Subscribe to Updates
Get the latest creative news from FooBar about art, design and business.
- ಪಾವಗಡ: ಮಾಜಿ ಸಚಿವ, ಹಿರಿಯ ರಾಜಕಾರಣಿ ವೆಂಕಟರಮಣಪ್ಪ ನಿಧನ: ಗಣ್ಯರಿಂದ ಅಂತಿಮ ದರ್ಶನ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ
- ಕೆ.ಎಚ್. ಮುನಿಯಪ್ಪಗೆ ಡಿಸಿಎಂ, ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನಕ್ಕೆ ಒತ್ತಾಯ: ಹೈಕಮಾಂಡ್ಗೆ ಕುರ್ಣೇಗಾಲ ಬೆಟ್ಟಸ್ವಾಮಿ ಆಗ್ರಹ
- ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ
- ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶ್ರೀ ಗುರು ಸಿದ್ದೇಶ್ವರ ದೇವಸ್ಥಾನದ ಜೀರ್ಣೋದ್ದಾರಕ್ಕೆ 1 ಲಕ್ಷ ರೂ. ಧನಸಹಾಯ
- ಮಾಜಿ ಸಚಿವ ವೆಂಕಟರಮಣಪ್ಪ ನಿಧನ: ಡಾ.ಜಿ.ಪರಮೇಶ್ವರ ಅಂತಿಮ ನಮನ
- ಮಿಡಿಗೇಶಿ ಬಳಿ ಭೀಕರ ಬೈಕ್ ಅಪಘಾತ: ಪತ್ನಿ ಸ್ಥಳದಲ್ಲೇ ಸಾವು, ಪತಿಗೆ ತೀವ್ರ ಗಾಯ
- ಜೂನ್ 5 ರಂದು ತುಮಕೂರಿನಲ್ಲಿ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ: ಹೆಸರು ನೋಂದಣಿಗೆ ಜೂನ್ 3 ಕೊನೆ ದಿನ
Author: admin
ಕನ್ನಡ ಕಿರುತೆರೆಯ ಜನಪ್ರಿಯ ಜೋಡಿಗಳಲ್ಲಿ ಒಂದಾದ ಚಂದನ್ ಶೆಟ್ಟಿ- ನಿವೇದಿತಾ ದಾಂಪತ್ಯದಲ್ಲಿ ಬಿರುಕು ಉಂಟಾಗಿದ್ದು, ಪರಸ್ಪರ ಒಪ್ಪಿಗೆ ಮೂಲಕ ವಿಚ್ಛೇದನ ಪಡೆದುಕೊಳ್ಳಲು ಕೋರ್ಟ್ ಮೆಟ್ಟಿಲೇರಿದ್ದಾರೆ. ಶಾಂತಿನಗರ ಕೋರ್ಟ್ ನಲ್ಲಿ ನಿನ್ನೆ ಕೇಸ್ ದಾಖಲಿಸಿದ್ದಾರೆ. ಪ್ರಕರಣದ ಮೊದಲ ವಿಚಾರಣೆ ಹಿನ್ನೆಲೆಯಲ್ಲಿ ಇಬ್ಬರೂ ಇಂದು 2ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯಕ್ಕೆ ಹಾಜರಾದರು ಎಂದು ಮೂಲಗಳು ತಿಳಿಸಿವೆ. ಈ ಬೆಳವಣಿಗೆ ಬಗ್ಗೆ ಚಂದನ್ ಮತ್ತು ನಿವೇದಿತಾ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ವೃತ್ತಿಜೀವನದ ಒಳಿತಿನ ದೃಷ್ಟಿಯಿಂದ ಅವರು ಡಿವೋರ್ಸ್ ಪಡೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಅವರಿಬ್ಬರ ನಡುವಿನ ದಾಂಪತ್ಯ ಜೀವನ ಬಿರುಕುಗೊಳ್ಳಲು ಕಾರಣವೇನೆಂಬುದು ತಿಳಿದುಬಂದಿಲ್ಲ. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರು ‘ಬಿಗ್ ಬಾಸ್’ ರಿಯಾಲಿಟಿ ಶೋನಲ್ಲಿ ಪರಿಚಿತಗೊಂಡು, ಆನಂತರ ಹೊರಗೆ ಬಂದಮೇಲೆ ಪ್ರೀತಿಯಲ್ಲಿದ್ದರು. ಬಳಿಕ ಹಿರಿಯರ ಒಪ್ಪಿಗೆ ಮೇರೆಗೆ 2020ರ ಫೆಬ್ರವರಿಯಲ್ಲಿ ದಾಂಪತ್ಯ ಬದುಕಿಗೆ ಕಾಲಿಟ್ಟಿದ್ದರು. ಕಳೆದ ಒಂದು ವಾರದ ಹಿಂದಷ್ಟೇ ಈ ಜೋಡಿ ಕಾರ್ಯಕ್ರಮವೊಂದರಲ್ಲಿ ಒಟ್ಟಿಗೆ ಕಾಣಿಸಿಕೊಂಡಿತ್ತು. ಕಲರ್ಸ್ ಕನ್ನಡ ವಾಹಿನಿಯಲ್ಲಿ…
ಭಾರತೀಯ ಸೇನೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಸ್ಪೋರ್ಟ್ಸ್ಪರ್ಸನ್ (ಹವಿಲ್ದಾರ್ & ನಾಯ್ಬ್ ಸುಬೇದಾರ್) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಭಾರತೀಯ ಸೇನೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪೂರ್ಣಗೊಳಿಸಿರಬೇಕು. ಭಾರತೀಯ ಸೇನೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 17.5 ವರ್ಷ ಮತ್ತು ಗರಿಷ್ಠ 25 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ ಫಿಜಿಕಲ್ ಫಿಟ್ನೆಸ್ ಟೆಸ್ಟ್,ಫಿಜಿಕಲ್ ಸ್ಟಾಂಡರ್ಡ್ಸ್ ಟೆಸ್ಟ್ & ಸ್ಕಿಲ್ ಟೆಸ್ಟ್, ಮೆಡಿಕಲ್ ಟೆಸ್ಟ್ ಇರುತ್ತದೆ. ಸೆಪ್ಟೆಂಬರ್ 30, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ಅರ್ಜಿ ಕಳುಹಿಸುವ ವಿಳಾಸವನ್ನು ಈ ಕೆಳಗೆ ನೀಡಲಾಗಿದೆ.…
ಇದೀಗ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಸೀತಾ–ರಾಮ ಕಲ್ಯಾಣಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದೀಗ ಅದ್ಧೂರಿಯಾಗಿ ನಿಶ್ಚಿತಾರ್ಥವೂ ನೆರವೇರುತ್ತಿದೆ. ಇನ್ನೇನು ಯಾವುದೇ ವಿಘ್ನ ಬಾರದಂತೆ ಸೀತಾ-ರಾಮ ಒಂದಾದರೆ ಸಾಕಪ್ಪ ಎನ್ನುವುದು ಅಭಿಮಾನಿಗಳ ಆಸೆ. ಇದರ ನಡುವೆಯೇ , ಸೀತಾ ಉಟ್ಟ ಸೀರೆಯ ಬಗ್ಗೆ ಚರ್ಚೆ ಸುರುವಾಗಿದೆ. ಇಂಕ್ ಬಣ್ಣದ ಮೇಲೆ ಬೆಳ್ಳಿ ಬಣ್ಣದ ದೊಡ್ಡ ಹೂಗಳ ಡಿಸೈನ್ ಇರುವ ಸೀರೆಯನ್ನು ಸೀತಾ ಉಟ್ಟಿದ್ದಳು. ಇದಕ್ಕೆ ಕಾಂಬಿನೇಶನ್ ಆಗಿ ಸ್ಯಾಂಡಲ್ ವುಡ್ ಕಲರ್ ಬ್ಲೌಸ್ ತೊಟ್ಟಿದ್ದಳು. ಇದನ್ನು ವೀಕ್ಷಕರು ಸ್ವಲ್ಪವೂ ಇಷ್ಟಪಟ್ಟಿರಲಿಲ್ಲ. ಥೂ ಮಿಸ್ ಮ್ಯಾಚ್, ಅಷ್ಟೂ ಗೊತ್ತಾಗಲ್ವಾ? ಡ್ರೆಸ್ ಸೆನ್ಸ್ ಇಲ್ವಾ?ಸೀತಾ ಈ ಲುಕ್ನಲ್ಲಿ ಅಜ್ಜಿ ಥರ ಕಾಣ್ತಿದ್ದಾಳೆ. ಎಂಬ ಕಾಮೆಂಟ್ ಗಳು ಬರುತ್ತಿವೆ. ಸೀತಾ ಪಾತ್ರ ಮಾಡುತ್ತಿರುವ ವೈಷ್ಣವಿ ಗೌಡ ಅವರೂ ತಮ್ಮ ಸೀರೆಯ ಬಗ್ಗೆ ಬಂದಿರುವ ನೂರಾರು ಕಮೆಂಟ್ಗಳನ್ನು ಓದಿ ತಾವು ಉಟ್ಟ ಸೀರೆಯ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ತಾವು ಅಂದು ಉಟ್ಟುಕೊಂಡಿದ್ದ ಸೀರೆ-ಬ್ಲೌಸ್ ನೋಡಿ ವೀಕ್ಷಕರಿಗೆ ತುಂಬಾ ಬೇಸರವಾಗಿರುವ…
ಹೊಸ ಸಂಸದರು ಲೋಕಸಭೆಯಲ್ಲಿ ಪ್ರಮಾಣವಚನ ಸ್ವೀಕರಿಸಲು ಸಿದ್ಧತೆ ನಡೆಸುತ್ತಿದ್ದು, ಸಂಸದರಿಗೆ ಸಿಗುವ ಸಂಬಳ ಎಷ್ಟು? ಭತ್ಯೆ, ಇತರ ಸೌಲಭ್ಯಗಳು ಯಾವುದು ಎಂಬುದು ಮಾಹಿತಿ ಇಲ್ಲಿದೆ. ಒಬ್ಬ ಸಂಸದರ ಬೇಸಿಕ್ ಸಂಬಳ ತಿಂಗಳಿಗೆ ಒಂದು ಲಕ್ಷ ರೂಪಾಯಿ. ಹಣದುಬ್ಬರ, ಜೀವನ ನಿರ್ವಹಣೆಯ ಆಧಾರದ ಮೇಲೆ 2018ರಲ್ಲಿ ಪರಿಷ್ಕೃತಗೊಂಡ ವೇತನ ಹೆಚ್ಚಳದ ಬಳಿಕದ ಅಂಕಿ-ಅಂಶ(ಸಂಬಳ) ಇದಾಗಿದೆ. ಸಂಸತ್ ಕಲಾಪ, ಸಮಿತಿ ಸಭೆಗೆ ಹಾಜರಾಗುವ ವೇಳೆ ಸಂಸದರಿಗೆ ಪ್ರತಿದಿನ 2,000 ಸಾವಿರ ರೂಪಾಯಿ ಭತ್ಯೆ ಲಭ್ಯವಾಗಲಿದೆ. ಇದು ಊಟೋಪಚಾರ, ವಸತಿಯ ಖರ್ಚನ್ನು ಒಳಗೊಂಡಿದೆ. ಒಬ್ಬ ಸಂಸದರು ಕಚೇರಿ ನಿರ್ವಹಣೆಗಾಗಿ ಪ್ರತಿ ತಿಂಗಳು 60,000 ರೂಪಾಯಿ ಪಡೆಯುತ್ತಾರೆ. ಸ್ಟೇಷನರಿ, ದೂರವಾಣಿ ಸಂಪರ್ಕ, ಕಚೇರಿ ಸಿಬಂದಿಗಳ ಸಂಬಳ ಇದರಲ್ಲಿ ಸೇರಿದೆ. ಒಬ್ಬ ಸಂಸದರು ಕ್ಷೇತ್ರದ ಭತ್ಯೆಯಾಗಿ ಪ್ರತಿ ತಿಂಗಳು 70,000 ರೂಪಾಯಿ ಪಡೆಯುತ್ತಾರೆ. ಕಚೇರಿ ನಿರ್ವಹಣೆ ಹಾಗೂ ಕ್ಷೇತ್ರದೊಳಗಿನ ತಿರುಗಾಟದ ಖರ್ಚು-ವೆಚ್ಚ ಇದರಲ್ಲಿ ಸೇರ್ಪಡೆಯಾಗಲಿದೆ. ಸಂಸದರಿಗೆ ಪ್ರತಿವರ್ಷ ತಾವೂ ಸೇರಿದಂತೆ ಕುಟುಂಬ ಸದಸ್ಯರು 34 ಬಾರಿ ಉಚಿತವಾಗಿ ವಿಮಾನ…
ವಿಜ್ಞಾನದ ಪ್ರಕಾರ ಹಿರಿಯರ ಕಾಲಿಗೆ ಬಿದ್ದು ನಮಸ್ಕರಿಸುವುದರಿಂದ ದೇಹದಲ್ಲಿ ರಕ್ತದ ಸಂಚಲನ ಆಗುತ್ತದೆ ಇದರಿಂದ ಹೃದಯ ಸಂಬಂಧಿತ ಸಮಸ್ಯೆಗಳು ಕಾಣಿಸಿಕೊಳ್ಳುವುದಿಲ್ಲ. ಹಿರಿಯರ ಪಾದವನ್ನು ಸ್ಪರ್ಶಿಸಿ ಆಶೀರ್ವಾದವನ್ನು ಹಿಂದಿನಿಂದಲೂ ಪಡೆದುಕೊಳ್ಳುತ್ತಾ ಬಂದಿದ್ದೇವೆ ಆದರೆ ಮೂರು ವ್ಯಕ್ತಿಗಳ ಕಾಲಿಗೆ ಎಂದಿಗೂ ಬೀಳಬಾರದು ! ಹಿರಿಯರ ಪಾದ ಮುಟ್ಟಿ ನಮಸ್ಕರಿಸಿದರೆ ಆ ವ್ಯಕ್ತಿಗೆ ಶಕ್ತಿ, ಜ್ಞಾನ, ವಿದ್ಯೆ ಮತ್ತು ಪ್ರಸಿದ್ಧಿ ಪ್ರಾಪ್ತಿಯಾಗುತ್ತೆ. ಇದರರ್ಥ ಹಿರಿಯರು ಈ ಜಗತ್ತಿನಲ್ಲಿ ನಮಗಿಂತಲೂ ಅನುಭವಸ್ಥರಾಗಿರುತ್ತಾರೆ. ಹಾಗೆ ಹೆಚ್ಚಿನ ಜ್ಞಾನ ಸಂಪಾದನೆ ಮಾಡಿರುತ್ತಾರೆ. ಸಮಾಜದ ಒಳಿತಿಗಾಗಿ ಶ್ರಮವಹಿಸ್ತಾ ಇರೋರಿಗೆ ನಮಿಸೋದ್ರಲ್ಲಿ ಅರ್ಥವಿದೆ. ತಿಳುವಳಿಕೆ ಇಲ್ದೆ ಮೂರ್ಖತನದಿಂದ ವರ್ತಿಸುವ ವ್ಯಕ್ತಿಗಳು, ಸಮಾಜಘಾತಕರು, ಕೇವಲ ಹಣದಿಂದಲೇ ಶ್ರೀಮಂತರಾಗಿದ್ದು ಕೆಟ್ಟ ಗುಣ ಹೊಂದಿರುವ ವ್ಯಕ್ತಿಗಳು, ಬೇರೆಯವರಿಗೆ ಕೆಡುಕು ಬಯಸುವ ವ್ಯಕ್ತಿಗಳಿಗೆ ಯಾವುದೇ ಮಹತ್ವ ಕೊಡೋ ಅಗತ್ಯವಿಲ್ಲ ಅಂತಾರೆ ಆಚಾರ್ಯ ಚಾಣಕ್ಯರು. ಆಚಾರ್ಯ ಚಾಣಕ್ಯರ ಪ್ರಕಾರ ಹಿರಿಯರ ಕಾಲಿಗೆ ಬಿದ್ದು ಆಶೀರ್ವಾದವನ್ನು ಪಡೆದುಕೊಂಡರೆ ಅವರ ಜ್ಞಾನ,ಬುದ್ಧಿ, ಪ್ರಸಿದ್ದಿ ಪ್ರಾಪ್ತಿಯಾಗುತ್ತದೆ. ಆಚಾರ್ಯ ಚಾಣಕ್ಯರ ಪ್ರಕಾರ ದ್ರೋಹಿಗಳು, ಕಪಟ ಮನಸ್ಸಿನವರು,…
ಚಿಕ್ಕಮಗಳೂರು: ಬಾಳೆಹಣ್ಣಿನಲ್ಲಿ ಪ್ರಜ್ಞೆ ತಪ್ಪುವ ಔಷಧಿ ಬೆರೆಸಿ 30 ಮಂಗಗಳನ್ನು ಹತ್ಯೆಗೈದ ಅಮಾನವೀಯ ಕೃತ್ಯ ಎನ್ಆರ್ ಪುರದ ದ್ಯಾವಣ ಬಳಿ ನಡೆದಿದೆ. 16 ಗಂಡು, 14 ಹೆಣ್ಣು ಹಾಗೂ 4 ಮರಿ ಮಂಗಗಳನ್ನು ಹತ್ಯೆ ಮಾಡಿದ್ದಾರೆ. ದುಷ್ಕರ್ಮಿಗಳು ಬಾಳೆಹಣ್ಣಿನಲ್ಲಿ ಪ್ರಜ್ಞೆ ತಪ್ಪುವ ಔಷಧಿ ಬೆರೆಸಿ, ಬಳಿಕ ಅದನ್ನು ತಿಂದ ಮಂಗಗಳು ಪ್ರಜ್ಞೆ ತಪ್ಪಿದಾಗ, ಅವುಗಳ ತಲೆಗೆ ಹೊಡೆದು ಹತ್ಯೆಗೈದಿದ್ದಾರೆ. ಸಾವಿಗೀಡಾದ 30 ಮಂಗಗಳ ತಲೆಯ ಮೇಲೂ ಒಂದೇ ರೀತಿಯ ಗಾಯಗಳಾಗಿವೆ. ಹತ್ಯೆ ಮಾಡಿದ ಬಳಿಕ ದ್ಯಾವಣ ಬಳಿಯ ರಸ್ತೆಯಲ್ಲಿ ಎಸೆದಿದ್ದಾರೆ. ಸ್ಥಳಕ್ಕೆ ಡಿಎಫ್ಓ, ಆರ್ಎಫ್ಓ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ. ಮಂಗಗಳ ಮಾರಣ ಹೋಮಕ್ಕೆ ಪ್ರಾಣಿಪ್ರಿಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಬೆಂಗಳೂರು ಹೊರವಲಯದ ಎಲೆಕ್ಟ್ರಾನಿಕ್ ಸಿಟಿ ಸಮೀಪದ ದೊಡ್ಡ ನಾಗಮಂಗಲದಲ್ಲಿ ವಾಟರ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಅಕ್ಕ ಮತ್ತು ತಮ್ಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮಧುಮಿತಾ (20) ರಂಜನ್ (18) ಮೃತ ದುರ್ದೈವಿಗಳಾಗಿದ್ದಾರೆ. ಮದುಮಿತಾ ಬೆಂಗಳೂರಿನ ಎಸ್ಎಸ್ಎಂಆರ್ವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಇಂದು ಕಾಲೇಜಿನ ಮೊದಲ ದಿನ ಹಿನ್ನೆಲೆಯಲ್ಲಿ ಅಕ್ಕ ಮದುಮಿತಾರನ್ನು ಕಾಲೇಜಿಗೆ ಬಿಟ್ಟು ಬರಲು ತಮ್ಮ ರಂಜನ್ ಹೋಗುತ್ತಿದ್ದ ವೇಳೆ, ವೇಗವಾಗಿ ಬಂದ ವಾಟರ್ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಪರಿಣಾಮ ಅಕ್ಕ ಮತ್ತು ತಮ್ಮ ಬೈಕ್ನಿಂದ ಕೆಳಗೆ ಬಿದ್ದಿದ್ದಾರೆ. ಬಳಿಕ ವಾಟರ್ ಟ್ಯಾಂಕರ್ ನ ಹಿಂಬದಿ ಚಕ್ರ ಇಬ್ಬರ ತಲೆ ಮೇಲೆ ಹರಿದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಾಟರ್ ಟ್ಯಾಂಕರ್ ಬೈಕ್ ಗೆ ಡಿಕ್ಕಿ ಹೊಡೆಯುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಾಟರ್ ಟ್ಯಾಂಕರ್ ಚಾಲಕನ ಅತಿ ವೇಗ ಮತ್ತು ಅಜಾಗರೂಕತೆ ಚಾಲನೆಯೇ ಅಪಘಾತಕ್ಕೆ ಕಾರಣ ಅಂತ ಸ್ಥಳೀಯರು ಆರೋಪಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸ್…
ವಿಜಯನಗರ: ವಿದ್ಯುತ್ ತಂತಿ ತುಳಿದು ಬಾಲಕಿ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾತ್ರಿಕಾಯನಹಟ್ಟಿಯಲ್ಲಿ ನಡೆದಿದೆ. ತುಳಸಿ(8) ಮೃತ ಬಾಲಕಿಯಾಗಿದ್ದಾಳೆ. ಮೃತ ಬಾಲಕಿ ಎರಡನೇ ತರಗತಿ ವಿದ್ಯಾರ್ಥಿಯಾಗಿದ್ದಾರೆ. ಕಾನಾಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ವಿಜಯನಗರ: ಖಾಸಗಿ ಬಸ್ ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿದ್ದು, ಓರ್ವ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾದ ಘಟನೆ ಹೊಸಪೇಟೆ ತಾಲೂಕಿನ ಜಂಬಯ್ಯನ ಕೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಖಾಸಗಿ ಬಸ್ ಬೆಂಗಳೂರಿನಿಂದ ಹೊಸಪೇಟೆ ಕಡೆಗೆ ಬರುತ್ತಿತ್ತು. ಲಾರಿ ಹೊಸಪೇಟೆ ಕಡೆಯಿಂದ ಕೂಡ್ಲಿಗಿ ಕಡೆ ಹೊರಟಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕೊಪ್ಪಳ: ಮದುವೆಯಾಗುವುದಾಗಿ ನಂಬಿಸಿ ಪ್ರಿಯತಮೆ ಮೇಲೆ ಅತ್ಯಾಚಾರವೆಸಗಿ ಪ್ರಿಯಕರ ಪರಾರಿಯಾದ ಘಟನೆ ನಡೆದಿದೆ. ಗಂಗಾವತಿ ತಾಲೂಕು ನಿವಾಸಿ ರವಿರಾಜ್ ಅತ್ಯಾಚಾರ ಎಸಗಿದ ಆರೋಪಿಯಾಗಿದ್ದಾನೆ. ಆರೋಪಿ ರವಿರಾಜ್ ನನ್ನು ಬಂಧಿಸಿ, ನನ್ನ ಜೊತೆ ಮದುವೆ ಮಾಡಿಸಿ ಎಂದು ಸಂತ್ರಸ್ತೆ ಪೊಲೀಸ್ ಠಾಣೆ ಎದುರು ಧರಣಿ ಕುಳಿತಿದ್ದಾಳೆ. 2020ರಲ್ಲಿ ಸಂತ್ರಸ್ತೆ ದ್ವೀತಿಯ ಪಿಯುಸಿ ಓದುವಾಗ ರವಿರಾಜ್ ಪರಿಚಯವಾಗಿದ್ದು, ಪರಿಚಯ ಸ್ನೇಹವಾಗಿ, ಸ್ನೇಹ ಪ್ರೀತಿಗೆ ತಿರುಗಿದೆ. ಇಬ್ಬರೂ 2021ರಿಂದ ಪರಸ್ಪರ ಪ್ರೀತಿಸಲು ಆರಂಭಿಸಿದ್ದಾರೆ. ಪ್ರಕರಣ ಸಂಬಂಧ ಸಂತ್ರಸ್ತೆ ಮಾತನಾಡಿ “ನಾವಿಬ್ಬರು ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದೆವು. ನಮ್ಮ ಮನೆಗೆ ಬಂದು ಮದುವೆ ಆಗುತ್ತೇನೆ ಅಂತ ನಮ್ಮ ಹೆತ್ತವರಿಗೆ ಹೇಳಿ ಒಪ್ಪಿಸಿದ್ದನು. ಇಬ್ಬರ ಮದುವೆ ಕೂಡ ನಿಶ್ಚಯವಾಗಿತ್ತು. ಒಂದು ದಿನ ಮನೆಗೆ ಬಂದು ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮದುವೆ ಆಗುತ್ತೇನೆ ಅಂತ ನಂಬಿಸಿ ಸತತ ಎರಡು ವರ್ಷದಿಂದ ನನ್ನ ಅತ್ಯಾಚಾರವೆಸಗಿದ್ದಾನೆ. ಈ ಸಮಯದಲ್ಲಿ ವಿಡಿಯೋ ಮಾಡಿಕೊಂಡಿದ್ದಾನೆ. ನನ್ನ ವಿಡಿಯೋ ಇಟ್ಕೊಂಡು ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಕೊಪ್ಪಳ…