Subscribe to Updates
Get the latest creative news from FooBar about art, design and business.
- ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
- ತಿಪಟೂರು: ಜೂನ್ 1ರಿಂದ ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
- ತುಮಕೂರು: ವಾಟರ್ ಟ್ಯಾಂಕ್ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು, ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
- ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
- ತುರುವೇಕೆರೆ: ಜೂ. 4ರಂದು ಉಚಿತ ಯೋಗ, ಪ್ರಾಣಾಯಾಮ ತರಗತಿಗಳ ಉದ್ಘಾಟನೆ
- ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
- ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ
Author: admin
ಹಾಸ್ಯ ನಟ ಪೃಥ್ವಿರಾಜ್ ವಿರುದ್ಧ ವಿಜಯವಾಡದ ಕೌಟುಂಬಿಕ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದೆ. ವಿಜಯವಾಡದ ಶ್ರೀಲಕ್ಷ್ಮಿ 1984 ರಲ್ಲಿ ನಟ ಪೃಥ್ವಿರಾಜ್ ಅವರನ್ನು ವಿವಾಹವಾಗಿದ್ದರು. ಇಬ್ಬರಿಗೂ ಒಬ್ಬ ಮಗ ಮತ್ತು ಮಗಳು ಇದ್ದಾರೆ. ಪೃಥ್ವಿರಾಜ್ ತಮ್ಮ ಪತ್ನಿಯ ನಡುವಿನ ಘರ್ಷಣೆಯಿಂದ ಬೇರ್ಪಟ್ಟಿದ್ದಾರೆ. ಶ್ರೀಲಕ್ಷ್ಮಿ ತನ್ನ ಇಬ್ಬರು ಮಕ್ಕಳೊಂದಿಗೆ ಹುಟ್ಟಿದ ಮನೆಯಲ್ಲಿದ್ದಾರೆ. 2017ರಲ್ಲಿ ಶ್ರೀಲಕ್ಷ್ಮಿ ನ್ಯಾಯಾಲಯದ ಮೊರೆ ಹೋಗಿದ್ದು, ತನ್ನ ಪತಿ ಪೃಥ್ವಿರಾಜ್ಗೆ ತಿಂಗಳಿಗೆ 8 ಲಕ್ಷ ರೂ.ಗಳನ್ನು ಕಾನೂನಾತ್ಮಕವಾಗಿ ಜೀವನಾಂಶ ನೀಡುವಂತೆ ನ್ಯಾಯಾಲಯವನ್ನು ಕೋರಿದ್ದರು. ಅದಕ್ಕೆ ನ್ಯಾಯಾಲಯವೂ ಒಪ್ಪಿಗೆ ಸೂಚಿಸಿದ್ದು, ಶ್ರೀಲಕ್ಷ್ಮಿ ಅವರ ಕಾನೂನು ಹೋರಾಟದ ವೆಚ್ಚವನ್ನೂ ಪೃಥ್ವಿರಾಜ್ ಭರಿಸಬೇಕೆಂದು ಕೋರ್ಟ್ ತೀರ್ಪು ನೀಡಿತ್ತು. ಅದರಂತೆ ಪೃಥ್ವಿರಾಜ್ ಪ್ರತಿ ತಿಂಗಳು 10ನೇ ತಾರೀಖಿನೊಳಗೆ ಆಕೆಗೆ 8 ಲಕ್ಷ ರೂ. ಜೀವನಾಂಶವನ್ನು ಪಾವತಿಸಬೇಕು ಎಂದು ತೀರ್ಪು ನೀಡಿತ್ತು. ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಲಯವು ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ. ನ್ಯಾಯಾಲಯದ ಆದೇಶದಂತೆ ಪೃಥ್ವಿರಾಜ್ ಪತ್ನಿಗೆ 8…
ಬಿಟ್ ಕಾಯಿನ್ ಹಗರಣ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಕಾಂಗ್ರೆಸ್ ಯುವ ಮುಖಂಡ ಮುಹಮ್ಮದ್ ನಲಪಾಡ್ ಅವರನ್ನು ಬುಧವಾರ ವಿಚಾರಣೆಗೊಳಪಡಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಯಾನೆ ಶ್ರೀಕಿಯೊಂದಿಗೆ ನಂಟು ಹೊಂದಿದ್ದ ಆರೋಪದಡಿ ವಿಚಾರಣೆಗೆ ಹಾಜರಾಗುವಂತೆ ನಲಪಾಡ್ ಗೆ ನೋಟಿಸ್ ನೀಡಲಾಗಿತ್ತು. ಸಿಐಡಿಯ ಇ-ಪ್ರೊಕ್ಯೂರ್ ಮೆಂಟ್ ಜಾಲತಾಣ ಹ್ಯಾಕ್ ಮಾಡಿ 1 ಕೋಟಿ ರೂಪಾಯಿ ವಂಚಿಸಿದ್ದ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಐಪಿಎಸ್ ಅಧಿಕಾರಿ ವಂಶಿಕೃಷ್ಣ ಅವರ ಎದುರು ನಲಪಾಡ್ ಹಾಜರಾಗಿದ್ದಾರೆ. 2018ರಲ್ಲಿ ವಿದ್ವತ್ ಎಂಬಾತನ ಮೇಲೆ ಕೊಲೆಯತ್ನ ಪ್ರಕರಣದಲ್ಲಿ ನಲಪಾಡ್ ಜೊತೆಗೆ ಶ್ರೀಕಿ ಆರೋಪಿಯಾಗಿದ್ದ. ಇಬ್ಬರೂ ಪರಸ್ಪರ ಪರಿಚಯಸ್ಥರಾಗಿದ್ದು, ಇಬ್ಬರ ನಡುವೆ ಹಣಕಾಸು ವಹಿವಾಟು ನಡೆದಿತ್ತಾ? ಎಂಬ ಮಾಹಿತಿ ಸಂಗ್ರಹಿಸಲು ನಲಪಾಡ್ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಇತ್ತೀಚೆಗಷ್ಟೇ ಶ್ರೀಕಿ ಗೆಳತಿಯನ್ನು ತನಿಖಾಧಿಕಾರಿಗಳು ವಿಚಾರಣೆ ನಡೆಸಿದ್ದರು. ಬಿಟ್ ಕಾಯಿನ್ ಪ್ರಕರಣದಲ್ಲಿ ಬಂಧಿತನಾಗಿದ್ದಾಗ ಶ್ರೀಕಿಗೆ ಇನ್ ಸ್ಪೆಕ್ಟರ್ ಪ್ರಶಾಂತ್ ಬಾಬು ಲ್ಯಾಪ್ ಟಾಪ್ ನೀಡಿದ್ದರು. ಈ ವೇಳೆ ಕೆಲಸದ…
ಒಡಿಶಾ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ ಮೋಹನ್ ಚರಣ್ ಮಾಝಿ ಕೃಷಿಕರಾಗಿ, ಆರೆಸ್ಸೆಸ್ ಶಾಲೆಯ ಶಿಕ್ಷಕರಾಗಿ, ಸರಪಂಚರಾಗಿ, ಆದಿವಾಸಿ ಹಕ್ಕುಗಳ ಹೋರಾಟಗಾರರಾಗಿ ಮತ್ತು ಗಣಿ ಮಾಫಿಯಾ ವಿರುದ್ಧದ ಚಳವಳಿಗಾರರಾಗಿ ವೈವಿಧ್ಯಮಯ ಅನುಭವಗಳನ್ನು ಹೊಂದಿದ್ದಾರೆ. ಈ ಪೂರ್ವ ರಾಜ್ಯದಲ್ಲಿ ಮೊದಲ ಬಾರಿಗೆ ಬಿಜೆಪಿಯ ಸಿಎಂ ಆದ 52 ವರ್ಷ ವಯಸ್ಸಿನ ಮಾಝಿ ಕಿಯೊಂಝರ್ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಶಾಸಕರಾದ ಮೇಲೂ ರಾಜಧಾನಿಯಲ್ಲಿ ನನಗೆ ಬಾಡಿಗೆ ಮನೆ ಮಾಡುವ ಸಾಮರ್ಥ್ಯ ಇಲ್ಲ ಎಂದು ಹೇಳಿದವರು. ಈ ಪೂರ್ವ ರಾಜ್ಯದಲ್ಲಿ ಮೊದಲ ಬಾರಿಗೆ ಬಿಜೆಪಿಯ ಸಿಎಂ ಆದ 52 ವರ್ಷ ವಯಸ್ಸಿನ ಮಾಝಿ ಕಿಯೊಂಝರ್ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ದೇಶದ ಮೊಟ್ಟಮೊದಲ ಆದಿವಾಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸಮುದಾಯವಾದ ಸಂತಾಲ ಸಮಾಜಕ್ಕೆ ಸೇರಿದ ಮಾಝಿ ಅವರನ್ನು ಬಿಜೆಪಿ ಸಿಎಂ ಹುದ್ದೆಗೆ ಆಯ್ಕೆ ಮಾಡಿದೆ. ಆದಿವಾಸಿ ಪ್ರಾಬಲ್ಯದ ಜಾರ್ಖಂಡ್ ವಿಧಾನಸಭೆಗೆ ಸದ್ಯದಲ್ಲೇ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಕಾರ್ಯತಂತ್ರದ ಭಾಗವಾಗಿ…
ತುಮಕೂರು: ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯವನ್ನು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್ ವಿಚಾರಿಸಿದರು. ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟು, ಇನ್ನೂ ಕೆಲವರು ಚಿಕಿತ್ಸೆ ಪಡೆಯುತ್ತಿರುವ ವಿಚಾರ ತಿಳಿದು ಸಚಿವರು ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ಹಿರಿಯರು ಹಾಗೂ ಮಕ್ಕಳ ಆರೋಗ್ಯ ವಿಚಾರಿಸಿದರು. ಬಳಿಕ ಮಾತನಾಡಿದ ಅವರು, “ಕುಡಿಯುವ ನೀರಿನ ಸಮಸ್ಯೆ ಇರುವ ಕಡೆಗೆ ಗಮನ ಹರಿಸಿ ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆದರೂ ಸಣ್ಣಪುಟ್ಟ ವ್ಯತ್ಯಾಸಗಳಾಗಿವೆ. ಮೂವರು ಮೃತಪಟ್ಟಿದ್ದು ಬೇಸರ ಸಂಗತಿ. ಈಗಾಗಲೇ ಪರಿಸ್ಥಿತಿ ಸುಧಾರಿಸಿದ್ದು, ಬೇರೆ ಕಡೆಯೂ ಇಂತಹ ಸಮಸ್ಯೆ ಆಗದಂತೆ ಗಮನ ನೀಡುವಂತೆ ಸೂಚಿಸಲಾಗಿದೆ” ಎಂದು ಮಾಹಿತಿ ನೀಡಿದರು. “ಕಲುಷಿತ ನೀರು ಸರಬರಾಜಿಗೆ ಸಂಬಂಧಪಟ್ಟಂತೆ ಈಗಾಗಲೇ ಇಬ್ಬರು ವಾಟರ್ ಮ್ಯಾನ್ ಗಳನ್ನು ಅಮಾನತುಗೊಳಿಸಲಾಗಿದೆ” ಎಂದು ತಿಳಿಸಿದರು. ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಜೂ7 ರಿಂದ ಲಕ್ಷ್ಮಿದೇವಿ ಮತ್ತು ಕೆಂಪಮ್ಮ ಜಾತ್ರೆ ಇತ್ತು. ಈ ವೇಳೆ ನಾನಾ ಭಾಗಗಳಿಂದ…
ಶ್ರೀದೇವಿ ಬೈರಪ್ಪ ಅವರು ಯಾವುದೇ ರೀತಿಯಲ್ಲಿ ಹಣ ಮತ್ತು ಆಸ್ತಿಗೆ ಆಸೆ ಪಡುತ್ತಿಲ್ಲ. ಆಕೆ ವಿದ್ಯಾವಂತೆ, ಎಲ್ಲವನ್ನೂ ಆಕೆ ಮ್ಯಾನೇಜ್ ಮಾಡುತ್ತಿದ್ದಾರೆ ಎಂದು ಲಾಯರ್ ಹೇಳಿದ್ದಾರೆ. ಪ್ರೀತಿಸಿ ಮದುವೆಯಾಗಿ ಜೀವ ನಡೆಸಿರುವ ಯುವ ರಾಜ್ ಕುಮಾರ್ ಇದ್ದಕ್ಕಿದ್ದಂತೆ ವಿಚ್ಛೇದನ ಬೇಕೆಂದು ನೋಟಿಸ್ ಕಳುಹಿಸಲು ಕಾರಣವೇನು? ಅಲ್ಲದೇ ಶ್ರೀದೇವಿ ಅವರ ತಂದೆ ಭೈರಪ್ಪನವರು ಕೂಡಾ ಸ್ಪಷ್ಟವಾಗಿ ಹೇಳಿದ್ದಾರೆ ನಮಗೆ ಅವರಿಂದ ಯಾವ ಹಣ ಕೂಡಾ ಬೇಕಿಲ್ಲ ಎಂದು” ಎಂದು ಶ್ರೀದೇವಿ ಭೈರಪ್ಪ ಲಾಯರ್ ದೀಪ್ತಿ ಆಯಾಥಾನ್ ಮಾತನಾಡಿದ್ದಾರೆ. ಆಕೆಗೆ ಪರೀಕ್ಷೆ ಇರುವ ಸಮಯದಲ್ಲಿ ನೋಟಿಸ್ ಕಳುಹಿಸಿದ್ದಾರೆ. ಹಾರ್ವರ್ಡ್ ಅಂತ ಪ್ರತಿಷ್ಠಿತ ಸಂಸ್ಥೆಯಲ್ಲಿ ಓದುತ್ತಿರುವಾಗ ಪರೀಕ್ಷೆ ಇರುವ ಸಮಯದಲ್ಲಿ ನೋಟಿಸ್ ಕೊಟ್ಟಿದ್ದಾರೆ. ಡಿಸೆಂಬರ್ ವರೆಗೆ ಊಟ ಆಯಿತಾ ಮಗಳೇ ಎಂದು ಮೆಸೇಜ್ ಬಂದಿದೆ ಆಮೇಲೆ ಎಲ್ಲಾ ಸ್ಟಾಪ್ ಆಗಿದೆ ಎಂದು ಲಾಯರ್ ಹೇಳಿದ್ದಾರೆ. ಪ್ರೀತಿಯಿಂದ ಯುವ ಮಾತನಾಡಿಸಿರುವ ಪ್ರತಿಯೊಂದು ಮೆಸೇಜ್ ಡಿಸೆಂಬರ್ ವರೆಗೂ ಇದೆ. ಅವರು ಮೊದಲು ನೋಟಿಸ್ ಕೊಟ್ಟಿರುವ ಕಾರಣ ಶ್ರೀದೇವಿ ಅವರು…
ಹಾಲಿಗೆ ಅರಿಶಿನ ಸೇರಿಸಿ ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ. ರಕ್ತವನ್ನು ಶುದ್ಧೀಕರಿಸುತ್ತದೆ: ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ. ರಕ್ತ ಪರಿಚಲನೆ ಹೆಚ್ಚಿಸಲು ಸಹಾಯ ಮಾಡುತ್ತದೆ. ಎಲ್ಲಾ ಕಲ್ಮಶಗಳಿಂದ ರಕ್ತನಾಳಗಳು ಮತ್ತು ದುಗ್ಧರಸ ವ್ಯವಸ್ಥೆ(ಲಿಂಫ್ಯಾಟಿಕ್ ಸಿಸ್ಟಮ್)ಯನ್ನು ಶುದ್ಧಗೊಳಿಸುತ್ತದೆ. ಕ್ಯಾನ್ಸರ್ ತಡೆಗಟ್ಟುತ್ತದೆ: ಅರಿಶಿನ ಹಾಲನ್ನು ನಿಯಮಿತವಾಗಿ ಸೇವಿಸುವುದರಿಂದ ಆರಂಭಿಕ ಹಂತದಲ್ಲಿ ಕ್ಯಾನ್ಸರ್ ಬೆಳವಣಿಗೆಯನ್ನು ತಡೆಯಬಹುದು. ಅರಿಶಿನದಲ್ಲಿರುವ ‘ಕರ್ಕ್ಯುಮಿನ್ ‘ ಕ್ಯಾನ್ಸರ್ ಕೋಶಗಳನ್ನು ಕೊಲ್ಲಲು ಸಹಾಯ ಮಾಡುತ್ತದೆ. ಜೀರ್ಣಕ್ರಿಯೆ ಹೆಚ್ಚಿಸುತ್ತದೆ: ಅರಿಶಿನದ ಹಾಲು ಜೀರ್ಣಕ್ರಿಯೆಯನ್ನು ಹೆಚ್ಚಿಸಿ ಹೊಟ್ಟೆಯ ಹುಣ್ಣು ಮತ್ತು ಅತಿಸಾರವನ್ನು ತಡೆಯುತ್ತದೆ. ಹೊಟ್ಟೆಯುಬ್ಬರ, ಎದೆಯುರಿ, ಇತರ ಜಠರಗರುಳಿನ ಸೋಂಕುಗಳಿದ್ದರೆ ಪ್ರತಿದಿನ…
ಕಲಬುರಗಿ: ಅಕ್ರಮವಾಗಿ ವಾಹನದಲ್ಲಿ ಸಾಗಿಸುತ್ತಿದ್ದ ಸುಮಾರು 150 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಶಹಾಬಾದ ನಗರದ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪಡಿತರ ಅಕ್ಕಿ ವಿತರಿಸದೇ ಅಕ್ರಮವಾಗಿ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಡಿವೈಎಸ್ ಪಿ ಶಂಕರಗೌಡ ಪಾಟೀಲ ಹಾಗೂ ಪಿಐ ನಟರಾಜ ಲಾಡೆ ಅವರು ವಾಹನವನ್ನು ನಗರದ ವಾಡಿ ವೃತ್ತದಲ್ಲಿ ವಶಪಡಿಸಿಕೊಂಡಿದ್ದಾರೆ. ಅಲ್ಲದೇ ಲಾರಿ ಚಾಲಕನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಟ್ರಕ್ನಲ್ಲಿ ಸುಮಾರು150 ಕ್ವಿಂಟಾಲ್ ಪಡಿತರ ಅಕ್ಕಿಯ ಚೀಲವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶಹಾಬಾದನ ಜುನೈದ್ ಎಂಬಾತ ಶಹಾಬಾದದಿಂದ ಉಮರ್ಗಾ ಕಡೆ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಎಂದು ತಿಳಿದು ಬಂದಿದೆ. ಉಮರ್ಗಾ ಅಕ್ಕಿ ಗೋಡಾನ ಮಾಲೀಕನ ವಿರುದ್ಧ ಶಹಬಾದ ನಗರ ಪೊಲೀಸ್ ಠಾಣೆಯಲ್ಲಿ ದೂರ ದಾಖಲಾಗಿದೆ. ಈ ಕಾರ್ಯಾ ಚರಣೆಯಲ್ಲಿ ಪಿಎಸ್ಐ ಶಿವರಾಯ, ಸಿಬ್ಬಂದಿ ಗುಂಡಪ್ಪ, ಶ್ರೀಕಾಂತ್ ಉಪಳಪ್ಪ ಮತ್ತು ಆಹಾರ ಇಲಾಖೆಯ ನಿರ್ದೇಶಕರಾದ ಶ್ರೀಕಾಂತ್ ಮತ್ತು ಮಂಜು ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆಗೈದ ಪ್ರಕರಣದಲ್ಲಿ ದರ್ಶನ್ ಮತ್ತು ಸಹಚರರು ಅರೆಸ್ಟ್ ಆದ ಬೆನ್ನಲ್ಲೇ ಸ್ಪೋಟಕ ಮಾಹಿತಿಗಳು ಹೊರಬರುತ್ತಿವೆ. ಈ ಕೊಲೆಯಾದ ಮೇಲೆ ಮೃತದೇಹ ವಿಲೇವಾರಿಗೆ ೩೦ ಲಕ್ಷಕ್ಕೆ ಡೀಲ್ ನಡೆದಿತ್ತು ಎನ್ನಲಾಗಿದೆ. ರೇಣುಕಾಸ್ವಾಮಿಯನ್ನು ಕೊಲೆಮಾಡಿ ಮೃತದೇಹ ವಿಲೇವಾರಿ ಬಳಿಕ ಹಂತಕರಿಗೆ ನಡುಕ ಶುರುವಾಗಿತ್ತು. ಹೀಗಾಗಿ ಮೂವರಲ್ಲಿ ಶರಣಾಗುವಂತೆ ದರ್ಶನ್ ಸೂಚನೆ ನೀಡಿದ್ದರು. ಜೂನ್ 10 ರಂದು ಮೂವರು ಕಾಮಾಕ್ಷಿಪಾಳ್ಯ ಠಾಣೆಗೆ ಶರಣಾಗಿ ನಾವು ಹಣಕಾಸು ವಿಚಾರಕ್ಕೆ ಕೊಲೆ ಮಾಡಿರುವುದಾಗಿ ಹೇಳಿಕೆ ನೀಡಿದ್ದರು. ಕೊಲೆ ಮಾಡಿ ಶರಣಾದ ಹಿನ್ನೆಲೆಯಲ್ಲಿ ಅನುಮಾನಗೊಂಡ ಪೊಲೀಸರು ಮೂವರನ್ನು ಪ್ರತ್ಯೇಕವಾಗಿ ಕರೆದು ಪೊಲೀಸ್ ಶೈಲಿಯಲ್ಲಿ ವಿಚಾರಣೆ ನಡೆಸಿ ಯಾರ ಮಾಹಿತಿ ಮೇರೆಗೆ ಬಂದು ಶರಣಾಗಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಒಬ್ಬೊಬ್ಬರು ಸಂಬಂಧವೇ ಇಲ್ಲದ ಒಂದೊಂದು ಹೇಳಿಕೆ ನೀಡಿದ್ದಾರೆ. ಪೊಲೀಸರು ಮತ್ತೆ ತನಿಖೆಗೆ ಇಳಿದು ಮೊಬೈಲ್ ಪರಿಶೀಲನೆ ನಡೆಸಿದಾಗ ದರ್ಶನ್ಗೆ ರಾತ್ರಿಯಿಡಿ ವಾಟ್ಸಪ್ ಕರೆ ಮಾಡಿರುವ ವಿಚಾರ ಗೊತ್ತಾಗಿದೆ. ಈ ವಿಚಾರ ತಿಳಿದು ವಿಚಾರಣೆಯನ್ನು ಮತ್ತಷ್ಟು ತೀವ್ರಗೊಳಿಸಿದಾಗ ಈ…
ಹದಿನೆಂಟನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24ರಂದು ಆರಂಭಗೊಳ್ಳಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ಈ ಅಧಿವೇಶನದಲ್ಲಿ ಎಲ್ಲಾ ನೂತನ ಸಂಸದರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಜೂನ್ 27ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನ ಎರಡೂ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಧಿವೇಶನ ಜುಲೈ 3ರಂದು ಅಂತ್ಯಗೊಳ್ಳಲಿದೆ. ಈ ಅಧಿವೇಶನದ ವೇಳೆ ಲೋಕಭೆಯ ನೂತನ ಸ್ಪೀಕರ್ ಆಯ್ಕೆಯಾಗಲಿದ್ದಾರೆ. ಬಿಜೆಪಿ ಮತ್ತು ಅದರ ಎನ್ ಡಿಎ ಮಿತ್ರಪಕ್ಷಗಳ ನಡುವೆ ಈ ಮಹತ್ವದ ಹುದ್ದೆಗೆ ಈಗಾಗಲೇ ಮಾತುಕತೆಗಳು ನಡೆಯುತ್ತಿವೆ. ಲೋಕಸಭೆಯ ಮೊದಲ ಸಭೆಯಲ್ಲಿಯೇ ಸ್ಪೀಕರ್ ಆಯ್ಕೆ ನಡೆಯುತ್ತದೆ. ಇದಕ್ಕೂ ಮೊದಲು ಅತ್ಯಂತ ದೀರ್ಘಾವಧಿ ಸಂಸದರಾಗಿ ಸೇವೆ ಸಲ್ಲಿಸಿದ ಸದಸ್ಯರೊಬ್ಬರನ್ನು ಹಂಗಾಮಿ ಸ್ಪೀಕರ್ ಆಗಿ ಆರಿಸಲಾಗುತ್ತದೆ. ಈ ಹಂಗಾಮಿ ಸ್ಪೀಕರ್ ನೂತನ ಸಂಸದರ ಪ್ರಮಾಣವಚನ ಸ್ವೀಕಾರ ವೇಳೆ ಸದನದ ಅಧ್ಯಕ್ಷತೆ ವಹಿಸುತ್ತಾರೆ. ಎನ್ ಡಿಎ ಮೈತ್ರಿಕೂಟದ ಪ್ರಮುಖ ಭಾಗವಾಗಿರುವ ಟಿಡಿಪಿ ಮತ್ತು ಜೆಡಿ(ಯು) ಸ್ಪೀಕರ್ ಹುದ್ದೆಗಾಗಿ ಪೈಪೋಟಿ ನಡೆಸುತ್ತಿವೆ ಎನ್ನಲಾಗಿದೆ. 90ರ ದಶಕದಲ್ಲಿ…
ಶ್ರೀರಾಮ ಸೇನೆ ನೇತೃತ್ವದಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮವನ್ನು ಧಾರವಾಡ ನಗರದ ವಿದ್ಯಾಗಿರಿಯ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ರಾಮಲಿಂಗೇಶ್ವರ ಸಂಸ್ಥಾನ ಮಠದ ಮಾತಾ ವಚನಶ್ರೀ ಮಹಿಳೆಯರಿಗೆ ತ್ರಿಶೂಲ ದೀಕ್ಷಾ ನೀಡಿ. ಆಮೇಲೆ ಚಮತ್ಕಾರ ನೋಡಿ. ಮಹಿಳೆಯರು ತಮ್ಮ ರಕ್ಷಣೆಗಾಗಿ ಸದಾ ಜಾಗರೂಕರಾಗಿರಬೇಕು. ಜಿಹಾದಿಗಳಿಗೆ ಹಾಗೂ ಕಾಮುಕರಿಗೆ ತಕ್ಕ ಶಾಸ್ತಿ ಮಾಡಲು ಶಸ್ತ್ರ ಬಳಕೆ ಮಾಡಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಶ್ರೀ ರಾಮ ಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ, ಉಚ್ಚ ನ್ಯಾಯಾಲಯದ ವಕೀಲರಾದ ಸಚಿನ ಕುಲಕರ್ಣಿ, ಶ್ರೀ ರಾಮ ಸೇನಾ ಜಿಲ್ಲಾಧ್ಯಕ್ಷ ಅಣ್ಣಪ್ಪ ದಿವಟಗಿ ಸೇರಿದಂತೆ ಹಲವರು ಭಾಗವಹಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296