Subscribe to Updates
Get the latest creative news from FooBar about art, design and business.
- ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
- ತಿಪಟೂರು: ಜೂನ್ 1ರಿಂದ ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
- ತುಮಕೂರು: ವಾಟರ್ ಟ್ಯಾಂಕ್ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು, ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
- ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
- ತುರುವೇಕೆರೆ: ಜೂ. 4ರಂದು ಉಚಿತ ಯೋಗ, ಪ್ರಾಣಾಯಾಮ ತರಗತಿಗಳ ಉದ್ಘಾಟನೆ
- ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
- ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ
Author: admin
ಕಾಲೇಜು ಶುಲ್ಕವನ್ನು ಆನ್ಲೈನ್ ಗೇಮ್ನಲ್ಲಿ ಕಳೆದಿದ್ದ ವಿದ್ಯಾರ್ಥಿನಿಯೊಬ್ಬಳು ಹಣ ಹೊಂದಿಸಲಾಗದೇ ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಇಲ್ಲಿನ ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯ ವಿ.ವಿ.ಹಾಸ್ಟೆಲ್ನಲ್ಲಿ ವರದಿಯಾಗಿದೆ. ಕೋಲಾರದ ಶ್ರೀನಿವಾಸಪುರ ಮೂಲದ ಪಾವನ(19) ಎಂಬಾಕೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದಲ್ಲಿ ಪಾವನ ಮೊದಲ ವರ್ಷದ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜಿಗೆ ಮೂರು ದಿನ ರಜೆ ಇದ್ದಿದ್ದರಿಂದ ಹಾಸ್ಟೆಲ್ನಲ್ಲಿ ಸಹಪಾಠಿಗಳು ತಮ್ಮ ಊರುಗಳಿಗೆ ತೆರಳಿದ್ದರು. ಜೂ.16ರ ರವಿವಾರ ರಾತ್ರಿ ಒಬ್ಬಳೇ ಇದ್ದ ಪಾವನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ವೇಳೆ ಆಕೆ ಬಳಸಿದ್ದ ಚೇರ್ ಕೆಳಗಡೆ ಬಿದ್ದು ಜೋರಾದ ಶಬ್ದವಾಗಿದ್ದರಿಂದ ಪಕ್ಕದ ರೂಮ್ನ ಸಹಪಾಠಿಗಳು ಬಂದು ಗಮನಿಸಿದಾಗ ಪಾವನ ಆತ್ಮಹತ್ಯೆಗೆ ಮಾಡಿಕೊಂಡಿರುವುದು ಕಂಡುಬಂದಿದೆ. ತಕ್ಷಣ ಹಾಸ್ಟೆಲ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಮೃತದೇಹದ ಬಳಿ ಪತ್ತೆಯಾದ ಡೆತ್ನೋಟ್ನಲ್ಲಿ ‘ಆನ್ಲೈನ್ನಲ್ಲಿ ಹಣ ಹೂಡಿಕೆ ಮಾಡಿ ನಷ್ಟಕ್ಕೆ ಒಳಗಾದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ’ ಪಾವನ…
ರಾಜ್ಯದ ಎಲ್ಲ ತಾಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು 1 ಲಕ್ಷ ರೂ.ನೀಡಲಾಗುವುದು. ಹಾಗೂ ಪ್ರತಿ ಕ್ಷೇತ್ರದಲ್ಲಿ ಕೆಂಪೇಗೌಡ ಬಗ್ಗೆ ವಿದ್ಯಾರ್ಥಿಗಳಿಗೆ ವಿಚಾರ ಸಂಕಿರಣ ಏರ್ಪಡಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ 1ಲಕ್ಷ ರೂ.ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಮಂಗಳವಾರ ಕೆಂಪೇಗೌಡರ ಜಯಂತಿ ಆಚರಣೆ ಸಂಬಂಧ ವಿಧಾನಸೌಧದಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆ ಹಾಗೂ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲಾ ಮಕ್ಕಳಿಗೆ ಕೆಂಪೇಗೌಡರ ಕುರಿತು ಚರ್ಚಾ ಸ್ಪರ್ಧೆ ಏರ್ಪಡಿಸಲಾಗುವುದು ಎಂದರು. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 20 ಸಾವಿರ ರೂ., ತಾಲೂಕು ಕೇಂದ್ರಗಳಿಗೆ 20 ಸಾವಿರ ರೂ.ಜೊತೆಗೆ ಹೆಚ್ಚುವರಿಯಾಗಿ 1 ಲಕ್ಷ ರೂ.ನೀಡಲಾಗುವುದು. ಜಿಲ್ಲಾ ಕೇಂದ್ರಗಳಿಗೆ 50 ಸಾವಿರ ರೂ.ನೀಡಲಾಗುತ್ತಿದ್ದು ಹೆಚ್ಚು ಮಾಡಲು ಚಿಂತನೆ ನಡೆಸಲಾಗುವುದು ಎಂದು ಅವರು ಹೇಳಿದರು. ನಾಡಪ್ರಭು ಕೆಂಪೇಗೌಡರ 515ನೆ ಜಯಂತೋತ್ಸವವನ್ನು ಅರಮನೆ ಮೈದಾನ ಅಥವಾ ಹೊರಾಂಗಣ ಮೈದಾನದಲ್ಲಿ ಜೂ.27ರಂದು ನಡೆಸಲು ತೀರ್ಮಾನಿಸಲಾಗಿದೆ. ಹುಲಿಯೂರುದುರ್ಗ, ಮಾಗಡಿ, ಆವತಿ ಸೇರಿದಂತೆ ಬೆಂಗಳೂರಿನ ಎಲ್ಲಾ ದಿಕ್ಕುಗಳಿಂದ ಪ್ರತಿವರ್ಷದಂತೆ ಗೋಪುರ ಮತ್ತು ಜ್ಯೋತಿಗಳ ಮೆರವಣಿಗೆ…
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರದ ರಕ್ಷಣೆಗಾಗಿ ನಿಯೋಜಿಸಲಾಗಿದ್ದ ಎಸ್ ಎಸ್ ಎಫ್ ಜವಾನನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎನ್ನಲಾಗಿದೆ. ಬುಧವಾರ ಮುಂಜಾನೆ 5:25 ಕ್ಕೆ ಈ ಘಟನೆ ನಡೆದಿದೆ. ಮೃತ ಸೈನಿಕನ ಹೆಸರು ಶತ್ರುಘ್ನ ವಿಶ್ವಕರ್ಮ ಎನ್ನಲಾಗಿದೆ . ಅಯೋಧ್ಯೆ ಆವರಣದಲ್ಲಿ ಗುಂಡಿನ ಸದ್ದು ಕೇಳಿದ ಬಳಿಕ ಸಹ ಸಿಬ್ಬಂದಿ ಅಲ್ಲಿಗೆ ಓಡೋಡಿ ಬಂದಿದ್ದಾರೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಆತನನ್ನು ನೋಡಿದ ಇತರ ಸೈನಿಕರು ಆಸ್ಪತ್ರೆಗೆ ಕರೆದುಕೊಂಡು ಹೋದರು . ಆದರೆ ಅಲ್ಲಿನ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು ಎನ್ನಲಾಗಿದೆ. ಘಟನ ಸ್ಥಳಕ್ಕೆ ವಿಧಿವಿಜ್ಞಾನ ತಂಡವೂ ಸ್ಥಳಕ್ಕೆ ತಲುಪಿ ತನಿಖೆ ನಡೆಸಿತು. ಪ್ರಾಥಮಿಕ ತನಿಖೆಯಲ್ಲಿ ಇದನ್ನು ಆತ್ಮಹತ್ಯೆ ಪ್ರಕರಣವೆಂದು ಪರಿಗಣಿಸಲಾಗುತ್ತಿದೆ. ಈಗ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿಯ ನಂತರ ಸಾವಿಗೆ ನಿಖರ ಕಾರಣ ಸ್ಪಷ್ಟವಾಗಲಿದೆ ಎನ್ನಲಾಗಿದೆ. ದೇವಸ್ಥಾನದ ಭದ್ರತೆಗಾಗಿ ಯೋಗಿ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಎಸ್ಎಸ್ಎಫ್ ಪಡೆಯನ್ನು ರಚಿಸಿತ್ತು. ಘಟನೆಗೂ ಮುನ್ನ ಶತ್ರುಘ್ನ ಮೊಬೈಲ್ ನೋಡುತ್ತಿದ್ದ ಎಂದು…
ನವದೆಹಲಿ:ರಾಷ್ಟ್ರ ರಾಜಧಾನಿಯಲ್ಲಿ ಕಳೆದ 72 ಗಂಟೆಗಳ ಅವಧಿಯಲ್ಲಿ ಉಷ್ಣಮಾರುತಕ್ಕೆ ಕನಿಷ್ಠ ಐದು ಮಂದಿ ಬಲಿಯಾಗಿದ್ದಾರೆ. ಈ ಐದು ಮಂದಿ ಬಿಸಿಲ ಹೊಡೆತಕ್ಕೆ ಅಸ್ವಸ್ಥರಾಗಿ ಮೂರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ. ಜೂನ್ 17ರಂದು ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಾಗಿದ್ದ 50 ವರ್ಷದ ವ್ಯಕ್ತಿ ಮಂಗಳವಾರ ಮುಂಜಾನೆ ಕೊನೆಯುಸಿರೆಳೆದಿದ್ದು, ಅದೇ ದಿನ ಆಸ್ಪತ್ರೆಗೆ ದಾಖಲಾಗಿದ್ದ 60 ವರ್ಷದ ಮಹಿಳೆ ಕೂಡಾ ಮಂಗಳವಾರ ಮೃತಪಟ್ಟಿದ್ದಾರೆ. 40 ವರ್ಷದ ಮಹಿಳಾ ಕೂಲಿ ಕಾರ್ಮಿಕೆ ಮತ್ತು 60 ವರ್ಷ ವಯಸ್ಸಿನ ಭದ್ರತಾ ಸಿಬ್ಬಂದಿ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಅಸು ನೀಗಿದ್ದಾರೆ. ಮಹಿಳೆ ಸೋಮವಾರ ಹಾಗೂ ಪುರುಷ ಮಂಗಳವಾರ ಸಂಜೆ ಮೃತಪಟ್ಟಿದ್ದಾರೆ. ಲೋಕನಾಯಕ ಆಸ್ಪತ್ರೆಯಲ್ಲಿ ಮತ್ತೊಂದು ಸಾವು ಸಂಭವಿಸಿದೆ. 39 ವರ್ಷ ವಯಸ್ಸಿನ ಜನಕಪುರಿಯ ಕಾರು ಮೆಕ್ಯಾನಿಕ್ ಜೂನ್ 15ರಂದು 106 ಡಿಗ್ರಿ ಫ್ಯಾರನ್ಹೀಟ್ ತಾಪಮಾನದೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದರು. ಮರುದಿನ ಅವರು ಕೊನೆಯುಸಿರೆಳೆದರು. ಈ ವರ್ಷದ ಅತ್ಯಧಿಕ ಕನಿಷ್ಠ ತಾಪಮಾನ 33.8 ಡಿಗ್ರಿ ಸೆಲ್ಷಿಯಸ್ ಮಂಗಳವಾರ…
ಅಪ್ರಾಪ್ತೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಪಾಲಾಗಿರುವ ಆರೋಪಿಗೆ ಸಂತ್ರಸ್ತೆಯನ್ನೇ ಮದುವೆಯಾಗಲು ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್ ಅಪರೂಪದ ಆದೇಶ ಹೊರಡಿಸಿದೆ. ಆರೋಪಿಯ ಲೈಂಗಿಕ ಸಂಪರ್ಕದಿಂದ ಸಂತ್ರಸ್ತೆಗೆ ಮಗು ಜನಿಸಿದೆ. ಸಂತ್ರಸ್ತೆಗೆ ಸದ್ಯ 18 ವರ್ಷ. ಈ ಹಿಂದೆ ಏನೆಲ್ಲಾ ಘಟನೆಗಳು ನಡೆದಿವೆ ಎನ್ನುವುದು ಮಗುವಿಗೆ ತಿಳಿದಿಲ್ಲ. ಮಗು ಮತ್ತು ಸಂತ್ರಸ್ತೆಯ ಹಿತ ರಕ್ಷಿಸಬೇಕಿದೆ. ಮಗು ಭವಿಷ್ಯದಲ್ಲಿ ಯಾವುದೇ ರೀತಿಯಲ್ಲಿ ಅವಮಾನಕ್ಕೆ ಗುರಿಯಾಗಬಾರದು ಎಂದು ಹೈಕೋರ್ಟ್ ಮೇಲಿನ ಆದೇಶ ಹೊರಡಿಸಿದೆ. ಪೋಕ್ಸೋ ಕಾಯ್ದೆಯಡಿ ತನ್ನ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ರದ್ದುಪಡಿಸಲು ಕೋರಿ ಆರೋಪಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ, ಸಂತ್ರಸ್ತೆಯನ್ನು ಮದುವೆಯಾಗಲು ಜೂ.17ರಿಂದ ಅನ್ವಯವಾಗುವಂತೆ ಜು.3ರವರೆಗೆ ಆರೋಪಿಯನ್ನು ಮಧ್ಯಂತರ ಜಾಮೀನು ಮೇಲೆ ಬಿಡುಗಡೆ ಮಾಡಬೇಕು ಎಂದು ಆದೇಶಿಸಿದೆ. ಸಂತ್ರಸ್ತೆಯನ್ನು ಮದುವೆಯಾಗಿ ಜು.3ರ ಸಂಜೆ ಹಿಂದಿರುಗಬೇಕು. ಜು.4ರಂದು ವಿವಾಹ ನೋಂದಣಿ ಪತ್ರವನ್ನು ಕೋರ್ಟ್ಗೆ ಸಲ್ಲಿಸಬೇಕು. ಜಾಮೀನು ಮೇಲೆ ಹೊರಗಿರುವ ಸಮಯದಲ್ಲಿ ಆರೋಪಿ ಸಂಬಂಧಪಟ್ಟ ಪೊಲೀಸ್…
ಕಳಸ: ಮೂಡಿಗೆರೆ ತಾಲ್ಲೂಕಿನ ವಿವಿಧ ಭಾಗದಲ್ಲಿ ಇಬ್ಬರು ನೀರಿನಲ್ಲಿ ಮುಳುಗಿ ಸಾವಪ್ಪಿರುವ ಘಟನೆ ನಡೆದಿದೆ. ಕಳಸ ಪಟ್ಟಣ ಸಮೀಪದ ಅಂಬಾತೀರ್ಥದ ಭದ್ರಾ ನದಿಯಲ್ಲಿ ಮಧ್ಯಪ್ರದೇಶದ ಕೂಲಿ ಕಾರ್ಮಿಕರೊಬ್ಬರು ಮುಳುಗಿ ಮೃತಪಟ್ಟಿದ್ದಾರೆ. ಸುಂದರಿ ಎಸ್ಟೇಟಿನಲ್ಲಿ ಕೆಲಸ ಮಾಡುತ್ತಿದ್ದ ಸಾಗರ ತಮ್ಮ ಸ್ನೇಹಿತನ ಜೊತೆ ನದಿಯಲ್ಲಿ ಸ್ನಾನ ಮಾಡಲು ಇಳಿದಾಗ ಅವಘಡ ಸಂಭವಿಸಿದೆ. ಆಳವಾದ ಪ್ರದೇಶದಲ್ಲಿ ಮುಳುಗಿದ್ದ ಅವರ ಮೃತದೇಹ ಇನ್ನೂ ಪತ್ತೆ ಆಗಿರಲಿಲ್ಲ. ನಂತರ ಮುಳುಗು ತಜ್ಞ ಈಶ್ವರ್ ಮಲ್ಪೆ ಮೃತದೇಹವನ್ನು ಪತ್ತೆ ಮಾಡಿದರು. ಶೌರ್ಯ ವಿಪತ್ತು ತಂಡದ ಸದಸ್ಯರು ಮೃತದೇಹವನ್ನು ನೀರಿನಿಂದ ಮೇಲೆತ್ತಲು ಸಹಕಾರ ನೀಡಿದರು. ಈಜಲು ಹೋಗಿ ಮೃತ: ಆಲ್ದೂರು ಸಮೀಪದ ವಗರ್ ರಸ್ತೆ ದೋಣಗುಡಿಗೆ ಗ್ರಾಮದ ಬಾಬು ಅಕ್ಕಮ್ಮ ದಂಪತಿ ಪುತ್ರ ಪೂರ್ಣೇಶ್ ಮನೆಯ ಸಮೀಪದ ಕೃಷಿಹೊಂಡದಲ್ಲಿ ಈಜಲು ಹೋಗಿ ಮೃತಪಟ್ಟಿದ್ದಾನೆ. ಮೂಡಿಗೆರೆ ತಾಲ್ಲೂಕು ಹೆಸಗಲ್ ವಲಯ ಶೌರ್ಯ ವಿಪತ್ತು ನಿರ್ವಹಣಾ ತಂಡದ ಈಜು ತಜ್ಞರಾದ ಹಾಂದಿ ರಾಕೇಶ್, ಪ್ರಶಾಂತ್, ಅಭಿಲಾಶ್ ಯುವಕನ ಮೃತದೇಹವನ್ನು ಕೃಷಿ ಹೊಂಡದಿಂದ ಹೊರತೆಗೆಯಲು…
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿದ್ದು, ಇದೀಗ ದರ್ಶನ್ ವಿರುದ್ಧ ನಿರ್ಮಾಪಕ ಉಮಾಪತಿ ಗೌಡ ಟೀಕೆ ಮಾಡಿದ್ದಾರೆ. ಉಮಾಪತಿ ಗೌಡ ನಟ ದರ್ಶನ್ ವಿರುದ್ಧ ಮೊದಲಿನಿಂದಲೂ ಕಿಡಿಕಾರುತ್ತಲೇ ಬಂದಿದ್ದು, ಇದೀಗ ಮತ್ತೊಮ್ಮೆ, ನಟನ ವಿರುದ್ಧ ಟೀಕೆ ಮಾಡಿದ್ದಾರೆ. ಉಮಾಪತಿ ಅವರು ಮಾಡಿದ ಪಾಪ ಕರ್ಮಗಳು ಅವರನ್ನೇ ಕಿತ್ತು ತಿನ್ನುತ್ತಿದೆ ಎಂದು ಹೇಳಿದ್ದಾರೆ. ನಾನು ದರ್ಶನ್ ಅವರಿಂದ ದೂರಾಗಿದ್ದು ಒಳ್ಳೆಯದ್ದೇ ಆಯಿತು. ಭಗವಂತ ನನ್ನನ್ನು ಕಾಪಾಡಿದ. ವ್ಯಕ್ತಿ ಬೆಳೆಯಬೇಕಾದ್ರೆ, ಗುರು ಮತ್ತು ಗುರಿ ಇರಬೇಕು. ಇಲ್ಲ ಅಂದ್ರೆ ಈ ರೀತಿ ಆಗುತ್ತದೆ. ಇನ್ನು ಕೋಟಿ ಆಸ್ತಿ, ಬೆಲೆ ಬಾಳುವ ಕಾರು, ಮನೆ ಇದ್ಯಾವುದು ಲೆಕ್ಕಕ್ಕೆ ಬರೋದಿಲ್ಲ, ದೇಹದಲ್ಲಿ ರೋಗ ಇದ್ರೆ ಏನು ಪ್ರಯೋಜನ. ದರ್ಶನ್ ಗೆ ಸ್ವಲ್ಪ ಕೋಪ ಜಾಸ್ತಿ ಎಂದು ಉಮಾಪತಿ ಗೌಡ ಹೇಳಿದ್ದಾರೆ. ದರ್ಶನ್ ಮಾಡಿರೋದು ಅಪರಾಧ. ಕಾನೂನಿನಲ್ಲಿ ಏನಾಗುತ್ತೋ ಆಗಲಿ. ರೇಣುಕಾ ಸ್ವಾಮಿ ಕುಟುಂಬದ ಜತೆ ನಾನು ನಿಲ್ಲುತ್ತೇನೆ. ದರ್ಶನ್ ರಿಂದ ಇದುವರೆಗೂ ಶೋಷಣೆಗೆ ಒಳಗಾದವರು ಹಲವರು…
ತುಮಕೂರು: ಬೇರೆ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಹೆಚ್ಚಿನ ತೆರಿಗೆ ವಿಧಿಸಲಾಗುತ್ತಿದೆ ಎಂದು ಪ್ರಸ್ತುತ ಬೆಲೆ ಏರಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿರುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠಕ್ಕೆ ಆಗಮಿಸಿ ಶ್ರೀ ಶಿವಕುಮಾರ ಸ್ವಾಮೀಜಿಯವರ ದರ್ಶನ ಪಡೆದರು ನಂತರ ಶ್ರೀ ಸಿದ್ದಲಿಂಗ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು. ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪೆಟ್ರೋಲ್ ಡೀಸೆಲ್ ದರ ಏರಿಕೆ, ವಿದ್ಯುತ್ ದರ ಏರಿಕೆ, ಸ್ಟ್ಯಾಂಪ್ ಡ್ಯೂಟಿ ದರ ಏರಿಕೆ ಆರ್ಥಿಕ ಸಂಪನ್ಮೂಲವನ್ನು ಕ್ರೂಡೀಕರಿಸಲಾಗಿದ್ದು ಅದೆಲ್ಲವನ್ನು ಯಾವ ರೀತಿ ಬಳಸಿಕೊಳ್ಳುತ್ತಿದೆ, ಇನ್ನೊಂದೆಡೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಹಣ ವರ್ಗಾವಣೆ ಮಾಡಿಸಿ ಅದನ್ನು ಲೋಕಸಭಾ ಚುನಾವಣೆಗೆ ಬಳಸಿಕೊಳ್ಳಲಾಗಿದೆ. ಇದರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆತ್ಮವಲೋಕನ ಮಾಡಿಕೊಳ್ಳಬೇಕಿದೆ ಎಂದು ಹೇಳಿದರು. ತೈಲಬೆಲೆ ಏರಿಕೆ ಒಂದು ರೀತಿ ರೈತ ಸಮುದಾಯದ ಮೇಲೆ ಪರೋಕ್ಷ ಪರಿಣಾಮ ಬೀರುತ್ತಿದೆ.…
ಅಂಧ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 10 ವರ್ಷಗಳ ಕಠಿಣ ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ಮೈಸೂರಿನ 7ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಹುಣಸೂರು ತಾಲ್ಲೂಕು ಬಿಳಿಕೆರೆ ಹೋಬಳಿ ಕೊಮ್ಮೆಗೌಡನ ಕೊಪ್ಪಲು ಗ್ರಾಮದ ವಾಸಿ 50 ವರ್ಷದ ಚಲುವರಾಜು ಬಿನ್ ಸೀನೇಗೌಡ ಶಿಕ್ಷೆಗೆ ಗುರಿಯಾದ ಆರೋಪಿ. 16-08-2019 ರಂದು ಪ್ರಕರಣದ ಸಂತ್ರಸ್ತ ಅಂಧ ಮಹಿಳೆಯು ಮನೆಯಲ್ಲಿ ಒಬ್ಬಳೇ ವಾಸವಿದ್ದಾಗ ಆರೋಪಿ ಚಲುವರಾಜು ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಅಪರಾಧ ಮಾಡುವ ಉದ್ದೇಶದಿಂದ ಸಂತ್ರಸ್ತ ಮಹಿಳೆಯ ಮನೆಗೆ ಅತಿಕ್ರಮ ಪ್ರವೇಶ ಮಾಡಿ ಸಂತ್ರಸ್ತೆ ಮಹಿಳೆಯ ಬಾಯಿಗೆ ಬಟ್ಟೆ ತುರುಕಿ, ಕತ್ತನ್ನು ಹಿಸುಕಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ(ಅತ್ಯಾಚಾರ)ವೆಸಗಿದ್ದನು. ನಂತರ ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ನಿನ್ನನ್ನು ಮುಗಿಸುತ್ತೇನೆಂದು ಕೊಲೆ ಬೆದರಿಕೆ ಹಾಕಿದ್ದ. ಈ ಬಗ್ಗೆ ಸಂತ್ರಸ್ತೆಯ ಅತ್ತಿಗೆ ದೂರು ದಾಖಲಿಸಿದ್ದ ಹಿನ್ನೆಲೆಯಲ್ಲಿ ಬಿಳಿಕೆರೆ ಪೊಲೀಸ್ ಠಾಣೆಯ ಅಂದಿನ ವೃತ್ತ…
ತುಮಕೂರು: ಚಲಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ತಿಪಟೂರು ರೈಲ್ವೆ ನಿಲ್ದಾಣದಲ್ಲಿ ಮಂಗಳವಾರ ನಡೆದಿದೆ. ತಿಪಟೂರಿನ ಕಲ್ಪತರು ಕಾಲೇಜಿನಲ್ಲಿ ಎರಡನೇ ವರ್ಷದ ಬಿಎ ಓದುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಯುವತಿ ಸಾವಿಗೆ ಶರಣಾಗಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ದೇವರಹಳ್ಳಿ ಗ್ರಾಮದ ಸುರೇಶ್ ಎಂಬುವವರ ಪುತ್ರಿ ವರ್ಷಿಣಿ (19), ಮೃತ ವಿದ್ಯಾರ್ಥಿನಿ. ತಿಪಟೂರಿನ ಕಲ್ಪತರು ಕಾಲೇಜಿನಲ್ಲಿ ಎರಡನೇ ವರ್ಷದ ಬಿಎ ಓದುತ್ತಿದ್ದ ವಿದ್ಯಾರ್ಥಿನಿ, ಕಾಲೇಜಿಗೆ ಪ್ರತಿದಿನ ಊರಿನಿಂದ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದಳು. ಇಂದು ಕಾಲೇಜು ಮುಗಿಸಿ ಮನೆಗೆ ತೆರಳುವಾಗ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವರ್ಷಿಣಿಗೆ ಆರೋಗ್ಯ ಸಮಸ್ಯೆ ಇತ್ತು ಎಂದು ಹೇಳಲಾಗುತ್ತಿದ್ದು, ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅರಸೀಕೆರೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹ ತಿಪಟೂರು ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು. ಘಟನೆ ಸಂಬಂಧ ಅರಸೀಕೆರೆ…