Subscribe to Updates
Get the latest creative news from FooBar about art, design and business.
- ಪಾವಗಡ: ಮಾಜಿ ಸಚಿವ, ಹಿರಿಯ ರಾಜಕಾರಣಿ ವೆಂಕಟರಮಣಪ್ಪ ನಿಧನ: ಗಣ್ಯರಿಂದ ಅಂತಿಮ ದರ್ಶನ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ
- ಕೆ.ಎಚ್. ಮುನಿಯಪ್ಪಗೆ ಡಿಸಿಎಂ, ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನಕ್ಕೆ ಒತ್ತಾಯ: ಹೈಕಮಾಂಡ್ಗೆ ಕುರ್ಣೇಗಾಲ ಬೆಟ್ಟಸ್ವಾಮಿ ಆಗ್ರಹ
- ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ
- ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶ್ರೀ ಗುರು ಸಿದ್ದೇಶ್ವರ ದೇವಸ್ಥಾನದ ಜೀರ್ಣೋದ್ದಾರಕ್ಕೆ 1 ಲಕ್ಷ ರೂ. ಧನಸಹಾಯ
- ಮಾಜಿ ಸಚಿವ ವೆಂಕಟರಮಣಪ್ಪ ನಿಧನ: ಡಾ.ಜಿ.ಪರಮೇಶ್ವರ ಅಂತಿಮ ನಮನ
- ಮಿಡಿಗೇಶಿ ಬಳಿ ಭೀಕರ ಬೈಕ್ ಅಪಘಾತ: ಪತ್ನಿ ಸ್ಥಳದಲ್ಲೇ ಸಾವು, ಪತಿಗೆ ತೀವ್ರ ಗಾಯ
- ಜೂನ್ 5 ರಂದು ತುಮಕೂರಿನಲ್ಲಿ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ: ಹೆಸರು ನೋಂದಣಿಗೆ ಜೂನ್ 3 ಕೊನೆ ದಿನ
Author: admin
ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ವಕೀಲ ಜಿ. ದೇವರಾಜೇಗೌಡ ಜಾಮೀನು ಕೋರಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ತಮಗೆ ವಿಡಿಯೋ ಕಾಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತೆಯೊಬ್ಬರು ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದ ಪೊಲೀಸರು ಆರೋಪಿ ಜಿ. ದೇವರಾಜೇಗೌಡರನ್ನು ಬಂಧಿಸಿದ್ದರು. ಪ್ರಕರಣದಲ್ಲಿ ಹಾಸನದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜಾಮೀನು ಅರ್ಜಿ ವಜಾಗೊಳಿಸಿ ಆದೇಶಿಸಿತ್ತು. ಹೀಗಾಗಿ ದೇವರಾಜೇಗೌಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಹೊಳೆನರಸೀಪುರದ ಟೌನ್ ಠಾಣೆಯ ಇನ್ಸ್ ಪೆಕ್ಟರ್ ಮತ್ತು ಸಂತ್ರಸ್ತ ಮಹಿಳೆಯನ್ನು ಪ್ರತಿವಾದಿ ಮಾಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ಎಕ್ಸ್, ಅಂದರೆ ಈ ಹಿಂದಿನ ಟ್ವಿಟ್ಟರ್ ನಲ್ಲಿ ಅಶ್ಲೀಲ, ಕಾಮ ಪ್ರಚೋದಕ ಮತ್ತು ಹಿಂಸಾತ್ಮಕ ದೃಶ್ಯಗಳಿರುವ ಅಂಶಗಳು ಇನ್ನು ಲಭ್ಯವಾಗಲಿದ್ದು, ಇಂತಹ ಪೋಸ್ಟ್ ಗಳ ಮೇಲಿನ ನಿಯಮಗಳನ್ನು ಎಲನ್ ಮಸ್ಕ್ ಒಡೆತನದ ಎಕ್ಸ್ ಸಡಿಲಗೊಳಿದೆ. ತನ್ನ ಕಂಟೆಂಟ್(ವಿಷಯ) ನೀತಿಯಲ್ಲಿ ಬದಲಾವಣೆ ತಂದಿರುವ ಎಲಾನ್ ಮಸ್ಕ್ ನೇತೃತ್ವದ ಎಕ್ಸ್ ಸಂಸ್ಥೆ, ಅಶ್ಲೀಲ ವಿಚಾರ, ವೀಡಿಯೋಗಳ ಅಪ್ ಲೋಡ್ ಗೆ ಅನುಮತಿ ನೀಡಿದೆ. 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು ಜನ್ಮ ದಿನಾಂಕ ನೀಡಿ ವಯಸ್ಸು ದೃಢೀಕರಿಸಿದವರಿಗೆ ಮಾತ್ರ ಅಶ್ಲೀಲ, ಕಾಮ ಪ್ರಚೋದಕ ಮತ್ತು ಹಿಂಸೆಯ ಅಂಶಗಳನ್ನು ಒಳಗೊಂಡ ವೀಡಿಯೋಗಳು ಕಾಣಿಸಿಕೊಳ್ಳಲಿವೆ ಎಂದು ಸ್ಪಷ್ಟನೆ ನೀಡಿದೆ. ಕೃತಕ ಬುದ್ಧಿಮತ್ತೆ (ಎ.ಐ.) ಆಧಾರಿತ ಫೋಟೋ, ಇತರ ಕಾಮ ಸದೃಶ ಅಂಶಗಳಿಗೂ ಈ ನಿಯಮ ಅನ್ವಯವಾಗಲಿದೆ. ಹಾಗೆಂದ ಮಾತ್ರಕ್ಕೆ ಪೂರ್ಣ ಪ್ರಮಾಣದಲ್ಲಿ ಅಶ್ಲೀಲ, ಕಾಮ ಪ್ರಚೋದಕ ಕಂಟೆಂಟ್ ಗಳನ್ನು ಅಪ್ಲೋಡ್ ಮಾಡುವುದಿಲ್ಲ ಎಂದು ಸಂಸ್ಥೆ ತಿಳಿಸಿದೆ. ಇನ್ನು ಹಿಂಸಾತ್ಮಕ ಎಂಬುದಕ್ಕೆ ಸ್ಪಷ್ಟನೆಯಲ್ಲಿ “ಹಿಂಸಾತ್ಮಕ ಅಂಶಗಳಿರುವ…
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದಕ್ಕೆ ಡಿಎಂಕೆ ಕಾರ್ಯಕರ್ತರು ಅಣ್ಣಾಮಲೈ ಫೋಟೋ ಹಾಕಿ ಮೇಕೆಯನ್ನು ನಡು ರಸ್ತೆಯಲ್ಲಿ ಕೊಂದು ಸಂಭ್ರಮಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಅಣ್ಣಾಮಲೈ ಫೋಟೋವನ್ನು ಮೇಕೆ ಕತ್ತಿಗೆ ನೇತು ಹಾಕಿ ನಡು ರಸ್ತೆಗೆ ತಂದು ಒಂದೇ ಏಟಿಗೆ ತಲೆಯನ್ನು ಕತ್ತರಿಸಿ ಡಿಎಂಕೆ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಬಿಜೆಪಿ ನಾಯಕ ಅಮರ್ ಪ್ರಸಾದ್ ರೆಡ್ಡಿ ಈ ವೀಡಿಯೋವನ್ನು ಅಪ್ಲೋಡ್ ಮಾಡಿ ಮುಖ್ಯಮಂತ್ರಿ ಸ್ಟಾಲಿನ್ ನಿಮಗೆ ನಾಚಿಕೆಯಾಗಬೇಕು. ನಿಮ್ಮ ಅನಾಗರಿಕ ವರ್ತನೆ ಸ್ವೀಕಾರಾರ್ಹವಲ್ಲ. ದಯವಿಟ್ಟು ನಿಮ್ಮ ಕಾರ್ಯಕರ್ತರಿಗೆ ಮೂಲಭೂತ ಸಭ್ಯತೆಯನ್ನು ಪ್ರದರ್ಶಿಸಿಲು ಹೇಳಿ. ತಮಿಳುನಾಡು ಪೊಲೀಸರು ವೀಕ್ಷಕರಾಗುವ ಬದಲು ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ. ಕೊಯಮತ್ತೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಣ್ಣಾಮಲೈ 1,18,068 ಮತಗಳ ಅಂತರದಿಂದ ಸೋತಿದ್ದರು. ಡಿಎಂಕೆ ಗಣಪತಿ ರಾಜ್ ಕುಮಾರ್ 5,68,200 ಮತಗಳನ್ನು ಪಡೆದರೆ ಅಣ್ಣಾಮಲೈ 4,50,132 ಮತಗಳನ್ನು ಗಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ತೆಲುಗಿನ ಜನ ‘ಪವನ್ ಕಲ್ಯಾಣ್ ರನ್ನು ಗೆಲ್ಲಿಸಲು 14 ವರ್ಷ ತೆಗೆದುಕೊಂಡರು, ನಟ ಉಪೇಂದ್ರರನ್ನು ಗೆಲ್ಲಿಸಲು ಕನ್ನಡಿಗರು ಎಷ್ಟು ವರ್ಷ ತೆಗೆದುಕೊಳ್ಳುತ್ತಾರೋ?’ ಎಂಬ ಸಾಮಾಜಿಕ ಜಾಲತಾಣವೊಂದರಲ್ಲಿನ ಪೋಸ್ಟ್ ನ್ನು ಹಂಚಿಕೊಂಡಿರುವ ನಟ ಉಪೇಂದ್ರ, ತಮ್ಮ ಪಕ್ಷ ‘ಪ್ರಜಾಕೀಯ’ದ ಸಿದ್ದಾಂತ ಬಗ್ಗೆ ಜನರಿಗೆ ಅರ್ಥವಾಗದೇ ಇರುವುದರ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿ ಮರು ಪೋಸ್ಟ್ ಮಾಡಿದ್ದಾರೆ. ಇನ್ ಸ್ಟಾಗ್ರಾಂನಲ್ಲಿ ತಮ್ಮ ಪೋಸ್ಟ್ ಹಂಚಿಕೊಂಡಿರುವ ಅವರು, “ನನ್ನ ಸೋಲು-ಗೆಲುವಿನ ಬಗ್ಗೆ ತುಂಬಾ ಚಿಂತೆ ಮಾಡುತ್ತಿದೀರಾ?. ಎಂತಹ ನಿಸ್ವಾರ್ಥ, ತ್ಯಾಗ ಮನೋಭಾವ ನಿಮ್ಮದು. ನಿಮ್ಮೆಲ್ಲರ ಪಾದಕ್ಕೆ ಅಡ್ಡಬೀಳುವೆ” ಎಂದು ಉಪೇಂದ್ರ ಗೇಲಿ ಮಾಡಿ ಕುಟುಕಿದ್ದಾರೆ. ವಾಹ್ ಮೈ ಡಿಯರ್ ಪ್ರಜಾಪ್ರಭುಗಳೇ ವಾಹ್. ನಾನು ಗೆಲ್ಲಬೇಕು ಅಂತ ಅನ್ನಿಸಿದಾಗ ಯಾವುದಾದರೂ ರಾಜಕೀಯ ಪಕ್ಷ ಸೇರಿ ನೀವು ಹೇಳಿದ ಹಾಗೆ ಮಾಡುತ್ತೇನೆ. ಗೆದ್ದೇ ಗೆಲ್ಲುತ್ತೇನೆ. ಮೊದಲು ನೀವು ಗೆಲ್ಲೋದು ಯಾವಾಗ ಅಂತ ನೀವು ಯೋಚನೆ ಮಾಡಿ. ಮುಂದಿನ ಚುನಾವಣೆಯಲ್ಲಿ ನನಗೆ ಕೆಲಸ ಕೊಡುತ್ತಿರಾ ಅಂದ್ರೆ ನಿಲ್ಲುತ್ತೇನೆ. ಆಗಲೂ ನೀವು…
ಬ್ರೈನ್ ಡೆತ್ ಅಥವಾ ಮೆದುಳು ಸಾವು ಎಂದರೆ ವ್ಯಕ್ತಿ ಪೂರ್ತಿ ಸತ್ತಿದ್ದಾನೆ ಎಂದು ಅರ್ಥ. ಮೆದುಳು ಸಾವು ಎಂಬುದನ್ನ ವೈದ್ಯರು ದೃಢೀಕರಿಸಬೇಕು. ಕೆಲವೊಮ್ಮೆ ಸಹಜವಾಗಿ ಓಡಾಡುತ್ತಿರುವ ವ್ಯಕ್ತಿ ಬ್ರೈನ್ ಡೆತ್ ಗೆ ಒಳಗಾಗುವುದುಂಟು. ಕೆಲವೊಮ್ಮೆ ಅಪಘಾತಕ್ಕೆ ತುತ್ತಾಗಿ ಜೀವರಕ್ಷಕ ವ್ಯವಸ್ಥೆಯಲ್ಲಿರುವ ವ್ಯಕ್ತಿ ಬ್ರೇನ್ ಡೆತ್ಗೆ ಒಳಗಾಗುತ್ತಾನೆ/ಳೆ. ಮೆದುಳು ತನ್ನ ಕಾರ್ಯವನ್ನು ಪೂರ್ತಿಯಾಗಿ ನಿಲ್ಲಿಸಲು ನಾನಾ ಕಾರಣಗಳಿರಬಹುದು. ಬ್ರೈನ್ ಡೆತ್ ಗೆ ಒಳಗಾದಾಗ ಇತರ ಅಂಗಗಳೂ ತಮ್ಮ ಕೆಲಸ ನಿಲ್ಲಿಸುತ್ತವೆ. ಯಾಕೆಂದರೆ ಮೆದುಳಿನಿಂದ ಅವುಗಳಿಗೆ ಯಾವುದೇ ಸಂದೇಶ ಬರುವುದಿಲ್ಲವಾದ್ದರಿಂದ. ಉಳಿದಂತೆ ಅವು ಸುಸ್ಥಿತಿಯಲ್ಲಿರುತ್ತವೆ. ವ್ಯಕ್ತಿಯ ಬೇರೆ ಯಾವುದೇ ಅಂಗ ಕೆಲಸ ನಿಲ್ಲಿಸಿದರೆ ಅದನ್ನು ದುರಸ್ತಿ ಮಾಡಬಹುದು, ಕಸಿ ಮಾಡಬಹುದು ಅಥವಾ ಬೇರೆ ಅಂಗವನ್ನು ಜೋಡಿಸಬಹುದು. ಆದರೆ ಮೆದುಳು ನಿಷ್ಕ್ರಿಯವಾದರೆ, ಏನೂ ಮಾಡಲು ಸಾಧ್ಯವಿಲ್ಲ. ಕುರಿ ಸಾಕಣೆ ಪ್ರಾರಂಭಿಸುವುದು ಹೇಗೆ? ನಿರ್ವಹಣೆ ಮತ್ತು ಆರೈಕೆ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.! ಮೆದುಳು ಕೆಲಕಾಲ ಕೆಲಸ ಮಾಡುವಂತೆ ಆಮ್ಲಜನಕ ಪೂರೈಸಬಹುದು, ಜೀವರಕ್ಷಕ ವ್ಯವಸ್ಥೆಯಲ್ಲಿ ದೇಹವನ್ನು ಇಡಬಹುದು.…
ಭ್ರಷ್ಟಾಚಾರ ಕುರಿತು ದಿನಪತ್ರಿಕೆಗಳಿಗೆ ಸುಳ್ಳು ಜಾಹೀರಾತು ನೀಡಿ ಬಿಜೆಪಿ ವರ್ಚಸ್ಸಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದ ಮೇಲೆ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬೆಂಗಳೂರಿನ 42ನೇ ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ಗೆ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಷರತ್ತು ಬದ್ದ ಜಾಮೀನು ನೀಡಿದೆ. ಕೋರ್ಟ್ ವಿಚಾರಣೆಗೆ ಹಾಜರಾಗಲು ರಾಹುಲ್ ಸಹಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಮನ್ಸ್ ಜಾರಿ ಮಾಡಿತ್ತು.ಜೂ.1ರಂದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಖುದ್ದು ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದುಕೊಂಡಿದ್ದರು. ರಾಹುಲ್ಗಾಂಧಿ 3ನೇ ಸಮನ್ಸ್ಗೂ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದ ನ್ಯಾಯಾಧೀಶರು ವಿಚಾರಣೆಯನ್ನು ಜೂ.7ಕ್ಕೆ ಮುಂದೂಡಿದ್ದರು. ಇಂದು ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ಕೋರ್ಟ್ಗೆ ಖುದ್ದು ಹಾಜರಾಗಲು ಶುಕ್ರವಾರ ಬೆಂಗಳೂರಿಗೆ ಆಗಮಿಸಿದ್ದರು. ಇಂದು ವಿಚಾರಣೆಗೆ ಹಾಜರಾದ ರಾಹುಲ್ ಗೆ ಕೋರ್ಟ್ ಕಂಡೀಷನಲ್ ಬೇಲ್ ನೀಡಿದೆ. ಮುಂದಿನ ವಿಚಾರಣೆಯನ್ನು ಜುಲೈ 30ಕ್ಕೆ ಮುಂದೂಡಿದೆ. ಮಾಜಿ ಸಂಸದ ಡಿ.ಕೆ.ಸುರೇಶ್ ಅವರು 75 ಲಕ್ಷ ಮೌಲ್ಯದ ಆಸ್ತಿದ ದಾಖಲೆಯನ್ನ…
ಚಂದ್ರನ ಅಂಗಳದಲ್ಲಿನ ಕಲ್ಲು ಮತ್ತು ಮಣ್ಣಿನ ಮಾದರಿಯನ್ನು ಸಂಗ್ರಹಿಸಿ ತರಲಿರುವ ತನ್ನ ಬಾಹ್ಯಾಕಾಶ ನೌಕೆಯು ಭೂಮಿಯತ್ತ ಪ್ರಯಾಣ ಆರಂಭಿಸಿದೆ ಎಂದು ಚೀನಾ ಹೇಳಿಕೆ ನೀಡಿದೆ. ಕಳೆದ ತಿಂಗಳು ಉಡಾವಣೆ ಮಾಡಲಾಗಿದ್ದ ಚೇಂಜ್’ಇ-6 ಹೆಸರಿನ ಬಾಹ್ಯಾಕಾಶ ನೌಕೆಯು ಇತ್ತೀಚೆಗೆ ಚಂದ್ರನ ಮೇಲ್ಮೈನಲ್ಲಿ ಇಳಿದಿತ್ತು. ಈಗಾಗಲೇ ಚಂದ್ರನ ಮೇಲ್ಮೈನಲ್ಲಿ ಸಂಗ್ರಹಿಸಿರುವ ಮಣ್ಣು ಮತ್ತು ಕಲ್ಲಿನ ಮಾದರಿಯನ್ನು ನೌಕೆಯಲ್ಲಿನ ಪೆಟ್ಟಿಗೆಯಲ್ಲಿಟ್ಟುಕೊಂಡಿದ್ದು, ಜೂನ್ 25ರಂದು ಚೀನಾದ ಇನ್ನರ್ ಮಂಗೋಲಿಯಾ ಪ್ರಾಂತ್ಯದ ಮರುಭೂಮಿಯಲ್ಲಿ ಬಂದಿಳಿಯಲಿದೆ ಎಂದು ಚೀನಾ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಉತ್ತರಾಖಂಡದ ಸಹಸ್ತ್ರ ತಾಲ್ ಗೆ ಚಾರಣಕ್ಕೆ ತೆರಳಿ ಹವಾಮಾನ ವೈಪರೀತ್ಯದಿಂದ ಅಪಾಯಕ್ಕೆ ಸಿಲುಕಿದ್ದ ಚಾರಣಿಗರ ಪೈಕಿ, ರಕ್ಷಿಸಲ್ಪಟ್ಟ 13 ಮಂದಿಯ ತಂಡವು ಗುರುವಾರ ರಾತ್ರಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ. ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಚಿವ ಕೃಷ್ಣಬೈರೇಗೌಡ ಅವರ ಜೊತೆ ವಿಮಾನದಲ್ಲಿ 13 ಮಂದಿ ಕನ್ನಡಿಗರು ಆಗಮಿಸಿದ್ದಾರೆ. ವಿಮಾನ ನಿಲ್ದಾಣದ ಬಳಿ ಕಾದಿದ್ದ ಅವರ ಕುಟುಂಬಸ್ಥರು ಸುರಕ್ಷಿತವಾಗಿ ಬಂದ ಚಾರಣಿಗರನ್ನು ಸ್ವಾಗತಿಸಿದರು. ಹವಾಮಾನ ವೈಪರೀತ್ಯದಿಂದ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಬುಧವಾರ ಐದು ಮೃತದೇಹಗಳು ಸಿಕ್ಕಿದ್ದವು. ನಾಪತ್ತೆಯಾದ ನಾಲ್ವರ ಪತ್ತೆಗೆ ಪ್ರತಿಕೂಲ ಪರಿಸ್ಥಿತಿಯಿಂದ ಬುಧವಾರ ಸಂಜೆ ಕಾರ್ಯಾಚರಣೆ ಮುಂದುವರಿಸಲು ಸಾಧ್ಯವಾಗಿರಲಿಲ್ಲ. ಗುರುವಾರ ಬೆಳಿಗ್ಗೆ ಮತ್ತೆ ಕಾರ್ಯಾಚರಣೆ ಆರಂಭಿಸಿ ನಾಲ್ವರ ಮೃತದೇಹಗಳನ್ನು ಪತ್ತೆ ಹಚ್ಚಲಾಗಿದೆ. ಚಾರಣಿಗರಾದ ಸೌಮ್ಯಾ ಕೆನಾಲೆ, ಸ್ಮೃತಿ, ಶೀನಾ ಲಕ್ಷ್ಮಿ, ಎಸ್.ಶಿವ ಜ್ಯೋತಿ, ಅನಿಲ್, ಭರತ್ ಬೊಮ್ಮನಗೌಡರ್, ಮಧುಕಿರಣ್ ರೆಡ್ಡಿ, ಬಿ.ಎಸ್.ಜೈಪ್ರಕಾಶ್,ಎಸ್. ಸುಧಾಕರ್, ಎಂ.ಕೆ. ವಿನಯ್, ವಿವೇಕ್ ಶ್ರೀಧರ್, ಎಂ.ನವೀನ್, ರಿತಿಕಾ ಜಿಂದಾಲ್ ಅವರನ್ನು ವಿಮಾನದ…
ಮುಸ್ಲಿಮ್ ಸಮುದಾಯದ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿಯಾಗಿ ಬಿಂಬಿಸುವ ಆರೋಪ ಹೊತ್ತಿರುವ ಹಿಂದಿ ಭಾಷೆಯ “ಹಮಾರೆ ಬಾರಾಹ್” ಸಿನೆಮಾವನ್ನು ಕರ್ನಾಟಕದಲ್ಲಿ ನಿಷೇಧಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. “ಹಮಾರೆ ಬಾರಾಹ್” ಸಿನೆಮಾ ಜೂ.7ರಂದು ಬಿಡುಗಡೆ ಆಗಲಿದ್ದು, ಈ ಚಿತ್ರದ ಟ್ರೈಲರ್ ಅನ್ನು ಮಾಧ್ಯಮ, ಸಾಮಾಜಿಕ ಜಾಲತಾಣ, ಸಿನೆಮಾ ಮಂದಿರ, ಖಾಸಗಿ ಟಿವಿ ಚಾನಲ್ ಸೇರಿದಂತೆ ಯಾವುದೇ ರೀತಿಯಲ್ಲೂ ಪ್ರಸಾರ ಮಾಡುವುದನ್ನು ರಾಜ್ಯದಲ್ಲಿ ನಿಷೇಧಿಸಲಾಗಿದೆ ಎಂದು ರಾಜ್ಯ ಸರಕಾರದ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ರಾಜ್ಯ ಸರಕಾರದ ಆದೇಶ ಉಲ್ಲಂಘನೆ ಕಂಡುಬಂದಲ್ಲಿ, ಕಾನೂನು ರೀತ್ಯಾ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಎಚ್ಚರಿಕೆ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
2024ರ ವಿಧಾನ ಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ 3ನೇ ಭಾರಿ ಪ್ರಧಾನಿಯಾಗಿ ಗದ್ದುಗೆ ಏರಲು ನರೇಂದ್ರ ಮೋದಿ ಸಿದ್ದರಾಗಿದ್ದಾರೆ. ಮೋದಿ ಗೆಲುವಿಗೆ ವಿಶ್ವದ ಸಾಕಷ್ಟು ನಾಯಕರು ಶುಭ ಹಾರೈಸಿದ್ದಾರೆ. ದೇಶ ವಿದೇಶದ ಗಣ್ಯರು ಮೋದಿಗೆ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಇದೀಗ ಅಮೆರಿಕದ ಖ್ಯಾತ ಗಾಯಕಿ, ನಟಿ ಮೇರಿ ಮಿಲ್ಬೆನ್ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ನಿಮ್ಮನ್ನು ಜನರು ಮಾತ್ರವಲ್ಲ, ದೇವರೂ ಆಯ್ಕೆ ಮಾಡಿದ್ದಾರೆ ಎಂದು ನಟಿ ಸಂದೇಶ ಕಳುಹಿಸಿದ್ದಾರೆ. ಎಕ್ಸ್ನಲ್ಲಿ ವಿಡಿಯೋವೊಂದನ್ನು ಶೇರ್ ಮಾಡಿರುವ ಮಿಲ್ಬೆನ್, ‘ನವ ಭಾರತ’ವನ್ನು ತರಲು ದೇವರ ರಾಯಭಾರಿ ಮತ್ತು ಜನರ ಧ್ವನಿಯಾಗಬೇಕೆಂದು ಅವರು ಪೋಸ್ಟ್ ಮಾಡಿದ್ದಾರೆ. ನನ್ನ ಪ್ರೀತಿಯ ಭಾರತ, ನಮಸ್ತೆ. ಇಂದು ಭಾರತ ಮತ್ತು ವಿಶ್ವಕ್ಕೆ ಐತಿಹಾಸಿಕ ದಿನವಾಗಿದೆ. ನನ್ನ ಸ್ನೇಹಿತ, ಗೌರವಾನ್ವಿತ ಪ್ರಧಾನ ಮಂತ್ರಿಗಳ ಮರು ಆಯ್ಕೆ ಮತ್ತು ನವ ಭಾರತದ ಉದಯ. ಪ್ರಧಾನಿ ಮೋದಿ, ನಿಮ್ಮ ಪುನರಾಯ್ಕೆಗಾಗಿ ನಿಮ್ಮನ್ನು ಅಭಿನಂದಿಸುವ ಅಮೆರಿಕದಿಂದ ಮೊದಲಿಗರಲ್ಲಿ…