Subscribe to Updates
Get the latest creative news from FooBar about art, design and business.
- ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
- ತಿಪಟೂರು: ಜೂನ್ 1ರಿಂದ ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
- ತುಮಕೂರು: ವಾಟರ್ ಟ್ಯಾಂಕ್ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು, ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
- ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
- ತುರುವೇಕೆರೆ: ಜೂ. 4ರಂದು ಉಚಿತ ಯೋಗ, ಪ್ರಾಣಾಯಾಮ ತರಗತಿಗಳ ಉದ್ಘಾಟನೆ
- ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
- ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ
Author: admin
100 ದೇಶಗಳನ್ನು ತಲುಪಿದ ಸ್ಟಾರ್ ಲಿಂಕ್ ನ ಇಂಟರ್ನೆಟ್ಸ್ಯಾಟಲೈಟ್ ಇಂಟರ್ನೆಟ್ ಸೇವೆ ಒದಗಿಸುವ ಕಂಪನಿ ಸ್ಟಾರ್ ಲಿಂಕ್ ಈಗ 100 ದೇಶಗಳನ್ನು ತಲುಪಿದೆ. ಸ್ವತಃ ಸ್ಪೇಸ್ ಎಕ್ಸ್ ಸಿಇಓ ಎಲೋನ್ ಮಸ್ಕ್ ಈ ಮಾಹಿತಿಯನ್ನು ನೀಡಿದ್ದಾರೆ. ಆಫ್ರಿಕನ್ ದೇಶ ಸಿಯೆರಾ ಲಿಯೋನ್ ಸ್ಟಾರ್ಲಿಂಕ್ನ ಇಂಟರ್ನೆಟ್ ಸೇವೆಯನ್ನು ಪ್ರಾರಂಭಿಸಿದ 100 ನೇ ದೇಶವಾಗಿದೆ. ಸಿಯೆರಾ ಲಿಯೋನ್ ಆಫ್ರಿಕಾದ 10 ನೇ ದೇಶವಾಗಿದೆ, ಅಲ್ಲಿ ಸ್ಟಾರ್ಲಿಂಕ್ ಇಂಟರ್ನೆಟ್ ತಲುಪಿದೆ. ಈ ಸುದ್ದಿಯನ್ನು ಮೊದಲು ಸಾಮಾಜಿಕ ಮಾಧ್ಯಮ ಪ್ಲಾಟ್ ಫಾರ್ಮ್ ಎಕ್ಸ್ ನಲ್ಲಿ ಹಂಚಿಕೊಳ್ಳಲಾಗಿದೆ (ಹಿಂದೆ ಟ್ವಿಟರ್ ಎಂದು ಕರೆಯಲಾಗುತ್ತಿತ್ತು). ಸ್ಟಾರ್ಲಿಂಕ್ ಈ ಕುರಿತು ಎಕ್ಸ್ ನಲ್ಲಿ ಬರೆದುಕೊಂಡಿದೆ. ಸ್ಟಾರ್ ಲಿಂಕ್ ಒಂದು ವರ್ಷದ ನಂತರ ಪರವಾನಗಿ ಪಡೆಯಿತು: ನ್ಯಾಷನಲ್ ಕಮ್ಯುನಿಟಿ ಅಥಾರಿಟಿ ಆಫ್ ಸಿಯೆರಾ ಲಿಯೋನ್ (NATCA) 2023 ರಿಂದ ಪ್ರಾರಂಭವಾಗುವ ಒಂದು ವರ್ಷದ ತಾಂತ್ರಿಕ ಮೌಲ್ಯಮಾಪನದ ನಂತರ ಸ್ಟಾರ್ಲಿಂಕ್ ಗೆ ಪರವಾನಗಿಯನ್ನು ನೀಡಿದೆ. ಈ ದೇಶದ ಡೇವಿಡ್ ಮೊಯಿನಿನಾ ಸೆಂಗಾ ಅವರು ಇದನ್ನು…
ರಾಮನಗರ: ಮಂಡ್ಯ ಬಿಟ್ಟರೂ ಚನ್ನಪಟ್ಟಣ ಬಿಟ್ಟು ಕೊಡಲ್ಲ ಎಂದು ಡಿಕೆ ಸುರೇಶ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಮಂಡ್ಯದಲ್ಲಿ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ರಾಜೀನಾಮೆ ನೀಡುತ್ತಾರೆ. ಚನ್ನಪಟ್ಟಣ ಕ್ಷೇತ್ರವನ್ನ ಕುಮಾರಸ್ವಾಮಿ ಉಳಿಸಿಕೊಳ್ಳುತ್ತಾರೆ. ಚನ್ನಪಟ್ಟಣಕ್ಕೆ ಇನ್ನೂ ಬೈ ಎಲೆಕ್ಷನ್ ಘೋಷಣೆ ಆಗಿಲ್ಲ. ಯಾಕಂದ್ರೆ ಹಾಲಿ ಶಾಸಕರು ಇನ್ನೂ ರಾಜೀನಾಮೆ ನೀಡಿಲ್ಲ. ನಮಗೆ ವಿಶ್ವಾಸ ಇದೆ ಕುಮಾರಸ್ವಾಮಿ ಯಾವುದೇ ಕಾರಣಕ್ಕೂ ಚನ್ನಪಟ್ಟಣ ಬಿಟ್ಟು ಹೋಗಲ್ಲ. ಅವರಿಗೆ ಅಧಿಕಾರಕ್ಕಿಂತ ಕ್ಷೇತ್ರದ ಜನ, ಕಾರ್ಯಕರ್ತರು ಮುಖ್ಯ. ನಾನು ಸಾಕಷ್ಟು ಬಾರಿ ಅವರ ಮಾತುಗಳನ್ನ ಆಲಿಸಿದ್ದೇನೆ. ಚನ್ನಪಟ್ಟಣ, ರಾಮನಗರ ನನ್ನ ಎರಡು ಕಣ್ಣುಗಳು ಅಂದಿದ್ರು. ಅಧಿಕಾರ ಇದ್ದಾಗ, ಇಲ್ಲದಿದ್ದಾಗ ಅವರ ಮಾತುಗಳನ್ನ ನೋಡಿದ್ದೇನೆ. ಅಲ್ಲದೇ ಅವರು ಹೃದಯವಂತರು ಕೂಡ. ಹಾಗಾಗಿ ಚನ್ನಪಟ್ಟಣ ಉಳಿಸಿಕೊಳ್ತಾರೆ ಅನ್ನೋ ವಿಶ್ವಾಸ ಇದೆ ಎಂದು ವ್ಯಂಗ್ಯವಾಡಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ಬೈಎಲೆಕ್ಷನ್ ನಲ್ಲಿ ಸ್ಪರ್ಧೆ ಮಾಡುವಂತೆ ಕಾಂಗ್ರೆಸ್ ಕಾರ್ಯಕರ್ತರು ಡಿಕೆ ಸುರೇಶ್ ಗೆ ಒತ್ತಾಯಿಸಿದ್ದಾರೆ. ಚನ್ನಪಟ್ಟಣದಲ್ಲಿ ನಡೆದ ಕೃತಜ್ಞತಾ ಸಭೆ ಮುಗಿಸಿಕೊಂಡು ಹೋಗುತ್ತಿದ್ದ…
ವಿಶ್ವದ 4ನೇ ಅತಿ ದೊಡ್ಡ ಸೇನೆಯಾದ ಭಾರತೀಯ ಸೇನೆಯ ಹೊಸ ಮುಖ್ಯಸ್ಥರನ್ನಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಅವರನ್ನು ಸರ್ಕಾರ ಆಯ್ಕೆ ಮಾಡಿದೆ. ಹಾಲಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಸಿ ಪಾಂಡೆಯವರ ಅಧಿಕಾರಾವಧಿ ಜೂನ್ 30ಕ್ಕೆ ಮುಕ್ತಾಯವಾಗಲಿದೆ ಎಂದು ವರದಿ ತಿಳಿಸಿದೆ. ಪರಮ ವಿಶಿಷ್ಟ ಸೇವಾ ಪದಕ ಪುರಸ್ಕೃತರಾಗಿರುವ ದ್ವಿವೇದಿ, ಪ್ರಸ್ತುತ ಸೇನಾ ಸಿಬ್ಬಂದಿಯ ಉಪ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಜೂನ್ 30ರಂದು ಸಂಜೆ ಜನರಲ್ ಪಾಂಡೆಯವರಿಂದ ಅಧಿಕಾರ ಸ್ವೀಕರಿಸಲಿದ್ದಾರೆ. 1964ರಲ್ಲಿ ಜನಿಸಿದ ಲೆಫ್ಟಿನೆಂಟ್ ಜನರಲ್ ದ್ವಿವೇದಿ ಜಮ್ಮು & ಕಾಶ್ಮೀರ ರೈಫಲ್ಸ್ ನಲ್ಲಿ 1984ರ ಡಿಸೆಂಬರ್ 15ರಂದು ನಿಯೋಜನೆಗೊಂಡಿದ್ದರು. 40 ವರ್ಷಗಳ ಸುಧೀರ್ಘ ಸೇವೆಯಲ್ಲಿ ವಿವಿಧ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಕಮಾಂಡ್ ಆಫ್ ರೆಜಿಮೆಂಟ್ (18 ಜಮ್ಮು & ಕಾಶ್ಮೀರ ರೈಫಲ್ಸ್), ಬ್ರಿಗೇಡ್ (26 ಸೆಕ್ಟರ್ ಅಸ್ಸಾಂ ರೈಫಲ್ಸ್), ಡಿಐಜಿ, ಅಸ್ಸಾಂ ರೈಫಲ್ಸ್ ಮತ್ತಿತರ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ ಎನ್ನಲಾಗಿದೆ. ಉತ್ತರ ಕಮಾಂಡ್ ನ ಸೇನಾ ಸಿಬ್ಬಂದಿಯ ಉಪಮುಖ್ಯಸ್ಥರಾಗಿ 2022ರಿಂದ…
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಹಾಗೂ ರಾಜ್ಯಸಭಾ ಬಿಜೆಪಿ ಸಂಸದ ಜಗ್ಗೇಶ್ ಪರೋಕ್ಷವಾಗಿ ದರ್ಶನ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಎಕ್ಸ್ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿದ್ದು, “ಸರ್ವ ಆತ್ಮಾನೇ ನಬ್ರಹ್ಮ, ಸರ್ವ ಜೀವಿಯಲ್ಲಿ ದೇವರಿದ್ದಾನೆ. ಯಾರನ್ನು ಕೊಲ್ಲುವ ಹಕ್ಕು ಜೀವನಿಗಿಲ್ಲಾ! ಕರ್ಮ ಜೀವನದ ಹಿಂದೆ ಹಿಂಬಾಲಿಸುತ್ತದೆ. ಅವನ ಪಾಪಕರ್ಮ ಅವನನ್ನು ಸುಡುತ್ತದೆ! ಕಲಿಯುಗದಲ್ಲಿ ದೇವರು ಕಲ್ಲಲ್ಲಾ. ಎಲ್ಲಾ ಕರ್ಮಕ್ಕು ತಕ್ಷಣ ಪಲಿತಾಂಶ ಉಂಟು! ರಾಮನಾಗು ರಾವಣನಾದರೆ ಅಂತ್ಯ ಎಂದಿದೆ ಸನಾತನ ಕೃತಿ! ಮದಕ್ಕೆ ಕಾರುಣ್ಯದ ಅರಿವಿಲ್ಲ! ಎಂದು ಬರೆದುಕೊಂಡಿದ್ದಾರೆ. ಈ ಹಿಂದೆ ದರ್ಶನ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು ಎಂಬ ಕಾರಣಕ್ಕೆ ಜಗ್ಗೇಶ್ ಮೇಲೆ ದರ್ಶನ್ ಅಭಿಮಾನಿಗಳು ಗರಂ ಆಗಿದ್ದರು ಮತ್ತು ಅವರನ್ನು ಸತ್ತುವರಿದು ಹಲ್ಲೆಗೆ ಯತ್ನಿಸಿದ ಘಟನೆ ನಡೆದಿತ್ತು. ಚಿತ್ರದುರ್ಗದ ರೇಣುಕಾಸ್ವಾಮಿ ಅವರನ್ನು ಅಪಹರಿಸಿ ಕೊಲೆ ಮಾಡಿದ್ದ ಆರೋಪದಡಿ ಬಂಧನಕ್ಕೆ ಒಳಗಾಗಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಹಾಗೂ ಅವರ ಆಪ್ತೆ ಪವಿತ್ರಾಗೌಡ ಸೇರಿ ಇತರೆ 13 ಆರೋಪಿಗಳ…
ಮಂದಿನ ತಿಂಗಳಿನಿಂದ ತೃತೀಯ ಲಿಂಗಿಗಳಿಗೂ ಗೃಹಲಕ್ಷ್ಮಿ ಹಣ ಸಿಗಲಿದೆ. ತೃತೀಯ ಲಿಂಗಿಗಳಿಗೆ ಹಣ ನೀಡಲು ಈಗಾಗಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಆದೇಶ ಆಗಿದೆ. ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಈ ತಿಂಗಳ ಕೊನೆಯ ಒಳಗಾಗಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಜಿಲ್ಲಾಧಿಕಾರಿಗಳಿಂದ ವಿತರಿಲ್ಪಟ್ಟ ಗುರುತಿನ ಚೀಟಿ ಇದ್ದರೆ ತೃತೀಯ ಲಿಂಗಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈ ತಿಂಗಳ ಒಳಗಡೆ ಅರ್ಜಿ ಸಲ್ಲಿಕೆಯಾದ್ರೆ ಮುಂದಿನ ತಿಂಗಳೇ ತೃತೀಯ ಲಿಂಗಿಗಳ ಅಕೌಂಟ್ ಗೆ ಎರಡು ಸಾವಿರ ರೂಪಾಯಿ ಹಣ ಬರಲಿದೆ. ರಾಜ್ಯದಲ್ಲಿ 40,000 ಹೆಚ್ಚು ತೃತೀಯ ಲಿಂಗಿಗಳಿದ್ದು ಅವರ ಅಭಿವೃದ್ಧಿಗೆ ಅಥವಾ ಜೀವನೋಪಾಯಕ್ಕೆ ಗೃಹಲಕ್ಷ್ಮಿ ಹಣ ಸಹಕಾರಿಯಾಗಲಿದೆ. ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಸೈಬರ್ ಸೆಂಟರ್ಗಳಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈಗಾಗಲೇ 1.24 ಕೋಟಿ ಮಂದಿ ಗೃಹಲಕ್ಷ್ಮಿ ಯೋಜನೆಗೆ ನೊಂದಾಣಿ ಮಾಡಿಕೊಂಡಿದ್ದಾರೆ. ಅದರಲ್ಲಿ 1.25 ಕೋಟಿ ಮಂದಿ 2 ಸಾವಿರ ರೂಪಾಯಿ ಹಣ ಪಡೆಯುತ್ತಿದ್ದು 1.5 ಲಕ್ಷ ಮಂದಿ ಜಿಎಸ್ಟಿ…
ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಲೋಕಸಭೆ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಮದ್ಯದ ಬೆಲೆಯಲ್ಲಿ ಹೆಚ್ಚಳ ಮಾಡಲು ಮುಂದಾಗಿದೆ ಎಂದು ವರದಿಯಾಗಿದೆ. ರಾಜ್ಯದಲ್ಲಿ 2023ರ ಜುಲೈನಲ್ಲಿ ದೇಶೀಯ ಮದ್ಯಗಳ ಬೆಲೆ ಹೆಚ್ಚಿಸಲಾಗಿತ್ತು. ನಂತರ ಲಿಕ್ಕರ್ ಕಂಪನಿಗಳು ಬಿಯರ್ ದರ ಏರಿಕೆ ಮಾಡಿದವು. ಲಿಕ್ಕರ್ ದರವನ್ನ 20 ರೂಪಾಯಿಗೆ ಏರಿಕೆ ಮಾಡಿತ್ತು. ಈಗ ಮತ್ತೆ ಮದ್ಯದ ಬೆಲೆಯಲ್ಲಿ ಹೆಚ್ಚಳ ಮಾಡಲು ಮುಂದಾಗಿದೆ ಎಂದು ವರದಿಯಾಗಿದೆ. ಸರ್ಕಾರ, ದೇಶಿಯ ಮದ್ಯಗಳ ಬೆಲೆ ಏರಿಕೆಗೆ ನಿರ್ಧರಿಸಿದ್ದು, ಲಿಕ್ಕರ್ ದರ ಏರಿಕೆಗೆ ಅಬಕಾರಿ ಇಲಾಖೆ ಪ್ಲಾನ್ ಮಾಡಿದ್ದು, ಶೀಘ್ರವೇ ಅನುಮೋದನೆ ನೀಡಲು ಮುಂದಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಜೂನ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್ಗೆ 21 ಕೆ.ಜಿ ಅಕ್ಕಿ, ರಾಗಿ ಪ್ರತಿ ಕಾರ್ಡ್ಗೆ 14 ಕೆ.ಜಿ., ಆದ್ಯತಾ ಹಾಗೂ ಬಿ.ಪಿ.ಎಲ್. ಪಡಿತರ ಚೀಟಿದಾರರಿಗೆ 3 ಕೆ.ಜಿ. ಅಕ್ಕಿ, ರಾಗಿ 2 ಕೆ.ಜಿ. ಉಚಿತವಾಗಿ ವಿತರಿಸಲಾಗುತ್ತದೆ. ಸರ್ಕಾರದ ಗ್ಯಾರಂಟಿ ಯೋಜನೆಯಡಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದೆಂದು ತಹಶೀಲ್ದಾರ್ ಡಾ.ಎಂ.ಬಿ.ಅಶ್ವಥ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಧೂಮಪಾನ ಮದ್ಯಪಾನ ಆರೋಗ್ಯಕ್ಕೆ ತುಂಬಾನೇ ಹಾನಿಕರ ಎಂಬ ಮಾತುಗಳನ್ನು ನೀವು ಕೇಳಿರುತ್ತೀರಿ. ಆದ್ರೆ ಇಲ್ಲೊಂದು ವಿಚಿತ್ರ ಪದ್ಧತಿ ನಡೆಯುತ್ತಿದೆ. ಇಲ್ಲಿ ಹುಡುಗ ಸಿಗರೇಟ್ ಸೇದಿದರೆ ಮಾತ್ರ ಹುಡುಗನಿಗೆ ಮಗಳನ್ನು ಕೊಟ್ಟು ಮದುವೆ ಮಾಡ್ತಾರೆ. ಪ್ರತಿಯೊಂದು ಜಾಗದಲ್ಲೂ ಅವರವರ ಆಚಾರಕ್ಕೆ ತಕ್ಕಂತೆ ಮದುವೆಯ ಆಚರಣೆ ಬದಲಾಗುತ್ತದೆ. ಇಲ್ಲೊಂದು ಸ್ಥಳದಲ್ಲಿ ಮದುವೆ ಮಾಡಿಕೊಳ್ಳುವಂತಹ ಪದ್ಧತಿಯೇ ವಿಚಿತ್ರವಾಗಿದ್ದು, ಹೆಣ್ಣುಮಕ್ಕಳಿಗೆ ಪೋಷಕರು ಒಳ್ಳೆಯ ಹುಡುಗನನ್ನ ಹುಡುಕುವಾಗ ಅವನಿಗೆ ಯಾವುದಕ್ಕೆ ಕೆಟ್ಟ ಚಟ ಇಲ್ಲದಂತಹ ಹುಡುಗನನ್ನು ಅಳಿಯನಾಗಿ ಸ್ವೀಕರಿಸುತ್ತಾರೆ. ಆದರೆ ಇಲ್ಲಿ ಮಾತ್ರ ಮದುವೆಯ ಸಂದರ್ಭದಲ್ಲಿ ಅಳಿಯನಿಗೆ ಸಿಗ’ರೇಟ್ ಕೊಟ್ಟು ದಮ್ ಹೊಡೆಯುವಂತೆ ಹೇಳುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ತುಂಬಾನೇ ವೈರಲ್ ಆಗುತ್ತಿದೆ. ಮದುವೆ ಮನೆಯಲ್ಲಿ ಅತ್ತೆ ಹಾಗೂ ಮಾವ ಇಬ್ಬರೂ ಕೂಡ ಹುಡುಗನಿಗೆ ಸಿಗರೇಟ್ ಕೊಟ್ಟು ಆ ಹುಡುಗ ಸಿಗ’ರೇಟ್ ಸೇದಿದ ನಂತರ ಮಾವ ಹಾಗೂ ಅತ್ತೆ ಇಬ್ಬರಿಗೂ ಕೂಡ ಸ್ವಲ್ಪ ಹಣವನ್ನು ನೀಡುತ್ತಾನೆ. ಈ ವಿಡಿಯೋ ನೋಡಿ ನೆಟ್ಟಿಗರು ಇದೆಂತಹ ವಿಚಿತ್ರ ಮದುವೆ ಪದ್ಧತಿ ಎಂಬುದಾಗಿ ಇದನ್ನು…
ಕಾರವಾರ: ಮಕ್ಕಳು ತಮ್ಮ ಶಿಕ್ಷಣದೊಂದಿಗೆ ಬಾಲ್ಯವನ್ನು ಆನಂದಿಸಲು ಅಗತ್ಯವಿರುವ ಎಲ್ಲಾ ಅವಕಾಶಗಳನ್ನು ಒದಗಿಸುವ ಮೂಲಕ, ಅವರು ಬಾಲ ಕಾರ್ಮಿಕ ಪದ್ದತಿಗೆ ಒಳಗಾಗದಂತೆ ಪೋಷಕರು ಹಾಗೂ ಸಮಾಜದ ಪ್ರತಿಯೊಬ್ಬರೂ ಎಚ್ಚರವಹಿಸಬೇಕು ಎಂದು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾಯಣ್ಣ ಹೇಳಿದರು. ಬುಧವಾರ, ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಪೊಲೀಸ್ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ(ರಿ), ಬಾಲಮಂದಿರ ಹೈಸ್ಕೂಲ್ ಹಾಗೂ ಜಿಲ್ಲಾ ನ್ಯಾಯವಾದಿಗಳ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಬಾಲಮಂದಿರ ಹೈಸ್ಕೂಲ್ (ಹಿಂದೂ ಹೈಸ್ಕೂಲ್) ಸಭಾಂಗಣದಲ್ಲಿ ನಡೆದ ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಬಾಲ ಕಾರ್ಮಿಕ ಪದ್ದತಿ ಒಂದು ಅನಿಷ್ಠ ಪದ್ದತಿಯಾಗಿದೆ. 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಉದ್ಯಮದಲ್ಲಿ ಬಳಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಈ ಬಗ್ಗೆ ಪೋಷಕರು ಹಾಗು ಎಲ್ಲಾ ಉದ್ದಿಮೆದಾರರು…
ಬೆಂಗಳೂರು: ತುಮಕೂರು ಜಿಲ್ಲೆಯ ವಸಂತನರಸಾಪುರದ ಕೈಗಾರಿಕ ಪ್ರದೇಶಕ್ಕೆ ಹೊಂದಿಕೊಂಡಂತೆ ನಗರಾಭಿವೃದ್ಧಿ ಇಲಾಖೆಯ ವತಿಯಿಂದ Integrated Township ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಿ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್.ಸುರೇಶ (ಬೈರತಿ) ರವರು ನಗರಾಭಿವೃದ್ದಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ವಿಧಾನಸೌಧದ ತಮ್ಮ ಕಚೇರಿಯಲ್ಲಿ ನಗರಾಭಿವೃದ್ದಿ ಇಲಾಖೆಯ ಅಡಿಯಲ್ಲಿ ಬರುವ ಹತ್ತು ಮಹಾನಗರ ಪಾಲಿಕೆಗಳು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮ, ನಗರಾಭಿವೃದ್ಧಿ ಪ್ರಾಧಿಕಾರಗಳು ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಳೆದ 3 ತಿಂಗಳಿನಿಂದ ಇವುಗಳಲ್ಲಿ ನಡೆದಿರುವ ಕಾಮಗಾರಿಗಳು ಹಾಗೂ ಕೈಗೊಂಡಿರುವ ಯೋಜನೆಗಳ ಕುರಿತಂತೆ ಸಭೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗಾಗಲೇ ಮಂಡಿಸಿರುವ ಆಯವ್ಯಯದಲ್ಲಿ ವಸಂತನರಸಾಪುರದ ಬಳಿ ಸುಮಾರು 500 ಎಕರೆ ಪ್ರದೇಶದಲ್ಲಿ Integrated Township ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ. ಲೋಕಸಭಾ ಚುನಾವಣೆಗಳಿಂದಾಗಿ ಇಲ್ಲಿಯವರೆಗೂ ನೀತಿ ಸಂಹಿತೆ ಜಾರಿಯಲ್ಲಿತ್ತು, ಈಗ ಅದು…