Author: admin

543 ಲೋಕಸಭಾ ಸೀಟುಗಳ ಪೈಕಿ 291ರಲ್ಲಿ ಬಿಜೆಪಿ ನೇತೃತ್ವದ ‘ಎನ್‌ ಡಿಎ’ ಮೈತ್ರಿಕೂಟ ಗೆಲುವು ಸಾಧಿಸಿದ್ದು, ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗುವುದು ಬಹುತೇಕ ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಮೋದಿಗೆ ವಿದೇಶಿ ನಾಯಕರು ಶುಭ ಹಾರೈಸಿದ್ದಾರೆ. ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ, ಶ್ರೀಲಂಕಾ ನಾಯಕ ಮಹಿಂದ ರಾಜಪಕ್ಸೆ, ಮಾಲ್ದೀವ್ಸ್ ಅಧ್ಯಕ್ಷ ಮೊಹಮ್ಮದ್‌ ಮುಯಿಜು, ನೇಪಾಳದ ಪ್ರಧಾನಿ ಪುಷ್ಪಕಮಲ್‌ ದಹಲ್‌ ಪ್ರಚಂಡ ಸೇರಿದಂತೆ ಹಲವು ಗಣ್ಯರು ಸಾಮಾಜಿಕ ಮಾಧ್ಯಮಗಳಲ್ಲಿ ಶುಭ ಕೋರಿದ್ದಾರೆ. ‘ಹೊಸ ಚುನಾವಣೆಯಲ್ಲಿ ಗೆಲುವು ಸಾಧಿಸಿರುವುದಕ್ಕೆ ನರೇಂದ್ರ ಮೋದಿಯವರಿಗೆ ಅಭಿನಂದನೆಗಳು. ನಿಮ್ಮ ಅಧಿಕಾರವಧಿಯಲ್ಲಿ ದೇಶ ಮತ್ತಷ್ಟು ಅಭಿವೃದ್ಧಿ ಸಾಧಿಸಲಿ’ ಎಂದು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಹಿಂದೆ ಮೋದಿ ಮತ್ತು ಮೆಲೋನಿ ಜೋಡಿ ಸಾಮಾಜಿಕ ಜಾಲತಾಣದಲ್ಲಿ ತಮಾಷೆಯಾಗಿ ಬಹಳ ವೈರಲ್ ಆಗಿತ್ತು. ಈಗ ಮತ್ತೆ ಆ ಟ್ರೆಂಡ್ ಮುನ್ನಲೆಗೆ ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಉತ್ತರಾಖಂಡದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 9 ಮಂದಿ ಮೃತಪಟ್ಟ ಘಟನೆ ನಡೆದಿದೆ. ಬೆಂಗಳೂರಿನ ಸುಜಾತ (52), ಪದ್ಮಿನಿ ಹೆಗಡೆ (35), ಚಿತ್ರಾ (48), ಸಿಂಧು (45), ವೆಂಕಟೇಶ್‌ ಪ್ರಸಾದ್‌ (52), ಅನಿತಾ (61), ಆಶಾ ಸುಧಾಕರ (72), ಪದ್ಮನಾಭನ್ ಕೆಪಿಎಸ್‌ (50) ವಿನಾಯಕ್ ಮೃತಪಟ್ಟಿದ್ದಾರೆ. ಬೆಂಗಳೂರಿನಿಂದ 18, ಪುಣೆಯಿಂದ ಒಬ್ಬರು ಜೊತೆ ಟ್ರೆಕ್ಕಿಂಗ್‌ ಗೈಡ್‌ಗಳಾಗಿ ಉತ್ತರ ಕಾಶಿಯ ಮೂವರು ನಿವಾಸಿಗಳು ತೆರಳಿದ್ದರು. ಉತ್ತರಾಖಂಡದ ಸಹಸ್ತ್ರ ತಾಲ್‌ನಲ್ಲಿ ಸಿಲುಕಿದ್ದ ಚಾರಣಿಗರ ಪೈಕಿ ಸೌಮ್ಯಾ, ವಿನಯ, ಶಿವಜ್ಯೋತಿ, ಸುಧಾಕರ್‌, ಸ್ಮೃತಿ, ಸೀನಾ ಅವರನ್ನು ರಕ್ಷಣೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ. 13 ಜನರ ಸ್ಥಿತಿ ಗಂಭೀರವಾಗಿದ್ದು ವಾಯು ಪಡೆಯಿಂದ ಹೆಲಿಕಾಪ್ಟರ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬಿಜೆಪಿ ಕೇಂದ್ರದಲ್ಲಿ ಸತತ ಮೂರನೇ ಸರ್ಕಾರವನ್ನು ರಚಿಸುವ ಬಗ್ಗೆ ಸಕಲ ತಯಾರಿಗಳು ನಡೆಯುತ್ತಿವೆ. ಹಳೆ ಸರ್ಕಾರ ವಿಸರ್ಜಿಸಿ ಮಿತ್ರ ಪಕ್ಷಗಳೊಂದಿಗೆ ಹೊಸ ಸರ್ಕಾರ ರಚನೆ ಪ್ರಧಾನಿ ಮೋದಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ವೇಳೆ ನರೇಂದ್ರ ಮೋದಿ ಮತ್ತೆ ಜೂನ್ 8ಕ್ಕೆ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂಬುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಈ ಬಾರಿ ಚುನಾವಣಾ ಫಲಿತಾಂಶ ಬದಲಾವಣೆಗೆ ಮುಸ್ಲಿಂ ಮತದಾರರೇ ಹೆಚ್ಚಿನ ಪ್ರಾಬಲ್ಯ ಗಳಿಸಿದ್ದಾರೆ ಎನ್ನಲಾಗಿದೆ. ಈ ಬಾರಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಸಂಸದರ ಆಯ್ಕೆಯಾಗಿರುವ ಪ್ರಮಾಣವೂ ಹೆಚ್ಚಾಗಿದೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿರುವ 543 ಸ್ಥಾನಗಳಲ್ಲಿ 15 ಮುಸ್ಲಿಂ ಅಭ್ಯರ್ಥಿಗಳು ಗೆದ್ದಿದ್ದು, ಇವರು ಲೋಕಸಭೆಗೆ ಪ್ರವೇಶಿಸಲಿದ್ದಾರೆ. ಭಾರತದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿಯನ್ನು ಸೋಲಿಸಿ ಸಂಸತ್​ ಪ್ರವೇಶಿಸಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 78 ಮುಸ್ಲಿಂ ಅಭ್ಯರ್ಥಿಗಳು ಕಣದಲ್ಲಿದ್ದರು. ಅವರಲ್ಲಿ 15 ಮಂದಿ ಆಯ್ಕೆಯಾಗಿದ್ದಾರೆ.…

Read More

ರಾಜ್ಯಾದ್ಯಂತ ಶಕ್ತಿ ಯೋಜನೆಯಲ್ಲಿ ಹೊಸ ನಿಯಮ ಜಾರಿ ತರಲಾಗಿದೆ. ಹೌದು, KSRTC ನಲ್ಲಿ ಉಚಿತವಾಗಿ ಪ್ರಯಾಣಿಸುವ ಮಹಿಳೆಯರಿಗೆ ಕೊನೆಗೂ ಹೊಸ ನಿಯಮಗಳನ್ನು ತರಲಾಗಿದೆ. ಕರ್ನಾಟಕ ರಾಜ್ಯ ಸಾರಿಗೆ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಇತ್ತೀಚೆಗೆ ಹೊಸ ಆದೇಶವನ್ನು ಹೊರಡಿಸಿದ್ದು, ಅದರ ಪ್ರಕಾರ ಉಚಿತ ಟಿಕೆಟ್‌ ನೊಂದಿಗೆ ಬಸ್ ‌ನಲ್ಲಿ ಪ್ರಯಾಣಿಸುವ ಮಹಿಳೆಯರು ಟಿಕೆಟ್ ಕಳೆದುಕೊಂಡರೆ ದಂಡ ವಿಧಿಸಲಾಗುತ್ತದೆ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ವಿತರಿಸುವ ಪಿಂಕ್ ಟಿಕೆಟ್‌ ಕಳೆದುಹೋದರೆ, ಬಸ್ ಕಂಡಕ್ಟರ್‌ನಿಂದ ಟಿಕೆಟ್‌ ಗೆ ಹತ್ತು ರೂಪಾಯಿ ದಂಡ ವಿಧಿಸಲಾಗುತ್ತದೆ. ಶಕ್ತಿ ಯೋಜನೆ ಅಡಿ ಮಹಿಳೆಯರಿಗೆ ಉಚಿತ ಟಿಕೆಟ್‌ ವಿತರಣೆಯ ಸಂದರ್ಭದಲ್ಲಿ ನಿರ್ವಾಹಕರು ಬಳಸುವ ಟಿಕೆಟ್ ವಿತರಣಾ ಯಂತ್ರವನ್ನು ಹಸ್ತಾಂತರಿಸುವ ಸಮಯದಲ್ಲಿ ಪ್ರಯಾಣಿಕರಿಗೆ ಟಿಕೆಟ್ ಅನ್ನು ಹಸ್ತಚಾಲಿತವಾಗಿ ವಿತರಿಸಬೇಕು. ಆದರೆ ಆ ಟಿಕೆಟ್‌ ಗಳಲ್ಲಿ ಘಟಕ, ವಿಭಾಗ, ಮತ್ತು ವೇಳಾಪಟ್ಟಿಯ ಆಯ್ಕೆಗಳಲ್ಲಿ ಸ್ಥಳವನ್ನು ಖಾಲಿ ಬಿಡಲಾಗಿದೆ. ಇವೆಲ್ಲವನ್ನೂ ನಿರ್ವಾಹಕರು ಭರ್ತಿ ಮಾಡಿ ಅವರ ಸಹಿ ನಂತರ ಮಹಿಳೆಯರಿಗೆ ಪಿಂಕ್ ಟಿಕೆಟ್…

Read More

ಇನ್‌ ಫೋಸಿಸ್‌ ಕಂಪನಿಯಲ್ಲಿ ಸಾಫ್ಟ್‌ ವೇರ್‌ ಎಂಜಿನಿಯರ್‌ ಮಗ, ತಂದೆ- ತಾಯಿಯ ಜಗಳ ಬಿಡಿಸಲು ಹೋಗಿ ಕೊಲೆಯಾಗಿದ್ದಾನೆ ಎಂದು ವರದಿ ತಿಳಿಸಿದೆ. ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಜರಗನಹಳ್ಳಿಯಲ್ಲಿ ನಿನ್ನೆ ಜೂನ್ 5 ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಯಶವಂತ್(23) ತಂದೆಯಿಂದಲೇ ಕೊಲೆಯಾಗಿದ್ದಾನೆ ಎನ್ನಲಾಗಿದ್ದು, ಸರ್ಜಾಪುರ ಸಮೀಪದ ಮ್ಯಾಟ್ರಿಕ್ಸ್ ಎಂಬ ಕಂಪನಿಯಲ್ಲಿ ಯಶವಂತ್‌ ಸಾಫ್ಟ್‌ ವೇರ್ ಇಂಜಿನಿಯರ್ ಆಗಿದ್ದ. ಮೃತನ ಅಜ್ಜಿ ಕಾಯಿಲೆ ಬಿದ್ದು ಹಾಸಿಗೆ ಹಿಡಿದಿದ್ದು, ಆಕೆಯನ್ನು ನೋಡಿಕೊಳ್ಳುವ ವಿಚಾರಕ್ಕೆ ಆಗಾಗ ಜಗಳ ಆಗುತ್ತಿತ್ತು. ಬೆಳಗ್ಗೆಯೂ ಇದೇ ವಿಚಾರಕ್ಕಾಗಿ ಅಪ್ಪ ಅಮ್ಮನ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಜಗಳ ಬಿಡಿಸಲು ಹೋದ ಮಗನನ್ನು ಹೆದರಿಸಲು ತಂದೆ ಅಡುಗೆ ಮನೆಯಿಂದ ಚಾಕು ತಂದು ಇರಿಯಲು ಹೋಗಿದ್ದಾನೆ. ಚಾಕು ಯುವಕನ ಎದೆಗೆ ಆಳವಾಗಿ ನಾಟಿ ಪ್ರಾಣ ಹೋಗಿದೆ ಎನ್ನಲಾಗಿದೆ. ಯಶವಂತ ಇನ್ಫೋಸಿಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಎಂಜಿನಿಯರ್ ವೃತ್ತಿ ಮಾಡುತ್ತ, ತಂದೆ ಮಾಡಿದ್ದ ಸಾಲ ಸಹ ತೀರಿಸುತ್ತಿದ್ದ.…

Read More

‘ಲಿವಿಂಗ್ ಟುಗೆದರ್’ ಎಂಬಂತೆ ಜೀವನ ನಡೆಸುತ್ತಿದ್ದ ಜೋಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟದ ಜನತಾ ಕಾಲೋನಿಯಲ್ಲಿ ಜೂ.೫ರಂದು ವರದಿಯಾಗಿದೆ. ಕಳೆದ ಮೂರು ದಿನಗಳ ಹಿಂದೆ ಜೋಡಿ, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ ಪ್ರಭು(38), ಲಕ್ಕಮ್ಮ(30) ಮೃತರು ಎಂದು ಗುರುತಿಸಲಾಗಿದೆ. ಪ್ರಭು ಡ್ರೈವರ್ ಕೆಲಸ ಮಾಡುತ್ತಿದ್ದ ಮತ್ತು ಲಕ್ಕಮ್ಮ ಗಾರ್ಮೆಂಟ್ಸ್ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಕಳೆದ ಕೆಲ ವರ್ಷಗಳ ಹಿಂದೆ ಒಬ್ಬರಿಗೊಬ್ಬರು ಪರಿಚಿಯವಾಗಿತ್ತು. ಹೀಗಾಗಿ ಇಬ್ಬರು ಒಂದೇ ಮನೆಯಲ್ಲಿ ಸಹಜೀವನ ನಡೆಸುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಮನೆಯಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿ ಸ್ಥಳೀಯರು ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ. ಕೊಳೆತ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ.ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ನಮ್ಮ ಮನಸ್ಸು ಖುಷಿಯಾಗಿ ಇರಬೇಕಾದರೆ ನಮ್ಮ ಸುತ್ತಮುತ್ತಲಿನ ಪರಿಸರ ಸುಂದರವಾಗಿರಬೇಕು. ಸ್ವಚ್ಚ ಪರಿಸರದಿಂದ ಆರೋಗ್ಯ ವೃದ್ದಿ ಜೊತೆಗೆ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಸಾಧ್ಯವಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯೆ ತರುನ್ನಂ ನಿಖತ್ ಹೇಳಿದರು. ನಗರದಲ್ಲಿ ಬುಧವಾರ ಸರ್ಕಾರಿ ಚಿತ್ರಕಲಾ ಪದವಿ ಕಾಲೇಜು ಆಯೋಜಿಸಿದ್ದ ಪರಿಸರ ದಿನಾಚರಣೆ ಹಾಗೂ ಚಿತ್ರಕಲಾ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನಮ್ಮ ಸುತ್ತಲಿನ ಸುಂದರ ಪರಿಸರವನ್ನು ನಾವಿದ್ದಲ್ಲಿಯೇ ನಿರ್ಮಾಣ ಮಾಡಿಕೊಳ್ಳುವುದು ನಮ್ಮ ಜಾಣ್ಮೆಯಾಗಿರಬೇಕು. ನಾವು ಪರಿಸರ ಎಂದಾಕ್ಷಣ ಗಿಡಮರಗಳ ಬಗ್ಗೆ ಮಾತನಾಡುತ್ತೇವೆ. ಅದರಾಚೆಗೆ ಸ್ವಚ್ಛ ಪರಿಸರಕ್ಕೂ ನಾವು ಆದ್ಯತೆ ನೀಡಬೇಕಾಗಿದೆ. ಇವತ್ತು ವಿವಿಧ ಖಾಯಿಲೆಗಳು ಅಪ್ಪಳಿಸಿ ಎಳೆವಯಸ್ಸಿಗೆ ಜೀವ ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗಿರುವುದು ಅಘಾತಕಾರಿ ವಿಷಯಗಳಲ್ಲೊಂದು. ಈ ನಿಟ್ಟಿನಲ್ಲಿ ನಾವು ಸ್ವಚ್ಚ ಪರಿಸರದಲ್ಲಿ ಬದುಕು ಕಟ್ಟಿಕೊಳ್ಳುತ್ತ ಮುಖಮಾಡಬೇಕಿದೆ. ಚಿತ್ರಕಲಾ ಪದವಿ ಕಾಲೇಜು ನಮ್ಮ ಕಟ್ಟಡದಲ್ಲಿ ಇರೋದ್ರಿಂದ ನಿಮ್ಮ ಕಲೆಯಿಂದ ನಮ್ಮ ಕಟ್ಟಡಕ್ಕೆ ಕಳೆ ಬಂದಿದೆ ಎಂದರು. ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪ್ರಾಚಾರ್ಯ ಕರಿಯಣ್ಣ…

Read More

ಪ್ರಧಾನ ಮಂತ್ರಿಯ ಎಷ್ಟು ಸಂಬಳ ಪಡೆಯುತ್ತಾರೆ ಎಂಬ ಕುತೂಹಲ ಹಲವರಲ್ಲಿ ಇರುತ್ತದೆ. ಭಾರತದ ಪ್ರಧಾನ ಮಂತ್ರಿ ದೇಶದ ಅತ್ಯುನ್ನತ ಕಾರ್ಯನಿರ್ವಾಹಕ ಹುದ್ದೆ ಹೊಂದಿದ್ದಾರೆ. ಸರ್ಕಾರದ ಮುಖ್ಯಸ್ಥರಾಗಿರುವ ಇವರು ಮಹತ್ವದ ಅಧಿಕಾರ ಮತ್ತು ಜವಾಬ್ದಾರಿ ಹೊಂದಿದ್ದಾರೆ. ಪ್ರಧಾನ ಮಂತ್ರಿಯನ್ನು ಭಾರತದ ರಾಷ್ಟ್ರಪತಿ ನೇಮಕ ಮಾಡುತ್ತಾರೆ. ಇವರು ಲೋಕಸಭೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಹೊಂದಿರುವ ಪಕ್ಷದ ಮುಖ್ಯಸ್ಥರಾಗಿರುತ್ತಾರೆ. ಪ್ರಧಾನ ಮಂತ್ರಿ ಮತ್ತು ಸಂಸದರು ಸಂಬಳದ ಜೊತೆಗೆ ಹಲವು ಸವಲತ್ತುಗಳು ಮತ್ತು ವಿಶೇಷ ಭತ್ಯೆಗಳನ್ನು ಪಡೆಯುತ್ತಾರೆ. ಪ್ರಧಾನಿ ಅಧಿಕೃತ ನಿವಾಸವನ್ನು ಬಾಡಿಗೆ ಅಥವಾ ಇತರ ವಸತಿ ವೆಚ್ಚಗಳಿಲ್ಲದೆ ಪಡೆಯುತ್ತಾರೆ. ಪ್ರಧಾನಿ ಭದ್ರತೆಯ ಹೊಣೆಯನ್ನು ವಿಶೇಷ ರಕ್ಷಣಾ ಗುಂಪು (SPG) ತೆಗೆದುಕೊಳ್ಳುತ್ತದೆ. ಪ್ರಧಾನಿ ವಿದೇಶಕ್ಕೆ ಹೋದಾಗ ಅವರ ವಾಸ್ತವ್ಯ, ಆಹಾರ ಮತ್ತು ಪ್ರಯಾಣ ವೆಚ್ಚವನ್ನು ಸರ್ಕಾರ ಭರಿಸುತ್ತದೆ. ಪ್ರಧಾನಿ ತಮ್ಮ ಪ್ರಯಾಣದ ಅವಶ್ಯಕತೆಗಳನ್ನು ಪೂರೈಸಲು ಸರ್ಕಾರಿ ವಾಹನಗಳು ಮತ್ತು ವಿಮಾನಗಳನ್ನು ಬಳಸುತ್ತಾರೆ. ನಿವೃತ್ತಿಯ ನಂತರ, ಅವರು ಉಚಿತ ವಸತಿ, ವಿದ್ಯುತ್, ಜೀವನಕ್ಕಾಗಿ ನೀರು ಮತ್ತು ನಿವೃತ್ತಿಯ ನಂತರ 5…

Read More

ಜನ ಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ಚುನಾವಣೆಯಲ್ಲಿ ಮೊದಲ ಗೆಲುವು ಕಂಡಿದ್ದಾರೆ. ವಿಧಾನಸಭೆಯಲ್ಲಿ ಅವರ ಪಕ್ಷಕ್ಕೆ ನೀಡಿದ 21 ಕ್ಷೇತ್ರಗಳಲ್ಲಿ 21 ಕ್ಷೇತ್ರ, ಲೋಕಸಭೆಯಲ್ಲಿ ನೀಡಿದ ಎರಡಕ್ಕೆ ಎರಡು ಸ್ಥಾನಗಳನ್ನು ಗೆದ್ದಿದೆ. ಎನ್​​ಡಿಎ (NDA Alliance) ಜೊತೆ ಸೇರಿ ಅವರು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಈ ಗೆಲುವಿನ ಬಳಿಕ ಪವನ್ ಕಲ್ಯಾಣ್ ಅವರು ಖುಷಿ ಖುಷಿಯಿಂದ ಮಾತನಾಡಿದ್ದಾರೆ. ‘ಪ್ರಧಾನಿ ಮೋದಿ ಜೊತೆ ಮಾತುಕತೆ ನಡೆದಿಲ್ಲ. ನಾವು ಎನ್​ಡಿಎ ಜೊತೆ ಸಂಪೂರ್ಣವಾಗಿ ಕಮಿಟ್ ಆಗಿದ್ದೇವೆ. ಎರಡನೇ ಆಲೋಚನೆಯೇ ಇಲ್ಲ’ ಎನ್​ಡಿಎ ಮೈತ್ರಿ ತೊರೆಯುವ ಮಾತೇ ಇಲ್ಲ. ನಾವು ಆಂಧ್ರಪ್ರದೇಶದ ಜನರಿಗೆ ಜವಾಬ್ದಾರಿಯುತ ಸರ್ಕಾರ ನೀಡಲು ಬದ್ಧರಾಗಿದ್ದೇವೆ. ಎನ್​ಡಿಎ ಸರ್ಕಾರ ಅದನ್ನು ಗೌರವಿಸುತ್ತದೆ’ ಎಂದು ಪವನ್ ಕಲ್ಯಾಣ್ ಅವರು ಸಾರ್ವಜನಿಕವಾಗಿ ಹೇಳಿದ್ದಾರೆ. ಚಂದ್ರಬಾಬು ನಾಯ್ಡು ಅವರ ಟಿಡಿಪಿ, ಪವನ್ ಕಲ್ಯಾಣ್ ಅವರ ಜನ ಸೇನಾ ಪಕ್ಷ, ಬಿಜೆಪಿ ಮೈತ್ರಿಯೊಂದಿಗೆ ಸ್ಪರ್ಧಿಸಿತ್ತು.’ಇದು ಐತಿಹಾಸಿಕ ತೀರ್ಪಿನ ದಿನ. ಎಂದಿದ್ದಾರೆ ಪವನ್ ಕಲ್ಯಾಣ್.…

Read More

ಅತ್ಯಾಚಾರ ಆರೋಪಿ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್‌ಐಟಿ (SIT) ತನಿಖೆ ತೀವ್ರಗೊಳಿಸಿದೆ. ಪ್ರಕರಣದ ಎರಡನೇ ಆರೋಪಿ ಪ್ರಜ್ವಲ್ ಕೃತ್ಯ ಎಸಗಿದ ಸ್ಥಳದಲ್ಲಿ ಶೋಧ ನಡೆಸಿ, ಈ ವೇಳೆ ತನಿಖೆಗೆ ಅವಶ್ಯಕ ಎಂದು ಕೆಲವು ವಸ್ತುಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಬೆಂಗಳೂರಿನ ಬಸವನಗುಡಿಯಲ್ಲಿರುವ ಪ್ರಜ್ವಲ್‌ ಮನೆ ತಪಾಸಣೆ ಮಾಡಲಾಗಿದ್ದು, ಈ ಸಂದರ್ಭದಲ್ಲಿ ಸಂಶಯಾಸ್ಪದ ಕಲೆಗಳುಳ್ಳ ಬೆಡ್‌ಶೀಟ್‌ ಪತ್ತೆಯಾಗಿದೆ. ವಶಪಡಿಸಿಕೊಂಡ ವಸ್ತುಗಳಲ್ಲಿ, ಡಬಲ್ ಕಾಟ್ ಹಾಸಿಗೆ ಮೇಲೆ ಅಲ್ಲಲ್ಲಿ ಇದ್ದ ಸಂಶಯಾಸ್ಪದ ಕಲೆಗಳನ್ನು ಹೊಂದಿದ್ದ ಬೆಡ್‌ಸ್ಪ್ರೆಡ್‌ ಕಂಡುಬಂದಿದೆ. ಸಿಂಗಲ್ ಕಾಟ್ ಹಾಸಿಗೆ ಮೇಲೆಯೂ ಅಲ್ಲಲ್ಲಿ ಸಂಶಯಾಸ್ಪದ ಕಲೆಗಳನ್ನು ಹೊಂದಿದ್ದ ಮೇಲ್ವಾಸು ಕಂಡುಬಂದಿದೆ. ಜೊತೆಗೆ ಒಂದು ಗ್ರೇ ಕಲರ್ ಅದರ ಮೇಲೆ ಸಿಲ್ವರ್ ಕಲರ್ ಡಿಜೈನ್ ಉಳ್ಳ ವಾಲ್ ಪೇಪರ್ ತುಂಡು ದೊರೆತಿದೆ. ಸದ್ಯ ಎಸ್‌ಐಟಿ ಅಧಿಕಾರಿಗಳು ಈ ಸೊತ್ತುಗಳನ್ನ ವಶಪಡಿಸಿಕೊಂಡು ಜಪ್ತಿ ಮಾಡಿದ್ದಾರೆ. ಜಪ್ತಿಪಡಿಸಿದ ವಸ್ತುಗಳನ್ನು ತಜ್ಞರ ಪರೀಕ್ಷೆಗೆ ರವಾನಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More