Subscribe to Updates
Get the latest creative news from FooBar about art, design and business.
- ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
- ತಿಪಟೂರು: ಜೂನ್ 1ರಿಂದ ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
- ತುಮಕೂರು: ವಾಟರ್ ಟ್ಯಾಂಕ್ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು, ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
- ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
- ತುರುವೇಕೆರೆ: ಜೂ. 4ರಂದು ಉಚಿತ ಯೋಗ, ಪ್ರಾಣಾಯಾಮ ತರಗತಿಗಳ ಉದ್ಘಾಟನೆ
- ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
- ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ
Author: admin
ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿಗೆ ಪ್ರಜ್ವಲ್ ರೇವಣ್ಣರ SIT ತನಿಖೆ ಅಂತ್ಯವಾಗಿದ್ದು, ಮಾಜಿ ಸಂಸದರು ಜೈಲು ಪಾಲಾಗಿದ್ದಾರೆ. ಪ್ರಜ್ವಲ್ ನನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದ್ದು, ವಿಚಾರಣಾಧೀನ ಖೈದಿ ಸಂಖ್ಯೆ 5664 ನೀಡಲಾಗಿದೆ. ಇನ್ನು ಮಹಿಳೆಯ ಅಪಹರಣ ಪ್ರಕರಣದಲ್ಲಿ ಹೊಳೆನರಸೀಪುರ ಶಾಸಕ ಎಚ್.ಡಿ. ರೇವಣ್ಣಗೆ ವಿಚಾರಣಾಧೀನ ಖೈದಿ ಸಂಖ್ಯೆ 4567 ನೀಡಲಾಗಿತ್ತು. ಸದ್ಯ ಪ್ರಜ್ವಲ್ ರೇವಣ್ಣ, ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಕ್ವಾರೆಂಟೈನ್ ಸೆಲ್ ನಲ್ಲಿದ್ದು, ಅವರಿಗೆ ವಿಚಾರಣಾಧೀನ ಕೈದಿ ನಂಬರ್-5664 ನೀಡಲಾಗಿದೆ. ಇನ್ನು ಇಂದಿನ ರಾತ್ರಿ ಊಟವನ್ನು ಸಹ ಜೈಲಾಧಿಕಾರಿಗಳು ನೀಡಿದ್ದಾರೆ. ರಾತ್ರಿ ಜೈಲಿನ ಮೆನುವಿನಂತೆ ಮುದ್ದೆ, ಅನ್ನ, ಸಾಂಬಾರು, ಪಲ್ಯ ನೀಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಲೋಕಸಭೆ ಚುನಾವಣೆಯಲ್ಲಿನ ಜನರ ತೀರ್ಪು ನಮಗೆ ಎಚ್ಚರಿಕೆ ಗಂಟೆಯಾಗಿದ್ದು, ನಮ್ಮಿಂದ ಎಲ್ಲಿ ತಪ್ಪಾಗಿದೆ ಎಂದು ಪರಾಮರ್ಶೆ ನಡೆಸಿ, ಅದನ್ನು ಸರಿಪಡಿಸಿಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಸೋಮವಾರ ನಗರದ ಕುಮಾರಪಾರ್ಕ್ ಬಳಿಯಿರುವ ಸರಕಾರಿ ನಿವಾಸದ ಬಳಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಲೋಕಸಭಾ ಚುನಾವಣೆಯ ಫಲಿತಾಂಶದ ಕುರಿತು ಮುಂದಿನ ದಿನಗಳಲ್ಲಿ ಎಲ್ಲ ನಾಯಕರ ಜೊತೆ ಪರಾಮರ್ಶನಾ ಸಭೆ ನಡೆಸಲಾಗುವುದು. ಸೋಲು ಸೋಲೇ. ಎಲ್ಲಿ ತಪ್ಪಾಗಿದೆ, ಏಕೆ ಹೆಚ್ಚುಕಮ್ಮಿಯಾಗಿದೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು. ಇಂದು ಬೆಂಗಳೂರಿನ ಲೋಕಸಭಾ ಕ್ಷೇತ್ರಗಳ ಚುನಾವಣಾ ಫಲಿತಾಂಶಗಳ ಬಗ್ಗೆ ಸಭೆ ಕರೆಯಲಾಗಿದೆ. ಮುಂದಿನ ದಿನಗಳಲ್ಲಿ ಬೇರೆ ಬೇರೆ ಜಿಲ್ಲೆಗಳ ಸಭೆ ನಡೆಸಲಾಗುವುದು. ಶೀಘ್ರವೇ ಇದಕ್ಕೆ ದಿನಾಂಕ ನಿಗದಿ ಮಾಡುತ್ತೇವೆ. ಎಲ್ಲೆಲ್ಲಿ ಏನಾಗಿದೆ ಎನ್ನುವ ಸತ್ಯಶೋಧನೆ ಹಾಗೂ ಪರಿಹಾರ ಹುಡುಕುವ ಕೆಲಸ ಆಗಬೇಕು ಎಂದು ಶಿವಕುಮಾರ್ ತಿಳಿಸಿದರು. ಕರ್ನಾಟಕ, ಹಿಮಾಚಲ ಪ್ರದೇಶದ ಚುನಾವಣೆಯ ಬಗ್ಗೆ ಎಐಸಿಸಿ ಅಧ್ಯಕ್ಷರು ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಕೇಳಿದ ಕೇಳಿದ ಪ್ರಶ್ನೆಗೆ…
ಬೆಂಗಳೂರು: ಬಕ್ರೀದ್ ಹಬ್ಬದ ಹಿನ್ನೆಲೆ ಪ್ರತಿ ವರ್ಷವೂ ಭರ್ಜರಿ ಕುರಿ ವ್ಯಾಪಾರ ನಡೆಯಲಿದೆ. ಎಂದಿನಂತೆ ಈ ಬಾರಿಯೂ ಬಗೆ ಬಗೆಯ ತಳಿಗಳ ಕುರಿಗಳು ಬಜಾರಿಗೆ ಬಂದಿದೆ. ನಗರದ ಅತಿ ದೊಡ್ಡ ಕುರಿ ಮಾರುಕಟ್ಟೆಯಾಗಿರುವ ಈದ್ಗಾ ಮೈದಾನದಲ್ಲಿ ಈಗಲೇ ಭರ್ಜರಿ ವ್ಯಾಪಾರ ಶುರುವಾಗಿದೆ. ಜೂನ್ 17ಕ್ಕೆ ಮುಸ್ಲಿಮರ ಪವಿತ್ರ ಹಬ್ಬ ಬಕ್ರೀದ್ ನಡೆಯಲಿದೆ. ಈ ಹಿನ್ನೆಲೆ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕುರಿ, ಮೇಕೆ ವ್ಯಾಪಾರ ಜೋರಾಗಿದೆ. ಮುಸ್ಲಿಮರ ಪವಿತ್ರ ಹಬ್ಬಗಳಲ್ಲೊಂದಾದ ಬಕ್ರೀದ್ ಸಮೀಪಿಸಿದೆ. ಜೂನ್ 17ಕ್ಕೆ ಸಾರ್ವತ್ರಿಕವಾಗಿ ನಾಡಿನೆಲ್ಲೆಡೆ ಬಕ್ರೀದ್ ಆಚರಿಸಲಾಗುತ್ತಿದೆ. ಈ ಹಿನ್ನೆಲೆ ಬೆಂಗಳೂರಿಗೆ ಭಾರೀ ಪ್ರಮಾಣದಲ್ಲಿ ಕುರಿ, ಮೇಕೆಗಳು ಬಂದಿಳಿದಿದೆ. ಕೊರೋನಾ ಬಳಿಕ ಇದೇ ಮೊದಲ ಬಾರಿಗೆ ನಗರದ ಕುರಿ ಮಾರುಕಟ್ಟೆಗೆ ಇಷ್ಟೊಂದು ಮೇಕೆ ಕುರಿಗಳನ್ನು ಮಾರಾಟಕ್ಕೆ ಇರಿಸಲಾಗಿದ್ದು, ಭರ್ಜರಿ ಆದಾಯ ಬರುವ ನಿರೀಕ್ಷೆಯಲ್ಲಿದ್ದಾರೆ ರೈತರು. ಆದರೆ ಗ್ರಾಹಕರು ಈ ಬಾರಿ ಕುರಿಗಳ ರೇಟ್ ಹೆಚ್ಚಳವಾಗಿದೆ ಎನ್ನುತ್ತಿದ್ದಾರೆ. ನಗರದ ಚಾಮರಾಜಪೇಟೆ, ಟ್ಯಾನರಿ ರೋಡ್, ಆರ್ ಟಿನಗರ ಸೇರಿದಂತೆ ನಗರದ ಕೆಲವು…
ಆರಂಭದಲ್ಲಿ ಲಕ್ಷಾಂತರ ಬಡವರ ಹೊಟ್ಟೆ ತುಂಬಿಸಿದ್ದ ಕ್ಯಾಂಟೀನ್ಗಳು ಬಿಬಿಎಂಪಿ ನಿರ್ಲಕ್ಷ್ಯದಿಂದ ಸೊರಗಿವೆ. ಸಿಎಂ ಸಿದ್ದರಾಮಯ್ಯ ಸರ್ಕಾರ ಇರುವಾಗಲೇ ಸಿಎಂ ಕನಸಿನ ಯೋಜನೆಯಾಗಿರುವ ಇಂದಿರಾ ಮೊಬೈಲ್ ಕ್ಯಾಂಟೀನ್ ಗಳ ಸೇವೆ ಮರೆಯಾಗುತ್ತಿದೆ. ಮೊಬೈಲ್ ಕ್ಯಾಂಟೀನ್ ಗಳ ಸದ್ಯದ ಸ್ಥಿತಿಯ ಬಗ್ಗೆ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಜಯನಗರದ 9ನೇ ಬ್ಲಾಕ್ ನಲ್ಲಿರುವ ಸಂಚಾರಿ ಇಂದಿರಾ ಮೊಬೈಲ್ ಕ್ಯಾಂಟೀನ್ ನ ಡೋರ್ ಮುರಿದು ಹೋಗಿದೆ. ವಸ್ತುಗಳು ಎಲ್ಲಂದರಲ್ಲಿ ಬಿದ್ದಿದ್ದಾವೇ, ಸ್ವಚ್ಛತೆಯೇ ಮರೀಚಿಕೆಯಾಗಿದೆ. ಇಲ್ಲಿನ ಇಂದಿರಾ ಮೊಬೈಲ್ ಕ್ಯಾಂಟೀನ್ ದುಸ್ಥಿತಿಗೆ ತಲುಪಿದ್ದು ಹಿಗೆಯೇ ಜನರಿಗೆ ಊಟ-ತಿಂಡಿ ಪೂರೈಕೆ ಮಾಡಲಾಗ್ತಿದೆ. ಚಾಮರಾಜಪೇಟೆಯ ಹನುಮಂತನಗರದಲ್ಲಿ ಎರಡು ವರ್ಷದಿಂದ ಇಂದಿರಾ ಮೊಬೈಲ್ ಕ್ಯಾಂಟೀನ್ ನಿಂತಲ್ಲೇ ನಿಂತಿದೆ. ಗಾಡಿ ತುಕ್ಕು ಹಿಡಿದಿದ್ದು ಗುಜರಿಗೆ ಸೇರುವಂತಾಗಿದೆ. ಶ್ರೀನಗರ ಬಸ್ ನಿಲ್ದಾಣದಲ್ಲಿ ಸಾವಿರಾರು ಜನರಿಗೆ ಈ ಕ್ಯಾಂಟೀನ್ ಉಪಯೋಗವಾಗ್ತಿತ್ತು. ಕಳೆದ ಎರಡು ವರ್ಷದ ಹಿಂದೆ ಸ್ಥಗಿತಗೊಂಡಿದ್ದು ಬಡವರು ಊಟಕ್ಕೆ ಪರದಾಡುವಂತಾಗಿದೆ. ಬಿಬಿಎಂಪಿ ಅಧಿಕಾರಿಗಳ ಅಸಡ್ಡೆಯೇ ಇದ್ದಕ್ಕೆ ಕಾರಣ ಎಂದು ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.…
ಗ್ರಾಮೀಣ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದೆ. ಇನ್ಮುಂದೆ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಗಳಲ್ಲೇ ಜನನ, ಮರಣ ಪ್ರಮಾಣಪತ್ರಗಳ ಡಿಜಿಟಲ್ ದಾಖಲೆಗಳು ಸಿಗಲಿವೆ. ಗ್ರಾಮೀಣ ಪ್ರದೇಶದ ಜನರಿಗೆ ಜನನ ಮತ್ತು ಮರಣ ನೋಂದಣಿಗಳನ್ನು ದಾಖಲಿಸುವ ಉದ್ದೇಶದಿಂದ ಗ್ರಾಮಪಂಚಾಯಿತಿಗಳಲ್ಲೇ ಜನನ ಮರಣ ಪತ್ರಗಳ ಡಿಜಿಟಲ್ ದಾಖಲೆಗಳನ್ನು ನೀಡಲು ನಿರ್ಧರಿಸಿದೆ. ಇ-̲ಜನ್ಮ ಪೋರ್ಟ್ಲ್ ನಲ್ಲಿಆಧಾರ್ ಕಾರ್ಡ್ ಮಾದರಿಯಲ್ಲಿಯೇ ಒಬ್ಬರಿಗೆ ಒಂದು ನಂಬರ್ ಸಿಗಲಿದ್ದು, ಮಗು ಹುಟ್ಟಿದ ತಕ್ಷಣ ಆ ಮಾಹಿತಿಯನ್ನು ಗ್ರಾಮ ಪಂಚಾಯತ್ ಗಳಿಗೆ ನೀಡಬೇಕು. ಗ್ರಾಮ ಪಂಚಾಯತ್ ಅಧಿಕಾರಿಗಳು ಇ-ಜನ್ಮ ಪೋರ್ಟ್ಲ್ ನಲ್ಲಿ ತಂದೆ, ತಾಯಿ ಹೆಸರು, ಆಧಾರ್, ಪಾನ್ ಕಾರ್ಡ್ ಸೇರಿ ಯಾವುದಾದರೊಂದು ದಾಖಲಾತಿ ನೀಡಿ ಅಪ್ಲೋಡ್ ಮಾಡುತ್ತಾರೆ. ನಂತರ ಸರ್ಟಿಫಿಕೇಟ್ ನೊಂದಿಗೆ ನಂಬರ್ ವೊಂದು ಜನರೇಟ್ ಆಗಲಿದ್ದು, ಈ ನಂಬರ್ ಪಡೆದು ಎಲ್ಲಿ ಬೇಕಾದರೂ ಆನ್ ಲೈನ್ ನಲ್ಲಿ ಮಾಹಿತಿ, ದಾಖಲೆ ಪಡೆದುಕೊಳ್ಳಬಹುದು. ನಮ್ಮತುಮಕೂರಿನ ಕ್ಷಣ…
ಲೋಕಸಭಾ ಚುನಾವಣೆ ಮುಗಿದು, ಬಿಜೆಪಿ ಗರ್ವಭಂಗವಡಗಿ ಎನ್ ಡಿ ಎ ಮೈತ್ರಿ ಕೂಟ ಸರ್ಕಾರ ಅಧಿಕಾರಕ್ಕೆ ಬಂದಿದೆ. ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಹಾಗೂ 7 ಪ್ರಮಾಣವಚನ ಸ್ವೀಕಾರ ಮಾಡಿ, ಖಾತೆ ಹಂಚಿಕೆಯೂ ಮುಗಿದಿದೆ. ಆದರೀಗ ಉಳಿದಿರುವುದು ಸ್ಪೀಕರ್ ಹುದ್ದೆ ಮಾತ್ರ. ಹೀಗಾಗಿ ಲೋಕಸಭಾ ಸಭಾಧ್ಯಕ್ಷರು ಯಾರಾಗಬಹುದು ಎಂಬ ಕುತೂಹಲ ಕೆರಳಿದೆ. ಆದರೀಗ ಬಿಜೆಪಿ ಜಾಣ ಹೆಜ್ಜೆ ಇಟ್ಟಿದ್ಧು ಆಂಧ್ರ ಪ್ರದೇಶದ ಬಿಜೆಪಿ ರಾಜ್ಯಾಧ್ಯಕ್ಷೆ ಪುರಂದೇಶ್ವರಿಯನ್ನು ಈ ಸ್ಥಾನಕ್ಕೆ ಆಯ್ಕೆ ಮಾಡುವ ಮೂಲಕ ಒಂದು ಕಲ್ಲಲ್ಲಿ ಎರಡು ಹಕ್ಕಿಯನ್ನು ಹೊಡೆಯಲು ತೀರ್ಮಾನ ಮಾಡಿದೆ ಎನ್ನಲಾಗಿದೆ. ಲೋಕಸಭೆಯ ಸ್ಪೀಕರ್ ಹುದ್ದೆಯನ್ನು NDA ಮಿತ್ರ ಪಕ್ಷಗಳು ತಮಗೆ ಬೇಕೆಂದು ಬೇಡಿಕೆ ಇಟ್ಟಿದ್ದವು. ಆದರೆ ಬಿಜೆಪಿ ಮಾತ್ರ ತನ್ನಲ್ಲೇ ಉಳಿಸಿಕೊಳ್ಳಲು ಭರ್ಜರಿ ಬಾಣ ಪ್ರಯೋಗಿಸಿದ್ದು, ಅದು ಯಶಸ್ವಿಯಾಗಿದೆ ಎಂದು ಮೂಲಗಳು ತಿಳಿಸಿವೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಲೋಕಸಭೆಯ ನೂತನ ಸ್ಪೀಕರ್ ಹುದ್ದೆಯನ್ನು ಹಾಲಿ ರಾಜಮಂಡಿ ಕ್ಷೇತ್ರದ ಸಂಸದೆ ಮತ್ತು ಆಂಧ್ರಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷೆ ಡಿ.…
ರಾಮ ದಶರಥ ಮಹಾರಾಜರಿಗೆ ಹುಟ್ಟಿಲ್ಲ, ಪುರೋಹಿತನೊಬ್ಬನಿಗೆ ಹುಟ್ಟಿರುವುದು. ಮಹಾಭಾರತದ ಪಾಂಡವ ಸಹೋದರರು ಹುಟ್ಟಿದ್ದು ದೇವತೆಗಳಿಂದ. ಈ ಮಾತಿಗೆ ನನ್ನ ಬಳಿ ಪುರಾವೆಗಳಿವೆ ಎಂದು ಸಾಹಿತಿ, ಪ್ರಗತಿಪರ ಚಿಂತಕ ಪ್ರೊ. ಕೆ.ಎಸ್. ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ) ಯಿಂದ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಪ್ರೊ.ಬಿ. ಕೃಷ್ಣಪ್ಪ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಈ ರೀತಿ ಹೇಳಿದ್ದಾರೆ ಎನ್ನಲಾಗಿದೆ. ರಾಮಾಯಣದ ರಾಮ ದಶರಥ ಮಹಾರಾಜರ ಮಗ ಎಂಬುದಷ್ಟೆ ತಿಳಿದ ವಿಷಯವಾದರೂ ರಾಮ ದಶರಥ ಮಹಾರಾಜರಿಂದ ಹುಟ್ಟಿಲ್ಲ, ಬದಲಾಗಿ ಪುರೋಹಿತನೊಬ್ಬನಿಂದ ಹುಟ್ಟಿದನು. ಅದೇ ರೀತಿ ಮಹಾಭಾರತದ ವಿಷಯಕ್ಕೆ ಬಂದರೆ, ಶಾಪಗ್ರಸ್ಥ ರಾಜ ಪಾಂಡು ಐವರು ಪಾಂಡವರ ತಂದೆ ಎಂದು ಹೇಳಲಾಗುತ್ತಿದ್ದರೂ ಪಾಂಡವರು ಹುಟ್ಟಿದ್ದು ಮಾತ್ರ ದೇವತೆಗಳಿಂದ ಎಂದು ಮಹಾಭಾರತದಲ್ಲೇ ಇದೆ’ ಎಂದಿದ್ದಾರೆ. ಪುರಾಣಗಳನ್ನು ಅಭ್ಯಾಸ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ಈ ಪುರಾಣಗಳು ಹಾಗೂ ಮನುಸ್ಮೃತಿಯಲ್ಲಿ ಬ್ರಾಹ್ಮಣರನ್ನು ಬಿಟ್ಟು ಉಳಿದೆಲ್ಲ ಜಾತಿ, ಜನಾಂಗದವರನ್ನು ಶೂದ್ರರೆಂದು ಕರೆದಿವೆ. ಶೂದ್ರರೆಲ್ಲಾ…
ಸ್ಯಾಂಡಲ್ವುಡ್ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇಂದು ಬೆಳಗ್ಗೆ ಮೈಸೂರಿನ ತೋಟದ ಮನೆಯಿಂದ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ದರ್ಶನ್ ಅವರನ್ನು ಮೈಸೂರಿನಿಂದ ಬೆಂಗಳೂರಿಗೆ ಕರೆ ತರಲಾಗುತ್ತಿದೆ. ಕೊಲೆ ಆರೋಪದಡಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನ ಕಾಮಾಕ್ಷಿ ಪಾಳ್ಯ ಪೊಲೀಸರು ದರ್ಶನ್ರನ್ನ ವಶಕ್ಕೆ ಪಡೆದಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆದ ಘಟನೆಗೆ ಸಂಬಂಧಿಸಿದಂತೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎಂದು ಹೇಳಲಾಗಿದೆ.ದರ್ಶನ್ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಭಾಗಿಯಾಗಿದ್ದು, ರಾಜರಾಜೇಶ್ವರಿ ನಗರದಲ್ಲಿ ಕೊಲೆ ಮಾಡಿ, ಕಾಮಾಕ್ಷಿ ಪಾಳ್ಯದಲ್ಲಿ ಮೃತದೇಹವನ್ನು ಎಸೆದಿದ್ದರು ಎಂದು ಆರೋಪವಿದೆ. ಕೆಲವೇ ಕ್ಷಣಗಳಲ್ಲಿ ದರ್ಶನ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ನಂತರ ಅವರನ್ನು ನ್ಯಾಯಾಧೀಶರ…
ಐದು ತಿಂಗಳ ಹಸುಗೂಸನ್ನು ತುರ್ತಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅನ್ನು ತಡೆದು ಚಾಲಕನ ಮೇಲೆ ಹಲ್ಲೆ ಮಾಡಿದ ಮೂವರು ಪುಂಡರನ್ನು ಅರೆಸ್ಟ್ ಮಾಡಲಾಗಿದೆ. ನೆಲಮಂಗಲ ಪೊಲೀಸರು ಬಂಧಿಸಿದ್ದಾರೆಂದು ವರದಿಯಾಗಿದೆ. ಬಂಧಿತರನ್ನು ಮಂಜುನಾಥ, ಯುವರಾಜ, ಲಿಖಿತ್ ಎಂದು ಗುರುತಿಸಲಾಗಿದೆ. ಮನುಷ್ಯತ್ವ ಮೀರಿ ಪುಟ್ಟ ಮಗುವನ್ನು ತುರ್ತಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ದುಷ್ಟರು ತಿಪಟೂರು ಬಳಿ ದಾಳಿ ನಡೆಸಿದ್ದರು. ಘಟನೆ ನಡೆದು ಕೆಲವು ಗಂಟೆಗಳಾಗಿದ್ದರೂ ಪೊಲೀಸರು ಆರೋಪಿಗಳನ್ನು ಬಂಧಿಸಿರಲಿಲ್ಲ. ಆದರೆ ರಾಜ್ಯವ್ಯಾಪ್ತಿ ಆಂಬ್ಯುಲೆನ್ಸ್ ಚಾಲಕರ ಪ್ರತಿಭಟನೆ ಬಳಿಕ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಐದು ತಿಂಗಳ ನವಜಾತ ಶಿಶುವೊಂದು ಅನಾರೋಗ್ಯಕ್ಕೆ ಈಡಾಗಿತ್ತು. ತುರ್ತಾಗಿ ಮಗುವನ್ನು ಆಸ್ಪತ್ರೆಗೆ ದಾಖಲಿಸಲು ಆಂಬ್ಯುಲೆನ್ಸ್ ಮೂಲಕ ಕರೆದುಕೊಂಡು ಹೋಗಲಾಗುತ್ತಿತ್ತು. ಈ ಸಂದರ್ಭದಲ್ಲಿ ರಸ್ತೆಯಲ್ಲಿ ಕಾರೊಂದು ಅಡ್ಡ ಬಂದಿದೆ. ಸೈಡ್ ಕೊಡಿ ಎಂದು ಆಂಬ್ಯುಲೆನ್ಸ್ ಚಾಲಕ ಕೇಳಿಕೊಂಡಿದ್ದಾರೆ. ಇಷ್ಟಕ್ಕೆ ಸಿಟ್ಟಾದ ಕಾರಿನಲ್ಲಿದ್ದವರು ಆಂಬ್ಯುಲೆನ್ಸ್ ವಾಹನವನ್ನು ತಡೆದು ನಿಲ್ಲಿಸಿದ್ದಾರೆ. ಮಾತ್ರವಲ್ಲ ಚಾಲಕನ ಮೇಲೆ ಹಲ್ಲೆ ಮಾಡಿದ್ದಾರೆ. ಹಿಂದೆ ಇದ್ದ ಅನಾರೋಗ್ಯ ಪೀಡಿತ ಮಗುವಿನ…
ರಾಜ್ಯ ಸಾರಿಗೆ ನಿಗಮದ ಬಸ್ಗಳಲ್ಲಿ ಹಲವು ಹೊಸ ಪ್ರಯೋಗಗಳು ನಡೆಯುತ್ತಲೆ ಇವೆ. ಬಸ್ನಲ್ಲಿ ಪಾಸ್ ಗಳ ಜೊತೆಗೆ ಹೊಸ ಆಪ್ ಮೂಲಕ ಪಾಸ್ ನವೀಕರಿಸಿಕೊಳ್ಳಬಹುದು. ಈ ಮೂಲಕ ಟಿಕೆಟ್ , ಪಾಸ್ ಕಳೆದು ಹೋದ ಭಯವಿರುವುದಿಲ್ಲ. ಈಗ ಕೆಎಸ್ ಆರ್ ಟಿಸಿ ತನ್ನ ಪ್ರಯಾಣಿಕರಿಗೆ ಹೊಸ ಅಪ್ ಡೇಟ್ ನೀಡಿದೆ. ಎಲ್ಲೆಡೆ ಯುಪಿಎ ಬಳಕೆ ಹೆಚ್ಚಾಗಿದೆ. ಇದನ್ನು ಮನಗಂಡ ಕೆಎಸ್ಆರ್ಟಿಸಿ ಕೂಡ ಬಸ್ ಗಳಲ್ಲಿ ಟಿಕೆಟ್ ಕೊಳ್ಳಲು ಯುಪಿಎ ಪಾವತಿಗೆ ಅವಕಾಶ ಮಾಡಿಕೊಡಲಿದೆ. ಈ ಜೂನ್ 25 ರಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್ ಆರ್ ಟಿಸಿ) ಬಸ್ ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಯುಪಿಐ, ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ಗಳ ಮೂಲಕ ಪಾವತಿಸಬಹುದು. ಹಣವನ್ನು ತೆಗೆದುಕೊಂಡು ಹೋಗುವ ಬಗ್ಗೆ ಚಿಂತಿಸಬೇಕಾಗಿಲ್ಲ. ಕೆಎಸ್ ಆರ್ ಟಿಸಿ ಜೂನ್ 25 ರಿಂದ ನಾಲ್ಕು ಡಿಪೋಗಳಲ್ಲಿ ಎಲೆಕ್ಟ್ರಾನಿಕ್ ಟಿಕೆಟಿಂಗ್ ಯಂತ್ರಗಳ (ಇಟಿಎಂ) ಪ್ರಾಯೋಗಿಕ ಯೋಜನೆಯನ್ನು ಪ್ರಾರಂಭಿಸಲಿದೆ. ಎಲ್ಲಾ ಕಂಡಕ್ಟರ್ಗಳಿಗೆ ತರಬೇತಿ ನೀಡಿದ ನಂತರ…