Author: admin

ಬೆಂಗಳೂರಿನ ನೇರಳೆ ಮಾರ್ಗದ ಮೆಟ್ರೋ ಮಾರ್ಗದಲ್ಲಿ ವ್ಯತ್ಯಯ ಕಂಡು ಬಂದಿದೆ. ಇಂದು ಬೆಳಗ್ಗೆ 9:58 ಗಂಟೆ ಸುಮಾರಿಗೆ ಮೆಟ್ರೋ ಹತ್ತಿದ್ದ ಪ್ರಯಾಣಿಕರು ಇನ್ನೇನು ಇಳಿಯಬೇಕು ಎಂದು ಕಾದು ನಿಂತಿದ್ದು ಡೋರ್ ಓಪನ್ ಆಗದೆ ಬೋಗಿ ಒಳಗಡೆ ಲಾಕ್ ಆಗಿದ್ದರು. ಮುಂಜಾನೆ 9:58ರಲ್ಲಿ ವ್ಯತ್ಯಯವುಂಟಾಗಿದ್ದ ನೇರಳೆ ಮಾರ್ಗದ ಮೆಟ್ರೋ ಸಂಚಾರ ಬೆಳಗ್ಗೆ 11:30 ರ ವೇಳೆಗೆ ಸಹಜ ಸ್ಥಿತಿಗೆ ಮರಳಿದೆ. ಬೆಳಗ್ಗೆ ಕೆಲಸಕ್ಕೆ ತರಳುವ ವೇಳೆ ಟ್ರಿನಿಟಿ ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ಅಡಚಣೆ ಉಂಟಾದ ಕಾರಣ ಕಚೇರಿಗಳಿಗೆ ತಲುಪಲು ಜನಸಾಮಾನ್ಯರಿಗೆ ಸಮಸ್ಯೆ ಉಂಟಾಗಿತ್ತು. ಈಗ ಮೆಟ್ರೋ ಸೇವೆ ಎಂದಿನಂತೆ ಸಹಜ ಸ್ಥಿತಿಗೆ ಬಂದಿದೆ. ಆದರೂ ಜನರಲ್ಲಿ ಕೊಂಚ ಭಯ ಉಂಟಾಗಿದೆ. ಇವತ್ತು ಸಂಭವಿಸಿದ ಸಮಸ್ಯೆಯಿಂದಾಗಿ ಪ್ರಯಾಣಿಕರು ಒಂದು ಗಂಟೆಗಳ ಕಾಲ ಮೆಟ್ರೋ ರೈಲಿನ ಒಳಗಡೆಯೇ ಲಾಕ್ ಆಗುವಂತಾಗಿತ್ತು. ಮೆಟ್ರೋ ನಿಲ್ದಾಣದಲ್ಲಿ ತಾಂತ್ರಿಕ ದೋಷದಿಂದ ಬೋಗಿಯ ಡೋರ್ ​ಗಳು ಓಪನ್ ಆಗದೆ ಲಾಕ್ ಆಗಿದ್ದವು. ಗಂಟೆಗಟ್ಟಲೆ ಕಾದರೂ ಡೋರ್ ಓಪನ್ ಆಗದೆ ಒಳಗಡೆ ಇದ್ದ…

Read More

ಬೆಂಗಳೂರು: ಪತ್ನಿ ನಾಗರತ್ನ ವಿರುದ್ಧ ವಿಚ್ಛೇದನಾ ಕೋರಿ ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಕೌಟುಂಬಿಕ ನ್ಯಾಯಾಲಯ ವಜಾಗೊಳಿಸಿದೆ. ನಟ ದುನಿಯಾ ವಿಜಯ್ ಕ್ರೌರ್ಯದ ಆಧಾರದಲ್ಲಿ 2018ರಲ್ಲಿ ಪತ್ನಿ ನಾಗರತ್ನರಿಂದ ವಿಚ್ಛೇದನ ಕೋರಿ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಿದ್ದರು. ಆದರೇ ಆರೋಪ ಸಾಭೀತು ಪಡಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ನಟ ದುನಿಯಾ ವಿಜಯ್ ಸಲ್ಲಿಸಿದ್ದ ವಿಚ್ಛೇಧನ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬಳ್ಳಾರಿಯ ಸಿರುಗುಪ್ಪ ತಾಲೂಕಿನ ನಡವಿ ಗ್ರಾಮದ ತುಂಗಭದ್ರಾ ನದಿಯಲ್ಲಿ ಮೊಸಳೆ ದಾಳಿ ನಡೆಸಿದ್ದು, ನದಿ ದಡದಲ್ಲಿ ಮೇಯುತ್ತಿದ್ದ ಆಕಳನ್ನ ಮೊಸಳೆಗಳು ಎಳೆದೊಯ್ದಿವೆ. ಮೊಸಳೆ ದಾಳಿಗೆ ಬಲಿಯಾದ ಆಕಳು, ಕಂಪ್ಲಿ ಗಾದಿಲಿಂಗಪ್ಪ ಎನ್ನುವವರಿಗೆ ಸೇರಿದ್ದಾಗಿವೆ. ನೋಡ ನೋಡುತ್ತಿದ್ದಂತೆ ನಾಲ್ಕು ಮೊಸಳೆಗಳು ಆಕಳನ್ನ ಹಿಡಿದು ನದಿ ಒಡಲಿಗೆ ಎಳೆದೊಯ್ದಿದ್ದು, ನದಿ ಮಧ್ಯೆ ಹೋಗಿ ಮೊಸಳೆಗಳು ಆಕಳನ್ನ ತಿಂದಿವೆ ಎನ್ನಲಾಗಿದೆ. ಪದೇ ಪದೇ ಮೊಸಳೆ ದಾಳಿಗೆ ಜಾನುವಾರುಗಳು ಬಲಿಯಾಗುತ್ತಿರೋದಕ್ಕೆ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದ್ದು, ನಿರ್ಲಕ್ಷ್ಯ ಮಾಡುತ್ತಿರುವ ಜಿಲ್ಲಾಡಳಿತ ಹಾಗೂ ಜನಪ್ರತಿನಿದಿಗಳ ವಿರುದ್ದ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More

ಮಲಗಿದ ಕೂಡ್ಲೇ ಕೆಲವರಿಗೆ ಗೊರಕೆ ಹೊಡೆಯುವ ಅಭ್ಯಾಸವಿರುತ್ತದೆ. ಆದರೆ ಅವರ ಪಕ್ಕದಲ್ಲಿ ಮಲಗಿದವರ ಕಷ್ಟವನ್ನು ಹೇಳಲು ಅಸಾಧ್ಯ. ಇದರಿಂದಾಗಿ ಎಷ್ಟೋ ಬಾರಿ ಪಕ್ಕದಲ್ಲಿ ಮಲಗಿದವರು ಕಿರಿಕಿರಿಯನ್ನು ಅನುಭವಿಸುತ್ತಾರೆ. ಈ ಮನೆ ಮದ್ದನ್ನು ಸೇವಿಸಿದರೆ ಈ ಸಮಸ್ಯೆಯಿಂದ ಮುಕ್ತಿ ಹೊಂದಬಹುದು. ಗೊರಕೆ ಸಮಸ್ಯೆ ನಿವಾರಣೆಗೆ ಸರಳ ಮನೆಮದ್ದುಗಳು: ಉಗುರು ಬೆಚ್ಚನೆಯಾಗಿರುವ ಬೆಣ್ಣೆ ಅಥವಾ ಬ್ರಾಹ್ಮಿ ಆಯಿಲ್‌ನನ್ನು ಬೆಳಗ್ಗೆ ಹಾಗೂ ರಾತ್ರಿ ಮಲಗುವ ಮುನ್ನ ಮೂಗಿಗೆ 2 ಡ್ರಾಪ್‌ ಬಿಡುವುದರಿಂದಲೂ ಗೊರಕೆ ಸಮಸ್ಯೆ ಪರಿಹರಿಸಿಕೊಳ್ಳಬಹುದು. ಬಿಸಿ ನೀರಿಗೆ ಅರ್ಧ ಚಮಚದಷ್ಟು ಏಲಕ್ಕಿ ಹುಡಿಯನ್ನು ಹಾಕಿ ಮಿಕ್ಸ್‌ ಮಾಡಿ. ಪ್ರತಿ ನಿತ್ಯ ಮಲಗುವ ಮುನ್ನ ಸೇವಿಸಿದರೆ ಗೊರಕೆ ಸಮಸ್ಯೆಗೆ ನಿವಾರಣೆ ಸಾಧ್ಯ. ಪ್ರತಿನಿತ್ಯ ರಾತ್ರಿ ಮಲಗುವ ಮುನ್ನ ಬಿಸಿ -ಬಸಿಯಾದ  ನೀರನ್ನು ಸೇವನೆ ಮಾಡುವುದರಿಂದ  ಸಾಮಾನ್ಯ ಶೀತದಿಂದ ಗಂಟಲಿನಲ್ಲಿ ಸಂಗ್ರಹವಾಗಿರುವ ಲೋಳೆಯಂತಹ ಅಂಶ ಕರಗುತ್ತದೆ. ಇದರಿಂದ ಗೊರಕೆ ಸಮಸ್ಯೆಯಿಂದ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

2019ರ ಏಪ್ರಿಲ್ 1ನೇ ತಾರೀಖಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ ‌ಗಳ(ಎಚ್‌ಎಸ್‌ಆರ್‌ ಪಿ) ಅಳವಡಿಸಲು ಕೊನೆಯ ದಿನಾಂಕವನ್ನು ಜುಲೈ 4ರವರೆಗೆ ವಿಸ್ತರಣೆ ಮಾಡಲಾಗಿದೆ. ವಾಹನ ಸವಾರರಿಗೆ ಎಚ್‌ಎಸ್‌ಆರ್‌ ಪಿ ಅಳವಡಿಸಿಕೊಳ್ಳಲು ಮತ್ತಷ್ಟು ದಿನ ಅವಕಾಶ ಸಿಕ್ಕಂತಾಗಿದೆ. ಹೆಚ್‌ಎಸ್‌ಆರ್‌ ಪಿ ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಂತೆ ಈ ಮೊದಲು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಜುಲೈ 4ರ ತನಕ ವಿಸ್ತರಣೆ ಮಾಡಿದೆ. ಅರ್ಜಿ ಸಲ್ಲಿಸುವ ವಿಧಾನ: https://transport.karnataka.gov.in ಅಥವಾ www.siam.in ಜಾಲತಾಣಕ್ಕೆ ಭೇಟಿ ನೀಡಿ ಎಚ್‌ಎಸ್‌ಆರ್‌ ಪಿ ಪಡೆಯಲು ಅರ್ಜಿ ಸಲ್ಲಿಸಬಹುದು. ಮೊದಲು Book HSRP ಕ್ಲಿಕ್ ಮಾಡಿ. ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ. ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ. ನಂಬರ್ ಪ್ಲೇಟ್ ಬದಲಾಯಿಸಲು ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ. ಶುಲ್ಕವನ್ನು ಆನ್‌ ಲೈನ್‌ ನಲ್ಲಿ ಪಾವತಿಸಿ. (ನಗದು ರೂಪದಲ್ಲಿ ಪಾವತಿ ಮಾಡಲು ಅವಕಾಶ ಇಲ್ಲ). ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ…

Read More

ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಎನ್. ಚಂದ್ರಬಾಬು ನಾಯ್ಡು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲೇ ತಮಿಳಿಸೈ ವಿರುದ್ಧ ಅಮಿತ್‌ ಶಾ ಅಸಮಾಧಾನ ವ್ಯಕ್ತಪಡಿಸಿರುವ ಘಟನೆಯ ದೃಶ್ಯಾವಳಿಯು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಈ ಕುರಿತು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅನುಷಾ ರವಿ ಸೂದ್ ಎಂಬ ಬಳಕೆದಾರರೊಬ್ಬರು, ಅಮಿತ್ ಶಾ ಹಾಗೂ ತಮಿಳಿಸೈ ನಡುವೆ ಮಾತಿನ ಚಕಮಕಿ ನಡೆಯಲು ತಮಿಳುನಾಡಿನಲ್ಲಿ ಬಿಜೆಪಿಗೆ ಆಗಿರುವ ಹಿನ್ನಡೆ ಕಾರಣ. ಫಲಿತಾಂಶದ ನಂತರ, ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ ಎಂದು ಬರೆದುಕೊಂಡಿದ್ದಾರೆ. ಅವರ ಈ ವ್ಯಾಖ್ಯಾನವು ಹಲವರ ಗಮನ ಸೆಳೆದಿದೆ. ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಒಂದೂ ಸ್ಥಾನ ಗಳಿಸದ ಬಿಜೆಪಿ ಹೀನಾಯ ಸೋಲು ಅನುಭವಿಸಿತ್ತು. ತಮಿಳುನಾಡಿನಲ್ಲಿರುವ ಎಲ್ಲ 39 ಸ್ಥಾನಗಳನ್ನು ಆಡಳಿತಾರೂಢ ಡಿಎಂಕೆ ನೇತೃತ್ವದ ಇಂಡಿಯಾ ಮೈತ್ರಿಕೂಟ ಬಾಚಿಕೊಂಡಿತ್ತು. ಇದರ ಬೆನ್ನಿಗೇ ಬಿಜೆಪಿಯ ರಾಜ್ಯಾಧ್ಯಕ್ಷರಾದ ಕೆ.ಅಣ್ಣಾಮಲೈ ವಿರುದ್ಧ ಪಕ್ಷದೊಳಗೆ ಭಿನ್ನಮತ ಸ್ಫೋಟಗೊಂಡಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ಫಲಿತಾಂಶದಲ್ಲಿ ಭಾರಿ ಆಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕದಲ್ಲಿ ಮೂಡಿರುವ ಆತಂಕಕ್ಕೆ ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಎನ್‌ಟಿಎ ಆಗಲಿ, ಕೇಂದ್ರದ ನರೆಂದ್ರ ಮೋದಿ ಯವರ ಸರ್ಕಾರದವಾಗಲಿ ಉತ್ತರಿಸದೆ ಲಕ್ಷಾಂತರ ಯುವಜನರ ಭವಿಷ್ಯವನ್ನು ಮಣ್ಣುಪಾಲು ಮಾಡಲು ಹೊರಟಿದೆ ಎಂದು ದತ್ತಾತ್ರಿ ಬಾಪೋರೆ ಯುವ ಕಾಂಗ್ರೆಸ್ ತಾಲೂಕ ಅಧ್ಯಕ್ಷರು ಔರಾದ ಆರೋಪಿಸಿದ್ದಾರೆ. ನೀಟ್ ಪರೀಕ್ಷೆಯಲ್ಲಿ 67 ಅಭ್ಯರ್ಥಿ ಗಳಿಗೆ 720ಕ್ಕೆ 720 ಅಂಕಗಳು ಬಂದಿವೆ. ಅಂದರೆ ಶೇ.100 ಅಂಕ ಬಂದಿದೆ. ಆದರೆ ಈ ಹಿಂದೆ ಬಂದ ಟಾಪರ್‌ ಗಳ ಸಂಖ್ಯೆ ಎಷ್ಟು? ಎಂಬುದನ್ನು ಹೋಲಿಕೆ ಮಾಡಿ ನೋಡಿದರೆ, ಈ ಬಾರಿಯ ಫಲಿತಾಂಶದಲ್ಲಿ ಅಕ್ರಮದ ವಾಸನೆ ಬಡಿಯುತ್ತದೆ. 2019ರಲ್ಲಿ ಒಬ್ಬ ವಿದ್ಯಾರ್ಥಿ, 2020ರಲ್ಲಿ ಒಬ್ಬ, 2021ರಲ್ಲಿ ಮೂವರು. 2022ರಲ್ಲಿ ಒಬ್ಬ, 2023ರಲ್ಲಿ ಇಬ್ಬರು ವಿದ್ಯಾರ್ಥಿಗಳು ನೂರಕ್ಕೆ ನೂರು ಪ್ರತಿಶತ ಅಂಕ ಪಡೆದಿದ್ದರೆ ಈ ವರ್ಷ 67 ವಿದ್ಯಾರ್ಥಿಗಳು ಟಾರ್ಪಗಳಾಗಿ ಹೊರಹೊಮ್ಮಿದ್ದಾರೆ. ನೀಟ್ ಪರೀಕ್ಷೆಯಲ್ಲಿ…

Read More

ಕರ್ನಾಟಕ ಮೂಲದ ಟೆಕ್ ಕಂಪೆನಿಗಳನ್ನು ಜಾಗತಿಕ ವಾಣಿಜ್ಯೀಕರಣ ಮತ್ತು ಅಂತರ್‍ ರಾಷ್ಟ್ರೀಯ ಮಾರುಕಟ್ಟೆಗಳಿಗೆ ವಿಸ್ತರಿಸುವ ಗುರಿಯನ್ನು ಹೊಂದಿರುವ 2024ರ ‘ಹೈಪರ್ ಗ್ರೋತ್ ಗ್ಲೋಬಲ್ ಕರ್ನಾಟಕ’ ಜಾಗತಿಕ ಲೇಟ್-ಸ್ಟೇಜ್ ಸ್ಕೇಲಿಂಗ್ ಕಾರ್ಯಕ್ರಮವನ್ನು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಲಂಡನ್ ಟೆಕ್ ವೀಕ್ ‍ನಲ್ಲಿ ಘೋಷಿಸಿದರು. ಸ್ಟಾರ್ಟ್ ‍ಅಪ್ ಜೀನೋಮ್ ಮತ್ತು ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ನಡುವಿನ ಉಪಕ್ರಮವಾಗಿ ಈ ಕಾರ್ಯಕ್ರಮವನ್ನು ಲಂಡನ್ ಟೆಕ್ ವೀಕ್ ಶೃಂಗಸಭೆಯಲ್ಲಿ ಪ್ರಾರಂಭಿಸಲಾಯಿತು. ಈ ಕಾರ್ಯಕ್ರಮವು ದೃಢವಾದ ಕರ್ನಾಟಕ ಸ್ಟಾರ್ಟ್‍ ಅಪ್ ಸಮುದಾಯಕ್ಕೆ ಹೊಸ ಸೇರ್ಪಡೆಯಾಗಲಿದೆ, ಇದನ್ನು ಜಾಗತಿಕ ನವೋದ್ಯಮ ಎಕೊಸಿಸ್ಟಮ್ ವರದಿಯಲ್ಲಿ ಪ್ರಮುಖವಾಗಿ ನಮೂದಿಸಲಾಗಿದೆ. ಇದು ಸ್ಟಾರ್ಟ್‍ ಅಪ್ ಪರಿಸರ ವ್ಯವಸ್ಥೆಗಳಲ್ಲಿ ವಿಶ್ವದ ಅತ್ಯಂತ ಗುಣಮಟ್ಟದ-ನಿಯಂತ್ರಿತ ಡೇಟಾಸೆಟ್‍ನಿಂದ ಪಡೆದ ಪ್ರಕಟಣೆಯಾಗಿದೆ. ವರದಿಯು 300ಕ್ಕೂ ಅಧಿಕ ಉದ್ಯಮಶೀಲತಾ ನಾವೀನ್ಯತೆ ಪರಿಸರ ವ್ಯವಸ್ಥೆಗಳಾದ್ಯಂತ 4.5 ಮಿಲಿಯನ್ ಕಂಪೆನಿಗಳಿಂದ ಡೇಟಾವನ್ನು ವಿಶ್ಲೇಷಿಸುತ್ತದೆ ಮತ್ತು ಶ್ರೇಯಾಂಕಗಳನ್ನು ಒದಗಿಸಲು ಮತ್ತು ಪ್ರಪಂಚದಾದ್ಯಂತದ ಆರಂಭಿಕ ಪ್ರವೃತ್ತಿಗಳ ಬಗ್ಗೆ ಆಳವಾದ ಜ್ಞಾನವನ್ನು ನೀಡುತ್ತದೆ. ವರದಿಯಲ್ಲಿ, ಗ್ಲೋಬಲ್…

Read More

ಯುವಕನ ಹತ್ಯೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ನಟ ದರ್ಶನ್ ಪ್ರಕರಣದಲ್ಲಿ ರಾಜ್ಯ ಸರಕಾರ ಮಧ್ಯಪ್ರವೇಶ ಮಾಡುವ ಪ್ರಶ್ನೆಯೇ ಇಲ್ಲ. ಪೊಲೀಸರು ಕಾನೂನು ರೀತಿಯ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ್ಶನ್ ಪ್ರಕರಣದಿಂದ ಬಚಾವ್ ಆಗಲು ಪ್ರಭಾವಿ ರಾಜಕಾರಣಿಯಿಂದ ಪ್ರಯತ್ನ ಮಾಡಿದ್ದರು ಎನ್ನುವ ಮಾತುಗಳು ಕೇಳಿಬಂದಿವೆ. ಆದರೆ, ನನಗೆ ಗೊತ್ತಿರುವಂತೆ ಯಾರು ಸಹ ಪ್ರಯತ್ನ ಮಾಡಿಲ್ಲ. ಕಾನೂನಿನಲ್ಲಿ ಏನೆಲ್ಲ ಕ್ರಮ ತೆಗೆದುಕೊಳ್ಳಲು ಅವಕಾಶವಿದೆ ಅದನ್ನು ಪೊಲೀಸರು ಮಾಡುತ್ತಾರೆ. ಇದರಲ್ಲಿ ಸರಕಾರದಿಂದ ನಾವ್ಯಾರು ಮಧ್ಯ ಪ್ರವೇಶಿಸುವುದಿಲ್ಲ. ಮುಕ್ತವಾಗಿ ತನಿಖೆ ನಡೆಸಲು ಪೊಲೀಸರಿಗೆ ಅವಕಾಶವಿದೆ ಎಂದು ತಿಳಿಸಿದರು. ಕೊಲೆಯಾದ ರೇಣುಕಾಸ್ವಾಮಿ ಕುಟುಂಬ ವರ್ಗದ ಕುರಿತು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸುತ್ತೇನೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ಪ್ರಕರಣದಲ್ಲಿ ಭಾಗಿಯಾಗಿದ್ದ 13 ಜನರನ್ನು ಈಗಾಗಲೇ ಬಂಧಿಸಲಾಗಿದೆ. ಪ್ರಕರಣದ ತನಿಖೆಯನ್ನು ಬೇರೆ ಏಜೆನ್ಸಿಗೆ ಕೊಡುವ ಅಗತ್ಯವಿಲ್ಲ. ತನಿಖೆ ಪೂರ್ಣವಾದ ಬಳಿಕ ಎಲ್ಲ ಮಾಹಿತಿ ಗೊತ್ತಾಗುತ್ತದೆ. ಅಲ್ಲಿಯವರೆಗೆ ಈ ಬಗ್ಗೆ ಅಧಿಕಾರಿಗಳನ್ನು…

Read More

ಸುಮಾರು ೯ ಲಕ್ಷ ರೂ. ಮೌಲ್ಯದ ೮೦ ಡ್ರಿಪ್‌ ಪೈಪ್ ‌ಗಳ ಬಂಡಲ್ ಗಳನ್ನು ಕಳವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಅಜ್ಜಂಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಳೆದ ಜೂ.೫ರಂದು ಅಜ್ಜಂಪುರ ತಾಲೂಕಿನ ಗಡೀಹಳ್ಳಿ ಮುಗಳಿ ಬಳಿಯ ಓಪನ್ ವೇರ್ ಹೌಸ್ ನೇಟಾಫಿಮ್ ನಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು ೮೦ ಡ್ರಿಪ್ ಪೈಪ್ ಗಳ ಬಂಡಲ್ ಗಳು ಕಳವಾಗಿತ್ತು. ಈ ಸಂಬಂಧ ಅಂಗಡಿ ಮಾಲಕ ಅಜ್ಜಂಪುರ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಖಚಿತ ಮಾಹಿತಿ ಮೇರೆಗೆ ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ಗೇಟ್ ಬಳಿ ವಾಹನವೊಂದನ್ನು ಪರಿಶೀಲಿಸಿದಾಗ ಕಳವಾಗಿದ್ದ ೮೦ ಡ್ರಿಪ್ ಪೈಪ್ ಗಳ ಬಂಡಲ್ ಗಳು ಪತ್ತೆಯಾಗಿವೆ. ಪ್ರಕರಣಕ್ಕೆ ಸಂಬಂಧಿಸಿ ಮುಗಳಿ ಗ್ರಾಮದವರೇ ಆದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮುಗಳಿ ಗ್ರಾಮದ ಅಜ್ಜಂಪುರ ನಿವಾಸಿಗಳಾದ ಶರತ್ ಎಂ.ಎನ್., ಸಾಗರ್ ಎಂ.ಕೆ., ಯಶವಂತ್, ಯತಿರಾಜು ಮತ್ತು ವೆಂಕಟೇಶ ಬಂಧಿತ ಆರೋಪಿಗಳು. ಆರೋಪಿಗಳಿಂದ ೮೦ ಡ್ರಿಪ್ ಪೈಪ್ ಬಂಡಲ್ ಗಳು,…

Read More