Author: admin

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯನಟ ಚಿಕ್ಕಣ್ಣಗೆ ಸಂಕಷ್ಟ ಎದುರಾಗಿದ್ದು, ನೋಟಿಸ್ ನೀಡಲು ಪೊಲೀಸರು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ನಟ ದರ್ಶನ್ ಶೆಡ್ ಗೆ ಹೋಗುವ ಮೊದಲು ( ರೇಣುಕಾಸ್ವಾಮಿ ಕೊಲೆ ನಡೆದ ಸ್ಥಳ) ದರ್ಶನ್ ಚಿಕ್ಕಣ್ಣ ಜೊತೆ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಕೊಲೆ ನಡೆಯುವದಕ್ಕೂ ಮುನ್ನ ಪಾರ್ಟಿ ಒಂದು ನಡೆದಿದ್ದು, ಈ ಪಾರ್ಟಿಯಲ್ಲಿ ದರ್ಶನ್ ಜೊತೆ ಚಿಕ್ಕಣ್ಣ ಭಾಗಿಯಾಗಿದ್ದರು ಎನ್ನಲಾಗಿದೆ. ಚಿಕ್ಕಣ್ಣಗೂ ಈ ಪ್ರಕರಣಕ್ಕೂ ಸಂಬಂಧ ಇಲ್ಲದೇ ಇದ್ರೂ ಕೊಲೆ ನಡೆದ ದಿನ ದರ್ಶನ್ ಜೊತೆ ಚಿಕ್ಕಣ್ಣ ಇದ್ದರು ಎಂಬ ಕಾರಣಕ್ಕೆ ನೋಟಿಸ್ ಕೊಡಲು ಪೊಲೀಸರು ಸಿದ್ದತೆ ನಡೆಸಿದ್ದಾರೆ. ಪೊಲೀಸ್ ವಿಚಾರಣೆಗೆ ಹಾಜರಾಗಿ ನಟ ಚಿಕ್ಕಣ್ಣ ಕೂಡ ಹೇಳಿಕೆ ನೀಡುವ ಸಾಧ್ಯತೆಯಿದೆ. ನಟ ದರ್ಶನ್​​ ಶೆಡ್​ ಗೆ ಹೋಗುವ ಮೊದಲು ಖಾಸಗಿ ರೆಸ್ಟೋರೆಂಟ್​ ನಲ್ಲಿ ಪಾರ್ಟಿ ಮಾಡಿದ್ದರು. ಈ ಪಾರ್ಟಿಯಲ್ಲಿ ನಟ ಚಿಕ್ಕಣ್ಣ, ನಿರ್ಮಾಪಕರು ಭಾಗಿಯಾಗಿದ್ದರು. ಪಾರ್ಟಿಯಿಂದ ಎದ್ದು ನಟ ದರ್ಶನ್ ಮನೆಗೆ ಹೊಗಬೇಕಿತ್ತು. ಆದರೆ ಅವರು ತೆರಳಿದ್ದು…

Read More

ಬೆಳಗಾವಿ :ಭ್ರೂಣ ಹತ್ಯೆ ಪ್ರಕರಣದ ಕರಾಳ ರೂಪ ಬೆಳಕಿಗೆ ಬಂದಿದ್ದು, ಜನರನ್ನು ಬೆಚ್ಚಿ ಬೀಳಿಸಿದೆ. ಪೊಲೀಸರ ತನಿಖೆ ವೇಳೆ ಹೂತು ಹಾಕಿದ್ದ ಮೂರು ಭ್ರೂಣಗಳು ಪತ್ತೆಯಾಗಿದ್ದು, ಈ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ನಡೆದಿದೆ. ಮಕ್ಕಳ ಮಾರಾಟ ಜಾಲದಲ್ಲಿ ಸಿಕ್ಕಿ ಬಿದ್ದಿರುವ ನಕಲಿ ವೈದ್ಯ ಅಬ್ದುಲ್ ಗಫಾತ್ ಲಾಡಖಾನ್‌ ಎಂಬಾತ ಭ್ರೂಣ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ಮಕ್ಕಳ ಮಾರಾಟ ಜಾಲದ ಪ್ರಕರಣವನ್ನು ಬೆನ್ನತ್ತಿರುವ ಬೆಳಗಾವಿ ಪೊಲೀಸರಿಗೆ ಬೆಚ್ಚಿಬಿಳಿಸುವ ಮಾಹಿತಿ‌ ಲಭ್ಯವಾಗಿದೆ. ಮಾತ್ರವಲ್ಲ ಭ್ರೂಣವನ್ನು ಹತ್ಯೆಗೈದು ತನ್ನ ಫಾರ್ಮ್ ಹೌಸ್‌ನಲ್ಲಿ ಹೂತು ಹಾಕಿದ್ದ ಎನ್ನಲಾಗಿದೆ. ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಸೂಚನೆ ಮೇರೆಗೆ ಹೆಚ್ಚಿನ ಪರಿಶೀಲನೆಗೆ ತಂಡ ರಚನೆ ಮಾಡಲಾಗಿದ್ದು, ಪೊಲೀಸರು, ಆರೋಗ್ಯ ಇಲಾಖೆ, ಎಫ್ ಎಸ್ ಎಲ್ ತಂಡ ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದ ಬಳಿ ಇರೋ ನಕಲಿ ವೈದ್ಯನ ಫಾರ್ಮ್ ಹೌಸ್ ಗೆ ಭೇಟಿ ನೀಡಿ ಹೂತು ಹಾಕಲಾಗಿದ್ದ ಮೂರು ಭ್ರೂಣಗಳನ್ನು ವಶಕ್ಕೆ ಪಡೆದಿದ್ದಾರೆ. ಜೂನ್ 10 ರಂದು…

Read More

ಉತ್ತರ ಭಾರತದ ಹಲವೆಡೆ ತಾಪಮಾನ ಹೆಚ್ಚಳವಾಗಿದೆ. ಈ ನಡುವೆ ಬಿಸಿಲಿನ ತಾಪದಿಂದ ಬೇಸತ್ತ ಅಮೃತಸರದ ಐಐಎಮ್‍ನ ವಿದ್ಯಾರ್ಥಿಗಳು ಹಾಸ್ಟೆಲ್‍ ನಲ್ಲಿ ಎಸಿ ಅಳವಡಿಸುವಂತೆ ಆಗ್ರಹಿಸಿ ಮೆಸ್‍ನಲ್ಲಿ ವಿನೂತನವಾಗಿ ನಿದ್ರಿಸಿ ಪ್ರತಿಭಟನೆ ನಡೆಸಿದ್ದಾರೆ. ಕಳೆದ 2 ದಿನಗಳಿಂದ ಅಮೃತಸರದಲ್ಲಿ ಗರಿಷ್ಠ ತಾಪಮಾನ 44.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ವಿದ್ಯಾರ್ಥಿಗಳ ಈ ಪ್ರತಿಭಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ವಿದ್ಯಾರ್ಥಿಗಳು ಕುರ್ಚಿ ಮೇಲೆ ಕುಳಿತು, ಟೇಬಲ್ ಮೇಲೆ ತಲೆ ಇರಿಸಿಕೊಂಡು ನಿದ್ರಿಸುವ ರೀತಿಯಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ. ಹಾಸ್ಟೆಲ್‍ ನ ಸೌಲಭ್ಯಗಳನ್ನು ಒದಗಿಸುವ ಹಾಗೂ ನಿರ್ವಹಣೆಯ ವೈಫಲ್ಯದ ವಿರುದ್ಧ ಮೌನ ಪ್ರತಿಭಟನೆಯ ಸಂಕೇತವಾಗಿ ವಿದ್ಯಾರ್ಥಿಗಳು ಈ ರೀತಿ ಪ್ರತಿಭಟಿಸಿದ್ದಾರೆ ಎನ್ನಲಾಗಿದೆ. ಕಳೆದ ವರ್ಷವೂ ವಿದ್ಯಾರ್ಥಿಗಳು ಈ ಬೇಡಿಕೆಯನ್ನು ಮುಂದಿಟ್ಟಿದ್ದರು. ಆದರೆ ಹಾಸ್ಟೆಲ್‍ ಅನ್ನು ತಾತ್ಕಾಲಿಕ ವಸತಿಗೃಹದಲ್ಲಿ ನಡೆಸಲಾಗುತ್ತಿದ್ದು, ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡರೆ ಈ ಸಮಸ್ಯೆ ಬಗೆಹರಿಸಬಹುದು ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…

Read More

ನಟ ದರ್ಶನ್ ಮತ್ತು ಟೀಂ ಮಾಡಿರುವ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ ಮಾಧ್ಯಮ, ಪೊಲೀಸ್ ಸಿಬ್ಬಂದಿ ತುಂಬಾ ಕೆಲಸ ಮಾಡುತ್ತಿದ್ದೀರಿ, ನಿಮ್ಮ ಕೆಲಸವನ್ನು ನಾನು ಗೌರವಿಸುತ್ತೇನೆ. ಮೃತ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು’ ಎಂದು ತಿಳಿಸಿದರು. ಮುಂದುವರಿದು ಮಾತನಾಡಿದ ಅವರು, ‘ರೇಣುಕಾಸ್ವಾಮಿ ಪತ್ನಿಗೆ ನ್ಯಾಯ ಸಿಗಬೇಕು, ಇನ್ನೂ ಹುಟ್ಟಬೇಕಿರುವ ಅವರ ಮಗುವಿಗೆ ನ್ಯಾಯ ಸಿಗಬೇಕು. ಕನ್ನಡ ಚಿತ್ರರಂಗಕ್ಕೆ ನ್ಯಾಯ ಸಿಗಬೇಕು. ಚಿತ್ರರಂಗಕ್ಕೆ ಕಪ್ಪು ಚುಕ್ಕೆ ಬರುವುದು ನನಗೆ ಇಷ್ಟವಿಲ್ಲ. ಎಷ್ಟೋ ಕಲಾವಿದರು ನಮ್ಮ ಹಿರಿಯರು ಕಷ್ಟ ಪಟ್ಟು ಬೆಳೆಸಿದ ಸಂಸ್ಥೆಯಿದು. ಬೆವರಿನ ಹನಿಗಳಿಂದ ಕಟ್ಟಿದ ಸಂಸ್ಥೆಯ ಹೆಸರು ಹಾಳಾಗಬಾರದು’ ಎಂದು ತಿಳಿಸಿದರು. ಚಿತ್ರರಂಗದಿಂದ ದರ್ಶನ್ ಬ್ಯಾನ್ ಮಾಡೋದರ ಬಗ್ಗೆ ಪ್ರತಿಕ್ರಿಯಿಸಿದ ಸುದೀಪ್, ‘ಇಲ್ಲಿ ಬ್ಯಾನ್ ಅನ್ನೋದು ಸೆಕೆಂಡರಿ, ಬ್ಯಾನ್ ಮಾಡೋದಕ್ಕಿಂತ ರೇಣುಕಾ ಸ್ವಾಮಿಗೆ ನ್ಯಾಯ ಸಿಗೋದು ಮುಖ್ಯ. ನ್ಯಾಯದ ಮೇಲೆ ಜನರಿಗೆ ಒಂದು…

Read More

ರಾಜ್ಯ ರಾಜಧಾನಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಪ್ರಯಾಣಿಸುವವರ ಸಂಖ್ಯೆ ಬಹಳಷ್ಟಿದೆ.ದಿನ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಕೂಡ ಹೆಚ್ಚಾಗುತ್ತಿದ್ದು, ಮತ್ತಷ್ಟು ರೈಲುಗಳಿಗೆ ಬೇಡಿಕೆಯಿದೆ. ಹಾಗಾಗಿ ಇಲ್ಲಿದೆ ಒಂದು ಸಿಹಿ ಸುದ್ದಿ. ನೈಋತ್ಯ ರೈಲ್ವೆಯು ಬೆಂಗಳೂರು ಮತ್ತು ಹುಬ್ಬಳ್ಳಿ ಸೂಪರ್‌ ಫಾಸ್ಟ್ ಎಕ್ಸ್‌ ಪ್ರೆಸ್ ರೈಲು ಸೇವೆಯನ್ನು ವಿಸ್ತರಿಸಲು ಮುಂದಾಗಿದೆ. ನೈಋತ್ಯ ರೈಲ್ವೆ ರೈಲು ಸಂಖ್ಯೆ 07339/07340 ಹುಬ್ಬಳ್ಳಿ- ಕ್ರಾಂತಿವೀರಣ್ಣ ಸಂಗೊಳ್ಳಿ ರಾಯಣ್ಣ ಬೆಂಗಳೂರು ರೈಲು ನಿಲ್ದಾಣ- ಹುಬ್ಬಳ್ಳಿ ಸೂಪರ್‌ ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನ ಸೇವೆಗಳನ್ನು ವರ್ಷಾಂತ್ಯದವರೆಗೆ ವಿಸ್ತರಿಸಲು ನಿರ್ಧರಿಸಿದೆ. ಕ್ರಾಂತಿವೀರಣ್ಣ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್) ಬೆಂಗಳೂರು ಎಸ್‌ಎಸ್‌ಎಸ್ ಹುಬ್ಬಳ್ಳಿ ಡೈಲಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ವಿಶೇಷ ರೈಲು (07340) ಸೇವೆಯನ್ನು ಜುಲೈ 2 ರಿಂದ ಜನವರಿ 1, 2025 ರವರೆಗೆ ಬೆಂಗಳೂರಿನ ಅಂತ್ಯದಿಂದ ವಿಸ್ತರಿಸಲಾಗಿದೆ ಎಂದು ನೈರುತ್ಯ ರೈಲ್ವೆ ಮಾಹಿತಿ ನೀಡಿದೆ. ರೈಲು ಸಂಖ್ಯೆ 07339 ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಕೆಎಸ್‌ಆರ್ ಬೆಂಗಳೂರು ಸೂಪರ್‌ಫಾಸ್ಟ್ ರೈಲು ಹುಬ್ಬಳ್ಳಿ ರೈಲು ನಿಲ್ದಾಣದಿಂದ ರಾತ್ರಿ 11:15 ಕ್ಕೆ ಹೊರಟು ಬೆಳಗ್ಗೆ…

Read More

ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದಲ್ಲಿ ಪೊಲೀಸರ ವಶದಲ್ಲಿರುವ ನಟ ದರ್ಶನ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದು, ಈ ವೇಳೆ ದರ್ಶನ್ ಭಾವಚಿತ್ರವನ್ನು ರಸ್ತೆಯ ಮಧ್ಯದಲ್ಲಿಟ್ಟು, ಭಾವಚಿತ್ರಕ್ಕೆ ಚಪ್ಪಲಿ ಹಾಗೂ ಬೂಟಿನಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಟ ದರ್ಶನ್ ವಿರುದ್ಧ ಈಗಾಗಲೇ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಯುತ್ತಿದೆ. ಈತನನ್ನು ಯಾವ ಸೆಲೆಬ್ರಿಟಿ ಎಂದು ಪರಿಗಣಿಸದೇ ಆತನನ್ನು ಗಲ್ಲಿಗೇರಿಸಬೇಕು, ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ. ನಿರಂತರವಾಗಿ ವಿವಿಧ ಸಂಘಟನೆಗಳಿಂದ ನಟ ದರ್ಶನ್ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿದ್ದು, ಇನ್ನು ಬೆಳಗಾವಿಯಲ್ಲಿ ಭಾನುವಾರ ಪ್ರತಿಭಟನೆ ಮಾಡಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ದರ್ಶನ್ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ರಾಜ್ಯ ಸರ್ಕಾರ ತೈಲ ದರ ಏರಿಕೆ ಮಾಡಿರುವ ಬಗ್ಗೆ ತೀವ್ರ ಟೀಕೆಗೆ ಒಳಗಾದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಡೀಸೆಲ್‌ ಹಾಗೂ ಪೆಟ್ರೋಲ್‌ ಮೇಲೆ ವಿಧಿಸುತ್ತಿರುವ ತೆರಿಗೆಯು ದಕ್ಷಿಣ ಭಾರತದ ರಾಜ್ಯಗಳು ಹಾಗೂ ನೆರೆಯ ಮಹಾರಾಷ್ಟ್ರಗೆ ಹೋಲಿಸಿದರೆ ಕಡಿಮೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ” ರಾಜ್ಯ ಸರ್ಕಾರವು ಪೆಟ್ರೋಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು 29.84% ಗೆ ಹಾಗೂ ಡೀಸೆಲ್‌ ಮೇಲಿನ ತೆರಿಗೆಯನ್ನು 18.44% ಗೆ ಹೆಚ್ಚಳ ಮಾಡಿದೆ. ಈ ಏರಿಕೆಯ ನಂತರವೂ ಕರ್ನಾಟಕವು ತೈಲೋತ್ಪನ್ನಗಳ ಮೇಲೆ ವಿಧಿಸುತ್ತಿರುವ ತೆರಿಗೆಯು ದಕ್ಷಿಣ ಭಾರತದ ರಾಜ್ಯಗಳಿಗಿಂತ ಹಾಗೂ ನಮ್ಮ ರಾಜ್ಯದ ಆರ್ಥಿಕತೆಯ ಗಾತ್ರಕ್ಕೆ ಹೋಲುವ ಮಹಾರಾಷ್ಟ್ರ ರಾಜ್ಯಕ್ಕಿಂತಲೂ ಕಡಿಮೆಯಿದೆ ” ಎಂದಿದ್ದಾರೆ. ರಾಜ್ಯದ ಪರಿಷ್ಕೃತ ದರ ಕೂಡ ಜನರಿಗೆ ಹೊರೆಯಾಗದಂತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಮೌಲ್ಯವರ್ಧಿತ ತೆರಿಗೆ ಹೆಚ್ಚಳದ ಹೊರತಾಗಿಯೂ, ರಾಜ್ಯದಲ್ಲಿ ಡೀಸೆಲ್‌ ಬೆಲೆ ಗುಜರಾತ್ ಹಾಗೂ ಮಧ್ಯಪ್ರದೇಶಗಳಿಗಿಂತ ಕಡಿಮೆಯಿದೆ. ಪೆಟ್ರೋಲಿಯಂ ಉತ್ಪನ್ನಗಳ ದರವು ಜನರಿಗೆ ಹೊರೆಯಾಗದ ರೀತಿಯಲ್ಲಿ ಲಭ್ಯವಾಗಿಸಲು ನಾವು…

Read More

ಅಪಾರ್ಟ್‌ಮೆಂಟ್‌ ವೊಂದರಲ್ಲಿ ಮೂವರು ಮಹಿಳೆಯರು ಮತ್ತು ಪುರುಷನ ಮೃತದೇಹ ಪತ್ತೆಯಾದ ಘಟನೆ ಸೂರತ್ ನಗರದಲ್ಲಿ ನಡೆದಿದೆ. ಮೇಲ್ನೋಟಕ್ಕೆ, ಅನಿಲ ಚಾಲಿತ ಗೀಸರ್ ಚಾಲನೆಯಲ್ಲಿದ್ದ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಆದರೆ ಸಾವಿಗೆ ನಿಖರವಾದ ಕಾರಣವನ್ನು ಇನ್ನೂ ಪತ್ತೆಯಾಗಿಲ್ಲ ಎಂದು ಎಂದು ಡಿಸಿಪಿ ಹೇಳಿದ್ದಾರೆ. ಬೆಳಗ್ಗೆ 9 ಗಂಟೆ ಸುಮಾರಿಗೆ ನಾಲ್ವರು ಮೃತಪಟ್ಟಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಫ್ಲಾಟ್ ಮಾಲಕಿ ಜಸುಬೆನ್ ವಧೇಲ್, ಆಕೆಯ ಸಹೋದರಿಯರಾದ ಶಾಂತಬೆನ್ ವಧೇಲ್ (53), ಗೌರಿಬೆನ್ ಮೇವಾಡ್ (55) ಮತ್ತು ಗೌರಿಬೆನ್ ಅವರ ಪತಿ ಹೀರಾಭಾಯಿ (60) ಅವರ ಶವಗಳು ಅಪಾರ್ಟ್‌ಮೆಂಟ್‌ನಲ್ಲಿ ಪತ್ತೆಯಾಗಿವೆ ಎಂದು ಅಧಿಕಾರಿ ತಿಳಿಸಿದ್ದಾರೆ. ಸಂತ್ರಸ್ತರು ರಾತ್ರಿ 10 ಗಂಟೆ ಸುಮಾರಿಗೆ ಮಲಗಿದ್ದರು. ಜಸುಬೆನ್ ಅವರ ಮಗ ಬೆಳಗ್ಗೆ 8 ಗಂಟೆಯ ಸುಮಾರಿಗೆ ಅವರನ್ನು ಪರೀಕ್ಷಿಸಲು ಹೋದಾಗ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದರು. ಸಂತ್ರಸ್ತರು ವಾಂತಿ ಮಾಡಿಕೊಂಡಿದ್ದರು ಎನ್ನಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ…

Read More

ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾದ ಸ್ಟೂಡೆಂಟ್ ಪಾರ್ಟಿ ವಿಡಿಯೋ ಹಾಡು ಬಿಡುಗಡೆ ಆಗಿದೆ. ಈ ಸಿನಿಮಾಗೆ ಅರುಣ್ ಅಮುಕ್ತ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸುವ ಮೂಲಕ ಈ ಹಾಡನ್ನು ಬಿಡುಗಡೆ ಮಾಡಲಾಯಿತು. ಈ ಸಿನಿಮಾದಲ್ಲಿ ಚಂದನ್​ ಶೆಟ್ಟಿ ಅಭಿನಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅವರು ಭಾಗಿ ಆಗಿದ್ದರು. ಅವರ ಜೊತೆ ಅರುಣ್ ಅಮುಕ್ತ, ಚೇತನ್ ಕುಮಾರ್ ಕೂಡ ಭಾಗಿಯಾಗಿ ಸಿನಿಮಾ ಮತ್ತು ಸಾಂಗ್​ ಬಗ್ಗೆ ಮಾಹಿತಿ ನೀಡಿದರು. ಈ ಹಾಡಿಗೆ ಚೇತನ್ ಕುಮಾರ್ ಸಾಹಿತ್ಯ ಬರೆದಿದ್ದು, ವಿಜೇತ್ ಕೃಷ್ಣ ಸಂಗೀತ ನೀಡಿದ್ದಾರೆ. ಚಂದನ್​ ಶೆಟ್ಟಿ ಜೊತೆ ಅಮರ್, ಭಾವನಾ, ವಿವಾನ್, ಮನಸ್ವಿ, ಭವ್ಯ, ಅರವಿಂದ್​ ರಾವ್, ಸುನೀಲ್ ಪುರಾಣಿಕ್, ಸಿಂಚನಾ, ಪ್ರಶಾಂತ್ ಸಂಬರ್ಗಿ, ರಘು ರಾಮನಕೊಪ್ಪ, ಕಾಕ್ರೋಚ್ ಸುಧಿ ಮುಂತಾದವರು ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರತಂಡ ಬಿಡುಗಡೆ ಮಾಡಿರುವ ಸ್ಟೂಡೆಂಟ್ ಪಾರ್ಟಿ ಹಾಡು ರ‍್ಯಾಪ್​ ಶೈಲಿಯಲ್ಲಿದೆ. ಈ ಹಾಡಿಗೆ ಚಂದನ್ ಶೆಟ್ಟಿ ಹಾಗೂ ವಿಜೇತ್ ಕೃಷ್ಣ ಧ್ವನಿ ನೀಡಿದ್ದಾರೆ. ವಿಜೇತ್…

Read More

ಕೊಲೆ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಅಭಿಮಾನಿಯೊಬ್ಬ ನಗರದ ಪಂಚರ್ ಅಂಗಡಿಯಲ್ಲಿ ಕೆಲಸ ಮಾಡುವ ಯುವಕನಿಗೆ ಜೀವ ಬೆದರಿಕೆ ಹಾಕಿರುವುದು ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಬೆದರಿಕೆ ಹಾಕಿದ್ದರು ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಯಾದಗಿರಿ ಪೊಲಿಸರು ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ ರಾಜು ಎಂಬಾತನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಗಂಗಾ ನಗರದ ನಿವಾಸಿ ಅಭಿ ಎಂಬ ಯುವಕನಿಗೆ ದರ್ಶನ್ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ರಾಜು ಇತ್ತೀಚೆಗೆ ಬೆದರಿಕೆ ಹಾಕಿದ್ದರು ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಆಡಿಯೋದಲ್ಲಿ ರಾಜು, ಬಾಸ್ ಬಗ್ಗೆ ಮಾತನಾಡಿದ್ರೆ ಕೊಲೆ ಮಾಡೋದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಅಭಿ, ಬಾಸ್ ಬಾಸ್ ಎಂದು ಬಕೆಟ್ ಯಾಕೆ ಹಿಡಿತೀರಿ, ತಾಯಿ-ತಂದೆಗೆ ಬಕೆಟ್ ಹಿಡಿಯಿರಿ ಎಂದು ಇನ್ಸ್ಟಾಗ್ರಾಮ್‍ನಲ್ಲಿ ಸ್ಟೇಟಸ್ ಹಾಕಿದ್ದ. ಇದರಿಂದ ಸಿಟ್ಟಿಗೆದ್ದ ರಾಜು, ಅಭಿಗೆ ಕರೆ ಮಾಡಿ, ವೀಡಿಯೋ ಡಿಲೀಟ್ ಮಾಡದೇ ಇದ್ರೆ ಜೀವಂತ ಸುಡೋದಾಗಿ ಬೆದರಿಸಿದ್ದಾನೆ. ಜೊತೆಗೆ ಕೂಡಲೇ ಕ್ಷಮೆ ಕೇಳಿ ವೀಡಿಯೋ ಮಾಡಿ…

Read More