Author: admin

ಚಂದ್ರಬಾಬು ನಾಯ್ಡು ಜೂ.9 ರಂದು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಬೇಕಿತ್ತು. ಆದರೆ ಈ ಕಾರ್ಯಕ್ರಮವನ್ನು ಮುಂದೂಡಲಾಗುತ್ತಿದೆ. ಆರಂಭದಲ್ಲಿ ಯೋಜಿಸಲಾದ ಜೂನ್‌ 9 ರ ಬದಲು ಜೂ.12 ಕ್ಕೆ ಮುಂದೂಡಬಹುದು. ನರೇಂದ್ರ ಮೋದಿ ಅವರು ಮೇ.9 ರಂದು ಪ್ರಧಾನಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆಂಧ್ರಪ್ರದೇಶದ 25 ಲೋಕಸಭಾ ಸ್ಥಾನಗಳ ಪೈಕಿ ಟಿಡಿಪಿ 16 ಸ್ಥಾನಗಳನ್ನು ಗೆದ್ದುಗೊಂಡಿದೆ. ಆರು ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದರೆ, ನಟ-ರಾಜಕಾರಣಿ ಪವನ್‌ ಕಲ್ಯಾಣ್‌ ಅವರ ಜನಸೇನಾ ಪಕ್ಷವು ಎರಡು ಸ್ಥಾನಗಳಲ್ಲಿ ಜಯಗಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಲೋಕಸಭಾ ಚುನಾವಣೆ ಮುಕ್ತಾಯವಾಗಿದೆ. ದೇಶದ ಜನರು ನಿರೀಕ್ಷೆ ಮಾಡಿರದ ಫಲಿತಾಂಶ ಹೊರಬಿದ್ದಿದೆ. ಮೂರನೇ ಸಲಕ್ಕೂ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇನೆಂದು ಭೀಗುತ್ತಿದ್ದ ಬಿಜೆಪಿ 240 ಕ್ಕೆ ತೃಪ್ತಿಪಟ್ಟಿದೆ. NDA ಗೆ ಸರಳ ಬಹುಮತ ದೊರೆತರೂ ಮಿತ್ರಪಕ್ಷಗಳನ್ನು ನಂಬಿ ಕೂರುವಂತಿಲ್ಲ. ಹೀಗಾಗಿ ಸರ್ಕಾರ ರಚನೆಗೆ ಬಿಜೆಪಿ ಭಾರೀ ಕಸರತ್ತು ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ NDA ಮೈತ್ರಿ ಕೂಟಗಳ ಸಭೆ ಕೂಡ ನಡೆದಿದೆ. ಈ ಸಭೆಯಲ್ಲಿ ಇತರ ಪಕ್ಷಗಳು ಬಿಜೆಪಿಗೆ ದೊಡ್ಡ ದೊಡ್ಡ ಬೇಡಿಕೆಯನ್ನೇ ಇಟ್ಟಿದ್ದಾವೆ ಎಂದು ತಿಳಿದು ಬಂದಿದೆ. ಬಿಜೆಪಿಗೆ ಸ್ಪಷ್ಟ ಬಹುಮತ ಬರದ ಕಾರಣ ಮೈತ್ರಿ ಪಕ್ಷಗಳೊಂದಿಗೆ ಸಮ್ಮಿಶ್ರ ಸರಕಾರ ರಚಿಸಬೇಕಿದೆ. ಅದರಲ್ಲಿ ಟಿಡಿಪಿಮತ್ತು ಜೆಡಿಯು ಪಕ್ಷಗಳದ್ದೇ ಪ್ರಮುಖ ಪಾತ್ರ. ಹೀಗಾಗಿ ನೂತನ ಸರ್ಕಾರದಲ್ಲಿ ಪ್ರಮುಖ ಖಾತೆಗಳನ್ನು ತಮ್ಮ ಪಕ್ಷಗಳಿಗೆ ನೀಡಬೇಕು ಎಂದು ಮೈತ್ರಿಕೂಟದ ನಾಯಕರು ಪಟ್ಟು ಹಿಡಿದಿದ್ದಾರೆ. ಇದರಿಂದಾಗಿ, ಬಿಜೆಪಿ ನಾಯಕತ್ವ ಇಕ್ಕಟ್ಟಿಗೆ ಸಿಲುಕಿದೆ. ಎನ್‌ ಡಿಎ 2.0 ಸರ್ಕಾರದ ಅವಧಿಯಲ್ಲಿ ಪ್ರಮುಖ ಖಾತೆಗಳನ್ನು ಬಿಜೆಪಿಯೇ ಇಟ್ಟುಕೊಂಡಿತ್ತು. ಕಮಲ ಪಾಳಯಕ್ಕೆ…

Read More

ಬೆಂಗಳೂರು: ದೈಹಿಕವಾಗಿ ಚಟುವಟಿಕೆ ಇಲ್ಲದೆ ಕುಳಿತವರಿಗೆ ಅನಾರೋಗ್ಯ ಹೆಚ್ಚು. ಆದ್ದರಿಂದ ದೈಹಿಕ ಮತ್ತು ಮಾನಸಿಕ ಚಟುವಟಿಕೆ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಸಚಿವಾಲಯದ ಅಧಿಕಾರಿ ಮತ್ತು ಸಿಬ್ಬಂದಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. “ಜೀವನಶೈಲಿ ಮತ್ತು ಆಹಾರ ಪದ್ಧತಿ ಮನುಷ್ಯನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ರಾಜ್ಯ ಸರ್ಕಾರ ಎಲ್ಲಾ ಜನ ವರ್ಗಕ್ಕೆ ಆರೋಗ್ಯ ಮತ್ತು ಅಗತ್ಯ ಚಿಕಿತ್ಸೆಗೆ ಒದಗಿಸಲು ಕಾರ್ಯಕ್ರಮಗಳನ್ನು ನಿರಂತರವಾಗಿ ರೂಪಿಸಿ, ಜಾರಿ ಮಾಡುತ್ತಿದ್ದೇವೆ” ಎಂದರು. “ಕ್ಯಾನ್ಸರ್ ನಂತಹ ಮಾರಕ ರೋಗವನ್ನೂ ಗುಣಪಡಿಸುವುದು ಸಾಧ್ಯವಿದೆ. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದರೆ ದೀರ್ಘಕಾಲ ಆರೋಗ್ಯ ಕಾಪಾಡಿಕೊಳ್ಳುವುದು ಸಾಧ್ಯವಿದೆ” ಎಂದರು. “ಹಿಂದಿನವರ ಆರೋಗ್ಯ ಪದ್ಧತಿ ಮತ್ತು ಶ್ರಮಾಧಾರಿತ ಜೀವನ ಶೈಲಿ ಅವರನ್ನು ಗಟ್ಟಿಮುಟ್ಟಾಗಿ ಸದೃಡವಾಗಿ ಇಟ್ಟಿತ್ತು” ಎಂದರು. “ಇಂಥಾ ಆರೋಗ್ಯ ತಪಾಸಣಾ ಶಿಬಿರಗಳು ಮೇಲಿಂದ ಮೇಲೆ ಆಗಬೇಕು. ರಾಜ್ಯದ ಮೂಲೆ ಮೂಲೆಗಳಲ್ಲೂ ನಡೆಸಬೇಕು” ಎಂದು ಅಧಿಕಾರಿಗಳಿಗೆ…

Read More

ತುಮಕೂರು: ನಿನ್ನೆ ಸಂಜೆ ಎಡೆಬಿಡದೆ ಸುರಿದ ಬಾರಿ ಮಳೆಯಿಂದ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಈ ನಡುವೆ ತುಮಕೂರು ನಗರದ ಬೃಹತ್ ಕೆರೆಯಾಗಿರುವ ಅಮಾನಿಕೆರೆ ತೂಬಿನಿಂದ ಹೊರ ಬರುತ್ತಿರುವ ನೀರು ನೆರೆಯುಕ್ತವಾಗಿ ಹರಿದು ಬರುತ್ತಿದ್ದು, ಕೆರೆಗೆ ಕೈಗಾರಿಕಾ ತ್ಯಾಜ್ಯ ಮತ್ತು ರಾಸಾಯನಿಕಯುಕ್ತ ನೀರು ಹರಿದು ಬರುತ್ತಿದೆ. ಇಂದು ಬೆಳಗ್ಗೆಯಿಂದ ತುಮಕೂರು ಅಮಾನಿಕೆರೆಯ ಎಸ್ ಮಾಲ್ ಎದುರಿನ ಕೆರೆ ತೂಬ್ ನಿಂದ ಹೊರ ಬರುತ್ತಿರುವ ವಿಷಯುಕ್ತ ಹಾಗೂ ಕಲುಷಿತ ನೀರನ್ನ ಗಮನಿಸಿದರೆ, ಇಡೀ ಅಮಾನಿಕೆರೆಗೆ ಕೈಗಾರಿಕಾ ತ್ಯಾಜ್ಯ ಸೇರಿರಬಹುದು ಮತ್ತು ಕೆರೆಯಲ್ಲಿರುವ ಜಲಚರಗಳ ಮಾರಣ ಹೋಮವಾಗಬಹುದು. ಕೂಡಲೇ ಈ ಕುರಿತು ಕ್ರಮ ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕ ಸುರಕ್ಷಾ ಸಮಿತಿ ಜಿಲ್ಲಾಧ್ಯಕ್ಷ ಹಾಗೂ ಮಹಾನಗರಪಾಲಿಕೆ ಮಾಜಿ ಸದಸ್ಯ ಕೆ.ಪಿ. ಮಹೇಶ   ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ. ಕೆರೆ ನೀರು ಕುಡಿಯಲು ಯೋಗ್ಯವಾಗುವುದಿಲ್ಲ. ಅಮಾನಿಕೆರೆ ನೀರನ್ನು ತುಮಕೂರು ನಗರಕ್ಕೆ ಮರುಬಳಕೆಗೆ ಹೇಮಾವತಿ ಜಲಸಂಗ್ರಹ ಮಾಡುವ ಬುಗುಡನಹಳ್ಳಿ ಮತ್ತು ಪಿ.ಎನ್. ಪಾಳ್ಯಕ್ಕೆ ಪಂಪಿಂಗ್ ಮಾಡಿ, ಜಲಶುದ್ದೀಕರಣದ ಕೇಂದ್ರದ ಮೂಲಕ ತುಮಕೂರು…

Read More

ಸರಗೂರು: ತಾಲ್ಲೂಕಿನ ಪಟ್ಟಣದ ಪ್ರಗತಿ ವಿದ್ಯಾಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮಕ್ಕೆ, ಅರಣ್ಯಾಧಿಕಾರಿ ಹನುಮಂತರಾಜು ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು. “ನಮ್ಮ ಪೃಥ್ವಿ ಜೀವಿಗಳನ್ನು ಹೊಂದಿರುವ ಏಕೈಕ ಗ್ರಹ. ಇದು ನಮ್ಮ ವಾಸಸ್ಥಾನ. ಭೂಮಿಯಲ್ಲಿನ ಜೀವಿಗಳ ಉಗಮ, ವಿಕಾಸ, ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುವುದು ಪಂಚಭೂತಗಳಿಂದ ನಿರ್ಮಿತವಾದ ನಮ್ಮ ಪರಿಸರ. ಸಂಕ್ಷಿಪ್ತವಾಗಿ ಹೇಳುವುದಾದರೆ ನಮ್ಮ ಸುತ್ತಲಿನ ವಾತಾವರಣವೇ ಪರಿಸರ” ಎಂದು ಸರಗೂರು ವಲಯ ಅರಣ್ಯಾಧಿಕಾರಿ ಹನುಮಂತರಾಜು ತಿಳಿಸಿದರು. “21ನೇ ಶತಮಾನದ ಸ್ಪರ್ಧಾತ್ಮಕ, ಯಾಂತ್ರಿಕ ಜೀವನದ ಜಂಜಾಟದಲ್ಲಿ ನಾವೆಲ್ಲರೂ ತಲ್ಲೀನರಾಗಿದ್ದೇವೆ. ಅಭಿವೃದ್ಧಿ, ಹಣದ ಬೆನ್ನತ್ತಿ ಓಡುವ ಈ ಓಟದಲ್ಲಿ, ಪ್ರಕೃತಿ, ಪರಿಸರದ ಕುರಿತಾದ ಆಸ್ಥೆ ಮರೆಯಾಗಿದೆ. ಆ ಕಾರಣದಿಂದ ದಿನೇ ದಿನೇ ಪ್ರಕೃತಿ ತನ್ನ ತನವನ್ನು ಕಳೆದುಕೊಳ್ಳುತ್ತಿದೆ. ತನ್ನ ಜೀವವೈವಿಧ್ಯತೆಯನ್ನು, ತನ್ನ ನೈಸರ್ಗಿಕ ಸೌಂದರ್ಯ, ತನ್ಮಯತೆಯನ್ನು ಕಳೆದುಕೊಳ್ಳುತ್ತಿದೆ” ಎಂದರು. “ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಶಾಲಾ ಸಲಹೆಗಾರರು ಕೆಂಡಗಣ್ಣಸ್ವಾಮಿ ಮಾತನಾಡಿ, ನಮ್ಮ ಸುತ್ತಲಿನ ಸ್ವಚ್ಛತಾ ಸಮಸ್ಯೆಯೇ ಇರಲಿ ಅಥವಾ…

Read More

ಹೆಚ್.ಡಿ.ಕೋಟೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಹೆಚ್.ಡಿ.ಕೋಟೆ ವತಿಯಿಂದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಪೈಲ್ವಾನ್ ಕಾಲೋನಿಯಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮವನ್ನು ಚಿಕ್ಕೆರೆಯೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಮತ್ತು ತಾಲ್ಲೂಕು ಬಾಬು ಜಗನ್ ಜೀವನ ಸಮಿತಿ ಅಧ್ಯಕ್ಷರು ನಾಗರಾಜು, ತಾಲೂಕಿನ ಕೃಷಿ ಮೇಲ್ವಿಚಾರಕ ರಾಜು ಬಿ.ಜೆ. ಉದ್ಘಾಟಿಸಿದರು. ನಂತರ ನಾಗರಾಜು ಮಾತನಾಡಿ, “ಉತ್ತಮ ಆರೋಗ್ಯ ಜೀವನ ನಡೆಸಬೇಕಾದರೆ ಆಮ್ಲಜನಕ ಪೂರೈಕೆ ಚೆನ್ನಾಗಿರಬೇಕು, ಒಂದು ಗಿಡ ನೆಟ್ಟು ಒಂದು ಮರವನ್ನು ಕಡಿಯುವಂತೆ ಕಾನೂನು ಬಂದರೆ ಮರಗಿಡಗಳ ರಕ್ಷಣೆ ಆಗುತ್ತದೆ ಎಂದು ತಿಳಿಸಿದರು. ಅರಣ್ಯ ಇಲಾಖೆಯಿಂದ ನೀಡುವ ಗಿಡಗಳನ್ನು ಅವರವರ ಸ್ವಂತ ಜಮೀನಿನಲ್ಲಿ ನೆಡುವುದರ ಮೂಲಕ ನಮ್ಮ ರಕ್ಷಣೆ ಮಾಡಿಕೊಳ್ಳುವುದರ ಬಗ್ಗೆ ತಿಳಿಸಿದರು. ನಂತರ ಮಾತನಾಡಿದ ಕೃಷಿ ಮೇಲ್ವಿಚಾರಕ ರಾಜು ಬಿ.ಜೆ. ರವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು, ತಾಲೂಕಿನ ಆದ್ಯಂತ ವಲಯ ಮೇಲ್ವಿಚಾರಕರ ಸಹಕಾರದೊಂದಿಗೆ 10…

Read More

ಹಿಂದೂ ಧರ್ಮದಲ್ಲಿ, ಅಮವಾಸ್ಯೆ ದಿನವನ್ನು ಬಹಳ ವಿಶೇಷವೆಂದು ಪರಿಗಣಿಸಲಾಗುತ್ತದೆ ಮತ್ತು ಜ್ಯೇಷ್ಠ ಮಾಸದ ಅಮವಾಸ್ಯೆಯು ಅತ್ಯಂತ ಮಹತ್ವದ್ದಾಗಿದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಜ್ಯೇಷ್ಠ ಅಮವಾಸ್ಯೆಯ ದಿನದಂದು ಪೂರ್ವಜರಿಗೆ ತರ್ಪಣವನ್ನು ಅರ್ಪಿಸಿದರೆ, ಅವರ ಆತ್ಮಕ್ಕೆ ಶಾಂತಿ ಸಿಗುತ್ತದೆ ಮತ್ತು ಅವರು ತಮ್ಮ ಆಶೀರ್ವಾದವನ್ನು ನೀಡುತ್ತಾರೆ. ಅಮವಾಸ್ಯೆಯ ಜೊತೆಗೆ ಶನಿ ಜಯಂತಿ ಮತ್ತು ವತ್ ಸಾವಿತ್ರಿ ಉಪವಾಸವು ಈ ದಿನದಂದು ಬರುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಜ್ಯೇಷ್ಠ ಅಮಾವಾಸ್ಯೆಯ ದಿನದಂದು, ಪೂರ್ವಜರಿಗೆ ಪ್ರಾರ್ಥನೆ ಸಲ್ಲಿಸುವುದರೊಂದಿಗೆ, ಅಖಂಡ ಸೌಭಾಗ್ಯವನ್ನು ಬಯಸಲು ಉಪವಾಸವನ್ನು ಆಚರಿಸಲಾಗುತ್ತದೆ ಮತ್ತು ಶನಿ ದೇವರನ್ನು ಸಹ ಪೂಜಿಸಲಾಗುತ್ತದೆ. ಜೂನ್ 5 ಅಥವಾ 6 ವೈದಿಕ ಕ್ಯಾಲೆಂಡರ್ ಪ್ರಕಾರ, ಜ್ಯೇಷ್ಠ ಅಮಾವಾಸ್ಯೆ ತಿಥಿ ಬುಧವಾರ ರಾತ್ರಿ, ಜೂನ್ 5, 2024 ರಂದು 7:54 ಕ್ಕೆ ಪ್ರಾರಂಭವಾಗುತ್ತದೆ. ಈ ದಿನಾಂಕವು ಗುರುವಾರ, ಜೂನ್ 6, 2024 ರಂದು ಸಂಜೆ 6:07 ಕ್ಕೆ ಕೊನೆಗೊಳ್ಳುತ್ತದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಮಾಜಿ ಸಿಎಂ ಬಿಎಸ್​ ವೈ ಆಪ್ತ ಕಾಪು ಸಿದ್ದಲಿಂಗಸ್ವಾಮಿ ನಿಧನ ಹೊಂದಿದ್ದಾರೆ. ಕಳೆದ ಆರೇಳು ತಿಂಗಳಿನಿಂದ ಕಾ.ಪು ಸಿದ್ದಲಿಂಗಸ್ವಾಮಿ ಅನಾರೋಗ್ಯದಿಂದ ಬಳಲುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಕಾಪು ಸಿದ್ದಲಿಂಗಸ್ವಾಮಿ  ನಿಧನರಾಗಿದ್ದಾರೆ. 2013ರಲ್ಲಿ ವರುಣದಲ್ಲಿ ಕಾಪು ಸಿದ್ದಲಿಂಗಸ್ವಾಮಿ ಅವರು ಕೆಜೆಪಿ ಅಭ್ಯರ್ಥಿಯಾಗಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತೊಡೆ ತಟ್ಟಿದ್ದರು. ಆದರೆ ಕೆಲವೇ ಸಾವಿರ ಮತಗಳ ಅಂತರದಿಂದ ಸಿದ್ದರಾಮಯ್ಯ ಅವರ ವಿರುದ್ಧ ಸೋಲುಂಡಿದ್ದರು. ವರುಣ ಕ್ಷೇತ್ರದ ಬಿಜೆಪಿಯಲ್ಲಿ ಹಿಡಿತ ಹೊಂದಿದ್ದ ಸಿದ್ದಲಿಂಗಸ್ವಾಮಿ ಅವರು ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿದ್ದರು. ಕಾಪುಸಿ ಕರ್ನಾಟಕ ಪ್ರವಾಸೋಧ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಇಂದು ಮೈಸೂರಿನ ನಂಜನಗೂಡು ತಾಲೂಕಿನ ಕಾರ್ಯ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಲಿಂಗಾಯತ ವಿಧಿವಿಧಾನದಂತೆ ಅಂತ್ಯಕ್ರಿಯೆ ನಡೆಯಲಿದೆ. ಭಾನುವಾರ ಅಷ್ಟೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಕಾಪು ಅವರ ಆರೋಗ್ಯ ವಿಚಾರಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ಭಾರೀ ಕುತೂಹಲ ಕೆರಳಿಸಿದ್ದ ಎನ್ ಡಿಎ ನಾಯಕರ ಸಭೆ ಮುಕ್ತಾಯಗೊಂಡಿದೆ. ಎನ್ ಡಿಎ ನಾಯಕನಾಗಿ ನರೇಂದ್ರ ಮೋದಿ 3ನೇ ಬಾರಿಗೆ ಆಯ್ಕೆಯಾಗಿದ್ದಾರೆ. ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚನೆಗೆ ಟಿಡಿಪಿ ಹಾಗೂ ಜೆಡಿಯು ಸೇರಿದಂತೆ ಎಲ್ಲಾ ಮಿತ್ರ ಪಕ್ಷಗಳು ಒಪ್ಪಿಗೆ ಸೂಚಿಸಿವೆ. ಮೋದಿ ಅವರು ಜೂನ್ 7 ರಂದು ಸಂಜೆ 5ಕ್ಕೆ ರಾಷ್ಟ್ರಭವನಕ್ಕೆ ತೆರಳಲಿದ್ದಾರೆ. ಅಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದ್ದಾರೆ. ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಈ ವೇಳೆ ಮೋದಿ ಅವರಿಗೆ ಎನ್ ಡಿಎ ನಾಯಕರು ಸಾಥ್ ನೀಡಲಿದ್ದಾರೆ. ಮೋದಿ ಅಧ್ಯಕ್ಷತೆಯಲ್ಲಿ ನಡೆದ ಎನ್ ಡಿಎ ಸಭೆಯಲ್ಲಿ ಟಿಡಿಪಿ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು, ಜೆಡಿಯು ಮುಖ್ಯಸ್ಥ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಶಿವಸೇನೆ ನಾಯಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಎಲ್‌ ಜೆಪಿ(ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಅಮಿತ್ ಶಾ ಸೇರಿದಂತೆ…

Read More

ದೇಶದಲ್ಲಿ ಎನ್ ಡಿಎ ಅಧಿಕಾರಕ್ಕೆ ಬರಲಿದ್ದು, ಮತ್ತೊಮ್ಮೆ‌ ನರೇಂದ್ರ ಮೋದಿ ಅವರೇ ಪ್ರಧಾನಿ ಆಗುತ್ತಾರೆ. ಎಲ್ಲವನ್ನೂ ತಾಳ್ಮೆಯಿಂದ ಕಾದು ನೋಡಿ ಎಂದು ಮೈಸೂರು-ಕೊಡಗು ನೂತನ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿಶ್ವಾಸ ವ್ಯಕ್ತಪಡಿಸಿದರು. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ನೂತನ ಸಂಸದರಾದ ಬಳಿಕ ಮೊದಲ ಬಾರಿಗೆ ಯದುವಂಶದ ಗುರುಗಳಾದ ಪರಕಾಲಶ್ರೀಗಳನ್ನ ಭೇಟಿ ಮಾಡಿದರು. ಜಗನ್ಮೋಹನ ಅರಮನೆ ಸಮೀಪ ಇರುವ ಪರಕಾಲ ಮಠಕ್ಕೆ ಭೇಟಿ ನೀಡಿ, ಮೈಸೂರು ರಾಜವಂಶಸ್ಥರ ರಾಜಗುರುಗಳ ಆಶೀರ್ವಾದ ಪಡೆದರು. ಅರಮನೆಯ ಪ್ರತಿ ಕಾರ್ಯದಲ್ಲೂ ಪರಕಾಲ ಮಠದ ಉಪಸ್ಥಿತಿ ಇರುತ್ತದೆ. ಅವರ ಉಪಸ್ಥಿತಿಯಲ್ಲಿಯೇ ಅರಮನೆ ಕಾರ್ಯವೈಖರಿಗಳು ಕಾರ್ಯಾರಂಭ ಮಾಡುತ್ತವೆ. ನಂತರ ಮಾತನಾಡಿದ ನೂತನ ಸಂಸದ ಯದುವೀರ್, ದೆಹಲಿಗೆ ಬರುವಂತೆ ಈಗಾಗಲೇ ಆಹ್ವಾನ ನೀಡಿದ್ದಾರೆ. ದೆಹಲಿಗೆ ತೆರಳಿ ಎಂಪಿ ಪ್ರಮಾಣ ವಚನ ಸ್ವೀಕರಿಸುವೆ. ಎನ್ ಡಿಎ ಹಾಗೂ ಐಎನ್ ಡಿಐಎ ಪ್ರತ್ಯೇಕ ಸಭೆಗಳ ವಿಚಾರ, ಯಾವುದೇ ಸಭೆ ನಡೆದರೂ ಅಂತಿಮವಾಗಿ ಎನ್ ಡಿಎ ಅಧಿಕಾರಕ್ಕೆ ಬರುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.…

Read More