Subscribe to Updates
Get the latest creative news from FooBar about art, design and business.
- ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
- ತಿಪಟೂರು: ಜೂನ್ 1ರಿಂದ ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
- ತುಮಕೂರು: ವಾಟರ್ ಟ್ಯಾಂಕ್ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು, ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
- ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
- ತುರುವೇಕೆರೆ: ಜೂ. 4ರಂದು ಉಚಿತ ಯೋಗ, ಪ್ರಾಣಾಯಾಮ ತರಗತಿಗಳ ಉದ್ಘಾಟನೆ
- ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
- ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ
Author: admin
ನೀವು ತೂಕ ಇಳಿಸಿಕೊಳ್ಳಲು ಬಯಸಿದರೆ, ಇದಕ್ಕಾಗಿ ನೀವು ತಿನ್ನುವ ರೊಟ್ಟಿಯ ಪ್ರಮಾಣದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ತೂಕ ಇಳಿಸಿಕೊಳ್ಳುವ ಸಮಯದಲ್ಲಿ ಮಹಿಳೆಯರು 1400 ಕ್ಯಾಲೊರಿಗಳನ್ನು ಸೇವಿಸಬೇಕು. ಅಂತಹ ಸಂದರ್ಭದಲ್ಲಿ ಅವರು ಬೆಳಗ್ಗೆ ಎರಡು ರೊಟ್ಟಿ ಮತ್ತು ಸಂಜೆ ಎರಡು ರೊಟ್ಟಿಗಳನ್ನು ಸೇವಿಸಿದರೆ, ಅದು ಅವರಿಗೆ ತುಂಬಾ ಪ್ರಯೋಜನಕಾರಿಯಾಗಿರುತ್ತದೆ. ಇನ್ನು, ಪುರುಷರ ವಿಚಾರಕ್ಕೆ ಬಂದರೆ ತೂಕವನ್ನು ಕಳೆದುಕೊಳ್ಳಲು ಅವರು 1700 ಕ್ಯಾಲೋರಿಗಳನ್ನು ತಿನ್ನಲು ಹೇಳಲಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಪುರುಷರು ಬೆಳಗ್ಗೆ ಮತ್ತು ಸಂಜೆ ಮೂರು ಚಪಾತಿ ತಿನ್ನಬಹುದು. ಗೋಧಿ, ಸಜ್ಜೆ, ಜೋಳದಲ್ಲಿ ಮಾಡಿದ ರೊಟ್ಟಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ತೂಕ ಇಳಿಸುವ ಪ್ಲಾನ್ ನಲ್ಲಿರುವ ಜನರು ರೊಟ್ಟಿಗೆ ಮೊದಲ ಆದ್ಯತೆ ನೀಡುತ್ತಾರೆ. ಕೆಲವರು ತುಂಬಾನೇ ಹಸಿವು ಆದಾಗ 5 ರಿಂದ 6 ಚಪಾತಿ ತಿನ್ನುತ್ತಾರೆ. ಒಂದೇ ಸಮಯಕ್ಕೆ ಇಷ್ಟು ಚಪಾತಿ ಅಥವಾ ರೊಟ್ಟಿ ತಿನ್ನೋದರಿಂದ ಏನೆಲ್ಲಾ ಪರಿಣಾಮ ಬೀರುತ್ತೆ ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ. ರೊಟ್ಟಿಯಲ್ಲಿ ಕಾರ್ಬ್ಸ್, ಕ್ಯಾಲೋರಿ ಅತ್ಯಧಿಕ ಪ್ರಮಾಣದಲ್ಲಿರುತ್ತದೆ.…
ಮನೆಯಲ್ಲಿ ಮಂಡಕ್ಕಿ ಮಸಾಲ ತಯಾರಿಸಿ ಡಬ್ಬದಲ್ಲಿ ಶೇಖರಿಸಿಟ್ಟಿರುತ್ತಾರೆ. ಸಂಜೆಯ ಸ್ನಾಕ್ಸ್ಗೆ, ಟೈಂ ಪಾಸ್ ಆಗಲು ಈ ಮಂಡಕ್ಕಿಯನ್ನು ತಿನ್ನುತ್ತಾರೆ. ನಾವೇನೋ ಮಂಡಕ್ಕಿಯನ್ನು ಟೈಂ ಪಾಸ್ಗೆಂದು ತಿನ್ನುತ್ತೇವೆ. ಆದರೆ ಅದರಲ್ಲಿರುವ ಆರೋಗ್ಯ ಪ್ರಯೋಜನಗಳು ಯಾವುವು? ಮಂಡಕಕ್ಕಿಯ ಸೇವನೆ ಆರೋಗ್ಯಕ್ಕೆ ಒಳ್ಳೆಯದು ಯಾಕೆ ಅನ್ನೋದನ್ನು ನಾವಿಲ್ಲಿ ನೋಡೋಣ. ಜೀರ್ಣಕ್ರಿಯೆಯನ್ನು ಉತ್ತಮವಾಗಿಸುತ್ತದೆ. ಮಂಡಕ್ಕಿಯು ಒಂದು ಪ್ರಬಲವಾದ ಜೀರ್ಣಕಾರಿ ಉತ್ತೇಜಕವಾಗಿದೆ. ಈ ಆಹಾರವು ಹೊಟ್ಟೆ ಮತ್ತು ಕರುಳಿನಲ್ಲಿರುವ ಆಹಾರದ ಕಣಗಳನ್ನು ಜೀರ್ಣಿಸಲು ಸಹಾಯ ಮಾಡುತ್ತದೆ. ಜೀರ್ಣಕಾರಿ ರಸಗಳ ಸ್ರವಿಸುವಿಕೆಯನ್ನು ಉತ್ತೇಜಿಸುತ್ತದೆ ಮತ್ತು ಇದರಿಂದಾಗಿ ಕರುಳಿನ ಮೂಲಕ ಅಗತ್ಯವಾದ ಪೋಷಕಾಂಶ ಹೀರಿಕೊಳ್ಳುವುದನ್ನು ಹೆಚ್ಚಿಸುತ್ತದೆ. ಇದು ಕಿಬ್ಬೊಟ್ಟೆಯ ಅನಿಲವನ್ನುಹೊರಹಾಕಿ ಕಿಬ್ಬೊಟ್ಟೆ ಉಬ್ಬುವುದು, ಎದೆಯುರಿ, ಅತಿಸಾರ, ವಾಯು, ಜಠರ ಹುಣ್ಣು ಮತ್ತು ಗ್ಯಾಸ್ಟಿಕ್ ನೋವಿನಂತಹ ಜಠರಗರುಳಿನ ಅಸ್ವಸ್ಥತೆಗಳ ಚಿಕಿತ್ಸೆಗೆ ಸಹಕಾರಿಯಾಗಿದೆ. ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಕಡಿಮೆ ಸೋಡಿಯಂ ಅಂಶವನ್ನು ಹೊಂದಿರುವ ಮಂಡಕ್ಕಿಯು, ರಕ್ತದೊತ್ತಡದ ಮಟ್ಟವನ್ನು ಕಂಟ್ರೋಲ್ನಲ್ಲಿಡಲು ಸಹಾಯ ಮಾಡುತ್ತದೆ. ಅಧಿಕ ರಕ್ತದೊತ್ತಡ ಮತ್ತು ಕಡಿಮೆ ರಕ್ತದೊತ್ತಡದ ಪರಿಸ್ಥಿತಿಗಳಲ್ಲಿ ಇದು ಅತ್ಯಂತ ಪ್ರಮುಖವಾಗಿದೆ.…
ಒಬ್ಬರ ಜೀವ ಉಳಿಸಲು ವೈದ್ಯರೇ ಆಗಬೇಕಿಲ್ಲ. ರಕ್ತದಾನ ಮಾಡುವ ಮೂಲಕವೂ ಜೀವ ಉಳಿಸಬಹುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ ಬೆಂಗಳೂರಿನಲ್ಲಿ ಇಂದು ವಿಧಾನ ಸೌಧದಿಂದ ಕಂಠೀರವ ಕ್ರೀಡಾಂಗಣದ ವರೆಗೆ ರಕ್ತ ದಾನದ ಕುರಿತು ನಡೆದ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು. ದೇಶದಲ್ಲಿ ರಕ್ತಕ್ಕಿರುವ ಬೇಡಿಕೆಯನ್ನ ಗಮನದಲ್ಲಿಟ್ಟುಕೊಂಡು ರಕ್ತದಾನಕ್ಕೆ ನಾವೆಲ್ಲರು ಮುಂದಾಗಬೇಕಿದೆ. ಹೆಚ್ಚು ರಕ್ತದಾನದ ಅಗತ್ಯತೆ ಇದ್ದು, ರಕ್ತದಾನ ಮಾಡುವ ಮೂಲಕ ಹಲವರ ಜೀವನದಲ್ಲಿ ಬದಲಾವಣೆ ತರಬಹುದು ಎಂದು ಹೇಳಿದರು. ರಕ್ತದಾನದ ಕುರಿತು ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವತ್ತ ಆರೋಗ್ಯ ಇಲಾಖೆ ಹಾಗೂ ಕರ್ನಾಟಕ ಸ್ಟೇಟ್ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಅವರು ಹಮ್ಮಿಕೊಂಡಿದ್ದ ಈ ರೀತಿಯ ಜಾಥಾ ಕಾರ್ಯಕ್ರಮಗಳು ಉತ್ತಮವಾದವು ಎಂದರು. ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಪ್ರತಿ ವರ್ಷ ಜೂನ್ 14 ರಂದು ಜಗತ್ತಿನಾದ್ಯಂತ 2004 ರಿಂದ ಆಚರಿಸಿಕೊಂಡು ಬರಲಾಗಿತ್ತಿದೆ. ಪ್ರತಿವರ್ಷದಂತೆ ಈ ವರ್ಷವೂ ಸಹ ವಿಶ್ವರಕ್ತದಾನಿಗಳ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ…
ಭೂಗತ ಪಾತಕಿ ರವಿ ಪೂಜಾರಿ ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಹರ್ನಿಯಾ ಹಿನ್ನೆಲೆ ಶಸ್ತ್ರ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಯ ಮಲ್ಟಿಸ್ಪೆಷಾಲಿಟಿ ಘಟಕಕ್ಕೆ ದಾಖಲಾಗಿದ್ದಾನೆ. 60ಕ್ಕೂ ಹೆಚ್ಚು ಕ್ರಿಮಿನಲ್ ಕೇಸ್ ಗಳಲ್ಲಿ ಭಾಗಿಯಾಗಿರುವ ರವಿ ಪೂಜಾರಿ ಮೇಲೆ ಕರ್ನಾಟಕ, ಮಹಾರಾಷ್ಟ್ರ, ಕೇರಳ ಸೇರಿ ಹಲವೆಡೆ ಕೇಸ್ ದಾಖಲಾಗಿದ್ದವು. ಭೂಗತವಾಗಿದ್ದುಕೊಂಡೇ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ರವಿ ಪೂಜಾರಿಯನ್ನು ಅರೆಸ್ಟ್ ಮಾಡಲು ಭಾರತದ ತನಿಖಾ ಸಂಸ್ಥೆಗಳು ಸೆನೆಗಲ್ ದೇಶದೊಂದಿಗೆ ಸಂಪರ್ಕದಲ್ಲಿದ್ದವು. ಈ ಹಿನ್ನೆಲೆಯಲ್ಲಿ 2019 ರಲ್ಲಿ ಸೆನೆಗಲ್ ಪೊಲೀಸರು ರವಿ ಪೂಜಾರಿಯನ್ನು ಬಂಧಿಸಲಾಗಿತ್ತು. ವಿಚಾರಣೆ ಬಳಿಕ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಇವೆಂಟ್ ಮ್ಯಾನೇಜ್ ಮೆಂಟ್ ಕಂಪೆನಿಗೆ ವಂಚಿಸಿ, ಜೀವ ಬೆದರಿಕೆ ಹಾಕಿರುವ ಆರೋಪದಡಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣರ ಪುತ್ರ ಅರುಣ್ ಸೋಮಣ್ಣ ಸೇರಿದಂತೆ ಮೂವರ ವಿರುದ್ಧ ಎಫ್ ಐಆರ್ ದಾಖಲಾಗಿರುವುದಾಗಿ ವರದಿಯಾಗಿದೆ. ಈ ಕುರಿತು ತೃಪ್ತಿ ಹೆಗಡೆ ಎಂಬುವವರು ಸಲ್ಲಿಸಿದ್ದ ಖಾಸಗಿ ದೂರಿನ ಅರ್ಜಿಯ ವಿಚಾರಣೆ ನಡೆಸಿದ ನಗರದ 37ನೇ ಎಸಿಎಂಎಂ ನ್ಯಾಯಾಲಯ ತನಿಖೆ ನಡೆಸುವಂತೆ ಆದೇಶಿಸಿತ್ತು. ಅದರನ್ವಯ ಅರುಣ್ ಸೋಮಣ್ಣ, ಜೀವನ್ ಕುಮಾರ್ ಹಾಗೂ ಪ್ರಮೋದ್ ರಾವ್ ಎಂಬುವರ ವಿರುದ್ಧ ಐಪಿಸಿ ಸೆಕ್ಷನ್ 506, 34, 504, 387, 420, 477ಂ, 323, 327,347 ಹಾಗೂ 354 (ದೈಹಿಕ ಹಿಂಸೆ, ಅವಮಾನ, ಜೀವಭಯ, ವಂಚನೆ, ಅಪಹರಣ) ಸೇರಿದಂತೆ ಮತ್ತಿತರ ಆರೋಪಗಳಡಿ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೂರಿನ ವಿವರ: ದೂರುದಾರೆಯಾದ ತೃಪ್ತಿ ಹೆಗಡೆ ಹಾಗೂ ಮಧ್ವರಾಜ್ ಎಂಬುವರು ಸುಮಾರು 23 ವರ್ಷಗಳಿಂದ ಇವೆಂಟ್ ಮ್ಯಾನೇಜ್ ಮೆಂಟ್…
ಬೆಂಗಳೂರಿನ ಕೇಂದ್ರ ಭಾಗಗಳಾದ ಸರ್ವಜ್ಞನಗರ, ಎಚ್ ಬಿಆರ್ ಲೇಔಟ್, ಬಾಣಸವಾಡಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಿಗೆ ಗುಣಮಟ್ಟದ ವಿದ್ಯುತ್ ಒದಗಿಸುವ ಹೊಸ ವಿದ್ಯುತ್ ಸರಬರಾಜು ವ್ಯವಸ್ಥೆಗೆ ಎಚ್ ಬಿಆರ್ ಸ್ಟೇಷ ನ್ನಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಚಾಲನೆ ನೀಡಿದರು. 220/60ಕೆವಿ ಎಚ್ಬಿಆರ್ ಜಿಐಎಸ್ ವಿದ್ಯುತ್ ಕೇಂದ್ರದಿಂದ 66 ಕೆ.ವಿ. ಪಾಟರಿ ರಸ್ತೆ ವಿದ್ಯುತ್ ಉಪ ಕೇಂದ್ರಕ್ಕೆ ಸುಮಾರು 5.18 ಕಿ.ಮೀ. ಉದ್ದದ ಏಕಮಾರ್ಗ 1ಸಾವಿರ ಚದರ ಮಿ.ಮೀ. ಭೂಗತ ಕೇಬಲ್ ಅನ್ನು ಕೆಪಿಟಿಸಿಎಲ್ ಅಳವಡಿಸಿದೆ. ಈಗಿರುವ 66 ಕೆವಿ ಪಾಟರಿ ರಸ್ತೆ ವಿದ್ಯುತ್ ಉಪಕೇಂದ್ರಕ್ಕೆ 66 ಕೆವಿ ಐಟಿಐ ವಿದ್ಯುತ್ ಉಪಕೇಂದ್ರದಿಂದ ದ್ವಿಮಾರ್ಗ ಪ್ರಸರಣ ಮಾರ್ಗ ಸಂಪರ್ಕದಲ್ಲಿದ್ದು, ಈ ಉಪಕೇಂದ್ರದಿಂದ ಬೆಂಗಳೂರಿನ ಕೇಂದ್ರ ಭಾಗಗಳಾದ ಸರ್ವಜ್ಞನಗರ, ಎಚ್ಬಿಆರ್ ಲೇಔಟ್, ನಾಗವಾರ, ಬಾಣಸವಾಡಿ, ಕಮ್ಮನಹಳ್ಳಿ, ಕಾಡಗೊಂಡನಹಳ್ಳಿ ಲಿಂಗರಾಜಪುರ, ಅರೇಬಿಕ್ ಕಾಲೇಜು, ಟ್ಯಾನರಿ ರಸ್ತೆ, ಡೀವಿಸ್ ರಸ್ತೆ, ಪುಲಕೇಶಿನಗರ ಮತ್ತು ದಂಡು ರೈಲ್ವೆ ನಿಲ್ದಾಣ ಮತ್ತು ಸುತ್ತಮುತ್ತಲಿನ ಇತರ ಪ್ರದೇಶಗಳಿಗೆ ಕೈಗಾರಿಕೆ, ವಾಣಿಜ್ಯ ಹಾಗೂ ಗೃಹಬಳಕೆಯ…
ಒಕ್ಕಲಿಗ ನಾಯಕರ ಜೊತೆಗಿನ ಸಭೆ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಧ್ಯಮಗಳ ಪ್ರಶ್ನೆ ಉತ್ತರಿಸಿದ್ದು, ನಾವು ನಮ್ಮ ಸಮಾಜದ ಬಗ್ಗೆ, ಲೋಕಸಭೆ ಚುನಾವಣೆ ಮತದಾನದ ಬಗ್ಗೆ ಚರ್ಚೆ ಮಾಡಿದ್ದೇವೆ. ನಾವು ಸೋತಿದ್ದು, ಸೋಲನ್ನು ಒಪ್ಪಿದ್ದೇವೆ. ರಾಜಕಾರಣದಲ್ಲಿ ಇದು ಸಹಜ ಎಂದರು. ನಮ್ಮ ಚಲುವರಾಯಸ್ವಾಮಿ, ಬಾಲಕೃಷ್ಣ 50 ಸಾವಿರ ಮತಗಳ ಅಂತರದಲ್ಲಿ ಸೋತಿದ್ದರು. ಈಗ ಅವರು ಮತ್ತೆ ಗೆದ್ದಿದ್ದಾರೆ. ಈ ಸೋಲು ಶಾಶ್ವತವಲ್ಲ. ಜನರ ಭಾವನೆ, ಆಲೋಚನೆ ಆರು ತಿಂಗಳಿಗೆ ಬದಲಾಗುತ್ತದೆ. ಕಳೆದ ಚುನಾವಣೆಯಲ್ಲಿ ನಮ್ಮ ಪಕ್ಷ ಕೇವಲ 1 ಸ್ಥಾನ ಗೆದ್ದಿತ್ತು. ಈಗ 9 ಸ್ಥಾನ ಗೆದ್ದಿದೆ. ಇನ್ನು ನಾಲ್ಕೈದು ಕ್ಷೇತ್ರ ನಾವು ನಿರೀಕ್ಷೆ ಮಾಡಿದ್ದೆವು. 2028ಕ್ಕೆ ಮತ್ತೆ ಕಾಂಗ್ರೆಸ್ ಸರಕಾರವನ್ನು ಅಧಿಕಾರಕ್ಕೆ ತರುವುದು ನನ್ನ ಜವಾಬ್ದಾರಿ. ನಾನು, ಸಿದ್ದರಾಮಯ್ಯ, ಎಲ್ಲ ಸಚಿವ ಸಂಪುಟ ಸದಸ್ಯರು ಒಟ್ಟಾಗಿ ದುಡಿದು ಈ ಸರಕಾರ ಮತ್ತೆ ತರುತ್ತೇವೆ ಎಂದು ಅವರು ಹೇಳಿದರು. ನಟ ದರ್ಶನ್ ಪ್ರಕರಣದಲ್ಲಿ ಪ್ರಭಾವಿಗಳ ಒತ್ತಡವಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದ…
ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಮತ್ತು ಸಹವರ್ತಿಗಳಿಗೆ ಯಾವುದೇ ವಿಶೇಷ ಆತಿಥ್ಯ ಕೊಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಕಾನೂನು ಸುವ್ಯವಸ್ಥೆ ಬಗ್ಗೆ ಮಾಹಿತಿ ನೀಡಲು ಹೋದ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಈ ಬಗ್ಗೆ ಸೂಚನೆ ನೀಡಿದ್ದಾರೆ. ಸುದ್ದಿ ಮಾಧ್ಯಮಗಳಲ್ಲಿ ಆರೋಪಿಗಳಾದ ನಟ ದರ್ಶನ್ ಹಾಗೂ ಸಹಚರರಿಗೆ ವಿಶೇಷ ಆತಿಥ್ಯ ಕೊಡುತ್ತಿರುವ ಬಗ್ಗೆ ವರದಿಯಾಗುತ್ತಿವೆ. ಆರೋಪಿಗಳಿಗೆ ಯಾವುದೇ ವಿಶೇಷ ಆತಿಥ್ಯ ಕೊಡಬೇಡಿ. ಆರೋಪಿಗಳಿಗೆ ಆರೋಪಿಗೆ ನೀಡಬೇಕಾದ ಟ್ರೀಟ್ಮೆಂಟ್ ಕೊಡಿ. ಯಾವುದೇ ಸ್ಪೆಷಲ್ ಟ್ರಿಟ್ಮೆಂಟ್ ಬೇಡ. ಮಾಧ್ಯಮಗಳಲ್ಲಿ ಪೊಲೀಸ್ ಠಾಣೆ ಮುಚ್ಚಿದ್ದಾರೆ ಅಂತ ಸುದ್ದಿ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ. ದರ್ಶನ್ ಬೆಂಬಲಿಗರು ಬರಬಹುದು ಹಾಗೂ ಮಾಧ್ಯಮಗಳು ವಿಡಿಯೋ ಮಾಡುತ್ತಾರೆ ಅಂತ ಶಾಮಿಯಾನ ಹಾಕಲಾಗಿದೆ ಎಂದು ಮುಖ್ಯಮಂತ್ರಿಗೆ ಪೊಲೀಸ್ ಅಧಿಕಾರಿಗಳು ಸಮಜಾಯಿಷಿ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಅಮೆರಿಕ ಮತ್ತು ಐರ್ಲೆಂಡ್ ನಡುವಿನ ಟಿ20 ವಿಶ್ವಕಪ್ ಪಂದ್ಯಾವಳಿಯ ಎ ಗುಂಪಿನ ಪಂದ್ಯ ಶುಕ್ರವಾರ ಮಳೆಯ ಕಾರಣದಿಂದ ರದ್ದಾಗಿದ್ದು, ಉಭಯ ತಂಡಗಳು ತಲಾ ಒಂದು ಅಂಕವನ್ನು ಹಂಚಿಕೊಂಡಿವೆ. ಇದರೊಂದಿಗೆ ವಿಶ್ವಕಪ್ ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಾ ಬಂದಿರುವ ಅಮೆರಿಕ ತಂಡ ಸೂಪರ್ 8 ಹಂತಕ್ಕೆ ಮುನ್ನಡೆದಿದೆ. ಇದರಿಂದಾಗಿ ಟೂರ್ನಿಯಲ್ಲಿ ಎರಡು ಪಂದ್ಯಗಳನ್ನು ಸೋತಿರುವ ಪಾಕಿಸ್ತಾನ ಟೂರ್ನಿಯಿಂದ ನಿರ್ಗಮಿಸಿದೆ. ಸಹ ತಂಡವೊಂದು ಗುಂಪು ಹಂತದಿಂದ ಸೂಪರ್ ಹಂತಕ್ಕೆ (8/10/12) ಮುನ್ನಡೆಯುತ್ತಿರುವ ಏಳನೇ ನಿದರ್ಶನ ಇದಾಗಿದೆ. ಇದಕ್ಕೂ ಮುನ್ನ ಟಿ20 ವಿಶ್ವಕಪ್ ನಲ್ಲಿ ಐರ್ಲೆಂಡ್ (2009), ನೆದರ್ಲೆಂಡ್ಸ್ (2014), ಅಫ್ಘಾನಿಸ್ತಾನ (2016), ನಮೀಬಿಯಾ (2021), ಸ್ಕಾಟ್ಲೆಂಡ್ (2021) ಮತ್ತು ನೆದರ್ಲೆಂಡ್ಸ್ (2022) ಸೂಪರ್ ಹಂತಕ್ಕೆ ಮುನ್ನಡೆದಿದ್ದವು. ಗುಂಪು ಹಂತದ ಎಲ್ಲ ನಾಲ್ಕು ಪಂದ್ಯಗಳನ್ನು ಮುಗಿಸಿರುವ ಅಮೆರಿಕ ಎರಡು ಜಯ, ಒಂದು ಸೋಲು ಮತ್ತು ಒಂದು ಪಂದ್ಯ ರದ್ದಾಗಿರುವ ಕಾರಣ ಒಟ್ಟು ಐದು ಅಂಕಗಳನ್ನು ಸಂಪಾದಿಸಿ, ಎ ಗುಂಪಿನಿಂದ 2ನೇ ತಂಡವಾಗಿ ಸೂಪರ್ 8 ಹಂತ…
ನಿತ್ಯ ಸರಾಸರಿ ಒಂದು ಲಕ್ಷಕ್ಕೂ ಅಧಿಕ ಮಂದಿ ಅಯೋಧ್ಯೆಗೆ ಭೇಟಿ ನೀಡಿ, ರಾಮಲಲ್ಲಾನ ದರ್ಶನ ಪಡೆಯುತ್ತಿದ್ದಾರೆ. ರಾಮಮಂದಿರ ನಿರ್ಮಾಣದ ಬಳಿಕ ಅಯೋಧ್ಯೆಯು ದೇಶದ ಪ್ರಮುಖ ಯಾತ್ರಾಸ್ಥಳವಾಗಿ ಬದಲಾಗಿದೆ. ಇದರ ಬೆನ್ನಲ್ಲೇ, ರಾಮಮಂದಿರವನ್ನು ಸ್ಫೋಟಿಸುವ ಕುರಿತು ಉಗ್ರರು ಬೆದರಿಕೆ ಹಾಕಿದ್ದಾರೆ. ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು (Ram Mandir) ಸ್ಫೋಟಿಸಲಾಗುವುದು ಎಂದು ಜೈಶೆ ಮೊಹಮ್ಮದ್ ಉಗ್ರ ಸಂಘಟನೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಕಟ್ಟೆಚ್ಚರ ಘೋಷಣೆ ಮಾಡಲಾಗಿದೆ. ರಾಮಮಂದಿರ ಸ್ಫೋಟಿಸುವ ಕುರಿತು ಜೈಶೆ ಮೊಹಮ್ಮದ್ ಉಗ್ರರು ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ರಾಮಮಂದಿರ ಸುತ್ತಮುತ್ತ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಿಸಿಟಿವಿಗಳ ಮೂಲಕ ಶಂಕಾಸ್ಪದ ವ್ಯಕ್ತಿಗಳ ಮೇಲೆ ನಿಗಾ ಇರಿಸಲಾಗಿದೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಕೂಡ ಅಯೋಧ್ಯೆಯಲ್ಲಿ ಹೆಚ್ಚು ಅಲರ್ಟ್ ಆಗಿವೆ. ಅಯೋಧ್ಯೆಯ ಇಂಚಿಂಚೂ ಪ್ರದೇಶದ ಮೇಲೆ ಭದ್ರತಾ ಸಿಬ್ಬಂದಿಯು ನಿಗಾ ಇರಿಸಿದ್ದಾರೆ. ವಾಹನಗಳ ತಪಾಸಣೆಯೂ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…