Subscribe to Updates
Get the latest creative news from FooBar about art, design and business.
- ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
- ತಿಪಟೂರು: ಜೂನ್ 1ರಿಂದ ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
- ತುಮಕೂರು: ವಾಟರ್ ಟ್ಯಾಂಕ್ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು, ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
- ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
- ತುರುವೇಕೆರೆ: ಜೂ. 4ರಂದು ಉಚಿತ ಯೋಗ, ಪ್ರಾಣಾಯಾಮ ತರಗತಿಗಳ ಉದ್ಘಾಟನೆ
- ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
- ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ
Author: admin
ಬಿಹಾರದ ಬಂಕಾದಲ್ಲಿ ವಿದ್ಯಾರ್ಥಿಗಳಿಗೆ ಬಡಿಸಿದ್ದ ಊಟದ ತಟ್ಟೆಯಲ್ಲಿ ಸತ್ತ ಹಾವು ಪತ್ತೆಯಾದ ಘಟನೆ ಜರುಗಿದೆ. ಬಿಹಾರದ ಬಂಕಾದ ಸರ್ಕಾರಿ ಕಾಲೇಜಿನ ವಿದ್ಯಾರ್ಥಿ ರಿಷಿ ಸಿಂಗ್ ಕಾಲೇಜಿನ ಅವ್ಯವಸ್ಥೆಯಿಂದ ಹಿಡಿದು ಕಳಪೆ ಗುಣಮಟ್ಟದ ಆಹಾರವನ್ನು ನೀಡುತ್ತಿರುವ ವಿಚಾರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಬಯಲು ಮಾಡಿದ್ದಾನೆ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಊಟದಲ್ಲಿ ಸತ್ತ ಹಾವು ಇತ್ತು ಎಂದು ತನ್ನ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಬರೆದಿದ್ದಾನೆ. ಆ ಆಹಾರವನ್ನು ಸೇವಿಸಿದ ವಿದ್ಯಾರ್ಥಿಗಳು ಅನಾರೋಗ್ಯಕ್ಕೀಡಾಗಿದ್ದರು ಎಂಬುದಾಗಿ ತಿಳಿಸಿದ್ದಾನೆ. ಇದಕ್ಕೆ ಸಂಬಂಧಿಸಿದ ಪೋಟೊಗಳನ್ನು ಪೋಸ್ಟ್ ಮಾಡಿದ್ದಾನೆ. ಹಾಗೇ ಮತ್ತೊಂದು ಪೋಸ್ಟ್ ನಲ್ಲಿ ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಬ್ರೆಡ್ನ ಬಗ್ಗೆ ತಿಳಿಸಿದ್ದಾನೆ. ಬ್ರೆಡ್ ಗೆ ಅವಧಿ ಮೀರಿದ ಕಾರಣ ಅದರಲ್ಲಿ ಇರುವೆ, ಹುಳುಗಳು ಇವೆ. ಅದನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಇದು ವಿದ್ಯಾರ್ಥಿಗಳ ಆರೋಗ್ಯವನ್ನು ಹಾಳುಮಾಡುತ್ತದೆ ಎಂದು ಅದಕ್ಕೆ ಸಂಬಂಧಪಟ್ಟ ವಿಡಿಯೊ ತುಣುಕೊಂದನ್ನು ಪೋಸ್ಟ್ ಮಾಡಿದ್ದಾನೆ. ಅಲ್ಲದೇ ಇದರ ಕುರಿತು ಕ್ರಮ ತೆಗೆದುಕೊಳ್ಳಲು ಕಾಲೇಜು ಆಡಳಿತ ಮತ್ತು ಸ್ಥಳೀಯ…
ಡಿಬಾಸ್ ಜೈಲಿಂದ ಹೊರಗಡೆ ಬಂದಿಲ್ಲಾಂದ್ರೆ ನನ್ ಬದುಕಿರೋಲ್ಲ ಎಂದು ಹೇಳುವ ಮೂಲಕ ದರ್ಶನ್ ಅಭಿಮಾನಿ ಹುಚ್ಚಾಟ ಮೆರೆದಿದ್ದಾನೆ. ದರ್ಶನ್ ರನ್ನು ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿದ್ದು, ಈ ಸುದ್ದಿ ಫ್ಯಾನ್ಸ್ ಗಳಿಗೆ ದೊಡ್ಡ ಶಾಕ್ ನೀಡಿದೆ. ದರ್ಶನ್ ಕೊಲೆ ಆರೋಪಿಯಾಗಿದ್ದರೂ ಕೆಲವು ಹುಚ್ಚು ಅಭಿಮಾನಿಗಳು ನಮ್ ಡಿ ಬಾಸ್ ಯಾವುದೇ ತಪ್ಪು ಮಾಡಿಲ್ಲ. ನಮ್ಮ ಸಪೋರ್ಟ್ ಯಾವತ್ತಿದ್ರೂ ಅವರಿಗೆ ಎಂದೆಲ್ಲಾ ಹೇಳ್ತಿದ್ದಾರೆ. ಈ ನಡುವೆ ಇಲ್ಲೊಬ್ಬ ಅಂಧಾಭಿಮಾನಿ ಡಿ ಬಾಸ್ ಏನಾದ್ರೂ ಜೈಲಿಂದ ಹೊರಗಡೆ ಬಂದಿಲ್ಲಾಂದ್ರೆ ನಾನು ಬದುಕಿರೋಲ್ಲ, ಎಲ್ಲಾದ್ರೂ ಹೋಗಿ ಸಾಯ್ತೀನಿ ಅಂತ ಹುಚ್ಚು ಮಾತುಗಳನ್ನಾಡಿದ್ದಾನೆ. ಈ ಕುರಿತ ವಿಡಿಯೋವೊಂದು ಇದೀಗ ಸಖತ್ ವೈರಲ್ ಆಗುತ್ತಿದೆ. ವಿಡಿಯೋವನ್ನು ʼಕರ್ನಾಟಕ ನ್ಯಾಯ ಬೆಲೆ ಅಂಗಡಿʼ ಎಂಬ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್ ವಿಡಿಯೋದಲ್ಲಿ ನಟ ದರ್ಶನ್ ಬಂಧನಕ್ಕೊಳಗಾದ ಆಘಾತದಲ್ಲಿ ಅಭಿಮಾನಿಯೊಬ್ಬ ನಾನು ಇನ್ಮೇಲೆ ಬದುಕಿರೋಕೆ ಚಾನ್ಸೇ ಇಲ್ಲ. ಡಿ ಬಾಸ್ ಹೊರಗಡೆ ಬಂದಿಲ್ಲಾ ಅಂದ್ರೆ ನನ್ ಹೆಣ ಕೂಡಾ ಸಿಗೋಲ್ಲ, ಎಲ್ಲೋ ಮೂಲೆಗೆ…
ಇತ್ತೀಚೆಗಷ್ಟೇ ಕಾರು ಕಲಿತಿದ್ದ ಯುವತಿ, ಕಾರು ಚಲಾಯಿಸುತ್ತಾ ರಿವರ್ಸ್ ಗೇರ್ ನಲ್ಲಿದ್ದಾಗ ಎಕ್ಸಲೇಟರ್ ಒತ್ತಿದ್ದಾಳೆ, ಪರಿಣಾಮ ಕಾರು ಕಂದಕಕ್ಕೆ ಬಿದ್ದು ಆಕೆ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಛತ್ರಿಪತಿ ಸಂಭಾಜಿನಗರದಲ್ಲಿ 23 ವರ್ಷದ ಯುವತಿ ರಿವರ್ಸ್ ಗೇರ್ ನಲ್ಲಿ ಎಕ್ಸಲೇಟರ್ ಒತ್ತಿದ ಕಾರಣ ಕಾರು ಹಿಂಬದಿಯ ಕ್ರ್ಯಾಶ್ ಬ್ಯಾರಿಯರ್ ಅನ್ನು ಮುರಿದು ಕಂದಕಕ್ಕೆ ಬಿದ್ದಿದೆ. ಸುಲಿಭಂಜನ್ ಪ್ರದೇಶದಲ್ಲಿ ಜೂ.17ರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಯುವತಿಯನ್ನು ಶ್ವೇತಾ ಸುರ್ವಾಸೆ ಎಂದು ಗುರುತಿಸಲಾಗಿದೆ. ಸ್ನೇಹಿತ ಶಿವರಾಜ್ ಮುಳೆ ಕಾರಿನಲ್ಲಿ ಸಂಭಾಜಿನಗರದಿಂದ ದತ್ ಮಂದಿರ ಪ್ರದೇಶಕ್ಕೆ ಬಂದಿದ್ದರು. ಶಿವರಾಜ್ ಇತ್ತೀಚೆಗಷ್ಟೇ ಶ್ವೇತಾಳಿಗೆ ಕಾರು ಓಡಿಸಲು ಕಲಿಸಿದ್ದ ಎನ್ನಲಾಗಿದೆ. ಶ್ವೇತಾಗೆ ಕಾರು ಓಡಿಸುವಾಗ (reels)ರೀಲ್ ಗಳನ್ನು ತಯಾರಿಸುವ ಆಸೆ ಇತ್ತು. ಮೊಬೈಲನ್ನು ಶಿವರಾಜ್ ಗೆ ಕೊಟ್ಟು ತನ್ನ ರೀಲ್ಸ್ ಮಾಡುವಂತೆ ಕೇಳಿದ್ದಳು. ಇದ್ದಕ್ಕಿದ್ದಂತೆ ಕಾರು ರಿವರ್ಸ್ ಗೇರ್ನಲ್ಲಿ ಚಲಿಸಲು ಪ್ರಾರಂಭಿಸಿತು ಮತ್ತು ಶ್ವೇತಾ ಏನು ಮಾಡಬೇಕೆಂದು ತೋಚದೆ ಮತ್ತೆ ಎಕ್ಸಲೇಟರ್ ಅನ್ನು ಒತ್ತಿದ್ದಾಳೆ. ನಿಯಂತ್ರಣ…
ಇತ್ತೀಚೆಗೆ ಪ್ರೀತಿಸಿದ ಯುವತಿ ಸಿಗಲಿಲ್ಲ ಎನ್ನುವ ಕಾರಣಕ್ಕೆ ಕೊಡುಗು ಮತ್ತು ಹುಬ್ಬಳ್ಳಿಯಲ್ಲಿ ಭೀಕರ ಕೊಲೆ ಪ್ರಕರಣ ನಡೆದಿತ್ತು. ಅಂತಹದ್ದೇ ವಿಕೃತ ಕೊಲೆ ಪ್ರಕರಣ ಮತ್ತೆ ನಡೆದಿದೆ. ವ್ಯಕ್ತಿಯೊಬ್ಬ ಲವ್ ಬ್ರೇಕಪ್ ಎಂದಿದ್ದಕ್ಕೆ ಪ್ರೇಯಸಿಯನ್ನು ನಡು ರಸ್ತೆಯಲ್ಲಿಯೇ ಸ್ಪ್ಯಾನರ್ನಿಂದ ಹೊಡೆದು ಕೊಲೆ ಮಾಡಿದ ಘಟನೆ ಮುಂಬೈನಲ್ಲಿ ನಡೆದಿದೆ. ಈ ಕೃತ್ಯದ ಭೀಕರ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಮುಂಬೈ ಬಳಿಯ ವಸಾಯ್ ಪ್ರದೇಶದ ರಸ್ತೆಯೊಂದರಲ್ಲಿ 20 ವರ್ಷದ ಆರತಿ ಯಾದವ್ ನಡೆದುಕೊಂಡು ಹೋಗುತ್ತಿರುತ್ತಾರೆ. ಆಗ 29 ವರ್ಷದ ರೋಹಿತ್ ಯಾದವ್ ಎಂಬಾತ ಸ್ಪ್ಯಾನರ್ ಹಿಡಿದುಕೊಂಡೇ ಓಡಿ ಬಂದು ಯುವತಿ ಮೇಲೆ ದಾಳಿ ಮಾಡಿದ್ದಾನೆ. ಯುವತಿ ತಲೆಗೆ, ಎದೆಗೆ ಸ್ಪ್ಯಾನರ್ ನಿಂದ ಹೊಡೆದು, ಆಕೆ ನೆಲಕ್ಕೆ ಬಿದ್ದ ಮೇಲೆ ಒದ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಇದೇ ವೇಳೆ ಒಂದಿಬ್ಬರು ವ್ಯಕ್ತಿಯನ್ನು ತಡೆಯಲು ಪ್ರಯತ್ನಿಸಿದರೂ ಅಷ್ಟೊತ್ತಿಗಾಗಲೇ ಗಂಭೀರವಾಗಿ ಗಾಯಗೊಂಡಿದ್ದ ಆರತಿ ಮೃತಪಟ್ಟಿದ್ದಾರೆ, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ. ನಮ್ಮತುಮಕೂರಿನ ಕ್ಷಣ…
ಕೋಡಿ ಮಠದ ಡಾ.ಶಿವಾನಂದ ಶಿವಯೋಗಿ ಮಹಾ ಸ್ವಾಮೀಜಿಗಳು ನಟ ದರ್ಶನ್, ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ, ರಾಜ್ಯದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಾಗೂ ಮಳೆ–ಬೆಳೆ ಬಗ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಈಗ ದೇಶದಲ್ಲಿ ಕ್ರೋಧಿ ನಾಮ ಸಂವತ್ಸರ ಇದೆ. ಶುಭಗಳಿಗಿಂತ ಅಶುಭಗಳೇ ಹೆಚ್ಚಾಗಿ ನಡೆಯುತ್ತವೆ. ದೇಶದಲ್ಲಿ ಜಲಕಂಟಕ, ಅಗ್ನಿಕಂಟಕ, ವಾಯು ಕಂಟಕಗಳು ಹೆಚ್ಚಾಗಲಿವೆ. ರಾಜ್ಯದಲ್ಲಿ ಈ ಬಾರಿ ಅತಿವೃಷ್ಟಿ ಸಾಧ್ಯತೆ ಇದೆ ಎಂದು ಕೋಡಿಮಠದ ಶ್ರೀಗಳಾದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರು (Kodi Mutt Swamiji) ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಗುರುಗಳು ಶಿಷ್ಯರಾಗುತ್ತಾರೆ, ಶಿಷ್ಯರು ಗುರುಗಳಾಗುತ್ತಾರೆ. ಹೆಣ್ಣು ಮಕ್ಕಳ ಪ್ರಾಬಲ್ಯ ಹೆಚ್ಚಾಗಲಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದೇ ಆಪತ್ತು ಇರುವುದಿಲ್ಲ. ಶ್ರಾವಣದಲ್ಲಿ ನಾನು ಮತ್ತೊಂದು ಸ್ಫೋಟಕ ಭವಿಷ್ಯ ಹೇಳುತ್ತೇನೆ. ಕೇಂದ್ರ ಸರ್ಕಾರ ಹಾಗೂ ಮೋದಿ ಅವರ ಬಗ್ಗೆ ಶ್ರಾವಣದಲ್ಲಿ ಮಾತನಾಡುತ್ತೇನೆ ಎಂದಿದ್ದಾರೆ. ಕೋಪದ ಕೈಗೆ ಬುದ್ಧಿ ಕೊಟ್ಟರೆ ಈ ರೀತಿಯ ಅವಗಡಗಳು ಸಂಭವಿಸುತ್ತವೆ. ಕರೆಯದೆ ಬರುವವನು ಕೋಪ,…
ತುಮಕೂರು: ಚಿನ್ನೆನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಇಬ್ಬರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನೆನಹಳ್ಳಿ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಸಹಕಾರ ಸಚಿವ ಕೆಎನ್ ರಾಜಣ್ಣ ಭೇಟಿ ನೀಡಿ ಗ್ರಾಮದಲ್ಲಿ ಪರಿಶೀಲನೆ ನಡೆಸಿದರು. ಅಧಿಕಾರಿಗಳೊಂದಿಗೆ ಮಾಹಿತಿ ಪಡೆದ ಸಚಿವ ಪರಮೇಶ್ವರ್ ಹಾಗೂ ಕೆ.ಎನ್. ರಾಜಣ್ಣ ಅವರಿಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಓ ಪ್ರಭು, ಎಸ್ ಪಿ ಅಶೋಕ್ ಕೆವಿ ಸೇರಿದಂತೆ ಹಲವು ಅಧಿಕಾರಿಗಳು ಸಾಥ್ ನೀಡಿದರು. ಕಳೆದ ಭಾನುವಾರ ಚಿನ್ನೆನಹಳ್ಳಿ ಗ್ರಾಮದ ಜನರಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿತ್ತು. ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ರು, 250 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ರು. ಅಲ್ಲದೇ ಕಳೆದ ಎರಡು ದಿನಗಳ ಹಿಂದೆ ವಾಂತಿ ಭೇದಿ ಕಾಣಿಸಿಕೊಂಡಿದ್ದ ವ್ಯಕ್ತಿಯೊಬ್ಬರಿಗೆ ಕಾಲಾರಾ ಖಾಯಿಲೆ ಪತ್ತೆ ಆಗಿತ್ತು. ಈ ಹಿನ್ನೆಲೆ ಚಿನ್ನೆನಹಳ್ಳಿ ಗ್ರಾಮಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಲಾಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಕೊರಟಗೆರೆ: ಕರ್ನಾಟಕ ಸರ್ಕಾರದ ಅದೇಶದಂತೆ ಜೂನ್ 19ರಂದು ಕೊರಟಗೆರೆ ತಾಲ್ಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮನ್ನು ಆಯೋಜಿಸಲಾಗಿದೆ ಎಂದು ತಹಶೀಲ್ದಾರ್ ಮಂಜುನಾಥ್ ತಿಳಿಸಿದ್ದಾರೆ. ಅವರು ಪತ್ರಿಕಾ ಹೇಳಿಕೆ ನೀಡಿ, ಸರ್ಕಾರ ಸುತ್ತೋಲೆಯಂತೆ ಸಾರ್ವಜನಿಕರ ಕುಂದು ಕೊರತೆಗಳನ್ನು ಶೀಘ್ರವಾಗಿ ಪರಿಹರಿಸುವ ನಿಟ್ಟಿನಲ್ಲಿ ಜೂನ್ 2024 ರ ಮೊದಲವಾರದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮವು ನಡೆದಿದ್ದು, ಜೂನ್ ಕೊನೆಯ ವಾರಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮನ್ನು ಹಮ್ಮಿಕೊಂಡಿದ್ದು, ಈ ಸಂಬಂಧ ಸರ್ಕಾರದ ಸುತ್ತೋಲೆಯಂತೆ ಕೊರಟಗೆರೆ ತಾಲ್ಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಕೊರಟಗೆರೆ ಪಟ್ಟಣದ ಶ್ರೀ ಮಾರುತಿ ಕಲ್ಯಾಣಮಂಟಪದಲ್ಲಿ ಜೂನ್ 19 ಬುಧವಾರ ದಂದು ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ ಎಂದು ತಿಳಿಸಿದರು. ಈ ಕಾರ್ಯಕ್ರಮಕ್ಕೆ ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ಹಾಗೂ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳು ಜನರ ಅಹವಾಲುಗಳನ್ನು ಸ್ವೀಕರಿಸುವರು ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಹಾಜರಿರುವರು ಆದರಿಂದ ತಾಲ್ಲೂಕಿನ ಎಲ್ಲಾ ಸಾರ್ವಜನಿಕರು ತಮ್ಮ…
ರೇಣುಕಾಸ್ವಾಮಿ ಕೊಲೆ ಕೇಸ್ಗೆ ಸಂಬಂಧಪಟ್ಟಂತೆ ಅನ್ನಪೂರ್ಣೇಶ್ವರಿ ನಗರ ಠಾಣೆ ಕಸ್ಟಡಿಯಲ್ಲಿದ್ದ ಪವಿತ್ರಾ ಗೌಡ , ಅಸ್ವಸ್ಥಗೊಂಡಿದ್ದರಿಂದ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಅನ್ನಪೂರ್ಣೇಶ್ವರಿ ನಗರ ಠಾಣೆಗೆ ವೈದ್ಯರು ಬಂದಿದ್ದರು. ಆದರೆ, ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಹಿನ್ನೆಲೆಯಲ್ಲಿ ಪವಿತ್ರಾಗೌಡಳನ್ನು ಮಲ್ಲತ್ತಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಭಾನುವಾರ ಆರ್.ಆರ್.ನಗರ ಮನೆಯಲ್ಲಿ ದಿನವಿಡೀ ಪೊಲೀಸರು ಮಹಜರು ನಡೆಸಿದ್ದು, ಆ ಬಳಿಕ ಪವಿತ್ರಾ ಅವರು ಸುಸ್ತಾಗಿದ್ದರು. ಮಂಗಳವಾರ ಬೆಳಿಗ್ಗೆ ತೀವ್ರ ಆಯಾಸ ಎಂದ ಪವಿತ್ರ ಗೌಡ ಅವರನ್ನು ಪೊಲೀಸರು ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡರನ್ನು ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದೆ. ವಿಚಾರಣೆ ಸಮಯದಲ್ಲಿ ಅವರನ್ನು ಠಾಣೆಗೆ ಕರೆತಂದು ವಿಚಾರಣೆ ಮಾಡಲಾಗುತ್ತಿತ್ತು. ಇಂದು (ಜೂನ್ 18) ವಿಚಾರಣೆ ಸಮಯದಲ್ಲಿ ಪವಿತ್ರಾ ಗೌಡ ಅಸ್ವಸ್ಥಗೊಂಡಿದ್ದು, ಪೊಲೀಸರು ಕೂಡಲೇ ಠಾಣೆಗೆ ವೈದ್ಯರನ್ನು ಕರೆಸಿ ಪರಿಶೀಲಿಸಿದ ಬಳಿಕ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ನಾಗರಭಾವಿಯಲ್ಲಿರುವ ಮಲ್ಲತಹಳ್ಳಿ ಸರ್ಕಾರಿ ಆಸ್ಪತ್ರೆಗೆ ಪವಿತ್ರಾರನ್ನು ದಾಖಲು…
ಸರಗೂರು: ತಾಲ್ಲೂಕಿನ ಪಟ್ಟಣದ 7 ನೇ ವಾರ್ಡಿನ ಇರುವ ಸತ್ಯಪ್ಪ ಕೊಂಡೋತ್ಸವ ಗಾಣಿಗ ಸಮಾಜ ವತಿಯಿಂದ ಮಂಗಳವಾರ ದಂದು ವಿಜೃಂಭಣೆಯಿಂದ ಆಚರಿಸಲಾಯಿತು. ಕೊಂಡೋತ್ಸವದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಿತು. ಉತ್ಸವದ ಅಂಗವಾಗಿ ದೇವಾಲಯವನ್ನು ಸಿಂಗರಿಸಲಾಗಿತ್ತು. ಬೆಳಗ್ಗೆ ಮಡೆ ಸೇವೆ, ತಂಬಿಟ್ಟು ಆರತಿ ನಡೆಯಿತು. ನಂತರ ಕಬಿನಿ ಜಲಾಶಯದ ಹೊಳೆಯಲ್ಲಿ ವಾದ್ಯ ಮೇಳದೊಂದಿಗೆ ಸತ್ಯಪ್ಪ ವಿಗ್ರಹವನ್ನು ಕಬಿನಿ ಜಲಾಶಯದ ಹೊಳೆಯ ಬಳಿ ತೆಗೆದುಕೊಂಡು ಹೋಗಿ ಪೂಜೆ ಸಲ್ಲಿಸಿ, ಮೆರವಣಿಗೆ ಮೂಲಕ ದೇವಾಲಯಕ್ಕೆ ತರಲಾಯಿತು. ನಂತರ ಹರಕೆ ಹೊತ್ತವರ ಪೈಕಿ ನಾಲ್ವರು ಕೊಂಡ ಹಾಯುವ ಮೂಲಕ ಭಕ್ತಿ ಸಮರ್ಪಿಸಿದರು. ಪಟ್ಟಣದ ಎಲ್ಲಾ ವಾರ್ಡಿನ ಸಾವಿರಾರು ಭಕ್ತರು ಉತ್ಸವದಲ್ಲಿ ಭಾಗಿಯಾಗಿದ್ದರು. ಗ್ರಾಮದ ತುಂಬ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಎಲ್ಲೆಂದರಲ್ಲಿ ಭಕ್ತ ಸಮೂಹ ನೆರೆದಿತ್ತು. ಜಾತ್ರೆ ವಹಿವಾಟು ಜೋರಾಗಿತ್ತು. ಈ ಸಂದರ್ಭದಲ್ಲಿ ಗಾಣಿಗ ಸಮಾಜದ ಮುಖಂಡರು ವೆಂಕಟರಾಮು, ಶಿವಲಿಂಗ ಶೆಟ್ಟಿ, ಗುತ್ತಿಗೆದಾರ ಶಿವಣ್ಣ, ನಂಜುಂಡ, ಬಿಎಸ್ ಎನ್ ಎಲ್ ನಾಗರಾಜು, ಟೀ ಅಂಗಡಿ ವೆಂಕಟೇಶ್…
ತುರುವೇಕೆರೆ: ಕ್ಷೇತ್ರದ ಕಲ್ಲೂರು ಗ್ರಾಮದಲ್ಲಿ ನಾಯಿಗಳ ದಾಳಿ ಹೆಚ್ಚಾಗಿದ್ದು ಗ್ರಾಮದಲ್ಲಿ 500ಕ್ಕೂ ಹೆಚ್ಚು ನಾಯಿಗಳಿವೆ, ಈ ಪೈಕಿ ಸುಮಾರು ನಾಲ್ಕರಿಂದ ಐದು ನಾಯಿಗಳಿಗೆ ಹುಚ್ಚು ಹಿಡಿದಿದೆ ಎಂದು ತುರುವೇಕೆರೆ ಕ್ಷೇತ್ರದ ಮಾಜಿ ಶಾಸಕ ಮಸಾಲ ಜಯರಾಮ್ ಹೇಳಿದ್ದಾರೆ. ಪಟ್ಟಣದ ಸಮೀಪವಿರುವ ತಮ್ಮ ಫಾರ್ಮ್ ಹೌಸ್ ನಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ದಿನಗಳ ಕೆಳಗೆ ಕಲ್ಲೂರು ಗ್ರಾಮದ ಸುಮಾರು 65 ವರ್ಷದ ವೃದ್ದೆ ಮೇಲೆ ನಾಯಿಗಳು ದಾಳಿ ನಡೆಸಿವೆ. ದಾಳಿಯಲ್ಲಿ ವೃದ್ದೆಯ ತಲೆ ಮುಂದಿನ ಭಾಗ, ಮೆದುಳಿನ ಭಾಗ, ಕೈ ಕಾಲು, ಸೇರಿದಂತೆ ಮನಬಂದಂತೆ ಎಲ್ಲಾ ಕಡೆಗಳನ್ನು ಕಡಿದಿದ್ದು, ಕಡಿತದಿಂದ ವೃದ್ದೆಯು ನೆಲಕ್ಕೆ ಬಿದ್ದಿದ್ದು ತಕ್ಷಣ ವೃದ್ದೆಯನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ವೃದ್ದೆಗೆ ಚಿಕಿತ್ಸೆ ನೀಡಲು ಸ್ಥಳೀಯ ಆಸ್ಪತ್ರೆಯಲ್ಲಿ ಆಂಟಿ ರೇಬಿಸ್ ಲಸಿಕೆ ಲಭ್ಯವಿಲ್ಲದೆ ಇರುವುದರಿಂದ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ತುಮಕೂರಿನ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಅಲ್ಲಿಯೂ ಸಹ ಲಸಿಕೆ ಲಭ್ಯವಿಲ್ಲದೆ ತುಂಬಾ ತೊಂದರೆಯಾಗಿದ್ದು ಗಾಯಗಳಿಂದ ನರಳುತ್ತಿದ್ದಾಗ…