Subscribe to Updates
Get the latest creative news from FooBar about art, design and business.
- ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
- ತಿಪಟೂರು: ಜೂನ್ 1ರಿಂದ ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
- ತುಮಕೂರು: ವಾಟರ್ ಟ್ಯಾಂಕ್ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು, ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
- ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
- ತುರುವೇಕೆರೆ: ಜೂ. 4ರಂದು ಉಚಿತ ಯೋಗ, ಪ್ರಾಣಾಯಾಮ ತರಗತಿಗಳ ಉದ್ಘಾಟನೆ
- ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
- ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ
Author: admin
ಬೆಳೆ ನಾಶಕ್ಕೆ ಸೈನಿಕ ಹುಳು ಕೂಡ ಒಂದು ಕಾರಣ. ಸೈನಿಕ ಹುಳು ಗಳ ನಿಯಂತ್ರಣಕ್ಕಾಗಿ ರೈತರು ಹಲವಾರು ರೀತಿ ಪ್ರಯತ್ನ ಮಾಡಿ ಸೋತಿದ್ದಾರೆ. ಈಗಾಗಲೇ ಬೆಳೆ ನಾಶದಿಂದ ರೈತರು ಕಣ್ಗೆಟ್ಟಿದ್ದಾರೆ. ಅದಕ್ಕಾಗಿ ಸರಿಯಾದ ಪರಿಹಾರವನ್ನು ಇಲ್ಲಿ ತಿಳಿಸಲಾಗಿದೆ. ಸೈನಿಕ ಹುಳುವು 20-25 ದಿನಗಳ ಜೀವನ ಚಕ್ರ ಹೊಂದಿದ್ದು, ಏಕ ಬೆಳೆಯಲ್ಲೇ ಇದರ ಮೂರು ಹಂತಗಳು (ಮೊಟ್ಟೆ/ ಮರಿಹಳು/ ಪ್ರೌಡ ಚಿಟ್ಟೆ) ಕಾಣಿಸಿಕೊಂಡು ಎಲೆಗಳನ್ನು, ಸುಳಿಗಳನ್ನು ತಿಂದು ರಂಧ್ರಗಳನ್ನು ಮಾಡಿ ಹಿಕ್ಕೆಗಳನ್ನು ಎಲೆಯ ಮೇಲೆಯ ಬಿಡುತ್ತದೆ. ಅದಕ್ಕಾಗಿ ಶಿವಮೊಗ್ಗ ಕೃಷಿ ವಿಶ್ವವಿದ್ಯಾನಿಲಯದ ಕೀಟಶಾಸ್ತ್ರ ವಿಜ್ಞಾನಿ ಡಾ. ಶರಣಬಸಪ್ಪ ಎಸ್. ದೇಶಮುಖ್ ಅವರು, ಬೆಳೆಯ 45 ದಿನಗಳವರೆಗೆ ಈ ಹುಳು ಕಾಣಿಸಿಕೊಂಡು ಶೇ.70-80 ರವರೆಗೆ ಇಳುವರಿ ನಷ್ಟಕ್ಕೆ ಕಾರಣವಾಗುತ್ತದೆ. ರೈತರು ಪರ್ಯಾಯ ಬೆಳೆ ಪದ್ಧತಿ ರಸಾಯನಿಕ ಸಿಂಪರಣೆ ಮೂಲಕ ಈ ರೋಗವನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ. ಜಮೀನುಗಳಲ್ಲಿ ಸೈನಿಕ ಹುಳು ಕಾಟ, ಹತೋಟಿಗೆ ಸಲಹೆಗಳು : ಬೇಸಾಯ ಶಾಸ್ತ್ರಜ್ಞ ಹೊನ್ನಪ್ಪ ಪ್ರಕಾರ “ಮುಸುಕಿನ…
ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 60 ಸಾವಿರ ಕೋಟಿ ರೂಪಾಯಿಗಳನ್ನು ವ್ಯಯ ಮಾಡುತ್ತಿದೆ. ಇಷ್ಟೂ ಹಣ ರಾಜ್ಯದ ಎಲ್ಲಾ ಜಾತಿ–ಸಮುದಾಯಗಳ ಬಡವರು ಮತ್ತು ಮಧ್ಯಮ ವರ್ಗದವರಿಗೆ ಹೋಗುತ್ತದೆ. ಸದ್ಯದ ಅಲ್ಪ ಪ್ರಮಾಣದ ಡೀಸೆಲ್–ಪೆಟ್ರೋಲ್ ತೆರಿಗೆ ಹೆಚ್ಚಳದಿಂದ ನಮಗೆ ಹೆಚ್ಚುವರಿಯಾಗಿ ಸಂಪನ್ಮೂಲ ಸಂಗ್ರಹ ಆಗುವುದು ಕೇವಲ 3 ಸಾವಿರ ಕೋಟಿ ರೂಪಾಯಿ ಮಾತ್ರ. ಆದರೆ ಗ್ಯಾರಂಟಿಗಳಿಗೆ ನಾವು ಕೊಡುತ್ತಿರುವುದು 60 ಸಾವಿರ ಕೋಟಿ ರೂಪಾಯಿ. ಹೀಗಾಗಿ ಆರ್.ಅಶೋಕ್ ಅವರ ಪೆದ್ದುತನದ ಮಾತುಗಳಿಗೆ ಅರ್ಥವಿಲ್ಲ. ಆರ್.ಅಶೋಕ್ ಗೆ ಇದೆಲ್ಲಾ ಅರ್ಥ ಆಗಲ್ಲ , ಅರ್ಥ ಮಾಡಿಕೊಳ್ಳುವ ಸಾಮರ್ಥ್ಯವೂ ಇಲ್ಲ ಎಂದು ವ್ಯಂಗ್ಯವಾಡಿದರು. ಕೇಂದ್ರ ಸರ್ಕಾರ ಜಿ.ಎಸ್.ಟಿ. ವ್ಯವಸ್ಥೆ ಜಾರಿಗೊಳಿಸಿದ ನಂತರ ರಾಜ್ಯ ಸರ್ಕಾರಗಳ ಸಂಪನ್ಮೂಲ ಕ್ರೋಢೀಕರಣಕ್ಕೆ ಇರುವ ಅವಕಾಶ ಸೀಮಿತಗೊಂಡಿದೆ. ಕೇಂದ್ರ ಸರ್ಕಾರ ಜಿ.ಎಸ್.ಟಿ. , ಆದಾಯ ತೆರಿಗೆ, ಕೇಂದ್ರ ಅಬಕಾರಿ ಸುಂಕ ಮೊದಲಾದ ಮೂಲಗಳಿಂದ ತೆರಿಗೆ ಸಂಗ್ರಹಿಸುತ್ತದೆ. ರಾಜ್ಯ ಸರ್ಕಾರಕ್ಕೆ ಕೇವಲ ನೋಂದಣಿ ಮತ್ತು ಮುದ್ರಾಂಕ ಶುಲ್ಕ, ವಾಹನ ತೆರಿಗೆ, ಪೆಟ್ರೋಲ್, ಡೀಸೆಲ್…
ಬೆಂಗಳೂರು: ತೈಲ ಬೆಲೆ ಖಂಡಿಸಿ ಪ್ರತಿಭಟಿಸುವ ಹಕ್ಕು ಬಿಜೆಪಿಗಿದೆ ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಪೆಟ್ರೋಲ್ ಡೀಸೆಲ್ ದರ ಹೆಚ್ಚಳ ಮಾಡಲಾಗಿದೆ ಎಂದು ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ. ಹಾಗಾದರೆ ಅವರ ಪಕ್ಷ ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ದರ ಎಷ್ಟಿದೆ? ಎಂದರು. ತೈಲ ಬೆಲೆ ಖಂಡಿಸಿ ಬಿಜೆಪಿ ಪ್ರತಿಭಟನೆ ಮಾಡಲಿ. ಅವರಿಗೆ ಪ್ರತಿಭಟಿಸುವ ಹಕ್ಕಿದೆ. ಜನರ ಸವಾಲುಗಳಿಗೆ ಉತ್ತರ ಕೊಡುವವರು ಯಾರು? ಪೆಟ್ರೋಲ್ ದರವನ್ನು 97ರೂ. ವರೆಗೆ ತಂದವರು ಯಾರು? ಸೆಸ್ಗಳ ಅನುಕೂಲ ಮಾಡಿಕೊಟ್ಟಿದ್ದಾರೆ. ರಷ್ಯಾದಿಂದ ಕಡಿಮೆ ಬೆಲೆಗೆ ತೆಗೆದುಕೊಂಡು ಅದನ್ನು ಜನ ಸಾಮಾನ್ಯರಿಗೆ ಕೊಟ್ಟಿದ್ದೀರಾ? ನಾವು ಕೇವಲ 3ರೂ. ಏರಿಕೆ ಮಾಡಿದ್ದೇವೆ ಅಷ್ಟೇ ಎಂದು ಅವರು ಸರ್ಕಾರದ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಮಹಾರಾಷ್ಟ್ರ, ಆಂದ್ರದಲ್ಲಿ ಎಷ್ಟಿದೆ? ಬಿಜೆಪಿ ಇರುವ ರಾಜ್ಯಗಳಲ್ಲಿ ತೈಲ ಬೆಲೆ ಎಷ್ಟಾಗಿದೆ? ಇವರು ಬೆಲೆ ಏರಿಕೆ ಮಾಡಿದಾಗ ದೇಶ ಕಟ್ಟುವ ಅವಶ್ಯಕತೆ ಇದೆ ಅಂತಾರೆ. ನಾವು ಮಾಡಿದ್ರೆ ದೇಶ ಹಾಳಾಗುತ್ತಾ? ಅಂಕಿ…
ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಂದುವರಿದಂತೆ ಬೆಚ್ಚಿ ಬೀಳಿಸುವ ಸಂಗತಿಗಳು ಬಯಲಾಗುತ್ತಲೇ ಇದ್ದು, ಆರೋಪಿಗಳು ರೇಣುಕಾಸ್ವಾಮಿಯನ್ನು ಕೊಂದ ನಂತರ ಅವರ ಮೈ ಮೇಲಿದ್ದ ಚಿನ್ನದ ಆಭರಣಗಳನ್ನು ದೋಚಿದ್ದ ವಿಚಾರ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಆರೋಪಿಗಳಾದ ದರ್ಶನ್ ಮತ್ತು ಸಹಚರರನ್ನು ಕೋರ್ಟ್ನಲ್ಲಿ ಹಾಜರುಪಡಿಸಿದ್ದಾಗ ವಾದ ಮಂಡಿಸಿದ್ದ ಪೊಲೀಸ್ ಪರ ವಿಶೇಷ ಅಭಿಯೋಜಕರು, ಆರೋಪಿಗಳು ರೇಣುಕಾಸ್ವಾಮಿಗೆ ವಿದ್ಯುತ್ ಶಾಕ್ ಕೊಟ್ಟು ಕ್ರೌರ್ಯ ಮೆರೆದಿದ್ದರು ಎಂಬ ಭಯಾನಕ ಸಂಗತಿಯನ್ನು ಬಹಿರಂಗಪಡಿಸಿದ್ದರು. ಆರೋಪಿಗಳ ತಂಡವು ಇದೀಗ ಅದಕ್ಕಿಂತಲೂ ಹೇಯ ಕೃತ್ಯ ಎಸಗಿರುವುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಚಿನ್ನದ ಆಭರಣಗಳನ್ನು ಆತ ದೋಚಿದ್ದ. ರೇಣುಕಾಸ್ವಾಮಿ ಅಪಹರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಚಿತ್ರದುರ್ಗ ಜಿಲ್ಲೆಯ ದರ್ಶನ್ ಅಭಿಮಾನಿ ಬಳಗದ ಅಧ್ಯಕ್ಷ ರಾಘವೇಂದ್ರ ಎಂಬಾತನ ಪೈಶಾಚಿಕ ಕೃತ್ಯ ಪೊಲೀಸರ ವಿಚಾರಣೆ ವೇಳೆ ಬಯಲಾಗಿದೆ ಎಂದು ವರದಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್…
ವಿಜಯಪುರ: ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ವಿಜಯಪುರ ನಗರದ ಆಶ್ರಮ ರಸ್ತೆಯ ಪಿ&ಟಿ ಕ್ವಾರ್ಟರ್ಸಿನಲ್ಲಿ ನಡೆದಿದೆ. ಮನೆಯವರು ಸೂಕ್ತ ಸಂದರ್ಭದಲ್ಲಿ ಎಚ್ಚೆತ್ತುಕೊಂಡ ಕಾರಣ ಭಾರೀ ಅನಾಹುತ ತಪ್ಪಿದೆ. ಪಿ&ಟಿ ಕ್ವಾರ್ಟರ್ಸ್ ನಿವಾಸಿ ಇಬ್ರಾಹಿಂ ಬಿದರಕುಂದಿ ಎನ್ನುವವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಮೂಲತಃ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದವರಾಗಿದ್ದಾರೆ. ಬಕ್ರೀದ್ ಹಬ್ಬದ ದಿನವೇ ಹಬ್ಬದಡುಗೆ ಮಾಡುವ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಸಿಲಿಂಡರ್’ಗೆ ಬೆಂಕಿ ಹತ್ತಿಕೊಂಡ ಕಾರಣ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಗ್ನಿ ಶಾಮಕ ದಳದವರಿಗೆ, ಗ್ಯಾಸ್ ಏಜೆನ್ಸಿಯವರಿಗೆ ಮಾಹಿತಿ ರವಾನೆ ಮಾಡಿದ್ದು, ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದರು. ಘಟನೆಯಲ್ಲಿ ಮನೆಯಲ್ಲಿನ ಅಡುಗೆ ಕೋಣೆಯಲ್ಲಿನ ವಸ್ತುಗಳಿಗೆ ಹಾನಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA
ಬೆಳಗಾವಿ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ನಡುರಸ್ತೆಯಲ್ಲಿ ವ್ಯಕ್ತಿಯ ಭೀಕರ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಯಕ್ಸಂಬಾ ಪಟ್ಟಣದಲ್ಲಿ ನಡೆದಿದೆ. ಬೀರೇಶ್ವರ ದೇವರ ಜಾತ್ರಾ ಮಹೋತ್ಸವ ಜಾತ್ರಾ ಮಹೋತ್ಸವದ ನಿಮಿತ್ತ ಆಯೋಜಿಸಿದ್ದ ರಸಮಂಜರಿ ಕಾರ್ಯಕ್ರಮ ನೋಡಿ ವಾಪಸ್ ಮನೆಗೆ ತೆರಳುವ ಸಂದರ್ಭದಲ್ಲಿ ಯಾರೋ ಆತನ ತಲೆ ಮೇಲೆ ಕಲ್ಲು ಎತ್ತಾಕಿ ಕೊಲೆ ಮಾಡಿದ್ದಾರೆ. ಮಹೇಶ ಕುರ್ಣಿ ಕುಡಿತದ ಚಟ ಹೊಂದಿದ್ದರು. ಮಹೇಶ ಅವರ ಪ್ಯಾಮಿಲಿ ಬೆಳಗಾವಿಯಲ್ಲಿ ಸೆಟಲ್ ಆಗಿದ್ದಾರೆ. ಮಕ್ಕಳ ನೌಕರಿಗಾಗಿ ಈತನು ಸಹ ಬೆಳಗಾವಿಯಲ್ಲೆ ನೆಲೆಸಿದ್ದ. ಆದ್ರೆ ಯಕ್ಸಂಬಾ ಪ್ಟಣದಲ್ಲಿರೋ ತನ್ನ ಒಂದು ಎಕರೆ ಜಮೀನು ಹಾಳಾಗುತ್ತೆ ಎನ್ನುವ ಕಾರಣಕ್ಕೆ ಮಹೇಶ ಯಕ್ಸಂಬಾ ಪಟ್ಟಣದಲ್ಲಿ ಒಬ್ಬನೇ ವಾಸವಾಗಿದ್ದ. ಆತನ ಸಂಬಂಧಿಕರು ಹೇಳುವಂತ, ಮಹೇಶ ಕುರ್ಣೆ ಯಾವಾಗಲಾದ್ರೂ ಮದ್ಯಸೇವನೆ ಮಾಡ್ತಿದ್ದನಂತೆ. ಊರಲ್ಲಿ ಯಾರೊಂದಿಗೂ ಜಗಳವಾಡಿರಲಿಲ್ಲವಂತೆ. ನಿನ್ನೆ ರಾತ್ರಿ ಜಾತ್ರೆ ನಿಮಿತ್ತ ಆಯೋಜಿಸಿದ್ದ ರಸಮಂಜರಿ ಕಾರ್ಯಕ್ರಮ ನೋಡಿ ವಾಪಸ್ಸಾಗುವ ಸಂದರ್ಭದಲ್ಲಿ ಯಾರೋ ಆತನನ್ನು ಕೊಲೆ ಮಾಡಿದ್ದಾರೆ ಎನ್ನುತ್ತಿದ್ದಾರೆ. ಇನ್ನು ವಿಷಯ…
ಬೆಂಗಳೂರು : ಕಳೆದ ವಾರವಷ್ಟೆ ಕೆ.ಜಿ.ಗೆ 50 ರೂ.ಗೆ ದೊರೆಯುತ್ತಿದ್ದ ಟೊಮೆಟೊ, ಈಗ ಏಕಾಏಕಿ 100 ರೂ. ಗಡಿ ದಾಟಿದೆ. ಆ ಮೂಲಕ ಮತ್ತೆ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಕಳೆದ ಒಂದು ವಾರದಿಂದ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಟೊಮೆಟೊ ಸೇರಿದಂತೆ ಕಾಯಿಪಲ್ಲೆ, ಹಸಿರುಪಲ್ಲೆಗಳ ದರಗಳು ಏರುತ್ತಿವೆ. ಹೀಗಾಗಿ ಮಾರುಕಟ್ಟೆಗೆ ಹೋಗಬೇಕೆಂದರೆ ಚೀಲ ತುಂಬಾ ಹಣ ತುಂಬಿಕೊಂಡು ಬೇಬಿನಲ್ಲಿ ತರಕಾರಿ ತರುವ ಸ್ಥಿತಿ ಎದುರಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಮಳೆ ಬಂದ ಪರಿಣಾಮ ಬಂದ ಬೆಳೆಯೂ ಹಾಳಾಗುತ್ತಿದೆ. ಜತೆಗೆ ಮಾರುಕಟ್ಟೆಯ ಬೇಡಿಕೆಗೆ ಅನುಗುಣವಾಗಿ ತರಕಾರಿ ದೊರೆಯದ ಕಾರಣ ಬೆಲೆ ಏರಿಕೆಯಾಗಿದೆ. ಹೀರೆಕಾಯಿ ಕೆಜಿಗೆ 120 ರೂ., ಸೌತೆಕಾಯಿ 120 ರೂ., ಚೌಳಿಕಾಯಿ 80 ರೂ., ಬೀನ್ಸ್ 160 ರೂ.,. 6 ನಿಂಬೆ ಹಣ್ಣಿಗೆ 20 ರೂ., 1 ಮೂಲಂಗಿಗೆ 10 ರೂ., ಹೀಗೆ ತರಕಾರಿ ದರ ಏರುಮುಖದಲ್ಲಿ ಸಾಗಿದೆ. ಶನಿವಾರದಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯೂ ಹೆಚ್ಚಾಗಿದ್ದು , ಸಾಗಣೆ ವೆಚ್ಚ ಹೆಚ್ಚಾಗುತ್ತಿರುವುದರಿಂದ…
ಬೆಂಗಳೂರು: ಟ್ರಾಫಿಕ್ ನಿಂದ ಬಳಲುತ್ತಿದ್ದವರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಸಿದ್ಧವಾಗಿದೆ. ರಾಗಿಗುಡ್ಡ-ಸೆಂಟ್ರಲ್ ಸಿಲ್ಕ್ ಬೋರ್ಡ್ ವರಗೆ ನಿರ್ಮಾಣವಾಗ್ತಿದ್ದ 3.3 ಕಿಮೀ ಉದ್ದದ ಡಬಲ್ ಡೆಕ್ಕರ್ ಫ್ಲೈಓವರ್ ಕಾಮಗಾರಿ ಕಂಪ್ಲಿಟ್ ಆಗಿದ್ದು, ಶೀಘ್ರದಲ್ಲಿಯೇ ಉದ್ಘಾಟನೆಗೆ ಸಜ್ಜಾಗ್ತಿದೆ. ಅಂತಿಮ ತಪಾಸಣೆ ಬಾಕಿಯಿದ್ದು ಅದು ಮುಗಿಯುತ್ತಿದ್ದಂತೆ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ. ಈ ಡಬಲ್ ಡೆಕ್ಕರ್ ಫ್ಲೈಓವರ್ ನಲ್ಲಿ ಮೆಟ್ರೋ ರೈಲು ಹಾಗೂ ವಾಹನ ಸಂಚರಿಸುತ್ತೆ. ಕೆಳರಸ್ತೆಯಿಂದ ಡಬ್ಬಲ್ ಡೆಕ್ಕರ್ ನ ಮೊದಲ ಫ್ಲೈಓವರ್ 8 ಮೀ. ಎತ್ತರದಲ್ಲಿದ್ದರೆ, ಮೆಟ್ರೋ ವಯಡಕ್ಟ್ 16 ಮೀ. ಎತ್ತರದಲ್ಲಿದೆ. ಸಂಚಾರ ದಟ್ಟಣೆ ನಿವಾರಣೆ ದೃಷ್ಟಿಯಿಂದ ರಾಗಿಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ವರೆಗೆ ಸಿಗ್ನಲ್ ಮುಕ್ತವಾಗಿಸಲಾಗಿದೆ. ಎಚ್ ಎಸ್ ಆರ್ ಲೇಔಟ್ ಹಾಗೂ ಹೊಸೂರು ಲೇಔಟನ್ನು ಇದರಿಂದ ಅಡ್ಡಿಯಿಲ್ಲದೆ ತಲುಪಬಹುದು. ಇದರ ಜೊತೆಗೆ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ಅನ್ನು ಸಂಪೂರ್ಣ ಸಿಗ್ನಲ್ ಮುಕ್ತಗೊಳಿಸುವ ಬಿಎಂಆರ್ ಸಿಎಲ್ನಿಂದ ಬರೋಬ್ಬರಿ ಐದು ರ್ಯಾಂಪ್ಗಳ ನಿರ್ಮಾಣ ಮಾಡ್ತಿದೆ. ಒಂದು…
ಗುಬ್ಬಿ ತಾಲ್ಲೂಕು ಕಡಬ ಹೋಬಳಿ ಬೋಚಿಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಕರ್ಣಾಟ ಬಲ ಸೇನೆ ವತಿಯಿಂದ ನವೀಕರಣ ಮಾಡಲಾಯಿತು. ಬೋಚಿಹಳ್ಳಿ ಗ್ರಾಮದ ಸರ್ಕಾರಿಶಾಲೆಗೆ ಕರ್ಣಾಟ ಬಲ ಸೇನೆ ಸಂಘಟನೆ ವತಿಯಿಂದ ಸುಣ್ಣ ಬಣ್ಣವನ್ನು ಹೊಡೆದು ಅಂದವನ್ನು ಹೆಚ್ಚಿಸಲಾಯಿತು. ಶಾಲೆಯ ಮೈದಾನದಲ್ಲಿ ಗಿಡಗಳನ್ನು ನೆಟ್ಟು ಶಾಲೆಯು ಆಕರ್ಷಕವಾಗಿ ಕಾಣುವಂತೆ ಮಾಡಲಾಯಿತು. ಈ ಕಾರ್ಯವನ್ನು ಗ್ರಾಮದ ಯುವ ಮುಖಂಡರಾದಂತಹ ನಾಗೇಶ್ ಬಿ.ಟಿ. ಅಭಿನಂದಿಸಿದರು. ಇದೇ ವೇಳೆ ಮಾತನಾಡಿದ ಸಂಘಟನೆಯ ನವೀನ್ ಸಿಂಗ್, ಕರ್ಣಾಟ ಬಲ ಸೇನೆಯು ಸರ್ಕಾರಿ ಶಾಲೆ ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದರು. ನಮ್ಮ ಸರ್ಕಾರಿ ಶಾಲೆಯಲ್ಲಿ ಈ ಬಾರಿಯಿಂದ ಎಲ್ ಕೆ ಜಿ ಮತ್ತು ಯು ಕೆ ಜಿ ಹಾಗೂ ಇಂಗ್ಲಿಷ್ ಮಾಧ್ಯಮ ಪ್ರಾರಂಭಿಸುತ್ತಿದ್ದು, ಮಕ್ಕಳ ದಾಖಲಾತಿಯು ಕಳೆದ ಬಾರಿಗಿಂತ ಈ ಬಾರಿ ಅತ್ಯಧಿಕವಾಗಿದೆ ಎಂದರು. ಮುಖ್ಯ ಶಿಕ್ಷಕರಾದ ಮುದ್ದ ಹನುಮಯ್ಯ, ಗ್ರಾಮಸ್ಥರಾದ ಯೋಗೇಶ್ ಮೂರ್ತಿ, ಕಡೇಕ್ಟ್ರ್ ಶಂಕರ್, ನಾಗರಾಜು, ಗುರು, ಶಾಂತಪ್ಪ, ಚಂದ್ರಶೇಖರ, …
ಜೂನ್ 21 ವಿಶ್ವದ ಅತ್ಯಂತ ವಿಶೇಷ ದಿನವೆಂದು ಸಾಬೀತಾಗಲಿದೆ. ಜ್ಯೋತಿಷ್ಯ ಮತ್ತು ಖಗೋಳಶಾಸ್ತ್ರದ ಪ್ರಕಾರ, ಈ ದಿನಾಂಕದಂದು, ದಿನವು ಅತಿ ಉದ್ದವಾಗಿರುತ್ತದೆ, ರಾತ್ರಿ ಆಕಾಶದಲ್ಲಿ ಬಹಳ ಅಪರೂಪದ ದೃಶ್ಯವಿರುತ್ತದೆ. ಈ ದಿನ, ಜಗತ್ತು ರಾತ್ರಿ ಆಕಾಶದಲ್ಲಿ ಸ್ಟ್ರಾಬೆರಿ ಚಂದ್ರನನ್ನ ನೋಡುತ್ತದೆ. ಚಂದ್ರನು ತಿಳಿ ಗುಲಾಬಿ ಬಣ್ಣದಲ್ಲಿರುತ್ತಾನೆ ಮತ್ತು ಈ ದಿನದಿಂದ ಯುರೋಪ್ ಮತ್ತು ಅಮೇರಿಕಾದಲ್ಲಿ ಬೇಸಿಗೆ ಕಾಲ ಪ್ರಾರಂಭವಾಗುತ್ತದೆ. ಯುರೋಪ್ ಖಂಡದ ಉತ್ತರದ ದೇಶಗಳಲ್ಲಿ ಉದಯಿಸುವಾಗ ಚಂದ್ರನು ಕೆಂಪು ಬಣ್ಣದಲ್ಲಿ ಕಾಣಿಸಿಕೊಳ್ಳುತ್ತಾನೆ. ಆಕಾಶದಲ್ಲಿ ಚಂದ್ರನು ಗಮನಾರ್ಹವಾಗಿ ಕೆಳಮಟ್ಟದಲ್ಲಿ ಕಾಣಿಸಿಕೊಂಡಾಗ ಇದು ಸಂಭವಿಸುವ ಸಾಧ್ಯತೆಯಿದೆ. ಇದು ಮೇಲಕ್ಕೆ ಏರುತ್ತಿದ್ದಂತೆ ಗುಲಾಬಿ ಬಣ್ಣದಲ್ಲಿರುತ್ತದೆ. ಸ್ಟ್ರಾಬೆರಿ ಮೂನ್ ಜೂನ್ 21ರ ಶುಕ್ರವಾರ ರಾತ್ರಿ 9:07ಕ್ಕೆ ತನ್ನ ಉತ್ತುಂಗದಲ್ಲಿರುತ್ತಾನೆ, ಇದು ವರ್ಷದ ಅತಿ ಉದ್ದದ ದಿನವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್…