Author: admin

ಭಾರತದ ನ್ಯಾಶನಲ್ ರೈಫಲ್ ಅಸೋಸಿಯೇಶನ್ (NRAI) ಪ್ಯಾರಿಸ್ ಒಲಿಂಪಿಕ್ಸ್- 2024ಕ್ಕೆ 15 ಸದಸ್ಯರುಗಳನ್ನು ಒಳಗೊಂಡ ಭಾರತೀಯ ರೈಫಲ್ ಹಾಗೂ ಪಿಸ್ತೂಲ್ ತಂಡವನ್ನು ಮಂಗಳವಾರ ಪ್ರಕಟಿಸಿದೆ. ಎರಡು ಬಾರಿಯ ಒಲಿಂಪಿಯನ್ ಮನು ಭಾಕರ್ ಮಾತ್ರ ಒಂದಕ್ಕಿಂತ ಹೆಚ್ಚು ವೈಯಕ್ತಿಕ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದಾರೆ. ಮನು ಮಹಿಳೆಯರ 10 ಮೀ. ಏರ್ ಪಿಸ್ತೂಲ್ ಹಾಗೂ ಮಹಿಳೆಯರ 25 ಮೀ. ಪಿಸ್ತೂಲ್ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ. ತಂಡವು 8 ರೈಫಲ್ ಹಾಗೂ 7 ಪಿಸ್ತೂಲ್ ಶೂಟರ್ ಗಳನ್ನು ಒಳಗೊಂಡಿದೆ. ವಿಶ್ವ ಚಾಂಪಿಯನ್ ರುದ್ರಾಂಕ್ಷ್ ಪಾಟೀಲ್ ಹಾಗೂ ವಿಶ್ವ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಪದಕ ವಿಜೇತೆ ಮೆಹುಲಿ ಘೋಷ್ ಹಾಗೂ ಕಂಚಿನ ಪದಕ ವಿಜೇತ ಅಖಿಲ್ ಸೆಹೊರನ್ ಸಹಿತ ಕೆಲವು ಪ್ರಮುಖ ಶೂಟರ್ಗಳು ಒಲಿಂಪಿಕ್ಸ್ನಿಂದ ವಂಚಿತರಾಗಿದ್ದಾರೆ. ತಿಲೋತ್ತಮ ಸೇನ್, ಶ್ರೀಯಾಂಕಾ ಸದಂಗಿ ಹಾಗೂ ವರುಣ್ ತೋಮರ್ ಒಲಿಂಪಿಕ್ಸ್ ಕೋಟಾ ಗೆದ್ದಿದ್ದಾರೆ. ಭಾರತವು ಮುಂಬರುವ ಒಲಿಂಪಿಕ್ ಗೇಮ್ಸ್ ನಲ್ಲಿ ಶೂಟಿಂಗ್ನಲ್ಲಿ 21 ಕೋಟಾಗಳನ್ನು ಗಿಟ್ಟಿಸಿಕೊಂಡು ದಾಖಲೆ ಬರೆದಿದೆ. ► ಪ್ಯಾರಿಸ್ ಒಲಿಂಪಿಕ್ಸ್-2024ಕ್ಕೆ ಭಾರತದ…

Read More

ರಾಂಚಿ: ಭೂ ಹಗರಣ ಪ್ರಕರಣದಲ್ಲಿ ಜೈಲಿನಲ್ಲಿರುವ ಮಾಜಿ ಸಿಎಂ ಹೇಮಂತ್ ಸೊರೆನ್ ಅವರ ಪತ್ನಿ ಕಲ್ಪನಾ ಸೊರೆನ್ ಅವರು, ಗಂಡೇ ಕ್ಷೇತ್ರದಿಂದ ಜಾರ್ಖಂಡ್ ವಿಧಾನಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸ್ಪೀಕರ್ ರವೀಂದ್ರ ನಾಥ್ ಮಹತೋ ಕಲ್ಪನಾ ಸೊರೆನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂಪೈ ಸೊರೆನ್ ಮತ್ತು ಇತರ ಜೆಎಂಎಂ ನಾಯಕರು ಉಪಸ್ಥಿತರಿದ್ದರು. ಗಂಡೇ ಉಪಚುನಾವಣೆಯಲ್ಲಿ ಕಲ್ಪನಾ ಸೊರೆನ್ ಅವರು ಬಿಜೆಪಿಯ ದಿಲೀಪ್ ಕುಮಾರ್ ವರ್ಮಾ ಅವರನ್ನು 27,149 ಮತಗಳ ಅಂತರದಿಂದ ಸೋಲಿಸಿದರು. ಜೆಎಂಎಂ ಶಾಸಕ ಸರ್ಫರಾಜ್ ಅಹ್ಮದ್ ರಾಜೀನಾಮೆ ನೀಡಿದ ನಂತರ ಈ ಸ್ಥಾನ ತೆರವಾಗಿತ್ತು. ಮೇ 20 ರಂದು ಮತದಾನ ನಡೆದಿದ್ದು, 3.16 ಲಕ್ಷ ಅರ್ಹ ಮತದಾರರಲ್ಲಿ 2.17 ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು. ಹೇಮಂತ್ ಸೊರೆನ್ ಅವರನ್ನು ಜನವರಿ 31 ರಂದು ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಕೇಸ್ ‌ನಲ್ಲಿ ಇಡಿ ಬಂಧಿಸಿತ್ತು. ಬಂಧನಕ್ಕೂ ಮುನ್ನ ಹೇಮಂತ್…

Read More

ಬೆಂಗಳೂರು: ‘ಎಲ್ಲರಿಗೂ ಕಾನೂನು ಒಂದೇ, ನಟ ದರ್ಶನ್ ಗೂ ಕಾನೂನು ಒಂದೇ, ಪರಮೇಶ್ವರ್ ಗೂ ಒಂದೇ ಕಾನೂನು. ಯಾರು ಸಹ ಕಾನೂನು ಕೈಗೆತ್ತಿಕೊಳ್ಳಬಾರದು’ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟ ದರ್ಶನ್ ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಬಂಧಿಸಲಾಗಿದೆ. ತನಿಖೆಯಲ್ಲಿ ಬರುವ ಅಂಶಗಳನ್ನು ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳುತ್ತಾರೆ. ಯಾರು ಸಹ ಕಾನೂನು ಕೈಗೆತ್ತಿಕೊಳ್ಳಬಾರದು ಎಂದರು. ರೇಣುಕಾಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ನಟ ದರ್ಶನ್ ಅವರ ಆಪ್ತೆ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದ ಎನ್ನಲಾಗಿದೆ. ಈ ಬಗ್ಗೆ ದರ್ಶನ್ ದೂರು ಕೊಡಬಹುದಾಗಿತ್ತು. ಪೊಲೀಸರು ಕೂಡಲೇ ಕ್ರಮ ತೆಗೆದುಕೊಳ್ಳುತ್ತಿದ್ದರು. ಅದನ್ನು ಬಿಟ್ಟು, ರೇಣುಕಾಸ್ವಾಮಿಯನ್ನು ಕರೆದುಕೊಂಡು ಬಂದು ಹೊಡೆದು ಸಾಯಿಸಿದ್ದಾರೆ ಎಂಬ ಮಾಹಿತಿ ಇದೆ. ದೂರು ಕೊಟ್ಟಿದ್ದರೆ ಇದೆಲ್ಲವನ್ನು ತಡೆಯಲು ಅವಕಾಶವಿತ್ತು. ಆದರೆ, ಘಟನೆ ನಡೆದು ಹೋಗಿದೆ. ಯಾರು ಏನು ಮಾಡುವುದಕ್ಕೆ ಆಗುವುದಿಲ್ಲ. ಕಾನೂನು ಪ್ರಕಾರ ಏನು ಕ್ರಮ ತೆಗೆದುಕೊಳ್ಳಬೇಕೋ…

Read More

ತಮಿಳುನಾಡಿನ ದೇವಸ್ಥಾನದಿಂದ ಕಳ್ಳತನವಾಗಿದ್ದ 500 ವರ್ಷಗಳಷ್ಟು ಹಳೆಯದಾದ ಸಂತ ತಿರುಮಂಕೈ ಆಳ್ವರ ಕಂಚಿನ ವಿಗ್ರಹವನ್ನು ಭಾರತಕ್ಕೆ ಹಿಂದಿರುಗಿಸಲು ಬ್ರಿಟನ್‍ ನ ಪ್ರತಿಷ್ಠಿತ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಒಪ್ಪಿಕೊಂಡಿದೆ ಎಂದು ವರದಿ ತಿಳಿಸಿದೆ. ಆಕ್ಸ್ ‌ಫರ್ಡ್ ವಿಶ್ವವಿದ್ಯಾನಿಲಯದ ಕೌನ್ಸಿಲ್ ಅಶ್ಮೋಲಿಯನ್ ಮ್ಯೂಸಿಯಂನಿಂದ 15 ನೇ ಶತಮಾನದ ಸಂತ ತಿರುಮಂಕೈ ಆಳ್ವಾರ ಕಂಚಿನ ಶಿಲ್ಪವನ್ನು ಹಿಂದಿರುಗಿಸಲು ಭಾರತೀಯ ಹೈಕಮಿಷನ್‍ ನ ಮನವಿಯನ್ನು ವಿಶ್ವವಿದ್ಯಾಲಯವು ಒಪ್ಪಿಕೊಂಡಿದೆ. 60 ಸೆಂ.ಮೀ ಎತ್ತರದ ಸಂತ ತಿರುಮಂಕೈ ಆಳ್ವರ ಪ್ರತಿಮೆಯನ್ನು ಆಕ್ಸ್‍ ಫರ್ಡ್ ವಿಶ್ವವಿದ್ಯಾನಿಲಯದ ಅಶ್ಮೋಲಿಯನ್ ಮ್ಯೂಸಿಯಂ 1967 ರಲ್ಲಿ ಡಾ ಜೆ ಆರ್ ಬೆಲ್ಮಾಂಟ್ (1886-1981) ಎಂಬ ಸಂಗ್ರಾಹಕನ ಸಂಗ್ರಹದಿಂದ ಹರಾಜಿನಲ್ಲಿ ಆಕ್ಸ್ ಫರ್ಡ್ ಪಡೆದುಕೊಂಡಿತ್ತು. ಪ್ರಪಂಚದ ಅತ್ಯಂತ ಪ್ರಸಿದ್ಧವಾದ ಕೆಲವು ಕಲೆ ಮತ್ತು ಪುರಾತತ್ತ್ವ ಶಾಸ್ತ್ರದ ಕಲಾಕೃತಿಗಳನ್ನು ಹೊಂದಿರುವ ವಸ್ತುಸಂಗ್ರಹಾಲಯವು, 1967 ರಲ್ಲಿ ಈ ವಿಗ್ರಹವನ್ನು ಸದುದ್ದೇಶದಿಂದ ಇಲ್ಲಿ ಇರಿಸಿಕೊಂಡಿತ್ತು ಎಂದು ವಿಶ್ವವಿದ್ಯಾಲಯ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು ಎಂಬ ಗಾದೆ ಕೇಳಿರಬಹುದು. ಅಂತೆಯೇ ಈ ಗಾದೆಯ ಸಲುವಾಗಿ ಒಂದು ಘಟನೆ ನಡೆದಿದೆ. ಹೌದು, ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ತೇಲುತ್ತಿದೆಯೆಂದು ಸ್ಥಳೀಯರು ಪೊಲೀಸರನ್ನು ಕರೆಸಿದ್ದು, ಕೂಡಲೇ ನೀರಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಪೊಲೀಸರು ಮೇಲಕ್ಕೆತ್ತುವ ಸಂದರ್ಭದಲ್ಲಿ ದಿಢೀರನೇ ಆ ವ್ಯಕ್ತಿ ಎಚ್ಚರಗೊಂಡಿದ್ದಾನೆ. ಈ ಅಚ್ಚರಿಯ ಪ್ರಕರಣ ತೆಲಂಗಾಣದ ಹನುಮಕೊಂಡ ಎಂಬಲ್ಲಿ ನಡೆದಿದ್ದು, ಕಲ್ಲಿನ ಕೆಲಸ ಮಾಡುವ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕೆರೆಯ ನೀರಿನಲ್ಲಿಯೇ ಹಾಯಾಗಿ ಮಲಗಿರುತ್ತಾನೆ. ಸುಮಾರು ಹೊತ್ತಿನಿಂದ ದೇಹದಲ್ಲಿ ಯಾವುದೇ ಚಲನವಲನ ಇಲ್ಲದಿರುವುದನ್ನು ಗಮನಿಸಿದ ಅಲ್ಲಿನ ಸ್ಥಳೀಯರು ಈ ವ್ಯಕ್ತಿ ಸತ್ತು ಬಿದ್ದಿದ್ದಾನೆ ಎಂದು ತಕ್ಷಣ ಪೊಲೀಸರಿಗೆ ಮಾಹಿತಿಯನ್ನು ತಿಳಿಸಿದ್ದಾರೆ. ಮಾಹಿತಿ ತಿಳಿದ ಪೊಲೀಸರು ದೇಹವಿರುವ ಸ್ಥಳಕ್ಕೆ ಬಂದಿದ್ದಾರೆ. ಕೆರೆಯಿಂದ ದೇಹವನ್ನು ಪೊಲೀಸರು ಮೇಲಕ್ಕೆತ್ತುವ ಸಂದರ್ಭದಲ್ಲಿ ಆ ವ್ಯಕ್ತಿ ಎದ್ದು ನಿಲ್ಲುತ್ತಾನೆ. ಆತ ಎಚ್ಚರಗೊಂಡದ್ದನ್ನು ಕಂಡು ಅಲ್ಲಿದ್ದ ಎಲ್ಲರೂ ಒಮ್ಮೆಗೆ ಶಾಕ್‌ ಆಗುತ್ತಾರೆ. ನಂತರ ಇದು ಕುಡಿದ ಮತ್ತಿನಲ್ಲಿ ನಡೆದ ಎಡವಟ್ಟು ಎಂದು ಪೊಲೀಸರಿಗೆ…

Read More

ಕೊಪ್ಪಳ: ಈಗಿನ ಎನ್ ಡಿಎ ಸರಕಾರ ಬಹಳ ದಿನ ಉಳಿಯೋದಿಲ್ಲ. ಇಂಡಿಯಾ ಸರಕಾರ ಬರುವ ಕಾಲ ಹತ್ತಿರವಿದೆ ಎಂದು ಸಚಿವ ಶಿವರಾಜ ತಂಗಡಗಿ ಭವಿಷ್ಯ ನುಡಿದಿದ್ದಾರೆ. ‘ಸಾಮಾಜಿಕ ಪರಿಕಲ್ಪನೆ, ಡಾ. ಬಾಬಾ ಸಾಹೇಬ ಅಂಬೇಡ್ಕರರ ಸಂವಿಧಾನ ಒಪ್ಪಿಕೊಂಡಿರುವ ಆಂಧ್ರದ ಚಂದ್ರಬಾಬು ನಾಯ್ಡು, ಬಿಹಾರದ ನಿತೀಶ್ ಕುಮಾರ್ ಇದ್ದಾರೆ. ಯಾವ ಸಂದರ್ಭದಲ್ಲಿ ಬೇಕಾದರೂ ಈಗಿನ ಸರಕಾರ ಬೀಳಬಹುದು. ಮಮತಾ ಬ್ಯಾನರ್ಜಿ ಸಹ ಈಗ ಸರಕಾರ ಅಸ್ಥಿರತೆಯ ಬಗ್ಗೆ ಹೇಳಿದ್ದಾರೆ. ಅದು ನಿಜವಾಗಬಹುದು’ ಎಂದಿದ್ದಾರೆ. “ಮೂರನೆಯ ಬಾರಿ ಮೋದಿ ಪ್ರಧಾನಿಯಾಗಿದ್ದಾರೆ ಶುಭಾಶಯಗಳು. ನರೇಂದ್ರ ಮೋದಿಯವರಿಗೆ ಕಡಿಮೆ ಸ್ಥಾನ ಬರುತ್ತವೆ ಎಂದು ಮೊದಲೇ ಹೇಳಿದ್ದೆ. ಈಗ ಕಾಂಗ್ರೆಸ್ ಪ್ರಬಲ ವಿರೋಧ ಪಕ್ಷವಾಗಿದೆ. ದೇಶದಲ್ಲಿ ವಿರೋಧ ಪಕ್ಷವೇ ಇಲ್ಲದಂತೆ ಮಾಡುತ್ತೇನೆ ಎಂದು ಮೋದಿ ಹೇಳಿದ್ದರು. ಈ ಬಾರಿ ಮೋದಿ ತಪ್ಪು ಮಾಡುವುದಕ್ಕೆ ಬಿಡುವುದಿಲ್ಲ. ರಾಹುಲ್ ಗಾಂಧಿ ಈಗ ವಿರೋಧ ಪಕ್ಷದ ನಾಯಕರಾಗಿದ್ದಾರೆ. ರಾಹುಲ್ ಗಾಂಧಿಯವರನ್ನು ಪಪ್ಪು ಎಂದು ಅಪಹಾಸ್ಯ ಮಾಡಿದ್ದರು” ಎಂದರು. “ಬಿಜೆಪಿಯವರಿಗೆ ರಾಮ ಹಾಗೂ ಹನುಮ…

Read More

ರಾಜ್ಯ ಸರ್ಕಾರ ಕಮ್ಯುನಲ್ ಗವರ್ನಮೆಂಟ್ ಆಗಿ ಬದಲಾಗಿದೆ. ಈ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಅರಾಜಕತೆ, ಗೂಂಡಾಗಿರಿ, ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೆ ವೇಳೆಯಲ್ಲಿ ಗೂಂಡಾಗಳು ನಿರ್ಭಯರಾಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ವೇಳೆ ಮಂಗಳೂರಿನಲ್ಲಿ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರ ಮತೀಯ ಚಟುವಟಿಕೆಗಳಿಗೆ ಕುಮಕ್ಕು ನೀಡುತ್ತಿದೆ ಎಂದು ಕಿಡಿಕಾರಿದರು. ಯಾವುದೇ ಅನುಮತಿ ಪಡೆಯದೆ ಒಂದಷ್ಟು ಜನ ಸೇರಿಕೊಂಡು ರಸ್ತೆಯಲ್ಲಿ ನಮಾಜ್ ಮಾಡುತ್ತಾರೆ. ನಮಾಜು ಮಾಡುವುದು ರಸ್ತೆಯಲ್ಲಿ ಅಲ್ಲ. ಅದಕ್ಕಾಗಿಯೇ ಮಸೀದಿ ಇದೆ. ಹೀಗೆ ರಸ್ತೆಯಲ್ಲಿ ನಮಾಜು ಮಾಡುವವರ ಮೇಲೆ ಪೊಲೀಸರು ಸುಮೊಟೊ ಕೇಸು ದಾಖಲಿಸಿದರೆ ಅಂತ ಪೊಲೀಸರನ್ನು ಕಡ್ಡಾಯ ರಜೆ ಮೇಲೆ ಕಳಿಸುತ್ತಾರೆ. ರಾಜ್ಯ ಸರ್ಕಾರ ಒಂದು ಕೋಮುನವರ ಮೇಲೆ ದಾಖಲಾಗಿರುವ ಎಲ್ಲಾ ಕೇಸುಗಳನ್ನು ವಾಪಾಸ್ ತೆಗೆದುಕೊಳ್ಳುತ್ತಿದೆ. ಇದೇ…

Read More

ಮಾಸ್ಕೋ: ರಶ್ಯದ ಎಸ್ಯು-34 ಬಾಂಬರ್ ವಿಮಾನ ಕಾಕಸಸ್ ಪರ್ವತ ಪ್ರದೇಶಗಳಲ್ಲಿ ಅಪಘಾತಕ್ಕೆ ಒಳಗಾಗಿದ್ದು ವಿಮಾನದಲ್ಲಿದ್ದ ಸಿಬ್ಬಂದಿ ಮೃತಪಟ್ಟಿರುವುದಾಗಿ ರಕ್ಷಣಾ ಇಲಾಖೆಯನ್ನು ಉಲ್ಲೇಖಿಸಿ ರಶ್ಯದ ಆರ್ಐಎ ಸುದ್ದಿಸಂಸ್ಥೆ ಮಂಗಳವಾರ ವರದಿ ಮಾಡಿದೆ. ಉತ್ತರ ಒಸ್ಸೆಟಿಯಾ-ಅಲಾನಿಯಾ ಪ್ರದೇಶದಲ್ಲಿ ವಾಡಿಕೆಯ ತರಬೇತಿ ಹಾರಾಟದಲ್ಲಿದ್ದ ರಶ್ಯ ವಾಯುಪಡೆಯ ಎಸ್ಯು-34 ಬಾಂಬರ್ ವಿಮಾನ ಪತನವಾಗಿದ್ದು ದುರಂತಕ್ಕೆ ತಾಂತ್ರಿಕ ವೈಫಲ್ಯ ಕಾರಣವಾಗಿರಬಹುದು. ಅಪಘಾತದಲ್ಲಿ ವಿಮಾನದಲ್ಲಿದ್ದ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಅಪಘಾತದ ಪ್ರದೇಶದಲ್ಲಿ ಯಾವುದೇ ಹಾನಿ ಅಥವಾ ನಷ್ಟ ಸಂಭವಿಸಿಲ್ಲ ಎಂದು ವರದಿ ಹೇಳಿದೆ. ವಿಮಾನದಲ್ಲಿ ಎಷ್ಟು ಸಿಬ್ಬಂದಿಗಳಿದ್ದರು ಎಂಬ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಸೋವಿಯತ್ ಒಕ್ಕೂಟ ಮೂಲದ ಸೂಪರ್ಸಾನಿಕ್ ಮಧ್ಯಮ ಶ್ರೇಣಿಯ ಬಾಂಬರ್ ವಿಮಾನ ಇದು ಎಂದು ವರದಿ ಮಾಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಸಾಮಾನ್ಯ ವ್ಯಕ್ತಿಯೊಬ್ಬನ ಕೊಲೆ ಪ್ರಕರಣದಲ್ಲಿ ಸಿಕ್ಕಿ ಹಾಕಿಕೊಂಡಿರುವ ಖ್ಯಾತ ಸಿನಿಮಾ ನಟ ದರ್ಶನ್ ಅವರನ್ನು ನ್ಯಾಯಾಲಯ ಮುಂದಿನ ಏಳು ದಿನಗಳ ತನಕ ಪೊಲೀಸ್ ಕಸ್ಟಡಿಗೆ ನೀಡಿದೆ. ನೆನ್ನೆ ಸಂಜೆ ನ್ಯಾಯಾಲಯಕ್ಕೆ ದರ್ಶನ್ ಮತ್ತು ಟೀಂ ಅನ್ನು ಹಾಜರುಪಡಿಸಲಾಗಿದೆ. ಈ ವೇಳೆ ವಿಚಾರಣೆಯನ್ನು ನ್ಯಾಯಾಧೀಶರು ನಡೆಸಿರುತ್ತಾರೆ. ಪೊಲೀಸರಿಂದ ನಿಮಗೆ ಏನಾದರೂ ತೊಂದರೆ ಆಯಿತೇ..? ಎಂದು ಮೊದಲಿಗೆ ಕೇಳಿದ್ದಾರೆ. ಬಳಿಕ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಂದಷ್ಟು ಪ್ರಶ್ನೆಗಳನ್ನು ಕೇಳಿದ್ದಾರೆ. ಈ ವೇಳೆ ದರ್ಶನ್ ಕೈಕಟ್ಟಿ ನ್ಯಾಯಾಧೀಶರ ಎದುರು ನಿಂತಿದ್ದರು. ಮಾತ್ರವಲ್ಲ ಕಣ್ಣೀರು ಹಾಕಿದರು. ಇದಾದ ಬಳಿಕ ನ್ಯಾಯಾಲಯ ತನ್ನ ಆದೇಶವನ್ನು ಪ್ರಕಟಿಸುತ್ತೆ, ಮುಂದಿನ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಬೇಕು ಎಂದು ಸೂಚಿಸುತ್ತೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂಪೂರ್ಣ ಸತ್ಯಾಸತ್ಯತೆ ತಿಳಿದು ಬರಬೇಕು. ಇದಕ್ಕೆ ಸಮಗ್ರ ತನಿಖೆಯ ಅವಶ್ಯಕತೆ ಇದೆ ಎಂದು ನ್ಯಾಯಾಲಯ ಅಭಿಪ್ರಾಯ ಪಡುತ್ತದೆ. ಮಾತ್ರವಲ್ಲ ನಟ ದರ್ಶನ್ ಪ್ರಭಾವಿಯಾಗಿದ್ದು ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇದೆ ಎಂದು ಇದೇ ವೇಳೆ ನ್ಯಾಯಾಲಯ ತಿಳಿಸಿದೆ. ಸದ್ಯ…

Read More

ಬೆಂಗಳೂರು: ನಟ ದರ್ಶನ್ ಮತ್ತು ಸಹಚರರಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪೊಲೀಸರ ಮನವಿ ಮೇರೆಗೆ ಆರೋಪಿಗಳನ್ನು 6 ದಿನ ಪೊಲೀಸ್ ಕಸ್ಟಡಿಗೆ ನೀಡಿ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ಹೊರಡಿಸಿದೆ. ದರ್ಶನ್ ಹಾಗೂ ಸಹಚರರನ್ನು 14 ದಿನ ತಮ್ಮ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ. ರೇಣುಕಾಸ್ವಾಮಿಯನ್ನು ಅಪಹರಣ ಮಾಡಿ ಕರೆದುಕೊಂಡು ಹೋಗಿದ್ದು, ಕೊಲೆಯಾದ ಸ್ಥಳ, ಶವ ಎಸೆದ ಜಾಗದಲ್ಲಿ ಮಹಜರು ನಡೆಸಬೇಕಿದೆ. ಮೊಬೈಲ್ ಡೇಟಾ ಸಂಗ್ರಹಿಸಬೇಕು. ಆಯುಧ ಜಪ್ತಿ ಮಾಡಬೇಕಿದೆ. ದರ್ಶನ್ ಸೆಲೆಬ್ರಿಟಿ ಆಗಿರುವುದರಿಂದ ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇದ್ದು, ಅವರನ್ನು 14 ದಿನ ಕಸ್ಟಡಿಗೆ ನೀಡಬೇಕೆಂದು ಪೊಲೀಸರು ಮನವಿ ಮಾಡಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More