Author: admin

ನರೇಂದ್ರ ಮೋದಿ ಭಾನುವಾರ ಸಂಜೆ 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರ ಜೊತೆ 71 ಸಚಿವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಎಲ್ಲ ಸಚಿವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಪ್ರಮಾಣ ವಚನ ಸ್ವೀಕಾರದ ಸಮಯದಲ್ಲಿ ಸಾಮಾನ್ಯವಾಗಿ ಸಚಿವರು ನಾನು (ಹೆಸರು) ಕಾನೂನಿನ ಮೂಲಕ ಸ್ಥಾಪಿಸಿದಂತೆ ನಾನು ಭಾರತದ ಸಂವಿಧಾನಕ್ಕೆ ಪ್ರಮಾಣ ಮಾಡುತ್ತೇನೆ ಎಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ ಎಂದು ಮಂತ್ರಿಗಳ ಪ್ರಮಾಣ ವಚನವನ್ನು ಪೂರ್ಣಗೊಳಿಸಲಾಗುತ್ತದೆ. ಪ್ರಧಾನಿ ಕೂಡ ಅದೇ ರೀತಿ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಆದರೆ, ಭಾನುವಾರ ಟಿಡಿಪಿ ಸಂಸದ ಚಂದ್ರಶೇಖರ್ ಪೆಮ್ಮಸಾನಿ ಪ್ರಮಾಣ ವಚನ ಸ್ವೀಕರಿಸಿದಾಗ, ಅವರ ಮಾತುಗಳು ಇತರ ಸಚಿವರಿಗಿಂತ ಭಿನ್ನವಾಗಿತ್ತು. ಟಿಡಿಪಿ ಸಂಸದ ಚಂದ್ರಶೇಖರ್ ಪೆಮ್ಮಸಾನಿ ಭಾನುವಾರ ಸಂಜೆ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.  ನಡೆದ ಸಮಾರಂಭದಲ್ಲಿ ಬೇರೆ ಸಚಿವರಿಗಿಂತಲೂ ಚಂದ್ರಶೇಖರ್ ಪೆಮ್ಮಸಾನಿ ಅವರ ಪ್ರಮಾಣ ವಚನ ಸ್ವಲ್ಪ ವಿಭಿನ್ನವಾಗಿತ್ತು. ನಾನು ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ ಎಂದು ಅವರು…

Read More

ರಾಮನಗರ ತಾಲೂಕಿನ ಬಿಡದಿ ಬಳಿ ಕೆಂಚನಗುಪ್ಪೆಯಲ್ಲಿ ಡಿಕೆ ಸುರೇಶ್ ಪರ ಬೆಟ್ಟಿಂಗ್ ಆಡಿದ್ದ ವ್ಯಕ್ತಿ ನೇಣಿಗೆ ಶರಣಾಗಿದ್ದಾರೆ. 40 ವರ್ಷದ ಶಿವರಾಜ್ ಮೃತ ವ್ಯಕ್ತಿ ಎನ್ನಲಾಗಿದೆ. ಡಿ.ಕೆ‌.ಸುರೇಶ್ ಪರವಾಗಿ 50‌ ಲಕ್ಷಕ್ಕೂ ಹೆಚ್ಚು ರೂ. ಬೆಟ್ಟಿಂಗ್​ ಕಟ್ಟಿ ಶಿವರಾಜ್ ಸೋತಿದ್ದ. ಆದರೆ ಲಕ್ಷಾಂತರ ಹಣ ಕೊಡಲಾಗದೇ‌ ಬೆಳಗಿನ ಜಾವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಡದಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಕಳೆದ ಬಾರಿ ಕರ್ನಾಟಕದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರ ಭಾರೀ ಸದ್ದು ಮಾಡಿತ್ತು. ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಎನ್ನುವ ಲೆವಲ್​ಗೆ ಸದ್ದು ಮಾಡಿತ್ತು. ಈ ಭಾರೀ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಸದ್ದು ಮಾಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More

ನರೇಂದ್ರ ಮೋದಿ ಸಂಪುಟದಲ್ಲಿ ಕರ್ನಾಟಕದಿಂದ ಐವರಿಗೆ ಮಂತ್ರಿ ಸ್ಥಾನ ದೊರಕಿದ್ದು, ಇದರಲ್ಲಿ ಮೂವರಿಗೆ ಕ್ಯಾಬಿನೆಟ್‌ ದರ್ಜೆ ಸಚಿವ ಸ್ಥಾನ ದೊರಕಿದರೆ ಉಳಿದ ಇಬ್ಬರಿಗೆ ರಾಜ್ಯ ಖಾತೆ ದೊರಕಿದೆ. ನಿರ್ಮಲಾ ಸೀತಾರಾಮನ್‌, ಧಾರವಾಡದ ಪ್ರಲ್ಹಾದ್‌ ಜೋಶಿ, ಮಂಡ್ಯದ ಎಚ್‌ ಡಿ ಕುಮಾರಸ್ವಾಮಿ ಇವರಿಗೆ ಕ್ಯಾಬಿನೇಟ್‌ ದರ್ಜೆ ಸಚಿವ ಸ್ಥಾನ ದೊರಕಿದರೆ, ಬೆಂಗಳೂರು ಉತ್ತರ ಕ್ಷೇತ್ರದ ಶೋಭಾ ಕರಂದ್ಲಾಜೆ ಹಾಗೂ ತುಮಕೂರು ಕ್ಷೇತ್ರದ ವಿ ಸೋಮಣ್ಣ ಅವರಿಗೆ ರಾಜ್ಯ ಖಾತೆ ಸಚಿವ ಸ್ಥಾನ ದೊರಕಿದೆ. ಕುಮಾರಸ್ವಾಮಿ ಅವರಿಗೆ ಕೃಷಿ ಖಾತೆ ಮಿಸ್‌ ಆಗಿದ್ದು, ಅವರಿಗೆ ಉಕ್ಕು ಮತ್ತು ಬೃಹತ್‌ ಕೈಗಾರಿಕೆ ಖಾತೆ ದೊರಕಿದೆ. ಇನ್ನು ಕೃಷಿ ಖಾತೆ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ದೊರಕಿದೆ. ನಿರ್ಮಲಾ ಸೀತಾರಾಮನ್‌ ಅವರಿಗೆ ಈ ಬಾರಿ ಕೂಡಾ ಹಣಕಾಸು ಇಲಾಖೆ ನೀಡಲಾಗಿದೆ. ಪ್ರಹ್ಲಾದ್‌ ಜೋಶಿ ಅವರಿಗೆ ಈ ಬಾರಿ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ನೀಡಲಾಗಿದೆ. ಜೊತೆಗೆ ನವೀಕರಿಸಬಹುದಾದ ಇಂಧನ ಇಲಾಖೆಯ ಜವಾಬ್ದಾರಿ ನೀಡಲಾಗಿದೆ. ಶೋಭಾ ಕರಂದ್ಲಾಜೆ…

Read More

ಬೆಂಗಳೂರು: ಜಾತಿ ಪ್ರಮಾಣಪತ್ರವನ್ನು ರದ್ದುಗೊಳಿಸುವ ಅಧಿಕಾರ ತಹಸೀಲ್ದಾರ್‌ಗೆ ಇಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಈ ಅಧಿಕಾರವು ರಾಜ್ಯ ಜಾತಿ ಪರಿಶೀಲನಾ ಸಮಿತಿಗೆ ಮಾತ್ರ ಇರುತ್ತದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ತಮ್ಮ ತೀರ್ಪಿನಲ್ಲಿ, ತಹಸೀಲ್ದಾರ್ ಜಾತಿ ಪ್ರಮಾಣಪತ್ರಕ್ಕಾಗಿ ಅರ್ಜಿಯನ್ನು ಸ್ವೀಕರಿಸಬಹುದು ಅಥವಾ ತಿರಸ್ಕರಿಸಬಹುದು ಎಂದು ಸ್ಪಷ್ಟಪಡಿಸಿದ್ದಾರೆ. 2015ರ ಜೂನ್ 30ರಂದು ಬೆಂಗಳೂರು ಉತ್ತರ ತಾಲೂಕು ತಹಶೀಲ್ದಾರ್ ಬಿನ್ನಿಪೇಟೆಯ ಎಂ. ಗಾಯತ್ರಿ ಅವರು ನಾಯಕ ಸಮುದಾಯಕ್ಕೆ ಸೇರಿದ್ದಾರೆ ಎಂದು ಪರಿಶಿಷ್ಟ ಪಂಗಡ ಪ್ರಮಾಣ ಪತ್ರ ವಿತರಿಸಿದ್ದರು. ಈ ಪತ್ರ ಆಧರಿಸಿ ಬಿಬಿಎಂಪಿ ಚುನಾವಣೆಗೆ ಗಾಯಿತ್ರಿ ಸ್ಪರ್ಧಿಸಿದ್ದರು. ಸಿವಿಲ್ ಹಕ್ಕುಗಳ ಜಾರಿ ನಿರ್ದೇಶನಾಲಯದ ಮುಂದೆ ದೂರು 2015ರ ಸೆಪ್ಟೆಂಬರ್ 5 ರಂದು ಸಲ್ಲಿಸಿದ್ದಾರೆ. ಮೋಸದಿಂದ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ ಗಾಯಿತ್ರಿ ಅವರು ಪಡೆದಿದ್ದಾರೆ ಎಂದು ದೂರು ನೀಡಿದ್ದರು. ಬೆಂಗಳೂರಿನ ಜಿಲ್ಲಾ ಜಾತಿ ಪರಿಶೀಲನ ಸಮಿತಿಗೆ ಈ ದೂರು ವರ್ಗಾವಣೆಯಾಗಿದ್ದು, ಅರ್ಜಿ ವಿಚಾರಣೆ ನಡೆಸಿದ್ದ ಸಮಿತಿ ಅಧ್ಯಕ್ಷರಾದ ಜಿಲ್ಲಾಧಿಕಾರಿ ಅವರು,…

Read More

ಉಡುಪಿ: ಜಿಲ್ಲೆಯಲ್ಲಿ ಬಿಟ್ಟು, ಬಿಡದೆ ವರುಣ ಆರ್ಭಟ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಜಿಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮಲ್ಪೆ ಬೀಚ್​ಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಮಲ್ಪೆ ಬೀಚ್​ಗೆ ಬೇಲಿ ಹಾಕಿ, ಬೀಚ್ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಅಲ್ಲದೆ, ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಮತ್ತು ಸುರಕ್ಷತೆಯ ದೃಷ್ಟಿಯಿಂದ ಉಡುಪಿ ಜಿಲ್ಲಾಡಳಿತ ಮತ್ತು ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಅನೇಕ ಕ್ರಮಗಳನ್ನು ಕೈಗೊಂಡಿದೆ. ಸುಮಾರು ಒಂದು ಕಿಲೋಮೀಟರ್ ಉದ್ದಕ್ಕೆ ಏಳು ಅಡಿ ಎತ್ತರದ ಬಲೆ ಅಳವಡಿಸಿ ತಡೆ ಬೇಲಿಯನ್ನು ಸದ್ಯಕ್ಕೆ ನಿರ್ಮಿಸಲಾಗಿದೆ. ಜೊತೆಗೆ ಎಚ್ಚರಿಕೆಯ ಕೆಂಪು ಬಾವುಟ ಹಾಕಲಾಗಿದೆ. ಇದರ ಜೊತೆಗೆ ಆಯಕಟ್ಟಿನ ಜಾಗದಲ್ಲಿ ಬೀಚ್ ಪ್ರವೇಶ ನಿಷೇಧದ ಎಚ್ಚರಿಕೆ ಫಲಕಗಳನ್ನು ಕೂಡ ಅಳವಡಿಸಲಾಗಿದೆ. ಮಲ್ಪೆ ಬೀಚಿನಲ್ಲಿ ತರಬೇತಿ ಪಡೆದ ಜೀವ ರಕ್ಷಕರನ್ನ ನಿಯೋಜನೆ ಮಾಡಲಾಗಿದೆ. ನಿರಂತರವಾಗಿ ಎಟಿಬಿ ಸ್ಯಾಂಡ್ ಬೈಕ್ ಮೂಲಕ ಬೀಚ್​​ ನ್ನು ಗಸ್ತು ತಿರುಗುವ ಜೀವ ರಕ್ಷಕ ಪಡೆಯ ಸದಸ್ಯರು ಬೀಚ್ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಮುನ್ನೆಚ್ಚರಿಕೆಗಳನ್ನ…

Read More

ಬೆಂಗಳೂರಿನಲ್ಲಿ IIMB ಮಾಡಿದ್ದ ಸೋಫಿಯಾ ಫಿರ್ದೋಸ್‌ ಒಡಿಶಾ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಬಾರಾಬತಿ- ಕಟಕ್‌ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಆಯ್ಕೆಯಾಗಿರುವ ಸೋಫಿಯಾ ಫಿರ್ದೋಸ್‌, ಒಡಿಶಾ ರಾಜಕೀಯ ಇತಿಹಾಸದಲ್ಲಿ ವಿಧಾನಸಭೆ ಪ್ರವೇಶಿಸಿದ ಮೊದಲ ಮುಸ್ಲಿಂ ಮಹಿಳೆ ಎಂಬ ಖ್ಯಾತಿಗೆ ಪಾತ್ರವಾಗಿದ್ದಾರೆ. ಕಾಂಗ್ರೆಸ್‌ ಹಿರಿಯ ನಾಯಕ ಮೊಹಮ್ಮದ್‌ ಮೊಕ್ವಿಮ್‌ ಅವರು ಬಾರಾಬತಿ -ಕಟಕ್‌ ಕ್ಷೇತ್ರ ಪ್ರತಿನಿಧಿಸುತ್ತಿದ್ದರು. ಭ್ರಷ್ಟಾಚಾರ ಪ್ರಕರಣದಲ್ಲಿ ಮೊಕ್ವಿಮ್‌ ಅನರ್ಹಗೊಂಡಿದ್ದ ಕಾರಣ ಅವರ ಪುತ್ರಿ ಫಿರ್ದೋಸ್‌ ಅವರಿಗೆ ಕಾಂಗ್ರೆಸ್ ವಿಧಾನಸಭೆ ಟಿಕೆಟ್‌ ನೀಡಿತ್ತು. ಕಳಿಂಗ ವಿಶ್ವವಿದ್ಯಾಲಯದ ಬಿ.ಟೆಕ್‌ ಪದವೀಧರೆಯಾಗಿರುವ ಫಿರ್ದೋಸ್‌, 2022ರಲ್ಲಿ ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ ಮೆಂಟ್ ‌ನಲ್ಲಿ ಅಧ್ಯಯನ ಮಾಡಿದ್ದರು. ತಂದೆ ಸ್ಥಾಪಿಸಿದ್ದ ಮೆಟ್ರೋ ಬಿಲ್ಡರ್‌ ಕಂಪನಿಯಲ್ಲಿ ನಿರ್ದೇಶಕಿಯಾಗಿ ಕೆಲಸ ಮಾಡಿದ್ದರು. ತಮ್ಮ ರಿಯಲ್ ಎಸ್ಟೇಟ್ ಸಂಸ್ಥೆ ಮೆಟ್ರೋ ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕರಾಗಿರುವ ಮೊಹಮ್ಮದ್ ಮೊಕ್ವಿಮ್, ಒರಿಸ್ಸಾ ಗ್ರಾಮೀಣ ವಸತಿ ಅಭಿವೃದ್ಧಿ ನಿಗಮದ (ಒಆರ್‌ಎಚ್‌ಡಿಸಿ) ಸಾಲ ವಂಚನೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದಾರೆ. ಈ ಶಿಕ್ಷೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ…

Read More

ಬೆಂಗಳೂರು: ಕೊಲೆ ಪ್ರಕರಣ ಒಂದಕ್ಕೆ ಸಂಬಂಧಪಟ್ಟಂತೆ ಚಿತ್ರ ನಟ ದರ್ಶನ್ ಅವರನ್ನು ಈಗಾಗಲೇ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ. ಅವರು ಇಂದು ಕೋರಮಂಗಲದ ಆರ್.ಎ. ಮುಂಡ್ಕುರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತರಬೇತಿ ಅಕಾಡೆಮಿ ಮೈದಾನದಲ್ಲಿ ನಡೆದ, ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭ ಹಾಗೂ ಅಗ್ನಿಶಾಮಕರ ನಿರ್ಗಮನ ಪಥಸಂಚಲನ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ವಿಚಾರಣೆಯ ನಂತರ ಈ ಸಂಬಂಧ ಸತ್ಯ ಹೊರಬೀಳಲಿದೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುರುವೇಕೆರೆ: ಸರ್ಕಾರಿ ಶಾಲೆಯ ಉಳಿವಿಗಾಗಿ ದಾನಿಗಳು ಪ್ರೋತ್ಸಾಹಿಸಬೇಕು ಎಂದು ಬೆಂಗಳೂರು ಕ್ಲಿನಿಕ್ ಮಾಲಿಕರಾದ ಡಾ.‌ ಶಶಿಧರ್ ಎಂ ಹೇಳಿದರು. ತಾಲೂಕಿನ ಮಾಯಸಂದ್ರ ಹೋಬಳಿಯ ಡಿ.ಬಿ.ವಿ. ಹಟ್ಟಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿನ ವಿದ್ಯಾರ್ಥಿಗಳಿಗೆ ಉಚಿತ “ಟ್ರಾಕ್ ಸಮವಸ್ತ್ರ”ವನ್ನು ವಿತರಿಸಿ ಮಾತನಾಡಿದ ಅವರು, “ಗ್ರಾಮೀಣ ಪ್ರದೇಶಗಳತ್ತ ಸರ್ಕಾರಿ ಶಾಲೆಗಳು ಈಗಾಗಲೇ ಅಳಿವಿನಂಚಿನಲ್ಲಿದ್ದು, ಸರ್ಕಾರಿ ಶಾಲೆಯ ಉಳಿವಿಗಾಗಿ ದಾನಿಗಳು ಉದಾರ ಮನಸ್ಸಿನಿಂದ ವಿದ್ಯಾರ್ಥಿಗಳಿಗೆ ಅವಶ್ಯಕವಿರುವ ಉಪಯುಕ್ತ ವಿಶೇಷ ವಸ್ತುಗಳನ್ನು, ತಮ್ಮ ಕೈಲಾದ ಸಹಾಯ ಮಾಡುವ ಮೂಲಕ ಪ್ರೋತ್ಸಾಹಿಸಿ, ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗಬೇಕೆಂದು ಮನವಿ ಮಾಡಿದರು. ಅಲ್ಲದೇ ಸರ್ಕಾರಿ ಶಾಲೆಯ ಉಳಿವಿಗಾಗಿ ನಾವೆಲ್ಲರೂ ಕೈಜೋಡಿಸೋಣ” ಎಂದರು. ಮುಖ್ಯ ಶಿಕ್ಷಕರಾದ ನಾಗರಾಜು ರವರು ಮಾತನಾಡಿ, “ಪ್ರತಿ ವರ್ಷವೂ ಸಹ ನಮ್ಮ ಶಾಲೆಯಲ್ಲಿನ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳನ್ನು‌ ದಾನಿಗಳು ತಮ್ಮ ಕೈಲಾದ ಸಹಾಯವನ್ನು ಮಾಡುತ್ತಾ, ನಮ್ಮ ಮಕ್ಕಳನ್ನು ಪ್ರೋತ್ಸಾಹಿಸುತ್ತಿದ್ದಾರೆ. ಈ ವರ್ಷವೂ ಸಹ ಡಾ. ಶಶಿಧರ್ ಎಂ ರವರು ಉಚಿತ ಟ್ರಾಕ್ ಸಮವಸ್ತ್ರವನ್ನು ವಿತರಿಸಿದ್ದಾರೆ ಹಾಗೂ ಮಾಯಸಂದ್ರದ…

Read More

ರಾಜ್ಯದಲ್ಲಿ ಜೂ.2ರಂದು ಮುಂಗಾರು ಪ್ರವೇಶ ಮಾಡಿದೆ. 10 ದಿನಗಳ ಅವಧಿಯಲ್ಲಿ ವಾಡಿಕೆ ಪ್ರಕಾರ 51 ಮಿ.ಮೀ. ಮಳೆಯಾಗಬೇಕಿತ್ತು. ಆದರೆ, ಈಗಾಗಲೆ 91 ಮಿ.ಮೀ. ಆಗಿದೆ. ಇದು ವಾಡಿಕೆಗಿಂತ ಶೇ.78ರಷ್ಟು ಹೆಚ್ಚು ಮಳೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಸೋಮವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಬರ ವಿಚಾರಕ್ಕೆ ಸಂಬಂಧಿಸಿದ ಸಚಿವ ಸಂಪುಟ ಉಪ ಸಮಿತಿ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ ವರ್ಷ ಇದೇ ಅವಧಿಯಲ್ಲಿ ಕೇವಲ 9 ಮಿ.ಮೀ. ಮಳೆಯಾಗಿತ್ತು ಎಂದರು. ಮುಂಗಾರು ರಾಜ್ಯದ ಎಲ್ಲ ಭಾಗಗಳಲ್ಲೂ ಆವರಿಸಿದೆ. 5 ಜಿಲ್ಲೆಗಳಲ್ಲಿ ವಾಡಿಕೆ ಮಳೆಯಾದರೆ, 4 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಆಗಿದೆ. 22 ಜಿಲ್ಲೆಗಳಲ್ಲಿ ವಾಡಿಕೆಗಿಂತ ಅತ್ಯಧಿಕ ಮಳೆಯಾಗಿದೆ. ಕುಡಿಯುವ ನೀರಿನ ಸಮಸ್ಯೆ ದಿನೇ ದಿನೇ ಕಡಿಮೆಯಾಗುತ್ತಿದೆ. ಮೇ ತಿಂಗಳಲ್ಲಿ ಟ್ಯಾಂಕರ್ ಗಳ ಮೂಲಕ ನೀರು ಸರಬರಾಜು ಮಾಡುತ್ತಿದ್ದ ಹಳ್ಳಿಗಳ ಸಂಖ್ಯೆ 542 ಇತ್ತು. ಈಗ ಅದು 374ಕ್ಕೆ ಇಳಿದಿದೆ. ಮುಂದಿನ…

Read More

4 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮಾಲಿವುಡ್‌ ನಟರೊಬ್ಬರ ಮೇಲೆ ಕೇಸು ದಾಖಲಾಗಿದೆ. ಕೇರಳದ ಕೋಝಿಕ್ಕೋಡ್‌ ನಲ್ಲಿ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪವು ನಟ ಕೂಟಿಕಲ್‌ ಜಯಚಂದ್ರನ್‌ ವಿರುದ್ಧ ಕೇಳಿ ಬಂದಿದೆ. ಸ್ಥಳೀಯ ಪೊಲೀಸರು ಕೇಸು ದಾಖಲಿಸಿದ್ದು, ಪ್ರಕರಣ ದಾಖಲಾಗಿದೆ. ತಮ್ಮ ಕುಟುಂಬದೊಳಗಿರುವ ವಿವಾದದ ಲಾಭವನ್ನು ಪಡೆದು ನಟ ತನ್ನ ನಾಲ್ಕು ವರ್ಷದ ಮಗಳಿಗೆ ಕಿರುಕುಳ ನೀಡಿದ್ದಾರೆ ಎಂದು ಮಗುವಿನ ತಾಯಿ ದೂರಿನಲ್ಲಿ ಹೇಳಿದ್ದು, ತಾಯಿ ನೀಡಿದ ದೂರಿನ ಆಧಾರದ ಮೇಲೆ ಕಸಬಾ ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಈ ಪ್ರಕರಣದ ಕುರಿತು ನಟ ಜಯಚಂದ್ರನ್‌ ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ. ದೃಶ್ಯಂ ಸಿನಿಮಾ ಸೇರಿ ನಜಾನ್‌, ಓರು ಸೆಕೆಂಡ್‌ ಕ್ಲಾಸ್‌ ಯಾತ್ರಾ, ಲಕ್ಷ್ಯಮ್‌, ನಾರದನ್‌, ಮೈಬಾಸ್‌, ಡಿಟೆಕ್ಟಿವ್‌ ಸೇರಿ ಹಲವು ಸಿನಿಮಾದಲ್ಲಿ ಜಯಚಂದ್ರನ್‌ ನಟಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More