Subscribe to Updates
Get the latest creative news from FooBar about art, design and business.
- ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
- ತಿಪಟೂರು: ಜೂನ್ 1ರಿಂದ ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
- ತುಮಕೂರು: ವಾಟರ್ ಟ್ಯಾಂಕ್ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು, ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
- ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
- ತುರುವೇಕೆರೆ: ಜೂ. 4ರಂದು ಉಚಿತ ಯೋಗ, ಪ್ರಾಣಾಯಾಮ ತರಗತಿಗಳ ಉದ್ಘಾಟನೆ
- ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
- ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ
Author: admin
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ SPP ರಾಜಿನಾಮೆ ನೀಡಿದ್ದಾರೆ. ಪ್ರಜ್ವಲ್ ರ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದ ಪರವಾಗಿ ಕೋರ್ಟ್ನಲ್ಲಿ ವಾದಿಸಲು ರಾಜ್ಯ ಸರ್ಕಾರ ಜಾಯ್ನಾ ಕೊಥಾರಿ ಅವರನ್ನು ಹೆಚ್ಚುವರಿ ಎಸ್ ಪಿಪಿಯಾಗಿ ನೇಮಕ ಮಾಡಿತ್ತು. ಇತ್ತೀಚೆಗಷ್ಟೇ ಇದೇ ಪ್ರಕರಣಕ್ಕೆ ರಾಜ್ಯ ಸರ್ಕಾರ ನೇಮಿಸಿದ್ದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಬಿಎನ್ ಜಗದೀಶ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಇದೀಗ ಜಾಯ್ನಾ ಕೊಥಾರಿ ಅವರು ಇಂದು ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದು, ಅಚ್ಚರಿಗೆ ಕಾರಣವಾಗಿದೆ. ಪ್ರಜ್ವಲ್ ರೇವಣ್ಣ ಪ್ರಕರಣಗಳಲ್ಲಿ ವಿಶೇಷ ತನಿಖಾ ತಂಡ (SIT) ಪರ ವಾದಿಸಲು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (SPP) ಆಗಿ ಬಿಎನ್ ಜಗದೀಶ ಅವರನ್ನು ರಾಜ್ಯ ಸರ್ಕಾರ ನೇಮಿಸಿತ್ತು. ಬಳಿಕ ವಿಚಾರಣಾ ನ್ಯಾಯಾಲಯ ಮತ್ತು ಸೆಷನ್ಗಳ ಮುಂದೆ ಪ್ರಾಸಿಕ್ಯೂಷನ್ನ್ನು ಸಮರ್ಥಿಸಲು ರಾಜ್ಯ ಸರ್ಕಾರವು, ಹಿರಿಯ ವಕೀಲರಾದ ಅಶೋಕ್ ಎನ್ ನಾಯಕ್ ಮತ್ತು ಜಾಯ್ನಾ ಕೊಥಾರಿ ಅವರನ್ನು ಹೆಚ್ಚುವರಿ ಎಸ್ಪಿಪಿಗಳಾಗಿ ಸರ್ಕಾರ ನೇಮಿಸಿತ್ತು. ಇದರ…
ತುಮಕೂರು: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ವ್ಯಕ್ತಿಗೆ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ. (ಪೋಕ್ಸೋ) ಜೀವಾವಧಿ(ಸಾಯುವವರೆಗೂ) ಶಿಕ್ಷೆ ಮತ್ತು 1 ಲಕ್ಷದ ಐದು ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ಕೊರಟಗೆರೆ ತಾಲೂಕಿನ ಕೋಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ನೊಂದ ಬಾಲಕಿಯ ತಂದೆ 5 ವರ್ಷಗಳ ಹಿಂದೆ ಮೃತಪಟ್ಟ ಕಾರಣ, ತಾಯಿ, ತಮ್ಮ, ತಂಗಿ ಜೊತೆಗೆ ತನ್ನ ತಾತನ ಮನೆಯಲ್ಲಿ ವಾಸವಿದ್ದಳು. ಮೇ 2022ರಲ್ಲಿ ಈ ಘಟನೆ ನಡೆದಿದ್ದು, ಶನಿವಾರ ದಿನ ಬಾಲಕಿ ಬಸ್ ಸಿಗದ ಕಾರಣ ಶಾಲೆಗೆ ಹೋಗಲು ಸಾಧ್ಯವಾಗದೇ ಮನೆಯಲ್ಲಿ ಒಬ್ಬಳೇ ಇದ್ದಳು. ಮಧ್ಯಾಹ್ನ ಅಡುಗೆ ಮಾಡಲು ಅಡುಗೆ ಕೋಣೆಗೆ ತೆರಳಿದ್ದ ಸಂದರ್ಭದಲ್ಲಿ ಬಾಲಕಿಗೆ ಸಂಬಂಧದಲ್ಲಿ ತಾತಾನಾಗಬೇಕಾದ ಅಪರಾಧಿ ಶ್ರೀನಿವಾಸ ಎಂಬಾತ ಮನೆಯೊಳಗೆ ಪ್ರವೇಶಿಸಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಈ ವಿಚಾರ ಯಾರಿಗಾದರೂ ತಿಳಿಸಬಾರದು ಎಂದು ಪ್ರಾಣ ಬೆದರಿಕೆ ಹಾಕಿದ್ದ. ನಂತರ ಬಾಲಕಿ ಒಬ್ಬಳೇ ಇದ್ದ ದಿನಗಳಲ್ಲಿ…
ತುಮಕೂರು: ಜಾತ್ರಾ ಮಹೋತ್ಸವದಲ್ಲಿ ನೀಡಿದ ಕಲುಷಿತ ನೀರು ಸೇವಿಸಿ ಹತ್ತಕ್ಕೂ ಹೆಚ್ಚು ಮಂದಿ ಭಕ್ತರು ಅಸ್ವಸ್ಥ ಗೊಂಡಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ನಡೆದಿದೆ. ತೀವ್ರ ಸ್ವಸ್ಥಗೊಂಡ ಭಕ್ತರನ್ನು ತುಮಕೂರು ಜಿಲ್ಲೆ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಮಳೆ ಕೂಡ ಹೆಚ್ಚಾಗಿದೆ, ಮಳೆ ನೀರಿನಿಂದನೋ ಅಥವಾ ಊಟದಿಂದನೋ ಕೆಲವರು ಅಸ್ವಸ್ಥರಾಗಿದ್ದಾರೆ ಎಂಬ ಮಾಹಿತಿ ಮೇಲ್ನೋಟಕ್ಕೆ ಲಭ್ಯವಾಗುತ್ತಿದೆ . ಪೆದ್ದಣ್ಣ, ಲಕ್ಷ್ಮಮ್ಮ ಎನ್ನುವವರಿಗೆ ಗಂಭೀರವಾಗಿತ್ತು, ಈಗ ಚೇತರಿಕೆ ಆಗುತ್ತಿದೆ. ಜಿಲ್ಲಾಸ್ಪತ್ರೆಯಲ್ಲಿ ಅಸ್ವಸ್ಥಗೊಂಡಿರುವ ಆರು ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಜಾತ್ರಾ ಮಹೋತ್ಸವದ ವೇಳೆ ಸುಮಾರು 15ಕ್ಕೂ ಹೆಚ್ಚು ಮಂದಿಗೆ ವಾಂತಿ ಭೇದಿ ಕಾಣಿಸಿಕೊಂಡಿದ್ದು ಇನ್ನು ಕೆಲವರನ್ನು ಮಧುಗಿರಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ದಸರಾ ಮಹೋತ್ಸವದಲ್ಲಿ ಎರಡು ಬಾರಿ ಪಾಲ್ಗೊಂಡಿದ್ದ 38 ವರ್ಷದ ‘ಅಶ್ವತ್ಥಾಮ’ ಆನೆಯು ಸೋಲಾರ್ ಬೇಲಿಯ ವಿದ್ಯುತ್ ಪ್ರವಹಿಸಿ ಮಂಗಳವಾರ ಮೃತಪಟ್ಟಿದೆ. 2017ರಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಅಶ್ವತ್ಥಾಮನನ್ನು ಸೆರೆ ಹಿಡಿಯಲಾಗಿತ್ತು. ಶಾಂತ ಹಾಗೂ ಗಾಂಭೀರ್ಯ ಸ್ವಭಾವಕ್ಕೆ ಹೆಸರಾಗಿದ್ದ ಅದನ್ನು ನಾಲ್ಕು ವರ್ಷದಲ್ಲಿಯೇ 2021ರ ದಸರೆಗೆ ಕರೆತರಲಾಗಿತ್ತು. ಅದಕ್ಕೆ ನಡಿಗೆ ತಾಲೀಮು ಸೇರಿದಂತೆ ವಿವಿಧ ತಾಲೀಮನ್ನು ನೀಡಲಾಗಿತ್ತು. 2022ರ ದಸರೆಯಲ್ಲಿ ಪಾಲ್ಗೊಂಡು ಗಮನ ಸೆಳೆದಿತ್ತು. ಹುಣಸೂರು- ಪಿರಿಯಾಪಟ್ಟಣ ತಾಲ್ಲೂಕಿನ ಗಡಿ ಭಾಗದ ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದ ಆನೆಯು ಆಹಾರ ಅರಸಿ ಕಾಡಿಗೆ ತೆರಳಿತ್ತು. ಸೋಲಾರ್ ಬೇಲಿ ಮೇಲೆ ವಿದ್ಯುತ್ ತಂತಿಯು ಬಿದ್ದಿದ್ದರಿಂದ ವಿದ್ಯುತ್ ಆಘಾತದಿಂದ ಅಶ್ವತ್ಥಾಮ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ನಟ ಅರ್ಜುನ್ ಸರ್ಜಾ ಮಗಳು ಐಶ್ವರ್ಯಾ ಅರ್ಜುನ್ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೂನ್ 10ರಂದು ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಅರ್ಜುನ್ ಸರ್ಜಾ ಮಗಳು ಐಶ್ವರ್ಯಾ ಅರ್ಜುನ್, ತಮಿಳಿನ ನಟ ರಾಮಯ್ಯ ಅವರ ಪುತ್ರ ಉಮಾಪತಿ ರಾಮಯ್ಯ ಅವರನ್ನು ಮದುವೆಯಾಗಿದ್ದಾರೆ. ಐಶ್ವರ್ಯಾ ಮತ್ತು ಉಮಾಪತಿ ಟಿವಿ ಕಾರ್ಯಕ್ರಮವೊಂದರಲ್ಲಿ ಪರಿಚಯವಾದ್ರು. ಇಬ್ಬರ ಸ್ನೇಹ ಪ್ರೀತಿಗೆ ತಿರುಗಿತು. ಈ ವಿಚಾರವನ್ನು ಹಿರಿಯರ ಗಮನಕ್ಕೆ ತಂದಾಗ ಇಬ್ಬರ ಮನೆಯವರು ಮದುವೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಕಳೆದ ವರ್ಷ ಅಕ್ಟೋಬರ್ ನಲ್ಲಿ ಅವರ ನಿಶ್ಚಿತಾರ್ಥ ಸಮಾರಂಭ ನಡೆದಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ನವದೆಹಲಿ: ಅನ್ನಪೂರ್ಣ ದೇವಿ ಅವರು ಇಂದು ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಅಧಿಕಾರ ವಹಿಸಿಕೊಳ್ಳುವ ಮುನ್ನ, 55 ವರ್ಷದ ದೇವಿ ಅವರು ಮಾಜಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಕುರಿತು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಸ್ಮೃತಿ ಇರಾನಿ ಅವರನ್ನು ಅವರ ನಿವಾಸದಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿ ಮಾರ್ಗದರ್ಶನ ಪಡೆದಿದ್ದೇನೆ. ಸ್ಮೃತಿ ಅವರು ನೀಡಿದ ಪ್ರೀತಿಯ ಸ್ವಾಗತ ಆತ್ಮೀಯವಾಗಿತ್ತು. ಅವರ ಸ್ಫೂರ್ತಿದಾಯಕ ಮಾರ್ಗದರ್ಶನವು ನನಗೆ ಬೆಳಕಿನ ಕಿರಣದಂತೆ ಯಾವಾಗಲೂ ಉಪಯುಕ್ತವಾಗಿರುತ್ತದೆ’ ಎಂದು ಬರೆದುಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ‘ವಿಕಸಿತ ಭಾರತ’ ಕನಸನ್ನು ನನಸಾಗಿಸಲು ಶ್ರಮಿಸುತ್ತೇನೆ ಎಂದು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೀದರ್: ನಗರದ ಬಸವೇಶ್ವರ ಮಂಟಪದಲ್ಲಿ ಅಕ್ಕಮಹಾದೇವಿ ಸಾಂಸ್ಕೃತಿಕ ಮಹಿಳಾ ಸಂಘ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಆಯೋಜಿಸಲಾಯಿತು. ಮುಖ್ಯ ಅತಿಥಿಗಳಾಗಿ ಹಾವಪ್ಪ ವಲಯ ಅರಣ್ಯ ಅಧಿಕಾರಿಗಳು ಔರಾದ್ , ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಜರಪ್ಪ ಮಮದಾಪುರ್, ನಗರಸಭೆಯ ಸದಸ್ಯರಾದ ಪ್ರಶಾಂತ್ ದೊಡ್ಡಿ ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸುನಿತಾ ಜಿರೋಬಿ ಅವರು ಇದೇ ವೇಳೆ ಮಾತನಾಡಿ, ಗಿಡ ನೆಡೋಣ, ಭೂಮಿ ಉಳಿಸೋಣ ಎಂಬ ಘೋಷಣೆ ಹೇಳಿ, ಪರಿಸರದ ಬಗ್ಗೆ ಜಾಗೃತಿ ಮೂಡಿಸಿದರು. ಸುವರ್ಣ, ವಿದ್ಯಾವತಿ, ವಿಠ್ಠಲ್ ಸಿಸಿ೯, ಶಿವರಾಜ್ ಮಾಶೆಟ್ಟಿ ಚಿಮಕೋಡ, ಅಣ್ಣಾವ್ರ ಪವನ್, ಕಿರಣ್ ಕುಮಾರ್, ಅಣ್ಣಾವ್ರು ಶರಣಯ್ಯ ಇದ್ದರು ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಬೆಂಗಳೂರಲ್ಲಿ ಇನ್ಮುಂದೆ ಬೆಳಗ್ಗೆ 5ರಿಂದ ರಾತ್ರಿ 10ರ ವರೆಗೆ ಪಾರ್ಕ್ ಗಳು ಓಪನ್ ಆಗಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಈ ಮೊದಲು ಬೆಳಗ್ಗೆ 5ರಿಂದ ಬೆಳಗ್ಗೆ 10ರ ತನಕ ಪಾರ್ಕ್ ಗಳನ್ನು ಓಪನ್ ಮಾಡಲಾಗುತ್ತಿತ್ತು, ಇನ್ಮುಂದೆ ಬೆಳಗ್ಗೆ 5ರಿಂದ ರಾತ್ರಿ 10ರ ವರೆಗೆ ಪಾರ್ಕ್ ಗಳು ಓಪನ್ ಆಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಆದರೆ ಲಾಲ್ ಬಾಗ್, ಕಬ್ಬನ್ ಪಾರ್ಕ್ ಸೇರಿದಂತೆ ತೋಟಗಾರಿಕೆ ವ್ಯಾಪ್ತಿಯಲ್ಲಿ ಇರುವ ಪಾರ್ಕ್ ಗಳಿಗೆ ಈ ಅವಧಿ ವಿಸ್ತರಣೆ ಅನ್ವಯ ಆಗುವುದಿಲ್ಲ ಎಂದರು. ಪಾರ್ಕ್ ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಹಾಕಿದ್ದೇನೆ, ಸಾರ್ವಜನಿಕರಿಗೆ ಎಲ್ಲಾ ರೀತಿಯ ಸುರಕ್ಷಿತ ಕ್ರಮ ಕೈಗೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಸಾರಿಗೆ ಇಲಾಖೆಯಲ್ಲಿ 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಖಾಲಿ ಹುದ್ದೆ ತುಂಬಿರಲಿಲ್ಲ. ಚಾಲಕರು, ನಿರ್ವಾಹಕರು, ತಾಂತ್ರಿಕ ಸಿಬ್ಬಂದಿ ಸೇರಿ ನಾಲ್ಕು ನಿಗಮಗಳಲ್ಲಿ 9 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. 2 ಸಾವಿರ ಹುದ್ದೆಗಳಿಗೆ ಈಗಾಗಲೇ ನೇಮಕಾತಿ ಮಾಡಿಕೊಳ್ಳಲಾಗಿದೆ. ಉಳಿದವು ನೇಮಕಾತಿ ಪ್ರಕ್ರಿಯೆಯಲ್ಲಿವೆ. 5800 ಹೊಸ ಬಸ್ ಗಳನ್ನು ಖರೀದಿ ಮಾಡಲಾಗುತ್ತಿದ್ದು, ಈಗಾಗಲೇ 2400 ಬಸ್ ಗಳ ಖರೀದಿ ಆಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಬಸ್ ಟಿಕೆಟ್ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವ ನಿರ್ಧಾರ ಕೈಗೊಂಡಿಲ್ಲ. ನಾಲ್ಕು ನಿಗಮಗಳಿಂದ ಪ್ರಸ್ತಾವ ಬಂದ ನಂತರ ಟಿಕೆಟ್ ದರ ಹೆಚ್ಚಳದ ಬಗ್ಗೆ ಪರಿಶೀಲಿಸುವುದಾಗಿ ಸಚಿವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ನರೇಗಾ ಕೆಲಸಕ್ಕೆಂದು ಬಂದ ಮಹಿಳೆಯನ್ನು ದೆವ್ವವೊಂದು ಆವರಿಸಿಕೊಂಡಿದ್ದು, ಏನು ಬೇಕು ಎಂದು ಕೇಳಿದಾಗ ನನಗೆ ವಿಮಲ್, ಗುಟ್ಕಾ ಬೇಕೆಂದು ಕೇಳಿದ ವಿಚಿತ್ರ ಹಾಗೂ ಹಾಸ್ಯದ ಪ್ರಸಂಗವೊಂದು ಬೆಳಕಿಗೆ ಬಂದಿದೆ. ಕೊಪ್ಪಳದ ಕೆರೆಹಳ್ಳಿ ಗ್ರಾಮದಲ್ಲಿ ನರೇಗಾ ಕಾಮಗಾರಿಯಲ್ಲಿ ಹೂಳೆತ್ತುವ ಕೆಲಸ ಮಾಡುತ್ತಿದ್ದ ವೇಳೆ ಮಹಿಳೆಯನ್ನು ದೆವ್ವವೊಂದು ಆವರಿಸಿಕೊಂಡು ಆಕೆ ವಿಚಿತ್ರವಾಗಿ ವರ್ತಿಸಿದ್ದಾಳೆ. ಪಕ್ಕದಲ್ಲಿದ್ದವರೆಲ್ಲಾ ತಕ್ಷಣ ಗಾಬರಿಗೊಂಡು ಬಂಡಿಹರ್ಲಾಪುರಾ ಗ್ರಾಮದಲ್ಲಿ ದೆವ್ವ ಬಿಡಿಸುವ ಖಾಜಾ ಸಾಹೇಬ್ ಯಡಿಯಪೂರ ಅವರನ್ನು ಸ್ಥಳಕ್ಕೆ ಕರೆಸಿದ್ದಾರೆ. ಖಾಜಾ ಸಾಹೇಬ್ ಅವರು ಏನಾಯಿತು, ಯಾಕೆ ಬಂದೆ ಎಂದು ಕೇಳಿದಾಗ ನನಗೆ ವಿಮಲ್ ಕೊಟ್ರೆ ಹೋಗ್ತಿನಿ ಎಂದು ಮಹಿಳೆಗೆ ಆವರಿಸಿಕೊಂಡಿದ್ದ ದೆವ್ವ ವಿಮಲ್ ಗುಟ್ಕಾ ಕೇಳಿದೆ. ಈ ವೇಳೆ ತಲೆ ಮೇಲೆ ಕಲ್ಲೊರಿಸಿ ಖಾಜಾ ಸಾಹೇಬ್ ದೆವ್ವ ಬಿಡಿಸಿದ್ದಾನೆ. ಖಾಜಾ ಸಾಹೇಬ್ ಪೂಜೆ ಶುರು ಮಾಡುತ್ತಿದ್ದಂತೆ ನಾನು ಹೋಗ್ತಿನಿ ಬಿಟ್ಟು ಬಿಡು ಎಂದು ದೆವ್ವ ಕಣ್ಣೀರು ಹಾಕಿದೆ. ವಿಮಲ್ ಗುಟ್ಕಾ ಪ್ರೇಮಿ ದೆವ್ವದ ವರ್ತನೆಗೆ ಜನ ಎದ್ದು ಬಿದ್ದು ನಕ್ಕಿದ್ದಾರೆ. ಕೊನೆಗೆ…