Subscribe to Updates
Get the latest creative news from FooBar about art, design and business.
- ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
- ತಿಪಟೂರು: ಜೂನ್ 1ರಿಂದ ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
- ತುಮಕೂರು: ವಾಟರ್ ಟ್ಯಾಂಕ್ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು, ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
- ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
- ತುರುವೇಕೆರೆ: ಜೂ. 4ರಂದು ಉಚಿತ ಯೋಗ, ಪ್ರಾಣಾಯಾಮ ತರಗತಿಗಳ ಉದ್ಘಾಟನೆ
- ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
- ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ
Author: admin
ನನ್ನ ಮುಗಿಸಲು ಹಲವರಿಂದ ಪ್ರಯತ್ನ ನಡೀತಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನನ್ನ ವಿರುದ್ಧ ಕೇಸ್ ಇದೆಯಾ ಅಂತಾ ಚೆಕ್ ಮಾಡ್ತಿದ್ದಾರೆ. ಅವರಿಗೆ ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತನೆ ಇಲ್ಲ. ಕುಮಾರಸ್ವಾಮಿನ ಹೇಗೆ ಮುಗಿಸಿಬೇಕೆಂದು ಪ್ಲ್ಯಾನ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಜೆಡಿಎಸ್ ಮುಗಿಸಿದ್ದೇವೆ ಅಂತಾ ಮಾತನಾಡುವವರಿಗೆ ಉತ್ತರ ಕೊಡಲ್ಲ. ದುರಹಂಕಾರದಲ್ಲಿ ಮಾತನಾಡಿದ್ದವರಿಗೆ ನಾನು ಉತ್ತರ ಕೊಡಲ್ಲ. ನನಗೆ ಬೇಕಾಗಿದ್ದು ರಾಜಕೀಯ ಅಲ್ಲ, ರಾಜ್ಯದ ಜನರ ಸಮಸ್ಯೆಗೆ ಪರಿಹಾರ ಎಂದು ಹೇಳಿದ್ದಾರೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ವಿಚಾರವಾಗಿ ಮಾತನಾಡಿದ್ದು, ಸರ್ಕಾರದ 4 ತಿಂಗಳ ನಡುವಳಿಕೆ ಮೇಲೆ ಅನುಮಾನ ಪಡಬೇಕು. ಸರ್ಕಾರದಲ್ಲಿ ಕಾನೂನು ಅನುಭವ ಇರುವವರು ಸಾಕಷ್ಟು ಜನರಿದ್ದಾರೆ. ಸಿಎಂ ಸಿದ್ದರಾಮಯ್ಯ ನಾಲ್ಕು ತಿಂಗಳ ನಂತರ ಈ ಕೇಸ್ ಕೆದಕಿದ್ದಾರೆ ಎಂದು ಹೇಳಿದ್ದಾರೆ. ನಟ ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅನ್ನಪೂರ್ಣೇಶ್ವರಿನಗರ ಠಾಣೆಗೆ ಶಾಮಿಯಾನ ಹಾಕಿದ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಇತಿಹಾಸದಲ್ಲಿ ಈ ರೀತಿ…
ಮಂಡ್ಯ : ಜಿಲ್ಲೆಯಲ್ಲಿ ರಸ್ತೆ ಅಪಘಾತಗಳನ್ನು ತಡೆಯಲು ಅಪಘಾತ ವಲಯಗಳಲ್ಲಿ ಸಂಚಾರಿ ಸೂಚನಾ ಫಲಕಗಳನ್ನು ಅಳವಡಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಸ್ತೆ ಸುರಕ್ಷತಾ ಸಮಿತಿಯಲ್ಲಿ ಇರುವ 15 ಲಕ್ಷ ರೂ ಅನುದಾನದಲ್ಲಿ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಟ್ರಾಫಿಕ್ ಸಿಗ್ನಲ್ ಸರಿಪಡಿಸುವ ಕೆಲಸಗಳು, ಬ್ಲ್ಯಾಕ್ ಸ್ಪಾಟ್ ಗಳ ಬಳಿ ಸೂಚನಾ ಫಲಕಗಳು, ಹಂಪ್ ಗಳು ಸೇರಿದಂತೆ ಅವಶ್ಯಕ ಕಾಮಗಾರಿಗಳನ್ನು ತುರ್ತಾಗಿ ಕೈಗೊಳ್ಳುವಂತೆ ತಿಳಿಸಿದರು. ಪೊಲೀಸ್ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಜಿಲ್ಲೆಯಲ್ಲಿರುವ ಬ್ಲ್ಯಾಕ್ ಸ್ಪಾಟ್ ಗಳನ್ನು ಗುರುತಿಸಿ ಅಪಘಾತ ತಡೆಗಟ್ಟಲು ಕೈಗೊಳ್ಳಬೇಕಿರುವ ಕ್ರಮ ಹಾಗೂ ಅದಕ್ಕೆ ತಗಲುವ ವೆಚ್ಚದ ವಿವರವನ್ನು ನಿಗದಿತ ನಮೂನೆಯಲ್ಲಿ ಸಿದ್ಧಪಡಿಸಿ ಅನುದಾನ ಕೋರಿ ಪ್ರಸ್ತಾವನೆಯನ್ನು ಕಳುಹಿಸಿಕೊಡುವಂತೆ ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಲೋಕೋಪಯೋಗಿ…
ತುಮಕೂರು: ತಾಲೂಕಿನ ಬೆಳಧರ ಸರ್ಕಾರಿ ಶಾಲಾ ಮಕ್ಕಳು ತಮ್ಮ ಶಾಲೆಗೆ ಕಾಂಪೌಂಡ್ ನಿರ್ಮಿಸುವಂತೆ ಒತ್ತಾಯಿಸಿ ತುಮಕೂರು ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಕಳೆದ ಹಲವಾರು ತಿಂಗಳುಗಳಿಂದ ಶಾಲಾ ಕಾಂಪೌಂಡ್ ವಿವಾದ ನಡೆಯುತ್ತಿದ್ದು, ಶಿಕ್ಷಣ ಇಲಾಖೆ ದಿಟ್ಟ ನಿರ್ಧಾರ ಕೈಗೊಳ್ಳಲು ವಿಫಲವಾಗಿರುವ ಹಿನ್ನಲೆ ಶಾಲಾ ಮಕ್ಕಳು ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಿ ಗಮನ ಸೆಳೆದರು. ಬೆಳೆಧರ ಸರ್ಕಾರಿ ಶಾಲೆಯ ಸಮೀಪ ಕಲ್ಯಾಣ ಮಂಟಪವಿದ್ದು, ಮದುವೆ ಮುಂತಾದ ಸಮಾರಂಭಗಳು , ಕಾರ್ಯಕ್ರಮಗಳು ನಡೆಯುತ್ತಿರುತ್ತವೆ, ಇಂತಹ ಸಂದರ್ಭಗಳಲ್ಲಿ ನಮ್ಮ ವ್ಯಾಸಂಗಕ್ಕೆ ತೊಂದರೆಯಾಗುತ್ತಿದೆ. ಶಾಲಾ ಕಾಂಪೌಂಡ್ ನಲ್ಲಿ ಕುಡಿದ ಮದ್ಯದ ಬಾಟಲ್ ಗಳನ್ನು ಬಿಸಾಕುತ್ತಾರೆ, ಊಟವನ್ನು ಚೆಲ್ಲಾಡುತ್ತಾರೆ, ವಾಹನಗಳನ್ನು ಎಲ್ಲೆಂದರಲ್ಲೇ ನಿಲ್ಲಿಸುವುದರಿಂದ ಆಟ ಆಡಲು ನಮಗೆ ಮೈದಾನವೇ ಇಲ್ಲದ್ದಂತಾಗಿದೆ. ಇದರಿಂದ ನಮ್ಮ ವ್ಯಾಸಂಗಕ್ಕೆ ಬಹಳಷ್ಟು ತೊಂದರೆಯಾಗಿದೆಂದು ಮನ ನೊಂದ ಮಕ್ಕಳು ಜಿಲ್ಲಾಧಿಕಾರಿಗಳಿಗೆ ತಮ್ಮ ಅಹವಾಲು ನೀಡಿದ್ದಾರೆ. ಘಟನೆಯ ವಿಚಾರ ಅರಿತ ಡಿಡಿಪಿಐ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಮಕ್ಕಳ ಮನವೊಲಿಸಲು ಮುಂದಾದರೂ ಸಹ…
ಸರಗೂರು: ತಾಲೂಕಿನ ಹಾದನೂರು ಗ್ರಾ.ಪಂ. ವ್ಯಾಪ್ತಿಯ ಹಾದನೂರು ಗ್ರಾಮದ ಸುರೇಶ್ (30) ಎಂಬುವರು ಗುರುವಾರ ಬೆಳಿಗ್ಗಿನ ಜಾವ ಮನೆಯಿಂದ ಕಾಣೆಯಾಗಿದ್ದು, ಈ ಸಂಬಂಧ ಸರಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಎಂದಿನಂತೆಯೇ ಬುಧವಾರ ಮನೆಯಲ್ಲಿ ಮಲಗಿದ್ದ ಸುರೇಶ್ ರವರು ಗುರುವಾರ ಬೆಳಗ್ಗಿನ ಜಾವದ 4 ಗಂಟೆ ಸಮಯದಲ್ಲಿ ಕಾಣೆಯಾಗಿದ್ದಾನೆ ಎಂದು ಎನ್ನಲಾಗಿದೆ. ಮನೆಯವರು ಬೆಳಿಗ್ಗೆ ಎದ್ದು ನೋಡಿದಾಗ ಸುರೇಶ್ ಯಾಗಿರುವುದು ಬೆಳಕಿಗೆ ಬಂದಿದೆ. ನಂತರ ಗ್ರಾಮಸ ಸಂಬಂಧಿಕರು ಹಾಗೂ ಗೆಳೆಯರ ಬಳಿ ಆತನ ಬಗ್ಗೆ ವಿಚಾರಿಸಿದರೂ ಯಾವುದೇ ಮಾಹಿತಿ ತಿಳಿದು ಬಂದಿಲ್ಲ. ಸುರೇಶ್ ಮನೆ ಬಿಟ್ಟುವಾಗ ಅವರು ನೀಲಿ ಟಿ ಶರ್ಟ್, ಕಪ್ಪು ಪ್ಯಾಂಟ್ ಧರಿಸಿದ್ದ ಎಂದು ಸುರೇಶ್ ಅಣ್ಣ ರವಿಕುಮಾರ್ ತಿಳಿಸಿದ್ದಾರೆ. ಈತನ ಗುರುತು ಸಿಕ್ಕರೆ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ಹಾಗೂ ರವಿಕುಮಾರ್ 9964354061 ಶಿವರಾಜು ಅರಸು 6360092138 ನಂಬರಿಗೆ ತಿಳಿಸಿ ನೀಡುವಂತೆ ಕೋರಲಾಗಿದೆ. ವರದಿ: ಹಾದನೂರು ಚಂದ್ರ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ನಟ ದರ್ಶನ್ ಮತ್ತು ಸಹಚರರಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆರೋಪಿ ಅನು ಅಲಿಯಾಸ್ ಅನು ಕುಮಾರ್ ತಂದೆ ಚಂದ್ರಣ್ಣ(60) ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಮಗನ ಬಂಧನದ ಬೆನ್ನಲ್ಲೇ ಆಘಾತಕ್ಕೊಳಗಾಗಿದ್ದ ಚಂದ್ರಣ್ಣ ಸಾವನ್ನಪ್ಪಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅನುಕುಮಾರ್ 7ನೇ ಆರೋಪಿಯಾಗಿದ್ದು, ಇವತ್ತು ಪೊಲೀಸರು ಅನುಕುಮಾರ್ ನನ್ನು ಬಂಧಿಸಿದ್ದರು. ಪುತ್ರನ ಬಂಧನದ ಸುದ್ದಿ ತಿಳಿದ ಚಿತ್ರದುರ್ಗದ ಸಿಹಿನೀರು ಹೊಂಡ ಸಮೀಪ ಇರುವ ಮನೆಯಲ್ಲಿ ಚಂದ್ರಣ್ಣ ಮೃತಪಟ್ಟಿದ್ದಾರೆ. ಅನು@ ಅನು ಕುಮಾರ್ ಕಳೆದ ಮೂರು ವರ್ಷದಿಂದ ಆಟೋ ಚಾಲಕ ವೃತ್ತಿ ಮಾಡುತ್ತಿದ್ದು, ಸಭ್ಯ ಹುಡುಗನಾಗಿದ್ದು ಅಕ್ಕನ ಮದುವೆ ಕೂಡ ಮಾಡಿದ್ದನು. ಆದರೆ ದರ್ಶನ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ರಾಘವೇಂದ್ರನ ಮಾತಿಗೆ ಮರುಳಾಗಿ ಇದೀಗ ಪೊಲೀಸರ ವಶದಲ್ಲಿದ್ದಾನೆ ಎನ್ನಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್…
ತೋಳುಗಳ ಕೆಳಗೆ, ಗಂಟಲಿನ ಬಳಿ ಮತ್ತು ಪಾದದ ಕೆಳಗೆ ಕಚಗುಳಿ ಇಟ್ಟಾಗ ಕೂಗಿ, ಕುಣಿದು ಕುಪ್ಪಳಿಸುತ್ತೇವೆ. ಇದ್ದಕ್ಕಿದ್ದಂತೆ ಕಚಗುಳಿ ಇಟ್ಟಾಗ, ನಾವು ತುಂಬಾ ನಗುತ್ತೇವೆ! ಏಕೆಂದರೆ ಮೆದುಳಿನ ಹೈಪೋಥಾಲಮಸ್ ಪ್ರದೇಶವು ಮೃದುವಾದ ಸ್ಪರ್ಶವನ್ನು ಅನುಭವಿಸಿದಾಗ ನಗುವ ಆಜ್ಞೆಯನ್ನು ನೀಡುತ್ತದೆ. ವಿಕಸನೀಯ ಜೀವಶಾಸ್ತ್ರಜ್ಞರು ಮತ್ತು ನರವಿಜ್ಞಾನಿಗಳು ಹೇಳುವ ಪ್ರಕಾರ, ನಮ್ಮ ಮೆದುಳಿನ ಎರಡು ಭಾಗಗಳೇ ಕಚಗುಳಿ ಇಡುವ ಸಂವೇದನೆಗೆ ಕಾರಣವಾಗಿದೆ. ಕಚಗುಳಿಯ ಅವಧಿಯಲ್ಲಿ ಬಿಡುಗಡೆಗೊಂಡ ಎಂಡಾರ್ಫನ್ ಅನ್ನು ಕ್ಯಾರೋಲೀನ್ ಎಂದು ಕೂಡ ಕರೆಯಲಾಗುತ್ತದೆ. ಕಚಗುಳಿಯ ಸಂವೇದನೆಯು ನೋವು ಮತ್ತು ಸ್ಪರ್ಶ ಎರಡಕ್ಕೂ ಸಂಬಂಧಿಸಿದ ನರತಂತುಗಳ ಸಂಜ್ಞೆಗಳನ್ನು ಒಳಗೊಳ್ಳುತ್ತದೆ ಎಂದು ತೋರುತ್ತದೆ. ಮನಃಶಾಸ್ತ್ರಜ್ಞರಾದ ಸ್ಟ್ಯಾನ್ಲಿ ಹಾಲ್ ಮತ್ತು ಆರ್ಥರ್ ಆಲಿನ್ “ಕಚಗುಳಿ”ಯನ್ನು ಎರಡು ಭಿನ್ನ ಪ್ರಕಾರಗಳ ವಿದ್ಯಮಾನಗಳೆಂದು ವಿವರಿಸಿದರು.ಒಂದು ಪ್ರಕಾರವು ಚರ್ಮಕ್ಕೆ ಅಡ್ಡಲಾಗಿ ಬಹಳ ಹಗುರ ಚಲನೆಯಿಂದ ಉಂಟಾಗುತ್ತದೆ. ಈ ಪ್ರಕಾರದ ಕಚಗುಳಿಯನ್ನು ನಿಸ್ಮೆಸಿಸ್ ಎಂದು ಕರೆಯಲಾಗುತ್ತದೆ ಮತ್ತು ಇದು ಸಾಮಾನ್ಯವಾಗಿ ನಗೆಯನ್ನು ಉಂಟುಮಾಡುವುದಿಲ್ಲ ಮತ್ತು ಇದರ ಜೊತೆ ಕೆಲವೊಮ್ಮೆ ನವೆಯ ಸಂವೇದನೆ ಇರುತ್ತದೆ.
ಹಸ್ತ ಮುದ್ರಿಕೆಯ ಪ್ರಕಾರ ಅಂಗೈ ಹಾಗೂ ಬೆರಳುಗಳ ಬುಡದಲ್ಲಿ ಗ್ರಹಗಳು ಇರುತ್ತವೆ. ಈ ಗ್ರಹಗಳ ಸ್ಥಳವನ್ನು ಗ್ರಹಗಳ ಪರ್ವ ಎಂದು ಸಹ ಕರೆಯಲಾಗುವುದು. ಗ್ರಹಗಳ ಪರ್ವ ಯಾವ ರೀತಿಯಲ್ಲಿ ಇರುತ್ತವೆ ಎನ್ನುವುದರ ಆಧಾರದ ಮೇಲೂ ಸಹ ವ್ಯಕ್ತಿಯ ಭವಿಷ್ಯ ಹಾಗೂ ವ್ಯಕ್ತಿತ್ವ ನಿರ್ಧಾರವಾಗುತ್ತದೆ ಎಂದು ಹೇಳಲಾಗುವುದು. ಹಲವಾರು ಸಾವಿರ ವರ್ಷಗಳ ಹಿಂದೆ, ಹಿಂದೂ ಋಷಿ ವಾಲ್ಮೀಕಿ ಚರಣಗಳನ್ನು ಒಳಗೊಂಡಿರುವ ಪುಸ್ತಕವನ್ನು ಬರೆದಿದ್ದಾರೆ ಎಂದು ಭಾವಿಸಲಾಗಿದೆ , ಅದರ ಶೀರ್ಷಿಕೆಯು ಇಂಗ್ಲಿಷ್ನಲ್ಲಿ ದಿ ಟೀಚಿಂಗ್ಸ್ ಆಫ್ ವಾಲ್ಮೀಕಿ ಮಹರ್ಷಿ ಆನ್ ಪುರುಷ ಹಸ್ತಸಾಮುದ್ರಿಕ ಶಾಸ್ತ್ರ ಎಂದು ಅನುವಾದಿಸುತ್ತದೆ . ಭಾರತದಿಂದ, ಹಸ್ತಸಾಮುದ್ರಿಕ ಕಲೆಯು ಚೀನಾಕ್ಕೆ ಹರಡಿತು,ಟಿಬೆಟ್ ಮತ್ತು ಯುರೋಪ್ನ ಇತರ ದೇಶಗಳಿಗೆ . ಹಸ್ತಸಾಮುದ್ರಿಕ ಶಾಸ್ತ್ರದ ಪ್ರಕಾರ ಕೈನಲ್ಲಿ ಇರುವ ರೇಖೆಗಳು ಒಂದೊಂದು ರೀತಿಯ ಅದೃಷ್ಟವನ್ನು ತರುತ್ತದೆ..ಪ್ರೀತಿ ಯಾರ ಕೈಯಲ್ಲಿ ಸೂರ್ಯನ ರೇಖೆ ಇರುತ್ತದೋ ಅಂತಹ ವ್ಯಕ್ತಿ ತುಂಬಾ ಅದೃಷ್ಟ ಶಾಲೆಯಂತೆ. ಸೂರ್ಯನ ರೇಖೆಯಿಂದ ಬೇರೆ ಯಾವುದೇ ರೇಖೆಯು ಹೊರಹೊಮ್ಮಿ ಗುರು ಪರ್ವತವನ್ನು ತಲುಪಿದರೆ, ಅಂತಹ ವ್ಯಕ್ತಿಯು ತುಂಬಾ ಅದೃಷ್ಟಶಾಲಿ. ಇದರೊಂದಿಗೆ ಜೀವನದಲ್ಲಿ ಸರ್ಕಾರಿ ಹುದ್ದೆಯೂ…
ದರ್ಶನ್ ಕೇಸ್ ವಿಚಾರದಲ್ಲಿ ಸರ್ಕಾರದ ಮೇಲೆ ಒತ್ತಡದ ಆರೋಪ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಯಾವ ಒತ್ತಡವೂ ಇಲ್ಲ, ಏನು ಇಲ್ಲ ನಾನು ವಿಚಾರಿಸಿದ್ದೇನೆ. 13 ಜನ ಆರೋಪಿಗಳು ಇದಾರೆ. ಬೆಳಗ್ಗೆಯಿಂದ ಟಿವಿಯವರು ಕ್ಯಾಮರಾ ಹಾಕೊಂಡು ಕುಳಿತಿರ್ತಿರಾ. ಪೊಲೀಸರಿಗೆ ಫ್ರೀಯಾಗಿ ಕೆಲಸ ಮಾಡಲು ಅವಕಾಶ ಬೇಕು. ಆ ದೃಷ್ಟಿಯಿಂದ ರಕ್ಷಣೆಗೆ ಶಾಮಿಯಾನ ಹಾಕಿಸಿಕೊಂಡಿದ್ದಾರೆ. ನಮ್ಮ ನಮ್ ಮಿನಿಸ್ಟರ್ ಇನ್ವಾಲ್ವ್ ಆಗಿಲ್ಲ. ಯಾರು ಈ ಪ್ರಕರಣದಲ್ಲಿ ಹಸ್ತಕ್ಷೇಪ ಮಾಡ್ತಿಲ್ಲ. ಈ ಪ್ರಕರಣದ ಬಗ್ಗೆ ನಾವು ರೆಸ್ಪಾನ್ಸ್ ಸಹ ಮಾಡ್ತಿಲ್ಲ ಎಂದರು. ದರ್ಶನ ಪ್ರಕರಣ ಮುಚ್ಚಿಹಾಕಲು ನಿಮ್ಮ ಸಚಿವರು ಯಾರಾದರೂ ಒತ್ತಡ ಹಾಕಿದಾರಾ ಎಂಬ ಪ್ರಶ್ನೆಗೆ, “ಈ ವಿಚಾರವಾಗಿ ನನ್ನ ಬಳಿ ಯಾರೂ ಮಾತನಾಡಿಲ್ಲ. ನನಗೆ ಅಷ್ಟಾಗಿ ಸಂಪರ್ಕವಿಲ್ಲ. ಸಚಿವರ ಪ್ರಯತ್ನದ ಬಗ್ಗೆ ನಿಮ್ಮಿಂದ ಮಾಹಿತಿ ಬಂದಿದೆ. ಈ ಬಗ್ಗೆ ವಿಚಾರಿಸುತ್ತೇನೆ’ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಬಿಳಿಗಿರಿರಂಗನಬೆಟ್ಟದಲ್ಲಿ ಒಂಟಿ ಸಲಗನ ಆರ್ಭಟದಿಂದ ಗಿರಿಜನರು ನಲುಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿರುವ ಬಂಗಲೆಪೋಡು ಬಳಿ ಆನೆ ಆರ್ಭಟಿಸಿದೆ. ಬಿಳಿಗಿರಿರಂಗನಬೆಟ್ಟದ ಮುಖ್ಯರಸ್ತೆಯಲ್ಲಿ ಸಂಚರಿಸಿ ಕಳೆದ ಒಂದು ವಾರದಿಂದ ಸಲಗ ಉಪಟಳ ನೀಡುತ್ತಿದೆ. ಸಾರ್ವಜನಿಕರು ಸಂಚರಿಸುವ ಕೆ.ಎಸ.ಆರ್.ಟಿ.ಸಿ. ಬಸ್ಸನ್ನು ಒಂಟಿಸಲಗ ಅಟ್ಟಾಡಿಸಿದೆ. ಆನೆ ಆರ್ಭಟಕ್ಕೆ ಬಸ್ಸಿನೊಳಗೆ ಪ್ರಯಾಣಿಕರು ಚೀರಾಟ ಮಾಡಿದ್ದಾರೆ. ಬಂಗಲೆ ಪೋಡಿನ ಸುತ್ತಾಮುತ್ತಾ ಪ್ರತಿನಿತ್ಯ ಆನೆ ಉಪಟಳ ನಡೆಸಿದ್ದಾರೆ. ಭಾರೀ ಗಾತ್ರದ ಕೊಂಬಿನಿಂದ ಜನರನ್ನು ಆನೆ ಹೆದರಿಸುತ್ತಿದೆ. ಘೀಳಿಟ್ಟು ರಸ್ತೆಯ ಸುತ್ತಾ ಮುತ್ತಾ ಸಂಚರಿಸಿ ಒಂಟಿಸಲಗ ದಾದಾಗಿರಿ ಮಾಡುತ್ತಿದೆ. ಪೋಡಿನ ಸುತ್ತಾಮುತ್ತಾಲಿನ ಮನೆಗಳಿಗೆ ತೆರಳಲು ಸೋಲಿಗರು ಆತಂಕ ಪಡುತ್ತಿದ್ದಾರೆ. ಆನೆಯ ದಾದಾಗಿರಿ ಕಂಡು ಅರಣ್ಯ ಇಲಾಖೆ ಸಿಬ್ಬಂಧಿಗಳು ದಂಗಾಗಿದೆ. ಕೂಡಲೆ ಆನೆ ಉಪಟಳ ತಪ್ಪಿಸುವಂತೆ ಸೋಲಿಗರು ಆಗ್ರಹಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ:…
ಕುವೈತ್ ನ ವಸತಿ ಅಪಾರ್ಟ್ಮೆಂಟ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 45 ಭಾರತೀಯರು ಸೇರಿದಂತೆ ಒಟ್ಟು 49 ಜನ ಸಜೀವ ದಹನವಾಗಿದ್ದಾರೆ. ಇದೀಗ ಖ್ಯಾತ ಎನ್ ಆರ್ ಐ ಉದ್ಯಮಿ ಮತ್ತು ಯುಎಇ ಮೂಲದ ಲುಲು ಗ್ರೂಪ್ ಅಧ್ಯಕ್ಷ ಎಂಎ ಯೂಸುಫ್ ಅಲಿ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಕುವೈತ್ ನ ದಕ್ಷಿಣ ನಗರವಾದ ಮಂಗಾಫ್ ನಲ್ಲಿ 196 ವಲಸೆ ಕಾರ್ಮಿಕರು ತಂಗಿದ್ದ ಏಳು ಅಂತಸ್ತಿನ ಕಟ್ಟಡದಲ್ಲಿ ಬುಧವಾರ ಭಾರಿ ಅಗ್ನಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ ಕನಿಷ್ಠ 49 ವಿದೇಶಿ ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು 50 ಮಂದಿ ಗಾಯಗೊಂಡಿದ್ದಾರೆ. ಪರಿಹಾರ ನಿಧಿಯ ಭಾಗವಾಗಿ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ನೀಡಲಾಗುವುದು ಎಂದು ಅಬುಧಾಬಿಯಲ್ಲಿ ಲುಲು ಗ್ರೂಪ್ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ. ಕೇಂದ್ರ ಸರ್ಕಾರ ಮತ್ತು ಕೇರಳ ಸರ್ಕಾರ ಕೂಡ ಮೃತರ ಕುಟುಂಬಕ್ಕೆ ಇದೇ ರೀತಿಯ ಪರಿಹಾರ ಘೋಷಿಸಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…