Subscribe to Updates
Get the latest creative news from FooBar about art, design and business.
- ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
- ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
- ತಿಪಟೂರು: ಜೂನ್ 1ರಿಂದ ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
- ತುಮಕೂರು: ವಾಟರ್ ಟ್ಯಾಂಕ್ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು, ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
- ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
- ತುರುವೇಕೆರೆ: ಜೂ. 4ರಂದು ಉಚಿತ ಯೋಗ, ಪ್ರಾಣಾಯಾಮ ತರಗತಿಗಳ ಉದ್ಘಾಟನೆ
- ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
- ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ
Author: admin
ಡಾ. ರಾಜ್ ಕುಮಾರ್ ಅವರ ಕುಟುಂಬದ ಕುಡಿ ಗುರು ರಾಜ್ ಕುಮಾರ್ / ಯುವ ರಾಜ್ ಕುಮಾರ್ ಅವರ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡಿದೆ. ಯುವ ರಾಜ್ ಕುಮಾರ್ ಅವರು ತಮ್ಮ ಪತ್ನಿಯಿಂದ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಡಾ ರಾಜ್ ಕುಮಾರ್ ಅವರ ಮೊಮ್ಮಗ ಯುವರಾಜ್ ಕುಮಾರ್ ಡಿವೋರ್ಸ್ಗೆ ಅರ್ಜಿ ಸಲ್ಲಿಸಿದ್ದು, ಕಳೆದ 6 ತಿಂಗಳಿನಿಂದ ಬೇರೆ ಬೇರೆಯಾಗಿ ವಾಸ ಮಾಡುತ್ತಿದ್ದಾರೆ. ಜೂ. 6 ರಂದು ವಿಚ್ಛೇದನಕ್ಕಾಗಿ ಯುವ ರಾಜ್ ಕುಮಾರ್ ಅವರು ತಮ್ಮ ಪತ್ನಿ ಶ್ರೀದೇವಿ ಭೈರಪ್ಪ ಅವರಿಂದ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯವು ಜು. 4 ಕ್ಕೆ ವಿಚಾರಣೆ ನಿಗದಿ ಮಾಡಿದೆ. ಶ್ರೀದೇವಿ ಮತ್ತು ಯುವ ರಾಜ್ ಕುಮಾರ್ ಪರಸ್ಪರ 7 ವರ್ಷಗಳಿಂದ ಪರಿಚಿತರಾಗಿದ್ದರು. ಎರಡೂ ಕುಟುಂಬಗಳ ಒಪ್ಪಿಗೆ ಪಡೆದು ಈ ಜೋಡಿ ಹಸೆಮಣೆ ಏರಿದ್ದರು. ಅಲ್ಲದೇ, ಶ್ರೀದೇವಿ ಭೈರಪ್ಪ ಡಾ. ರಾಜ್ಕುಮಾರ್ ಸಿವಿಲ್ ಅಕಾಡೆಮಿಯ ಜವಾಬ್ದಾರಿಯನ್ನು ಸಹ ವಹಿಸಿಕೊಂಡಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ…
ಅಪ್ರಾಪ್ತ ಬಾಲಕನೊಬ್ಬ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ನಡುರಸ್ತೆಯಲ್ಲಿ ಹಣೆಗೆ ಸಿಂಧೂರವಿಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವೀಕ್ಷಕರನ್ನು ಆಶ್ಚರ್ಯ ಮೂಡಿಸಿದೆ. ಸದ್ಯ ಅಪ್ರಾಪ್ತ ಬಾಲಕನೊಬ್ಬ ವಿದ್ಯಾರ್ಥಿನಿಯೊಬ್ಬಳಿಗೆ ಸಿಂಧೂರವಿಟ್ಟಿರುವ ಈ ಘಟನೆ ಯಾವ ಪ್ರದೇಶದಲ್ಲಿ ನಡೆದಿದೆ, ಅವರಿಬ್ಬರೂ ಯಾರು ಮತ್ತು ಯಾವ ಧರ್ಮದವರು ಎಂದು ಇನ್ನೂ ತಿಳಿದು ಬಂದಿಲ್ಲ. ಸದ್ಯ ಈ ಘಟನೆಯನ್ನು ಸ್ಥಳದಲ್ಲಿದ್ದವರೊಬ್ಬರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಚಿತ್ರಿಸಿದ್ದು ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ವಿಡಿಯೋದಲ್ಲಿ ಶಾಲಾ ಬ್ಯಾಗ್ ಹಾಕಿಕೊಂಡು ತನ್ನ ಸ್ನೇಹಿತೆಯರೊಂದಿಗೆ ಬರುತ್ತಿದ್ದ ವಿದ್ಯಾರ್ಥಿನಿಯ ಹಣೆಗೆ ಈ ಅಪ್ರಾಪ್ತ ಬಾಲಕ ಸಿಂಧೂರವಿಟ್ಟಿದ್ದಾನೆ. ಆಕೆಯೂ ಇದಕ್ಕೆ ಯಾವುದೇ ಪ್ರತಿರೋಧ ತೋರಿಸದಿರುವುದನ್ನು ಗಮನಿಸಿದರೆ ಪರಸ್ಪರ ಒಪ್ಪಿಗೆಯಿಂದಲೇ ನಡೆದಿದೆ ಎಂದು ಹೇಳಬಹುದಾಗಿದೆ. ಅಷ್ಟೇ ಅಲ್ಲ, ಶಾಲಾ ಬಾಲಕಿ ಜೊತೆಯಿದ್ದ ವಿದ್ಯಾರ್ಥಿನಿಯರು ಕೂಡ ಅವರ ಪಕ್ಕದಲ್ಲೇ ಇದ್ದುದನ್ನು ಗಮನಿಸಬಹುದು. ಈ ವಿಡಿಯೋ ಈಗ ಫುಲ್ ವೈರಲ್ ಆಗಿದ್ದು ನೆಟ್ಟಿಗರು ಹಲವು ರೀತಿ ಕಮೆಂಟ್ ಮಾಡುತ್ತಿದ್ದಾರೆ. ಮೊದಲೇ ಸಮಾಜದಲ್ಲಿ ಯಾವಾಗ ಏನು ನಡೆಯುತ್ತದೆ ಎನ್ನುವುದು ತಿಳಿಯುವುದಿಲ್ಲ. ಇನ್ನು…
ಅಮೆರಿಕಾದ ನ್ಯೂಯಾರ್ಕ್ನಲ್ಲಿ ಭಾನುವಾರ ನಡೆದ 2024ರ ಐಸಿಸಿ ಟಿ20 ವಿಶ್ವಕಪ್ ನ 19ನೇ ಪಂದ್ಯದಲ್ಲಿ ಭಾರತ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ 6 ರನ್ ಗಳ ರೋಚಕ ಗೆಲುವು ಸಾಧಿಸಿದೆ. ಇಂದು ನಸ್ಸೌ ಕೌಂಟಿ ಇಂಟರ್ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಟೀಂ ಇಂಡಿಯಾ, 19 ಓವರ್ಗಳಲ್ಲಿ 119 ರನ್ಗಳಿಗೆ ಆಲೌಟ್ ಆಗುವ ಮೂಲಕ ಸಾಧರಣ ಮೊತ್ತ ಕಲೆ ಹಾಕಿತು. ಭಾರತ ತಂಡದ ಬ್ಯಾಟಿಂಗ್ ತೀರಾ ಕಳಪೆಯಾಗಿತ್ತು. ಅಗ್ರ ಕ್ರಮಾಂಕ, ಮಧ್ಯಮ ಕ್ರಮಾಂಕ ಎಲ್ಲವೂ ವಿಫಲವಾಯಿತು. ಹೀಗಾಗಿ ತಂಡ 119 ರನ್ ಗಳಿಗೆ ಆಲೌಟ್ ಆಯಿತು. ಗೆಲುವಿಗೆ 120 ರನ್ ಗಳ ಗುರಿ ಬೆನ್ನತ್ತಿದ ಪಾಕಿಸ್ತಾನ ನಿಗದಿತ 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 113 ರನ್ ಗಳಿಸುವ ಮೂಲಕ ಸೋಲು ಒಪ್ಪಿಕೊಂಡಿತು. ಟೀಂ ಇಂಡಿಯಾ ಬೌಲರ್ ಗಳು ಅದ್ಭುತವಾಗಿ ಬೌಲಿಂಗ್ ಮಾಡಿ, ಪಾಕಿಸ್ತಾನದ ಬ್ಯಾಟರ್ ಗಳು ರನ್…
ಚಾಮರಾಜನಗರ: ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಬಿಳಿಗಿರಿರಂಗನ ಬೆಟ್ಟದ ಮೇಲಿಂದ ಜಿಗಿದು ರಿಯಲ್ ಎಸ್ಟೇಟ್ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಹದೇವನಾಯಕ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿಯಾಗಿದ್ದಾರೆ. ಬೆಟ್ಟದ ಕಡಿದಾದ ಜಾಗದಲ್ಲಿ ಸಿಲುಕಿದ್ದ ಮಹದೇವನಾಯಕ ಅವರ ಮೃತದೇಹವನ್ನು ಶನಿವಾರ ಡ್ರೋನ್ ಬಳಸಿ ಪತ್ತೆ ಮಾಡಲಾಗಿದೆ. ಮಹದೇವನಾಯಕ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಕವಲಂದೆ ಕುಂಬಾರಹಳ್ಳಿಯ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದರು. ಮಹದೇವನಾಯಕ ಮೇ 5 ರಂದು ನಾಪತ್ತೆಯಾಗಿದ್ದಾರೆ ಎಂದು ಕವಲಂದೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಜೂ.6 ರಂದು ಬಿಳಿಗಿರಿರಂಗನಬೆಟ್ಟದ ಬಳಿ ಬೈಕ್ ಪತ್ತೆಯಾಗಿದೆ. ಈ ಜಾಡನ್ನು ಹಿಡಿದ ಪೊಲೀಸರು ಶನಿವಾರ ಡ್ರೋನ್ ಕ್ಯಾಮೆರಾ ಬಳಸಿ ಹುಡುಕಾಟ ನಡೆಸಿದ್ದಾರೆ. ಡ್ರೋನ್ ಕ್ಯಾಮೆರಾದಲ್ಲಿ ಕಮರಿನ ನಡುವೆ ಮೃತದೇಹಸಿಲುಕಿರುವುದು ಪತ್ತೆಯಾಗಿದೆ. ಶವದ ಮೇಲಿನ ಬಟ್ಟೆಯನ್ನು ಸಂಬಂಧಿಕರು ಗುರುತಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಮಧುಮೇಹವನ್ನು ನಿಯಂತ್ರಣದಲ್ಲಿಡಲು ನಿಯಮಿತವಾಗಿ ರಕ್ತ ಪರೀಕ್ಷೆಗಳನ್ನು ಮಾಡಿ. ಇದಲ್ಲದೇ ಆಹಾರಕ್ರಮವನ್ನು ಬದಲಾಯಿಸಬೇಕು. ಅನೇಕ ಜನರು ಮಧುಮೇಹದಿಂದ ಬಳಲುತ್ತಾರೆ. ಮಧುಮೇಹಿಗಳಿಗೆ ವಿವಿಧ ರೋಗಗಳ ಅಪಾಯವೂ ಕೂಡ ಹೆಚ್ಚು. ಅದರಲ್ಲೂ ಅಧಿಕ ರಕ್ತದೊತ್ತಡದ ಸಮಸ್ಯೆ, ಇದಲ್ಲದೆ, ಮೂತ್ರಪಿಂಡ ಮತ್ತು ಹೃದ್ರೋಗದ ಅಪಾಯವೂ ಹೆಚ್ಚಾಗಿರುತ್ತದೆ. ವಿವಿಧ ಕಾಯಿಲೆಗಳನ್ನು ತಪ್ಪಿಸಲು ಮಧುಮೇಹವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಮುಖ್ಯವಾಗಿದೆ. ಮಧುಮೇಹವನ್ನು ನಿಯಂತ್ರಣದಲ್ಲಿಡಲು ನಿಯಮಿತವಾಗಿ ರಕ್ತ ಪರೀಕ್ಷೆಗಳನ್ನು ಮಾಡಿ. ಇದಲ್ಲದೇ ಮಧುಮೇಹವನ್ನು ನಿಯಂತ್ರಿಸಲು ಅನೇಕರು ಆಹಾರಕ್ರಮವನ್ನು ಬದಲಾಯಿಸುತ್ತಾರೆ. ಆದರೆ, ಮಧುಮೇಹವನ್ನು ನಿಯಂತ್ರಿಸಲು ನುಗ್ಗೆ ಸೊಪ್ಪು ತುಂಬಾ ಉಪಯುಕ್ತವೆಂದು ನಿಮಗೆ ತಿಳಿದಿದೆಯೇ? ದಿನವೂ ನುಗ್ಗೆ ಸೊಪ್ಪು ಚಟ್ನಿ ತಿಂದರೆ ಸಕ್ಕರೆ ಖಾಯಿಲೆ ಕಡಿಮೆಯಾಗುತ್ತಾ ಬರುತ್ತದೆ. ಪೋಷಕಾಂಶಗಳಿಂದ ಕೂಡಿದ ನುಗ್ಗೆ ಸೊಪ್ಪಿನಲ್ಲಿ ಹಲವು ಬಗೆಯ ಆ್ಯಂಟಿ ಆಕ್ಸಿಡೆಂಟ್ಗಳಿವೆ. ಪರಿಣಾಮವಾಗಿ, ಮಧುಮೇಹ ಸೇರಿದಂತೆ ವಿವಿಧ ದೈಹಿಕ ಸಮಸ್ಯೆಗಳಿಗೆ ಇದರ ಸೇವನೆ ತುಂಬಾ ಉಪಯುಕ್ತವಾಗಿವೆ. ಇದರಲ್ಲಿ ಉತ್ಕರ್ಷಣ ನಿರೋಧಕಗಳು, ವಿಟಮಿನ್-ಸಿ, ವಿಟಮಿನ್-ಇ ಮತ್ತು ಬೀಟಾ-ಕ್ಯಾರೋಟಿನ್ ಸಮೃದ್ಧವಾಗಿದೆ. ಪರಿಣಾಮವಾಗಿ, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಈ…
ಮೂರು ಬಾರಿ ಬ್ರೆಜಿಲ್ ನ ರಿಯೊ ಡಿ ಜನೈರೊ ಎಂಬಲ್ಲಿನ ಮೇಯರ್ ಆಗಿದ್ದ ಸೀಸರ್ ಮಾಯಾ ಎಂಬವರು ತನ್ನ ಪಕ್ಷದ ಸಭೆಯಲ್ಲಿ ಭಾಗಿಯಾದ ವೇಳೆ ಎಡವಟ್ಟು ಮಾಡಿಕೊಂಡಿದ್ದು, ಟಾಯ್ಲೆಟ್ ನಿಂದ ಭಾಗವಹಿಸಿದ ದೃಶ್ಯ ಎಲ್ಲೆಡೆ ವೈರಲ್ ಆಗಿದೆ. ರಿಯೊ ಡಿ ಜನೈರೊದಲ್ಲಿನ ಸಿಟಿ ಹಾಲ್ ನ ಮಾಜಿ ಮೇಯರ್ ಸೀಸರ್ ಮಾಯಾ ಇತರ ಕೌನ್ಸಿಲ್ ಸದಸ್ಯರೊಂದಿಗಿನ ಅಧಿವೇಶನಕ್ಕಾಗಿ ಆನ್ ಲೈನ್ ನಲ್ಲಿ ಜಾಯಿನ್ ಆಗಿದ್ದಾರೆ. ಝೂಮ್ ಕಾಲ್ ಮೂಲಕ ಲಾಗಿನ್ ಆಗಿ ಅವರು ಸಭೆಗೆ ಜಾಯಿನ್ ಆಗಿದ್ದಾರೆ. ಸಭೆ ನಡೆಯುವಾಗ ಸೀಸರ್ ಟಾಯ್ಲೆಟ್ ನಲ್ಲಿ ಕೂತಿದ್ದರು ಕಂಡಿದೆ. ಝೂಮ್ ಕಾಲ್ ನಲ್ಲಿದ್ದ ಅವರು ಕ್ಯಾಮರಾವನ್ನು ಕಾಲಿನತ್ತ ಇಟ್ಟಿದ್ದಾರೆ. ಇದರಿಂದ ಅವರು ಟಾಯ್ಲೆಟ್ ನಲ್ಲಿ ಕೂತಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಾಗಿದೆ. ಇದು ಗೊತ್ತಾದ ಕೂಡಲೇ ಸೀಸರ್ ಕ್ಯಾಮರಾವನ್ನು ತನ್ನ ಮುಖದತ್ತ ತಿರುಗಿಸಿದ್ದಾರೆ. ಇದನ್ನು ನೋಡಿದ ಇತರೆ ಸದಸ್ಯರು ಮುಜುಗರಕ್ಕೆ ಒಳಗಾಗಿದ್ದಾರೆ. ಕ್ಯಾಮರಾವನ್ನು ಆಫ್ ಮಾಡಿ ಎಂದು ಕೌನ್ಸಿಲರ್ ಸೀಸರ್ ಅವರಿಗೆ ಹೇಳಿದ್ದಾರೆ. ಸೀಸರ್…
ಲೋಕಸಭಾ ಚುನಾವಣೆಯಲ್ಲಿ ಗೆದ್ದು ಸಂಸತ್ ಪ್ರವೇಶಿಸುವ ಮುನ್ನ ಕಂಗನಾ ರಣಾವತ್ ಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಮಹಿಳಾ ಭದ್ರತಾ ಸಿಬ್ಬಂದಿ ಕುಲ್ವಿಂದರ್ ಕೌರ್ ಎಂಬಾಕೆ ಕೆನ್ನೆಗೆ ಬಾರಿಸಿದ್ದರು. ಇದೀಗ ಈ ಯೋಧೆಗೆ ತಮಿಳುನಾಡಿನಿಂದ ಚಿನ್ನದುಂಗುರ ಉಡುಗೊರೆ ನೀಡಲಾಗುತ್ತಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಈ ಘಟನೆಯಲ್ಲಿ ಕೆಲವರು ಮಹಿಳಾ ಉದ್ಯೋಗಿಯನ್ನು ಬೆಂಬಲಿಸುತ್ತಿದ್ದಾರೆ. ಈ ಘಟನೆ ಬಳಿಕ ಕುಲ್ವಿಂದರ್ ಹೆಸರು ದೇಶಾದ್ಯಂತ ಜನಪ್ರಿಯವಾಗುತ್ತಿದೆ. ಸಂಸದರೊಬ್ಬರಿಗೆ ಹೊಡೆದಿದ್ದಕ್ಕಾಗಿ ಹರಿಯಾಣ ಸರ್ಕಾರ ಆಕೆಯನ್ನು ಕರ್ತವ್ಯದಿಂದ ಅಮಾನತುಗೊಳಿಸಿದೆ. ಆದರೆ, ಪಂಜಾಬ್ ರೈತರು ಕುಲ್ವಿಂದರ್ ಕೌರ್ ಬೆಂಬಲಕ್ಕೆ ನೀಡಿದ್ದಾರೆ. ಇದೀಗ ತಮಿಳುನಾಡಿನ ಪೆರಿಯಾರ್ ಅವರ ಅಭಿಮಾನಿಗಳ ಸಂಘವು ಕುಲ್ವಿಂದರ್ ಕೌರ್ ಗೆ ಚಿನ್ನದ ಉಂಗುರವನ್ನು ಉಡುಗೊರೆಯಾಗಿ ಕಳುಹಿಸಲು ನಿರ್ಧರಿಸಿದೆ. ಕೊಯಮತ್ತೂರಿನ ತಂತೈ ಪೆರಿಯಾರ್ ದ್ರಾವಿಡರ್ ಕಳಗಂ (TPDK) 8 ಗ್ರಾಂ ಚಿನ್ನದ ಉಂಗುರವನ್ನು ಉಡುಗೊರೆಯಾಗಿ ಕಳುಹಿಸುವುದಾಗಿ ಘೋಷಿಸಿದ್ದು, ಈ ಸಂಗತಿ ಇದೀಗ ಭಾರಿ ಸಂಚಲನ ಮೂಡಿಸಿದೆ. ಈ ಬಗ್ಗೆ ಟಿಪಿಡಿಕೆ ಪ್ರಧಾನ ಕಾರ್ಯದರ್ಶಿ ಕೋವೈ ರಾಮಕೃಷ್ಣನ್ ಮಾತನಾಡಿ, ಪ್ರತಿಭಟನೆ ನಡೆಸುತ್ತಿರುವ…
ಪ್ರಧಾನಿ ನರೇಂದ್ರ ಮೋದಿಯವರ ಮೂರನೇ ಸಂಪುಟದಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಬಹಳಷ್ಟು ಮಂದಿ ಹಿರಿಯರು ಸಚಿವ ಸ್ಥಾನ ಪಡೆದಿದ್ದು, ಪಕ್ಷದ ಹೊಸ ಅಧ್ಯಕ್ಷ ಯಾರು ಎನ್ನುವ ಕುತೂಹಲ ಸೃಷ್ಟಿಯಾಗಿದೆ. ಭೂಪೇಂದ್ರ ಯಾದವ್, ಶಿವರಾಜ್ ಸಿಂಗ್ ಚೌಹಾಣ್ ಹಾಗೂ ಧರ್ಮೇಂದ್ರ ಪ್ರಧಾನ್ ಕೂಡಾ ಸಚಿವ ಸ್ಥಾನ ಪಡೆದಿದ್ದು, ಬಿಜೆಪಿಯನ್ನು ಮುನ್ನಡೆಸಲು ಹೊಸ ಮುಖಕ್ಕೆ ಅವಕಾಶ ಸಿಗುವುದು ಖಚಿತ. ಕಳೆದ ಬಾರಿ ಸಚಿವರಾಗಿದ್ದ ಕೆಲ ಹಳಬರಿಗೆ ಪಕ್ಷದ ಅಧ್ಯಕ್ಷ ಹುದ್ದೆಯ ಚುಕ್ಕಾಣಿ ನೀಡಿದರೂ ಆಶ್ಚರ್ಯವಿಲ್ಲ. ನಡ್ಡಾ ಅವರ ವಿಸ್ತರಿತ ಅಧ್ಯಕ್ಷಾವಧಿ ಈ ತಿಂಗಳು ಕೊನೆಗೊಳ್ಳುತ್ತದೆ. ಪಕ್ಷದ ಸಂವಿಧಾನ ಅವರಿಗೆ ಎರಡು ಹುದ್ದೆಗಳನ್ನು ಹೊಂದಲು ಅವಕಾಶ ನೀಡಿದ್ದರೂ, ಪಕ್ಷದ ಮುಖಂಡರು ಹೊಸ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಅಧಿಕ. ದಕ್ಷಿಣ ರಾಜ್ಯಗಳ ಪ್ರಮುಖ ಹಿಂದುಳಿದ ವರ್ಗಕ್ಕೆ ಸೇರಿದ ಮಹಿಳೆಗೆ ಈ ಹುದ್ದೆ ನೀಡಲಾಗುತ್ತಿದೆ ಎಂಬ ಸುಳಿವು ಲಭ್ಯವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಮೂರನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪದಗ್ರಹಣ ಹಿನ್ನೆಲೆ ನಿನ್ನೆ ದೇಶಾದ್ಯಂತ ಬಿಜೆಪಿ ಕಾರ್ಯಕರ್ತರು ಮೈತ್ರಿ ಪಕ್ಷಗಳ ಕಾರ್ಯಕರ್ತರು, ಮೋದಿ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಇದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರು ಎಂಬಲ್ಲೂ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ನಡೆಸುತ್ತಿದ್ದರು. ಈ ವೇಳೆ ರಸ್ತೆ ಮೇಲೆ ನಿಂತಿದ್ದ ಇಬ್ಬರಿಗೆ ಚೂರಿ ಇರಿಯಲಾಗಿದೆ. ಬಿಜೆಪಿ ವಿಜಯೋತ್ಸವ ಮೆರವಣಿಗೆ ಬಳಿಕ ಇಬ್ಬರಿಗೆ ಚೂರಿ ಇರಿಯಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರು ಎಂಬಲ್ಲಿ ಘಟನೆ ನಡೆದಿದೆ. ಬೋಳಿಯಾರು ನಿವಾಸಿಗಳಾದ ಸುರೇಶ್ ಹಾಗೂ ನಂದ ಕುಮಾರ್ಗೆ ಚೂರಿ ಇರಿಯಲಾಗಿದೆ. ಮೋದಿ ಪದಗ್ರಹಣ ಹಿನ್ನೆಲೆಯಲ್ಲಿ ಬೋಳಿಯಾರ್ನಲ್ಲಿ ವಿಜಯೋತ್ಸವ ಆಯೋಜಿಸವಾಗಿತ್ತು. ವಿಜಯೋತ್ಸವ ಮುಗಿಸಿ ಬೋಳಿಯಾರು ಪೇಟೆಯಲ್ಲಿ ನಿಂತಿದ್ದ ಇಬ್ಬರು ಯುವಕರ ಮೇಲೆ ದುಷ್ಕರ್ಮಿಗಳು ಅಟ್ಯಾಕ್ ಮಾಡಿದ್ದಾರೆ. ಈ ವೇಳೆ ಬಂದ ಅಪರಿಚಿತ ದುಷ್ಕರ್ಮಿಗಳ ತಂಡದಿಂದ ಏಕಾಏಕಿ ಯುವಕರ ಮೇಲೆ ಅಟ್ಯಾಕ್ ನಡೆದಿದೆ. ಈ ವೇಳೆ ಇಬ್ಬರೂ ಗಾಯಗೊಂಡಿದ್ದು, ಸದ್ಯ ಇಬ್ಬರಿಗೂ ದೇರಳಕಟ್ಟೆಯ…
ಬಹು ದೊಡ್ಡ ದುರಂತವೊಂದು ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಲ್ಪದರಲ್ಲಿ ತಪ್ಪಿದೆ. ನಿನ್ನೆ ಶನಿವಾರ, ಜೂನ್ 8ರಂದು ಸಂಜೆ ಒಂದೇ ರನ್ ವೇಯಲ್ಲಿ ಏರ್ ಇಂಡಿಯಾ ವಿಮಾನ ಟೇಕಾಫ್ ಆದರೆ, ಇಂಡಿಗೋ ವಿಮಾನ ಲ್ಯಾಂಡಿಂಗ್ ಆಗಿದೆ. ಮುಂಬೈನಲ್ಲಿ ಏರ್ ಇಂಡಿಯಾ ವಿಮಾನ ತಿರುವನಂತಪುರಂಗೆ ಟೇಕಾಫ್ ಆಗುತ್ತಿತ್ತು. ಸರಿಯಾಗಿ ಆ ಸಮಯದಲ್ಲಿ ಇಂದೋರ್ನಿಂದ ಇಂಡಿಗೋ ವಿಮಾನ ಆಗಮಿಸಿದೆ. ಇಂಡಿಗೋ ವಿಮಾನಕ್ಕೆ ಕೂಡ ಲ್ಯಾಂಡಿಂಗ್ ಆಗಲು ಅನುಮತಿ ಸಿಕ್ಕಿದೆ. ಅನುಮತಿ ಸಿಕ್ಕಿದ ಕಾರಣ ಪೈಲಟ್ ರನ್ವೇಯಲ್ಲಿ ಇಳಿಸಿ ಅದರ ಚಕ್ರಗಳು ಭೂ ಸ್ಪರ್ಶ ಆಗುತ್ತಿದ್ದಾಗ ಏರ್ ಇಂಡಿಯಾ ವಿಮಾನ ಆಗ ತಾನೇ ಜಸ್ಟ್ ಟೇಕಾಫ್ ಆಗಿತ್ತು. ಅದೇ ಒಂದು ವೇಳೆ ಏರ್ ಇಂಡಿಯಾ ಟೇಕಾಫ್ ಕೆಲ ಸೆಕೆಂಡ್ ವಿಳಂಬವಾಗಿದ್ದರೆ ದುರಂತ ನಡೆದು ಹೋಗಿರುತ್ತಿತ್ತು. ಕ್ಷಣಗಳ ಅಂತರ ಇಲ್ಲದೆ ಹೋಗಿದ್ದರೆ ಹಿಂದಿನಿಂದ ಏರ್ ಇಂಡಿಯಾ ವಿಮಾನ ಕ್ರಾಶ್ ಹೊಡೆಯುವ ಸಾಧ್ಯತೆ ಇತ್ತು. ಇದೀಗ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ನಾಗರಿಕ ವಿಮಾನಯಾನ ನಿರ್ದೇಶನಾಲಯ ತನಿಖೆಗೆ…