Author: admin

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಸಲಗ ಗೋಚರಿಸಿದೆ. ಕಳೆದ ರಾತ್ರಿ ಪ್ರಯಾಣಿಕರಿಂದ ತುಂಬಿ ತುಳುಕುತ್ತ ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್‌ ಗೆ ಏಕಾಏಕಿ ಅಡ್ಡ ಬಂದು ನಿಂತಿದೆ. ನಿದ್ರೆಯ ಮಂಪರಿನಲ್ಲಿದ್ದವರೆಲ್ಲಾ ಗಾಬರಿಯಿಂದ ಎದ್ದು ಕಾಡಾನೆ ನೋಡುತ್ತಾ ಭಯದಲ್ಲೇ ಕಾಲ ಕಳೆಯುವಂತಾಗಿತ್ತು, ಅಂದ ಹಾಗೆ ಇದು ಅದೇ ಒಂಟಿ ಸಲಗ ಚಾರ್ಮಾಡಿ ಘಾಟಿಯಲ್ಲಿ ಮತ್ತರ ಸರ್ಕಾರಿ ಬಸ್ಸಿಗೆ ಕಾಡಾನೆ ಅಡ್ಡ ಬಂದಿದೆ. ಸರ್ಕಾರಿ ಬಸ್ಸಿನ ಪಕ್ಕದಲ್ಲೇ ಕಾಡಾನೆ ಕಳೆದ ರಾತ್ರಿ ಓಡಾಡಿದೆ. ಕಾಡಾನೆ ಕಂಡು ಬಸ್ ನ ಒಳಗೆ ಇದ್ದ ಪ್ರಯಾಣಿಕರು ಗಾಬರಿಯಾಗಿದ್ದಾರೆ ಚಾರ್ಮಾಡಿ ಘಾಟಿಯ ೭ ಮತ್ತು ೮ನೇ ತಿರುವಿನಲ್ಲಿ ಘಟನೆ ನಡೆದಿದೆ ಸುಮಾರು ಅರ್ಧ ಗಂಟೆ ರಸ್ತೆಯಲ್ಲೇ ಒಂಟಿ ಸಲಗ ನಿಂತಲ್ಲೇ ನಿಂತಿದ್ದು ಆನೆಯನ್ನ ಕಂಡು ತಕ್ಷಣ ಬಸ್ ಅನ್ನು ಚಾಲಕ ನಿಲ್ಲಿಸಿದ್ದಾನೆ. ಆನೆ ಸಂಚಾರ ಹಿನ್ನೆಲೆಯಲ್ಲಿ ಘಾಟಿಯಲ್ಲಿ ಎರಡು ಕಿ.ಮೀ. ನಷ್ಟು ಟ್ರಾಫಿಕ್ ಜಾಮ್ ಉಂಟಾಗಿತ್ತು ಚಿಕ್ಕಮಗಳೂರು ಮಂಗಳೂರು ಎರಡೂ ಕಡೆಯಲ್ಲೂ ಟ್ರಾಫಿಕ್ ಜಾಮ್ ಆಗಿದ್ದು ಅರ್ಧ ಗಂಟೆ ಬಳಿಕ ಅರಣ್ಯಕ್ಕೆ…

Read More

ಭುವನೇಶ್ವರ: ಪುರಿಯ ಜಗನ್ನಾಥ ದೇವಾಲಯದ ಎಲ್ಲಾ ನಾಲ್ಕು ದ್ವಾರಗಳನ್ನು ಇಂದು ತೆರೆಯಲಾಗಿದೆ. ಚುನಾವಣೆಗೂ ಮುನ್ನ ಬಿಜೆಪಿ ಗೆದ್ದರೆ ದೇವಾಲಯದ ಎಲ್ಲಾ ದ್ವಾರಗಳನ್ನು ಭಕ್ತರಿಗಾಗಿ ತೆರೆಯುವುದಾಗಿ ಹೆಳಿತ್ತು. ಇದೀಗ ನೂತನವಾಗಿ ರಚನೆಯಾದ ಬಿಜೆಪಿ ಸರ್ಕಾರ ಚುನಾವಣೆಗೂ ಮುನ್ನ ನೀಡಿದ್ದ ಭರವಸೆಯನ್ನು ನೆರವೇರಿಸಿದೆ. ಬೆಳಗ್ಗೆ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ, ಪುರಿ ಸಂಸದ ಸಂಬಿತ್ ಪಾತ್ರ ಸೇರಿದಂತೆ ಬಿಜೆಪಿಯ ನಾಯಕರು ತೆರಳಿ ದೇವಾಲಯದ ದ್ವಾರಗಳನ್ನು ತೆರೆಯುವ ಮಹತ್ವದ ಕ್ಷಣದಲ್ಲಿ ಭಾಗಿಯಾಗಿದ್ದರು. ಮಾಂಝಿ ಅವರು ಬುಧವಾರದ ತಮ್ಮ ಮೊದಲ ಕ್ಯಾಬಿನೆಟ್ ಸಭೆಯಲ್ಲಿ, ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಮುಚ್ಚಲ್ಪಟ್ಟಿರುವ ಪವಿತ್ರ ದೇಗುಲದ ಎಲ್ಲಾ ದ್ವಾರಗಳನ್ನು ಭಕ್ತರಿಗಾಗಿ ಮತ್ತೆ ತೆರೆಯುವ ಪ್ರಸ್ತಾಪವನ್ನು ಅನುಮೋದಿಸಿದರು. ಅಲ್ಲದೇ 12ನೇ ಶತಮಾನದ ಈ ದೇಗುಲದ ಅಭಿವೃದ್ಧಿ ಹಾಗೂ ನಿರ್ವಹಣೆಗಾಗಿ 500 ಕೋಟಿ ರೂ. ಮೌಲ್ಯದ ಕಾರ್ಪಸ್ ನಿಧಿಯನ್ನು ಸ್ಥಾಪಿಸುವುದಾಗಿ ಕ್ಯಾಬಿನೆಟ್ ಘೋಷಿಸಿತು. ಪುರಿಯ ಜಗನ್ನಾಥ ದೇವಾಲಯದಲ್ಲಿ ನಾಲ್ಕು ದ್ವಾರಗಳಿವೆ. ಅವುಗಳೆಂದರೆ ಸಿಂಹದ್ವಾರ, ಅಶ್ವದ್ವಾರ, ವ್ಯಾಘ್ರದ್ವಾರ, ಮತ್ತು ಹಸ್ತಿದ್ವಾರ. ಈ ದ್ವಾರಗಳು ದೇವಾಲಯದ…

Read More

ಅತಿಯಾಗಿ ಪ್ರೀತಿಸ್ತಾನೆ, ಆದ್ರೆ ನನ್ನ ಜೊತೆ ಜಗಳವನ್ನೇ ಮಾಡಲ್ಲ ಎಂದು ಮಹಿಳೆಯೊಬ್ಬರು ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ವಿಚ್ಛೇದನ ಕೋರಿದ ಮಹಿಳೆಗೆ ತನ್ನ ಗಂಡ ತನ್ನೊಂದಿಗೆ ಬಹಳ ಮಾತಾಡಬೇಕು, ವಾದ ಮಾಡಬೇಕು, ಜಗಳವಾಡಬೇಕು ಎಂಬ ಆಸೆಯಿತ್ತಂತೆ. ಆದರೆ, ಆಕೆಯ ಗಂಡ ಆಕೆ ಏನೇ ಹೇಳಿದರೂ ಕೋಪಿಸಿಕೊಳ್ಳುತ್ತಿರಲಿಲ್ಲ. ಒಂದೇ ಒಂದು ದಿನವೂ ಆಕೆಯೊಂದಿಗೆ ಜಗಳವಾಡಲಿಲ್ಲ. ಇದರಿಂದ ಬೇಸತ್ತ ಆ ಮಹಿಳೆ ತನ್ನ ಗಂಡನ ಪ್ರೀತಿ ತನಗೆ ಉಸಿರುಗಟ್ಟಿಸುತ್ತಿದೆ ಎಂಬ ಕಾರಣಕ್ಕೆ ವಿಚ್ಛೇದನ ಕೋರಿದ್ದಾರೆ. ನನ್ನ ಗಂಡ ವಿಪರೀತ ಒಳ್ಳೆಯವನು. ಅವನೇ ನನಗಾಗಿ ಅಡುಗೆ ಮಾಡುತ್ತಾನೆ. ಮನೆಯ ಎಲ್ಲ ಕೆಲಸಗಳನ್ನು ಮಾಡಲು ಸಹಾಯ ಮಾಡುತ್ತಾನೆ. ನನಗೆ ಸ್ವಲ್ಪವೂ ತೊಂದರೆಯಾಗಲು ಬಿಡುವುದಿಲ್ಲ. ವಿಪರೀತ ಕಾಳಜಿ ವಹಿಸುತ್ತಾನೆ. ಇದೇ ನನಗೆ ಉಸಿರುಗಟ್ಟಿಸುತ್ತಿದೆ. ನಾವು ಬೇರೆ ದಂಪತಿಯಂತೆ ನಾರ್ಮಲ್ ಆಗಿಲ್ಲ ಎನಿಸುತ್ತಿದೆ. ನನ್ನ ಗಂಡ ಪ್ರತಿಯೊಂದು ವಿಚಾರದಲ್ಲೂ ನನ್ನೊಂದಿಗೆ ಕಾಂಪ್ರಮೈಸ್ ಆಗುವುದು ನನಗೆ ಇಷ್ಟವಾಗುವುದಿಲ್ಲ” ಎಂದು ಆ ಮಹಿಳೆ ಕೋರ್ಟ್ನಲ್ಲಿ ಹೇಳಿದ್ದಾರೆ. ನಾನು ತಪ್ಪು ಮಾಡಿದಾಗ ಅವನು ಯಾವಾಗಲೂ…

Read More

ನವದೆಹಲಿ: ನೀಟ್‌ ಯಜಿ ಪರೀಕ್ಷೆಯಲ್ಲಿ ಅಭ್ಯರ್ಥಿಗಳಿಗೆ ನೀಡಲಾಗಿದ್ದ ಗ್ರೇಸ್‌ ಅಂಕಗಳನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. 1563 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನು ತೆಗೆದುಕೊಳ್ಳಲು ಆಯ್ಕೆಯನ್ನು ನೀಡಲಾಗುತ್ತದೆ ಅಥವಾ ಗ್ರೇಸ್ ಅಂಕಗಳಿಲ್ಲದೆ ಪಡೆದ ಅಂಕಗಳ ಆಧಾರದ ಮೇಲೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಹೇಳಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ನೀಟ್‌ ಅನ್ಯಾಯ ಸೇರಿದಂತೆ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಎಲ್ಲಾ ಅರ್ಜಿಗಳನ್ನು ಜುಲೈ 8 ರಂದು ವಿಚಾರಣೆ ನಡೆಸಲಾಗುವುದು ಎಂದು ಕೋರ್ಟ್‌ ತಿಳಿಸಿದೆ. ಜೂನ್ 23 ರಂದು ಮರುಪರೀಕ್ಷೆ ನಡೆಯುವ ಸಾಧ್ಯತೆಯಿದ್ದು, ಜುಲೈ 1 ರ ಮೊದಲು ಫಲಿತಾಂಶ ಹೊರಬೀಳಲಿದೆ ಎಂದು ಕೇಂದ್ರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪ್ರಶ್ನೆಪತ್ರಿಕೆ ವಿಳಂಬಗೊಂಡು ಗ್ರೇಸ್‌ ಅಂಕ ಪಡೆದ ಅಭ್ಯರ್ಥಿಗಳಿಗೆ ಮಾತ್ರ ಮರು ಪರೀಕ್ಷೆಗೆ ಅವಕಾಶ ನೀಡಲಾಗುವುದು ಎಂದು ಕೋರ್ಟ್‌ ಸ್ಪಷ್ಟಪಡಿಸಿದೆ. ಗ್ರೇಸ್ ಮಾರ್ಕ್ ನೀಡಿರುವುದನ್ನು ಪ್ರಶ್ನಿಸಿ ಅರ್ಜಿಗಳು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಎನ್‌ಟಿಎ (NTA) ಮರುಪರಿಶೀಲನೆಗೆ ಸಮಿತಿಯೊಂದನ್ನು ರಚಿಸಿತ್ತು.…

Read More

ಇಲಾನ್ ಮಸ್ಕ್ ಅನ್ನುವ ಹೆಸರು ಎಲ್ಲರಿಗೂ ಗೊತ್ತಿದೆ. ವಿಶ್ವದ ಅತೀ ದೊಡ್ಡ ಶ್ರೀಮಂತ, ಪ್ರಚಂಡ ಬುದ್ಧಿವಂತಿಕೆ ಹೊಂದಿರುವ ವ್ಯಕ್ತಿ. ಅಷ್ಟೇ ವಿವಾದಗಳಿಗೂ ಕಾರಣನಾಗಿರುವ ವ್ಯಕ್ತಿ. ಇದೀಗ ಎಲಾನ್ ಮಸ್ಕ್ ಮತ್ತೊಂದು ದೊಡ್ಡ ಲೈಂಗಿಕ ಆರೋಪದ ಸುಳಿಗೆ ಸಿಲುಕಿದ್ದಾರೆ. ಇಲಾನ್ ಮಸ್ಕ್ ವಿರುದ್ಧ ಈ ಹಿಂದೆ ಸಾಕಷ್ಟು ಲೈಂಗಿಕ ದೌರ್ಜನ್ಯದ ಆರೋಪಗಳು ಕೇಳಿ ಬಂದಿದ್ದವು. ಇದೀಗ ಸ್ಪೇಸ್ ಎಕ್ಸ್ ಮಾಜಿ ಮಹಿಳಾ ಸಿಬ್ಬಂದಿ ಲೈಂಗಿಕ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿದ್ದಾರೆ. ಸ್ಪೇಸ್ ಎಕ್ಸ್ ಕಂಪನಿಯಲ್ಲಿ ಹುಡುಗಿಯರನ್ನು ಲೈಂಗಿಕ ವಸ್ತುಗಳಂತೆ ನೋಡಲಾಗುತ್ತಿದೆ ಎಂದು ಮಾಜಿ ಉದ್ಯೋಗಿಗಳು ಆರೋಪವನ್ನು ಮಾಡುತ್ತಿದ್ದಾರೆ. ಕಂಪನಿಯೊಳಗೆ ಎಲಾನ್ ಮಸ್ಕ್ ಮಹಿಳಾ ಉದ್ಯೋಗಿಗಳನ್ನು ಅತ್ಯಂತ ಕೆಟ್ಟದಾಗಿ ನಡೆಸಿಕೊಳ್ಳುತ್ತಾರೆ. ಇದರ ವಿರುದ್ಧ ಧ್ವನಿ ಎತ್ತಿದರೆ ಕೆಲಸದಿಂದ ತೆಗೆದು ಹಾಕುತ್ತಾರೆ. ಇದೀಗ ಮಹಿಳಾ ಉದ್ಯೋಗಿಗಳು ಸಿಡಿದೆದ್ದಿದ್ದಾರೆ. ಎಂಟು ಮಂದಿ ಮಾಜಿ ಉದ್ಯೋಗಿಗಳು ಮಸ್ಕ್ ವಿರುದ್ಧ ಕಾನೂನು ಮೊಕದ್ದಮೆ ಹೂಡುವುದಕ್ಕೆ ಸಿದ್ಧವಾಗಿದ್ದಾರೆ. ಕೆಲಸದ ಸ್ಥಳದಲ್ಲಿ ಇಲಾನ್ ಮಸ್ಕ್ ಅಶ್ಲೀಲವಾಗಿ ಮಾತನಾಡುತ್ತಾರೆ. ಹುಡುಗಿಯರನ್ನು ಅವರ ಬ್ರಾ ಸೈಜ್…

Read More

ಉತ್ತರ ಪ್ರದೇಶದ ಬಿಜ್ನೋರ್ ನಲ್ಲಿ ಮಗುವಿನ ಕತ್ತು ಸೀಳಿ ಒಲೆಯ ಮೇಲೆ ಸುಡಲು ಯತ್ನಿಸಿದ ಮಹಿಳೆಯನ್ನು ಅರೆಸ್ಟ್ ಮಾಡಲಾಗಿದೆ. ಮಹಿಳೆ ಮಾನಸಿಕ ಅಸ್ವಸ್ಥಳಾಗಿದ್ದಳು ಎಂಬುದು ತಿಳಿದುಬಂದಿದೆ. ಮೊದಲು ಮಗುವಿನ ಕತ್ತು ಸೀಳಿ ನಂತರ ಮೃತದೇಹವನ್ನು ಮನೆಯೊಳಗಿನ ಒಲೆಯ ಮೇಲೆ ಸುಡಲು ಪ್ರಯತ್ನಿಸಿದರು ಎಂದು ಮೂಲಗಳು ಹೇಳಿವೆ. ದೇವಿ ಅವರ ಪತಿ ಕಪಿಲ್ ಕುಮಾರ್ ಅವರು ಕೆಲಸದಿಂದ ಮನೆಗೆ ಹಿಂದಿರುಗಿದಾಗ ತಮ್ಮ ಮಗ ಸತ್ತಿರುವುದನ್ನು ಕಂಡಾಗ ನಿಜಾಂಶ ತಿಳಿದುಬಂದಿದೆ. ಆಘಾತಕ್ಕೊಳಗಾದ ಕುಮಾರ್ ತಕ್ಷಣ ಕುಟುಂಬ ಸದಸ್ಯರನ್ನು ಸಹಾಯಕ್ಕಾಗಿ ಕರೆದರು. ಕುಟುಂಬ ಸದಸ್ಯರು ಬಂದಾಗ, ದೇವಿ, ಸಲಿಕೆ ಹಿಡಿದು ಅವರನ್ನು ಮತ್ತು ಕುಮಾರ್ ಅವರನ್ನು ಮನೆಯಿಂದ ಓಡಿಸಿದರು. ಈ ಭೀಕರ ಘಟನೆಯ ಬಗ್ಗೆ ಕುಮಾರ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ರಾಮ್ ಅರ್ಜ್ ಮತ್ತು ಸರ್ಕಲ್ ಆಫೀಸರ್ ಚಂದ್‌ ಪುರ ಭರತ್ ಸೋಂಕರ್ ಆಗಮಿಸಿ ಪರಿಶೀಲಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ನಾವು ನೆಮ್ಮದಿಯಿಂದ ನಿದ್ದೆ ಮಾಡುವ ಜಾಗವೇ ನಮ್ಮ ಬೆಡ್ ರೂಂ. ಬೆಡ್ ರೂಂ ವಾಸ್ತು ಬಗ್ಗೆ ಗಮನವಿರಲಿ. ವಾಸ್ತು ದೋಷದಿಂದಾಗಿ ಬೆಡ್ ರೂಂನಲ್ಲಿ ನಕಾರಾತ್ಮಕ ಶಕ್ತಿ ನೆಲೆಸುತ್ತದೆ. ಸಂಗಾತಿ ನಡುವೆ ಆಗಾಗ ಜಗಳವಾಗುತ್ತದೆ. ಸುಖ-ಶಾಂತಿಗಾಗಿ ಬೆಡ್ ರೂಂ ವಾಸ್ತು ಬಗ್ಗೆ ಗಮನ ನೀಡುವುದು ಬಹಳ ಮುಖ್ಯ. ಮಲಗುವ ಕೋಣೆ ಪಶ್ಚಿಮ-ದಕ್ಷಿಣ ದಿಕ್ಕಿನಲ್ಲಿರುವಂತೆ ನೋಡಿಕೊಳ್ಳಿ.ಮಲಗುವ ಕೋಣೆಯನ್ನು ಈಶಾನ್ಯ ಮೂಲೆಯಲ್ಲಿ ಮಾಡೋದಕ್ಕೆ ಹೋಗಬೇಡಿ. ಏಕೆಂದರೆ ಇದು ಧನಾತ್ಮಕ ಶಕ್ತಿ ಹರಿದು ಬರೋದಕ್ಕೆ ಅಡ್ಡಿಪಡಿಸುತ್ತದೆ. ಬೆಡ್ ರೂಂನಲ್ಲಿ ಹಿಂಸಾತ್ಮಕ ಫೋಟೋಗಳನ್ನು ಹಾಕಬೇಡಿ. ಇದು ಜಗಳವನ್ನು ಹೆಚ್ಚು ಮಾಡುತ್ತದೆ. ಮಲಗುವ ಕೋಣೆಯ ಬಣ್ಣಗಳು ಶಾಂತಿಯುತ ವಾತಾವರಣವನ್ನು ಸೃಷ್ಟಿಸುವಂತಿರಬೇಕು. ಬಣ್ಣಗಳನ್ನು ನೋಡಿದ ತಕ್ಷಣ ಅದು ನಮ್ಮ ಕಣ್ಣಿಗೆ ಹೊಡೆಯುವಂತಿರಬಾರದು. ಇನ್ನೂ ಕೋಣೆಯ ತುಂಬಾ ಕನ್ನಡಿ ಇಡೋದಕ್ಕೆ ಹೋಗಬೇಡಿ. ಇದು ಕೂಡ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆಯಿದೆ. ನೀವು ಮಲಗುವ ಕೋಣೆಯಲ್ಲಿ ಕೆಲವೊಂದು ಸಸ್ಯಗಳು ಇದ್ದರೆ ತುಂಬಾನೇ ಒಳ್ಳೆಯದು. ಮಲಗುವ ಕೋಣೆಯಲ್ಲಿ ಅಪ್ಪಿತಪ್ಪಿಯೂ ಅಕ್ವೇರಿಯಂ ಇಡಬಾರದು. ಇದು ದಂಪತಿ ಆರೋಗ್ಯದಲ್ಲಿ…

Read More

ಕೇಂದ್ರ ಸರ್ಕಾರ ನೀಡುವ ಪಿಂಚಣಿಗೆ ಅರ್ಹರಾದ ವ್ಯಕ್ತಿಗಳು ತಮ್ಮ ಜೀವಿತ ಪ್ರಮಾಣ ಪತ್ರವನ್ನು ಸಲ್ಲಿಸಲು ಅಗತ್ಯವಿದ್ದಲ್ಲಿ ಬ್ಯಾಂಕ್ ಸಿಬ್ಬಂದಿಯನ್ನೇ ಮನೆಗೆ ಕರೆಸಿಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದ್ದು, ಈ ಕುರಿತು ಆದೇಶ ಹೊರಡಿಸಲಾಗಿದೆ. ಒಂದು ವೇಳೆ ಹಿರಿಯ ನಾಗರಿಕರು, ಅನಾರೋಗ್ಯದಿಂದ ಬಳಲುತ್ತಿದ್ದು, ಓಡಾಡಲು ಸಾಧ್ಯವಾಗದಿದ್ದಲ್ಲಿ ಅಂತಹವರಿಂದ ಜೀವಿತ ಪ್ರಮಾಣ ಪತ್ರವನ್ನು ಪಡೆಯಲು ಬ್ಯಾಂಕುಗಳು ತಮ್ಮ ಅಧಿಕಾರಿಗಳನ್ನು ಮನೆಗೆ ಕಳುಹಿಸಿಕೊಡಬಹುದು. ಇಲ್ಲವಾದಲ್ಲಿ ಡಿಜಿಟಲ್ ಮೂಲಕ ಪಿಂಚಣಿದಾರರು ತಮ್ಮ ಮುಖ ಚಹರೆ ಬಳಸಿ ಜೀವಿತ ಪ್ರಮಾಣ ಪತ್ರ ಸಲ್ಲಿಸಬಹುದು ಎಂದು ಹೇಳಲಾಗಿದೆ. ಮಾಸಿಕ ಪಿಂಚಣಿ ಪಡೆಯಲು ಬ್ಯಾಂಕ್, ಪೋಸ್ಟ್ ಆಫೀಸ್ ಅಥವಾ ಪಿಂಚಣಿ ವಿತರಣಾ ಪ್ರಾಧಿಕಾರಗಳಿಗೆ (ಪಿಡಿಎ) ಜೀವ ಪ್ರಮಾಣಪತ್ರವನ್ನು ಸಲ್ಲಿಸಬೇಕು. ಆದರೆ ಈಗ ಪಿಂಚಣಿದಾರರು ಕಚೇರಿಗಳಿಗೆ ಹೋಗದೆ ಡಿಜಿಟಲ್ ಲೈಫ್ ಪ್ರಮಾಣಪತ್ರವನ್ನು ಆನ್‌ಲೈನ್‌ನಲ್ಲಿ ಸಲ್ಲಿಸಬಹುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ (Animal Husbandry & Veterinary Services Karnataka) ಖಾಲಿ ಇರುವ ಬರೋಬ್ಬರಿ 400 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ (AHVS Karnataka Recruitment 2024). ಪಶು ವೈದ್ಯಾಧಿಕಾರಿ ಹುದ್ದೆ ಇದಾಗಿದ್ದು, ಗುತ್ತಿಗೆ ಆಧಾರದಲ್ಲಿ ನೇಮಿಸಲಾಗುತ್ತದೆ. ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು. ಒಟ್ಟು 400 ಹುದ್ದೆಗಳಿದ್ದು, ಈ ಪೈಕಿ ಕಲ್ಯಾಣ ಕರ್ನಾಟಕಕ್ಕೆ 14 ಪೋಸ್ಟ್‌ ಮೀಸಲಿಡಲಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ 52,640 ರೂ. ಮಾಸಿಕ ವೇತನ ದೊರೆಯಲಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅಂಗೀಕೃತ ಪಶುವೈದ್ಯಕೀಯ ವಿಜ್ಞಾನ ವಿಶ್ವ ವಿದ್ಯಾನಿಲಯ ಅಥವಾ ಕೃಷಿ ವಿಶ್ವ ವಿದ್ಯಾನಿಲಯದಿಂದ ಬಿ.ವಿ.ಎಸ್‌.ಸಿ. / ಬಿ.ವಿ.ಎಸ್‌.ಸಿ ಆಯಂಡ್‌ ಎಎಚ್‌ ಪದವಿ ಪಡೆದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ರಿಯಾಯಿತಿ ಲಭ್ಯ. ಪ್ರವರ್ಗ 2 ಎ, 2 ಬಿ, ಪ್ರವರ್ಗ 3 ಎ…

Read More

ಭಾರತೀಯ ರೈಲ್ವೆಯು ಎರಡು ಹೊಸ ವಂದೇ ಭಾರತ್‌ ರೈಲುಗಳನ್ನು ಓಡಿಸಲು ಸಿದ್ಧತೆ ಮಾಡಿಕೊಂಡಿದೆ. ಈ ಎರಡು ರೈಲು ಮಾರ್ಗಗಳು ಜನರಿಗೆ ಅನುಕೂಲ ಆಗುತ್ತದೆ ಎಂದು ಭಾವಿಸಲಾಗಿದೆ. ಇತ್ತೀಚೆಗೆ, ಎರಡು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳನ್ನು ಉತ್ತರ ರೈಲ್ವೆ ಮೊರಾದಾಬಾದ್ ವಿಭಾಗದ ವಿಭಾಗಕ್ಕೆ ಸೇರಿಸಲಾಗುತ್ತಿದೆ ಎನ್ನಲಾಗಿದೆ. ಒಂದು ಡೆಹ್ರಾಡೂನ್‌ನಿಂದ ದೆಹಲಿಗೆ ಪ್ರಯಾಣವನ್ನು ಸುಲಭಗೊಳಿಸುತ್ತದೆ. ಇನ್ನೊಂದು ಡೆಹ್ರಾಡೂನ್ ಮತ್ತು ಲಕ್ನೋ ನಡುವಿನ ಪ್ರಯಾಣಿಕರಿಗೆ ಬರೇಲಿಯ ಮೂಲಕ ಚಲಿಸುತ್ತದೆ. ಇದಲ್ಲದೆ, ಈಶಾನ್ಯ ರೈಲ್ವೆ ಇಜ್ಜತ್‌ ನಗರ ವಿಭಾಗವು ವಂದೇ ಭಾರತ್ ಎಕ್ಸ್‌’ಪ್ರೆಸ್ ಸೇವೆಯನ್ನು ಸೇರಿಸುವತ್ತ ಗಮನಹರಿಸುತ್ತಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ಸೇವೆಗಳನ್ನು ಲಕ್ನೋ–ದೆಹಲಿ, ರಾಮನಗರ–ಆಗ್ರಾ, ಕತ್ಗೊಡಮ್–ದೆಹಲಿ, ಮತ್ತು ತನಕ್‌ ಪುರ–ಲಖನೌಗಳಂತಹ ಬಹುಸಂಖ್ಯೆಯ ಮಾರ್ಗಗಳಲ್ಲಿ ಸಂಚರಿಸುವ ಯೋಜನೆಗಳು ಚುನಾವಣಾ ಅವಧಿಗೆ ಮುಂಚೆಯೇ ಚರ್ಚೆಯಲ್ಲಿವೆ. ಭಾರತೀಯ ರೈಲ್ವೇಯು ಲಕ್ನೋ-ದೆಹಲಿ, ಕತ್ಗೊಡಮ್-ದೆಹಲಿ, ತನಕ್‌’ಪುರದಿಂದ ಪಿಲಿಭಿತ್, ಷಹಜಹಾನ್‌’ಪುರ ಮತ್ತು ಸೀತಾಪುರ್ ಮೂಲಕ ಲಕ್ನೋವರೆಗೆ ಮತ್ತು ಇನ್ನೊಂದು ರಾಮನಗರದಿಂದ ಆಗ್ರಾವರೆಗಿನ ಮಾರ್ಗದ ನೀಲನಕ್ಷೆಗಳನ್ನು ಮ್ಯಾಪ್ ಮಾಡಿದೆ. ಈ ಹೊಸದಾಗಿ ಯೋಜಿಸಲಾದ ವಂದೇ…

Read More