Author: admin

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಗಾಗ ತಮ್ಮ ಅಜ್ಞಾನದ ಪ್ರದರ್ಶನ ಮಾಡುತ್ತಾ ರಾಜ್ಯದ ಜನರಿಗೆ ಮನರಂಜನೆ ನೀಡುತ್ತಿರುತ್ತಾರೆ. ‘ಗ್ಯಾರಂಟಿಗಳು ಕಾಂಗ್ರೆಸ್ ಪಕ್ಷಕ್ಕೆ ಮತ ತಂದು ಕೊಟ್ಟಿಲ್ಲ’ ಎನ್ನುವುದು ಅವರ ಇತ್ತೀಚಿನ ಸಂಶೋಧನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಶೋಕ್ ಅವರೇ, ನಿಮಗೆ ಮತ್ತು ನಿಮ್ಮ ಪಕ್ಷಕ್ಕೆ ಗ್ಯಾರಂಟಿ ಯೋಜನೆಗಳ ಬಗ್ಗೆ ಯಾಕೆ ಇಷ್ಟೊಂದು ಸಿಟ್ಟು? ಮತ್ಸರ? ಅದರ ಫಲಾನುಭವಿಗಳಾದ ಬಡವರು, ಮಹಿಳೆಯರು, ಯುವಜನರ ಬಗ್ಗೆ ಯಾಕೆ ನಿಮಗೆ ಇಷ್ಟೊಂದು ದ್ವೇಷ, ಅಸಹನೆ? ಎಂದು ಪ್ರಶ್ನಿಸಿದ್ದಾರೆ. ರಾಜ್ಯದ ಜನತೆ ಮಾತ್ರವಲ್ಲ ದೇಶದ ಜನತೆ ಕೂಡಾ ಸೋಲಿಸಿದ್ದು ಮೋದಿ ಗ್ಯಾರಂಟಿಗಳನ್ನೇ ಹೊರತು ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳನ್ನಲ್ಲ. ಅಶೋಕ್ ಅವರೇ, ಈಗಲಾದರೂ ಎಚ್ಚೆತ್ತುಕೊಂಡು ಸತ್ಯವನ್ನು ಎದುರಿಸಿ ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಕಳೆದ ಲೋಕಸಭಾ ಚುನಾವಣೆಗಿಂತ ಶೇ.13ರಷ್ಟು ಹೆಚ್ಚು ಮತಗಳನ್ನು ರಾಜ್ಯದ ಮತದಾರರು ಈ ಬಾರಿ ನಮಗೆ ನೀಡಿದ್ದಾರೆ. ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು…

Read More

ಸರ್ಕಾರದ ಸಹಾಯಧನ ಯೋಜನೆಯಡಿ ‘ಭಾರತ್ ಗೌರವ್’ ದಕ್ಷಿಣ ಕ್ಷೇತ್ರಗಳ ಯಾತ್ರೆಯನ್ನು ಕೈಗೊಳ್ಳಲಾಗುತ್ತಿದ್ದು, ಪ್ರತಿ ಯಾತ್ರಾರ್ಥಿಗಳಿಗೆ 5,000 ರೂಪಾಯಿಗಳ ಸಹಾಯಧನ ಲಭ್ಯವಾಗುತ್ತದೆ. ಇದರ ಕುರಿತು ಸಾರ್ವಜನಿಕರಿಗೆ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾತ್ರಾರ್ಥಿಗಳು ರಾಮೇಶ್ವರದ ರಾಮೇಶ್ವರ ದೇವಾಲಯ, ಕನ್ಯಾಕುಮಾರಿಯ ಶ್ರೀ ಭಗವತಿ ದೇವಾಲಯ, ಮದುರೈಯ ಶ್ರೀ ಮೀನಾಕ್ಷಿ ದೇವಾಲಯ ಹಾಗೂ ತಿರುವನಂತಪುರಂನ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಾಲಯಗಳ ದರ್ಶನವನ್ನು ಅತ್ಯಂತ ಕಡಿಮೆ ವೆಚ್ಚದಲ್ಲಿ ಪಡೆಯಬಹುದಾಗಿದೆ. ಯಾತ್ರೆಯ ಒಟ್ಟು ಪ್ಯಾಕೇಜ್ ಮೊತ್ತ 15,000 ರೂಪಾಯಿಗಳಾಗಿದ್ದು, ಕರ್ನಾಟಕ ಸರ್ಕಾರದಿಂದ 5,000 ರೂಪಾಯಿ ಸಹಾಯಧನ ಲಭ್ಯವಾಗುವ ಕಾರಣ ಯಾತ್ರಿಕರು ಕೇವಲ ಹತ್ತು ಸಾವಿರ ರೂಪಾಯಿ ಪಾವತಿಸಿದರೆ ಸಾಕಾಗುತ್ತದೆ. ಇನ್ನು ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಪ್ರವರ್ಗ ಸಿ ಅಧಿಸೂಚನೆ ದೇವಾಲಯ/ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು/ನೌಕರರು ಮತ್ತು ಅವರ ಕುಟುಂಬದ ಒಬ್ಬ ಸದಸ್ಯರನ್ನು ಕರ್ನಾಟಕ ಭಾರತ್ ಗೌರವ್ ದಕ್ಷಿಣ ಕ್ಷೇತ್ರಗಳ ಯಾತ್ರೆ ಯೋಜನೆಯಡಿ ಉಚಿತವಾಗಿ ಯಾತ್ರೆಗೆ ಕಳುಹಿಸಲಾಗುತ್ತದೆ. ವಿಶೇಷ ರೈಲು ಜೂನ್ 23ರಂದು ಹೊರಡುತ್ತಿದ್ದು ಜುಲೈ 1 ರಂದು…

Read More

ಬ್ಯಾಂಕಾಕ್: ಬ್ಯಾಂಕಾಕ್ ನ ಪ್ರಸಿದ್ಧ ಸಾಕುಪ್ರಾಣಿ ಮಾರುಕಟ್ಟೆ ಚಟುಚಾಕ್ ನಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಬೆಂಕಿ ದುರಂತದಲ್ಲಿ 100ಕ್ಕೂ ಅಧಿಕ ಅಂಗಡಿಗಳು ಸುಟ್ಟುಹೋಗಿದ್ದು ಪಂಜರದಲ್ಲಿ ಇರಿಸಲಾಗಿದ್ದ ನಾಯಿ, ಬೆಕ್ಕುಗಳು, ಪಕ್ಷಿಗಳು, ಹಾವುಗಳ ಸಹಿತ ನೂರಾರು ಪ್ರಾಣಿಗಳು ಸಾವನ್ನಪ್ಪಿವೆ ಎಂದು ಪೊಲೀಸರು ಹೇಳಿದ್ದಾರೆ. ಚಟುಚಾಕ್ ಮಾರುಕಟ್ಟೆಯ ಆಲಂಕರಿಕ ಮೀನುಗಳ ವಿಭಾಗದಲ್ಲಿ ಸ್ಥಳೀಯ ಕಾಲಮಾನ ಬೆಳಿಗ್ಗೆ 4 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಿಪ್ರವಾಗಿ 14,000 ಚದರಡಿ ಪ್ರದೇಶದ 100ಕ್ಕೂ ಅಧಿಕ ಸ್ಟಾಲ್ ಗಳಿಗೆ ವ್ಯಾಪಿಸಿದೆ. ಮನುಷ್ಯರು ಸಾವನ್ನಪ್ಪಿದ ಅಥವಾ ಗಾಯಗೊಂಡ ಬಗ್ಗೆ ವರದಿಯಾಗಿಲ್ಲ. ಆದರೆ ಪಂಜರದಲ್ಲಿಟ್ಟಿದ್ದ ಹಲವು ಸಾಕುಪ್ರಾಣಿಗಳು ಸಾವನ್ನಪ್ಪಿವೆ. ಸುಮಾರು 2 ಗಂಟೆಗಳ ಕಾರ್ಯಾಚರಣೆಯ ಬಳಿಕ ಬೆಂಕಿಯನ್ನು ನಿಯಂತ್ರಿಸಲಾಗಿದ್ದು ದುರಂತದ ಬಗ್ಗೆ ತನಿಖೆಗೆ ಆದೇಶಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಟಿಬೆಟಿಯನ್ನರ ಸ್ವ-ನಿರ್ಣಯದ ಹಕ್ಕನ್ನು ಅಂಗೀಕರಿಸುವ ನಿರ್ಣಯವನ್ನು ಕೆನಡಾದ ಸಂಸತ್ತು ಅವಿರೋಧವಾಗಿ ಅಂಗೀಕರಿಸಿದೆ. `ಟಿಬೆಟ್ ನ ಸ್ವಯಂ ನಿರ್ಣಯದ ಹಕ್ಕನ್ನು ಘೋಷಿಸುವ ನಿರ್ಣಯವನ್ನು ಕೆನಡಾ ಸಂಸತ್ತು ಅಂಗೀಕರಿಸಿದೆ ಎಂದು ಹೇಳಲು ರೋಮಾಂಚನವಾಗುತ್ತಿದೆ ಎಂದು ಕೆನಡಾ ಟಿಬೆಟ್ ಸಮಿತಿ ಸಿಟಿಸಿ `ಎಕ್ಸ್’ನಲ್ಲಿ ಪೋಸ್ಟ್ ಮಾಡಿದೆ. ಚೀನಾವು ಟಿಬೆಟಿಯನ್ನರ ವಿರುದ್ಧ ವ್ಯವಸ್ಥಿತ ಸಾಂಸ್ಕೃತಿಕ ಸಮೀಕರಣದ ನೀತಿಯನ್ನು ನಡೆಸುತ್ತಿದೆ ಮತ್ತು ಟಿಬೆಟಿಯನ್ನರು, ಜನರು ಮತ್ತು ರಾಷ್ಟ್ರವಾಗಿ ಸ್ವಯಂ ಹಕ್ಕನ್ನು ಪಡೆದುಕೊಳ್ಳಬಹುದು ಎಂದು ಸದನವು ಅವಿರೋಧ ಒಪ್ಪಿಗೆಯ ಮೂಲಕ ಗುರುತಿಸಿದೆ ಎಂದು ನಿರ್ಣಯದ ಪಠ್ಯದಲ್ಲಿ ಉಲ್ಲೇಖಿಸಲಾಗಿದೆ. `ಟಿಬೆಟಿಯನ್ನರು ತಮ್ಮ ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ನೀತಿಗಳನ್ನು ಯಾವುದೇ ಬಾಹ್ಯ ಶಕ್ತಿಗಳ ಹಸ್ತಕ್ಷೇಪವಿಲ್ಲದೆ ಮುಕ್ತವಾಗಿ ಆಯ್ಕೆ ಮಾಡಲು ಅಧಿಕಾರವನ್ನು ಹೊಂದಿದ್ದಾರೆ. ಈ ಸಬಲೀಕರಣವು ಮುಂದಿನ ಟಿಬೆಟಿಯನ್ ಆಧ್ಯಾತ್ಮಿಕ ಮುಖಂಡ, 14ನೇ ದಲಾಯಿ ಲಾಮಾರ ಉತ್ತರಾಧಿಕಾರಿಯ ಆಯ್ಕೆಯಲ್ಲಿ ಮಧ್ಯಪ್ರವೇಶಿಸದಂತೆ ಚೀನಾವನ್ನು ನಿಷೇಧಿಸುತ್ತದೆ ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ. ಇದೊಂದು ಐತಿಹಾಸಿಕ ಮೈಲಿಗಲ್ಲಾಗಿದೆ. ಇದು 1950ರಲ್ಲಿ ಟಿಬೆಟನ್ನು ಸ್ವಾಧೀನಪಡಿಸಿಕೊಂಡ ಅಂದಿನಿಂದ ಟಿಬೆಟ್ ಐತಿಹಾಸಿಕವಾಗಿ…

Read More

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ (Actor Darshan) ಹಾಗೂ ಅವರ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ದರ್ಶನ್​ ಅವರ ಈ ನಡೆಯಿಂದ ಕಂಗಾಲಾಗಿರುವ ಪತ್ನಿ ವಿಜಯಲಕ್ಷ್ಮೀ, ಇನ್​ಸ್ಟಾಗ್ರಾಂನಲ್ಲಿ ದರ್ಶನ್​ರನ್ನು ಅನ್​ಫಾಲೋ ಮಾಡಿ, ಫೋಟೋಗಳನ್ನು ಡಿಲೀಟ್​ ಮಾಡಿದ್ದಾರೆ. ದರ್ಶನ್​ ಗೆ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ನಡುವೆ ದರ್ಶನ್​ ಅವರ ಕುಟುಂಬ ಸಹ ಈ ಪ್ರಕರಣದಿಂದ ಅಂತರ ಕಾಯ್ದುಕೊಂಡಿದೆ. ಮೀನಾ ತೂಗುದೀಪ್ ತಮ್ಮ ಮತ್ತೋರ್ವ ಪುತ್ರ ದಿನಕರ್ ಜೊತೆ ವಾಸವಿದ್ದಾರೆ. ಸದ್ಯ ತಾಯಿ ಜತೆಗೂ ದರ್ಶನ್ ಜಗಳ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಹುಟ್ಟಿ ಬೆಳೆದ ಮೈಸೂರಿನ ಮನೆಗೆ ಇತ್ತೀಚೆಗೆ ಬಂದೇ ಇಲ್ಲ ಎಂದು ಹೇಳಲಾಗಿದೆ. ನಟ ದರ್ಶನ್ ಬಂಧನದ ಬೆನ್ನಲ್ಲೇ ದರ್ಶನ್ ತಾಯಿಗೆ ಒಂದರ ಮೇಲೊಂದ ಆಘಾತಗಳು ದುರಾಗುತ್ತಿವೆ. ದರ್ಶನ್ ಕುಟುಂಬ ಈ ವಿಷಯವಾಗಿ ಅಂತರ ಕಾಯ್ದುಕೊಂಡಿದ್ದು, ಮಾಧ್ಯಮ ಪ್ರತಿಕ್ರಿಯೆ ನೀಡಲು ತಾಯಿ ಮೀನಾ ತೂಗುದೀಪ್ ನಿರಾಕರಿಸಿದ್ದಾರೆ. ಮೈಸೂರಿನ ಸಿದ್ದಾರ್ಥನಗರದಲ್ಲಿ ವಾಸ ಇರುವ ಮೀನಾ ತೂಗುದೀಪ್ ಮಗ ದರ್ಶನ್…

Read More

ನೀವು ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL) ನಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿದ್ದರೆ, ನಿಮಗಿದೆ ಉತ್ತಮ ಅವಕಾಶ. BHEL IIT ಪಾಸ್ ಅಭ್ಯರ್ಥಿಗಳಿಗೆ ವಿವಿಧ ಟ್ರೇಡ್ ಗಳಲ್ಲಿ ಖಾಲಿ ಹುದ್ದೆಗಳನ್ನು ಪ್ರಕಟಿಸಿದೆ. ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯ ಮೂಲಕ, ಟ್ರೇಡ್ ಅಪ್ರೆಂಟಿಸ್‌ ಶಿಪ್ ಟ್ರೈನಿಗಾಗಿ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲಾಗುತ್ತದೆ. ಇಲ್ಲಿ ಫಿಟ್ಟರ್ ಟರ್ನರ್, ಮೆಷಿನಿಸ್ಟ್, ವೆಲ್ಡರ್, ಎಲೆಕ್ಟ್ರಿಷಿಯನ್, ಕಾರ್ಪೆಂಟರ್ ಸೇರಿದಂತೆ ಹಲವು ನೇಮಕಾತಿ ನಡೆಯಲಿದೆ. ಅಭ್ಯರ್ಥಿಗಳು ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್’ನ ಅಧಿಕೃತ ವೆಬ್‌ ಸೈಟ್ https://hwr.bhel.com/bhelweb/ ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ನೀವು ಈ ದಿನಾಂಕದವರೆಗೆ ಅರ್ಜಿ ಸಲ್ಲಿಸಬಹುದು: ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್’ನ ಈ ನೇಮಕಾತಿಗಾಗಿ ಅರ್ಜಿ ಅನ್ನು ಭರ್ತಿ ಮಾಡಲು ಕೊನೆಯ ದಿನಾಂಕ 14 ಜೂನ್ 2024 ಆಗಿದೆ. ಆದಾಗ್ಯೂ, ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಜೂನ್ 24, 2024 ರವರೆಗೆ ಆನ್‌ ಲೈನ್ ‌ನಲ್ಲಿ ಸಲ್ಲಿಸಬಹುದು.…

Read More

ರಾಜ್ಯದ ಅಗ್ನಿಶಾಮಕ ದಳವು ರಾಷ್ಟ್ರ ಮಟ್ಟದಲ್ಲಿ ಮೆಚ್ಚುಗೆ ಪಡೆದಿದೆ. ಇದಕ್ಕೆ ಕಾರಣರಾಗಿರುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಅಭಿನಂದನೆ ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಕೋರಮಂಗಲದ ಆರ್.ಎ. ಮುಂಡ್ಕುರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತರಬೇತಿ ಅಕಾಡೆಮಿ ಮೈದಾನದಲ್ಲಿ ಮಂಗಳವಾರ ನಡೆದ ‘ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭ ಹಾಗೂ ಅಗ್ನಿಶಾಮಕರ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ’ ಅವರು ಮಾತನಾಡಿದರು. ಪ್ರತಿ ಜಿಲ್ಲೆಯಲ್ಲಿ ಅಗ್ನಿಶಾಮಕದ ದಳದ ಕಚೇರಿ ಇರಬೇಕು ಎಂಬ ಆದೇಶವಿದೆ. ರಾಜ್ಯ ಸರ್ಕಾರ ಪ್ರತಿ ತಾಲ್ಲೂಕಿನಲ್ಲಿ ಕಚೇರಿ ತೆರೆದಿದೆ ಎಂದು ಡಾ.ಜಿ. ಪರಮೇಶ್ವರ್ ತಿಳಿಸಿದರು. ಅಗ್ನಿಶಾಮಕ ಮತ್ತು ತುರ್ತುಸೇವೆ, ಗೃಹ ರಕ್ಷಕ ದಳ, ರಾಜ್ಯ ವಿಪತ್ತು ನಿರ್ವಹಣ ದಳ ಪ್ರಾಮಾಣಿಕವಾಗಿ ಕೆಲಸ ಮಾಡಿ ರಾಜ್ಯದ ಜನಸಮುದಾಯದ ಮೆಚ್ಚುಗೆಗೆ ಪಾತ್ರವಾಗಿದೆ. ಇಂತಹ ಇಲಾಖೆಯ ಕೆಲಸ ಕಾರ್ಯಗಳಿಗೆ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದೀರಿ. ಭವಿಷ್ಯ ಉಜ್ವಲವಾಗಿರಲಿ ಎಂದು ಡಾ.ಜಿ. ಪರಮೇಶ್ವರ್ ಹೇಳಿದರು. ಅವಘಡಗಳಲ್ಲಿ ಬೆಂಕಿ ನಂದಿಸಲು 90 ಮೀಟರ್ ‍ವರೆಗೆ ನೀರು ತಲುಪಿಸಬಹುದಾದ ಏರಿಯಲ್ ಲ್ಯಾಡರ್ ಅಳವಡಿಸಿಕೊಳ್ಳಲಾಗಿದೆ. ಬಹುತೇಕ…

Read More

ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ತಮ್ಮ ಹಿಂಬಾಲಕರು ವ್ಯಾಪಕವಾಗಿ ಹಾಕಿಕೊಂಡಿದ್ದ ‘ಮೋದಿ ಕಾ ಪರಿವಾರ್’ ಅನ್ನು ತೆಗೆದುಹಾಕುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪ್ರಧಾನಿ ಮೋದಿ, “ಚುನಾವಣಾ ಪ್ರಚಾರದ ವೇಳೆ ಭಾರತದಾದ್ಯಂತ ಜನರು ನನ್ನ ಮೇಲಿನ ಪ್ರೀತಿಯ ಸಂಕೇತವಾಗಿ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ‘ಮೋದಿ ಕಾ ಪರಿವಾರ್’ ಅನ್ನು ಅಳವಡಿಸಿಕೊಂಡಿದ್ದಾರೆ. ನಾನು ಅದರಿಂದ ಸಾಕಷ್ಟು ಬಲ ಪಡೆದುಕೊಂಡಿದ್ದೇನೆ. ಭಾರತದ ಜನರು ಸತತ ಮೂರನೇ ಬಾರಿಗೆ ಎನ್ಡಿಎಗೆ ಬಹುಮತವನ್ನು ನೀಡಿದ್ದಾರೆ. ಇದು ಒಂದು ರೀತಿಯ ದಾಖಲೆಯಾಗಿದ್ದು ನಮ್ಮ ರಾಷ್ಟ್ರದ ಸುಧಾರಣೆಗಾಗಿ ಕೆಲಸ ಮಾಡಲು ನಮಗೆ ಜನಾದೇಶ ನೀಡಿದ್ದಾರೆ”, ಎಂದು ಪೋಸ್ಟ್‌ ಮಾಡಿದ್ದಾರೆ. “ನಾವೆಲ್ಲರೂ ಒಂದೇ ಕುಟುಂಬ ಎಂಬ ಸಂದೇಶವನ್ನು ಪರಿಣಾಮಕಾರಿಯಾಗಿ ರವಾನಿಸಿದ ಭಾರತದ ಜನರಿಗೆ ನಾನು ಮತ್ತೊಮ್ಮೆ ಧನ್ಯವಾದ ಹೇಳುತ್ತೇನೆ. ಇದೀಗ ನಿಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಿಂದ ‘ಮೋದಿ ಕಾ ಪರಿವಾರ್’ ಅನ್ನು ತೆಗೆದುಹಾಕುವಂತೆ ವಿನಂತಿಸುತ್ತೇನೆ. ನೀವು ಇದನ್ನು ಬದಲಾಯಿಸಬಹುದು. ಆದರೆ ಭಾರತದ ಪ್ರಗತಿಗಾಗಿ…

Read More

ಮರದ ಕೊಂಬೆ ಕಡಿಯುವಾಗ ನಡುವೆ ಹಾದು ಹೋಗಿದ್ದ ವಿದ್ಯುತ್ ತಂತಿಯ ಶಾಕ್ ತಗುಲಿ ಕಾರ್ಮಿಕ ಮೃತಪಟ್ಟ ಘಟನೆ ನಡೆದಿದೆ. ಮೃತ ಕಾರ್ಮಿಕನನ್ನು ಚಂದ್ರಪ್ಪ (45) ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕುನ್ನಹಳ್ಳಿ ಗ್ರಾಮದಲ್ಲಿ ಸಿಲ್ವರ್ ಮರದ ಕೊಂಬೆಗಳನ್ನು ಕತ್ತರಿಸುವಾಗ ಘಟನೆ ನಡೆದಿದೆ. ಸಿಲ್ವರ್ ಮರದ ಮಧ್ಯೆ ವಿದ್ಯುತ್ ತಂತಿ ಹಾದು ಹೋಗಿತ್ತು. ಆದರೆ ವಿದ್ಯುತ್ ತಂತಿಯನ್ನು ಗಮನಿಸದೇ ಮರದ ಕೊಂಬೆ ಕಡಿಯುತ್ತಿರುವಾಗ ವಿದ್ಯುತ್ ಪ್ರವಹಿಸಿ ಮರದಲ್ಲೇ ಚಂದ್ರಪ್ಪ ಸಾವನ್ನಪ್ಪಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ವಿದೇಶಿಗರು ಭಾರತಕ್ಕೆ ಭೇಟಿ ನೀಡಿದಾಗ ಹಲವರಿಗೆ ಕಹಿ ಅನುಭವಗಳು ಆಗಿ ದೇಶದ ಬಗ್ಗೆ ಬಿನ್ನ ಅಭಿಪ್ರಾಯಗಳು ಬಂದಿರುವ ಹಲವು ಘಟನೆಗಳು ಈ ಹಿಂದೆ ನಡೆದಿದೆ. ಅದರಂತೆಯೇ ರಾಜಸ್ಥಾನದ ಜೈಪುರದಲ್ಲಿ ಯು.ಎಸ್​ ಮಹಿಳೆಗೆ ಚಿನ್ನದ ಆಭರಣ ಎಂದು ನಂಬಿಸಿ 300 ರೂ. ನಕಲಿ ಒಡವೆಯನ್ನು 6 ಕೋಟಿ ರೂಪಾಯಿಗೆ ಮಾರಾಟ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಅಮೆರಿಕದ ಮಹಿಳೆಯೊಬ್ಬರು ₹ 300 ಮೌಲ್ಯದ ಕೃತಕ ಆಭರಣಗಳನ್ನು ₹ 6 ಕೋಟಿಗೆ ಖರೀಸಿ ವಂಚನೆಗೆ ಒಳಗಾಗಿದ್ದಾರೆ. ರಾಜಸ್ಥಾನದ ಜೈಪುರದ ಜೊಹ್ರಿ ಬಜಾರ್‌ ನಲ್ಲಿರುವ ಅಂಗಡಿಯೊಂದರಲ್ಲಿ ಅಮೆರಿಕದ ಪ್ರಜೆಯಾದ ಚೆರಿಶ್ ಚಿನ್ನದ ಪಾಲಿಶ್ ಇರುವ ಬೆಳ್ಳಿ ಆಭರಣಗಳನ್ನು ಖರೀದಿಸಿ ಮೋಸ ಹೋಗಿದ್ದಾರೆ. ಈ ವರ್ಷ ಏಪ್ರಿಲ್‌ನಲ್ಲಿ ಯುಎಸ್‌ನಲ್ಲಿ ನಡೆದ ಪ್ರದರ್ಶನದಲ್ಲಿ ಆಭರಣಗಳನ್ನು ಪ್ರದರ್ಶಿಸಿದಾಗ, ಅದು ನಕಲಿ ಎಂದು ತಿಳಿದು ಬಂದಿದೆ. ಚೆರಿಶ್ ಭಾರತಕ್ಕೆ ಬಂದು ಅಂಗಡಿ ಮಾಲೀಕ ಗೌರವ್ ಸೋನಿಯನ್ನು ಪ್ರಶ್ನಿಸಿದ್ದಾಳೆ. ಅಂಗಡಿ ಮಾಲೀಕ ಆರೋಪಗಳನ್ನು ತಳ್ಳಿಹಾಕಿದ ನಂತರ, ಯುಎಸ್ ಮಹಿಳೆ ಜೈಪುರದಲ್ಲಿ ಪೊಲೀಸ್ ದೂರು…

Read More