Author: admin

ಬೆಂಗಳೂರು: ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದಡಿ 4.77 ಕೋಟಿ ರೂ. ಮೌಲ್ಯದ ಚಿನ್ನವನ್ನು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಜಪ್ತಿ ಮಾಡಿರುವುದಾಗಿ ವರದಿಯಾಗಿದೆ. ಬ್ಯಾಂಕಾಕ್‍ ನಿಂದ ಬೆಂಗಳೂರಿಗೆ ಆಗಮಿಸಿದ ವಿಮಾನದಲ್ಲಿದ್ದ ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಚಿನ್ನ ಸಾಗಾಟಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ ಎಂದು ತಿಳಿದು ಬಂದಿದೆ. ಸದ್ಯ ಡಿಆರ್ ಐ ಬೆಂಗಳೂರು ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದು ಇಬ್ಬರಿಂದ 6 ಕೆಜಿ 834 ಗ್ರಾಂ ಚಿನ್ನ ಜಪ್ತಿ ಮಾಡಿ ತನಿಖೆ ಮುಂದುವರೆಸಲಾಗಿದೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ದೊಡ್ಡಬಳ್ಳಾಪುರ ತಾಲ್ಲೂಕಿನ ಮೆಳೆಕೋಟೆ ಗ್ರಾಮದಲ್ಲಿ ಇಬ್ಬರು ಬಾಲಕಾರ್ಮಿಕರನ್ನ ಕಾರ್ಮಿಕ ಇಲಾಖೆಯ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಮಕ್ಕಳ ಸಹಾಯವಾಣಿ ಜಂಟಿಯಾಗಿ ಬಾಲಕಾರ್ಮಿಕರನ್ನು ದುಡಿಸಿಕೊಳ್ಳುತ್ತಿರುವುದಾಗಿ ಬಂದ ದೂರಿನ ಮೇರೆಗೆ ತಪಾಸಣೆಯನ್ನು ಕೈಗೊಂಡು ಇಬ್ಬರು ಬಾಲ ಕಾರ್ಮಿಕರನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ಮೆಳೆಕೋಟೆ ಗ್ರಾಮದಲ್ಲಿ ರಕ್ಷಿಸಲಾಗಿದೆ. ಹಾಗೆಯೇ ಮೆಳೆಕೋಟೆ ಗ್ರಾಮದಲ್ಲಿ ವಿವಿಧ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಸ್ಟಿಕರ್ ಮತ್ತು ಪಾಂಪ್ಲೆಟ್ಸ್ ಗಳನ್ನು ನೀಡಿ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳದಂತೆ ಜಾಗೃತಿಯನ್ನು ಮೂಡಿಸಲಾಯಿತು. ರಕ್ಷಿಸಲಾದ ಮಕ್ಕಳನ್ನು ತಾತ್ಕಾಲಿಕ ಪುನರ್ವಸತಿ ಕೇಂದ್ರದಲ್ಲಿ ಇರಿಸಲಾಗಿದೆ. ತನಿಖಾ ಕಾರ್ಯಾಚರಣೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ನಾಗೇಂದ್ರ ಹೆಚ್.ಆರ್, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಸುಬ್ಬಾರಾವ್. ಎಸ್, ಕಾರ್ಮಿಕ ನಿರೀಕ್ಷಕ ದಯಾನಂದ ಸಾಗರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ರಶ್ಮಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂಧಿ ಶ್ರೀಧರ್ ಹಾಗೂ…

Read More

ಅಮೇರಿಕಾ ವಿರುದ್ಧ ಪಾಕಿಸ್ತಾನಕ್ಕೆ ಸೋಲು ಕಂಡಿದೆ. ಡಲ್ಲಾಸ್ ನಲ್ಲಿ ನಡೆದ ಅಮೇರಿಕಾ-ಪಾಕ್ ನಡುವಿನ ಟಿ20 ವಿಶ್ವಕಪ್ ಪಂದ್ಯ ಆರಂಭದಲ್ಲಿ ಸಮಬಲ ಕಂಡು ಸೂಪರ್ ಓವರ್ ನಲ್ಲಿ ಕೊನೆಗೊಂಡಿತು. ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಅಮೇರಿಕಾ ತಂಡ, ಪಾಕಿಸ್ತಾನ ತಂಡವನ್ನು ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 159 ರನ್ ಗಳಿಗೆ ಕಟ್ಟಿಹಾಕಿತು. ಅಮೇರಿಕಾ ಪರ ನೋಸ್ತೂಶ್ ಕೆಂಜಿಗೆ 30 ರನ್ ನೀಡಿ 3 ವಿಕೆಟ್ ಪಡೆದರೆ, ಸೌರಭ್ ನೇತ್ರವಲ್ಕರ್ 18 ರನ್ ನೀಡಿ 2 ವಿಕೆಟ್ ಪಡೆದರು. ಅಲಿಖಾನ್ 30 ರನ್, ಜಸ್ದೀಪ್ ಸಿಂಗ್ 37 ರನ್ ನೀಡಿ ತಲಾ 1 ವಿಕೆಟ್ ಪಡೆದರು. ಪಾಕ್ ಪರ ಆರಂಭಿಕ ಆಟಗಾರ ಮೊಹಮ್ಮದ್ ರಿಜ್ವಾನ್ 8 ಎಸೆತಗಳನ್ನು ಎದುರಿಸಿ 9 ರನ್ ಗಳಿಸಿ ಬೇಗ ಔಟ್ ಆದರೆ, ಬಾಬರ್ ಆಜಮ್ 43 ಎಸೆತಗಳಲ್ಲಿ 44 ರನ್ ಗಳಿಸಿದರೆ, ಶಾದಬ್ ಖಾನ್ 25 ಎಸೆತಗಳಲ್ಲಿ 40 ರನ್ ಗಳಿಸಿದರು. 160…

Read More

ಪ್ರಜ್ವಲ್‌ ರೇವಣ್ಣ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿ ಕೆ.ಆರ್. ನಗರ ಸಂತ್ರಸ್ತೆ ಕಿಡ್ನ್ಯಾಪ್ ಕೇಸ್‌ ನಲ್ಲಿ ತಲೆಮರೆಸಿಕೊಂಡಿರುವ ಭವಾನಿ ರೇವಣ್ಣ ಬಂಧನಕ್ಕೆ ಎಸ್.ಐ.ಟಿ ಹಲವು ಬಾರಿ ನೋಟಿಸ್ ಕೊಟ್ಟಿತ್ತು. ವಿಚಾರಣೆಗೆ ಹಾಜರಾಗಲು ನಿರಾಕರಿಸಿದ್ದ ಭವಾನಿ ರೇವಣ್ಣ ಅಧಿಕಾರಿಗಳು ಮನೆಗೇ ಬಂದು ವಿಚಾರಣೆ ನಡೆಸುವಂತೆ ತಿಳಿಸಿದ್ದರು ಎನ್ನಲಾಗಿದೆ. ಮನೆಗೆ ತೆರಳಿದಾಗ ವಿಚಾರಣೆಗೆ ಸಹಕರಿಸದ ಕಾರಣ ಎಸ್.ಐ.ಟಿ ಕೋರ್ಟ್ ಮೊರೆ ಹೋಗಿತ್ತು ಎನ್ನಲಾಗಿದೆ. ಈಗ ಕೋರ್ಟ್‌ ಬಂಧನ ವಾರಂಟ್ ಜಾರಿ ಮಾಡಿದ್ದು, ಇತ್ತೀಚೆಗೆ ಭವಾನಿ ರೇವಣ್ಣರನ್ನು ವಶಕ್ಕೆ ಪಡೆಯಲು ಹೊಳೆನರಸೀಪುರ ನಿವಾಸಕ್ಕೆ ತೆರಳಿದ್ದ ಎಸ್‌ಐಟಿ ಅಧಿಕಾರಿಗಳು ಸತತ 7 ಗಂಟೆ ಕಾದು ವಾಪಸ್‌ ಆದ ಘಟನೆ ನಡೆದಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ತುಮಕೂರಿನಲ್ಲಿ ನಿಲ್ಲದ ಮಳೆ ರಗಳೆಯಾಗಿದ್ದು ಕೆರೆಯಂತಾದ ಯಲ್ಲಾಪುರಕ್ಕೆ ಹೋಗುವ ಅಂಡರ್ ಪಾಸ್ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ಮಳೆ ನೀರಿನಲ್ಲಿ ವಾಹನ ಸವಾರರ ಪರದಾಡುವಂತಾಗಿತ್ತು. ಅಂತರಸನಹಳ್ಳಿ ಅಂಡರ್ ಪಾಸ್ ಜಲಾವೃತವಾಗಿದ್ದು, ವಾಹನಗಳು ನೀರಿನಲ್ಲೇ ನಿಲ್ಲುವಂತಾಗಿತ್ತು. ಪಾವಗಡ, ಮಧುಗಿರಿ, ಕೊರಟಗೆರೆಗೆ ಹೋಗುವ ಪ್ರಯಾಣಿಕರ ಪರದಾಡಿದರು. ರಾಷ್ಟ್ರೀಯ ಹೆದ್ದಾರಿ 4ಕ್ಕೆ ಅಡ್ಡಲಾಗಿ ನಿರ್ಮಿಸಿರುವ ಅಂಡರ್ ಪಾಸ್ ಇದಾಗಿದ್ದು, ಅಂಡರ್ ಪಾಸ್ ನಿಂದ ನೀರು‌ ಹೊರಗೆ ಹೋಗದೆ ಅಂಡರ್ ಪಾಸ್ ಜಲಾವೃತವಾಗಿದ್ದು, ನೀರಿನಲ್ಲೇ ಓಡಾಡುತ್ತಿರುವ ಕಾರು, ಬಸ್ ಸಾಮಾನ್ಯವಾಗಿತ್ತು. ಪ್ರತಿ ಬಾರಿ ಮಳೆ ಬಂದಾಗಲೂ ಜಲಾವೃತ್ತವಾಗುವ ಅಂಡರ್ ಪಾಸ್‌ ಕುರಿತು ಸಂಬಂಧಪಟ್ಟವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More

ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಪಕ್ಷ ಹಾಗೂ ಸರ್ಕಾರಗ ಘನತೆಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಸಚಿವ ನಾಗೇಂದ್ರ ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದರು. ಅದರಂತೆ ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಪತ್ರ ನೀಡಿದ್ದಾರೆ. ‘ನಾನು, ಗೃಹ ಸಚಿವರು ಸಚಿವ ನಾಗೇಂದ್ರ ಜತೆ ಚರ್ಚೆ ಮಾಡಿದ್ದೇವೆ. ಅವರು ಈ ಅಕ್ರಮದಲ್ಲಿ ಭಾಗಿಯಾಗಿಲ್ಲ. ಹೀಗಾಗಿ ಅವರು ರಾಜೀನಾಮೆ ಕೊಡುವ ಅಗತ್ಯವಿಲ್ಲ. ಆದರೆ ಪಕ್ಷದ ಹಾಗೂ ಸರ್ಕಾರದ ಘನತೆಗೆ ಧಕ್ಕೆ ಬರಬಾರದು ಎಂದು ಸ್ವತಃ ನಾಗೇಂದ್ರ ಅವರೇ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇಂದು(ಜೂ.6) ಅವರು ರಾಜೀನಾಮೆ ನೀಡಬಹುದು ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮತದಲ್ಲಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಕಲ್ಯಾಣ ಸಚಿವ ಬಿ. ನಾಗೇಂದ್ರ ಅವರ ವಜಾಕ್ಕೆ…

Read More

ಕೇಂದ್ರದಲ್ಲಿ ಸರ್ಕಾರ ರಚನೆಗೆ ಬಿಜೆಪಿ ನೇತೃತ್ವದ ಎನ್‌ ಡಿಎ ಮೈತ್ರಿಕೂಟ ಕಸರತ್ತು ನಡೆಸುತ್ತಿದೆ. ಇದರಲ್ಲಿ ಪ್ರಮುಖ ಎನ್.ಡಿ.ಎ ನಾಯಕರಾದ ಆಂದ್ರದ ಚಂದ್ರಬಾಬು ನಾಯ್ಡು ದೆಹಲಿಯಲ್ಲಿಯೇ ಇಂಡಿಯಾ ಕೂಟದ ಭಾಗವಾಗಿರುವ ಡಿಎಂಕೆ ಪಕ್ಷದ ಅಧ್ಯಕ್ಷ ಎಂ.ಕೆ ಸ್ಟಾಲಿನ್ ನನ್ನು ಬೇಟಿಯಾಗಿ ಕುತೂಹಲ ಸೃಷ್ಟಿಸಿದ್ದಾರೆ. ಕಾಂಗ್ರೆಸ್ ಎನ್.ಡಿ.ಎ ಕೂಟದ ಪ್ರಮುಖರನ್ನು ಸೆಳೆಯುವ ಸತತ ಪ್ರಯತ್ನಗಳನ್ನು ತೆರೆಮರೆಯಲ್ಲಿ ನಡೆಸುತ್ತಿದೆ ಎನ್ನಲಾಗಿದ್ದು, ಈ ಭೇಟಿ ಅದರ ಒಂದು ಭಾಗವಾಗಿರಬಹುದು ಎಂಬ ಚರ್ಚೆ ಜೋರಾಗಿದೆ. ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚನೆಗೆ ಎನ್‌.ಡಿ.ಎ ಮೈತ್ರಿ ಪಕ್ಷಗಳಾದ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಪಕ್ಷ ಹಾಗೂ ಬಿಹಾರ ಸಿಎಂ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷಗಳು ಎನ್‌.ಡಿ.ಎ ಮೈತ್ರಿಕೂಟಕ್ಕೆ ಬೆಂಬಲ ಸೂಚಿಸಿವೆ. ಇತ್ತ ಇಂಡಿಯಾ ಕೂಟ ಸರ್ಕಾರ ರಚನೆಯಿಂದ ಹಿಂದೆ ಸರಿದಿದೆ ಎನ್ನಲಾಗಿದ್ದರೂ ಆ ಬಗೆಗಿನ ಪ್ರಯತ್ನಗಳು ತೆರೆಮರೆಯಲ್ಲಿ ನಡೆಯುತ್ತಿವೆ ಎನ್ನಲಾಗಿದೆ. ದೆಹಲಿ ಇಂದಿರಾ ಗಾಂಧಿ ಏರ್‌ ಪೋರ್ಟ್‌ನಲ್ಲಿ ಈ ಎರಡು ಪ್ರಾದೇಶಿಕ ಪಕ್ಷಗಳ ನಾಯಕರು ಪರಸ್ಪರ ಭೇಟಿಯಾಗಿದ್ದಾರೆ. ಫೋಟೋ…

Read More

ಲೋಕಸಭಾ ಚುನಾವಣೆ ಫಲಿತಾಂಶ(Lok Sabha Election 2024) ಹೊರಬಿದ್ದಿದೆ. ಈ ಬಾರಿ ಅತ್ಯಂತ ಕಡಿಮೆ ಮತಗಳಲ್ಲಿ ಅಂದರೆ ಇನ್ನೇನು ಸೋತೆ ಬಿಟ್ರು ಅನ್ನೋವಾಗ ಗೆಲುವಿನ ಪತಾಕೆ ಹಾರಿಸಿದವರು ಯಾರ್ಯಾರು ?ನೆಕ್‌ ಟು ನೆಕ್‌ ಫೈಟ್‌ ನೀಡಿ ಕೇವಲ ಕೆಲವೇ ಕೆಲವು ಮತಗಳ ಅಂತರದಲ್ಲಿ ಗೆದ್ದವರು ಯಾರು ಗೊತ್ತೇ? ಅತ್ಯಂತ ಕಡಿಮೆ ಮತಗಳ ಅಂತರದಲ್ಲಿ ಗೆದ್ದವರ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿರುವವರು ಶಿವಸೇನಾ (ಶಿಂಧೆ ಬಣ) ಅಭ್ಯರ್ಥಿ ರವೀಂದ್ರ ವೈಕರ್. ಇವರು ಮುಂಬೈ ವಾಯುವ್ಯ ಕ್ಷೇತ್ರದಲ್ಲಿ ಕೇವಲ 48 ಮತಗಳಿಂದ ಶಿವಸೇನಾ UBT ಅಭ್ಯರ್ಥಿ ಅಮೋಲ್ ಗಜಾನನ್ ಕೀರ್ತಿಕರ್ ಅವರನ್ನು ಸೋಲಿಸಿ ಅತ್ಯಂತ ಕಡಿಮೆ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಎರಡನೇ ಸ್ಥಾನದಲ್ಲಿರುವವರು ಕೇರಳದ ಅಟ್ಟಿಂಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಅಡೂರ್ ಪ್ರಕಾಶ್. ಈ ಚುನಾವಣೆಯಲ್ಲಿ, 684 ಮತಗಳಿಂದ ಜಯಗಳಿಸಿದ್ದಾರೆ. ಜೈಪುರ ಗ್ರಾಮಾಂತರದಿಂದ ಬಿಜೆಪಿಯ ರಾವ್ ರಾಜೇಂದ್ರ ಸಿಂಗ್ (1,615 ಮತಗಳು) ಮತ್ತು ಛತ್ತೀಸ್‌ಗಢದ ಕಂಕೇರ್‌ ನಿಂದ ಅವರ ಪಕ್ಷದ ಸಹೋದ್ಯೋಗಿ ಬ್ರೋಜರಾಜ್ ನಾಗ್ (1,884…

Read More

ಲೋಕಸಭಾ ಚುನಾವಣೆಯಲ್ಲಿ ವಿಜೇತ ಅಭ್ಯರ್ಥಿಗಳಾಗಿ ಹೊರಹೊಮ್ಮಿರುವವರ ಪೈಕಿ 105 ಅಭ್ಯರ್ಥಿಗಳು(ಶೇ 19ರಷ್ಟು) ತಮ್ಮ ಶೈಕ್ಷಣಿಕ ಅರ್ಹತೆ 5ನೇ ತರಗತಿಯಿಂದ 12ನೇ ತರಗತಿ ಎಂದು ಘೋಷಿಸಿದ್ದು, 420 ಅಭ್ಯರ್ಥಿಗಳು(ಶೇ 77 ರಷ್ಟು) ತಮ್ಮ ಶೈಕ್ಷಣಿಕ ಅರ್ಹತೆ ಪದವಿ ಅಥವಾ ಅದಕ್ಕಿಂತ ಹೆಚ್ಚಿನದ್ದಾಗಿದೆ ಎಂದು ಘೋಷಿಸಿಕೊಂಡಿದ್ದಾರೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್‌(ಎಡಿಆರ್) ತಿಳಿಸಿದೆ. ವಿಜೇತ ಅಭ್ಯರ್ಥಿಗಳ ಪೈಕಿ ಇಬ್ಬರು ಅಭ್ಯರ್ಥಿಗಳು ತಾವು ಐದನೆಯ ತರಗತಿವರೆಗೆ ಓದಿದ್ದೇವೆ ಎಂದು ಘೋಷಿಸಿಕೊಂಡಿದ್ದರೆ, ನಾಲ್ವರು ವಿಜೇತ ಅಭ್ಯರ್ಥಿಗಳು ಎಂಟನೆಯ ತರಗತಿವರೆಗೆ ವ್ಯಾಸಂಗ ಮಾಡಿದ್ದೇವೆ ಎಂದು ಘೋಷಿಸಿಕೊಂಡಿದ್ದಾರೆ. 34 ವಿಜೇತ ಅಭ್ಯರ್ಥಿಗಳು ತಾವು 10ನೇ ತರಗತಿವರೆಗೆ ವ್ಯಾಸಂಗ ಮಾಡಿರುವುದಾಗಿ ಹೇಳಿಕೊಂಡಿದ್ದರೆ, 65 ವಿಜೇತ ಅಭ್ಯರ್ಥಿಗಳು ತಾವು 12ನೇ ತರಗತಿವರೆಗೆ ವ್ಯಾಸಂಗ ಮಾಡಿರುವುದಾಗಿ ಘೋಷಿಸಿಕೊಂಡಿದ್ದಾರೆ. ವಿಜೇತ ಅಭ್ಯರ್ಥಿಗಳ ಪೈಕಿ 17 ಮಂದಿ ಅಭ್ಯರ್ಥಿಗಳು ಡಿಪ್ಲೊಮಾ ಪದವೀಧರರಾಗಿದ್ದರೆ, ಓರ್ವ ಅಭ್ಯರ್ಥಿ ಕೇವಲ ಅಕ್ಷರಸ್ಥ ಮಾತ್ರ ಆಗಿರುವ ಸಂಗತಿಯೂ ಬೆಳಕಿಗೆ ಬಂದಿದೆ. ಥಿಂಕ್-ಟ್ಯಾಂಕ್ PRS ಶಾಸಕಾಂಗ ಸಂಶೋಧನೆಯ ಮತ್ತೊಂದು ವಿಶ್ಲೇಷಣೆಯ ಪ್ರಕಾರ, 543…

Read More

ಸರಗೂರು: “ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಸಂಘಟನೆಯ ದಲಿತ ಚಳುವಳಿ ಸಂಸ್ಥಾಪಕ ಹಾಗೂ ಪ್ರೊಫೆಸರ್ ಬಿ. ಕೃಷ್ಣಪ್ಪ ರವರ, 88 ವರ್ಷದ ಜನ್ಮದಿನಾಚರಣೆ ಜೂ. 9 ಭಾನುವಾರ ದಂದು ಬೆಂಗಳೂರು ಪುರಭವನದಲ್ಲಿ ನಡೆಯಲಿದೆ” ಎಂದು ತಾಲೂಕು ಸಂಚಾಲಕ ಕೂಡಗಿ ಗೋವಿಂದರಾಜು ತಿಳಿಸಿದರು. ತಾಲ್ಲೂಕಿನ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ದಂದು ದಸಂಸ (ಅಂಬೇಡ್ಕರ್ ವಾದ) ವತಿಯಿಂದ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಸ್ವಾತಂತ್ರೋತ್ತರ ಕಾಲಮಾನದಲ್ಲಿ ಘಟಿಸಿದ ದಲಿತ ಚಳುವಳಿ ಮತ್ತು ಕರ್ನಾಟಕದ ನೆಲದಲ್ಲಿ ಅದು ಹುಟ್ಟು ಹಾಕಿದ್ದ ಸ್ಥಿತ್ಯಂತರಗಳನ್ನು ದಾಖಲಿಸದಿರಲು ಸಾಧ್ಯವಿಲ್ಲ. ಎಪ್ಪತ್ತರ ದಶಕದ ಹೊತ್ತಿಗೆ ವಿದ್ಯಾವಂತ, ಮೊದಲು ದಲಿತ ತಲೆಮಾರು ಕರ್ನಾಟಕದಲ್ಲಿ ಹುಟ್ಟಿ ದಲಿತ ಸಮುದಾಯಗಳ ಮೇಲೆ ಜಾತಿಯ ಕಾರಣಕ್ಕೆ ಆಗುತ್ತಿದ್ದ ಶೋಷಣೆ, ಹಿಂಸೆ, ದೌರ್ಜನ್ಯಗಳ ವಿರುದ್ಧ ಮಾತನಾಡಿದರು ಎಂದು ತಿಳಿಸಿದರು. ಬಿ. ಕೃಷ್ಣಪ್ಪ ನವರು ದಲಿತ ಹೋರಾಟಗಾರರಾಗಿ ಅಷ್ಟೇ ಅಲ್ಲದೆ ಪತ್ರಕರ್ತರಾಗಿ ಲೇಖಕರಾಗಿ ಮತ್ತು ಅಂಬೇಡ್ಕರ್ ವಾದದ ಕಣ್ಣನೋಟದಿಂದ ಸಾಹಿತ್ಯ, ಸಮಾಜ, ರಾಜಕಾರಣವನ್ನು ಗ್ರಹಿಸಲು ಪ್ರಯತ್ನಿಸಿದ ಅಪೂರ್ವ…

Read More