Author: admin

ನವದೆಹಲಿ: ಕರಾಳ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಬಂಧಿತರಾಗಿರುವ ಮುಸ್ಲಿಮರು, ಆದಿವಾಸಿಗಳು ಮತ್ತು ದಲಿತರ ಭವಿಷ್ಯದ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಆಲ್ ಇಂಡಿಯಾ ಮಜ್ಲಿಸೆ ಇತ್ತಿಹಾದುಲ್ ಮುಸ್ಲಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಈ ಚುನಾವಣಾ ಫಲಿತಾಂಶದಿಂದಲೂ ಮೋದಿ ಸರ್ಕಾರ ಪಾಠ ಕಲಿತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. “ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭಾ ಚುನಾವಣೆ ಫಲಿತಾಂಶದಿಂದ ಪಾಠ ಕಲಿಯುತ್ತಾರೆ ಎಂಬ ನಿರೀಕ್ಷೆ ನನಗಿತ್ತು. ಆದರೆ ಇದಕ್ಕೆ ತಣ್ಣೀರೆರಚಿದ್ದಾರೆ” ಎಂದು ಹೈದರಾಬಾದ್ ಸಂಸದ ಶನಿವಾರ ಅಭಿಪ್ರಾಯಪಟ್ಟರು. “ಯುಎಪಿಎ ಕಾನೂನು ಇಂದು ಮತ್ತೆ ಸುದ್ದಿಯಲ್ಲಿದೆ. ಇದು ಅತ್ಯಂತ ನಿರ್ದಯ ಕಾನೂನು ಆಗಿದ್ದು, ಇದರಡಿ ಸಾವಿರಾರು ಮಂದಿ ಮುಸ್ಲಿಮರು, ದಲಿತರು ಮತ್ತು ಆದಿವಾಸಿಗಳನ್ನು ಜೈಲಿಗೆ ಕಳುಹಿಸಲಾಗಿದ್ದು, ಅವರ ಬದುಕು ನಾಶವಾಗಿದೆ” ಎಂದು ಓವೈಸಿ ಎಕ್ಸ್ ಪೋಸ್ಟ್ ನಲ್ಲಿ ಹೇಳಿದ್ದಾರೆ. 85 ವರ್ಷದ ಸ್ಟ್ಯಾನ್ ಸ್ವಾಮಿಯವರ ಸಾವಿಗೆ ಈ ಕರಾಳ ಕಾನೂನು ಕಾರಣ ಎಂದು ಓವೈಸಿ ಆಪಾದಿಸಿದ್ದಾರೆ. ಆದಿವಾಸಿ ಹಕ್ಕುಗಳ ಹೋರಾಟಗಾರ ಸ್ವಾಮಿ…

Read More

ಲಂಡನ್: ಬ್ರಿಟನ್ ನಲ್ಲಿ ಜುಲೈ 4ರಂದು ನಡೆಯುವ ಚುನಾವಣೆಯಲ್ಲಿ ಪ್ರಧಾನಿ ರಿಷಿ ಸುನಾಕ್ ನೇತೃತ್ವದ ಕನ್ಸರ್ವೇಟಿವ್ ಪಕ್ಷಕ್ಕೆ ಹೀನಾಯ ಸೋಲು ಎದುರಾಗಲಿದ್ದು, ಪಕ್ಷ ವಿನಾಶದ ಅಂಚಿಗೆ ತಲುಪುವ ನಿರೀಕ್ಷೆ ಇದೆ ಎಂದು ಶನಿವಾರ ಬಿಡುಗಡೆ ಮಾಡಲಾದ ಚುನಾವಣಾ ಪೂರ್ವ ಸಮೀಕ್ಷೆಯ ಫಲಿತಾಂಶವೊಂದು ವಿವರಿಸಿದೆ. ಚುನಾವಣೆ ಘೋಷಣೆ ಬಳಿಕ ಪ್ರಚಾರ ಕಾರ್ಯ ಅರ್ಧದ ಹಂತಕ್ಕೆ ತಲುಪಿದ್ದು, ಕನ್ಸರ್ವೇಟಿವ್ ಮತ್ತು ಲೇಬರ್ ಪಕ್ಷಗಳು ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಒಂದು ವಾರದಲ್ಲಿ ಮತ್ತು ಮತದಾರರು ಶೀಘ್ರದಲ್ಲೇ ಅಂಚೆ ಮತಪತ್ರಗಳನ್ನು ಪಡೆಯುವ ಸಂದರ್ಭದಲ್ಲಿ ಈ ಸಮೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಮೇ 22ರಂದು ಅವಧಿಪೂರ್ವ ಚುನಾವಣೆ ಘೋಷಿಸುವ ಮೂಲಕ ಸುನಾಕ್ ಸ್ವಪಕ್ಷೀಯರಲ್ಲೇ ಅಚ್ಚರಿ ಮೂಡಿಸಿದ್ದರು. 40 ವರ್ಷಗಳಲ್ಲೇ ಗರಿಷ್ಠ ಹಣದುಬ್ಬರವನ್ನು ಕಂಡ ದೇಶದಲ್ಲಿ ಜೀವನಮಟ್ಟ ಸುಧಾರಿಸುವ ವರೆಗೆ ಅಂದರೆ ಈ ವರ್ಷದ ಅಂತ್ಯದವರೆಗೆ ಚುನಾವಣೆಯನ್ನು ಮುಂದೂಡಲಿದ್ದಾರೆ ಎಂಬ ನಿರೀಕ್ಷೆ ವ್ಯಾಪಕವಾಗಿ ಇತ್ತು. ಮಾರುಕಟ್ಟೆ ಸಂಶೋಧನಾ ಸಂಸ್ಥೆಯಾದ ಸವಂತಾ ಸಮೀಕ್ಷೆ ಪ್ರಕಾರ ಶೇಕಡ 46ರಷ್ಟು ಮಂದಿ ಕೀರ್ ಸ್ಟಾರ್ಮರ್…

Read More

ಚಿಕ್ಕಮಗಳೂರು: ಇ–ಸ್ವತ್ತು ಮಾಡಿಕೊಡಲು ಲಂಚದ ಬೇಡಿಕೆ ಇಟ್ಟು ಫೋನ್ ಪೇ ಮೂಲಕ ಹಣ ಹಾಕಿಸಿಕೊಂಡು ಮತ್ತಷ್ಟು ಹಣ ಪೀಕಲು ಪ್ಲಾನ್ ಮಾಡಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಚಿಕ್ಕಮಗಳೂರು ನಗರಸಭೆ ವಾರ್ಡ್ 2ರ ಬಿಲ್ ಕಲೆಕ್ಟರ್ ಪ್ರದೀಪ್ ಸಿಕ್ಕಿಬಿದ್ದಿದ್ದಾನೆ. ಸದಾಶಿವಮೂರ್ತಿ ಎಂಬುವವರ ಬೈಪಾಸ್ ರಸ್ತೆಯ ಜಾಗದ ಇ–ಸ್ವತ್ತು ಮಾಡಿಕೊಡಲು ಚಿಕ್ಕಮಗಳೂರು ನಗರಸಭೆ ವಾರ್ಡ್2 ಬಿಲ್ ಕಲೆಕ್ಟರ್ ಪ್ರದೀಪ್ ಲಂಚ ಪಡೆಯುವ ವೇಳೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದಿದ್ದಾನೆ. ಸದಾಶಿವಮೂರ್ತಿ ಮಗ ರಾಕೇಶ್‌ ನೀಡಿದ ದೂರಿನ ಮೇರೆಗೆ ಇಂದು ಕಾರ್ಯಾಚರಣೆ ನಡೆಸಿದ ಲೋಕಾ ಇನ್ಸ್‌ಪೆಕ್ಟ‌ರ್ ಅನಿಲ್ ರಾಥೋಡ್ ಹಾಗೂ ಮಲ್ಲಿಕಾರ್ಜುನ ನೇತೃತ್ವದ ತಂಡ ಪ್ರದೀಪ್ ನನ್ನು ನಗರಸಭೆ ಕಚೇರಿ ಎದುರು ಬಂಧಿಸಿದ್ದಾರೆ ಫೋನ್ ಪೇ ಮೂಲಕ ರಾಕೇಶ್ ಮೊಬೈಲ್ ನಿಂದ ಮೊದಲಿಗೆ 3,000 ಹಾಕಿಸಿಕೊಂಡಿದ್ದ ಪ್ರದೀಪ್ ನಂತರ ನಗದು 2,000 ಹಾಗೂ ಇದೀಗ ಮತ್ತೆ 2,000 ಕ್ಕೆ ಬೇಡಿಕೆ ಇಟ್ಟಿದ್ದು ಅದನ್ನು ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಕಾರ್ಯಾಚರಣೆ ತಂಡದಲ್ಲಿ ಲೋಕಾಯುಕ್ತ ಪೊಲೀಸರಾದ…

Read More

ವಿದ್ಯುತ್ ಶಾಕ್ ನಿಂದ 7ನೇ ತರಗತಿ ಬಾಲಕ ಸಾವನ್ನಪ್ಪಿರುವ ದುರಂತ ಘಟನೆ ನಡೆದಿದೆ. ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಆಕಾಶ್ (13) ಮೃತ ದುರ್ದೈವಿ ಕಡೂರು ತಾಲೂಕಿನ ಕುಪ್ಪಾಳು ಗ್ರಾಮದ ಮೊರಾರ್ಜಿ ವಸತಿ ಶಾಲೆ ಆವರಣದ ನೇರಳೆ ಮರದಲ್ಲಿ ಹಣ್ಣು ಕೀಳಲು ಮರ ಹತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ನೇರಳೆ ಹಣ್ಣು ಕೀಳಲು ಮೂವರು ವಿದ್ಯಾರ್ಥಿಗಳು ಮರ ಹತ್ತಿದ್ದರು ಮರದಿಂದ ಜಾರಿ ಬೀಳುವಾಗ ವಿದ್ಯುತ್ ತಂತಿ ಹಿಡಿದ ಬಾಲಕ ವಿದ್ಯುತ್ ಶಾಕ್ ನಿಂದ ಕೆಳಗೆ ಬಿದ್ದಿದ್ದಾನೆ. ಬಾಲಕನನ್ನು ತಕ್ಷಣ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿ ಮೃತಪಟ್ಟಿದ್ದಾನೆ‌. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಉತ್ತರ ಪ್ರದೇಶದ ಶಾಮ್ಲಿ ಎಂಬಲ್ಲಿ ಕ್ಷೌರದಂಗಡಿಯ ಕ್ಷೌರಿಕನೊಬ್ಬ ತನ್ನ ಗ್ರಾಹಕನಿಗೆ ಎಂಜಲು ಉಗಿದು ಫೇಸ್ ಮಸಾಜ್ ಮಾಡಿದ್ದು, ಈತನ ಈ ಹೇಯ  ಕೃತ್ಯದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇತ್ತೀಚಿಗೆ ಯುವಕರು ಕೂಡಾ ಹೇರ್‌ ಕಟ್‌ ಜೊತೆಗೆ  ಫೇಶಿಯಲ್‌, ಫೇಸ್‌ ಮಸಾಜ್‌ ಮಾಡಿಸಿಕೊಳ್ಳುವುದು ಕಾಮನ್ ಆಗಿರುವ ವಿಷಯ. ಆಶ್ಚರ್ಯ ಅಂದ್ರೆ ಇಲ್ಲೊಬ್ಬ ಯುವಕ ಕೂಡಾ ತನ್ನ ಸೌಂದರ್ಯವನ್ನು ಹೆಚ್ಚಿಸಲು ಕ್ಷೌರದಂಗಡಿಯಲ್ಲಿ ಫೇಸ್ ಮಸಾಜ್ ಮಾಡಿಕೊಂಡಿದ್ದಾನೆ. ಆದರೆ ಫೇಸ್ ಮಸಾಜ್ ಮಾಡುತ್ತಿರುವ ಜೊತೆಗೆ ಕೈ ಮೇಲೆ ಎಂಜಲು ಉಗಿದು ಅದನ್ನು ಮಿಕ್ಸ್ ಮಾಡಿ ಗ್ರಾಹಕನಿಗೆ ಫೇಸ್ ಮಸಾಜ್  ಮಾಡಿದ್ದಾನೆ. ಈ ಕುರಿತ ವಿಡಿಯೋ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದ ಶಾಮ್ಲಿ ಎಂಬಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಸೆಲೂನ್ ಒಂದರ ಕ್ಷೌರಿಕ ಅಮ್ಜದ್ ಎಂಬಾತ ಎಂಜಲು ಉಗುಳಿ ತನ್ನ ಗ್ರಾಹಕರಿಗೆ ಫೇಸ್ ಮಸಾಜ್ ಮಾಡಿದ್ದಾನೆ. ಈತನ ಕೃತ್ಯದ ವಿಡಿಯೋ ತುಣುಕು ಸದ್ಯ @TruestoryUP ಎಂಬ ಹೆಸರಿನ ಎಕ್ಸ್…

Read More

ನೀಟ್ 2024 (NEET UG 2024) ಪರೀಕ್ಷೆಯಲ್ಲಿ ರ‍್ಯಾಂಕ್ ನೀಡುವುದರಲ್ಲಿ ಮತ್ತು ನಿರಂತರವಾಗಿ ಅಭ್ಯಾಸ ಮಾಡಿ ಬರೆದ ವಿದ್ಯಾರ್ಥಿಗಳಿಗೆ ದೊಡ್ಡ ಅನ್ಯಾಯವಾಗಿದೆ. ಈ ಬಗ್ಗೆ ತನಿಖೆಯಾಗಬೇಕು ಮತ್ತು ಮರು ಪರೀಕ್ಷೆ ನಡೆಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಮೈಸೂರು ನಗರದಲ್ಲಿ ಮಾಧ್ಯಮದವರ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಕೃಪಾಂಕ ಕೊಟ್ಟು ಉತ್ತೀರ್ಣ ಮಾಡುವುದು ಒಂದು ಕೆಟ್ಟ ಅಭ್ಯಾಸ. ಎನ್‌ ಟಿಎ ಪರೀಕ್ಷೆಯನ್ನು ಸರಿಯಾಗಿ ನಡೆಸದೇ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದಿದ್ದಾರೆ. ದಕ್ಷಿಣ ಭಾರತದಲ್ಲಿ ಜನ ಬಿಜೆಪಿಯನ್ನು ಬೆಂಬಲಿಸುವುದಿಲ್ಲ. ದಕ್ಷಿಣ ಭಾರತದ ಏಳು ಜನರು ಕೇಂದ್ರದಲ್ಲಿ ಸಚಿವರಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಏನು ಮಾಡಿದರೂ ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಜನ ಬೆಂಬಲಿಸುವುದಿಲ್ಲ. ಏಕೆಂದರೆ ಬಿಜೆಪಿಯು ಆರ್‌ ಎಸ್‌ ಎಸ್‌ ನ ರಾಜಕೀಯ ಮುಖವಾಡ. ಹಾಗಾಗಿ ಉತ್ತರ ಭಾರತದಲ್ಲಿ ಬಿಜೆಪಿಗೆ ಭಾರಿ ಹಿನ್ನಡೆಯಾಗಿದೆ. ಆರ್‌ಎಸ್‌ಎಸ್‌ನ ಮುಖ್ಯಸ್ಥರು ಅಹಂಕಾರಕ್ಕೆ ಜನ ಸರಿಯಾದ ಪಾಠ ಕಲಿಸಿದ್ದಾರೆ ಎಂದು ಹೇಳಿದ್ದಾರೆ ಎಂದರು. ಇದೀಗ ಎಸ್.ಸಿ.ಎಸ್.ಟಿ ಮೆರಿಟ್ ವಿದ್ಯಾರ್ಥಿ ವೇತನವನ್ನು…

Read More

ಪವಿತ್ರಾ ಗೌಡಗೆ ಕೆಟ್ಟದಾಗಿ ಮೆಸೇಜ್‌ ಮಾಡಿದ ಕಾರಣ ರೇಣುಕಾಸ್ವಾಮಿ ಹತ್ಯೆ ಮಾಡಿದ್ದಾರೆ ಎಂಬ ಆರೋಪದಡಿ ದರ್ಶನ್‌ ಸೇರಿ 17 ಜನರು ಸದ್ಯ ಪೊಲೀಸ್‌ ವಿಚಾರಣೆ ಎದುರಿಸುತ್ತಿದ್ದಾರೆ. ದರ್ಶನ್ ಕೊಲೆ ಆರೋಪದ ಬಗ್ಗೆ ಕೊನೆಗೂ ಮೌನ ಮುರಿದು ಹೀಗೆ ಉತ್ತರ ಕೊಟ್ಟಿದ್ದಾರೆ ಸಹೋದರ ದಿನಕರ್ ತೂಗುದೀಪ. ದರ್ಶನ್ ಬಗ್ಗೆ ಸಹೋದರ ದಿನಕರ್ ತೂಗುದೀಪ ಮೊದಲ ರಿಯಾಕ್ಷನ್ ನೀಡಿದ್ದಾರೆ. ದರ್ಶನ್‌ ಬಂಧನದ ವಿಚಾರವನ್ನು ಮಾತನಾಡಲು ನಿರಾಕರಿಸಿದ ದಿನಕರ್ ತೂಗುದೀಪ, ನನಗೇನು ಕೇಳಬೇಡಿ ಎಂದಿದ್ದಾರೆ. ನನ್ನ ಜೊತೆ ಏನು ಕೇಳಬೇಡಿ. ನಾನು ಏನು ಮಾತನಾಡುವುದಿಲ್ಲ. ನನಗೇನು ಗೊತ್ತಿಲ್ಲ ಎಂದು ನೋವಿನಲ್ಲೇ ದಿನಕರ್ ತೂಗುದೀಪ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಕಲಿಕೆಯೊಂದಿಗೆ ಗಳಿಕೆಯೂ ಸಾಧ್ಯ ಕೋರ್ಸ್ ಆಯ್ಕೆಯ ವಾಸ್ತವಿಕತೆ ದ್ವಿತೀಯ ಪಿಯುಸಿ ಫಲಿತಾಂಶದ ನಂತರ ಯಾವ ಕೋರ್ಸ್ ಪದವಿಗೆ ಸೇರಿದರೆ ಉತ್ತಮ ಭವಿಷ್ಯವಿದೆ ಎಂಬ ಹುಡುಕಾಟದಲ್ಲಿ ಪಾಲಕರು ಮಕ್ಕಳು ಹೆಣಗಾಡುತ್ತಾರೆ. ಆರೋಗ್ಯವು ಜೀವನದ ಸಂಪತ್ತು ಎಂಬಂತೆ ಶಿಕ್ಷಣವು ವಿಶ್ವದ ಶಕ್ತಿಯುತ ಅಸ್ತ್ರ ಎಂಬುದು ಎಲ್ಲರಿಗೂ ಗೊತ್ತು. ಅಂತೆಯೇ ಯಾವ ಕೋರ್ಸ್ ಪದವಿ ಪಡೆದರೆ ಏನೇನು ಲಾಭ? ಯಾವ ಯಾವ ಉದ್ಯೋಗ ಪಡೆಯಬಹುದು ಎಂಬ ಚಿಂತನೆಗಳಿಗೆ ಒಳಗಾಗುವುದು ಸಹಜವಾಗಿದೆ. ಬಹುಪಾಲು ಪಾಲಕರು ವಿದ್ಯಾರ್ಥಿಗಳು ಇಂತಹ ಸಂಗತಿಗಳ ಬಗ್ಗೆ ತಿಳಿದುಕೊಳ್ಳುವ ಗೋಜಿಗೆ ಹೋಗದಿರುವವರೇ ಹೆಚ್ಚು. ಪಿಯುಸಿ ಮತ್ತು ಐಟಿಐ ಪಾಸಾದವರು ತಮ್ಮ ಅಭಿವೃದ್ಧಿ ಆಸಕ್ತಿಯ ವಿಷಯಗಳಲ್ಲಿ ಶಿಕ್ಷಣ ಪಡೆಯಲು ಕೆಲ ಪಾಲಕರೇ ಬಿಡುತ್ತಿಲ್ಲ ಎಂಬುದು ಹಲವು ಮಕ್ಕಳ ಕೊರಗಾಗಿದೆ. ಕಾರಣ ಕೆಲ ಪಾಲಕರು ತಮ್ಮ ಕನಸುಗಳನ್ನು ಮಕ್ಕಳ ಮೂಲಕ ಈಡೇರಿಸಿಕೊಳ್ಳುವ ಇರಾದೆಯಲ್ಲಿರುತ್ತಾರೆ. ಇದರಿಂದ ಮಕ್ಕಳ ಕಲಿಕಾ ಹಂಬಲ ಹಾಗೂ ಆಸಕ್ತಿಯನ್ನೇ ಕುಸಿಯುವಂತೆ ಮಾಡಿ ಅವರಲ್ಲಿ ಆತಂಕ ಒತ್ತಡ ಹೆಚ್ಚಲು ಕಾರಣವಾಗಬಹುದು. ಇನ್ನೊಂದೆಡೆ ವಿದ್ಯಾರ್ಥಿಗಳು ತಮ್ಮ ಸಹಪಾಠಿ…

Read More

ಪಾವಗಡ :  ಸಿ.ಕೆ.ಪುರ ಗ್ರಾಮ ಪಂಚಾಯಿತಿಯಲ್ಲಿ  ಅಧ್ಯಕ್ಷರಾಗಿದ್ದ ಸುವರ್ಣಮ್ಮನವರ  ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷರ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಅರುಂಧತಿ ನಾಗಲಿಂಗಪ್ಪನವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ತಾಲ್ಲೂಕಿನ  ಸಿ.ಕೆ.ಪುರ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 15 ಸದಸ್ಯರುಗಳಿದ್ದು, ಇದರಲ್ಲಿ 8 ಸದಸ್ಯರು ಅರುಂಧತಿ ನಾಗಲಿಂಗಪ್ಪನವರ‌ ಪರ ಮತ ಚಲಾಯಿಸಿದ್ದು,‌ ಇವರ ಪ್ರತಿಸ್ಪರ್ಧೆ ಸಣ್ಣಬೊಮ್ಮಕ್ಕ ಸಣ್ಣಚಿತ್ತಪ್ಪ ನವರಿಗೆ 5 ಸದಸ್ಯರು ಮತ ನೀಡಿದ್ದಾರೆ. ಇನ್ನುಳಿದ ಇಬ್ಬರು ಸದಸ್ಯರು ಗೈರು ಹಾಜರಾಗಿದ್ದರಿಂದ ಅರುಂಧತಿ ನಾಗಲಿಂಗಪ್ಪನವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ತಹಶೀಲ್ದಾರ್ ಸಂತೋಷ್ ಕುಮಾರ್ ಅವರು ಚುನಾವಣೆಯ ಅಧಿಕಾರಿಯಾಗಿ ಆಗಮಿಸಿದ್ದು ತಮ್ಮ ಕರ್ತವ್ಯವನ್ನು ನಿರ್ವಹಿಸಿದರು. ಈ ವೇಳೆ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಶಾಂತಿನಿಕೇತನ ಕಾನ್ವೆಂಟಿನ ಅಧ್ಯಕ್ಷರಾದ ಕೊತ್ತೂರು ನಾಗೇಶ್ ರವರು ಮಾತನಾಡುತ್ತಾ, ಸಿ.ಕೆ.ಪುರ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸಬೇಕು ಹಾಗೂ ಮೂಲಭೂತ ಸೌಕರ್ಯಗಳ ಕಡೆಗೆ ಹೆಚ್ಚುನ  ಒತ್ತು ಇಡಬೇಕು ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷದ ಮುಖಂಡ ಕೊಂಡಪ್ಪನವರು ಮಾತನಾಡುತ್ತಾ ಸಿ.ಕೆ.ಪುರ ಗ್ರಾಮ…

Read More

ಈ ಆನ್ಲೈನ್ ಅನ್ನೋ ದೊಡ್ಡ ಜಾಲ, ಇಂದು ಕೂತಲ್ಲಿಗೇ ಎಲ್ಲವನ್ನೂ ತಂದಿರಿಸುತ್ತೆ. ಒಟ್ಟಿನಲ್ಲಿ ಎಲ್ಲವೂ ಆನ್ಲೈನ್ ಮಯ. ಅಂತೆಯೇ ಮಹಿಳೆಯೊಬ್ಬರು ಆನ್ಲೈನ್ ಅಲ್ಲಿ ಐಸ್ ಕ್ರೀಂ ಆರ್ಡರ್ ಮಾಡಿದ್ದು, ಅದು ಮನೆ ಬರುತ್ತಿದ್ದಂತೆ ಆಕೆಗೆ ಶಾಕ್ ಎದುರಾಗಿದೆ. ಯಾಕೆಂದರೆ ಅದರಲ್ಲಿ ಚೇಳು ಪತ್ತೆಯಾಗಿದೆ. ಇದುವರೆಗೂ ಆನ್ಲೈನ್ ಅಲ್ಲಿ ತರಿಸಿದ ಬಿರಿಯಾನಿ, ಊಟದಲ್ಲಿ ಹುಳ, ಜಿರಳೆ, ಕೀಟ ಏನಾದರೂ ಒಂದು ಇರುವುದು ಸುದ್ದಿಯಾಗುತ್ತಿತ್ತು. ಮೊನ್ನೆ ಮೊನ್ನೆ ತಾನೆ ಮುಂಬೈ ನಲ್ಲಿ ಮಹಿಳೆಯೊಬ್ಬರು ಆರ್ಡರ್ ಮಾಡಿದ ಐಸ್ ಕ್ರೀಂ ನಲ್ಲಿ ಮಾನವನ ಬೆರಳು ಪತ್ತೆಯಾಗಿ ಭಾರಿ ಚರ್ಚೆಯಾಗಿತ್ತು. ಆದರೀಗ ಮತ್ತದೇ ಆನ್ಲೈನ್ ಐಸ್ ಕ್ರೀಂ ನಲ್ಲಿ ಇಂದು ಚೇಳು ಪತ್ತೆಯಾಗಿದೆ. ನೋಯ್ಡಾ ಸೆಕ್ಟರ್ 12ರ ನಿವಾಸಿ ದೀಪಾ(Deepa) ಮಕ್ಕಳ ಆಸೆಯಂತೆ ಐಸ್ ಕ್ರೀಮ್ ಆರ್ಡರ್ ಮಾಡಿದ್ದಾರೆ. ಮಕ್ಕಳು ಮ್ಯಾಂಗೋ ಮಿಲ್ಕ್ ಶೇಕ್(Mango Milkshake) ಬೇಕು ಎಂದಿದ್ದಕ್ಕೆ ಅದನ್ನೇ ಮಾಡುವುದಾಗಿ ಭರವಸೆ ನೀಡಿದ್ದ ದೀಪಾ, ಅಮೂಲ್ ವೆನಿಲ್ಲಾ ಐಸ್ ಕ್ರೀಮ್(Amul Icecream) ಆರ್ಡರ್ ಮಾಡಿದ್ದಾರೆ. ಆನ್‌…

Read More