Subscribe to Updates
Get the latest creative news from FooBar about art, design and business.
- ಪಾವಗಡ: ಮಾಜಿ ಸಚಿವ, ಹಿರಿಯ ರಾಜಕಾರಣಿ ವೆಂಕಟರಮಣಪ್ಪ ನಿಧನ: ಗಣ್ಯರಿಂದ ಅಂತಿಮ ದರ್ಶನ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ
- ಕೆ.ಎಚ್. ಮುನಿಯಪ್ಪಗೆ ಡಿಸಿಎಂ, ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನಕ್ಕೆ ಒತ್ತಾಯ: ಹೈಕಮಾಂಡ್ಗೆ ಕುರ್ಣೇಗಾಲ ಬೆಟ್ಟಸ್ವಾಮಿ ಆಗ್ರಹ
- ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ
- ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶ್ರೀ ಗುರು ಸಿದ್ದೇಶ್ವರ ದೇವಸ್ಥಾನದ ಜೀರ್ಣೋದ್ದಾರಕ್ಕೆ 1 ಲಕ್ಷ ರೂ. ಧನಸಹಾಯ
- ಮಾಜಿ ಸಚಿವ ವೆಂಕಟರಮಣಪ್ಪ ನಿಧನ: ಡಾ.ಜಿ.ಪರಮೇಶ್ವರ ಅಂತಿಮ ನಮನ
- ಮಿಡಿಗೇಶಿ ಬಳಿ ಭೀಕರ ಬೈಕ್ ಅಪಘಾತ: ಪತ್ನಿ ಸ್ಥಳದಲ್ಲೇ ಸಾವು, ಪತಿಗೆ ತೀವ್ರ ಗಾಯ
- ಜೂನ್ 5 ರಂದು ತುಮಕೂರಿನಲ್ಲಿ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ: ಹೆಸರು ನೋಂದಣಿಗೆ ಜೂನ್ 3 ಕೊನೆ ದಿನ
Author: admin
ಬೆಂಗಳೂರು: “ದೇವರಾಜ ಅರಸು ಅವರು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾಗಿ ಈ ರಾಜ್ಯದಲ್ಲಿ ಬದಲಾವಣೆ ತರಲು ಪ್ರಯತ್ನಿಸಿದರು. ಅವರ ಹಾದಿಯಲ್ಲಿಯೇ ನಡೆಯುವ ಪ್ರಯತ್ನವನ್ನು ನಮ್ಮ ಸರ್ಕಾರವೂ ಮಾಡುತ್ತದೆ. ಅದೇ ನಾವು ಅವರಿಗೆ ಸಲ್ಲಿಸುವ ಗೌರವ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ, ವಿಧಾನಸೌಧ ಪಶ್ಚಿಮ ದ್ವಾರದ ಬಳಿ ಇರುವ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ದೇವರಾಜ ಅರಸುರವರ 42ನೇ ಪುಣ್ಯಸ್ಮರಣೆ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. “ದೇವರಾಜ ಅರಸು ಅವರು ಒಬ್ಬ ಜಾತ್ಯಾತೀತ ವ್ಯಕ್ತಿ. ಸಾಮಾಜಿಕ ನ್ಯಾಯದ ಹರಿಕಾರ. ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರು. ಸಮಾಜದ ತಳವರ್ಗದ ಜನರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ರಾಜಕೀಯವಾಗಿ ಮೇಲಕ್ಕೆತ್ತುವ, ಮುಖ್ಯವಾಹಿನಿಗೆ ತರಲು ಪ್ರಯತ್ನ ಮಾಡಿದರು. ಹಾವನೂರು ಆಯೋಗವನ್ನು ರಚಿಸಿ ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಮೀಸಲಾತಿ ಜಾರಿಗೆ ತಂದರು. ಮೈಸೂರು ರಾಜ್ಯಕ್ಕೆ…
ಬೆಂಗಳೂರು: ಜೂನ್. 8 ರಂದು ಕೇಂದ್ರ ಸಚಿವರಾಗಿ ಹೆಚ್ ಡಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಪ್ರಧಾನಿ ಮೋದಿ ಪದಗ್ರಹಣದ ಸಮಾರಂಭದ ವೇಳೆಯೇ ಕೇಂದ್ರ ಸಚಿವರಾಗಿ ಹೆಚ್ ಡಿ ಕುಮಾರಸ್ವಾಮಿ ಅವರು ಕೂಡ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗಿದೆ. ಜೂ.8 ರಂದು 3 ನೇ ಬಾರಿಗೆ ದೇಶದ ಪ್ರಧಾನಿಯಾಗಿ ‘ನರೇಂದ್ರ ಮೋದಿ’ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿದೆ. 3 ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಮತ್ತೆ ಅಧಿಕಾರದ ಗದ್ದುಗೆ ಏರಲಿದ್ದಾರೆ. ಜೂ.8 ರಂದು ಸಂಜೆ ದೆಹಲಿಯಲ್ಲಿ ನರೇಂದ್ರ ಮೋದಿ’ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ಮಾಹಿತಿ ನೀಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
500 ವರ್ಷಗಳ ಬಳಿಕ ನಿರ್ಮಾಣವಾದ ರಾಮಮಂದಿರದಿಂದ ಖುಷಿಗೊಂಡ ಹಿಂದೂ ಸಮುದಾಯದ ಈ ಖುಷಿಯೇ ಮತವಾಗಿ ಬದಲಾಗಿ ಮುಂದೆ ಭಾರಿ ಬಹುಮತದೊಂದಿಗೆ ಕೇಂದ್ರದಲ್ಲಿ ಬಿಜೆಪಿ ಸ್ವತಂತ್ರವಾಗಿ ಅಧಿಕಾರಕ್ಕೆ ಬರುವುದು ಎಂದೇ ನಂಬಲಾಗಿತ್ತು. ಆದರೆ ಮಂದಿರ ಉದ್ಘಾಟನೆಯಾಗಿ ಕೇವಲ 4 ತಿಂಗಳ ಅಂತರದಲ್ಲಿ ನಡೆದ ಚುನಾವಣೆಯಲ್ಲಿ ರಾಮನ ನೆಲದಲ್ಲಿಯೇ ಬಿಜೆಪಿ ಹೀನಾಯವಾಗಿ ಸೋತಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಜೊತೆ ಜೊತೆಗೆ ಅಲ್ಲಿ ಅಂತಾರಾಷ್ಟ್ರೀಯ ಏರ್’ಪೋರ್ಟ್ನ್ನು ನಿರ್ಮಿಸಲಾಗಿತ್ತು ಅಲ್ಲಿಗೆ ರೈಲು ಸೇವೆಗಳನ್ನು ಹೆಚ್ಚು ಮಾಡಲಾಗಿತ್ತು. ಇಷ್ಟೆಲ್ಲಾ ಅಭಿವೃದ್ಧಿ ಮಾಡಿದ ನಂತರವೂ ರಾಮ ನಗರಿಯಲ್ಲಿ ಏಕೆ ಸೋತಿತು? ಅಲ್ಲಿನ ಸ್ಥಳೀಯರು ಈ ಬಗ್ಗೆ ಹೇಳೋದೆನು? ಅಯೋಧ್ಯೆಯ ಸ್ಥಳೀಯ ಸಮಸ್ಯೆಗಳು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಾಯಕರ ಗಮನಕ್ಕೆ ಬಾರದೇ ಹೋಯ್ತು. ರಾಮ ಮಂದಿರ ಹಾಗೂ ಅಯೋಧ್ಯೆಯ ವಿಮಾನ ನಿಲ್ದಾಣದ ಸುತ್ತಮುತ್ತ ನಡೆಯುತ್ತಿರುವ ಭೂಸ್ವಾಧೀನದ ವಿರುದ್ಧ ಅಯೋಧ್ಯೆಯ ಹಲವು ಗ್ರಾಮಗಳ ಜನ ತೀವ್ರ ಆಕ್ರೋಶಗೊಂಡಿದ್ದರು. ನಿರುದ್ಯೋಗ, ಹಣದುಬ್ಬರ, ಭೂಸ್ವಾಧೀನದ ಕೋಪದ ಜೊತೆಗೆ ಬಿಜೆಪಿಯ ಅಭ್ಯರ್ಥಿ ಲಲ್ಲು ಸಿಂಗ್…
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮೂವರು ಶಾಸಕರು ಮತ್ತು ಒಬ್ಬರು ವಿಧಾನ ಪರಿಷತ್ ಸದಸ್ಯರು ಜಯಗಳಿಸಿದ ಹಿನ್ನೆಲೆಯಲ್ಲಿ ಈ ಕ್ಷೇತ್ರಗಳಿಗೆ ಚುನಾವಣೆ ನಡೆಯುವುದು ಖಚಿತವಾಗಿದೆ. ಚನ್ನಪಟ್ಟಣ ಶಾಸಕರಾದ ಹೆಚ್.ಡಿ. ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜಯಗಳಿಸಿದ್ದಾರೆ. ಶಿಗ್ಗಾಂವಿ ಶಾಸಕರಾದ ಬಸವರಾಜ ಬೊಮ್ಮಾಯಿ ಹಾವೇರಿ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿದ್ದಾರೆ. ಸಂಡೂರು ಶಾಸಕ ತುಕಾರಾಂ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದಾರೆ. ವಿಧಾನಪರಿಷತ್ ದಕ್ಷಿಣ ಕನ್ನಡ -ಉಡುಪಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರ ಪ್ರತಿನಿಧಿಸುತ್ತಿರುವ ಕೋಟ ಶ್ರೀನಿವಾಸ ಪೂಜಾರಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಜಯಗಳಿಸಿದ್ದು, ಈ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುವುದು ಖಚಿತವಾಗಿದೆ. ಹಾಲಿ ವಿಧಾನಸಭೆಯ ಈ ಮೂವರು ಸದಸ್ಯರು ಮತ್ತು ವಿಧಾನ ಪರಿಷತ್ತಿನ ಈ ಒಬ್ಬ ಸದಸ್ಯ ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿದ್ದು, ಇವರಿಂದ ತೆರವಾಗಲಿರುವ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮಾಜಿ ಸಿಎಂ ಬಂಗಾರಪ್ಪನವರ ಮಕ್ಕಳಾದ ಕುಮಾರ್ ಬಂಗಾರಪ್ಪ ಹಾಗೂ ಮಧು ಬಂಗಾರಪ್ಪ ನಡುವೆ ಶೀತಲ ಸಮರ ಮುಂದುವರೆದಿದೆ. ಗೀತಾ ಸಹೋದರ ಮಧು ಬಂಗಾರಪ್ಪ ಜೊತೆ ಗುರ್ತಿಸಿಕೊಂಡಿದ್ದಾರೆ. ಅಣ್ಣ-ತಮ್ಮರ ಜಗಳ ಮುಂದುವರೆದಿದೆ. ಕುಮಾರ್ ಬಂಗಾರಪ್ಪ ಬಿಜೆಪಿ ಪಕ್ಷದಲ್ಲಿದ್ದಾರೆ. ಇನ್ನು ಮಧು ಕಾಂಗ್ರೆಸ್ ಶಾಸಕರಾಗಿದ್ದಾರೆ ಶಿಕ್ಷಣ ಸಚಿವವಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಸಹೋದರಿ ಗೀತಾ ಶಿವರಾಜ್’ಕುಮಾರ್ ಈ ಬಾರಿ ಶಿವಮೊಗ್ಗದ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದಾರೆ. ಗೀತಾ ಪರ ಪತಿ ನಟ ಶಿವರಾಜ್ಕುಮಾರ್ ಭರ್ಜರಿ ಪ್ರಚಾರ ನಡೆಸಿದ್ದರು. ದುನಿಯಾ ವಿಜಯ್, ಅನುಶ್ರೀ ಸೇರಿದಂತೆ ಕೆಲ ತಾರೆಯರು ಕೈ ಜೋಡಿಸಿದ್ದರು. ಗೀತಾ ಸೋಲಿನ ಬಗ್ಗೆ ಸುದೀರ್ಘ ಪೋಸ್ಟ್ ಮಾಡಿ ಕುಮಾರ್ ಬಂಗಾರಪ್ಪ ಪ್ರತಿಕ್ರಿಯಿಸಿದ್ದಾರೆ. ಮಧು, ಶಿವಣ್ಣ, ಗೀತಾ ಎಲ್ಲರ ಬಗ್ಗೆ ವ್ಯಂಗ್ಯವಾಡಿದ್ದಾರೆ. “ಧಿರೋದ್ದಾತ ನಾಯಕ ಬಂಗಾರಪ್ಪ ಅವೆರನ್ನು ನನ್ನ ತಮ್ಮ ಹಾಗೂ ತಂಗಿ ತಮ್ಮ ಸ್ವಾರ್ಥಸಾಧನೆಗಾಗಿ, ಕೇವಲ ಒಂದು ಲೋಕಸಭಾ ಕ್ಷೇತ್ರಕ್ಕೆ ಅಂದರೆ ಶಿವಮೊಗ್ಗ ಕ್ಷೇತ್ರಕ್ಕೆ ಸೀಮಿತಗೊಳಿಸಿದ್ದು ಇವರ ಸಂಕುಚಿತ ಸ್ವಭಾವದಿಂದ. ಬಂಗಾರಪ್ಪನವರನ್ನು ಕೇವಲ ಪ್ರಚಾರ ಸಾಮಗ್ರಿಯನ್ನಾಗಿ…
ತಿಪಟೂರು: ತಿಪಟೂರು ಟೈಮ್ಸ್ ನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಾಹಿತ್ಯ ಆಲ್ ಇಂಡಿಯಾ ನೀಟ್ ಪರೀಕ್ಷೆಯಲ್ಲಿ 720 ಅಂಕಗಳಿಗೆ 592 ಅಂಕಗಳನ್ನು ಗಳಿಸಿದ್ದು, 4 ವಿದ್ಯಾರ್ಥಿಗಳು ನಮ್ಮ ಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದು ಸಮಸ್ಥಾಪಕ ಕಾರ್ಯದರ್ಶಿ ಗಂಗಾಧರ್ ತಿಳಿಸಿದರು. ಎಸ್ ಎಸ್ ಎಲ್ ಸಿ ಯಲ್ಲಿ ಸಾಧಾರಣ ಅಂಕ ಗಳಿಸಿರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಸೇರಿಸಿಕೊಂಡು ಅವರಿಗೆ ಸೂಕ್ತ ತರಬೇತಿ ನೀಡಿದ್ದು, ನೀಟ್ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಈ ಸುದ್ದಿಗೋಷ್ ಪ್ರಾಂಶುಪಾಲರಾದ ಪ್ರದೀಪ್ ಕುಮಾರ್, ಆಡಳಿತ ಅಧಿಕಾರಿ ಅನುಪ್, ಬೋಧಕ ಸಿಬ್ಬಂದಿಗಳು ಉಪಸ್ಥಿತರಿದ್ದರು. ವರದಿ: ಆನಂದ್ ತಿಪ್ಟೂರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕೂತಲ್ಲೇ ಆಹಾರ ತರಿಸಿಕೊಂಡು ತಿನ್ನುವ ಕಾಲದಲ್ಲಿ ಸ್ವಿಗ್ಗಿ, ಜೊಮ್ಯಾಟೋ ದಂತಹ ದೈತ್ಯ ಕಂಪನಿಗಳು ಅದನ್ನೇ ಬಂಡವಾಳ ಮಾಡಿಕೊಂಡಿವೆ. ಇದೀಗ ಜೊಮ್ಯಾಟೋ ಸಂಸ್ಥೆ ಸೋಶಿಯಲ್ ಮೀಡಿಯಾಗಳಲ್ಲಿ ಹೊಸ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ಫುಡ್ ಡೆಲಿವೆರಿ ಆ್ಯಪ್ ಜೊಮ್ಯಾಟೊ ತನ್ನ ಅಧಿಕೃತ ಟ್ವಿಟರ್ ಎಕ್ಸ್ ಖಾತೆಯಲ್ಲಿ “ಮಧ್ಯಾಹ್ನ ಫುಡ್ ಆರ್ಡರ್ ಮಾಡುವುದನ್ನು ಆದಷ್ಟು ತಪ್ಪಿಸಿ, ಅಗತ್ಯವಿದ್ದರೆ ಮಾತ್ರ ಮಧ್ಯಾಹ್ನದ ಸಮಯದಲ್ಲಿ ಆಹಾರವನ್ನು ಆರ್ಡರ್ ಮಾಡಿ, ಇಲ್ಲದಿದ್ದರೆ ಮಧ್ಯಾಹ್ನ ಫುಡ್ ಆರ್ಡರ್ ಮಾಡುವುದನ್ನು ಆದಷ್ಟು ತಪ್ಪಿಸಿ” ಎಂದು ಬರೆದುಕೊಂಡಿದೆ. ದೇಶದ ಹೆಚ್ಚಿನ ಭಾಗಗಳಲ್ಲಿ ತೀವ್ರವಾದ ಶಾಖದ ಅಲೆ, ಕೆಲವೊಮ್ಮೆ ಗಾಳಿ ಮಳೆಗೆ ಆರ್ಡರ್ ಹೆಚ್ಚಾದಂತೆ ಡೆಲಿವರಿ ಬಾಯ್ಸ್ ಗಳ ಕಾಳಜಿಯ ಮೇರೆಗೆ ಜೊಮ್ಯಾಟೊ ತನ್ನ ಗ್ರಾಹಕರನ್ನು ಈ ರೀತಿ ಒತ್ತಾಯಿಸಿದೆ ಎಂದು ಹೇಳಲಾಗಿದೆ. ಆದರೆ ಹಲವರು ಇದಕ್ಕೆ ಟೀಕೆ ಮಾಡಿದ್ದು, ಕೆಲವರು ಈ ನಿರ್ಧಾರವನ್ನು ಬೆಂಬಲಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಒಂದು ಹಂತಕ್ಕೆ ಮಕಾಡೆ ಮಲಗಿದೆ. ಬಿಜೆಪಿ ಸೋಲಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಉತ್ತರ ಪ್ರದೇಶ ಎಂದೇ ಹೇಳಬಹುದು. ಸುಮಾರು 80 ರಷ್ಟು ಲೋಕಸಭಾ ಸ್ಥಾನಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಈ ಹಿಂದೆ ಎರಡು ಬಾರಿ ಬಿಜೆಪಿ 70ಕ್ಕೂ ಅಧಿಕ ಸ್ಥಾನ ಗೆದ್ದು ಜಯಭೇರಿ ಬಾರಿಸಿತ್ತು. ಆದರೆ ಈ ಸಲ ಕೇವಲ 30ರ ಆಸುಪಾಸಿನಲ್ಲಿ ತೃಪ್ತಿಪಟ್ಟುಕೊಂಡಿದೆ. ಉತ್ತರ ಪ್ರದೇಶ ದೇಶದಲ್ಲಿ ಹೆಚ್ಚು ಲೋಕಸಭಾ ಸ್ಥಾನಗಳನ್ನು ಹೊಂದಿರುವ ರಾಜ್ಯ. ಈ ರಾಜ್ಯದಲ್ಲಿ ಯಾವ ಪಕ್ಷ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಅದು ದೇಶದ ಅಧಿಕಾರ ಹಿಡಿಯುತ್ತದೆ ಎಂಬ ಮಾತಿದೆ. ಅಖಿಲೇಶ್ ಯಾದವ್ ಅವರ ಸಾಮ್ರಾಜ್ಯವಾಗಿದ್ದು ಯುಪಿ ಇತ್ತೀಚೆಗೆ 10 ವರ್ಷಗಳ ಬಳಿಕ ಬಿಜೆಪಿ ಭದ್ರಕೋಟೆ ಆಗಿ ಮಾರ್ಪಟ್ಟತ್ತು. 2014ರಲ್ಲಿ ಯಾರೂ ಊಹಿಸದ ರೀತಿಯಲ್ಲಿ 80ರಲ್ಲಿ 71 ಸ್ಥಾನಗಳನ್ನು ಗೆದ್ದು ಬೀಗಿತು. 2019ರಲ್ಲಿ ಅಷ್ಟು ದೊಡ್ಡ ಯಶಸ್ಸು ಸಿಗದಿದ್ದರೂ 62 ಸ್ಥಾನಗಳನ್ನು ಗೆದ್ದಿತ್ತು. ಕಳಕೊಂಡದ್ದು ಕೇವಲ 9 ಸ್ಥಾನಗಳನ್ನಾಗಿದ್ದರಿಂದ ಯಾರೂ ಅಷ್ಟಾಗಿ ತಲೆ…
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂನಿಯನ್ ಬ್ಯಾಂಕ್ ಅಧಿಕಾರಿಗಳ ದೂರಿನ ಮೇರೆಗೆ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿರುವುದಾಗಿ ವರದಿಯಾಗಿದೆ. ಬೆಂಗಳೂರು ಪೂರ್ವ ವಲಯದ ಡಿಜಿಎಂ ಜೆ. ಮಹೇಶ್ ಎಂಬುವರ ದೂರಿನ ಮೇರೆಗೆ ಐವರ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದ್ದು, ಬ್ಯಾಂಕ್ ನ ಮೂವರು ಅಧಿಕಾರಿಗಳು ಸೇರಿ ಐವರ ವಿರುದ್ಧ ದೂರು ದಾಖಲಾಗಿದೆ. ಅಲ್ಲದೆ, ಈ ಸಂಬಂಧ ಸಚಿವ ಬಿ. ನಾಗೇಂದ್ರ ಅವರಿಗೂ ಕೂಡ ನೋಟಿಸ್ ನೀಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಈಗಾಗಲೇ ಎಸ್ಐಟಿ ತನಿಖೆ ನಡೆಸುತ್ತಿದ್ದು, ಈ ಕೇಸ್ ಸಿಬಿಐಗೆ ವರ್ಗಾವಣೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಎಸ್ಐಟಿ ಈ ಪ್ರಕರಣದ ವರ್ಗಾವಣೆಗೆ ನಿರಾಕರಿಸಿದರೆ ಸಿಬಿಐ ನ್ಯಾಯಾಲಯದ ಮೊರೆ ಹೋಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಯೂನಿಯನ್ ಬ್ಯಾಂಕ್ ನಲ್ಲಿರುವ ವಾಲ್ಮೀಕಿ ಅಭಿವೃದ್ದಿ ನಿಗಮದ ಖಾತೆಯಿಂದ 18 ನಕಲಿ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಆಗಿತ್ತು.…
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬೆಂಗಳೂರು ಎಚ್.ಎ.ಎಲ್ ಪೊಲೀಸ್ ಠಾಣೆಯಲ್ಲಿ ಮಾರತಹಳ್ಳಿ ಎಸಿಪಿ ಶ್ರೀಮತಿ ಪ್ರಿಯದರ್ಶಿನಿ ಸಾನೆಕೊಪ್ಪ ಅವರ ನೇತೃತ್ವದಲ್ಲಿ ಎಚ್. ಎ. ಎಲ್ ಪೊಲೀಸ್ ಇನ್ಸ್ಪೆಕ್ಟರ್ ಅಜಾರಹುದ್ದಿನ್ ಜೊತೆಗೆ ಅತಿಥಿ ಗಣ್ಯರ ಜೊತೆಗೂಡಿ ಪೊಲೀಸ್ ಠಾಣೆ ಆವರಣದಲ್ಲಿ ಸಾಕಷ್ಟು ಸಸಿಗಳನ್ನು ನೆಡಲಾಯಿತು. ಸಕಲ ಚರಾಚರ ಜೀವರಾಶಿಗಳಿಗಿರುವುದು ಒಂದೇ ಭೂಮಿ ದುರಾಸೆಗಾಗಿ ಕಲುಷಿತಗೊಳಿಸಿದರೆ ಜೀವರಾಶಿಗಳು ಭೂಮಿಯ ಮೇಲೆ ಬದುಕಲು ಸಾಧ್ಯವಿಲ್ಲ. ಎಸಿಪಿ ಪ್ರಿಯದರ್ಶಿನಿ ಅವರು ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. “ಪರಿಸರ ಜಾಗೃತಿ ಮೂಡಿಸುವುದು ಅಗತ್ಯ. ಯಾವುದೇ ಜೀವಿ ಬದುಕಲು ಸುತ್ತಮುತ್ತಲ ಉತ್ತಮ ಪರಿಸರ ಅವಶ್ಯಕ. ಇಲ್ಲದಿದ್ದರೆ ಜೀವಸಂಕುಲದ ಬದುಕಿಗೆ ಕುತ್ತು. ಮಳೆ, ಗಾಳಿ ಮುಂತಾದ ಪ್ರಕೃತಿದತ್ತ ಕ್ರಿಯೆ ಗೆ ಸೂಕ್ತ ಪರಿಸರವಿಲ್ಲದಿದ್ದರೆ ನಮ್ಮ ಬದುಕು ದುರಂತವಾಗಲಿದೆ” ಎಂದರು. “ಪರಿಸರದ ಮೇಲೆ ಮಾನವ ದೌರ್ಜನ್ಯ ನಿತ್ಯ ನಡೆದರೆ ಊಟವಿರಲಿ, ಶುದ್ಧಗಾಳಿ ಸಿಗದಂತಹ ಪರಿ ಸ್ಥಿತಿಯಿದೆ. ಹಾಗಾಗಿ ನಾವುಗಳು ಪರಿಸರ ಉಳಿವಿಗೆ ನಮ್ಮ…