Subscribe to Updates
Get the latest creative news from FooBar about art, design and business.
- ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
- ತಿಪಟೂರು: ಜೂನ್ 1ರಿಂದ ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
- ತುಮಕೂರು: ವಾಟರ್ ಟ್ಯಾಂಕ್ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು, ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
- ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
- ತುರುವೇಕೆರೆ: ಜೂ. 4ರಂದು ಉಚಿತ ಯೋಗ, ಪ್ರಾಣಾಯಾಮ ತರಗತಿಗಳ ಉದ್ಘಾಟನೆ
- ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
- ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ
Author: admin
ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಗೀತಾ ಶಿವರಾಜ್ ಕುಮಾರ್ ಸೋಲು ಕಂಡಿದ್ದರು. ಇದೇ ಸಂದರ್ಭದಲ್ಲಿ ಮಾತನಾಡಿದ ಗೀತಾ ಶಿವರಾಜ್ ಕುಮಾರ್, ಚುನಾವಣೆ ಎಂದ ಮೇಲೆ ಯಾರಾದರೂ ಸೋಲಬೇಕು, ಯಾರಾದರೂ ಗೆಲ್ಲಬೇಕು. ಹಿಂದೆ ಇಲ್ಲಿ ಕಾಂಗ್ರೆಸ್ ಹಿಂದಿಗಿಂತಲೂ ಹೆಚ್ಚು ಮತ ಬಂದಿವೆ. 5 ಲಕ್ಷಕ್ಕೂ ಹೆಚ್ಚು ಮತಗಳು ನನಗೆ ಸಿಕ್ಕಿವೆ. ಹಿಂದೆ ನನ್ನ ತಂದೆಯೂ ಸೋತಿದ್ದರು. ನಾನೂ ಗೆಲ್ಲುತ್ತೇನೆ ಅಂದುಕೊಂಡಿದ್ದೆ. ಈ ಬಾರೀ ಸಾಧ್ಯವಾಗಿಲ್ಲ ಎಂದರು. ಚುನಾವಣೆ ಬಳಿಕ ಮಾತ್ರವಲ್ಲ, ಯಾವಾಗಲೂ ಶಿವಮೊಗ್ಗ ಜನತೆಗೆ ಇರುತ್ತೇನೆ. ಶಿವಮೊಗ್ಗ ಬಿಟ್ಟು ಹೋಗುವ ಪ್ರಶ್ನೆ ಇಲ್ಲ, ಇಲ್ಲೇ ಇರುತ್ತೇನೆ. ಶಕ್ತಿಧಾಮ ಮಾದರಿ ಇಲ್ಲೊಂದು ಶುರು ಮಾಡುತ್ತೇವೆ, ಮನೆ ಕೂಡ ಮಾಡುತ್ತೇವೆ. ನಮಗೆ ಸರ್ಕಾರದ ಬೆಂಬಲವೂ ಇದೆ. ಟಾಟಾ ಬಾಯ್ ಬಾಯ್ ಹೇಳೋದೆಲ್ಲಾ ಸುಳ್ಳು, ನಿಮ್ಮೊಂದಿಗೆ ಇರಲಿದ್ದೇನೆ. ಇನ್ನೂ ಸಾಕಷ್ಟು ವಿಚಾರಗಳಿವೆ. ಆದರೆ ಅದನ್ನು ಇನ್ನೊಮ್ಮೆ ಬಹಿರಂಗಪಡಿಸುತ್ತೇನೆ ಎಂದು ಹೇಳಿದರು. ಹಿಂದಿನ ಚುನಾವಣೆಗಳಿಗಿಂತ ಈ ಬಾರಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ದೊಡ್ಡ ಮತಗಳು ಬಂದಿವೆ. ಕೊನೆಯವರೆಗೂ ಕ್ಷೇತ್ರದ…
ಯುವ ರಾಜಕುಮಾರ್ ಅವರ ವಿಚ್ಚೇದನ ವಿಚಾರ ಇದೀಗ ದೊಡ್ಡ ಸುದ್ದಿಯಾಗುತ್ತಿದೆ. ನಟ ರಾಘವೇಂದ್ರ ರಾಜ್ ಕುಮಾರ್ ಪುತ್ರ ನಟ ಯುವ ಮತ್ತು ಪತ್ನಿ ಶ್ರೀದೇವಿ ಅವರು ವಿಚ್ಚೇದನಕ್ಕೆ ಅರ್ಜಿ ಹಾಕಿದ್ದಾರೆ ಎಂದು ವರದಿಯಾಗಿದೆ. ಇದರ ಬಗ್ಗೆ ಸುದ್ದಿಗಾರರು ಶಿವಮೊಗ್ಗದಲ್ಲಿ ನಟ ಶಿವರಾಜ್ ಕುಮಾರ್ ಅವರನ್ನು ಕೇಳಿದಾಗ, ನಟ ಯುವ ವಿಚ್ಛೇದನ ವಿಚಾರದ ಬಗ್ಗೆ ಗೊತ್ತಿಲ್ಲ, ಸತ್ಯವಾಗಿಯೂ ಗೊತ್ತಿಲ್ಲ ಎಂದರು. ‘ಯುವ ಡಿವೋರ್ಸ್ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ಹಾಗಾಗಿ, ಮಾಹಿತಿ ಇಲ್ಲದೇ ಮಾತನಾಡೋದು ಸರಿಯಿಲ್ಲ. ಈ ಬಗ್ಗೆ ಮೊಬೈಲ್ನಲ್ಲಿ ನೋಡಿ ತಿಳಿದುಕೊಂಡೆ. ಆ ರೀತಿ ಏನಾದರೂ ಆಗಿದ್ದರೆ ಮನಸ್ಸಿಗೆ ಬೇಜಾರಾಗುತ್ತದೆ’ ಎಂದು ಶಿವರಾಜ್ಕುಮಾರ್ ಅವರು ಹೇಳಿದ್ದಾರೆ. ಗೀತಾ ಶಿವರಾಜ್ ಕುಮಾರ್ ಅವರು ಮಾತನಾಡಿ, ಇದು ನಮ್ಮ ಮನೆಯ ವಿಚಾರ. ಇಲ್ಲಿವರೆಗೂ ಅದರ ಬಗ್ಗೆ ಗೊತ್ತಿಲ್ಲ. ಅದರ ಬಗ್ಗೆ ವಿಚಾರ ಮಾಡುತ್ತೇವೆ. ಈ ವಿಚಾರದಲ್ಲಿ ನಾವು ಇಬ್ಬರು ಮಾತಾನಾಡಬಾರದು ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಬೆಂಗಳೂರು: ಚಿಕ್ಕೋಡಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಪ್ರಿಯಾಂಕ ಜಾರಕಿಹೊಳಿ ಅವರನ್ನು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ನಿವಾಸದಲ್ಲಿ ಅಭಿನಂದಿಸಿದರು. ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್, ಶಾಸಕರಾದ ಅಶೋಕ್ ಪಟ್ಟಣ, ಬಾಬಾಸಾಬ್ ಪಾಟೀಲ್, ಆಸೀಫ್ ಸೇಠ್, ಚನ್ನರಾಜ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ್ ನಾವಲಗಟ್ಟಿ ಮತ್ತಿತರರು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಜಬಲ್ ಪುರದ ಹಿನೊಟಾ ಗ್ರಾಮವು ವಿಶ್ವದಲ್ಲೇ ಅತ್ಯಂತ ದುಬಾರಿ ಮಾವಿನ ಹಣ್ಣಿನ ತೋಟಗಳನ್ನು ಹೊಂದಿದೆ. ದೇಶದ ಹಲವು ರಾಜ್ಯಗಳಲ್ಲಿ ಮಾವು ಬೆಳೆಯಲಾಗುತ್ತದೆ. ಆದರೆ ಜಬಲ್ಪುರದಿಂದ 25 ಕಿ.ಮೀ. ದೂರದಲ್ಲಿರುವ ಚಾರ್ಗ್ವಾನ್ ರಸ್ತೆಯಲ್ಲಿರುವ ಹಿನೋಟಾ ಗ್ರಾಮದಲ್ಲಿ ಮಹಾಕಾಲ್ ಹೈಬ್ರಿಡ್ ಮಾವಿನ ತೋಟಗಳಿವೆ. ಈ ಹಣ್ಣುಗಳನ್ನು ವಿದೇಶಗಳಲ್ಲಿ ಮಾರಾಟ ಮಾಡಿ ಲಕ್ಷಗಟ್ಟಲೆ ಆದಾಯ ಗಳಿಸುತ್ತಾರೆ. ಮಿಯಾಜಾಕಿ ಮಾವಿನ ಹಣ್ಣು ದುಬಾರಿಯಾಗಿರುವುದರಿಂದ ಕಳ್ಳತನ ಹೆಚ್ಚಾಗಿದೆ. ಈಗ ಸಿಸಿ ಕ್ಯಾಮೆರಾಗಳ ಜತೆಗೆ ನೈಟ್ ವಿಷನ್ ಕ್ಯಾಮೆರಾಗಳನ್ನು ಅಳವಡಿಸುತ್ತಿದ್ದಾರೆ. ರಾತ್ರಿ ವೇಳೆ ಭದ್ರೆತೆಗಾಗಿ ನಾಯಿಗಳನ್ನು ಸಹ ತೋಟದಲ್ಲಿ ಬಿಡಲಾಗುತ್ತಿದೆ. ಒಂದು ವೇಳೆ ರಾತ್ರಿ ಕಳ್ಳರು ತೋಟಕ್ಕೆ ನುಗ್ಗಲು ಪ್ರಯತ್ನಿಸಿದರೆ, ಈ ನಾಯಿಗಳು ಕಳ್ಳರ ಮೇಲೆ ದಾಳಿ ಮಾಡುತ್ತವೆ. ವಿಶ್ವದ ಅತ್ಯಂತ ದುಬಾರಿ ಮಾವಿನ ತಳಿಯನ್ನು ಜಪಾನ್ನ ಮಿಯಾಜಾಕಿಯಲ್ಲಿ ಬೆಳೆಯಲಾಗುತ್ತದೆ. ಹೀಗಾಗಿ ಇದಕ್ಕೆ ಮಿಯಾಜಾಕಿ ಮಾವಿನ ಹಣ್ಣು ಎಂದು ಹೆಸರಿಡಲಾಗಿದೆ. ತನ್ನ ವಿಶಿಷ್ಟವಾದ ರುಚಿ, ಕೆನೆ ವಿನ್ಯಾಸ ಮತ್ತು ಗಾಢ ಬಣ್ಣಕ್ಕೆ ಹೆಸರುವಾಸಿಯಾಗಿರುವ ಮಿಯಾಜಾಕಿ ಮಾವಿನ ಹಣ್ಣುಗಳು ತುಂಬಾ ಅಪರೂಪವಾಗಿದ್ದು,…
ಕೆಲ ವಾರಗಳಿಂದ ತಟಸ್ಥವಾಗಿದ್ದ ಅಕ್ಕಿ ಬೆಲೆ ಈಗ ಅಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ. ಗೋಧಿ ಸಹ ತುಸು ಏರಿಕೆಯತ್ತ ಸಾಗಿದೆ.ಸೊಪ್ಪಿನ ದರ ಇಳಿಕೆಯತ್ತ ಮುಖ ಮಾಡಿದ್ದರೆ, ಟೊಮೆಟೊ ಗಗನಮುಖಿಯಾಗಿದ್ದು, ಬೀನ್ಸ್ ಸೇರಿದಂತೆ ತರಕಾರಿ ಬೆಲೆ ಅಲ್ಪ ಇಳಿಕೆಯಾಗಿದೆ. ಅಕ್ಕಿ ಧಾರಣೆ ತುರು ಏರಿಕೆ ಕಂಡಿದ್ದು, ಕೋಳಿ ಮಾಂಸದ ಬೆಲೆಯಲ್ಲಿ ತುಂಬಾ ವ್ಯತ್ಯಾಸ ಕಂಡು ಬಂದಿಲ್ಲ. ಮಸಾಲೆ ಪದಾರ್ಥಗಳ ಧಾರಣೆಯಲ್ಲಿ ಹೆಚ್ಚಿನ ವ್ಯತ್ಯಾಸ ಕಂಡುಬಂದಿಲ್ಲ. ಮೆಣಸು ಮತ್ತೆ ಕೆ.ಜಿಗೆ ₹40 ಏರಿಕೆಯಾಗಿದೆ. ಜೀರಿಗೆ, ಮೆಣಸಿನಕಾಯಿ, ಗೋಡಂಬಿ ದರ ಕೊಂಚ ಹೆಚ್ಚಳ ಕಂಡಿದೆ. ಈ ವಾರ ಸೊಪ್ಪಿನ ಧಾರಣೆ ಅರ್ಧದಷ್ಟು ತಗ್ಗಿದೆ. ಹಿಂದಿನ ವಾರಗಳಲ್ಲಿ ಕೆ.ಜಿ ₹200 ಗಡಿ ದಾಟಿದ್ದರೆ, ಈಗ ₹100 ಸಮೀಪಕ್ಕೆ ಬಂದಿದೆ. ಆದರೆ ಮೆಂತ್ಯ ಸೊಪ್ಪಿನ ಬೆಲೆ ಮಾತ್ರ ಕಡಿಮೆಯಾಗಿಲ್ಲ. ಕೊತ್ತಂಬರಿ ಸೊಪ್ಪು ಕೆ.ಜಿ ₹100-120, ಸಬ್ಬಕ್ಕಿ ಕೆ.ಜಿ ₹100-120, ಮೆಂತ್ಯ ಸೊಪ್ಪು ಕೆ.ಜಿ ₹150-160, ಪಾಲಕ್ ಸೊಪ್ಪು (ಕಟ್ಟು) ₹70-80ಕ್ಕೆ ಇಳಿಕೆ ಕಂಡಿದೆ. ಬೇಳೆ ಕಾಳು, ಧಾನ್ಯಗಳ ಧಾರಣೆ ಏರಿಳಿತ…
ರಾಜ್ ಕುಮಾರ್ ಕುಟುಂಬದ ಕುಡಿ ಯುವ ರಾಜ್ ಕುಮಾರ್ ಅವರು ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ.ಪತ್ನಿಯಿಂದ ಅಗೌರವ ಹಾಗೂ ಮಾನಸಿಕ ಕ್ರೌರ್ಯ ಉಂಟಾಗಿದೆ ಎಂದು ಯುವ ವಿಚ್ಛೇದನ ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದಾರೆ. ಇಬ್ಬರ ಮದುವೆಗೆ ರಾಘವೇಂದ್ರ ದಂಪತಿಯ ವಿರೋಧ ಇತ್ತು ಎಂದು ಮೂಲ ತಿಳಿಸಿದೆ. ಇಬ್ಬರ ಮದುವೆಗೆ ರಾಘವೇಂದ್ರ ದಂಪತಿಯ ವಿರೋಧ ಇದ್ದರೂ, ಪುನೀತ್ ರಾಜ್ ಕುಮಾರ್ ಮುಂದೆ ನಿಂತು ಮದುವೆ ಮಾಡಿಸಿದ್ದರು ಎನ್ನಲಾಗಿದೆ. ಶ್ರೀದೇವಿ ಮತ್ತು ಯುವ ರಾಜ್ ಕುಮಾರ್ ಪರಸ್ಪರ 7 ವರ್ಷಗಳಿಂದ ಪರಿಚಿತರಾಗಿದ್ದರು. ಶ್ರೀದೇವಿ ಅವರು ರಾಜ್ ಅಕಾಡೆಮಿ ನಡೆಸಿಕೊಂಡು ಹೋಗುತ್ತಿದ್ದರು. ಮೈಸೂರು ಮೂಲದ ಹುಡುಗಿ ಶ್ರೀದೇವಿಯನ್ನ ವರಿಸಿದ್ದ ಯುವ ಈಗ ಪತ್ನಿ ಮಾನಸಿಕವಾಗಿ ಟಾರ್ಚರ್ ಕೊಡುತ್ತಿದ್ದಾರೆ ಎಂದು ಆರೋಪ ಮಾಡಿ ಕೇಸ್ ಕೂಡ ದಾಖಲಿಸಿದ್ದಾರೆ. ಕಳೆದೊಂದು ವರ್ಷದಿಂದ ದಂಪತಿ ದೂರವೇ ಇದ್ದರು ಎನ್ನಲಾಗಿದೆ. ಸದ್ಯ ಅಮೆರಿಕಾದಲ್ಲಿ ಶ್ರೀದೇವಿ ಉನ್ನತ ಶಿಕ್ಷಣಕ್ಕಾಗಿ ವಾಸಿಸುತ್ತಿದ್ದಾರೆ. ಯುವ ಡಿವೋರ್ಸ್ ನೋಟಿಸ್ ಗೆ ಶ್ರೀದೇವಿ ಅವರು ಯಾವುದೇ ರೀತಿಯ ಪ್ರತಿಕ್ರಿಯೆ ಇನ್ನೂ ನೀಡಿಲ್ಲ. ʻಯುವ…
ಸದೃಡ ದೇಹ ಹೊಂದಬೇಕು, ಸದಾ ಫಿಟ್ ಎಂಡ್ ಫೈನ್ ಆಗಿ ಇರಬೇಕು ಎಂಬ ಕಾರಣಕ್ಕೆ ಪ್ರೋಟೀನ್ ಪೌಡರ್ ಸಹ ಬಳಸುತ್ತಾರೆ. ಆದರೆ ಈ ಪ್ರೋಟೀನ್ ಪೌಡರ್ ಬಳಸುವ ಮುನ್ನ ಎಚ್ಚರಿಕೆ ವಹಿಸುವುದು ಮುಖ್ಯವಾಗಿದೆ. ICMR ಭಾರತೀಯರ ಫುಡ್ ಡಯಟ್ರಿ ಗೈಡ್ಲೈನ್ಸ್ ಬಿಡುಗಡೆ ಮಾಡಿದ್ದು, ಪ್ರೋಟಿನ್ ಪೌಡರ್ ಬಳಕೆದಾರರನ್ನು ಅಚ್ಚರಿ ಮೂಡಿಸುವ ಅಂಶಗಳು ಈ ವರದಿಯಲ್ಲಿವೆ. ಅತಿಯಾಗಿ ಪ್ರೋಟಿನ್ ಪೌಡರ್ ಸೇವನೆಯಿಂದ ಜೀವಕ್ಕೆ ಅಪಾಯವಿರುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಿದೆ. ಭಾರತದಲ್ಲಿ ಅತಿಹೆಚ್ಚು ಪ್ರೋಟೀನ್ ಪೌಡರ್ಗಳು ಮಾರಟವಾಗುತ್ತಿವೆ. ಇದರಲ್ಲಿ ಸಕ್ಕರೆ, ಸೋಡಿಯಂ, ಪೋಟ್ಯಾಷಿಯಂ ಸೇರಿದಂತೆ ಹಲವು ಕೆಮಿಕಲ್ ಅಂಶಗಳು ಪತ್ತೆಯಾಗಿದ್ದು, ಆರೋಗ್ಯದ ದುಷ್ಪರಿಣಾಮ ಬೀರುತ್ತಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿರುವ ಅನೇಕ ಕಂಪನಿಗಳ ಪ್ರೋಟೀನ್ ಪೌಡರ್ಗಳಲ್ಲಿ ಜೀವಕ್ಕೆ ಕುತ್ತು ತರುವಂತಹ ಕೆಮಿಕಲ್ ಬಳಕೆ ಮಾಡಲಾಗುತ್ತಿದೆಯಂತೆ. ಹೆಚ್ಚಾಗಿ ಸಕ್ಕರೆ ಅಂಶಗಳು ಪ್ರೋಟಿನ್ ಪೌಡರ್ ಗಳಲ್ಲಿ ಬಳಕೆ ಮಾಡಲಾಗುತ್ತಿದ್ದು, ಇದರಿಂದ ಡಯಾಬಿಟಿಸ್ನಂತಹ ಸಮಸ್ಯೆ ಬರುವ ಸಾಧ್ಯತೆಯಿದೆ. ದೇಹಕ್ಕೆ ಕ್ಯಾಲೋರಿ ಒದಗಿಸುವ ಹಿನ್ನಲೆ ಅದರಲ್ಲಿ ಬಳಸುವ ಒಂದಿಷ್ಟು…
ಬೆಂಗಳೂರು: ಆಂಬುಲೆನ್ಸ್ ನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ಮಾಡಿ ಪುಂಡಾಟ ನಡೆಸಿದ ಘಟನೆ ಬೆಂಗಳೂರಿನ ನೆಲಮಂಗಲ ಟೋಲ್ ಬಳಿ ನಡೆದಿದೆ. ಆಂಬ್ಯೂಲೆನ್ಸ್ ಚಾಲಕ ಜಾನ್ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾರೆ. ತುಮಕೂರಿನ ಖಾಸಗಿ ಆಸ್ಪತ್ರೆಯಿಂದ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ರೋಗಿಯೊಬ್ಬರನ್ನು ತುರ್ತು ಚಿಕಿತ್ಸೆಗೆ ಕರೆದುಕೊಂಡು ಹೋಗುತ್ತಿದ್ದ ಖಾಸಗಿ ಆಂಬ್ಯೂಲೆನ್ಸ್ ನ್ನು ಕುಡಿದ ನಶೆಯಲ್ಲಿದ್ದ ನಾಲ್ವರು ಕಾರಿನಲ್ಲಿ ಚೇಸ್ ಮಾಡಿ ಅಡ್ಡಗಟ್ಟಿ ಚಾಲಕನನ್ನು ಥಳಿಸಿದ್ದಾರೆ. ಐದು ತಿಂಗಳ ಮಗುವಿಗೆ ತುರ್ತು ಚಿಕಿತ್ಸೆಗೆ ಆಕ್ಸಿಜನ್ ಮೂಲಕ ಕರೆ ತರಲಾಗುತ್ತಿತ್ತು. ಮಗುವಿನ ಕಂಡಿಷನ್ ಕ್ರಿಟಿಕಲ್ ಇದೆ ಬಿಟ್ಬಿಡಿ ಎಂದು ಮಗುವಿನ ಪೋಷಕರು ಕೈ ಮುಗಿದರೂ ಯುವಕರು ಬಿಡದೇ ಪುಂಡಾಟ ಮೆರೆದಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಹೊಸಕೋಟೆ: ಬಟ್ಟೆ ಒಣ ಹಾಕಲು ಹೋದ ಬಾಲಕನಿಗೆ ವಿದ್ಯುತ್ ಶಾಕ್ ನಿಂದ ಬಾಲಕ ಮೃತಪಟ್ಟಿರುವ ಘಟನೆ ಹೊಸಕೋಟೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ನಡೆದಿದೆ. ಸಾಯಿಭುವನ್ ಮೃತ ಬಾಲಕನಾಗಿದ್ದಾನೆ. ಬೆಳಗ್ಗೆ ಹಾಸ್ಟೆಲ್ ಮಹಡಿ ಮೇಲೆ ಬಟ್ಟೆ ಒಣ ಹಾಕಲು ಹೋದಾಗ ಹಾಸ್ಟೆಲ್ ಮೇಲಿನ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದು, ಮೃತ ವಿದ್ಯಾರ್ಥಿ ಹೊಸಕೋಟೆ ತಾಲೂಕಿನ ಸೂಲಿಬೆಲೆ ನಿವಾಸಿ ಎನ್ನಲಾಗಿದೆ. ಬಾಲಕನ ಸಾವಿಗೆ ವಿದ್ಯಾರ್ಥಿನಿಲಯದ ವಾರ್ಡನ್, ಸಮಾಜ ಕಲ್ಯಾಣ ಇಲಾಖೆ ಮತ್ತು ಬೆಸ್ಕಾಂ ಅಧಿಕಾರಿಗಳು ಸುರಕ್ಷತಾ ಕ್ರಮ ಕೈಗೊಳ್ಳದೆ ಇರುವುದು ಕಾರಣ ಎಂದು ಪೋಷಕರು ಆರೋಪಿಸಿದ್ದು, ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮೈಸೂರು ಸಿದ್ಧಾರ್ಥನಗರ ಸಮೀಪ ಬನ್ನೂರು ರಸ್ತೆಯಲ್ಲಿರುವ ಅನ್ನದಾನೇಶ್ವರ ಮಠದ ಶಿವಾನಂದ ಸ್ವಾಮೀಜಿ (90) ಅವರನ್ನು ಸೋಮವಾರ ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಾಥಮಿಕ ಮಾಹಿತಿ ಪ್ರಕಾರ, ಆಸ್ತಿ ವಿಚಾರದಲ್ಲಿ ಇದ್ದ ತಕರಾರು ಕಾರಣ ಎನ್ನಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ನಜರ್ಬಾದ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿ ರವಿ (60) ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ. ಆತ, ಸ್ವಾಮೀಜಿ ಅವರ ಬಳಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಮಂಚದ ಮೇಲೆ ಮಲಗಿದ್ದಲ್ಲೇ ಶಿವಾನಂದ ಸ್ವಾಮೀಜಿಗೆ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296