Author: admin

ಮೈಸೂರು ಮೃಗಾಲಯಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಸಿಹಿಸುದ್ದಿ ಸಿಕ್ಕಿದ್ದು ಇನ್ಮುಂದೆ ವಾಟ್ಸಾಪ್ ಆನ್ ಲೈನ್ ಟಿಕೆಟ್’ ಲಭ್ಯವಾಗಲಿದೆ. ಮೈಸೂರು ಮೃಗಾಲಯಕ್ಕೆ ಭೇಟಿ ನೀಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ  ವಾಟ್ಸಾಪ್ ಆನ್ಲೈನ್ ಟಿಕೆಟ್ ಉದ್ಘಾಟನೆ ಮಾಡಿದರು.  ಇನ್ಮುಂದೆ ಪ್ರವಾಸಿಗರಿಗೆ ವಾಟ್ಸಾಪ್ ಆನ್ಲೈನ್ ಟಿಕೆಟ್ ಲಭ್ಯವಿರಲಿದೆ. ಮೃಗಾಲಯ ವೀಕ್ಷಣೆಗೆ ಇನ್ಮೇಲೆ ವಾಟ್ಸಾಪ್ ನಲ್ಲೂ ಟಿಕೆಟ್ ಖರೀದಿಗೆ ಅವಕಾಶವಿರಲಿದೆ. ಮೃಗಾಲಯದಲ್ಲಿ ಪ್ರಾಣಿ ಪಕ್ಷಿ ವೀಕ್ಷಣೆ ಮಾಡಿ ಮಾತನಾಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಮೃಗಾಲಯಕ್ಕೆ ಆಗಮಿಸುವ ಪ್ರವಾಸಿಗರು ಕ್ಯೂನಲ್ಲಿ ನಿಂತು ಕಿರಿ ಕಿರಿ ಅನುಭವಿಸುತ್ತಿದ್ದರು. ಹೀಗಾಗಿ ವಾಟ್ಸಾಪ್ ಆನ್ಲೈನ್ ಟಿಕೆಟ್ ಉದ್ಘಾಟನೆ ಮಾಡಿದ್ದೇವೆ. ಮೃಗಾಲಯಕ್ಕೆ ಆಗಮಿಸುವ ಪ್ರವಾಸಿಗರು ಮೊಬೈಲ್ ವಾಟ್ಸಾಪ್ ಮೂಲಕ ಟಿಕೆಟ್ ಪಡೆಯಬಹುದು. ಲೈವ್ ಫೀಡ್ ಕೂಡ ಉದ್ಘಾಟನೆ ಮಾಡಿದ್ದೇವೆ. ಮೃಗಾಲಯದಲ್ಲಿನ ಹಾವುಗಳಿಗೆ ಹೊರಗಿನಿಂದ ಆಹಾರ ತರಲಾಗುತ್ತಿತ್ತು. ಈಗ ನಮ್ಮಲ್ಲಿಯೇ ಮೊಲ, ಇಲಿ ಸಂತತಿ ಹೆಚ್ಚಳಕ್ಕೆ ಮುಂದಾಗಿದ್ದೇವೆ. ಇದರ ಜೊತೆ ಮೃಗಾಲಯದ ಅಭಿವೃದ್ಧಿಗೂ ನಾವು ಸಿದ್ದರಿದ್ದೇವೆ ಎಂದರು. ಚಾಮುಂಡಿ ಬೆಟ್ಟಕ್ಕೆ ರೋಪ್ ವೇ…

Read More

ಕನ್ನಡದ ಜನಪ್ರಿಯ ನಟ ದರ್ಶನ್ ತೂಗುದೀಪ ಅವರು ಚಿತ್ರಹಿಂಸೆ ನೀಡಿ ಕೊಂದಿದ್ದಾರೆ ಎಂದು ಹೇಳಲಾದ ವ್ಯಕ್ತಿ “ ಆಘಾತ ಮತ್ತು ರಕ್ತಸ್ರಾವದಿಂದ “ ಸಾವನ್ನಪ್ಪಿದ್ದಾರೆ ಎಂದು ಶವಪರೀಕ್ಷೆ ವರದಿ ಬಹಿರಂಗಪಡಿಸಿದೆ. ಸಂತ್ರಸ್ತೆ ರೇಣುಕಾ ಸ್ವಾಮಿ ಅವರ ದೇಹದ ಮೇಲೆ 15 ಗಾಯಗಳಿರುವುದು ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.  ನಟ ದರ್ಶನ್ ಮತ್ತು ಅವರ ಸಹಚರರು ಸ್ವಾಮಿಯನ್ನು ಹೊಡೆದು ಕೊಂದಿದ್ದಾರೆ ಎಂದು ಆರೋಪಿಸಲಾಗಿತ್ತು. ರೇಣುಕಾ ಸ್ವಾಮಿ ಚಿತ್ರದುರ್ಗ ಮೂಲದವರಾಗಿದ್ದು, ಜೂನ್ 9 ರಂದು ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಮೃತದೇಹ ಪತ್ತೆಯಾಗಿದೆ. ದರ್ಶನ್‌ , ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳಿಸಿದ್ದಕ್ಕಾಗಿ ಆತನನ್ನು ಚಿತ್ರದುರ್ಗದಿಂದ ಕಿಡ್ನಾಪ್ ಮಾಡಲಾಗಿತ್ತು. ಆತನ ತಲೆ, ಹೊಟ್ಟೆ, ಎದೆ ಮತ್ತು ಇತರ ಭಾಗಗಳಲ್ಲಿ ಅನೇಕ ಗಾಯಗಳು ಮತ್ತು ಗಾಯದ ಗುರುತು ಪತ್ತೆಯಾಗಿತ್ತು. ಶವಪರೀಕ್ಷೆಯಲ್ಲಿ, ಮೃತ ಸ್ವಾಮಿಯ ತಲೆಯನ್ನು ವಾಹನವೊಂದಕ್ಕೆ ಬಲವಾಗಿ ಡಿಕ್ಕಿ ಹೊಡೆಸಿ ಹಲ್ಲೆ ನಡೆಸಲಾಗಿತ್ತು ಎಂಬುದು ದೃಢಪಟ್ಟಿದೆ ಎನ್ನಲಾಗಿದೆ. ಇದೇ ವೇಳೆ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ…

Read More

ಕರ್ನಾಟಕ ರಾಜ್ಯ ಸರ್ಕಾರವು ಪೊಲೀಸ್‌ ಇಲಾಖೆಯ ಮೀಸಲು ಪೊಲೀಸ್‌ ಪಡೆಗಳಲ್ಲಿ ಅಗತ್ಯ ಇರುವ 1,500 ವಿಶೇಷ ಮೀಸಲು ಪೊಲೀಸ್‌ ಕಾನ್ಸ್‌’ಟೇಬಲ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಲು ಅವಕಾಶ ನೀಡಿದೆ. ಈಗಾಗಲೇ ಇಲಾಖೆಯ ವಿವಿಧ ಪಡೆಗಳಲ್ಲಿ ಎಷ್ಟೆಷ್ಟು ಹುದ್ದೆಗಳನ್ನು ಭರ್ತಿ ಮಾಡಬೇಕು ಎಂಬುದರ ಸಮತಳ ವರ್ಗೀಕರಣ ಪಟ್ಟಿಯನ್ನು ಸಹ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ SSLC ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದವರು ಅರ್ಜಿ ಸಲ್ಲಿಸಬಹುದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ. ಪ್ರಮುಖವಾಗಿ ಈ ಕೆಳಗಿನ 3ಹಂತದ ಪರೀಕ್ಷೆಗಳು ನಡೆಯುತ್ತದೆ. ಸಹಿಷ್ಣುತಾ ಪರೀಕ್ಷೆ : ಉದ್ದ ಜಿಗಿತ / ಎತ್ತರ ಜಿಗಿತ / ಗುಂಡು ಎಸೆತ / ಓಟ. ದೈಹಿಕ ಸಾಮರ್ಥ್ಯ ಪರೀಕ್ಷೆ : ಕನಿಷ್ಠ ಎತ್ತರ / ಎದೆ ಸುತ್ತಳತೆ. ಲಿಖಿತ ಸ್ಪರ್ಧಾತ್ಮಕ ಪರೀಕ್ಷೆ : ಬಹು ಆಯ್ಕೆ ಉತ್ತರಗಳ, ಲಿಖಿತ ಪರೀಕ್ಷೆ. ಲಿಖಿತ ಸ್ಪರ್ಧಾತ್ಮಕ ಪರೀಕ್ಷೆ ಬರೆಯಬೇಕು ಎಂದರೆ ಮೊದಲು ಸಹಿಷ್ಣುತೆ ಹಾಗೂ ದೈಹಿಕ ಸಾಮಾರ್ಥ್ಯ ಪರೀಕ್ಷೆಗಳಲ್ಲಿ ಅರ್ಹತೆ ಪಡೆಯಬೇಕಾಗಿರುತ್ತದೆ.…

Read More

ಸರಗೂರು: ತಾಲ್ಲೂಕಿನ ಹಂಚೀಪುರ ಗ್ರಾಮದ ಪರಿಶಿಷ್ಟ ಜಾತಿ ಸಮುದಾಯದ  ಮೇಲೆ ಲಿಂಗಾಯತ ಸಮುದಾಯಕ್ಕೆ ಸೇರಿದ ಹಲವು ಜಮೀನುದಾರರು ಪರಿಶಿಷ್ಟ ಜಾತಿಯವರ ಜಮೀನಿಗೆ ಹೋಗಲು ದಾರಿಯೇ ಬಿಡದೆ ತೊಂದರೆ ನೀಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು. ಕಳೆದ 30 ರಿಂದ 45 ವರ್ಷಗಳಿಂದ ಜಮೀನಿನಲ್ಲಿ ವ್ಯವಸಾಯ ಮಾಡಿಕೊಂಡು ಬಂದಿದ್ದೇವೆ.  ಇಲ್ಲಿನ ಸರ್ಕಾರಿ ಜಮೀನು ಮೂಲಕ ತಿರುಗಾಡುತ್ತಿದ್ದೇವೆ ಹಾಗೂ ದನಕರುಗಳನ್ನು ಇಲ್ಲೇ ಮೇಯಿಸುತ್ತಿದ್ದೇವೆ. ಆದರೆ ಇತ್ತೀಚಿನ ಮೂರು ವರ್ಷಗಳಿಂದ ಜಮೀನಲ್ಲಿ ವ್ಯವಸಾಯ ಮಾಡಲು ಹಾಗೂ ತಿರುಗಾಡಲು ದನಕರುಗಳು ಮೇಯಿಸಲು ಬಿಡದೇ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಲಿಂಗಾಯತ ಸಮುದಾಯದ ಸುರೇಶ್, ಮಹೇಶ್, ನವೀನ್, ಶೃತಿ,  ಸಣ್ಣ ಮುದಪ್ಪ,  ಮಹದೇವಪ್ಪ,  ಲೋಕೇಶ್ ಇನ್ನೂ ಮುಂತಾದವರು ನಮಗೆ ತೊಂದರೆ ನೀಡುತ್ತಿದ್ದಾರೆ. ಅವರಿಂದ ನಮಗೆ ನಮ್ಮ ಜಮೀನಿಗೆ ತಿರುಗಾಡಲು ಹಾಗೂ ದನಕರುಗಳನ್ನು ಮೇಯಿಸಲು ಅನುಮತಿ ನೀಡಬೇಕೆಂದು ತಹಶೀಲ್ದಾರ್ ಹಾಗೂ ಪೊಲೀಸ್ ಇಲಾಖೆ ಮನವಿ ಮಾಡಲಾಗಿದೆ. ಸರ್ಕಾರಿ ಜಮೀನಿನ ಸರ್ವೇ ನಂಬರ್ 14/2.ರಲ್ಲಿ20 ಗುಂಟೆ ಹಾಗೂ 15 ರಲ್ಲಿ20 ಗುಂಟೆ,  ಹಳಿಯೂರು…

Read More

ತುಮಕೂರು: ಖಾಸಗಿ ಕಾಲೇಜುಗಳ ಸರ್ಕಾರಿ ಕೋಟಾದಲ್ಲಿ 96,574 ರೂ ಗಳಿಂದ 1,06,231 ರೂ.ಗಳ ವರೆಗೆ ಶುಲ್ಕ ಏರಿಸಿದ್ದು, ಟೈಪ್-1 ಕಾಲೇಜುಗಳಲ್ಲಿ 1.69 ಲಕ್ಷ ರೂ.ಗಳಿಂದ 1.86ಲಕ್ಷ ರೂಗಳವರೆಗೆ ಹಾಗೂ ಟೈಪ್-2 ಕಾಲೇಜುಗಳಲ್ಲಿ 2.37 ಲಕ್ಷ ರೂಗಳಿಂದ 2.61 ಲಕ್ಷ ರೂ.ಗಳವರೆಗೆ ಶುಲ್ಕ ಏರಿಸಲಾಗಿದೆ ಇದು ಖಂಡನೀಯ ಎಂದು ಎಐಡಿಎಸ್‌ ಓ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಸಿ. ಬಿ. ಹೇಳಿದ್ದಾರೆ. ಈಗಾಗಲೇ ಯಾವುದೇ ಅಡೆ–ತಡೆ ಇಲ್ಲದೇ ಮ್ಯಾನೇಜ್ಮೆಂಟ್ ಕೋಟಾ ಅಡಿಯಲ್ಲಿ ಬರುವ ಶುಲ್ಕವನ್ನು ಮನಸೋಇಚ್ಛೆ ಖಾಸಗಿ ಕಾಲೇಜುಗಳು ಏರಿಸುತ್ತಿವೆ. ಬೆಂಗಳೂರಿನ ಕಾಲೇಜು ಒಂದರಲ್ಲಿ ಮ್ಯಾನೇಜ್ಮೆಂಟ್ ಸೀಟಿನ ಶುಲ್ಕ 26 ಲಕ್ಷದಷ್ಟಿದೆ. ಇಂತಹ ಸಂದರ್ಭದಲ್ಲಿ, ಸರ್ಕಾರದ ನಿಯಂತ್ರಣದ ಕೆಳಗೆ ಬರುವ ಶುಲ್ಕವನ್ನಾದರೂ ಏರಿಸದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕಿತ್ತು. ಈ ರೀತಿ ಪ್ರತಿ ವರ್ಷ ಶೈಕ್ಷಣಿಕ ಶುಲ್ಕ ಏರಿಕೆ, ಶಿಕ್ಷಣವನ್ನು ಸಂಪೂರ್ಣವಾಗಿ ವ್ಯಾಪಾರೀ ವಹಿವಾಟಿನಂತೆ ಮಾಡಲು ಸರ್ಕಾರವೇ ಅನುಮತಿ ನೀಡುತ್ತಿದೆ. ಇದು ಅತ್ಯಂತ ದುರಾದೃಷ್ಟಕರ ಎಂದು ಅವರು ಹೇಳಿದ್ದಾರೆ. ಖಾಸಗೀ ಕಾಲೇಜುಗಳಲ್ಲಿ, ಇಂಜಿನಿಯರಿಂಗ್ ಶಿಕ್ಷಣ ಪಡೆಯುವುದು…

Read More

ಖಾದ್ಯವೊಂದು ಮನುಷ್ಯರ ಜೀವ ತೆಗೆಯೋಕೆ ಸಾಧ್ಯನಾ.? ಹೌದು, ಸಿಕ್ಕ ಸಿಕ್ಕದನ್ನೆಲ್ಲಾ ತಿನ್ನುವ ಜನರು ಕೊಂಚ ಹುಷಾರಾಗಿರ್ಬೇಕು. ಯಾಕಂದ್ರೆ, ಈ ಒಂದು ಖಾದ್ಯ ಇದುವರೆಗೂ 20 ಸಾವಿರ ಜನರ ಜೀವ ತೆಗೆದುಬಿಟ್ಟಿದೆ. ಈ ಖಾದ್ಯದ ಹೆಸ್ರು ಕೋಯಿ ಪ್ಲಾ(koi pla) ಮಸಾಲೆಗಳು ಮತ್ತು ಸುಣ್ಣದೊಂದಿಗೆ ಕಚ್ಚಾ ಮೀನುಗಳಿಂದ ಮಾಡಿದ ಸ್ಥಳೀಯ ಖಾದ್ಯವಿದು. ಇದು ಯಕೃತ್ತಿನ ಕ್ಯಾನ್ಸರ್’ಗೆ ಕಾರಣವಾಗುತ್ತೆ ಅನ್ನೋ ಅಘಾತಕಾರಿ ಅಂಶ ಸಧ್ಯ ಬೆಳಕಿಗೆ ಬಂದಿದೆ. ಇದು ಅಗ್ಗದಲ್ಲಿ ಸಿಗುವ ಮತ್ತು ರುಚಿಕರ ಊಟವಾಗಿದೆ. ಆದ್ರೆ, ಇದು ಮಾರಣಾಂತಿಕ ಪಿತ್ತಜನಕಾಂಗದ ಕ್ಯಾನ್ಸರ್ಗೆ ಕಾರಣವಾಗಬಹುದು. ಇನ್ನೀದು ವಾರ್ಷಿಕವಾಗಿ ಸರಿಸುಮಾರು 20,000 ಥಾಯ್ ಜನರನ್ನ ಕೊಲ್ಲುತ್ತಿದೆ. ಒಮ್ಮೆ ತಿಂದ ನಂತರ, ಹುಳುಗಳು ಪಿತ್ತರಸ ನಾಳಗಳಲ್ಲಿ ವರ್ಷಗಳವರೆಗೆ ಪತ್ತೆಯಾಗದೆ ಹುದುಗುತ್ತವೆ. ಇನ್ನೀದು ಉರಿಯೂತವನ್ನ ಉಂಟು ಮಾಡುತ್ತಾ, ಕಾಲಾನಂತರದಲ್ಲಿ ಆಕ್ರಮಣಕಾರಿ ಕ್ಯಾನ್ಸರ್ ಪ್ರಚೋದಿಸುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಜುಲೈ 1 ರಿಂದ ಎಟಿಎಂನಿಂದ ಹಣವನ್ನು ಹಿಂಪಡೆಯುವುದು ದುಬಾರಿಯಾಗಲಿದೆ. ಭಾರತದಲ್ಲಿ ಹೆಚ್ಚಿನ ಜನರು ಹಣವನ್ನು ವಿತ್ ಡ್ರಾ ಮಾಡಲು ಎಟಿಎಂ ಬಳಸುತ್ತಾರೆ ಆದರೆ ಜುಲೈ 1 ರಿಂದ ಬ್ಯಾಂಕ್ ಶಾಖೆಯಿಂದ ಹಣವನ್ನು ಹಿಂಪಡೆಯುವುದು ದುಬಾರಿಯಾಗಲಿದೆ. ಎಟಿಎಂ ನಿರ್ವಾಹಕರು ಇಂಟರ್ಚೇಂಜ್ ಶುಲ್ಕವನ್ನು ಹೆಚ್ಚಿಸಲು ಒತ್ತಾಯಿಸಿದ್ದಾರೆ. ಇಂಟರ್ಚೇಂಜ್ ಶುಲ್ಕವು ಎಟಿಎಂಗಳಿಂದ ಹಣವನ್ನು ಹಿಂಪಡೆಯುವಾಗ ಗ್ರಾಹಕರು ಪಾವತಿಸುವ ಶುಲ್ಕವಾಗಿದೆ. ಇದರ ಶುಲ್ಕವನ್ನು ಹೆಚ್ಚಿಸಿದರೆ, ಎಟಿಎಂಗಳಿಂದ ಹಣವನ್ನು ಹಿಂಪಡೆಯುವ ಗ್ರಾಹಕರು ಹೆಚ್ಚಿನ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಸಿಎಟಿಎಂಐ ಪ್ರಕಾರ, ಕೆಲವು ಬ್ಯಾಂಕುಗಳು ಪ್ರತಿ ವಹಿವಾಟಿಗೆ 21 ರೂ.ಗಳ ಹೆಚ್ಚಳಕ್ಕೆ ಒತ್ತಾಯಿಸಿವೆ ಮತ್ತು ಕೆಲವು 23 ರೂ.ಗಳ ಹೆಚ್ಚಳಕ್ಕೆ ಒತ್ತಾಯಿಸಿವೆ. ಎಟಿಎಂ ವಹಿವಾಟು ಶುಲ್ಕವನ್ನು ಕೊನೆಯ ಬಾರಿಗೆ 2021 ರಲ್ಲಿ ಹೆಚ್ಚಿಸಲಾಗಿತ್ತು. ಆ ಸಮಯದಲ್ಲಿ ಈ ಶುಲ್ಕವನ್ನು ೧೫ ರೂ.ಗಳಿಂದ ೧೭ ರೂ.ಗೆ ಹೆಚ್ಚಿಸಲಾಯಿತು. ಈಗ ಈ ಬಾರಿ ಅದನ್ನು ೨೦ ರೂ.ಗಳಿಂದ ೨೧ ರೂ.ಗೆ ಹೆಚ್ಚಿಸಲು ಒತ್ತಾಯಿಸಲಾಗಿದೆ. ಆದಾಗ್ಯೂ, ಕೆಲವು ಬ್ಯಾಂಕುಗಳು ಈ ಶುಲ್ಕವನ್ನು 23 ರೂ.ಗೆ ಹೆಚ್ಚಿಸಲು…

Read More

ರಾಜ್ಯ ಸರಕಾರ ಜನತೆಗೆ ಶಾಕ್ ನೀಡಿದ್ದು, ಕರ್ನಾಟಕದಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು ರಾಜ್ಯ ಸರ್ಕಾರ ಹೆಚ್ಚಿಸಿದೆ. ಇದುವರೆಗೆ ಪೆಟ್ರೋಲ್‌ಗೆ ರಾಜ್ಯ ಸರ್ಕಾರವು ಶೇ.25.92ರಷ್ಟು ಮಾರಾಟ ತೆರಿಗೆ ವಿಧಿಸುತ್ತಿತ್ತು. ಈಗ ಶೇ.3.9ರಷ್ಟು ಹೆಚ್ಚಳ ಮಾಡಿದ್ದು, ಇನ್ನು ಮುಂದೆ ಒಟ್ಟು ಶೇ.29.84ರಷ್ಟು ತೆರಿಗೆ ವಸೂಲಿ ಮಾಡಲಿದೆ. ಇನ್ನು ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು ಶೇ.4.1ರಷ್ಟು ಏರಿಕೆ ಮಾಡಲಾಗಿದ್ದು, ರಾಜ್ಯ ಸರ್ಕಾರ ಇನ್ನು ಶೇ.18.44ರಷ್ಟು ತೆರಿಗೆ ವಸೂಲಿ ಮಾಡಲಿದೆ. ಒಂದು ಲೀಟರ್‌ ಪೆಟ್ರೋಲ್‌ಗೆ 3 ರೂ. ಹಾಗೂ ಡೀಸೆಲ್‌ಗೆ 3.5 ರೂ. ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ಇನ್ನು ಮುಂದೆ ಪೆಟ್ರೋಲ್‌ ದರ ಲೀಟರ್‌ಗೆ 103 ರೂ.ಗೆ ಹಾಗೂ ಡೀಸೆಲ್‌ 91 ರೂ. 50 ಪೈಸೆ ಏರಿಕೆಯಾಗಿದೆ. ಈ ಹಿಂದೆಯೇ ಡೀಸೆಲ್‌ ಮತ್ತು ಪೆಟ್ರೋಲ್‌ ಮಾರಾಟ ತೆರಿಗೆ ದರವನ್ನು ಏರಿಸಬೇಕೆಂಬ ಪ್ರಸ್ತಾವನೆ ಸರ್ಕಾರದ…

Read More

ತನ್ನ ಸಹೋದರಿಗಾಗಿ ವ್ಯಕ್ತಿಯೊಬ್ಬರು ಆನ್‍ ಲೈನ್‍ ನಲ್ಲಿ ಆರ್ಡರ್ ಮಾಡಿದ್ದ ಐಸ್‍ ಕ್ರೀಮ್‍ ನಲ್ಲಿ ಮನುಷ್ಯನ ಕೈಬೆರಳು ಪತ್ತೆಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮುಂಬೈನ ಮಲಾಡ್‍ ನ ಡಾ.ಸೆರಾವೊ ಎಂಬ ವ್ಯಕ್ತಿ, ಆನ್‍ ಲೈನ್‍ ನಲ್ಲಿ ದಿನಸಿ ವಸ್ತುಗಳನ್ನು ಆರ್ಡರ್ ಮಾಡಿದ್ದರು. ಈ ವೇಳೆ ಅವರ ಸಹೋದರಿಗಾಗಿ ಐಸ್‍ ಕ್ರೀಮ್ ಅನ್ನೂ ಆರ್ಡರ್ ಮಾಡಿದ್ದರು. ಬಳಿಕ ಆರ್ಡರ್ ಮಾಡಿದ್ದ ಐಸ್‍ ಕ್ರೀಮ್ ಬರುತ್ತಿದ್ದಂತೆ ಓಪನ್ ಮಾಡಿದ್ದಾರೆ. ಈ ವೇಳೆ, ಅವರಿಗೆ ಬೆರಳು ನಟ್ಸ್ ರೀತಿ ಕಾಣಿಸಿಕೊಂಡಿದೆ. ಬಳಿಕ ಅದು ಮನುಷ್ಯನ ಕೈ ಬೆರಳು ಎಂಬುದು ಅವರ ಅರಿವಿಗೆ ಬಂದಿದೆ. ಆನ್‍ ಲೈನ್‍ ನಲ್ಲಿ ಹಂಚಿಕೊಳ್ಳಲಾದ ಫೋಟೋದಲ್ಲಿ ಐಸ್‍ ಕ್ರೀಮ್‍ ನಲ್ಲಿ ಕೈಬೆರಳಿರುವುದು ಕಾಣಿಸುತ್ತದೆ. ಈ ಬಗ್ಗೆ ಸೆರಾವೊ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಐಸ್ ಕ್ರೀಮ್‍ ನ್ನು ಮತ್ತು ಬೆರಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಈ ರೀತಿ ಕೈ ಬೆರಳು ಪತ್ತೆಯಾಗಿರುವುದು ದೊಡ್ಡ ಅಪರಾಧದ ಶಂಕೆಯನ್ನು ಹುಟ್ಟುಹಾಕಿದೆ. ಈ ಬಗ್ಗೆ…

Read More

ಮಹಾರಾಷ್ಟ್ರದ ನಾಗಪುರದಲ್ಲಿ ಇತ್ತೀಚೆಗೆ ನಡೆದಿದ್ದ 82 ವರ್ಷದ ಉದ್ಯಮಿಯ ಹಿಟ್ ಆಂಡ್ ರನ್ ಸಾವಿನ ಪ್ರಕರಣ ರೋಚಕ ತಿರುವು ಪಡೆದಿದೆ. ಸುಮಾರು 300 ಕೋಟಿ ರೂ ಮೌಲ್ಯದ ಕುಟುಂಬ ಆಸ್ತಿಗಾಗಿ ವೃದ್ಧನ ಸೊಸೆಯೇ ಅವರ ಕೊಲೆಗೆ ಸಂಚು ರೂಪಿಸಿದ್ದ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ. ಮೇ 22ರಂದು ಬಾಲಾಜಿ ನಗರಿಯಲ್ಲಿ ಕಾರು ಹರಿದು ಮಾವ ಪುರುಷೋತ್ತಮ್ ಪುಟ್ಟೇವರ್ ಮೃತಪಟ್ಟ ಪ್ರಕರಣದಲ್ಲಿ, ಪಟ್ಟಣ ಯೋಜನಾ ಇಲಾಖೆಯ ಸಹಾಯಕ ನಿರ್ದೇಶಕಿಯಾಗಿರುವ ಅರ್ಚನಾ ಮನೀಶ್ ಪುಟ್ಟೇವರ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಮಾವನಿಗೆ ಕಾರು ಡಿಕ್ಕಿ ಹೊಡೆಸಿ ಸಾಯಿಸಲು ಅರ್ಚನಾ ಅವರು ಬಾಡಿಗೆ ಜನರನ್ನು ಖರೀದಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. “ಮಾವನನ್ನು ಕೊಲ್ಲಲು ಬಳಸಿದ ಹಳೆಯ ಕಾರನ್ನು ಖರೀದಿಸುವುದಕ್ಕಾಗಿ ಆರೋಪಿಗಳಿಗೆ ಆಕೆ ಹಣ ನೀಡಿದ್ದರು. ಕೊಲೆಯನ್ನು ಅಪಘಾತದ ರೀತಿ ಬಿಂಬಿಸುವುದು ಆಕೆಯ ಉದ್ದೇಶವಾಗಿತ್ತು. ಇದು ಅವರ 300 ಕೋಟಿ ರೂ ಮೌಲ್ಯದ ಆಸ್ತಿ ಮೇಲೆ ನಿಯಂತ್ರಣ ಸಾಧಿಸಲು ನಡೆಸಿದ ಕೃತ್ಯ ಎನ್ನುವುದು ಸ್ಪಷ್ಟವಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು…

Read More