Author: admin

ಪಾವಗಡ : ವಿಧಾನಸಭಾ ಕ್ಷೇತ್ರದ ಶಾಸಕರಾದ ಎಚ್.ವಿ.ವೆಂಕಟೇಶ್ ರವರ 48 ನೇ ಹುಟ್ಟು ಹಬ್ಬದ ಅಂಗವಾಗಿ ಸೋಮವಾರ ಪಾವಗಡ ಪಟ್ಟಣದ ಹೊಸ ಬಸ್ ನಿಲ್ದಾಣದಲ್ಲಿ ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ನೇತೃತ್ವದಲ್ಲಿ ಬೀದಿ ಬದಿ ವ್ಯಾಪಾರಸ್ಥರ ಮಕ್ಕಳಿಗೆ ಶಾಲಾ ಬ್ಯಾಗ್, ಹಾಗೂ ಶಾಲಾ ಪರಿಕರಗಳನ್ನು ವಿತರಿಸಲಾಯಿತು. ಪಾವಗಡ ಕ್ಷೇತ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿರುವ ಜನಾನುರಾಗಿ, ಎಚ್ ವಿ. ವೆಂಕಟೇಶ್ ರವರಿಗೆ ಭಗವಂತ ಮತ್ತಷ್ಟು ಸೇವೆ ಮಾಡುವ ಶಕ್ತಿ ನೀಡಲಿ ಎಂದು ಹುಟ್ಟು ಹಬ್ಬವನ್ನು ಆಚರಿಸಿದ್ದು, ಸುಮಾರು 85 ಬಡ ಮಕ್ಕಳಿಗೆ ಶಾಲಾ ಪರಿಕರಗಳನ್ನು ವಿತರಿಸಿದ್ದೇವೆ ಎಂದು ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ತಿಳಿಸಿದರು. ಈ ಸಂದರ್ಭದಲ್ಲಿ ASI ನಾರಾಯಣಸ್ವಾಮಿ,ಬೀದಿ ಬದಿ ಮಹಿಳಾ ವ್ಯಾಪಾರಸ್ಥರ ಅಧ್ಯಕ್ಷ ಶಶಿಕಲಾ, ಮೋಹನ್, ಅರವಿಂದ್ ಕುಮಾರ್, ಸಾಯಿ, ಇನ್ನು ಮುಂತಾದವರಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ದೇಶಾದ್ಯಂತ ಜಿಯೋ ಸರ್ವರ್ ಡೌನ್ ಆಗಿದೆ. ವಾಟ್ಸಾಪ್, ಇನ್ಸ್ಟಾಗ್ರಾಮ್, ಎಕ್ಸ್, ಸ್ನ್ಯಾಪ್ಚಾಟ್, ಯೂಟ್ಯೂಬ್ ಮತ್ತು ಗೂಗಲ್ ಸೇರಿದಂತೆ ಎಲ್ಲಾ ದೈನಂದಿನ ಬಳಕೆಯ ಅಪ್ಲಿಕೇಶನ್ಗಳನ್ನ ಪ್ರವೇಶಿಸಲು ಸಾಧ್ಯವಾಗದ ಕಾರಣ ದೇಶಾದ್ಯಂತ ಬಳಕೆದಾರರು ಜಿಯೋ ಸೇವೆಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ದೂರುತ್ತಿದ್ದಾರೆ. ಕಳೆದ ಬಾರಿ ಏಪ್ರಿಲ್‌ನಲ್ಲೂ ಇದೇ ರೀತಿ ಜಿಯೋ ಸರ್ವರ್ ಸ್ಥಗಿತಗೊಂಡಿದ್ದು, ಈ ಬಾರಿಯೂದೇಶಾದ್ಯಂತ ಸಾವಿರಾರು ಜಿಯೋ ಬಳಕೆದಾದರು ಇದು ಇಂಟರ್ ನೆಟ್ ಸೇವೆಯಲ್ಲಿ ಸಮಸ್ಯೆಗಳನ್ನು ಎದುರಿಸಿದ್ದಾರೆಂದು ವರದಿಯಾಗಿದೆ. ಹಾಗಾಗಿ ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ #JioDown ಎಂದು ಹ್ಯಾಶ್ ಟ್ಯಾಗ್ ಬಳಸಿ ಟ್ರೋಲ್ ಮಾಡಿದ್ದರು. ಡೌನ್ ಡೆಕ್ಟ್ ವರದಿಯ ಪ್ರಕಾರ 54% ಬಳಕೆದಾರರು ಮೊಬೈಲ್ ಇಂಟರ್ ನೆಟ್ ಸಮಸ್ಯೆಗಳನ್ನು ಎದುರಿಸಿದರೆ, 38% ಜನರು ಜಿಯೋ ಫೈಬರ್ ಸಮಸ್ಯೆಗಳನ್ನು ಎದುರಿಸಿದ್ದಾರೆ. 7% ಮೊಬೈಲ್ ನೆಟ್ ವರ್ಕ್ ಅಡೆತಡೆಗಳನ್ನು ಅನುಭವಿಸಿದ್ದಾರೆ. ಆದರೂ ಈ ಸಮಸ್ಯೆಗಳ ಬಗ್ಗೆ ಇನ್ನು ಕೂಡಾ ಜಿಯೋ ಕಂಪನಿ ಯಾವುದೇ ಪ್ರತಿಕ್ರಿಯೆಗಳನ್ನು ನೀಡಿಲ್ಲ. ಮಧ್ಯಾಹ್ನ 1:42 ರ ಸುಮಾರಿಗೆ ಸಮಸ್ಯೆ ಉತ್ತುಂಗಕ್ಕೇರಿತು, ಇದರ ಪರಿಣಾಮವಾಗಿ…

Read More

ರಾಜ್ಯದ ಉಪ–ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಡಿ.ಕೆ. ಶಿವಕುಮಾರ್  ಮಗಳು ಐಶ್ವರ್ಯಾ ಅವರು ತಮ್ಮ ಕಾಲೇಜಿನ ದಿನಗಳಲ್ಲಿ ನಡೆದ ಕಥೆಯನ್ನು ಹೇಳಿಕೊಂಡಿದ್ದಾರೆ. ಐಶ್ವರ್ಯಾ ಕಾಲೇಜು ಓದುವಾಗ ಅವರ ತಂದೆ ಕಾಲೇಜಿನ ಚೇರ್‌ ಮನ್ ಆಗಿದ್ದರಂತೆ.ಆದರೆ, ಶುರುವಿನಲ್ಲಿ ಆ ಸಂಗತಿ ಯಾರಿಗೂ ಗೊತ್ತಿರಲಿಲ್ಲ. ಆಗ ಸಹಜವಾಗಿಯೇ ಸಾಕಷ್ಟು ಜನರು ಫ್ರೆಂಡ್ಸ್ ಆಗಿದ್ದಾರೆ. ಆದರೆ, ಯಾವಾಗ ಐಶ್ವರ್ಯಾ ಅವರು ಚೇರ್‌ಮನ್ ಮಗಳು ಅಂತ ಗೊತ್ತಾಯ್ತೋ, ಆಗ ಹಲವರು ಅವರಿಂದ ಅಂತರ ಕಾಯ್ದುಕೊಳ್ಳಲು ಶುರುಮಾಡಿದ್ದರಂತೆ. ಜತೆಗೆ, ನಾನು ಚೆನ್ನಾಗಿ ಓದುತ್ತಿದ್ದರೂ, ಎಷ್ಟೇ ಮಾರ್ಕ್ಸ್‌ ತೆಗೆದುಕೊಂಡರೂ ‘ಅವ್ಳು ಚೇರ್‌ಮನ್ ಮಗ್ಳು ಅಲ್ವಾ?’ ಮಾರ್ಕ್ಸ್‌ ಕೊಡ್ತಾರೆ ಅವ್ಳಿಗೆ ಅಂತಾನೇ ಹೇಳೋರು. ಅದು ತಪ್ಪು ಅಂತ ನಾನು ಹೇಳಲ್ಲ. ನಿಜವಾಗಿ ಹೇಳಬೇಕೆಂದರೆ ನಾನು ಕಾಲೇಜಿಗೆ ಫಸ್ಟ್ ಡೇ ಹೋದಾಗ್ಲೇ ಗಾಡಿನ ಎಲ್ಲೋ ನಿಲ್ಸಿ ಎಲ್ಲರ ತರ ಕಾಲೇಜಿಗೆ ನಡ್ಕೊಂಡೇ ಹೋಗಿದ್ದೆ. ಆದ್ರೆ ಹೋಗ್ತಾ ಹೋಗ್ತಾ ಗೊತ್ತಾಗೋಯ್ತು ನಾನು ಚೇರ್‌ ಮನ್‌ ಮಗಳು ಅಂತ. ಆಮೇಲೆ ಕಾಲೇಜಲ್ಲಿ ನನ್ನ ನೋಡೋ ರೀತಿನೇ ಬದಲಾಗಿ…

Read More

ಡಾ. ರಾಜ್’ಕುಮಾರ್ ತಮ್ಮ ಸಿನಿಮಾಗಳಲ್ಲಿ ಸಿಗರೇಟು, ಮದ್ಯ ಇವುಗಳನ್ನು ವಿರೋಧಿಸುತ್ತಲೇ ಡಾ. ರಾಜ್’ಕುಮಾರ್ ರವರು ಸಿನಿಮಾ ಮಾಡಿದವರು. ಹೆಚ್ಚಿನವರಿಗೆ ಇಂದಿಗೂ ಡಾ.ರಾಜ್ ಕುಮಾರ್ ರವರು ಒಂದು ಕಾಲದಲ್ಲಿ ಸಿಗರೇಟು ಸೇದುತ್ತಿದ್ದರು ಅಂದರೆ ಖಂಡಿತ ನಂಬಲಾರರು ಏಕೆಂದರೆ ಅಣ್ಣಾವ್ರು ಸಿಗರೇಟು ಸೇದುತ್ತಿದ್ದ ವಿಷಯ ಎಲ್ಲೂ ಹೆಚ್ಚು ಪ್ರಾಮುಖ್ಯತೆಯನ್ನು ಪಡೆದುಕೊಂಡಿಲ್ಲ. ರಾಜ್ ಕುಮಾರ್ ರವರು ಸಿಗರೇಟ್ ಸೇದದೇ ಇರೋದರ ಹಿಂದೆ ಇಷ್ಟೆಲ್ಲಾ ಕಥೆಯಿದ್ದರೂ, ಒಂದು ಕಾಲದಲ್ಲಿ ಅವರು ಸಿಗರೇಟ್ ಸೇದುತ್ತಿದ್ದ ಸಣ್ಣ ಕಥೆಯಿದೆ. ಆಗ ರಾಜ್ ಕುಮಾರ್ ರವರು ದಿನಕ್ಕೆ ಒಂದೋ ಎರಡೋ ಸಿಗರೇಟುಗಳನ್ನು ಸೇದುವ ಚಟವಿತ್ತು. ಅಕಸ್ಮಾತಾಗಿ ಅವರು ಸಿಗರೇಟು ಸೇದುವುದನ್ನು ಕಂಡಾಗ ಅವರ ಅಭಿಮಾನಿಗಳು `ಏನಣ್ಣಾ ನಿಮ್ಮ ಕೈಲಿ ಸಿಗರೇಟ್ ಚೆನ್ನಾಗಿ ಕಾಣಲ್ಲ… ದಯವಿಟ್ಟು ಇದು ಬೇಡಿ’ ಅಂತ ಹೇಳಿದ್ದರು. ಅಂದಿನಿಂದ ರಾಜ್ಕುಮಾರ್ ಯಾರಿಗೂ ಕಾಣದೇ ತಮ್ಮ ಗ್ರೀನ್ ರೂಮ್ನಲ್ಲೋ, ತಮ್ಮ ಖಾಸಗಿ ರೂಮ್ನಲ್ಲೋ ಅಪರೂಪಕ್ಕೆ ಸೇದುತ್ತಿದ್ದರು. ಹೀಗಿರುವಾಗ ಒಂದು ಘಟನೆ ನಡೆಯಿತು. ಒಮ್ಮೆ ಸೆಟ್‌ ನಲ್ಲಿ ಯಾರೂ ಇಲ್ಲದ ವೇಳೆ…

Read More

ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿ ಎಂದು ಹಲವು ಕಡೆ ಹೋಮ ಹವನ‌ ಜರುಗುತ್ತಿತ್ತು. ಜನರು ತಮ್ಮದೇ ಆದ ರೀತಿಯಲ್ಲಿ ಬೇಡಿಕೊಳ್ಳುತ್ತಿದ್ದರು. ಆದರೆ ಇಲ್ಲೊಬ್ಬ ಉತ್ತರಕನ್ನಡದ ವಯಸ್ಸಾದ ವ್ಯಕ್ತಿ ಉರುಳು ಸೇವೆ ಹರಕೆ ಹೊತ್ತಿದ್ದರು! ಇಲ್ಲೊಬ್ಬ ವ್ಯಕ್ತಿ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡಿದ್ದಕ್ಕೆ ಅಭಿಮಾನಿಯೊಬ್ಬರು ಉರುಳುಸೇವೆ ಮಾಡಿ ಹರಕೆ ತೀರಿಸಿದ ಅಪರೂಪದ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನಲ್ಲಿ ನಡೆದಿದೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಹರಿಹರ ಭಟ್​ ಅವರು ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂದು ಹರಕೆ ಹೊತ್ತಿದ್ದರು. ಅಂಕೋಲಾ ತಾಲ್ಲೂಕಿನ ಹಳವಳ್ಳಿ ಗ್ರಾಮದ ನಿವಾಸಿ ಹರಿಹರ ಭಟ್​ ಅವರು ಉರುಳು ಸೇವೆ ಮಾಡುವ ಮೂಲಕ ಪ್ರಧಾನಿ ಮೋದಿ ಅವರ ಮೇಲೆ ತಮ್ಮಗಿರುವ ಅಭಿಮಾನವನ್ನು ತೋರ್ಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ರೇಣುಕಾಸ್ವಾಮಿ ಹತ್ಯೆಯಾಗಿ 10 ದಿನ ಕಳೆದರೂ ಆತನ ಮೊಬೈಲ್ ಸಿಗದಿರುವುದು ಇನ್ನೂ ನಿಗೂಢವಾಗಿ ಉಳಿದಿದೆ. ಹೀಗಾಗಿ ಮೊಬೈಲ್ ಪತ್ತೆ ಹಚ್ಚಲು ಪೊಲೀಸರು ಆರೋಪಿಯನ್ನು ಮತ್ತೆ ಸ್ಥಳ ಮಹಜರು ಮಾಡಲು ಕರೆ ತಂದಿದ್ದಾರೆ ಎನ್ನಲಾಗಿದೆ. ಕೊಲೆ ಪ್ರಕರಣದಲ್ಲಿ ಮೊಬೈಲ್ ಪ್ರಮುಖ ಸಾಕ್ಷ್ಯವಾಗುವ ಕಾರಣ ಪೊಲೀಸರು ಎಲ್ಲಾ ಕಡೆ ಆತನ ಮೊಬೈಲ್ ಗಾಗಿ ಹುಡುಕಾಡಿದ್ದಾರೆ. ಎಲ್ಲಿಯೂ ಮೊಬೈಲ್ ಸಿಗದ ಕಾರಣ ಪೊಲೀಸರು ಕೊನೆಯ ಬಾರಿಗೆ ಸಿಗ್ನಲ್ ಇದ್ದ ಜಾಗವನ್ನು ಸರ್ಚ್ ಮಾಡಿದ್ದಾರೆ. ರಾಜಕಾಲುವೆ ಜಾಗದಲ್ಲೇ ಕೊನೆಯ ಬಾರಿಗೆ ಸಿಗ್ನಲ್ ತೋರಿಸಿದೆ ಎನ್ನಲಾಗಿದೆ. ಈ ಕಾರಣಕ್ಕೆ ಈಗ ಆರೋಪಿ ಪ್ರದೂಶ್ ನನ್ನು ಮತ್ತೆ ಸುಮನಹಳ್ಳಿ ಸತ್ವ ಅಪಾರ್ಟ್‌ಮೆಂಟ್ ಮುಂಭಾಗದಲ್ಲಿರುವ ರಾಜಕಾಲುವೆ ಬಳಿ ಶವ ಎಸೆದ ಜಾಗದತ್ತ ಕರೆತಂದಿದ್ದಾರೆ. ಪೊಲೀಸರ ಮನವಿಯ ಮೇರೆಗೆ ಪೌರ ಕಾರ್ಮಿಕರು ರಾಜಕಾಲುವೆಗೆ ಇಳಿದು ಮೊಬೈಲ್ ಹುಡುಕಾಡಿದ್ದಾರೆ. ಆದರೆ ಮೊಬೈಲ್ ಪತ್ತೆಯಾಗದ ಕಾರಣ ಶೋಧ ಕಾರ್ಯ ನಿಲ್ಲಿಸಿದ್ದಾರೆ ಎಂದು ವರದಿ ತಿಳಿಸಿದೆ. ತಡರಾತ್ರಿ ರೇಣುಕಾಸ್ವಾಮಿಯ ದೇಹವನ್ನು ಆರೋಪಿಗಳು ಸುಮನಹಳ್ಳಿ ಸತ್ವಾ ಅಪಾರ್ಟ್ಮೆಂಟ್ ಬಳಿ…

Read More

ಬಾಲಿವುಡ್ ನಟಿ ಸನ್ನಿ ಲಿಯೋನ್ ಕರ್ನಾಟಕದ ಹಾಸನಕ್ಕೆ ಆಗಮಿಸಿದ್ದಾರೆ. ತಮಿಳು ಸಿನಿಮಾವೊಂದರ ಚಿತ್ರೀಕರಣಕ್ಕೆ ಹಾಸನದ ಚೆನ್ನರಾಯಪಟ್ಟಣದ ಕಬ್ಬಳ್ಳಿ ಗ್ರಾಮಕ್ಕೆ ಬಂದಿದ್ದು, ಈ ವೇಳೆ ಸ್ಥಳೀಯ ಸರ್ಕಾರಿ ಶಾಲಾ ಮಕ್ಕಳ ಜೊತೆ ಸನ್ನಿ ಲಿಯೋನ್ (Sunny Leone) ಕಾಲ ಕಳೆದಿದ್ದಾರೆ ಎಂದು ವರದಿ ತಿಳಿಸಿದೆ. ಸನ್ನಿ ಲಿಯೋನ್ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಜೊತೆ ಆಟ ಆಡಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಸನ್ನಿ ಲಿಯೋನ್ ಮುಂಬರುವ ತಮಿಳು ಚಿತ್ರ ‘ಕೊಟೇಶನ್ ಗ್ಯಾಂಗ್ ನ’ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಿದ್ದು. ಇದನ್ನು ವಿವೇಕ್ ಕೆ. ಕಣ್ಣನ್ ಬರೆದು ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಜಾಕಿ ಶ್ರಾಫ್, ಸನ್ನಿ ಲಿಯೋನ್ ಮತ್ತು ಪ್ರಿಯಾಮಣಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ ಎನ್ನಲಾಗಿದೆ. ಕೊಟೇಶನ್ ಗ್ಯಾಂಗ್ ನ ಫಸ್ಟ್ ಲುಕ್ ನಲ್ಲಿ ಸನ್ನಿ ಲಿಯೋನ್ ಗ್ರಾಮೀಣ ಮಾಫಿಯಾ ಗ್ಯಾಂಗ್ ನ ಸದಸ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಮತ್ತು ನಿರ್ದೇಶಕ ಉಪೇಂದ್ರ ಮೊದಲ ಬಾರಿಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ. ವಿಚಾರಣೆ ಕುರಿತ ವಿಡಿಯೊ ಚಿತ್ರೀಕರಣ ನಡೆಯಬೇಕು ಮತ್ತು ಅದು ಜನರಿಗೆ ನೋಡಲು ಸಿಗುವಂತಾಬೇಕು ಎಂದಿದ್ದಾರೆ. ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್ನ ವಿಚಾರಣೆಯ ವಿಡಿಯೋ ದಾಖಲೆ ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೊಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ. ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣ, ದರ್ಶನ್ ಬಂಧನ ಮತ್ತು ಅದರ ವಿಚಾರಣೆಯನ್ನು ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ. ಈ ಹೈ ಪ್ರೊಫೈಲ್ ಕೇಸ್ನ ವಿಚಾರಣೆಯಲ್ಲಿ ನಿಷ್ಪಕ್ಷವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಜನ ಕಾಯುತ್ತಿದ್ದಾರೆ. ರೇಣುಕಾಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟಿವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿವೆ. ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ. ಏಕೆಂದರೆ, ಯಾವುದೇ ಕೇಸ್ ಆದರೂ ಆ ಕೇಸ್ನ ವಿಚಾರಣೆಯ ವಿಡಿಯೋ ದಾಖಲೆ ಮತ್ತು…

Read More

ಪ್ರಧಾನಿ ನರೇಂದ್ರ ಮೋದಿ ಅವರ ಇಟಲಿ ಪ್ರವಾಸದ ಕುರಿತು ಕಾಂಗ್ರೆಸ್ ಪಕ್ಷದ ಕೇರಳ ಘಟಕ ಮಾಡಿದ್ದ ಲೇವಡಿ ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಕ್ಷಮಾಪಣೆ ಕೋರಿದೆ. ಜಿ7 ಶೃಂಗಸಭೆಗೆ ಇಟಲಿಯ ವಿಶೇಷ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅಲ್ಲಿಗೆ ತೆರಳಿದ್ದರು. ಈ ಸಂದರ್ಭದಲ್ಲಿ ವಿವಿಧ ದೇಶಗಳ ನಾಯಕರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದ ಅವರು, ಪೋಪ್ ಫ್ರಾನ್ಸಿಸ್ ಅವರನ್ನು ಸಹ ಭೇಟಿಯಾಗಿದ್ದರು. ಇಬ್ಬರೂ ಪರಸ್ಪರ ಆಲಂಗಿಸುವ ಫೋಟೋಗಳು ವೈರಲ್ ಆಗಿದ್ದವು. ಇದನ್ನು ಕೇರಳ ಕಾಂಗ್ರೆಸ್ ಘಟಕ ಸಾಮಾಜಿಕ ಮಾಧ್ಯಮದಲ್ಲಿ ಅಣಕಿಸಿ ಪೋಸ್ಟ್ ಮಾಡಿತ್ತು. ವಿವಾದದ ಬೆನ್ನಲ್ಲೇ ಕೇರಳ ಕಾಂಗ್ರೆಸ್ ತನ್ನ ಪೋಸ್ಟ್ ಅನ್ನು ಡಿಲೀಟ್ ಮಾಡಿದೆ. ಪ್ರಧಾನಿ ಮೋದಿ ಪೋಪ್ ಜತೆಗೆ ಇರುವ ಫೋಟೋ ಹಂಚಿಕೊಂಡಿದ್ದ ಕಾಂಗ್ರೆಸ್ ಘಟಕವು, “ಪೋಪ್ ಅವರಿಗೆ ದೇವರನ್ನು ಭೇಟಿ ಮಾಡುವ ಅವಕಾಶ ಕೊನೆಗೂ ದೊರಕಿದೆ” ಎಂದು ಟೀಕಿಸಿತ್ತು. ಲೋಕಸಭೆ ಚುನಾವಣೆಗೂ ಮುನ್ನ ಪ್ರಧಾನಿ ಮೋದಿ ಅವರು ಸಂದರ್ಶನವೊಂದರಲ್ಲಿ, ತಮ್ಮನ್ನು ದೇವರು ಒಂದು ಉದ್ದೇಶಕ್ಕೆ…

Read More

ಚುನಾವಣೆಯಲ್ಲಿ ಹಲವು ಭರವಸೆ ನೀಡಿ ಆಂಧ್ರಪ್ರದೇಶದ ಅಧಿಕಾರ ಹಿಡಿದಿರುವ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ (TDP) ಈ ಭರವಸೆಯನ್ನು ಹೇಗೆ ಈಡೇರಿಸುತ್ತದೆ ಎನ್ನುವುದೇ ದೊಡ್ಡ ಪ್ರಶ್ನೆಯಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಹೇಗೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿತ್ತೋ ಅದೇ ಮಾದರಿಯಲ್ಲಿ ಆಂಧ್ರದಲ್ಲಿ ಚಂದ್ರಬಾಬು ನಾಯ್ಡು ʼಸೂಪರ್ ಸಿಕ್ಸ್ ಗ್ಯಾರಂಟಿʼ ಹೆಸರಿನಲ್ಲಿ ಘೋಷಣೆ ಪ್ರಕಟಿಸಿದ್ದರು. ಪ್ರತಿ ತಿಂಗಳು ನಿರುದ್ಯೋಗಿಗಳಿಗೆ 3,000 ರೂ. ನಿರುದ್ಯೋಗ ಭತ್ಯೆ, ಶಾಲೆಗೆ ತೆರಳಲು ಪ್ರತಿ ಮಗುವಿಗೆ ವರ್ಷಕ್ಕೆ 15,000 ರೂ., ಪ್ರತಿ ರೈತರಿಗೆ ವಾರ್ಷಿಕ 20,000 ರೂ., ಸರ್ಕಾರದಿಂದ ಪ್ರತಿ ಮನೆಗೆ ವರ್ಷಕ್ಕೆ 3 ಗ್ಯಾಸ್ ಸಿಲಿಂಡರ್ ಉಚಿತ, 18 ವರ್ಷ ಮೇಲ್ಪಟ್ಟ ಪ್ರತಿ ಮಹಿಳೆಗೆ ತಿಂಗಳಿಗೆ 1,500 ರೂ., ರಾಜ್ಯಾದ್ಯಂತ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಣೆಗಳನ್ನು ಟಿಡಿಪಿ ಘೋಷಣೆ ಮಾಡಿತ್ತು. ನಿರುದ್ಯೋಗಿ ಯುವಕರಿಗೆ ನಗದು ಪಾವತಿ, ಮಹಿಳೆಯರಿಗೆ ಉಚಿತ ಪ್ರಯಾಣ ಮತ್ತು ಉಚಿತ ಎಲ್ ಪಿಜಿ ಸಿಲಿಂಡರ್ ಸೇರಿದಂತೆ ಹಲವು ಭರವಸೆಗಳನ್ನು…

Read More