Subscribe to Updates
Get the latest creative news from FooBar about art, design and business.
- ಪಾವಗಡ: ಮಾಜಿ ಸಚಿವ, ಹಿರಿಯ ರಾಜಕಾರಣಿ ವೆಂಕಟರಮಣಪ್ಪ ನಿಧನ: ಗಣ್ಯರಿಂದ ಅಂತಿಮ ದರ್ಶನ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ
- ಕೆ.ಎಚ್. ಮುನಿಯಪ್ಪಗೆ ಡಿಸಿಎಂ, ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನಕ್ಕೆ ಒತ್ತಾಯ: ಹೈಕಮಾಂಡ್ಗೆ ಕುರ್ಣೇಗಾಲ ಬೆಟ್ಟಸ್ವಾಮಿ ಆಗ್ರಹ
- ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ
- ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶ್ರೀ ಗುರು ಸಿದ್ದೇಶ್ವರ ದೇವಸ್ಥಾನದ ಜೀರ್ಣೋದ್ದಾರಕ್ಕೆ 1 ಲಕ್ಷ ರೂ. ಧನಸಹಾಯ
- ಮಾಜಿ ಸಚಿವ ವೆಂಕಟರಮಣಪ್ಪ ನಿಧನ: ಡಾ.ಜಿ.ಪರಮೇಶ್ವರ ಅಂತಿಮ ನಮನ
- ಮಿಡಿಗೇಶಿ ಬಳಿ ಭೀಕರ ಬೈಕ್ ಅಪಘಾತ: ಪತ್ನಿ ಸ್ಥಳದಲ್ಲೇ ಸಾವು, ಪತಿಗೆ ತೀವ್ರ ಗಾಯ
- ಜೂನ್ 5 ರಂದು ತುಮಕೂರಿನಲ್ಲಿ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ: ಹೆಸರು ನೋಂದಣಿಗೆ ಜೂನ್ 3 ಕೊನೆ ದಿನ
Author: admin
ಸಿದ್ದಾಪುರ: ನಿಲ್ಲಿಸಿದ್ದ ಆಟೋ ರಿಕ್ಷಾದ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಸಿದ್ದಾಪುರ ಸಮೀಪದ ಬಾಡಗ ಬಾಣಂಗಾಲದಲ್ಲಿ ನಡೆದಿದೆ. ಆಟೋ ಚಾಲಕ ವಿಜಯ್ ಎಂಬುವರು ಎಂದಿನಂತೆ ಮನೆ ಬಳಿ ಆಟೋ ರಿಕ್ಷಾ ನಿಲ್ಲಿಸಿ ಹೊರಗೆ ತೆರಳಿದ್ದರು. ರಾತ್ರಿಯ ವೇಳೆ ನಾಯಿಯನ್ನು ಅಟ್ಟಿಸಿಕೊಂಡು ಬಂದ ಕಾಡಾನೆ ಮನೆ ಸಮೀಪದಲ್ಲಿದ್ದ ರಿಕ್ಷಾ ಮೇಲೆ ದಾಳಿ ನಡೆಸಿದೆ. ಕಾಡಾನೆಯ ದಾಳಿಯ ಪರಿಣಾಮ ಆಟೋದ ಹಿಂಭಾಗಕ್ಕೆ ಹಾನಿಯಾಗಿದೆ. ಕಾಡಾನೆಗಳು ಕಾಫಿ ತೋಟದಲ್ಲಿ ಬೀಡುಬಿಟ್ಟಿದ್ದು, ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಅರಣ್ಯ ಇಲಾಖೆ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಬೇಕು ಎಂದು ಇಲ್ಲಿನ ಸ್ಥಳೀಯರು ಒತ್ತಾಯಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ನವದೆಹಲಿ: ಇಂಡಿಯಾ ಮೈತ್ರಿ ಮುಂದುವರಿಯಬೇಕು ಮತ್ತು ಗುಂಪು “ಸಂಸತ್ತಿನಲ್ಲಿ ಮತ್ತು ಹೊರಗೆ ಒಗ್ಗಟ್ಟಿನಿಂದ ಮತ್ತು ಸಾಮೂಹಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ. ನಿವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಯಲ್ಲಿ ಮಾತನಾಡಿದ ಅವರು, ಜನರು ಆಡಳಿತ ಪಕ್ಷದ ಸರ್ವಾಧಿಕಾರಿ ಮತ್ತು ಪ್ರಜಾಪ್ರಭುತ್ವ ವಿರೋಧಿಗಳ ವಿರುದ್ಧ ಮತ ಚಲಾಯಿಸಿದ್ದಾರೆ ಎಂದರು. ವಿಭಜನೆ, ದ್ವೇಷ ಮತ್ತು ಧ್ರುವೀಕರಣದ ರಾಜಕೀಯವನ್ನು ಮತದಾರರು ತಿರಸ್ಕರಿಸಿದ್ದಾರೆ ಎಂದು ಒತ್ತಿ ಹೇಳಿದ ಖರ್ಗೆ, ಜನರು ನಮ್ಮ ಮೇಲೆ ಗಣನೀಯ ಪ್ರಮಾಣದಲ್ಲಿ ನಂಬಿಕೆ ಇಟ್ಟಿದ್ದಾರೆ ಮತ್ತು ನಾವು ಅದನ್ನು ಉಳಿಸಿಕೊಳ್ಳಬೇಕು ಎಂದರು. ಲೋಕಸಭೆಗೆ ಹೊಸದಾಗಿ ಆಯ್ಕೆಯಾದ ಕಾಂಗ್ರೆಸ್ ಸದಸ್ಯರನ್ನು “ಪ್ರತಿಕೂಲ ಪರಿಸ್ಥಿತಿಗಳಲ್ಲಿ ಹೋರಾಡಿ ಚುನಾವಣೆಯಲ್ಲಿ ಗೆದ್ದವರು” ಎಂದು ಬಣ್ಣಿಸಿ ಅಭಿನಂದಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಹಾವೇರಿ: ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ಅಗ್ನಿ ಅವಘಡದಲ್ಲಿ ಐದು ಅಂಗಡಿಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. ಎಲೆಕ್ಟ್ರಿಕ್ ಅಂಗಡಿ, ಬೇಕರಿ, ಬೊಂಬೆ ಅಂಗಡಿ, ಪೂಟ್ ವೇರ್ ಹಾಗೂ ಹೋಟೆಲ್ ಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಏಕಾಏಕಿ ಬೆಂಕಿ ಧಗಧಗನೆ ಹೊತ್ತಿ ಉರಿದಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆಯ ಮಾಹಿತಿ ತಿಳಿದು ಅಗ್ನಿಶಾಮಕ ವಾಹನ ಸ್ಥಳಕ್ಕಾಗಮಿಸಿ ಬೆಂಕಿ ನಿಯಂತ್ರಣಕ್ಕೆ ತಂದಿದೆ. ಘಟನೆಯಿಂದಾಗಿ 30 ಲಕ್ಷಕ್ಕೂ ಅಧಿಕ ವಸ್ತುಗಳು ಬೆಂಕಿಗಾಹುತಿಯಾಗಿವೆ. ಘಟನಾ ಸ್ಥಳಕ್ಕೆ ಶಾಸಕ ಯು.ಬಿ. ಬಣಕಾರ್ ಭೇಟಿ ನೀಡಿದ್ದಾರೆ. ಹಂಸಭಾವಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಶಿವಮೊಗ್ಗ: ಮಹಾನಗರ ಪಾಲಿಕೆಗೆ ನೂತನ ಆಯುಕ್ತರಾಗಿ ಡಾ.ಕವಿತಾ ಯೋಗಪ್ಪನವರ್ ಅನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಅಧಿಸೂಚನೆ ಹೊರಡಿಸಿದ್ದಾರೆ. ಡಾ. ಕವಿತಾ ಯೋಗಪ್ಪನವರ್, ಕೆಎಎಸ್(ಹಿರಿಯ ಶ್ರೇಣಿ) ಅಧಿಕಾರಿ, ವಿಶೇಷ ಭೂಸ್ವಾಧೀನಾಧಿಕಾರಿ, ಡಾ.ಶಿವರಾಮಕಾರಂತ ಬಡವಾಣೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಇವರನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೂ ಆಯುಕ್ತರು, ಶಿವಮೊಗ್ಗ ಮಹಾನಗರ ವಾಲಿಕೆ ಈ ಹುದ್ದೆಗೆ ವರ್ಗಾಯಿಸಿ ಆದೇಶಿಸಿದ್ದಾರೆ. ಇನ್ನೂ ಈ ಆದೇಶದಿಂದ ಸ್ಥಳ ನಿರೀಕ್ಷೆಗೆ ಬರುವ ಅಧಿಕಾರಿಯು ಮುಂದಿನ ಸ್ಥಳ ನಿಯುಕ್ತಿಗಾಗಿ ತಮ್ಮ ಮಾತೃ ಇಲಾಖೆಯಲ್ಲಿ ಕಾರ್ಯ ವರದಿ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ಜನರಿಗೆ ಇಷ್ಟವಾಗಿಲ್ಲ. ಅದರ ವಿರುದ್ಧ ಮಾತನಾಡುತ್ತಿರೋ ಬಿಜೆಪಿಗರಿಗೆ ಜನರು ಮತ ಹಾಕಿದ್ದಾರೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಬಗ್ಗೆ ಮರು ಪರಿಶೀಲನೆ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡ ಎಂ.ಲಕ್ಷ್ಮಣ್ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ. ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಗ್ಯಾರಂಟಿ ನಿಲ್ಲಿಸುವುದು ಒಳ್ಳೇದು, ಜನರಿಗೆ ಕಾಂಗ್ರೆಸ್ ಗ್ಯಾರಂಟಿಗಳು ಇಷ್ಟ ಅಗಲ್ಲ. ಇಷ್ಟವಿಲ್ಲವೆಂದು ಫಲಿತಾಂಶದ ಮೂಲಕ ತೋರಿಸಿದ್ದಾರೆ ಎಂದರು. ಗ್ಯಾರಂಟಿ ವಿರುದ್ಧ ಮಾತನಾಡಿರೋ ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ಜನರು ಬೆಂಬಲ ನೀಡಿದ್ದಾರೆ. ಹೀಗಾಗಿ ನಮ್ಮ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಬಗ್ಗೆ ಮರು ಪರಿಶೀಲನೆ ಅತ್ಯಗತ್ಯವಿದೆ ಎಂದು ಸಿಎಂ ಸಿದ್ದರಾಮಯ್ಯ ಬಳಿ ಕೋರುವುದಾಗಿ ಅವರು ಹೇಳಿದರು. ನಾನು ಗ್ಯಾರಂಟಿ ಯೋಜನೆ ನಿಲ್ಲಿಸಿಯೇ ಬಿಡಿ ಅಂತ ಹೇಳುತ್ತಿಲ್ಲ. ಯಾರಿಗೆ ತಲುಪಬೇಕೋ ಅವರಿಗೆ ತಲುಪಲಿ. ಬಡವರು, ಮಧ್ಯಮ ವರ್ಗದವರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಮರು ಪರಿಶೀಲಿಸಬೇಕು ಎಂದು ಅವರು ಒತ್ತಾಯಿಸುವುದಾಗಿ ತಿಳಿಸಿದರು.…
ತುಮಕೂರು: ಎಕ್ಸ್ ಪ್ರೆಸ್ ಕೆನಾಲ್ ಪೈಪ್ ಲೈನ್ ಮುಖಾಂತರ ರಾಮನಗರ ಜಿಲ್ಲೆಗೆ ಹೇಮಾವತಿ ನೀರನ್ನು ತೆಗೆದುಕೊಂಡು ಹೋಗಲು ಕಿಲೋಮೀಟರ್ 70 ರಿಂದ ಆರಂಭವಾಗಿರುವ ಕಾಮಗಾರಿಯನ್ನು ತಕ್ಷಣ ನಿಲ್ಲಿಸಲು ತುಮಕೂರಿನ ವಿವಿಧ ಮಠಗಳ ಸ್ವಾಮೀಜಿಗಳು, ಮುಖಂಡರಾದ ಸೊಗಡು ಶಿವಣ್ಣ, ಎಂ.ಟಿ.ಕೃಷ್ಣಪ್ಪ, ಎಸ್ ಡಿ ದಿಲೀಪ್ ಕುಮಾರ್ ದನಿಯಕುಮಾರ್ ಇತರೆ ಸಂಘ ಸಂಸ್ಥೆಗಳ ಮುಖಂಡರುಗಳು ಬೆಂಬಲ ಕೋರಿದರು. ಹೇಮಾವತಿ ಯೋಜನೆ ಆಡಿ ತುಮಕೂರು ಜಿಲ್ಲೆಗೆ ೨೫ ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿರುವುದು ಸರಿ ಅಷ್ಟೇ.? ಆದರೆ ಇದುವರೆಗೂ ಕೂಡ ಯಾವ ವರ್ಷದಲ್ಲೂ ತುಮಕೂರು ಜಿಲ್ಲೆಗೆ ಲಭ್ಯವಾಗಿರುವ ನೀರಿನ ಪ್ರಮಾಣಕ್ಕೆ ಅನುಸಾರವಾಗಿ ಒಂದು ವರ್ಷವೂ ಕೂಡ 25 ಟಿಎಂಸಿ ನೀರು ತುಮಕೂರು ಜಿಲ್ಲೆಗೆ ಬಂದಿರುವುದಿಲ್ಲ. 25 ಟಿಎಂಸಿ ನೀರಿನಲ್ಲಿ ನೀರಾವರಿ ಯೋಜನೆಗಳು ಹಾಗೂ ಕುಡಿಯುವ ನೀರಿನ ಯೋಜನೆಗಳು ಸೇರ್ಪಡೆಗೊಂಡಿರುತ್ತವೆ. ನೀರಿನ ಅಭಾವದಿಂದ. ಈ ಎಲ್ಲ ಯೋಜನೆಗಳು ಸಂಪೂರ್ಣವಾಗಿ ಸ್ಥಗಿತಗೊಂಡಿರುತ್ತವೆ. ಮಳೆಯ ಪ್ರಮಾಣ ಕಡಿಮೆಯಾದಂತ ವರ್ಷಗಳಲ್ಲಿ ತೀವ್ರ ಸಂಕಷ್ಟಕ್ಕೆ ತುಮಕೂರು ಜಿಲ್ಲೆ ಸಿಲುಕಿದೆ. ಪರಿಸ್ಥಿತಿ ಈಗಿರುವಾಗ ಹೇಮಾವತಿ…
ಬೀದರ್: ಮಳೆಗಾಲ ಆರಂಭವಾಗಿರುವ ಹಿನ್ನೆಲೆ ಸಾರ್ವಜನಿಕರು ರಸ್ತೆ ಸುರಕ್ಷತೆಯ ನಿಯಮಗಳನ್ನು ಪಾಲಿಸುವಂತೆ ಬೀದರ್ ಜಿಲ್ಲಾ ಪೊಲೀಸರು ಮನವಿ ಮಾಡಿದ್ದಾರೆ. ಬೀದರ ಜಿಲ್ಲೆಯ ಸಂಚಾರಿ ಪೊಲೀಸರು ಜನ ಸಾಮಾನ್ಯರ ಪ್ರಾಣ ರಕ್ಷಣೆಗೆ ಮಳೆ, ಗಾಳಿ, ಬಿಸಿಲು, ಚಳಿ ಲೆಕ್ಕಿಸದೇ ಸತತವಾಗಿ 24×7 ದುಡಿಯುತ್ತಿದ್ದಾರೆ. ಹಾಗಾಗಿ ಸಾರ್ವಜನಿಕರು ತಪ್ಪದೇ ಸಂಚಾರಿ ನಿಯಮಗಳನ್ನು ಪಾಲಿಸಿ ಸಹಕರಿಸಿ ಎಂದು ಪೊಲೀಸರು ಮನವಿ ಮಾಡಿಕೊಂಡಿದ್ದಾರೆ. ಮಳೆಯ ನಡುವೆಯೂ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಯ ಫೋಟೋವನ್ನು ಹಂಚಿಕೊಳ್ಳಲಾಗಿದ್ದು, ಇದು ಬೀದರ್ ಜಿಲ್ಲಾ ಪೊಲೀಸರ ಕರ್ತವ್ಯ ನಿಷ್ಠೆಯ ನಿದರ್ಶನವಾಗಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುರುವೇಕೆರೆ: “ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತುರುವೇಕೆರೆ ತಾಲೂಕಿನ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರುಗಳು ಹೋರಾಟ ಮಾಡಿ, 45,000 ಮತಗಳ ಅಂತರದಿಂದ ನಮ್ಮ ಬಿಜೆಪಿ ಪಕ್ಷದ ಅಭ್ಯರ್ಥಿ ವಿ. ಸೋಮಣ್ಣರನ್ನು ಗೆಲ್ಲಿಸಿದ್ದಾರೆ. ಎರಡು ಪಕ್ಷಗಳ ಮುಖಂಡರುಗಳಿಗೆ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ” ಎಂದು ತುರುವೇಕೆರೆ ಕ್ಷೇತ್ರದ ಮಾಜಿ ಶಾಸಕ ಮಸಾಲ ಜಯರಾಮ್ ಹೇಳಿದರು. ತುರುವೇಕೆರೆ ತಾಲೂಕಿನ ಚಿಕ್ಕೋನಹಳ್ಳಿಯ ಗೇಟ್ ಬಳಿ ಇರುವ ತಮ್ಮ ಫಾರ್ಮ್ ಹೌಸ್ ನಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಈ ದಿನ ಬಹಳ ಖುಷಿಯಾಗುತ್ತಿದೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರುಗಳು ಮುಖಂಡರುಗಳು ನಾಯಕರುಗಳು ಒಗ್ಗಟ್ಟಿನ ಮಂತ್ರದಿಂದ ವಿ. ಸೋಮಣ್ಣನವರ ಗೆಲುವಿಗೆ ಕಾರಣಕರ್ತರಾಗಿದ್ದಾರೆ. ನಮ್ಮ ಅಭ್ಯರ್ಥಿಯು ಬಹಳ ಸಜ್ಜನಿಕೆಯ ರಾಜಕಾರಣಿ, ಎರಡು ಬಾರಿ ಪರಾಜಿತರಾಗಿದ್ದರು. ಅವರಿಗೆ ತುಮಕೂರು ಜಿಲ್ಲೆ ಮತ್ತು ತುರುವೇಕೆರೆ ಕ್ಷೇತ್ರ ರಾಜಕೀಯವಾಗಿ ಮರುಜನ್ಮ ನೀಡಿದೆ ಎಂದು ಅಭಿಪ್ರಾಯಪಟ್ಟರು. ಮುಂದಿನ ದಿನಗಳಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಣ್ಣನವರು ಹಾಗೂ ಸೋಮಣ್ಣನವರು ಕೇಂದ್ರ ಸರ್ಕಾರದ ಸಚಿವರಾಗುವ ಸಂಭವ ಹೆಚ್ಚಾಗಿದೆ.…
ಸಮಾಜ ಕಲ್ಯಾಣ ಇಲಾಖೆಯು 2023-24 ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದವರೆಗೆ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಜಿಲ್ಲಾ ಮಟ್ಟದಲ್ಲಿ ಬೆಂಗಳೂರಿನ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ ಹಾಗೂ ಪ್ರಾದೇಶಿಕ ತರಬೇತಿ ಕೇಂದ್ರಗಳ ಸಹಯೊಗದಲ್ಲಿ 60 ದಿನಗಳ ವಿವಿಧ ಕೌಶಲ್ಯಾಭಿವೃದ್ಧಿ (ತಾಂತ್ರಿಕ ನೈಪುಣ್ಯತೆ) ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು, ನಿಗದಿತ ನಮೂನೆ ಅರ್ಜಿಯನ್ನು ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಧಾರವಾಡ ಅಥವಾ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಧಾರವಾಡ, ಹುಬ್ಬಳ್ಳಿ, ಕಲಘಟಗಿ, ಕುಂದಗೋಳ ಹಾಗೂ ನವಲಗುಂದ ತಾಲ್ಲೂಕಾ ಕಾರ್ಯಾಲಯ ಮೂಲಕ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಜೂನ್ 30, 2024 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447201 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ವಿಚ್ಛೇದನ ಅರ್ಜಿ ಸಲ್ಲಿಸಿದ್ದರೆ ತಿಂಗಳಾನುಗಟ್ಟಲೇ, ವರ್ಷಗಟ್ಟಲೇ ವಿಚಾರಣೆ ಕೋರ್ಟ್ನಲ್ಲಿ ನಡೆಯುತ್ತೆ. ಆದರೆ, ಚಂದನ್ ಶೆಟ್ಟಿ ನಿವೇದಿತಾ ದಂಪತಿ ವಿಚ್ಛೇದನ ಮಾತ್ರ ಒಂದೇ ದಿನದಲ್ಲಿ ಆಗಿದೆ. ಫ್ಯಾಮಿಲಿ ಕೋರ್ಟ್ನ 13ಬಿ ಸೆಕ್ಷನ್ ನಲ್ಲಿ ಒಂದೇ ದಿನದಲ್ಲಿ ವಿಚ್ಚೇದನ ದೊರೆಯುತ್ತದೆಯೇ ? ಗಂಡ-ಹೆಂಡತಿಗೆ ಜತೆಯಾಗಿ ಬದುಕಲು ಕಷ್ಟವಾಗುತ್ತಿದೆ ಎಂದಾಗ ಅತ್ಯಂತ ಸುಲಭವಾಗಿ ಹಾಗೂ ತ್ವರಿತವಾಗಿ ವಿಚ್ಛೇದನ ಪಡೆಯುವ ಮಾರ್ಗ ಇದು. ಹಿಂದೂ ವಿವಾಹ ಕಾಯಿದೆ 1955ರ ಸೆಕ್ಷನ್ 13ಬಿಯು ಫ್ಯಾಮಿಲಿ ಕೋರ್ಟ್ನಲ್ಲಿ ದಂಪರಿಗಳಿಗೆ ಸಮ್ಮತಿಯ ಒಪ್ಪಿಗೆ ನೀಡಿ ಡಿವೋರ್ಸ್ ಪಡೆಯಲು ಅವಕಾಶ ದಯಪಾಲಿಸುತ್ತದೆ. ಇದಕ್ಕಾಗಿ ಗಂಡ-ಹೆಂಡತಿ ಇಬ್ಬರೂ ಮ್ಯೂಚುವಲ್ ಕನ್ಸೆಂಟ್ ಅಂದರೆ ಶಾಂತಿಯುತ ಪ್ರತ್ಯೇಕತೆಗೆ ಒಪ್ಪಿಗೆ ನೀಡುವ ಅಗ್ರಿಮೆಂಟ್ ಅನ್ನು ಕೋರ್ಟ್ಗೆ ನೀಡಬೇಕು. 1976ರ ಮೇ 27 ರಂದು ಹಿಂದೂ ವಿವಾಹ ಕಾಯಿದೆಯಲ್ಲಿ ಈ ನಿಬಂಧನೆಯನ್ನು ಸೇರಿಸಲಾಗಿದೆ. ಈ ಕನ್ಸೆಂಟ್ ಫಾರ್ಮ್ ನಲ್ಲಿ ಡಿವೋರ್ಸ್ ಅರ್ಜಿ ಸಲ್ಲಿಕೆ ಮಾಡಬೇಕಾದಲ್ಲಿ ಎರಡೂ ಕಡೆಯವರು ಕೆಲವೊಂದು ಷರತ್ತುಗಳನ್ನು ಪಾಲನೆ ಮಾಡಬೇಕಾಗುತ್ತದೆ. ಇಬ್ಬರೂ ಕೂಡ ಕಳೆದೊಂದು ವರ್ಷದಿಂದ ಒಟ್ಟಿಗೆ ವಾಸ…