Author: admin

ಬೆಂಗಳೂರು: ಸಂಪನ್ಮೂಲ ಕ್ರೋಢಿಕರಿಸುವ ಉದ್ದೇಶದಿಂದ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪಕ್ಕದ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಇದೆ ಎಂದರು. ಬಿಜೆಪಿಯವರ ಆಡಳಿತಾವಧಿಯಲ್ಲಿ 14 ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಿಸಿದ್ದರು. ಆಗ ಇವರೆಲ್ಲ ಎಲ್ಲಿದ್ದರು. ಬಿಜೆಪಿಯವರು ಪ್ರತಿಭಟನೆ ಮಾಡುವುದಕ್ಕು ಮುನ್ನ ಇದನ್ನು ಯೋಚಿಸಲಿ. ಅಭಿವೃದ್ಧಿ ಕಾರ್ಯಗಳಾಗಬೇಕು ಎಂಬ ಉದ್ದೇಶದಿಂದ ಬೆಲೆ ಹೆಚ್ಚಿಸಲಾಗಿದೆ. ಗ್ಯಾರಂಟಿ ಯೋಜನೆಗಳಿಗೋಸ್ಕರ ಬೆಲೆ ಏರಿಕೆ ಮಾಡಿದ್ದಾರೆ ಎಂದು ವ್ಯಾಖ್ಯಾನ ಮಾಡುವುದು ಸರಿಯಲ್ಲ ಎಂದು ಬೇಸರಿಸಿದರು. ಅಧಿಕಾರಕ್ಕೆ ಬಂದಾಗ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಕಡಿಮೆ ಮಾಡುತ್ತೇವೆ ಎಂದು ಸಿಎಂ ಭರವಸೆ ಕೊಟ್ಟಿರುವ ವೀಡಿಯೋ ಬಿಡುಗಡೆ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಇವತ್ತು ಒಂದು ಮಾತನ್ನು ಹೇಳುತ್ತೇನೆ. ಆ ಮಾತು ಶಾಶ್ವತವಾಗಿ ಉಳಿದು ಹೋಗುತ್ತದೆಯೇ? ಸಂದರ್ಭಕ್ಕೆ ಅನುಸಾರವಾಗಿ ಆಡಳಿತ ಮಾಡಬೇಕಲ್ಲವೇ? ಎಂದರು. ರೇಣುಕಾಸ್ವಾಮಿ…

Read More

ಹೃದಯಾಘಾತ ಎನ್ನುವುದು ಇತ್ತೀಚೆಗೆ ಶೀತ, ಜ್ವರದಷ್ಟೇ ಸಾಮಾನ್ಯ ಎನ್ನುವಂತಾಗಿದೆ. ಹೀಗಾಗಿ ಹೃದಯದ ಬಗ್ಗೆ ಕಾಳಜಿ ವಹಿಸಿ ಆರೋಗ್ಯ ಕಾಪಾಡಿಕೊಳ್ಳುವುದು ಅತೀ ಅಗತ್ಯ. ಯುವಕರು, ವೃದ್ಧರು ಅನ್ನೋ ವ್ಯತ್ಯಾಸವಿಲ್ಲದೆ ಎಲ್ಲಾ ವಯೋಮಾನದವರು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಇದೀಗ ಅಂತಹದೇ ಆಘಾತಕಾರಿ ಘಟನೆಯೊಂದು ನಡೆದಿದ್ದು, ತನ್ನ ಕುಟುಂಬ ಸದಸ್ಯರೊಂದಿಗೆ ಹೋಟೆಲ್’ಗೆ ಬಂದು. ಖುಷಿ ಖುಷಿಯಲ್ಲಿ ಮಾತನಾಡುತ್ತ ಇನ್ನೇನು ಊಟ ಮಾಡಬೇಕು ಅಂತ ಅನ್ನುವಷ್ಟರಲ್ಲಿ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೆ ತುತ್ತಾಗಿ ಪ್ರಾಣವನ್ನೇ ಬಿಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಈ ಘಟನೆ ಕಳೆದ ವರ್ಷ ಡಿಸೆಂಬರ್ ನಲ್ಲಿ ನಡೆದಿದ್ದು, ಈ ಕುರಿತ ವಿಡಿಯೋ ತುಣುಕೊಂದು ಇದೀಗ ವೈರಲ್ ಆಗುತ್ತಿದೆ. ರೆಸ್ಟೋರೆಂಟ್ ಒಂದಕ್ಕೆ ಕುಟುಂಬ ಸಮೇತ ಊಟಕ್ಕೆ ಬಂದಂತಹ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೆ ತುತ್ತಾಗಿದ್ದಾರೆ. ಈ ದೃಶ್ಯ ಅಲ್ಲಿದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೈರಲ್ ವಿಡಿಯೋದಲ್ಲಿ ಕುಟುಂಬ ಸಮೇತ ರೆಸ್ಟೋರೆಂಟ್ ಗೆ ಬಂದಂತಹ ವ್ಯಕ್ತಿಯೊಬ್ಬರು ಅವರೆಲ್ಲರೊಂದಿಗೆ ಖುಷಿಯಿಂದ ಮಾತನಾಡುತ್ತಿರುವ ದೃಶ್ಯವನ್ನು ಕಾಣಬಹುದು. ಹೀಗೆ ಮಾತನಾಡುತ್ತಿರುವಾಗ ಅವರು ಆರ್ಡರ್ ಮಾಡಿದಂತಹ ಫುಡ್…

Read More

ಮತ್ತೊಮ್ಮೆ ಹಿಜಾಬ್ ಜಗಳ ಆರಂಭಗೊಂಡಿದೆ. ಮುಂಬೈನ ಚೆಂಬೂರ್‌ ನಲ್ಲಿರುವ ಆಚಾರ್ಯ ಕಾಲೇಜಿನಲ್ಲಿ ಹಿಜಾಬ್‌ ಗೆ ನಿಷೇಧ ಹೇರಲಾಗಿದ್ದು, ಇದರ ವಿರುದ್ಧ ಒಂಬತ್ತು ವಿದ್ಯಾರ್ಥಿನಿಯರು ಬಾಂಬೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಹಿಜಾಬ್ ಮೇಲಿನ ನಿಷೇಧವನ್ನು ತೆಗೆದುಹಾಕುವಂತೆ ವಿದ್ಯಾರ್ಥಿನಿಯರು ನ್ಯಾಯಾಲಯದಲ್ಲಿ ಮನವಿ ಮಾಡಿದ್ದು, ಇದರೊಂದಿಗೆ ಕಾಲೇಜು ಆಡಳಿತವು ಧರ್ಮದ ಆಧಾರದಲ್ಲಿ ಪಕ್ಷಪಾತ ಮಾಡುತ್ತಿದೆ ಎಂಬ ಆರೋಪವನ್ನೂ ವಿದ್ಯಾರ್ಥಿಗಳು ಮಾಡಿದ್ದಾರೆ. ಮುಂಬೈನ ಎನ್‌.ಜಿ.ಆಚಾರ್ಯ ಮತ್ತು ಡಿ.ಕೆ.ಮರಾಠೆ ಕಾಲೇಜ್ ಆಫ್ ಆರ್ಟ್ಸ್, ಸೈನ್ಸ್ ಮತ್ತು ಕಾಮರ್ಸ್‌ನ 9 ವಿದ್ಯಾರ್ಥಿನಿಯರು, ಕಾಲೇಜು ಆಡಳಿತವು ಇತ್ತೀಚೆಗೆ ಜಾರಿಗೆ ತಂದಿರುವ ಡ್ರೆಸ್ ಕೋಡ್ ಅನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್‌ನ ಮೊರೆ ಹೋಗಿದ್ದಾರೆ. ಕಾಲೇಜು ನಿಷೇಧ ಹೇರಿರುವುದು ಸ್ವೇಚ್ಛಾಚಾರ’ ಎಂದು ವಿದ್ಯಾರ್ಥಿಗಳು ಮನವಿಯಲ್ಲಿ ತಿಳಿಸಿದ್ದಾರೆ. ಈ ಡ್ರೆಸ್ ಕೋಡ್ ಅಡಿಯಲ್ಲಿ, ವಿದ್ಯಾರ್ಥಿನಿಯರು ಕ್ಯಾಂಪಸ್‌ ನಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಲಾಗಿದೆ. ಅರ್ಜಿದಾರ ವಿದ್ಯಾರ್ಥಿನಿಯರು ಹೊಸ ಡ್ರೆಸ್ ಕೋಡ್ ತಮ್ಮ ಖಾಸಗಿತನ, ಘನತೆ ಮತ್ತು ಧಾರ್ಮಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಪ್ರತಿಪಾದಿಸಿದ್ದಾರೆ. ಕಾಲೇಜಿನಲ್ಲಿ…

Read More

ಬೆಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ಬಿಬಿಎಂಪಿ ಶಾಲೆಗಳ ದಾಖಲಾತಿಯಲ್ಲಿ ಭಾರೀ ಇಳಿಕೆ ಕಂಡಿದೆ. ಕಳೆದ ಬಾರಿಗಿಂತ ಈ ಬಾರಿಯ ದಾಖಲಾತಿಯಲ್ಲಿ ಸುಮಾರು ಶೇ.40ರಷ್ಟು ಕುಸಿತ ಕಂಡಿದೆ. ಹೌದು, ಬಿಬಿಎಂಪಿ ಶಾಲಾ-ಕಾಲೇಜುಗಳಲ್ಲಿ 2024-25ನೇ ಸಾಲಿನ ಶೈಕ್ಷಣಿಕ ಸಾಲಿನ ದಾಖಲಾತಿ ಮುಗಿಯುವ ಹಂತಕ್ಕೆ ಬಂದಿದೆ. ಆದರೆ, ಈ ಬಾರಿ ದಾಖಲಾತಿ ಪ್ರಮಾಣ ಭಾರೀ ಇಳಿಕೆಯಾಗಿದೆ. ಕೊರೊನಾ ಸಂದರ್ಭದಲ್ಲಿ ಬಿಬಿಎಂಪಿ ಶಾಲಾ ಕಾಲೇಜುಗಳಲ್ಲಿ ದಾಖಲಾತಿ ಪ್ರಮಾಣ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿತ್ತು. ಕಳೆದ 2023–24ನೇ ಸಾಲಿನಲ್ಲಿ ಬರೋಬ್ಬರಿ 25 ಸಾವಿರಕ್ಕೂ ಅಧಿಕ ಸಂಖ್ಯೆಯ ವಿದ್ಯಾರ್ಥಿಗಳು ದಾಖಲಾತಿ ಪಡೆದುಕೊಂಡಿದ್ದರು. ಆದರೆ, ಈ ಬಾರಿ ಕೇವಲ 19,974 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಬಹುತೇಕ ಶೇ.40ರಷ್ಟು ವಿದ್ಯಾರ್ಥಿಗಳ ದಾಖಲಾತಿ ಕಡಿಮೆಯಾಗಿದೆ. ಈ ಬಾರಿಯ ದಾಖಲಾತಿ: ನರ್ಸರಿ ಶಾಲೆ: 311. ಪ್ರಾಥಮಿಕ ಶಾಲೆ: 3674. ಪ್ರೌಢ ಶಾಲೆ: 6691. ಪಿಯು ಕಾಲೇಜು: 4711. ಡಿಗ್ರಿ ಕಾಲೇಜು: 1689. ಪಿಜಿ ಕಾಲೇಜು: 98. ಒಟ್ಟು ದಾಖಲಾತಿ: 19,974 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಬಿಬಿಎಂಪಿ ತನ್ನ ವ್ಯಾಪ್ತಿಯ ಶಾಲೆಗಳನ್ನು…

Read More

ಸಂಸದ ರಾಹುಲ್ ಗಾಂಧಿ ಅವರ ವಿರುದ್ಧ ಅಪಪ್ರಚಾರ ಮಾಡಿದ ಆರೋಪದಡಿ ಪತ್ರಕರ್ತ ಹಾಗೂ ಲೇಖಕ ಅಜೀತ್ ಭಾರತಿ ವಿರುದ್ಧ ಪ್ರಕರಣ ದಾಖಲಾಗಿರುವುದಾಗಿ ವರದಿಯಾಗಿದೆ. ಕೆಪಿಸಿಸಿ ಕಾನೂನು ಘಟಕದ ಕಾರ್ಯದರ್ಶಿ ಹಾಗೂ ವಕೀಲ ಬಿ.ಕೆ.ಬೋಪಣ್ಣ ಅವರು ನೀಡಿರುವ ದೂರಿನನ್ವಯ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ 153ಎ ಹಾಗೂ 505(2) ಕಾಯ್ದೆಯಡಿ ಅಜೀತ್ ಭಾರತಿ ಅವರ ವಿರುದ್ಧ ಪ್ರಕರಣ ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಜೂ.6ರಂದು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದ ಅಜೀತ್ ಭಾರತಿ, ‘ ಸಂಸದ ರಾಹುಲ್ ಗಾಂಧಿ ಅವರು ಶ್ರೀರಾಮ ಮಂದಿರದ ಬದಲಿಗೆ ಬಾಬರಿ ಮಸೀದಿಯನ್ನು ಮರಳಿ ತರಲು ಉದ್ದೇಶಿಸಿದ್ದಾರೆ’ ಎಂದು ಹೇಳಿದ್ದಾರೆ. ಆದರೆ, ರಾಹುಲ್ ಗಾಂಧಿಯವರು ತಮ್ಮ ಯಾವುದೇ ಭಾಷಣಗಳಲ್ಲಿ ಅಂತಹ ಯಾವುದೇ ಹೇಳಿಕೆ ನೀಡಿರುವುದಿಲ್ಲ. ಸಮುದಾಯಗಳ ನಡುವೆ ಭಿನ್ನಾಭಿಪ್ರಾಯ ಮತ್ತು ದ್ವೇಷವನ್ನು ಪ್ರಚೋದಿಸುವ ಉದ್ದೇಶದಿಂದ, ಅಜೀತ್ ಭಾರತಿಯವರು ಸುಳ್ಳು ಮಾಹಿತಿಯನ್ನ ಹಂಚಿಕೊಂಡಿದ್ದಾರೆ. ಇದು ಸಾರ್ವಜನಿಕ ವ್ಯವಸ್ಥೆಯಲ್ಲಿ ಶಾಂತಿಯನ್ನು ಕದಡುವ ಮತ್ತು ಪ್ರಚೋದಿಸುವ ಸ್ಪಷ್ಟ ಉದ್ದೇಶದಿಂದ ಕೂಡಿದೆ ಎಂದು…

Read More

ಸಿನಿಮಾದಲ್ಲಿ ಹೀರೋಗಳಾದವರು ನಿಜ ಜೀವನದಲ್ಲಿ ಹೀರೋಗಳಾಗಿರುವುದಿಲ್ಲ ಎಂದು ಕೆಲವರು ಹೇಳುತ್ತಾರೆ. ದರ್ಶನ್ ಪ್ರಕರಣ ನೋಡಿದಾಗ ಅವರು ಸಿನಿಮಾದಲ್ಲಿ ಮಾತ್ರವೇ ಹೀರೋ ಆಗಿದ್ದರು ಎನಿಸುತ್ತದೆ. ದರ್ಶನ್ ಗೆ ಇಷ್ಟೊಂದು ಕ್ರೂರ ಮನಸ್ಥಿತಿ ಇದೆ ಎಂದು ಯಾರೂ ಭಾವಿಸಿರಲಿಲ್ಲ ಎಂದು ಮಾಜಿ ಸಚಿವ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷ ಹತ್ಯೆಗೊಳಗಾದ ರೇಣುಕಾ ಸ್ವಾಮಿ ಅವರ ಕುಟುಂಬದ ಜೊತೆಗಿದೆ. ಆ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದರು. ದರ್ಶನ್ ಪ್ರಕರಣ ಇಡೀ ನಾಗರಿಕ ಸಮಾಜವೇ ತಲೆತಗ್ಗಿಸುವಂತಹದ್ದಾಗಿದೆ. ಯಾರಿಗೂ ಕಾನೂನು ಕೈಗೆತ್ತಿಕೊಂಡು ಕ್ರೌರ್ಯ ಮಾಡುವ ಅಧಿಕಾರವಿಲ್ಲ. ಸಾರ್ವಜನಿಕ ಜೀವನದಲ್ಲಿ ಇರುವವರಿಗೆ ಈ ಬಗ್ಗೆ ಹೆಚ್ಚು ಬದ್ಧತೆ ಇರಬೇಕು. ಇಂಥ ಕ್ರೌರ್ಯವನ್ನು ಯಾರೂ ಒಪ್ಪಲು ಸಾಧ್ಯವೇ ಇಲ್ಲ ಎಂದು ಹೇಳಿದರು. ರಾಜಕಾರಣಿಗಳ ಮೇಲಿನ ಟೀಕೆಗೆ ಕೊಲೆ ಮಾಡುವುದಾಗಿದ್ದರೆ ಗಂಟೆಗೊಂದು ಹೆಣ ಬೀಳುತ್ತಿತ್ತು. ಆದರೆ ದರ್ಶನ್ ಕಾನೂನು ಕೈಗೆತ್ತಿಕೊಂಡಿದ್ದು ತಪ್ಪು. ಯಾರೇ ತಪ್ಪು ಮಾಡಿದರೂ…

Read More

ಮುಸ್ಲಿಮರು ಆಚರಿಸುವ ಹಬ್ಬಗಳ ಪೈಕಿ ಈದುಲ್ ಅಝ್ಹಾ ಹಬ್ಬವು ಒಂದು. ಇದು ಬಹಳ ವಿಶೇಷತೆಯನ್ನು ಹೊಂದಿದೆ. ಜಾಗತಿಕ ವಲಯದಲ್ಲಿ ಸರ್ವ ಮುಸಲ್ಮಾನರು ಎಲ್ಲಾ ಹಬ್ಬಗಳ ಹಾಗೆ ಈ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ. ಇದು ತ್ಯಾಗ ಮತ್ತು ಬಲಿದಾನ ಸಾವಿರಾರು ಹಿಂದಿನ ಐತಿಹಾಸಿಕ ಚಾರಿತ್ರಿಕ ಘಟನೆಯನ್ನು ಸ್ಮರಿಸುವ ಹಬ್ಬ. ಈ ಕುರಿತಾದ ಚರಿತ್ರೆಗಳು ಮತ್ತು ನೈಜ ಘಟನೆಗಳು ಖುರ್ ಆನ್ ಹಾಗೂ ಇಸ್ಲಾಮಿನ ಧಾರ್ಮಿಕ ಗ್ರಂಥದಲ್ಲಿ ಪುರಾವೆ ಸಮೇತ ಉಲ್ಲೇಖವಿದೆ. ಇಸ್ಲಾಮಿಕ್ ಕ್ಯಾಲೆಂಡರ್ ಪ್ರಕಾರ ಅರೇಬಿಕ್ ತಿಂಗಳ ಕೊನೆಯ ತಿಂಗಳ ಝುಲ್ ಹಿಜ್ಜ ಬಹಳ ಪವಿತ್ರ ತಿಂಗಳು. ಆರೋಗ್ಯ, ಸಂಪತ್ತು,  ಸೌಕರ್ಯ ಹೊಂದಿ  ಜವಾಬ್ದಾರಿ ಮುಕ್ತನಾಗಿರುವ ಮುಸ್ಲಿಂ ವ್ಯಕ್ತಿಯ ಮೇಲೆ ಇಸ್ಲಾಮಿನ ಐದು ಪಂಚ ಕರ್ಮಗಳಲ್ಲಿ ಒಂದಾದ ಹಜ್ ಕಡ್ಡಾಯವಾಗಿದೆ. ಅದರ ನಿರ್ವಹಣೆಗಿರುವ ಸಮಯ ಮತ್ತು ತಿಂಗಳು ಇದೇ ಝುಲ್ ಹಜ್  ಆಗಿರುತ್ತದೆ. ಆಧ್ಯಾತ್ಮಿಕ ಶುದ್ಧೀಕರಣದೊಂದಿಗೆ ಮಕ್ಕಾದಲ್ಲಿರುವ ಪವಿತ್ರ್ ಭವನ ಕಅಬಾ ಗೆ ತೆರಳಿ ಕಅಬಾ ಭವನಕ್ಕೆ ಪ್ರದಕ್ಷಿಣೆ, ಸಫಾ ಮರ್ವಾ…

Read More

ಅಕ್ರಮ ಗೋಮಾಂಸ ವಹಿವಾಟಿನ ವಿರುದ್ಧದ ಕಾರ್ಯಾಚರಣೆಗಿಳಿದ ಮಧ್ಯಪ್ರದೇಶ ಸರ್ಕಾರ ಆದಿವಾಸಿಗಳೇ ಅಧಿಕ ಸಂಖ್ಯೆಯಲ್ಲಿರುವ ಮಾಂಡ್ಲಾ ಪ್ರದೇಶದಲ್ಲಿ ಸರ್ಕಾರಿ ಜಾಗದಲ್ಲಿ ನಿರ್ಮಿಸಿಕೊಂಡಿದ್ದ 11 ಮಂದಿಯ ಮನೆಗಳನ್ನು ಧ್ವಂಸಗೊಳಿಸಿದೆ. ನಿಯಾನ್ ಪುರದ ಭೈನ್ವಾಹಿ ಪ್ರದೇಶದಲ್ಲಿ ಕಸಾಯಿಗಾಗಿ ದೊಡ್ಡಸಂಖ್ಯೆಯ ಗೋವುಗಳನ್ನು ಹಿಡಿದಿಡಲಾಗಿದೆ ಎಂಬ ಮಾಹಿತಿಯ ಆಧಾರದಲ್ಲಿ ಕ್ರಮ ಕೈಗೊಂಡ ಅಧಿಕಾರಿಗಳು ಗೋಮಾಂಸ ವ್ಯಾಪಾರ ಮತ್ತು ವಹಿವಾಟು ನಡೆಸುತ್ತಿದ್ದವರ ಮತ್ತು ಅಕ್ರಮವಾಗಿ ನಿರ್ಮಿಸಿದ್ದ 11 ಮನೆಗಳನ್ನು ದ್ವಂಸಗೊಳಿಸಿದ್ದಾರೆ. “ಅಧಿಕಾರಿಗಳ ತಂಡ ಆ ಪ್ರದೇಶಕ್ಕೆ ಧಾವಿಸಿದಾಗ 150 ಹಸುಗಳನ್ನು ಆರೋಪಿಗಳ ಮನೆಯ ಹಿಂದೆ ಕಟ್ಟಿಹಾಕಿಕೊಂಡಿರುವುದು ಕಂಡುಬಂದಿದೆ. ಎಲ್ಲ 11 ಆರೋಪಿಗಳ ಮನೆಗಳ ಫ್ರಿಡ್ಜ್ ಗಳಲ್ಲಿ ಗೋಮಾಂಸ ಸಂಗ್ರಹಿಸಿದ್ದುದನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಾಣಿಯ ಕೊಬ್ಬು, ಜಾನುವಾರುಗಳ ಚರ್ಮ ಮತ್ತು ಎಲುಬು ಕೂಡಾ ಕೊಠಡಿಯೊಂದರಲ್ಲಿ ಪತ್ತೆಯಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಶಪಡಿಸಿಕೊಂಡ ಮಾಂಸ ಗೋಮಾಂಸ ಎನ್ನುವುದನ್ನು ಸ್ಥಳೀಯ ಸಂಸ್ಥೆಯ ಪಶುತಜ್ಞರು ದೃಢಪಡಿಸಿದ್ದಾರೆ. ಎಲ್ಲ 11 ಆರೋಪಿಗಳು ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟಿಕೊಂಡು ಇದ್ದುದು ಕಂಡು ಬಂದ ಹಿನ್ನೆಲೆಯಲ್ಲಿ ಅವುಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಹೇಳಲಾಗಿದೆ.…

Read More

ತಂದೆಯೊಬ್ಬ ತನ್ನ 12 ವರ್ಷದ ಮಗಳನ್ನು 72 ವರ್ಷದ ವ್ಯಕ್ತಿಗೆ ಮಾರಾಟ ಮಾಡಿ ಮದುವೆ ಮಾಡಲು ಯತ್ನಿಸಿದ ಘಟನೆ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ನಡೆದಿದೆ. ಆದರೆ ಇದರ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆ ಮದುವೆಯನ್ನು ನಿಲ್ಲಿಸಿದ್ದಾರೆ. ಈ ಪ್ರಕರಣದಲ್ಲಿ 72ರ ಮುದುಕನನ್ನು ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತ ಬಾಲಕಿಯ ತಂದೆಯನ್ನು ಆಲಂ ಸೈಯದ್ ಎಂದು ಗುರುತಿಸಲಾಗಿದೆ. ಈ ಸಂಬಂಧ ಬಾಲಕಿಯ ತಂದೆ ಸೈಯದ್ ತನ್ನ ಮಗಳನ್ನು 5 ಲಕ್ಷಕ್ಕೆ ಮಾರಾಟ ಮಾಡಲು ಒಪ್ಪಂದ ಮಾಡಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮದುವೆಗೆ ಮುನ್ನ ಇಷ್ಟು ಹಣ ಸಿಗದಿದ್ದರೆ ಮದುವೆ ಮಾಡಿಕೊಡುವುದಿಲ್ಲ ಎಂದು ಸೈಯದ್ ಹೇಳಿದ್ದಾನೆ. ಪೊಲೀಸರು ಮಧ್ಯ ಪ್ರವೇಶಿಸಿ ಮದುವೆಗೂ ಮುನ್ನ ತಡೆದಿದ್ದಾರೆ. ಇದಲ್ಲದೆ, ಬಾಲಕಿಯನ್ನು ಮದುವೆಯಾಗಲು ಹೊರಟಿದ್ದ ಮುದುಕ ವರ ಹಬೀಬ್ ಖಾನ್ ಮತ್ತು ಮದುವೆ ನಡೆಸಲು ಮುಂದಾದ ಇತರರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಪೊಲೀಸರು ಎಂಟ್ರಿಯಾಗುತ್ತಿದ್ದಂತೆ ಬಾಲಕಿಯ ತಂದೆ ಸೈಯದ್ ಸ್ಥಳದಿಂದ ಪರಾರಿಯಾಗಿದ್ದಾನೆ. ಸದ್ಯ ಪೊಲೀಸರಿಂದ ಬಾಲಕಿ ತಂದೆ,…

Read More

ಕೊರಟಗೆರೆ: ಕೃಷಿ ಇಲಾಖೆ ರೈತರಿಗೆ ಕಳಪೆ ಗುಣ ಮಟ್ಟದ ಬಿತ್ತನೆ ಬೀಜ  ಮತ್ತು ರಸಗೊಬ್ಬರ ವಿತರಣೆ ಮಾಡಲಾಗುತ್ತಿದ್ದು,  ರೈತರಿಗೆ ನೀಡುತ್ತಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರ ದುಪ್ಪಟ್ಟು ಬೆಲೆಗೆ ಮಾರಾಟ ಮಾಡಲಾಗುತ್ತಿದೆ.  ಖಾಸಗಿ ಮಾರುಕಟ್ಟೆಯಲ್ಲಿ ಸಿಗುವ ಅದೇ ಬೆಲೆಗೆ ಕೃಷಿ ಇಲಾಖೆಯಲ್ಲಿ ಮಾರಾಟ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಕಳಪೆ ಗುಣಮಟ್ಟದಿಂದ ಕೂಡಿದ ಬಿತ್ತನೆ ಬೀಜವನ್ನು ಕೃಷಿ ಇಲಾಖೆಗೆ ರೈತರು ವಾಪಸ್ ನೀಡಿದ ಘಟನೆ ಕೊರಟಗೆರೆಯಲ್ಲಿ ನಡೆದಿದೆ. ಸರ್ಕಾರದಿಂದ ರೈತರಿಗಾಗಿ ಕಡಿಮೆ ಬೆಲೆಯಲ್ಲಿ ಗುಣ ಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ನೀಡಬೇಕು. ಆದರೆ ಕೊರಟಗೆರೆಯ ಕೃಷಿ ಇಲಾಖೆಯಲ್ಲಿ ಈ ರೀತಿ ಯಾಕೆ ಕಳಪೆ ಗುಣಮಟ್ಟದ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಬಂದಿದೆ ಎಂದು ತಿಳಿಯುತ್ತಿಲ್ಲ. ಕೂಡಲೇ ಇದನ್ನು ಸಂಬಂಧಪಟ್ಟ ಅಧಿಕಾರಿಗಳು ಸರಿಪಡಿಸಬೇಕೆಂದು  ಕೊರಟಗೆರೆ ತಾಲೂಕು ಕಚೇರಿ ಮುಂದೆ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಪ್ರತಿಭಟಿಸಿ ತಹಶೀಲ್ದಾವರಿಗೆ ಮನವಿ ಸಲ್ಲಿಸಿದರು. ಈಗಾಗಲೇ ಸರಿಯಾದ ಸಮಯಕ್ಕೆ ಮಳೆ ಬಾರದೆ ಬಿತ್ತನೆಗೆ ತಡವಾಗಿದೆ ಅದರಲ್ಲಿಯೂ…

Read More