Subscribe to Updates
Get the latest creative news from FooBar about art, design and business.
- ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
- ತಿಪಟೂರು: ಜೂನ್ 1ರಿಂದ ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
- ತುಮಕೂರು: ವಾಟರ್ ಟ್ಯಾಂಕ್ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು, ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
- ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
- ತುರುವೇಕೆರೆ: ಜೂ. 4ರಂದು ಉಚಿತ ಯೋಗ, ಪ್ರಾಣಾಯಾಮ ತರಗತಿಗಳ ಉದ್ಘಾಟನೆ
- ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
- ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ
Author: admin
ಸಾಮಾನ್ಯ ವ್ಯಕ್ತಿಯೊಬ್ಬನ ಕೊಲೆ ಪ್ರಕರಣದಲ್ಲಿ ಸಿಕ್ಕಿ ಹಾಕಿಕೊಂಡಿರುವ ಖ್ಯಾತ ಸಿನಿಮಾ ನಟ ದರ್ಶನ್ ಅವರನ್ನು ನ್ಯಾಯಾಲಯ ಮುಂದಿನ ಏಳು ದಿನಗಳ ತನಕ ಪೊಲೀಸ್ ಕಸ್ಟಡಿಗೆ ನೀಡಿದೆ. ನೆನ್ನೆ ಸಂಜೆ ನ್ಯಾಯಾಲಯಕ್ಕೆ ದರ್ಶನ್ ಮತ್ತು ಟೀಂ ಅನ್ನು ಹಾಜರುಪಡಿಸಲಾಗಿದೆ. ಈ ವೇಳೆ ವಿಚಾರಣೆಯನ್ನು ನ್ಯಾಯಾಧೀಶರು ನಡೆಸಿರುತ್ತಾರೆ. ಪೊಲೀಸರಿಂದ ನಿಮಗೆ ಏನಾದರೂ ತೊಂದರೆ ಆಯಿತೇ..? ಎಂದು ಮೊದಲಿಗೆ ಕೇಳಿದ್ದಾರೆ. ಬಳಿಕ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಂದಷ್ಟು ಪ್ರಶ್ನೆಗಳನ್ನು ಕೇಳಿದ್ದಾರೆ. ಈ ವೇಳೆ ದರ್ಶನ್ ಕೈಕಟ್ಟಿ ನ್ಯಾಯಾಧೀಶರ ಎದುರು ನಿಂತಿದ್ದರು. ಮಾತ್ರವಲ್ಲ ಕಣ್ಣೀರು ಹಾಕಿದರು. ಇದಾದ ಬಳಿಕ ನ್ಯಾಯಾಲಯ ತನ್ನ ಆದೇಶವನ್ನು ಪ್ರಕಟಿಸುತ್ತೆ, ಮುಂದಿನ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಬೇಕು ಎಂದು ಸೂಚಿಸುತ್ತೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂಪೂರ್ಣ ಸತ್ಯಾಸತ್ಯತೆ ತಿಳಿದು ಬರಬೇಕು. ಇದಕ್ಕೆ ಸಮಗ್ರ ತನಿಖೆಯ ಅವಶ್ಯಕತೆ ಇದೆ ಎಂದು ನ್ಯಾಯಾಲಯ ಅಭಿಪ್ರಾಯ ಪಡುತ್ತದೆ. ಮಾತ್ರವಲ್ಲ ನಟ ದರ್ಶನ್ ಪ್ರಭಾವಿಯಾಗಿದ್ದು ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇದೆ ಎಂದು ಇದೇ ವೇಳೆ ನ್ಯಾಯಾಲಯ ತಿಳಿಸಿದೆ. ಸದ್ಯ…
ತುಮಕೂರು: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವಂತಹ ಶಿಕ್ಷಕರೇ ದೇಶದ ಭವಿಷ್ಯವನ್ನು ನಿರ್ಧರಿಸುತ್ತಾರೆ. ಶಾಲೆಯ ಫಲಿತಾಂಶವೇ ಶಾಲೆಯ ಉತ್ತಮ ಗುಣಮಟ್ಟವನ್ನು ಅಳೆಯುತ್ತದೆ. ಆದ್ದರಿಂದ ಶಿಕ್ಷಕರು ಪ್ರಾಮಾಣಿಕತೆ, ಕರ್ತವ್ಯ ನಿಷ್ಟೆಯಿಂದ ಮಕ್ಕಳಿಗೆ ಬೋಧನೆ ಮಾಡುವ ಮೂಲಕ ಜಿಲ್ಲೆಯ ಶೈಕ್ಷಣಿಕ ಫಲಿತಾಂಶವನ್ನು ಹೆಚ್ಚಿಸಲು ಅಗತ್ಯ ಕ್ರಮವಹಿಸಿಬೇಕೆಂದು ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಅಧಿಕಾರಿಗಳಿಗೆ ಸೂಚಿಸಿದರು. ಕೊರಟಗೆರೆ ತಾಲ್ಲೂಕಿನ ಜಟ್ಟಿ ಅಗ್ರಹಾರ ಗ್ರಾಮದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಆವರಣದಲ್ಲಿ ನಡೆದ ವಿದ್ಯಾರ್ಥಿಗಳಿಗೆ ‘ಉಚಿತ ಪಠ್ಯಪುಸ್ತಕ ಮತ್ತು ಸಮವಸ್ತç ವಿತರಣಾ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಉಚಿತ ಪಠ್ಯಪುಸ್ತಕ, ಸಮವಸ್ತç ವಿತರಣೆಯಂತಹ ಕಾರ್ಯಕ್ರಮಗಳು ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸುವಲ್ಲಿ ಗಮನಾರ್ಹ ಪಾತ್ರವಹಿಸಿವೆ. ಶಾಲೆಯ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಸರ್ಕಾರ ಸಾವಿರಾರು ಕೋಟಿ ರೂ.ಗಳನ್ನು ವ್ಯಯಿಸುತ್ತಿದೆ. ಉತ್ತಮ ಶಿಕ್ಷಣದಿಂದಲೇ ಮನುಷ್ಯನು ಉತ್ತಮ ಹಾಗೂ ಪರಿಪೂರ್ಣ ವ್ಯಕ್ತಿಯಾಗಿ ರೂಪುಗೊಂಡು ಮಾನಸಿಕ ಮತ್ತು ದೈಹಿಕವಾಗಿ ಸದೃಢವಾಗಿ ಉತ್ತಮ ಪ್ರಜೆಯಾಗುತ್ತಾನೆ. ಗುಣಮಟ್ಟದ ಶಿಕ್ಷಣ ನೀಡಿಸ…
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath ) ಅವರು ಬಕ್ರೀದ್ ಹಿನ್ನಲೆ ಮುಸ್ಲಿಂ ಸಮೂಹಕ್ಕೆ ಖಡಕ್ ಸಂದೇಶವೊಂದನ್ನು ನೀಡಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಕ್ರೀದ್ ಹಿನ್ನಲೆ ಮುಸ್ಲಿಂ ಸಮೂಹಕ್ಕೆ ಎಚ್ಚರಿಕೆಯ ಸಂದೇಶವೊಂದನ್ನು ನೀಡಿದ್ದಾರೆ. ಜೂನ್ 17ರಂದು ದೇಶದ ಎಲ್ಲೆಡೆ ಮುಸ್ಲಿಂ ಸಮೂಹದವರು ಬಕ್ರೀದ್ ಹಬ್ಬವನ್ನು ಆಚರಿಸುತ್ತಾರೆ. ಈ ವೇಳೆ ಮುಸ್ಲಿಮರು ರಸ್ತೆಗಳಲ್ಲಿ ನಮಾಜ್ ಮಾಡುವಂತಿಲ್ಲ. ನಿಷೇಧ ಪ್ರದೇಶಗಳಲ್ಲಿ ಪ್ರಾಣಿಗಳನ್ನು ಬಲಿ ಕೊಡುವುದು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಬಕ್ರೀದ್ನಲ್ಲಿ ಬಲಿದಾನ ಮಾಡುವ ಸ್ಥಳವನ್ನು ಮೊದಲೇ ಗುರುತಿಸಬೇಕು. ಇತರ ಸ್ಥಳಗಳಲ್ಲಿ ಬಲಿದಾನ ಮಾಡಬಾರದು ಹಾಗೂ ವಿವಾದಿತ ಸ್ಥಳಗಳಲ್ಲಿ ಬಲಿ ನೀಡಬಾರದು. ಈ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ರಸ್ತೆಗಳನ್ನು ಬಂದ್ ಮಾಡಿ ಪ್ರಾರ್ಥನೆ ಮಾಡಬಾರದು. ನಂಬಿಕೆಯನ್ನು ಗೌರವಿಸಿ ಆದರೆ ಯಾವುದೇ ಹೊಸ ಸಂಪ್ರದಾಯವನ್ನು ಪ್ರೋತ್ಸಾಹಿಸಬೇಡಿ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿರುವ ಹಿಂದಿನ ಕಾರಣ ರಿವೀಲ್ ಆಗಿದೆ. ನಟ ದರ್ಶನ್ , ಗೆಳತಿ ಪವಿತ್ರಾ ಗೌಡ ಸಹಿತ ರೇಣುಕಾಸ್ವಾಮಿ ಅಪಹರಣ ಹಾಗೂ ಕೊಲೆ ಪ್ರಕರಣದಲ್ಲಿ 15 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿದ್ದ ಪೊಲೀಸ್ ಠಾಣೆಯ ಆವರಣದ ಗೋಡೆಗೆ ಶಾಮಿಯಾನ ಹಾಕಲಾಗಿತ್ತು. ಈ ವಿಚಾರ ಈಗ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಶಾಮಿಯಾನದ ಸೈಡ್ ವಾಲ್ ಹಾಕಿಸಿದ್ದು ನಟ ದರ್ಶನ್ಗಾಗಿಯೇ ಎಂಬ ಸತ್ಯ ಬಯಲಾಗಿದೆ. ಪೊಲೀಸರ ಮುಂದೆ ದರ್ಶನ್ ಮನವಿ ಹಿನ್ನೆಲೆಯಲ್ಲಿ ಪೊಲೀಸರು ಈ ಕೆಲಸ ಮಾಡಿದ್ದಾರೆ ಎನ್ನಲಾಗಿದೆ. ಸಾರ್ ನನಗೆ ಒಂದೇ ಕಡೆ ಕುಳಿತುಕೊಳ್ಳಲು ಆಗುವುದಿಲ್ಲ. ನಾನು ವಾಕ್ ಮಾಡಬೇಕು. ನನ್ನ ಕೈಲಿ ಆಗುತ್ತಿಲ್ಲ. ನನ್ನ ಬಾಡಿ ರಿಲ್ಯಾಕ್ಸ್ ಆಗಬೇಕು. ಸಿಗರೇಟ್ ಇಲ್ಲವಾದರೆ ನನ್ನ ಕೈ ನಡುಗುತ್ತೆ. ನೀವು ಪದೇ ಪದೇ ಪ್ರಶ್ನೆ ಮಾಡುತ್ತಲೇ ಇದ್ದೀರಿ ಎಂದು ಹೇಳಿದ್ದಾರೆ ಎನ್ನಲಾಗಿದೆ. ಹೀಗಾಗಿಯೇ ತಿರುಗಾಡಲು ಸೈಡ್ ವಾಲ್ ಹಾಕಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ. ಪರಮೇಶ್ವರ ಇಂದು ಕೊರಟಗೆರೆ ತಾಲ್ಲೂಕಿನ ಮಲ್ಲೇಶ್ವರ ಗ್ರಾಮದಲ್ಲಿ ‘ಮುಂಗಾರು ಬಿತ್ತನೆಗೆ ಚಾಲನೆ’ ನೀಡಿದರು. ಹಂಚಿಹಳ್ಳಿ ಗ್ರಾಮ ಪಂಚಾಯಿತಿಯ ಗೊಲ್ಲದೇವನಹಳ್ಳಿಯಲ್ಲಿ ಮಲ್ಲೇಶ್ವರ ರೈತ ಚನ್ನಪ್ಪ ಅವರ ಜಮೀನಿನಲ್ಲಿ ತೊಗರಿ, ಬಿಆರ್ ಜಿ 05 ಸೊರಗು ನಿರೋದಕ ಬೀಜವನ್ನು ಬಿತ್ತನೆ ಮಾಡಿದರು. ಅಲ್ಲದೆ ಟ್ರ್ಯಾಕ್ಟರ್ ಚಲಾಯಿಸುವ ಮೂಲಕ ಪರಮೇಶ್ವರ ಅವರು ಗಮನಸೆಳೆದರು. ಈ ವೇಳೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರಭು, ತಹಶೀಲ್ದಾರ್ ಮಂಜುನಾಥ್ ಅವರು ಇದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ರಾಜ್ಯದಲ್ಲಿ ಬಂಡವಾಳ ಹೂಡಿಕೆರಾಜ್ಯದಲ್ಲಿ ಬಂಡವಾಳ ಹೂಡಿಕೆ ಸಾಧ್ಯತೆಗಳನ್ನು ಚರ್ಚಿಸಲು ದಕ್ಷಿಣ ಕೊರಿಯಾದ ನಿಯೋಗವು ಇಂದು ಇಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರನ್ನು ಭೇಟಿಯಾಗಿತ್ತು. ಗರಿಷ್ಠ ನಿಖರತೆಯ ಮತ್ತು ಹೆಚ್ಚಿನ ಮೌಲ್ಯದ ಕಂಪ್ಯೂಟರೈಸ್ಡ್ ನ್ಯುಮೆರಿಕಲ್ ಕಂಟ್ರೋಲ್ (ಸಿಎನ್ ಸಿ) ಯಂತ್ರೋಪಕರಣಗಳನ್ನು ತಯಾರಿಸುವ ಜಾಗತಿಕ ಪ್ರಮುಖ ತಯಾರಿಕಾ ಕಂಪನಿಯಾಗಿರುವ ದಕ್ಷಿಣ ಕೊರಿಯಾದ ಡಿಎನ್ ಸೊಲುಷನ್ಸ್ನ ಪ್ರತಿನಿಧಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು. ರಾಜ್ಯ ಸರ್ಕಾರ ಮತ್ತು ಡಿ.ಎನ್. ಸೊಲುಷನ್ಸ್ ನಡುವಣ ಪಾಲುದಾರಿಕೆಯ ಒಪ್ಪಂದಗಳನ್ನು ಕಾರ್ಯಗತಗೊಳ್ಳಲು ಸ್ಯಾವೆಲ್ಸ್ ಇಂಡಿಯಾ ನೆರವಾಗುತ್ತಿದ್ದು, ಅದರ ಪ್ರತಿನಿಧಿಗಳೂ ಸಭೆಯಲ್ಲಿ ಉಪಸ್ಥಿತರಿದ್ದರು. ಡಿಎನ್ ಸೊಲ್ಯೂಷನ್ಸ್, ದಕ್ಷಿಣ ಕೊರಿಯಾದ ಯಂತ್ರೋಪಕರಣ ತಯಾರಿಸುವ ಅತಿದೊಡ್ಡ ಮತ್ತು ಲೋಹ-ಕತ್ತರಿಸುವ ಯಂತ್ರ ತಯಾರಿಸುವ ವಿಶ್ವದ ಮೂರನೇ ಅತಿದೊಡ್ಡ ಕಂಪನಿಯಾಗಿದೆ. ವಾಹನ ತಯಾರಿಕೆ, ಸೆಮಿಕಂಡಕ್ಟರ್, ಐಟಿ, ವಿಮಾನಯಾನ, ವೈದ್ಯಕೀಯ ಸೇವೆಗಳು ಮತ್ತಿತರ ಉದ್ಯಮಗಳಿಗೆ 400 ಕ್ಕೂ ಹೆಚ್ಚು ಬಗೆಯ ವೈವಿಧ್ಯಮಯ ಉತ್ಪನ್ನಗಳನ್ನು ಈ ಕಂಪನಿಯೇ ವಿನ್ಯಾಸಗೊಳಿಸುತ್ತಿದೆ. ಕಂಪನಿಯ ಭಾರತದ ನಿರ್ದೇಶಕ ಯಂಗ್ ಸಮ್ ಕಿಮ್ ಮತ್ತು…
ಬಸ್ ನಿಲ್ದಾಣಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಹೊಸದಾಗಿ 254 ನಮ್ಮ ಕ್ಲಿನಿಕ್ ಗಳನ್ನು ಪ್ರಾರಂಭಿಸಲು 15 ದಿನಗಳ ಒಳಗಾಗಿ ಸ್ಥಳ ಗುರುತಿಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು. ಗುರುವಾರ ವಿಕಾಸಸೌಧದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಆರೋಗ್ಯ ಯೋಜನೆಗಳ ಪ್ರಗತಿ ಕುರಿತು ಪರಿಶೀಲನೆ ನಡೆಸಿದ ಅವರು, ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 503 ನಮ್ಮ ಕ್ಲಿನಿಕ್ ಗಳನ್ನು ಸದೃಢಗೊಳಿಸುವತ್ತ ಗಮನ ಹರಿಸಬೇಕು. ಪ್ರಸಕ್ತ ಸಾಲಿನಲ್ಲಿ ಹೊಸದಾಗಿ 254 ನಮ್ಮ ಕ್ಲಿನಿಕ್ ಗಳನ್ನ ಪ್ರಾರಂಭಿಸಲು ಅವಕಾಶವಿದ್ದು, ಸ್ಥಳ ಗುರುತಿಸುವ ಕಾರ್ಯ ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸ್ಥಳ ಗುರುತಿಸುವ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಆದ್ಯತೆ ನೀಡಬೇಕು. ವಿಶೇಷವಾಗಿ ಜೈಲುಗಳು ಹಾಗೂ ಬಸ್ ನಿಲ್ದಾಣಗಳಲ್ಲಿ, ನಮ್ಮ ಕ್ಲಿನಿಕ್ ಗಳನ್ನು ಆರಂಭಿಸುವ ಕುರಿತು ಸ್ಥಳ ಗುರುತಿಸುವ ಕಾರ್ಯ 15 ದಿನಗಳ ಒಳಗಾಗಿ ಪೂರ್ಣಗೊಳಿಸಿ ಸಚಿವ ಸಂಪುಟ ಒಪ್ಪಿಗೆ ಪಡೆಯುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಇಲಾಖೆ ಪ್ರಧಾನ ಕಾರ್ಯದರ್ಶಿ…
ಎತ್ತಿನಹೊಳೆ ಕಾಮಗಾರಿಗೆ ಅಡಚಣೆ ಉಂಟು ಮಾಡಿರುವ 500 ಎಕರೆ ಜಾಗವನ್ನು ಹಸ್ತಾಂತರಿಸಲು ಅರಣ್ಯ ಇಲಾಖೆ ಒಪ್ಪಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ನೀರಾವರಿ ಸಚಿವರೂ ಆಗಿರುವ ಶಿವಕುಮಾರ್ ಅವರು ಈ ಯೋಜನೆ ಸಂಬಂಧ ವಿಕಾಸಸೌಧದಲ್ಲಿ ಮಂಗಳವಾರ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಅರಣ್ಯ ಸಚಿವ ಈಶ್ವರ ಖಂಡ್ರೆ, ದಿಲ್ಲಿಯಲ್ಲಿ ಕರ್ನಾಟಕ ಸರಕಾರದ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಹಾಗೂ ಸಂಬಂಧಪಟ್ಟ ಇಲಾಖೆಗಳ ಪ್ರಮುಖ ಅಧಿಕಾರಿಗಳ ಜತೆ ಸಭೆ ನಡೆಸಿದರು. ಈ ಸಭೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಶಿವಕುಮಾರ್ ಅವರು, “ಎತ್ತಿನಹೊಳೆ ಯೋಜನೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದ ಕೆಲಸ ತ್ವರಿತ ಗತಿಯಲ್ಲಿ ನಡೆಸಲು ಅರಣ್ಯ ಸಚಿವರಾದ ಈಶ್ವರ ಖಂಡ್ರೆ, ದಿಲ್ಲಿ ಪ್ರತಿನಿಧಿ ಟಿ.ಬಿ ಜಯಚಂದ್ರ, ಕಂದಾಯ, ಅರಣ್ಯ, ನೀರಾವರಿ ಇಲಾಖೆ ಅಧಿಕಾರಿಗಳ ಜತೆ ಇಂದು ಚರ್ಚೆ ಮಾಡಿದ್ದೇವೆ” ಎಂದರು. ʼಯೋಜನೆಗೆ ಅಗತ್ಯವಿರುವ ಜಾಗವನ್ನು ಅರಣ್ಯ ಇಲಾಖೆ ನೀಡುತ್ತಿದ್ದು, ಇದಕ್ಕೆ ಪರ್ಯಾಯವಾಗಿ ಕಂದಾಯ ಇಲಾಖೆಯು ಅರಣ್ಯ ಇಲಾಖೆಗೆ 500…
ಬೆಂಗಳೂರು: ನಗರದಲ್ಲಿ ಕಸದ ಸಮಸ್ಯೆ ನಿವಾರಣೆ ಮಾಡುವ ಉದ್ದೇಶದಿಂದ ಕರ್ನಾಟಕ ವಿದ್ಯುತ್ ನಿಗಮದ(ಕೆಪಿಸಿಎಲ್) ವತಿಯಿಂದ ಬಿಡದಿಯಲ್ಲಿ ಸ್ಥಾಪಿಸುತ್ತಿರುವ ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕದಲ್ಲಿ ಶೀಘ್ರ ಪರೀಕ್ಷಾರ್ಥವಾಗಿ ವಿದ್ಯುತ್ ಉತ್ಪಾದಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ ಕಸದ ಸಮಸ್ಯೆ ನಿವಾರಣೆ ಮಾಡುವ ಸಂಬಂಧ ಇಂದು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಕರ್ನಾಟಕ ವಿದ್ಯುತ್ ನಿಗಮದ ವತಿಯಿಂದ ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕವನ್ನು ಸ್ಥಾಪಿಸಲಾಗುತ್ತಿದ್ದು, ಪಾಲಿಕೆಯಿಂದ ತ್ಯಾಜ್ಯದ ವ್ಯವಸ್ಥೆಯನ್ನು ಮಾಡಬೇಕಿದೆ. ಈ ನಿಟ್ಟಿನಲ್ಲಿ ತ್ಯಾಜ್ಯವನ್ನು ಸರಿಯಾಗಿ ನೀಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಬಾಕಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ನಂತರ ವಿದ್ಯುತ್ ಉತ್ಪಾದನೆಗಾಗಿ ಪರೀಕ್ಷಾರ್ಥವಾಗಿ ತ್ಯಾಜ್ಯದ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು. 11.5 ಮೆಗಾವಾಟ್ ವಿದ್ಯುತ್ ಉತ್ಪಾದನೆ: ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕವನ್ನು 10…
ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಅವರನ್ನು ಚಿತ್ರರಂಗದಿಂದ ಬ್ಯಾನ್ ಆಗೋದು ಗ್ಯಾರಂಟಿ ಎಂದೇ ಹೇಳಲಾಗುತ್ತಿದೆ. ಈ ಸಂಬಂಧ ಫಿಲಂ ಚೇಂಬರ್ ನಲ್ಲಿ ಪದಾಧಿಕಾರಿಗಳು, ಅಧ್ಯಕ್ಷರು ತುರ್ತು ಸಭೆ ನಡೆಸಿದರು. ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಫಿಲಂ ಚೇಂಬರ್ ಅಧ್ಯಕ್ಷ ಎನ್.ಎಂ. ಸುರೇಶ್, ಕೊಲೆ ಪ್ರಕರಣವನ್ನು ಖಂಡಿಸಿದರು. ಈ ಅನ್ಯಾಯವನ್ನ ಖಂಡಿಸಲೇಬೇಕು. ಮೊದಲು, ನಾಳೆ ನಾವೆಲ್ಲಾ ಚಿತ್ರದುರ್ಗಕ್ಕೆ ಹೋಗ್ತೀವಿ, ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳುತ್ತೇವೆ ಎಂದರು. ಆ ಮೂಲಕ ಫಿಲಂ ಚೇಂಬರ್ ಮೃತನ ಕುಟುಂಬದ ಪರ ನಿಲ್ಲುತ್ತದೆ ಎಂದು ಸ್ಪಷ್ಟನೆ ನೀಡಿದರು. ನಂತರ ಪ್ರಕರಣದ ಬಗ್ಗೆ ಮಾತನಾಡಿದ ಎನ್ಎಂ ಸುರೇಶ್, ಇದು ಕೊಲೆಯಾಗಿದ್ದು ತುಂಬಾ ಸೂಕ್ಷ್ಮ ವಿಚಾರವಾಗಿದೆ. ಕಾನೂನಿನಡಿ ಪೊಲೀಸರು ತನಿಖೆ ಮಾಡ್ತಿದ್ದಾರೆ, ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. 2011ರಲ್ಲಿ ನಾವು ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿಯನ್ನ ಮಾತನಾಡಿಸಿ ಸರಿ ಮಾಡಿದ್ವಿ. ಆದರೆ ಆದರೆ ಈಗ ಹಾಗೆ ಆಗಲ್ಲ, ಇದಕ್ಕೆ ಕಾನೂನಿನ ತೊಡಕು ಇದೆ. ನಿರ್ಮಾಪಕರು ಕೋಟ್ಯಂತರ ರೂಪಾಯಿ ಹಣ ಹಾಕಿದ್ದಾರೆ, ಅವರ…