಬಾಯಿಯಿಂದ ರಕ್ತ ಬರುತ್ತಿದ್ದರೆ, ತುಳಸಿ ಬೀಜದ ಜೊತೆ ವೀಳ್ಯದೆಲೆಯಿಟ್ಟು ಅಗಿಯಿರಿ. ನಿಮಗೆ ಬೇಕಾದರೆ ಲವಂಗ ಮತ್ತು ಏಲಕ್ಕಿಯನ್ನು ಕೂಡ ಹಾಕಬಹುದು. ಇದರಿಂದ ಬಾಯಿಯ ದುರ್ವಾಸನೆ ದೂರವಾಗುತ್ತದೆ. ಜೀರ್ಣಕಾರಿ ಸಮಸ್ಯೆಗಳಿಂದ ಪರಿಹಾರ ವೀಳ್ಯದೆಲೆಯೊಂದಿಗೆ ತುಳಸಿ ಬೀಜಗಳನ್ನು ತಿನ್ನುವುದರಿಂದ ಜೀರ್ಣಕ್ರಿಯೆಯ ಸಮಸ್ಯೆಯನ್ನು ಸುಧಾರಿಸಬಹುದು. ವಾಸ್ತವವಾಗಿ, ವೀಳ್ಯದೆಲೆಯೊಂದಿಗೆ ತುಳಸಿ ಬೀಜಗಳನ್ನು ತಿನ್ನುವುದು ನಿಮ್ಮ ಲಾಲಾರಸ ಗ್ರಂಥಿಯನ್ನು ಸಕ್ರಿಯವಾಗಿಡಲು ಸಹಾಯಕವಾಗಿದೆ. ಈ ಗ್ರಂಥಿಯು ಆಹಾರವನ್ನು ಸಣ್ಣ ತುಂಡುಗಳಾಗಿ ವಿಭಜಿಸಲು…