Subscribe to Updates
Get the latest creative news from FooBar about art, design and business.
- ಪಾವಗಡ: ಮಾಜಿ ಸಚಿವ, ಹಿರಿಯ ರಾಜಕಾರಣಿ ವೆಂಕಟರಮಣಪ್ಪ ನಿಧನ: ಗಣ್ಯರಿಂದ ಅಂತಿಮ ದರ್ಶನ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ
- ಕೆ.ಎಚ್. ಮುನಿಯಪ್ಪಗೆ ಡಿಸಿಎಂ, ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನಕ್ಕೆ ಒತ್ತಾಯ: ಹೈಕಮಾಂಡ್ಗೆ ಕುರ್ಣೇಗಾಲ ಬೆಟ್ಟಸ್ವಾಮಿ ಆಗ್ರಹ
- ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ
- ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶ್ರೀ ಗುರು ಸಿದ್ದೇಶ್ವರ ದೇವಸ್ಥಾನದ ಜೀರ್ಣೋದ್ದಾರಕ್ಕೆ 1 ಲಕ್ಷ ರೂ. ಧನಸಹಾಯ
- ಮಾಜಿ ಸಚಿವ ವೆಂಕಟರಮಣಪ್ಪ ನಿಧನ: ಡಾ.ಜಿ.ಪರಮೇಶ್ವರ ಅಂತಿಮ ನಮನ
- ಮಿಡಿಗೇಶಿ ಬಳಿ ಭೀಕರ ಬೈಕ್ ಅಪಘಾತ: ಪತ್ನಿ ಸ್ಥಳದಲ್ಲೇ ಸಾವು, ಪತಿಗೆ ತೀವ್ರ ಗಾಯ
- ಜೂನ್ 5 ರಂದು ತುಮಕೂರಿನಲ್ಲಿ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ: ಹೆಸರು ನೋಂದಣಿಗೆ ಜೂನ್ 3 ಕೊನೆ ದಿನ
Author: admin
ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ, ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ಎದುರಾಗಿದೆ. ಯಾಕೆಂದರೆ 7 ನೇ ವೇತನ ಆಯೋಗ ಜಾರಿ ಕುರಿತು ಸರ್ಕಾರವು ಮಹತ್ವದ ಘೋಷಣೆ ಹೊರಡಿಸಿದೆ. ಏಳನೇ ವೇತನ ಆಯೋಗವನ್ನು ರಚಿಸುವುದಾಗಿ ಘೋಷಣೆ ಮಾಡಿದ್ದ ರಾಜ್ಯ ಸರ್ಕಾರ ಕೊನೆಗೂ ಈ ಸಂಬಂಧ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ. ಅಲ್ಲದೆ ಸರ್ಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷ ಸಿ. ಎಸ್. ಷಡಾಕ್ಷರಿ ಮತ್ತು ರಾಜ್ಯ ಸಂಘದ ಪದಾಧಿಕಾರಿಗಳು CM ಸಿದ್ದರಾಮಯ್ಯ ಮತ್ತು DCM ಡಿ. ಕೆ. ಶಿವಕುಮಾರ್ ಭೇಟಿ ಮಾಡಿದ್ದು, 7ನೇ ವೇತನ ಆಯೋಗದ ವರದಿ ಅನುಷ್ಠಾನಗೊಳಿಸುವಂತೆ ಮನವಿ ಮಾಡಿದ್ದಾರೆ. ಈ ವೇಳೆ ಮನವಿಯನ್ನು ಆಲಿಸಿದ ಸಿಎಂ ಮತ್ತು ಡಿಸಿಎಂ ಆದಷ್ಟು ಬೇಗನೇ 7ನೇ ವೇತನ ಆಯೋಗದ ಶಿಫಾರಸುಗಳನ್ನು ಅನುಷ್ಠಾನಗೊಳಿಸುವ ಭರವಸೆಯನ್ನು ನಿಯೋಗಕ್ಕೆ ನೀಡಿದ್ದಾರೆ. ಅಂದಹಾಗೆ ಸರ್ಕಾರಿ ನೌಕಕರು ಲೋಕಸಭಾ ಚುನಾವಣೆಗೂ ಮೊದಲೇ 7 ನೇ ವೇತನ ಆಯೋಗದ ಜಾರಿ ಕುರಿತು ಸರ್ಕಾರಕ್ಕೆ ಅನೇಕ ಬಾರಿ ಮನವಿ ಮಾಡಿದ್ದು, ಸರ್ಕಾರದ ವಿರುದ್ಧ ಹಲವಾರು…
ಅತ್ಯಾಚಾರ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆ ಮರೆಸಿಕೊಳ್ಳಲು ಸಹಾಯ ಮಾಡಿದ ಆರೋಪದಡಿಯಲ್ಲಿ ಇದೀಗ ಪ್ರಜ್ವಲ್ ರೇವಣ್ಣ ಗರ್ಲ್ಫ್ರೆಂಡ್ಗೆ ಎಸ್ ಐಟಿ ನೋಟಿಸ್ ನೀಡಿದೆ. ಇಲ್ಲಿನ ವಿದ್ಯಮಾನಗಳ ಜೊತೆಗೆ, ವಿದೇಶದಲ್ಲಿರುವಾಗ ಸಹಾಯ ಮಾಡಿದ್ದಳು ಗರ್ಲ್ಫ್ರೆಂಡ್ ಎನ್ನಲಾಗಿದೆ. ಹೀಗಾಗಿ ಪ್ರಜ್ವಲ್ ಗರ್ಲ್ಫ್ರೆಂಡ್ ಗೆ ನೋಟಿಸ್ ಜಾರಿ ಮಾಡಲಾಗಿದ್ದು, ಮುಂದಿನ ತನಿಖೆ ಹೇಗೆ ನಡೆಯಲಿದೆ ಎಂಬ ಕುತೂಹಲ ಹೆಚ್ಚಿದೆ. ಪ್ರಜ್ವಲ್ ಗೆ ಗರ್ಲ್ಫ್ರೆಂಡ್ ಹಣ ಸಹಾಯ ಮಾಡಿರುವುದು, ಆಶ್ರಯ ಕಲ್ಪಿಸಿರುವುದು ಈ ಕುರಿತ ಮಹತ್ವದ ಸಾಕ್ಷ್ಯ ದೊರಕಿರುವುದರಿಂದ ನೋಟಿಸ್ ನೀಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಮಹಾರಾಷ್ಟ್ರದ ವೈದ್ಯಕೀಯ ಶಿಕ್ಷಣ ಸಚಿವ ಹಸನ್ ಮುಶ್ರಿಫ್ ಅವರು ನೀಟ್ ಫಲಿತಾಂಶಗಳನ್ನು ಬಹಿರಂಗವಾಗಿ ಟೀಕಿಸಿದ್ದು, ಪರೀಕ್ಷೆಯ ನಡವಳಿಕೆಯಲ್ಲಿ ಸಂಭವನೀಯ ಅವ್ಯವಹಾರ ಆಗಿರುವುದಾಗಿ ಹೇಳಿದ್ದಾರೆ. ಪರೀಕ್ಷೆಯ ಫಲಿತಾಂಶವು ಮಹಾರಾಷ್ಟ್ರದ ವಿದ್ಯಾರ್ಥಿಗಳು ರಾಜ್ಯದೊಳಗಿನ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ಎಂಬಿಬಿಎಸ್ ಕಾರ್ಯಕ್ರಮಗಳಿಗೆ ಪ್ರವೇಶ ಪಡೆಯುವ ಅವಕಾಶದಿಂದ ವಂಚಿತರಾಗುವಂತೆ ಮಾಡಿದೆ ಎಂದು ಅವರು ತೀವ್ರ ಕಳವಳ ವ್ಯಕ್ತಪಡಿಸಿದರು. ಮಹಾರಾಷ್ಟ್ರ ಸರ್ಕಾರವು ಬಹಿರಂಗವಾಗಿ ಇತ್ತೀಚಿನ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET) ಪರೀಕ್ಷೆಯ ಫಲಿತಾಂಶಗಳನ್ನು ತಕ್ಷಣವೇ ರದ್ದುಗೊಳಿಸುವಂತೆ ವಿನಂತಿಸಿದೆ. ನೀಟ್ ಪರೀಕ್ಷೆಯ ಫಲಿತಾಂಶವು ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಮಹಾ ಸರ್ಕಾರ ಆರೋಪಿಸಿದೆ. ಮೇ 5 ರಂದು ದೇಶದ 571 ನಗರಗಳ 4,750 ಕೇಂದ್ರಗಳಲ್ಲಿ ನಡೆದ NEET ಪರೀಕ್ಷೆಯ ವಿವಾದ ದಿನದಿಂದ ದಿನಕ್ಕೆ ದೊಡ್ಡದಾಗುತ್ತಿದೆ. ದಾಖಲೆ ಸಂಖ್ಯೆಯ 67 ಅಭ್ಯರ್ಥಿಗಳು ಟಾಪರ್ ಆಗಿರೋದು ಮತ್ತು ಹರಿಯಾಣದ ಒಂದೇ ಪರೀಕ್ಷಾ ಕೇಂದ್ರದಿಂದ 6 ಜನರು ಟಾಪರ್ ಲಿಸ್ಟಿನಲ್ಲಿ ಇರೋದು ದೇಶದಾದ್ಯಂತ ಉನ್ನತ ಪರೀಕ್ಷೆಯ ನೈತಿಕತೆಯನ್ನು ಪ್ರಶ್ನೆ ಮಾಡಿದೆ.…
ಬೆಂಗಳೂರು: ನಕಲಿ ವೈದ್ಯಕೀಯ ವೃತ್ತಿಯನ್ನು ಬೇರುಸಮೇತ ಕಿತ್ತೊಗೆಯುವ ಉದ್ದೇಶದಿಂದ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್ಗಳು ತಮ್ಮ ಕೆಪಿಎಂಇ(ಕರ್ನಾಟಕ ಪ್ರೈವೆಟ್ ಮೆಡಿಕಲ್ ಎಸ್ಟಾಬ್ಲಿಷ್ ಮೆಂಟ್ ಅಸೋಸಿಯೇಷನ್)ನ ನೋಂದಣಿ ಸಂಖ್ಯೆ, ಆಸ್ಪತ್ರೆಯ ಹೆಸರು ಮತ್ತು ಮಾಲೀಕರ ಹೆಸರನ್ನು ಕಟ್ಟಡದ ಮುಂಭಾಗದಲ್ಲಿ ಪ್ರದರ್ಶಿಸಬೇಕು ಎಂದು ಆರೋಗ್ಯ ಇಲಾಖೆಯು ಆದೇಶ ಹೊರಡಿಸಿದೆ. ಅಲೋಪತಿ ಆಸ್ಪತ್ರೆಗಳು ನೀಲಿ ಬಣ್ಣ ಮತ್ತು ಆಯುರ್ವೇದಿಕ್ ಆಸ್ಪತ್ರೆಗಳು ಹಸಿರು ಬಣ್ಣದ ಬೋರ್ಡ್ ಬಳಸುವ ಮೂಲಕ ಬಣ್ಣ ಸಂಹಿತೆಯನ್ನು ಕಡ್ಡಾಯವಾಗಿ ಅನುಸರಿಸಬೇಕು. ಖಾಸಗಿ ವೈದ್ಯಕೀಯ ಆಸ್ಪತ್ರೆಗಳು ಈ ನಿಯಮಗಳನ್ನು ಅನುಸರಿಸುವಲ್ಲಿ ವಿಫಲವಾದಲ್ಲಿ ಕೆಪಿಎಂಇ ತಿದ್ದುಪಡಿ ಕಾಯಿದೆ 2017ರ ಸೆಕ್ಷನ್ 19(5) ರ ಅನ್ವಯ ಕಠಿಣ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಲಾಗಿದೆ. ಆದೇಶದ ಪ್ರತಿಯನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ನಕಲಿ ಮತ್ತು ಅರ್ಹತೆ ಹೊಂದಿಲ್ಲದ ವೈದ್ಯರು ಸಮಾಜಕ್ಕೆ ಕಂಟಕರಾಗಿದ್ದು, ರೋಗಿಗಳ ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡುತ್ತಿದ್ದಾರೆ. ನಮ್ಮ ಸರಕಾರವು ರೋಗಿಗಳ ಸುರಕ್ಷತೆಗೆ ಮತ್ತು ಉತ್ತಮ ಆರೋಗ್ಯ ಸೇವೆ ಒದಗಿಸಲು ಬದ್ಧವಾಗಿದೆ ಎಂದಿದ್ದಾರೆ.…
ಶುಕ್ರವಾರ ಅಸ್ತಮಿಸಿದ ಶನಿವಾರ ರಾತ್ರಿ ದುಲ್ ಹಜ್ ತಿಂಗಳ ಪ್ರಥಮ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಜೂ.17ರಂದು ಬಕ್ರೀದ್(ಈದುಲ್ ಅಝ್ಹಾ) ಆಚರಿಸಲು ಅಮೀರೆ ಶರೀಅತ್ ಕರ್ನಾಟಕ ಮೌಲಾನಾ ಸಗೀರ್ ಅಹ್ಮದ್ ಖಾನ್ ರಶಾದಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಚಂದ್ರ ದರ್ಶನ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಮೋಡ ಕವಿದ ವಾತಾವರಣದಿಂದಾಗಿ ರಾಜಧಾನಿ ಬೆಂಗಳೂರಿನಲ್ಲಿ ಚಂದ್ರ ದರ್ಶನವಾಗಲಿಲ್ಲ. ಆದರೆ, ಪಾಂಡಿಚೇರಿ, ತಮಿಳುನಾಡಿನ ಪರಂಗಿಪೇಟೆ, ಗುಜರಾತ್ ನ ಲೂನವಾಡ, ನಡ್ಯಾಡ್, ಅಜ್ರಾಕ್ಪುರ್ ಮಂಗ್ರೋಲ್, ಕಚ್ ಸೇರಿದಂತೆ ಇನ್ನತರೆಡೆ ಚಂದ್ರ ದರ್ಶನವಾದ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಜೂ.17ರಂದು ಈದುಲ್ ಅಝ್ ಹಾ ಆಚರಣೆಗೆ ನಿರ್ಧರಿಸಲಾಗಿದೆ ಎಂದು ಚಂದ್ರ ದರ್ಶನ ಸಮಿತಿಯ ಸದಸ್ಯ ಮೌಲಾನಾ ಮಕ್ಸೂದ್ ಇಮ್ರಾನ್ ರಶಾದಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ:…
ಮೈತ್ರಿ ಧರ್ಮವನ್ನು ಪಾಲಿಸಬೇಕಾದ ಅನಿವಾರ್ಯತೆಗೆ ಪ್ರಧಾನಿ ನರೇಂದ್ರ ಮೋದಿ ಸಿಲುಕಿರುವುದರಿಂದ, ಈ ಬಾರಿಯ ಸಂಪುಟದಲ್ಲಿ ಒಂದಕ್ಕಿಂತ ಹೆಚ್ಚು ಖಾತೆಗಳನ್ನು ಹೊಂದಿರುವ ಸಂಖ್ಯೆ ತೀರಾ ಕಡಿಮೆ ಇರಲಿವೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಸತತ ಮೂರನೇ ಬಾರಿಗೆ ಪ್ರಧಾನಿ ಹುದ್ದೆಯನ್ನು ಅಲಂಕರಿಸಲಿರುವ ನರೇಂದ್ರ ಮೋದಿಯವರ ಜತೆಗೆ 30 ಸಚಿವರು ಕೂಡಾ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಸಂಪುಟದಲ್ಲಿ ಒಟ್ಟು 78 ರಿಂದ 81 ಮಂದಿ ಇರಲಿದ್ದಾರೆ. ಮೋದಿಯವರು ಇಂದು ಗೃಹ, ರಕ್ಷಣೆ, ಹಣಕಾಸು ಮತ್ತು ವಿದೇಶಾಂಗ ವ್ಯವಹಾರಗಳು ಸೇರಿದಂತೆ ಪ್ರಮುಖ ಖಾತೆಗಳ ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಿದ್ದಾರೆ. ಇವೆಲ್ಲವೂ ಬಿಜೆಪಿಯ ವಶದಲ್ಲೇ ಮುಂದುವರಿಯುವ ಸಾಧ್ಯತೆಗಳಿವೆ. ಪ್ರಮುಖ ಮೂಲಸೌಕರ್ಯ ಸಚಿವಾಲಯಗಳಾದ ಉಕ್ಕು, ನಾಗರಿಕ ವಿಮಾನಯಾನ ಮತ್ತು ಕಲ್ಲಿದ್ದಲು ಖಾತೆಗಳ ಸಚಿವರು ಕೂಡಾ ಸ್ಥಾನ ಪಡೆಯುವ ನಿರೀಕ್ಷೆ ಇದೆ. ಸಂಜೆ 7:15ರಿಂದ 8 ಗಂಟೆವರೆಗೆ ಸಮಾರಂಭ ನಡೆಯಲಿದ್ದು, ಬೆಳಿಗ್ಗೆಯಿಂದ ನೂತನ ಸಚಿವರಿಗೆ ದೂರವಾಣಿ ಮೂಲಕ ಕರೆ ನೀಡಲಾಗುತ್ತಿದೆ. 10 ವರ್ಷಗಳಲ್ಲಿ ಮೊದಲ ಬಾರಿಗೆ ಬಿಜೆಪಿ ಬಹುಮತ…
ಲಕ್ನೋ: ಮುಸ್ಲಿಮರ ವಿರುದ್ಧ ಪ್ರಚೋದಿಸುವ ಉದ್ದೇಶದಿಂದ ಮುಸ್ಲಿಮರ ವೇಷ ಹಾಕಿ ಅಯೋಧ್ಯೆಯ ಹಿಂದೂಗಳನ್ನು ಟೀಕಿಸಿದ ಧೀರೇಂದ್ರ ರಾಘವ್ ಎಂಬಾತನನ್ನು ಬಂಧಿಸಲಾಗಿದೆ. ಸ್ಕಲ್ ಕ್ಯಾಪ್ ಧರಿಸಿದ ವ್ಯಕ್ತಿಯೊಬ್ಬ “ದೋಗ್ಲೆ” (ಎರಡು ಮುಖದವರು) ಹಿಂದೂಗಳನ್ನು ಉದ್ದೇಶಿಸಿ ಮಾತನಾಡುವ ವಿಡಿಯೊ ವೈರಲ್ ಆಗಿತ್ತು. ಮುಸ್ಲಿಂ ವ್ಯಕ್ತಿ ಎಂದು ಹೇಳಿಕೊಂಡ ಆತ, ಅಯೋಧ್ಯೆಯ ಹಿಂದೂಗಳನ್ನು ಎರಡು ಮುಖದವರು ಎಂದು ಕರೆದಿದ್ದು, ರಾಹುಲ್ ಗಾಂಧಿ ಅಧಿಕಾರಕ್ಕೆ ಬಂದಿದ್ದರೆ, ಮುಸ್ಲಿಮರಿಗೆ ಮೀಸಲಾತಿ ನೀಡುತ್ತಿದ್ದರು ಎಂದು ಹೇಳುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. “ಒಬ್ಬ ನಾಯಕ ನಮಗೆ ಮಸೀದಿ ನಿರ್ಮಿಸಿದರೆ, ನಾವು ನಮ್ಮ ಜೀವನವಿಡೀ ಆತನಿಗೆ ಮತ ಹಾಕುತ್ತೇವೆ. ಆದರೆ ನಿಮಗೆ ಎಲ್ಲವನ್ನೂ ಮಾಡಿದ್ದರೂ ನೀವು ಮೋದಿಗೆ ಮತ ಹಾಕುವುದಿಲ್ಲ” ಎಂದು ಆತ ಹೇಳಿದ್ದಾನೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಹೊಸದಿಲ್ಲಿ: ಸಾಲದ ಸುಳಿಯಲ್ಲಿ ಸಿಲುಕಿರುವ ಶಿಕ್ಷಣ ತಂತ್ರಜ್ಞಾನ ಸಂಸ್ಥೆ BYJU’S ಒಂದೊಮ್ಮೆ 22 ಬಿಲಿಯನ್ ಡಾಲರ್ ಮೌಲ್ಯ ಹೊಂದಿದ್ದರೆ, ಈಗ ಅದರ ನಿವ್ವಳ ಮೌಲ್ಯ ಶೂನ್ಯವಾಗಿದೆ ಎಂದು ಎಚ್ ಎಸ್ ಬಿಸಿ ನಡೆಸಿದ ಸಂಶೋಧನೆ ತಿಳಿಸಿದೆ. ಬೈಜೂಸ್ ನಲ್ಲಿ ಹೂಡಿಕೆ ಕಂಪನಿ ಪ್ರೋಸಸ್ ನ ಶೇ.10ರಷ್ಟು ಪಾಲು ಬಂಡವಾಳದ ಮೌಲ್ಯ ಶೂನ್ಯ ಎಂದು ಎಚ್ ಎಸ್ ಬಿಸಿ ಅಧ್ಯಯನ ತಿಳಿಸಿದೆ. ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಬೈಜೂಸ್ ಹಲವಾರು ಕಾನೂನು ಪ್ರಕರಣಗಳನ್ನು ಎದುರಿಸುತ್ತಿದೆ ಮತ್ತು ತನ್ನ ಉದ್ಯೋಗಿಗಳಿಗೆ ವೇತನ ನೀಡಲು ಹೆಣಗಾಡುತ್ತಿದೆ. ಈ ವರ್ಷದ ಜನವರಿಯಲ್ಲಿ ಅಮೆರಿಕಾದ ಹೂಡಿಕೆ ಸಂಸ್ಥೆ ಬ್ಲ್ಯಾಕ್ ರಾಕ್ ಬೈಜೂಸ್ ನಲ್ಲಿನ ತನ್ನ ಪಾಲನ್ನು 22 ಬಿಲಿಯನ್ ಡಾಲರ್ನಿಂದ 1 ಬಿಲಿಯನ್ ಡಾಲರ್ ಗೆ ಕಡಿತಗೊಳಿಸಿತ್ತು. ಬ್ಲ್ಯಾಕ್ ರಾಕ್ ಸಂಸ್ಥೆ ಬೈಜೂಸ್ ನಲ್ಲಿ ಶೇ.1ಕ್ಕಿಂತಲೂ ಕಡಿಮೆ ಪಾಲು ಹೊಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ತುಮಕೂರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಬಗ್ಗೆ ಸಚಿವ ರಾಜಣ್ಣ ಅವರು ಅಚ್ಚರಿ ಹೇಳಿಕೆ ನೀಡಿದ್ದಾರೆ. ನಾನು ಹಾಸನ ಜಿಲ್ಲಾ ಉಸ್ತುವಾರಿ ಸಚಿವ, ನನಗೆ ಹಾಸನದ ಚುನಾವಣೆ ಜವಾಬ್ದಾರಿ ಕೊಟ್ಟಿದ್ರು. ತುಮಕೂರಿಗೆ ನಾನು, ಪರಮೇಶ್ವರ್ ಮಂತ್ರಿಗಳಾಗಿದ್ದೇವೆ. ಆದರೆ ನಾನು ಹಾಸನ ಜಿಲ್ಲೆಯ ಚುನಾವಣೆ ಬಗ್ಗೆ ಹೆಚ್ಚು ಒತ್ತು ಕೊಟ್ಟೆ. ತುಮಕೂರು ಚುನಾವಣೆ ಬಗ್ಗೆ ನಾನು ಹೆಚ್ಚು ತಲೆ ಕೆಡಿಸಿಕೊಳ್ಳಲು ಹೋಗಲಿಲ್ಲ. ನನ್ನದೊಂದು ಮಧುಗಿರಿ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿದ್ದೆ. ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸದಿದ್ದರೆ ಹಾಸನಕ್ಕೆ ಬರಲ್ಲ ಅಂತ ಹೇಳಿದ್ದೆ, ಈಗ ಗೆಲ್ಲಿಸಿದ್ದಾರೆ ಎಂದರು. ಜಿಲ್ಲೆಯಲ್ಲಿ ಎಲ್ಲರು ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ, ಎಲ್ಲಾ ಪಕ್ಷ, ಜಾತಿಯವರು ಮತ ಹಾಕಿದ್ದಾರೆ. ಪುಟ್ಟಸ್ವಾಮಿಗೌಡರ ಹೆಸರಿನ ಆಧಾರದ ಮೇಲೆ ಹೆಚ್ಚಿನ ಬಹುಮತ ಬರಲು ಸಾಧ್ಯವಾಗಿದೆ. ಈ ಕ್ಷೇತ್ರದ ಜನರು ಗೆಲ್ಲಿಸಿದ್ದಾರೆ ಎಂದು ಅವರಿಗೆ ಅಭಿನಂದನೆ ಸಲ್ಲಿಸಬೇಕು. ನಾನೇ ಗೆಲ್ಲಿಸಿದ್ದೀನಿ ಅಂತಾ ಹೇಳಿದ್ರೆ, ಅದು ದುರಂಹಕಾರದ ಮಾತಾಗುತ್ತೆ ಎಂದರು. ಕಳೆದ ಚುನಾವಣೆಯಲ್ಲಿ ದೇವೇಗೌಡರನ್ನು ಸೋಲಿಸಿದ್ದು ನಾನೇ, ಅದರಲ್ಲಿ ಅನುಮಾನ ಏನು…
ಬೀದರ್: ಜನರು ಜೀವಂತ ಮೀನು ಗಳನ್ನ ನುಂಗುವುದಕ್ಕಾಗಿಯೇ ನೂರಾರು ಸಂಖ್ಯೆಯಲ್ಲಿ ಚಿಕ್ಕಮಕ್ಕಳಿಂದ ಹಿಡಿದು ವಯೋವೃದ್ಧರವರೆಗೂ ಜನ ಜಂಗುಳಿ ಸೇರಿದ ದೃಶ್ಯ ನಗರದ ಓಲ್ಡ್ ಸಿಡಿ ಹಾಗೂ ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಣಣದಲ್ಲಿ ಜರುಗಿದೆ. ಮಿರಗ ಮಳೆ ಆರಂಭವಾಗುವ ಈ ದಿನದಂದೂ ಆರ್ಯುವೇದ ಔಷಧಿಯನ್ನ ಜೀವಂತ ಮೀನಿನ ಬಾಯಿಯೊಳಗೆ ಹಾಕಿ ಅದನ್ನ ಜೀವಂತವಾಗಿ ನುಂಗಿದರೆ ಕೆಮ್ಮು, ಧಮ್ಮು, ಕಮಾಲೇ, ಅಸ್ತಮಾದಂತಾ ಖಾಯಿಲೆಗಳು ವಾಸಿಯಾಗುತ್ತದೆ ಎಂದು ಜನರು ನಂಬಿಕೊಂಡಿದ್ದು, ಅದರಂತೆ ಇದು ನೂರಾರು ವರ್ಷದಿಂದ ನಡೆದುಕೊಂಡು ಬರುತ್ತಿದೆ. ಶತಮಾನದಿಂದ ಇಲ್ಲಿ ಈ ಸಂಪ್ರದಾಯ ನಡೆದುಕೊಂಡು ಬರುತ್ತಿದೆ. ಪ್ರತಿ ವರ್ಷ ಜೂನ್ ತಿಂಗಳು ಆರಂಭದಲ್ಲಿ ಅಂದರೇ ಮಿರುಗು ಮಳೆಯಾದ ತಕ್ಷಣ ಇಲ್ಲಿ ಅಸ್ತಮಾ, ಕೆಮ್ಮಿ ಕಾಮಾಲೆ ರೋಗಗಳು ಇದ್ದವರು ಇಲ್ಲಿಗೆ ಬಂದು ಜಿವಂತ ಮೀನುಗಳನ್ನ ನುಂಗಿ ತಮ್ಮ ಕಾಯಿಲೆಗಳನ್ನ ಕಡಿಮೆಮಾಡಿಕೊಂಡು ಹೋಗುತ್ತಾರೆ. ಹುಮ್ನಾಬಾದ್ ಪಟ್ಟಣದ ಶರಣಪ್ಪ ಜಗದಾಳೆ ಕುಟುಂಬದವರು ಆರ್ಯುವೇದಿಕ್ ಔಷಧಿಯನ್ನ ಜೀವಂತ ಮೀನುಗಳ ಬಾಯಿಯಲ್ಲಿ ಹಾಕಿ ಅಸ್ತಮಾ, ಕಾಮಾಲೆಯಂತ ರೋಗಗಳಿಂದ ಬಳಲುತ್ತಿರುವ ರೋಗಿಗಳಿಗೆ ಮೀನು…