Subscribe to Updates
Get the latest creative news from FooBar about art, design and business.
- ಪಾವಗಡ: ಮಾಜಿ ಸಚಿವ, ಹಿರಿಯ ರಾಜಕಾರಣಿ ವೆಂಕಟರಮಣಪ್ಪ ನಿಧನ: ಗಣ್ಯರಿಂದ ಅಂತಿಮ ದರ್ಶನ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ
- ಕೆ.ಎಚ್. ಮುನಿಯಪ್ಪಗೆ ಡಿಸಿಎಂ, ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನಕ್ಕೆ ಒತ್ತಾಯ: ಹೈಕಮಾಂಡ್ಗೆ ಕುರ್ಣೇಗಾಲ ಬೆಟ್ಟಸ್ವಾಮಿ ಆಗ್ರಹ
- ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ
- ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶ್ರೀ ಗುರು ಸಿದ್ದೇಶ್ವರ ದೇವಸ್ಥಾನದ ಜೀರ್ಣೋದ್ದಾರಕ್ಕೆ 1 ಲಕ್ಷ ರೂ. ಧನಸಹಾಯ
- ಮಾಜಿ ಸಚಿವ ವೆಂಕಟರಮಣಪ್ಪ ನಿಧನ: ಡಾ.ಜಿ.ಪರಮೇಶ್ವರ ಅಂತಿಮ ನಮನ
- ಮಿಡಿಗೇಶಿ ಬಳಿ ಭೀಕರ ಬೈಕ್ ಅಪಘಾತ: ಪತ್ನಿ ಸ್ಥಳದಲ್ಲೇ ಸಾವು, ಪತಿಗೆ ತೀವ್ರ ಗಾಯ
- ಜೂನ್ 5 ರಂದು ತುಮಕೂರಿನಲ್ಲಿ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ: ಹೆಸರು ನೋಂದಣಿಗೆ ಜೂನ್ 3 ಕೊನೆ ದಿನ
Author: admin
ಸರಗೂರು: ತಾಲ್ಲೂಕಿನ ಪಟ್ಟಣದ ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯ ಎಲ್ಲಾ ಮಕ್ಕಳಿಗೆ ನೋಟ್ ಪುಸ್ತಕ, ಇಂಗ್ಲಿಷ್ ಡಿಕ್ಷನರಿ, ಪೆನ್ಸಿಲ್ ಮತ್ತು ಸಿಹಿ ಲಡ್ಡು ಹಂಚುವ ಮೂಲಕ ಪಿ.ಸಿ.ಸಿ. ರಾಜ್ಯ ಉಪಾಧ್ಯಕ್ಷರು, ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ ರವರ ಹುಟ್ಟುಹಬ್ಬವನ್ನು ಶನಿವಾರ ದಂದು ಆಚರಿಸಲಾಯಿತು. ನಂತರ ರಾಜೀವ್ ಗಾಂಧಿ ಪಂಚಾಯತ್ ರಾಜ್ ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ ಗ್ರಾಮೀಣ ಮಹೇಶ್ ಮಾತನಾಡಿ, “ನಂಜುಂಡಸ್ವಾಮಿರವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ವಂಚಿತರಾದ ನಂತರ, ನಡೆದ ವಿಧಾನ ಪರಿಷತ್ ಸದಸ್ಯ ಸ್ಥಾನದ ಆಕಾಂಕ್ಷಿಯೂ ಆಗಿದ್ದರು. ಆದರೆ ಯಾವುದೇ ಅವಕಾಶಗಳು ಇವರಿಗೆ ಲಭಿಸಲಿಲ್ಲ. ಇದರ ನಡುವೆ ಬೆಂಗಳೂರಿನಲ್ಲಿ ಕಾರು ಅಪಘಾತಕ್ಕೆ ಸಿಲುಕಿ ಪ್ರಾಣಾಪಾಯದಿಂದ ಪಾರಾಗಿ ಪುನರ್ಜನ್ಮವನ್ನು ಪಡೆದವರಾಗಿದ್ದಾರೆ. ಅದೇ ರೀತಿ ಮುಂದಿನ ದಿನಗಳಲ್ಲಿ ರಾಜಕೀಯ ಪುನರ್ಜನ್ಮ ತಾಳಲಿ ಎಂದು ಆಶಿಸುತ್ತಾ ಹುಟ್ಟು ಹಬ್ಬದ ಶುಭಾಶಯಗಳು ಕೋರುತ್ತಿದ್ದೇವೆ” ಎಂದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಸೇವಾದಳ ತಾಲ್ಲೂಕು ಕಾರ್ಯಕರ್ತ ಕೊತ್ತೇಗಾಲ…
ತಿಪಟೂರು: ತಿಪಟೂರು ನಗರದ ಪುರಾತನ ಕಾಲದ ಕಲ್ಲೇಶ್ವರ ಸ್ವಾಮಿ ದೇವಸ್ಥಾನದ ಅಭಿವೃದ್ಧಿ ಹೆಸರಿನಲ್ಲಿ, ದೇವಸ್ಥಾನದ ಆವರಣದಲ್ಲಿ ಹಳ್ಳಿ ಮರ, ಬೇವಿನ ಮರ, ಹತ್ತಿಮರ, ಬಿಲ್ಪತ್ರೆ ಮರ ಹಾಗೂ ಬನ್ನಿಮರಗಳಿದ್ದು ಹತ್ತಾರು ವರ್ಷಗಳಿಂದ ಭಕ್ತರು ಇವುಗಳನ್ನು ಪೂಜಿಸಿಕೊಂಡು ಬರುತ್ತಿದ್ದಾರೆ. “ದೇವರ ಹೆಸರಿನ ಅಭಿವೃದ್ಧಿಯಲ್ಲಿ ಪೌಳಿ ನಿರ್ಮಿಸಲು ಅಡ್ಡವಾಗುತ್ತಿದೆ ಎಂದು, ಇಂಥ ಫಲವತ್ತಾದ ದೈವಿಕ ಮರಗಳನ್ನು ಕಡಿಸಲು ಯಾವುದೇ ಕಾರಣಕ್ಕೆ ಬಿಡುವುದಿಲ್ಲ” ಎಂದು ಬಿಜೆಪಿ ಮುಖಂಡ ಲೋಕೇಶ್ವರ್ ತಿಳಿಸಿದರು. “ಮೊನ್ನೆ ತಾನೆ ಪರಿಸರ ದಿನಾಚರಣೆ ನಡೆದಿದ್ದು ಎಲ್ಲಾ ಕಡೆ ಗಿಡಗಳನ್ನು ನೆಟ್ಟು ಪೋಷಿಸಿ ಬೆಳೆಸಲು ಅರಿವು ಮೂಡಿಸುತ್ತಾರೆ. ಮರುದಿನವೇ 40 ರಿಂದ 50 ವರ್ಷದ ಮರಗಳನ್ನು ಕಡಿಸಲು ಪ್ರಯತ್ನಿಸುತ್ತಾರೆ” ಎಂದು ಲೋಕೇಶ್ವರ್ ತಿಳಿಸಿದರು. ಈ ಸುದ್ದಿಗೋಷ್ಠಿಯಲ್ಲಿ ಮಾಜಿ ನಗರಸಭೆ ಮಾಜಿ ಉಪಾಧ್ಯಕ್ಷ ಸೊಪ್ಪ ಗಣೇಶ್ ಅಯ್ಯಪ್ಪ ಸ್ವಾಮಿ ಭಕ್ತರು ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆಯು ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್ ನೀಡಿದ್ದು, ಶೀಘ್ರವೇ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪ್ರಯಾಣ ದರ ಶೇ.10ರಿಂದ 15 ರಷ್ಟು ಹೆಚ್ಚಳ ಮಾಡಲು ಚಿಂತನೆ ಮಾಡಲಾಗಿದೆ. ಸಾರಿಗೆ ಬಸ್ ಪ್ರಯಾಣ ದರ ಏರಿಕೆಗೆ ಸಂಬಂಧಿಸಿದಂತೆ ಚರ್ಚೆಗಳು ಶುರುವಾಗಿದ್ದು, ನಿಗಮಗಳಿಂದ ಪ್ರಸ್ತಾವನೆ ಬಂದರೆ ಪರಿಶೀಲನೆ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ವರ್ಷದಿಂದ ವರ್ಷಕ್ಕೆ ಡೀಸೆಲ್, ಬಿಡಿ ಭಾಗಗಳ ದರ ಹೆಚ್ಚಳ, ಸಿಬ್ಬಂದಿ ವೇತನ ಹೆಚ್ಚಳ ಸೇರಿದಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಖರ್ಚು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಸಾರಿಗೆ ಸಂಸ್ಥೆ ರಾಜ್ಯ ಸರ್ಕಾರಕ್ಕೆ ಬೇಡಿಕೆ ಸಲ್ಲಿಸುವ ಸಾಧ್ಯತೆ ಇದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಳಗಾವಿ: ಖನಗಾಂವ ಕೆಎಚ್ ಗ್ರಾಮದ ಬಳಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರನೊಬ್ಬ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಸಂಭವಿಸಿದೆ. ವಿಠ್ಠಲ ದತ್ತಾ ಲೋಕರೆ(29) ಮೃತ ದುರ್ದೈವಿಯಾಗಿದ್ದಾರೆ. ಬೆಳಗಾವಿ ಕಡೆಯಿಂದ ಬರುತ್ತಿದ್ದ ಬಸ್ ಗುದ್ದಿದ ಪರಿಣಾಮ ಅಪಘಾತ ಸಂಭವಿಸಿತ್ತು. ಅಪಘಾತವನ್ನು ನಿಯಂತ್ರಿಸಲು ಹೋಗಿ ಬಸ್ ಕೂಡ ಪಲ್ಟಿಯಾಗಿದೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಾರಿಹಾಳ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕರ್ನಾಟಕಕ್ಕೆ ಮುಂದಿನ 7 ದಿನ ಮಳೆ ಅಬ್ಬರಿಸಲಿದ್ದು, ಮುನ್ನೆಚ್ಚರಿಕೆ ನೀಡಲಾಗಿದೆ. ಕರ್ನಾಟಕದ ಯಾವ ಯಾವ ಜಿಲ್ಲೆಗಳಲ್ಲಿ ಮುಂಗಾರು ಮಳೆ ಅಬ್ಬರಿಸಲಿದೆ? ಬನ್ನಿ ಸಂಪೂರ್ಣ ಮಾಹಿತಿ ತಿಳಿಯೋಣ. ಮತ್ತೊಂದು ಕಡೆ ಕರ್ನಾಟಕದ ಬಹುತೇಕ ಕೆರೆಗಳು & ಹಳ್ಳಕೊಳ್ಳ ತುಂಬಿ ಹರಿಯುತ್ತಿವೆ. ಹೀಗಿದ್ದಾಗಲೇ ಕರಾವಳಿ ಜಿಲ್ಲೆಗಳಾದ ಉಡುಪಿ & ದಕ್ಷಿಣ ಕನ್ನಡದಲ್ಲಿ ಭಾರಿ ಭರ್ಜರಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಹಾಗೇ ಉತ್ತರ ಕನ್ನಡದ ಹಲವು ಪ್ರದೇಶಗಳಲ್ಲಿ ಭರ್ಜರಿ ಮಳೆ ಬೀಳುವ ಎಚ್ಚರಿಕೆ ನೀಡಲಾಗಿದೆ. ಕಾವೇರಿ ತವರು ಕೊಡಗು ಜಿಲ್ಲೆ ಸೇರಿ ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು & ಉಡುಪಿ, ಚಾಮರಾಜನಗರ, ಮಂಡ್ಯ, ಮಂಗಳೂರು, ಉತ್ತರ ಕನ್ನಡ, ತುಮಕೂರು & ಹಾಸನ ಜಿಲ್ಲೆಯ ಬಹುತೇಕ ಭಾಗದಲ್ಲಿ ಭರ್ಜರಿ ಮಳೆ ಆಗಲಿದೆ. ಚಿತ್ರದುರ್ಗ, ಬೆಳಗಾವಿ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಿಗೆ ಭರ್ಜರಿ ಮಳೆ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಉತ್ತರ ಕರ್ನಾಟಕದಲ್ಲೂ ಮಳೆ ಅಬ್ಬರ ತೋರಿಸಲಿದ್ದು, ಉತ್ತರ ಕರ್ನಾಟಕದ ವಿಜಯಪುರ & ಕಲಬುರಗಿ, ರಾಯಚೂರು ಸೇರಿ ಯಾದಗಿರಿ, ಬೀದರ್, ಬಾಗಲಕೋಟೆ, ಬೆಳಗಾವಿ,…
ಮೈಸೂರು: ಮೈಸೂರಿನ ಹಳೆ ಕೆಸರೆಯ ಗುಜರಿಯಲ್ಲಿ ವಿಷಾನಿಲ ಸೋರಿಕೆಯಿಂದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಪ್ರಕರಣ ನಡೆದಿದೆ. ಸುಮಾರು 30ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದು, ಐವರ ಸ್ಥಿತಿ ಗಂಭೀರವಾಗಿದೆ. ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುತ್ತಮುತ್ತಲ ಜನರಿಗೆ ಕೆಮ್ಮು, ಉಸಿರಾಟ ತೊಂದರೆ ಕಾಣಿಸಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಅಮರಾವತಿ: ಜೂನ್ 12 ರಂದು ಮೂರನೇ ಬಾರಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪಕ್ಷದ ಮೂಲಗಳ ಪ್ರಕಾರ, . ಗನ್ನವರಂ ವಿಮಾನ ನಿಲ್ದಾಣದ ಬಳಿಯ ಕೇಸರಪಲ್ಲಿ ಐಟಿ ಪಾರ್ಕ್ ನಲ್ಲಿ ನಾಯ್ಡು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಜೂನ್ 12 ರಂದು ಬೆಳಿಗ್ಗೆ 11:27 ಕ್ಕೆ ಗನ್ನವರಂ ವಿಮಾನ ನಿಲ್ದಾಣದ ಬಳಿಯ ಕೇಸರಪಲ್ಲಿ ಐಟಿ ಪಾರ್ಕ್ನಲ್ಲಿ ಚಂದ್ರಬಾಬು ನಾಯ್ಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಾಯ್ಡು ಅವರು 1995 ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾದರು ಮತ್ತು 2004 ರವರೆಗೆ ಆಡಳಿತ ನಡೆಸಿದರು. ಒಂದು ದಶಕದ ನಂತರ ಮತ್ತು ಅಖಂಡ ರಾಜ್ಯವನ್ನು ತೆಲಂಗಾಣ ಮತ್ತು ಉಳಿದ ಆಂಧ್ರಪ್ರದೇಶವಾಗಿ ವಿಭಜಿಸಿದ ನಂತರ, ನಾಯ್ಡು 2014 ರಲ್ಲಿ ಹೊಸದಾಗಿ ರಚಿಸಲಾದ ರಾಜ್ಯದ ಮೊದಲ ಮುಖ್ಯಮಂತ್ರಿಯಾಗಿ ಹೊರಹೊಮ್ಮಿದ್ದರು. ಆದಾಗ್ಯೂ, ವೈಎಸ್ಆರ್ಸಿಪಿ ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡಿದ್ದರಿಂದ ಅವರು 2019 ರ ಚುನಾವಣೆಯಲ್ಲಿ ಸೋತರು. ಐದು…
ಚಂಡಿಗಢ ವಿಮಾನ ನಿಲ್ದಾಣದಲ್ಲಿ ನಟಿ ಹಾಗೂ ನೂತನ ಸಂಸದೆ ಕಂಗನಾ ರಣಾವತ್ ಅವರಿಗೆ ಭದ್ರತಾ ಸಿಬ್ಬಂದಿ ಕುಲ್ವಿಂದರ್ ಕೌರ್ ಅವರಿಗೆ ಗಾಯಕ ವಿಶಾಲ್ ದದ್ಲಾನಿ ಕೆಲಸದ ಆಫರ್ ನೀಡಿದ್ದಾರೆ. ‘ನಾನು ಎಂದಿಗೂ ಹಿಂಸೆಯನ್ನು ಬೆಂಬಲಿಸುವುದಿಲ್ಲ. ಆದರೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಸಿಬ್ಬಂದಿಯ ಸಿಟ್ಟು ಏನು ಎಂಬುದು ನನಗೆ ಚೆನ್ನಾಗಿ ಅರ್ಥ ಆಗುತ್ತದೆ. ಕುಲ್ವಿಂದರ್ ಕೌರ್ ವಿರುದ್ಧ ಸಿಐಎಸ್ ಎಫ್ ನವರು ಏನಾದರೂ ಕ್ರಮ ಕೈಗೊಂಡರೆ, ಅವರಿಗಾಗಿ ನನ್ನಲ್ಲಿ ಉದ್ಯೋಗ ಕಾದಿರುತ್ತದೆ ಎಂಬುದನ್ನು ನಾನು ಖಚಿತಪಡಿಸುತ್ತೇನೆ. ಜೈ ಹಿಂದ್, ಜೈ ಜವಾನ್, ಕೈ ಕಿಸಾನ್’ ಎಂದು ವಿಶಾಲ್ ದದ್ಲಾನಿ ಇನ್ ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ. ‘ಸ್ಕ್ಯಾನ್ ಮಾಡಲು ಕಂಗನಾ ಅವರಿಗೆ ತಮ್ಮ ಫೋನ್ ನೀಡಲು ಸೂಚಿಸಲಾಯಿತು. ಆದರೆ ಈಗ ತಾನು ಸಂಸದೆ ಎಂಬ ಕಾರಣಕ್ಕೆ ಅವರು ಫೋನ್ ನೀಡಲು ನಿರಾಕರಿಸಿದರು. ಅಲ್ಲಿಂದ ವಾಗ್ವಾದ ಶುರುವಾಯಿತು. ಕುಲ್ವಿಂದರ್ ಕೌರ್ ಅವರನ್ನು ಕೆಲಸದಿಂದ ತೆಗೆದುಹಾಕಿದರೆ ಯಾರಾದರೂ ಅವರನ್ನು ನನ್ನ ಸಂಪರ್ಕಕ್ಕೆ ತನ್ನಿ. ಅವರಿಗೆ…
ತುಮಕೂರು: ರಾಷ್ಟ್ರೀಯ ಹೆದ್ದಾರಿ 4ಕ್ಕೆ ಅಡ್ಡಲಾಗಿ ನಿರ್ಮಿಸಿರುವ ಯಲ್ಲಾಪುರಕ್ಕೆ ಹೋಗುವ ಅಂಡರ್ ಪಾಸ್ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ಇದರಿಂದಾಗಿ ಪಾವಗಡ, ಮಧುಗಿರಿ, ಕೊರಟಗೆರೆಗೆ ಹೋಗುವ ಪ್ರಯಾಣಿಕರ ಪರದಾಡುವಂತಾಯಿತು. ರಾಷ್ಟ್ರೀಯ ಹೆದ್ದಾರಿ 4ಕ್ಕೆ ಅಡ್ಡಲಾಗಿ ನಿರ್ಮಿಸಿರುವ ಅಂಡರ್ ಪಾಸ್ ಇದಾಗಿದ್ದು, ಇಲ್ಲಿ ಟ್ರಾಪಿಕ್ ಜಾಮ್ ಆಗಿ ಸುಮಾರು 30ನಿಮಿಷಗಳ ಕಾಲ ಆಂಬುಲೆನ್ಸ್ ಮತ್ತು ಶಾಲಾ ಬಸ್ ಗಳು, ಫ್ಯಾಕ್ಟರಿಯ ಬಸ್ ಗಳು ರಸ್ತೆಯುದ್ದಕ್ಕೂ ಕ್ಯೂ ನಿಲ್ಲುವಂತಾಯಿತು. ವಿಡಿಯೋ ನೋಡಿ:
ತುಮಕೂರು: ಲೇಡಿಸ್ ಹಾಸ್ಟೆಲ್ ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ತುಮಕೂರು ನಗರದ ಹೊಸ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಈ ಹಾಸ್ಟೆಲ್ ನಲ್ಲಿ 300 ವಿದ್ಯಾರ್ಥಿನಿಯರಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ ಅಪಾಯ ಉಂಟಾಗಿಲ್ಲ. ಇನ್ನೂ ಹೊಗೆ ಕಾಣಿಸಿಕೊಂಡ ವೇಳೆ ವಿದ್ಯಾರ್ಥಿನಿಯರು ಹಾಸ್ಟೆಲ್ ನಿಂದ ಹೊರ ಬಂದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಹೊಗೆಯ ಪರಿಣಾಮ 6 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ. ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ ನಡೆಸಿ ಅಧಿಕಾರಿಗಳು ಹಾಗೂ ಹಾಸ್ಟೆಲ್ ವಾರ್ಡನ್, ವಿದ್ಯಾರ್ಥಿನಿಯರ ಬಳಿ ಮಾಹಿತಿ ಪಡೆದರು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದು, ಹೆಚ್ಚಿನ ಅನಾಹುತ ತಪ್ಪಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…