Subscribe to Updates
Get the latest creative news from FooBar about art, design and business.
- ಪಾವಗಡ: ಮಾಜಿ ಸಚಿವ, ಹಿರಿಯ ರಾಜಕಾರಣಿ ವೆಂಕಟರಮಣಪ್ಪ ನಿಧನ: ಗಣ್ಯರಿಂದ ಅಂತಿಮ ದರ್ಶನ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ
- ಕೆ.ಎಚ್. ಮುನಿಯಪ್ಪಗೆ ಡಿಸಿಎಂ, ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನಕ್ಕೆ ಒತ್ತಾಯ: ಹೈಕಮಾಂಡ್ಗೆ ಕುರ್ಣೇಗಾಲ ಬೆಟ್ಟಸ್ವಾಮಿ ಆಗ್ರಹ
- ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ
- ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶ್ರೀ ಗುರು ಸಿದ್ದೇಶ್ವರ ದೇವಸ್ಥಾನದ ಜೀರ್ಣೋದ್ದಾರಕ್ಕೆ 1 ಲಕ್ಷ ರೂ. ಧನಸಹಾಯ
- ಮಾಜಿ ಸಚಿವ ವೆಂಕಟರಮಣಪ್ಪ ನಿಧನ: ಡಾ.ಜಿ.ಪರಮೇಶ್ವರ ಅಂತಿಮ ನಮನ
- ಮಿಡಿಗೇಶಿ ಬಳಿ ಭೀಕರ ಬೈಕ್ ಅಪಘಾತ: ಪತ್ನಿ ಸ್ಥಳದಲ್ಲೇ ಸಾವು, ಪತಿಗೆ ತೀವ್ರ ಗಾಯ
- ಜೂನ್ 5 ರಂದು ತುಮಕೂರಿನಲ್ಲಿ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ: ಹೆಸರು ನೋಂದಣಿಗೆ ಜೂನ್ 3 ಕೊನೆ ದಿನ
Author: admin
ಬೆಂಗಳೂರಿನ ನಮ್ಮ ಮೆಟ್ರೊ ಇದೀಗ ಮಾಸಿಕ 62,500 ರೂಪಾಯಿನಿಂದ 1,06,250 ರೂಪಾಯಿವರೆಗಿನ ಸಂಬಳದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಬಿಎಂಆರ್ ಸಿಎಲ್ ಸಂಸ್ಥೆಯು ಸ್ವತ್ತು ಅಭಿವೃದ್ಧಿ ವಿಭಾಗದಲ್ಲಿ ಎಕ್ಸಿಕ್ಯೂಟಿವ್ ಇಂಜಿನಿಯರ್ (ಸಿವಿಲ್) 1 ಪೋಸ್ಟ್, ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್) 4, ಅಸಿಸ್ಟೆಂಟ್ ಇಂಜಿನಿಯರ್ (ಇ ಅಂಡ್ ಎಂ) 1, ಅಸಿಸ್ಟೆಂಟ್ ಮ್ಯಾನೇಜರ್ (ಮಾರ್ಕೆಟಿಂಗ್) 1 ಸೇರಿದಂತೆ ಒಟ್ಟು 7 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಎಕ್ಸಿಕ್ಯೂಟಿವ್ ಇಂಜಿನಿಯರ್ ಗೆ ಮಾಸಿಕ ವೇತನ 1,06,250 ರೂಪಾಯಿ, ಅಸಿಸ್ಟಂಟ್ ಇಂಜಿನಿಯರ್ ಹುದ್ದಗೆ 62,500,ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗೆ ಮಾಸಿಕ ವೇತನ 62,500 ರೂಪಾಯಿ ನೀಡಲಾಗುತ್ತದೆ. ಈ ಹುದ್ದೆಗಳು ಆನ್ ಲೈನ್ ನಲ್ಲು ಅರ್ಜಿ ಹಾಕಲು ಕೊನೆಯ ದಿನಾಂಕ ಜುಲೈ, 2, 2024 ಆಗಿದ್ದು, ಅರ್ಜಿಯ ಸಹಿ ಮಾಡಿದ ಪ್ರಿಂಟ್ ಔಟ್ ಅನ್ನು ಜುಲೈ 5 ಸಂಜೆ 04ರೊಳಗೆ ಸಲ್ಲಿಸಬೇಕಾಗುತ್ತದೆ. ಆಯ್ಕೆಯಾದರಿಗೆ 3 ವರ್ಷ ಅಷ್ಟೇ ಹುದ್ದೆಯಲ್ಲಿರಬಹುದಾಗಿದೆ. ಬಿಇ, ಬಿ.ಟೆಕ್, ಎಂಬಿಎ ಮುಗಿಸಿದವರಿಗೆ ಬೆಂಗಳೂರಿನಲ್ಲಿ ಉದ್ಯೋಗ ಹರಸುತ್ತಿದ್ದರೆ ಅಂತವರಿಗೆ ನಮ್ಮ…
ಅಯೋಧ್ಯೆಯಲ್ಲಿ ರಾಮನ ದೇವಾಲಯವನ್ನು ನಿರ್ಮಿಸಿದ ನಂತರವೂ, ಇಲ್ಲಿ ಬಿಜೆಪಿ ಸೋತಿದೆ ಅನ್ನೋದೆ ದೊಡ್ಡ ಚರ್ಚೆಯ ವಿಷಯವಾಗಿದೆ. ಇದೆಲ್ಲದರ ನಡುವೆ, ನಿಮಗೊಂದು ಪೌರಾಣಿಕ ಕಥೆ ಗೊತ್ತೆ ? ಸೀತಾ ಮಾತೆ ಅಯೋಧ್ಯೆ ಮತ್ತು ಅಲ್ಲಿನ ಜನರಿಗೆ ನೀಡಿದ ಶಾಪದ ಬಗ್ಗೆ ನಿಮಗೆ ಗೊತ್ತೆ ?ಸೀತಾ ಮಾತೆ ಅಯೋಧ್ಯೆಗೆ ಶಾಪ ನೀಡಿದ್ದಳು. ಸೀತಾ ಮಾತೆಯ ಈ ಶಾಪದಿಂದ, ಅಯೋಧ್ಯೆ ನಗರ ಎಂದಿಗೂ ಪ್ರಗತಿ ಹೊಂದೋದಕ್ಕೆ ಸಾಧ್ಯವಾಗಲಿಲ್ಲ ಎನ್ನುವ ನಂಬಿಕೆ ಇದೆ. ನಗರವು ಯಾವಾಗಲೂ ಒಂದಲ್ಲ ಒಂದು ಕೊರತೆಯನ್ನು ಅನುಭವಿಸುತ್ತೆ? ವೇದಗಳು ಮತ್ತು ಪುರಾಣಗಳಲ್ಲಿ ತಿಳಿಸಿದಂತೆ, ರಾವಣನ ಸಂಹಾರಾದ ಬಳಿಕ, ವನವಾಸವನ್ನು ಕೊನೆಗೊಳಿಸಿ ಶ್ರೀರಾಮನು ಸೀತಾಳೊಂದಿಗೆ ಅಯೋಧ್ಯೆಗೆ ಮರಳಿದ ಸಮಯವದು. ಒಂದೆಡೆ, ಭಗವಾನ್ ರಾಮನ ಆಗಮನದ ಸಂದರ್ಭದಲ್ಲಿ ತುಪ್ಪದ ದೀಪಗಳನ್ನು ಬೆಳಗಿಸುವ ಮೂಲಕ ಜನ ಸಂತೋಷವನ್ನು ಆಚರಿಸುತ್ತಿದ್ದರೆ, ಮತ್ತೊಂದೆಡೆ, ಅಯೋಧ್ಯೆಯ ಜನರು ಸೀತಾ ಮಾತೆಯ ಬಗ್ಗೆ ಸಂಶಯದ ನೋಟ ಬೀರುತ್ತಾ, ಬಾಯಿಂದ ಬಾಯಿಗೆ ವದಂತಿ ಹರಡುತ್ತಿದ್ರು. ಸೀತೆ ಇಷ್ಟು ದಿನ ಅದ್ಯಾವುದೋ ಬೇರೆ ರಾಜ್ಯದ ಜೀವಿಯಾದ ರಾವಣನೊಂದಿಗೆ…
ಚಂದನ್ ಶೆಟ್ಟಿ – ನಿವೇದಿತಾ ಗೌಡ ದಿಢೀರ್ ಅಂತ ವಿಚ್ಛೇದನ ಪಡೆದಿಲ್ಲ. ಒಂದು ವರ್ಷದ ಹಿಂದೆಯೇ ತೀರ್ಮಾನ ಆಗಿತ್ತು ಎಂಬ ಸ್ಫೋಟಕ ಮಾಹಿತಿಯನ್ನ ಲಾಯರ್ ಅನಿತಾ ಬಿಚ್ಚಿಟ್ಟಿದ್ದಾರೆ. ‘’ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಒಂದು ವರ್ಷದ ಹಿಂದೆಯೇ ವಿಚ್ಛೇದನ ಪಡೆಯಲು ನಿರ್ಧರಿಸಿದ್ದರು. ಮಾತುಕತೆ ನಡೆಯುತ್ತಿತ್ತು. ಕುಟುಂಬದ ಹಿರಿಯರು ಮಾತನಾಡಿ ಸಂಧಾನಕ್ಕೆ ಯತ್ನಿಸಿದ್ದರು. ಆದರೆ, ಅದು ಸಾಧ್ಯವಾಗಿಲ್ಲ. ಇಬ್ಬರಲ್ಲೂ ಅವರದ್ದೇ ಆದ ವೃತ್ತಿಜೀವನದ ಕನಸುಗಳಿವೆ. ಹೀಗಾಗಿ, ವರ್ಷದ ಹಿಂದೆಯೇ ಡಿವೋರ್ಸ್ ತೀರ್ಮಾನ ಮಾಡಿಕೊಂಡಿದ್ದರು’’ ಎಂದು ಲಾಯರ್ ಅನಿತಾ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರದ್ದು ಲವ್ ಕಮ್ ಅರೇಂಜ್ಡ್ ಮ್ಯಾರೇಜ್. ಇಬ್ಬರ ಪೋಷಕರೂ ತುಂಬಾ ಪ್ರಯತ್ನ ಪಟ್ಟಿದ್ದಾರೆ. ಆದರೆ, ಒಂದು ಮಾಡಲು ಸಾಧ್ಯವಾಗಿಲ್ಲ. ಒಂದು ವರ್ಷದಿಂದ ವಿಚ್ಛೇದನದ ನಿರ್ಧಾರ ಮಾಡಿದ್ದರು. ಹೀಗಾಗಿ, 6 ತಿಂಗಳು ವೇಯ್ಟಿಂಗ್ ಪೀರಿಯಡ್ ನೀಡದೆ ಕಾನೂನಾತ್ಮಕವಾಗಿ ವಿಚ್ಛೇದನ ನೀಡಲಾಗಿದೆ’’ ಎಂದು ವಕೀಲೆ ಅನಿತಾ ತಿಳಿಸಿದ್ದಾರೆ. ಇಬ್ಬರಿಗೂ ಅವರದ್ದೇ ಆದ ಥಿಂಕಿಂಗ್ ಇದೆ. ಆದರೂ…
ಮಂಡ್ಯ: ನನಗೆ ರಾಜ್ಯದಲ್ಲಿ ಪಕ್ಷ ಕಟ್ಟುವ ಜವಾಬ್ದಾರಿಯನ್ನು ವರಿಷ್ಠರು ನೀಡಿದ್ದಾರೆ. ಹೀಗಾಗಿ ಇನ್ನು ಮುಂದೆ ಸಿನಿಮಾಗಳಲ್ಲಿ ನಟಿಸುವುದಿಲ್ಲ. ಸಿನಿಮಾ ಮಾಡುವ ಬಗ್ಗೆ ಸದ್ಯಕ್ಕೆ ಯಾವುದೇ ಆಲೋಚನೆ ಇಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ತಾಲೂಕಿನ ಚಿಕ್ಕಬಾಣಸವಾಡಿ ಗ್ರಾಮದಲ್ಲಿ ಮಾತನಾಡಿದ ಅವರು, “ಸಿನಿಮಾ ರಂಗವನ್ನು ಪೂರ್ಣವಾಗಿ ತ್ಯಜಿಸಿದ್ದೇನೆ. ಇನ್ನು ಮುಂದೆ ಸಂಪೂರ್ಣ ರಾಜಕಾರಣಿಯಾಗಿರುತ್ತೇನೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಸಂಚರಿಸಿ ಪಕ್ಷ ಸಂಘಟನೆ ಮಾಡುತ್ತೇನೆ ಎಂದಿದ್ದಾರೆ. ಕುಮಾರಸ್ವಾಮಿಯವರ ಮೇಲೆ ವಿಶ್ವಾಸವಿಟ್ಟು ಜನ ಕಾಂಗ್ರೆಸ್ ಪಕ್ಷವನ್ನು ಸೋಲಿಸಿದ್ದಾರೆ. ಕುಮಾರಸ್ವಾಮಿಯವರು ಐದು ವರ್ಷ ಉತ್ತಮವಾಗಿ ಕೆಲಸ ಮಾಡುತ್ತಾರೆ. ಕೇಂದ್ರದಲ್ಲಿ ಸಚಿವ ಸ್ಥಾನಕ್ಕೆ ಡಿಮ್ಯಾಂಡ್ ಮಾಡಲ್ಲ. ಅವರ ಹಿರಿತನದ ಆಧಾರದ ಮೇಲೆ ಉತ್ತಮ ಸ್ಥಾನ ಸಿಗಲಿದೆ ಎಂದರು. ಇದೇ ವೇಳೆ, ಮಾಜಿ ಸಂಸದೆ ಸುಮಲತಾ ಅವರು ಕುಮಾರಸ್ವಾಮಿ ಗೆಲುವು ಬಯಸಿದ್ದರು. ಪ್ರಚಾರ ವೇದಿಕೆ ಹಂಚಿಕೊಳ್ಳದೇ ಇದ್ರೂ ಅವರ ಬೆಂಬಲಿಗರಿಗೆ ಹೇಳಿದ್ದರು” ಎಂದು ತಿಳಿಸಿದರು. ಮೈತ್ರಿ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಸಂಸತ್ ಪ್ರವೇಶಿಸುತ್ತಿದ್ದಾರೆ. ಅವರಿಂದ ತೆರವಾದ ಸ್ಥಾನಕ್ಕೆ…
ಬೆಂಗಳೂರು: ಬೆಂಗಳೂರು ಮೈಸೂರು ದಶಪಥ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ರಸ್ತೆ ಮೇಲೆ ವೇಗವಾಗಿ ಬಂದಂತಹ ಕಾರು ಡಿವೈಡರ್ ಗೆ ಗುದ್ದಿ ಪಕ್ಕದಲ್ಲಿರುವ ಕೆರೆಗೆ ಬಿದ್ದಿದೆ. ಘಟನೆಯಲ್ಲಿ ನಾಲ್ವರಿಗೆ ಗಂಭೀರವಾದ ಗಾಯಗಳಾಗಿವೆ. ತಕ್ಷಣ ಗಾಯಾಳುಗಳನ್ನುಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಬರುವ ವೇಳೆ ವೇಗವಾಗಿ ಬಂದಂತಹ ಕಾರು ನಿಯಂತ್ರಣ ಕಳೆದುಕೊಂಡು ಕೆರೆಗೆ ಬಿದ್ದಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮಂಚಾಲೆ ಗ್ರಾಮದ ಬಳಿ ಮಾರುತಿ ಓಮ್ನಿ ಹಾಗೂ ಇಂಡಿಕಾ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಓಮ್ನಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಜೇಯ(21) ಮೃತ ದುರ್ದೈವಿಯಾಗಿದ್ದಾರೆ. ಓಮ್ನಿ ಕಾರು ಜೋಗದಿಂದ ಶಿವಮೊಗ್ಗ ಕಡೆ ಹೊರಟಿತ್ತು. ಇಂಡಿಕಾ ಕಾರು ಆನಂದಪುರದಿಂದ ಸಾಗರ ಕಡೆಗೆ ತೆರಳುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಂಡಿಕಾ ಕಾರು ಚಾಲಕ ಹಾಗೂ ಮಾರುತಿ ಓಮ್ನಿಯಲ್ಲಿದ್ದ ಯುವಕನಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಉಡುಪಿ: ಇಲ್ಲಿಯ ಸಂತೆಕಟ್ಟೆ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಉಡುಪಿಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಆಯಿಲ್ ಟ್ಯಾಂಕರ್ ಕೆಸರು ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಖಾದ್ಯ ತೈಲ ಸಾಗಣೆ ಮಾಡುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದೆ. ಚಾಲಕನಿಗೆ ತರಚಿದ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಹೈವೇ ಕಾಮಗಾರಿ ಸೂಚನಾ ಫಲಕ ನೋಡದೆ ಮುಚ್ಚಿದ್ದ ಸರ್ವಿಸ್ ರಸ್ತೆಯಲ್ಲಿ ವಾಹನ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಚಿಕ್ಕಮಗಳೂರು: ಶಾರ್ಟ್ ಸರ್ಕ್ಯೂಟ್ ನಿಂದ ಕಾರೊಂದು ಹೊತ್ತಿ ಉರಿದ ಘಟನೆ ನಡೆದಿದ್ದು, ಚಿಕ್ಕಮಗಳೂರಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಸ್ಟಿಫ್ಟ್ ಕಾರೊಂದು ಕಡೂರು ತಾಲೂಕಿನ ಸರಸ್ವತಿಪುರ ಗೇಟ್ ಬಳಿ ಬಂದಾಗ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಕಾರಿನಲ್ಲಿದ್ದ ನಾಲ್ವರು ಕೆಳಗಿಳಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನೋಡ ನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆಗೆ ಸ್ವಿಫ್ಟ್ ಕಾರು ಸುಟ್ಟು ಹೋಗಿದೆ. ಕಡೂರು ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಸರಗೂರು: ತಾಲೂಕಿನ ಹಂಚಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ದಡದಹಳ್ಳಿ ಹಾಡಿಗೆ, ದಡದಹಳ್ಳಿ ಗ್ರಾಮದಿಂದ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಡಾಂಬರೀಕರಣ ಮಾಡಲು ಆಗ್ರಹಿಸಿ, ಕೆಸರು ತುಂಬಿದ ರಸ್ತೆಗೆ ಗಿಡ ನೆಟ್ಟು ಶುಕ್ರವಾರ ದಂದುದು ಅಖಿಲ ಭಾರತ ಜನ ಅಧಿಕಾರ ಸುರಕ್ಷಾ ಸಮಿತಿವತಿಯಿಂದ ಪ್ರತಿಭಟನೆ ಮಾಡಲಾಯಿತು. ನಂತರ ಮಾತನಾಡಿದ ಅಖಿಲ ಭಾರತ ಜನ ಅಧಿಕಾರ ಸುರಕ್ಷಾ ಸಮಿತಿಯ ಮುಖಂಡ ಸುನಿಲ್ ಟಿ.ಆರ್., “ದಡದಹಳ್ಳಿ ಹಾಡಿಯಲ್ಲಿ ಆದಿವಾಸಿ ಜನರು ಕಾಡಂಚಿನ ಪ್ರದೇಶದಲ್ಲಿ ವಾಸಿಸುತ್ತಿದ್ದು, ಪ್ರತಿನಿತ್ಯ ಅವರು ಕಲ್ಲು, ಮಣ್ಣು, ಗುಂಡಿಗಳಿರುವ ಹಾಗೂ ಮಳೆ ಬಂದಾಗ ಕೆಸರುಗದ್ದೆ ಅಂತೆ ಆಗುವ ರಸ್ತೆಯಲ್ಲಿ 3 ಕಿಲೋ ಮೀಟರ್ ನಡೆದು ಓಡಾಡುವ ಪರಿಸ್ಥಿತಿ ಇದೆ. ಒಂದೆಡೆ ಕಾಡುಪ್ರಾಣಿಗಳ ಹಾವಳಿಯಿಂದಾಗಿ ಜೀವ ಭಯದಿಂದ ಓಡಾಡುವಂತಾಗಿದೆ. ಇನ್ನೊಂದೆಡೆ ಹಾಡಿಯಲ್ಲಿ ಶಾಲೆಯು ಇಲ್ಲದಿರುವುದರಿಂದ ಪ್ರತಿನಿತ್ಯ ಮಕ್ಕಳು ನಡೆದು ಹೋಗಬೇಕಾಗುತ್ತದೆ. ತುರ್ತು ಅನಾರೋಗ್ಯದ ಸಂದರ್ಭದಲ್ಲಿ ಆಸ್ಪತ್ರೆಗೆ ಹೋಗಲು ಸಹ ಬಹಳ ಕಷ್ಟವಿದೆ. ಪೌಷ್ಟಿಕ ಆಹಾರ ಸಾಮಗ್ರಿ ಬರುವ ವಾಹನವು ಸಹ ಸರಿಯಾದ ಸಮಯಕ್ಕೆ ಬರಲು…
ತುಮಕೂರು: ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಅಲ್ಲದೆ ಅನೇಕ ಕೆರೆಕಟ್ಟೆಗಳು ಕೋಡಿಬಿದ್ದು ಅಪಾರ ಪ್ರಮಾಣದ ನೀರು ಹರಿದು ಹೋಗುತ್ತಿದೆ. ಕೊರಟಗೆರೆ ತಾಲೂಕು ವ್ಯಾಪ್ತಿಯ ಅತಿ ದೊಡ್ಡ ಕೆರೆಗಳಲ್ಲಿ ಒಂದು ಆಗಿರುವ, ಜಂಪೇನ ಹಳ್ಳಿ ಕೆರೆಗೆ ಭಾರೀ ಪ್ರಮಾಣದ ಮಳೆ ನೀರು ಹರಿದು ಬರುತ್ತಿದ್ದು, ಕೆರೆ ಕೋಡಿ ಬಿದ್ದ ಪರಿಣಾಮ ಸುತ್ತಮುತ್ತಲ ಜಮೀನುಗಳಲ್ಲಿ ನೀರು ಆವರಿಸಿಕೊಂಡಿದೆ. ಇನ್ನೊಂದೆಡೆ ಕಳೆದ ಮೂರು ದಿನಗಳಿಂದ ಸಂಜೆ ವೇಳೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296