Author: admin

ಸಾಮಾನ್ಯವಾಗಿ ಎಲ್ಲಾ ದೇಶಗಳಲ್ಲಿ ಶಾಲೆಗಳು ಬೆಳಗ್ಗೆ 8-9 ಗಂಟೆಯ ಅವಧಿಯಲ್ಲಿ ಆರಂಭವಾಗುತ್ತವೆ. ಆದರೆ ಇಂಡೋನೇಷ್ಯಾದ ಈ ಪ್ರದೇಶದ ಶಾಲೆಯಲ್ಲಿ ಬೆಳಗ್ಗೆ 5.30ಕ್ಕೆ ತರಗತಿಗಳು ಆರಂಭವಾಗುತ್ತವೆ. ಮಕ್ಕಳು 4 ಗಂಟೆಗೆ ಎದ್ದು ತಯಾರಾಗಿ ಶಾಲೆಗೆ ಹೋಗುತ್ತಾರೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಆ ಕತ್ತಲಲ್ಲಿ ಮಕ್ಕಳು ರಸ್ತೆಯಲ್ಲಿ ಆಟೋ, ಟ್ಯಾಕ್ಸಿ, ಶಾಲಾ ಬಸ್ಗಳಿಗಾಗಿ ಕಾಯುತ್ತಾ ನಿಂತಿರುತ್ತಾರೆ. ಮಕ್ಕಳು ಬೆಳಗ್ಗೆ ಬೇಗ ಏಳುವುದಿಲ್ಲ, ಮಕ್ಕಳಲ್ಲಿ ಸೋಮಾರಿತನ ಹೆಚ್ಚಾಗಿರುವುದರಿಂದ ಓದಿನ ಮೇಲೆ ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಮಕ್ಕಳು ಬೇಗ ಎದ್ದರೆ ತುಂಬಾ ಲವಲವಿಕೆಯಿಂದಿರುತ್ತಾರೆ, ಹಾಗಾಗಿ ಈ ನಿಯಮ ಜಾರಿಗೆ ತರಲಾಗಿದೆ ಎಂದು ಹೇಳಿದ್ದಾರೆ ಶಿಕ್ಷಕರು. ಮಕ್ಕಳನ್ನು ಅಷ್ಟು ಬೆಳಗ್ಗೆ ಏಳಿಸಲು ಸಾಧ್ಯವಿಲ್ಲ, ಎದ್ದರೂ ನಿದ್ದೆ ಮಂಪರಿನಲ್ಲಿಯೇ ಇರುತ್ತಾರೆ, ವಾಹನಗಳ ವ್ಯವಸ್ಥೆಯೂ ಕಷ್ಟ, ಮಧ್ಯಾಹ್ನ ಮನೆಗೆ ಬಂದ ತಕ್ಷಣ ಮಲಗಿಬಿಡುತ್ತಾರೆ, ಯಾವುದೇ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದಿಲ್ಲ, ಮಕ್ಕಳಿಗೆ ಮೊದಲು ಸರಿಯಾದ ನಿದ್ರೆ ಬೇಕು ಎಂದಿದ್ದಾರೆ ಪಾಲಕರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಜ್ಯೋತಿಷಿ ವೇಣುಸ್ವಾಮಿ ವಿಡಿಯೊ ಮೂಲಕ ಕ್ಷಮೆ ಕೇಳಿದ್ದಾರೆ. ತೆಲುಗು ಚಿತ್ರರಂಗದವರ, ರಾಜಕಾರಣಿಗಳ ಭವಿಷ್ಯ ಹೇಳಿ ಜನಪ್ರಿಯವಾಗಿದ್ದ ಸೆಲೆಬ್ರಿಟಿ ಜ್ಯೋತಿಷಿ ವೇಣುಸ್ವಾಮಿ, ನಾನು ಹೇಳಿದ ಭವಿಷ್ಯ ಈ ಬಾರಿ ತಪ್ಪಾಗಿದೆ ಎಂದು ಒಪ್ಪಿಕೊಂಡಿದ್ದಾರೆ. ಜಗನ್ ಅವರ ವೈಸಿಪಿ ಪಕ್ಷ ಹೀನಾಯ ಸೋಲು ಕಂಡಿದ್ದು ಟಿಡಿಪಿ ಪಕ್ಷ ಭಾರಿ ವಿಜಯ ದಾಖಲಿಸಿದೆ. ಜ್ಯೋತಿಷಿ ವೇಣುಸ್ವಾಮಿ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಗೆ ಮುನ್ನ, ಜಗನ್ ಪಕ್ಷ ಮತ್ತೆ ಗೆಲ್ಲುತ್ತದೆ, ಮತ್ತೆ ಜಗನ್ ಸಿಎಂ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದರು. ಅವರ ಭವಿಷ್ಯ ಸುಳ್ಳಾಗಿದೆ. ʻʻಜಗನ್ ಮತ್ತೆ ಗೆಲ್ಲುತ್ತಾರೆ ಎಂದಿದ್ದೆ. ನಾನು ಕಲಿತ ವಿದ್ಯೆಗಳ ಆಧಾರದಲ್ಲಿ ಈ ಭವಿಷ್ಯವನ್ನು ನಾನು ನುಡಿದಿದ್ದೆ. ನನ್ನ ಭವಿಷ್ಯದಲ್ಲಿ ಮೊದಲನೆಯದು ನಿಜವಾಗಿದೆ. ಮೋದಿಯವರ ಫ್ರಭಾವ ತಗ್ಗಿರುವುದು ಫಲಿತಾಂಶದಿಂದ ಗೊತ್ತಾಗುತ್ತಿದೆ. ನಾನು ಹೇಳಿದ ಭವಿಷ್ಯ ಈ ಬಾರಿ ತಪ್ಪಾಗಿದೆ. ನಾನು ಅದನ್ನು ಒಪ್ಪಿಕೊಳ್ಳುತ್ತೇನೆ. ನಾನು ಆಂಧ್ರ ರಾಜಕೀಯದ ಬಗ್ಗೆ ಹೇಳಿರುವ ಭವಿಷ್ಯ ತಪ್ಪಾಗಿರುವ ಕಾರಣ, ಇಂದಿನಿಂದ ರಾಜಕೀಯ ಮತ್ತು ಚಿತ್ರರಂಗದ ಗಣ್ಯರ ವೈಯಕ್ತಿಕ ಜೀವನದ…

Read More

ತುರುವೇಕೆರೆ: ನಮ್ಮ ತಾಲೂಕಿನಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ಆಗಿ ಸೋಮಣ್ಣನವರಿಗೆ 44,000 ಮತಗಳ ಅಂತರ ನೀಡಿ ಗೆಲ್ಲಿಸಿದ್ದಾರೆ. ಅವರ ಗೆಲುವಿಗೆ ಶ್ರಮಿಸಿದಂತ ಜೆಡಿಎಸ್, ಬಿಜೆಪಿ ಮತದಾರರಿಗೆ ಕೃತಜ್ಞತೆಗಳನ್ನು ಮಾಧ್ಯಮದ ಮೂಲಕ ಸಲ್ಲಿಸುತ್ತೇನೆ ಎಂದು ತುರುವೇಕೆರೆ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಟಿ. ಕೃಷ್ಣಪ್ಪ ಪಟ್ಟಣದಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ತಿಳಿಸಿದರು. ಈ ಕ್ಷೇತ್ರದ ಅಭಿವೃದ್ಧಿಗೆ ವಿ. ಸೋಮಣ್ಣನವರು ಹೆಚ್ಚು ಒತ್ತನ್ನು ಕೊಡಬೇಕು ಎಂದು ಒತ್ತಾಯಿಸಿದರು. ಮುಂದುವರೆದು ಮಾತನಾಡಿ, “ನಮ್ಮ ಕ್ಷೇತ್ರದ ಹಲವು ಗ್ರಾಮಗಳಲ್ಲಿ ಸಮುದಾಯದ ಬೇಡಿಕೆಗಳು ಹೆಚ್ಚಾಗಿದ್ದು, ಅವುಗಳನ್ನು ಈಡೇರಿಸಬೇಕು. ಮತ್ತೊಮ್ಮೆ ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗುತ್ತಿರುವುದು ಬಹಳ ಹರ್ಷದಾಯಕವಾಗಿದೆ. ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಹೊಂದಾಣಿಕೆಯು ದಕ್ಷಿಣ ಕರ್ನಾಟಕದಲ್ಲಿ ಬಹಳ ಯಶಸ್ವಿಯಾಗಿದೆ. ನಮ್ಮ ಕ್ಷೇತ್ರದಿಂದಲೂ ಒಬ್ಬ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಪಾರ್ಲಿಮೆಂಟಿಗೆ ಕಳಿಸಿರುತ್ತೇವೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಗೆಲ್ಲಿಸಿದ ಮಂಡ್ಯ ಜಿಲ್ಲೆಯ ಜನತೆಗೆ ಧನ್ಯವಾದಗಳು. ಈ ರಾಷ್ಟ್ರದ ಹಿತದೃಷ್ಟಿಯಿಂದ ರಾಜ್ಯದಲ್ಲಿ ಒಳ್ಳೆಯ ಫಲಿತಾಂಶ ಜನತೆ ನೀಡಿದ್ದಾರೆ. ಕೋಲಾರದಲ್ಲಿ ಮಲ್ಲೇಶ್…

Read More

ಹಾಸನ: ಜಿಲ್ಲೆಯ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಬಳಿ ಸಿಡಿಲು ಬಡಿದು ಇಬ್ಬರು ಕೂಲಿ ಕಾರ್ಮಿಕ ಮಹಿಳೆಯರ ಮೃತಪಟ್ಟಿದ್ದಾರೆ. ಕೂಲಿ ಕಾರ್ಮಿಕರಾದ ಮುತ್ತಮ್ಮ(70), ಪುಟ್ಟಮ್ಮ(63) ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ. ಇಂದು ಮಧ್ಯಾಹ್ನ ಜೋಳ ಬಿತ್ತನೆ ಮಾಡುತ್ತಿದ್ದ ವೇಳೆ ಮಳೆ ಬಂದಿದೆ. ಈ ಹಿನ್ನಲೆ ಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದಿತ್ತು. ಗಂಭೀರ ಸ್ಥಿತಿಯಲ್ಲಿದ್ದ ಗಾಯಾಳುಗಳನ್ನು ಅರಕಲಗೂಡು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಮತ್ತೋರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಪ್ರಾದೇಶಿಕ ವಲಯ ಹಾಗೂ ಸಾಮಾಜಿಕ ಅರಣ್ಯ ಇಲಾಖೆಯ ವತಿಯಿಂದ ಸಸ್ಯಕಾಶಿ ಶ್ರೀ ಕ್ಷೇತ್ರ ಸಿದ್ದರಬೆಟ್ಟ ಪುಣ್ಯಕ್ಷೇತ್ರದಲ್ಲಿ, ಗಿಡ ನೆಡುವ ಮುಖೇನ ಶ್ರೀ ಮಠದ ಶ್ರೀಗಳು ಹಸಿರು ಕ್ರಾಂತಿಗೆ ಚಾಲನೆ ನೀಡಿದರು. ಅರಣ್ಯ ಇಲಾಖೆ ಅಧಿಕಾರಿ ರವಿಕುಮಾರ್ ಪ್ರತಿ ಹಳ್ಳಿ ಹಳ್ಳಿಯಲ್ಲೂ ಗಿಡಗಳ ನೆಡುವ ಮುಖೇನ ಹಸಿವು ಕ್ರಾಂತಿ ಕಾರ್ಯಕ್ರಮ ಮಾಡುವ ಆಶಯವನ್ನು ವ್ಯಕ್ತಪಡಿಸಿದರು. ಕೊರಟಗೆರೆ ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ, ಕೋರ್ಟ್ ಆವರಣದಲ್ಲಿ, ಸರ್ಕಾರಿ ಶಾಲೆಗಳ ಆವರಣದಲ್ಲಿ ಸೇರಿದಂತೆ ಸಿದ್ದರಬೆಟ್ಟದ ಸತ್ಯಕಾಶಿ ಕ್ಷೇತ್ರದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಣೆ ಮಾಡಲಾಯಿತು ಎಂದು ತಾಶಿಲ್ದಾರ್ ಮಂಜುನಾಥ್ ತಿಳಿಸಿದರು. ವರುಣನ ಕೃಪೆ, ವನ್ಯಜೀವಿಗಳ ಸಂರಕ್ಷಣೆ, ತಂಪಾದ ಗಾಳಿ, ಕುಡಿಯುವ ನೀರು, ಮನುಷ್ಯನಿಗೆ ಅತ್ಯವಶ್ಯಕ.  ಇವೆಲ್ಲವೂ ಒಳಗೊಂಡಂತೆ ಸುಂದರ ಅರಣ್ಯ ಪ್ರದೇಶ ನಿರ್ಮಾಣಕ್ಕಾಗಿ ಈ ಹಸಿರು ಕ್ರಾಂತಿ ಮುಖ್ಯ. ಸರ್ಕಾರದ ಚಿಂತನೆಯಂತೆ ಅರಣ್ಯ ಇಲಾಖೆ ವತಿಯಿಂದ, ಪ್ರತಿ ಗ್ರಾಮ ಪಂಚಾಯಿತಿಗೆ ಒಂದು ಪಾರ್ಕ್ ನಿರ್ಮಾಣಕ್ಕೆ ನಿರ್ಧರಿಸಿದೆ ಎಂದು ಸಾಮಾಜಿಕ ಅರಣ್ಯ ಇಲಾಖೆ ಅಧಿಕಾರಿ ಶಿಲ್ಪಾ ತಿಳಿಸಿದರು.…

Read More

ವೀಳ್ಯದೆಲೆ ನೀರನಲ್ಲಿ ಕುದಿಸಿ ಕುಡಿಯುವುದು ಹೆಚ್ಚು ಪ್ರಯೋಜನಕಾರಿ ಎನ್ನುತ್ತಾರೆ ತಜ್ಞರು. ಇದಕ್ಕಾಗಿ ಮೊದಲು ಒಲೆಯ ಮೇಲೆ ಪಾತ್ರೆಯನ್ನು ಇಟ್ಟು ಒಂದು ಲೋಟ ನೀರು ಹಾಕಿ ವೀಳ್ಯದೆಲೆಯನ್ನು ತುಂಡು ಮಾಡಿ ಅದರಲ್ಲಿ ಹಾಕಿ. 5 ರಿಂದ 7 ನಿಮಿಷಗಳ ಕಾಲ ನೀರನ್ನು ಕುದಿಸಿ ಮತ್ತು ಶೋಧಿಸಿದ ನಂತರ ಅದನ್ನು ಕುಡಿಯಿರಿ. ಆರೋಗ್ಯ ಪ್ರಯೋಜನ: ಮಲಬದ್ಧತೆ ಸಮಸ್ಯೆ ಇರುವವರಿಗೆ ಈ ವೀಳ್ಯದೆಲೆ ನೀರು ತುಂಬಾ ಉಪಯುಕ್ತ. ಕರುಳಿನ ಚಲನೆಯನ್ನು ಸುಧಾರಿಸುತ್ತದೆ. ದೇಹದಲ್ಲಿ ಉರಿಯೂತವನ್ನು ಕಡಿಮೆ ಮಾಡುತ್ತದೆ. ವೀಳ್ಯದೆಲೆಯು ಉರಿಯೂತ ನಿವಾರಕ ಗುಣಗಳನ್ನು ಹೊಂದಿದ್ದು ಎದೆಯಲ್ಲಿ ಸಂಗ್ರಹವಾಗಿರುವ ಕಫವನ್ನು ತೆರವುಗೊಳಿಸುತ್ತದೆ. ಇದು ಶೀತ, ಕೆಮ್ಮು ಮತ್ತು ಗಂಟಲು ನೋವನ್ನು ಸಹ ನಿವಾರಿಸುತ್ತದೆ. ವೀಳ್ಯದೆಲೆಯ ನೀರು ಸಹ ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುವುದಲ್ಲದೆ, ಮಧುಮೇಹದಿಂದ ಉಂಟಾಗುವ ತೊಂದರೆಗಳನ್ನು ಸಹ ಕಡಿಮೆ ಮಾಡುತ್ತದೆ. ವೀಳ್ಯದೆಲೆಯ ನೀರು ಕೆಟ್ಟ ಕೊಲೆಸ್ಟ್ರಾಲ್ ಮತ್ತು ಟ್ರೈಗ್ಲಿಸರೈಡ್ ‌ಗಳ ಮಟ್ಟವನ್ನು ಸಹ ನಿಯಂತ್ರಿಸುತ್ತದೆ. ಇದು ಹೃದಯವನ್ನು ಆರೋಗ್ಯಕರವಾಗಿಸುತ್ತದೆ.…

Read More

ಕಳೆದ ಆಗಸ್ಟ್ ​ನಲ್ಲಿ ನಡೆದ ಸಾಗರೋತ್ತರ ನರ್ಸ್ ​​ಗಳ ಉದ್ಯೋಗ ಮೇಳದಲ್ಲಿ ಮೇಘಾಲಯ 27 ನರ್ಸ್​ಗಳು ಜಪಾನ್ ​ನಲ್ಲಿ ಉದ್ಯೋಗಾವಕಾಶವನ್ನು ಪಡೆದುಕೊಂಡಿದ್ದಾರೆ. ಈ 27 ನರ್ಸ್​​ಗಳು ಇದೀಗ ಜಪಾನಿ ಭಾಷೆಯ ತರಬೇತಿ ಕಲಿಕೆ ಪೂರ್ಣಗೊಳಿಸಿದ್ದು, ಇದೀಗ ದೂರದ ದೇಶದಲ್ಲಿ ವೃತ್ತಿಜೀವನದ ಪ್ರಯಾಣ ಆರಂಭಿಸಲು ಮುಂದಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಮ್ಮ ಹೊಸ ಭಾಷಾ ಕೌಶಲ್ಯದೊಂದಿಗೆ ಇದೀಗ ಈ ನರ್ಸ್​​ಗಳ ಜಪಾನ್​ ವಿವಿಧ ಆಸ್ಪತ್ರೆ ಮತ್ತು ಕೇರ್​ ಹೋಮ್​ಗಳಲ್ಲಿ ನೇಮಿಸಲಾಗುವುದು ಎಂದು ಮೇಘಾಲಯ ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಇದರ ಜೊತೆಗೆ 14 ನರ್ಸ್​​ಗಳು ಸಿಂಗಾಪೂರ್​ ನ ಹಲವಾರು ಸಂಸ್ಥೆಗಳಿಗೆ ನೇಮಿಸಲಾಗಿದೆ. ರಾಜ್ಯ ಸರ್ಕಾರ ಪ್ರತಿ ವರ್ಷ 50 ಸಾವಿರ ಅಭ್ಯರ್ಥಿಗಳಿಗೆ ಮೇಘಾಲಯ ರಾಜ್ಯ ಕೌಶಲ್ಯ ಅಭಿವೃದ್ಧಿ ಸೊಸೈಟಿ ಅಡಿ ಕೌಶಲ್ಯ ಮೇಘಾಲಯ ಯೋಜನೆ ಭಾಗವಾಗಿ ತರಬೇತಿ ಅವಕಾಶವನ್ನು ಒದಗಿಸುತ್ತಿದೆ. ಮುಂದಿನ ವರ್ಷದಲ್ಲಿ 300 ನರ್ಸ್​​ಗಳನ್ನು ಈ ಯೋಜನೆಯ ಭಾಗವಾಗಿಸುವ ಗುರಿ ಹೊಂದಲಾಗಿದೆ. ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್​ ಸಂಗ್ಮಾ, ಈ ಉಪಕ್ರಮದಲ್ಲಿ ಭಾಗಿಯಾದ ಶಿಕ್ಷಕರು…

Read More

ಚಿಕ್ಕಮಗಳೂರು: ಪರಿಸರ ಮಾಲಿನ್ಯ ಉಂಟಾದರೆ ಮುಂಬರುವ ದಿನಗಳಲ್ಲಿ ಆಮ್ಲ ಜನಕವನ್ನು ಹಾಗೂ ಪ್ರಕೃತಿದತ್ತವಾಗಿ ಸಿಗುವುದೆಲ್ಲವನ್ನು ಕೊಂಡುಕೊಳ್ಳಬಹುದಾದ ಪರಿಸ್ಥಿತಿ ಎದುರಾಗಲಿದೆ ಎಂದು ಜಿಲ್ಲಾ ಮಾಲಿನ್ಯ ನಿಯಂತ್ರಣಾಧಿಕಾರಿ ವೈ.ಎಸ್. ರಾಧಾ ಹೇಳಿದರು. ನಗರದ ಬೈಪಾಸ್ ಸಮೀಪ ಎಂಇಎಸ್ ಎಸ್.ಎಸ್.ಆರ್. ಪ್ರಾಯೋಗಿಕ ಪ್ರೌಢಶಾಲೆಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾಡಳಿತ, ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ ಹಾಗೂ ಜಿಲ್ಲಾ ವಿಜ್ಞಾನ ಪರಿಷತ್ ಸಹಯೋಗದಲ್ಲಿ ಏರ್ಪಡಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು. ಅತಿಯಾದ ಜನಸಂಖ್ಯೆಯಿಂದಾಗಿ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಅಪಾರ ಪರಿಸರವನ್ನು ನಾಶ ಮಾಡಲಾಗುತ್ತಿದೆ. ಇದರಿಂದ ಉತ್ತಮವಾದ ಆಮ್ಲಜನಕ ಸಿಗುತ್ತಿಲ್ಲ. ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದರು. ವಿದ್ಯಾರ್ಥಿಗಳು ಭೂಮಿಯನ್ನು ಉಳಿಸಿಕೊಳ್ಳಬೇಕಾದರೆ ಗಿಡಗಳನ್ನು ನೆಡಬೇಕು. ನಿಮ್ಮ ಎಲ್ಲಾ ಆಚರಣೆಗಳಿಗೆ ಉಡುಗೊರೆಯಾಗಿ ಗಿಡಗಳನ್ನು ಕೊಡಿ ಮತ್ತು ಮನೆಯಂಗಳದಿ ಸಸಿ ನೆಡುವ ಮೂಲಕ ಪೋಷಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು. ಜಿಲ್ಲಾ ವಿಜ್ಞಾನ ಪರಿಷತ್ ಅಧ್ಯಕ್ಷ ಸತ್ಯನಾರಾಯಣ್ ಪ್ರಾಸ್ತಾವಿಕವಾಗಿ ಮಾತನಾಡಿ,…

Read More

ಮಾಲ್ಡೀವ್ಸ್ ಸರ್ಕಾರ ಇಸ್ರೇಲಿ ಪ್ರಜೆಗಳಿಗೆ ವಿಧಿಸಿರುವ ನಿಷೇಧವನ್ನು ಇಸ್ರೇಲ್ ಟೀಕಿಸಿದ್ದು ಲಕ್ಷದ್ವೀಪ ಸೇರಿದಂತೆ ಭಾರತದ ಬೀಚ್‍ ಗಳನ್ನು ಸಂದರ್ಶಿಸುವಂತೆ ತನ್ನ ಪ್ರಜೆಗಳಿಗೆ ಸಲಹೆ ನೀಡಿದೆ. `ಮಾಲ್ದೀವ್ಸ್ ಇನ್ನು ಮುಂದೆ ಇಸ್ರೇಲಿಯನ್ನರನ್ನು ಸ್ವಾಗತಿಸುತ್ತಿಲ್ಲವಾದ್ದರಿಂದ, ಇಸ್ರೇಲಿ ಪ್ರಜೆಗಳನ್ನು ಪ್ರೀತಿಯಿಂದ ಸ್ವಾಗತಿಸುವ ಮತ್ತು ಆತಿಥ್ಯ ನೀಡುವ ಸುಂದರವಾದ ಮತ್ತು ಅದ್ಭುತವಾದ ಬೀಚ್ ‍ಗಳು ಭಾರತದಲ್ಲಿವೆ. ನಮ್ಮ ರಾಜತಾಂತ್ರಿಕರು ಭೇಟಿ ನೀಡಿದ ಸ್ಥಳಗಳನ್ನು ಆಧರಿಸಿದ ಈ ಶಿಫಾರಸುಗಳನ್ನು ಪರಿಶೀಲಿಸಿ’ ಎಂದು ಭಾರತದಲ್ಲಿನ ಇಸ್ರೇಲಿ ರಾಯಭಾರಿ ಕಚೇರಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದೆ. ಇದರ ಜೊತೆಗೆ ಲಕ್ಷದ್ವೀಪ, ಅಂಡಮಾನ್ ಮತ್ತು ನಿಕೋಬಾರ್, ಗೋವಾ ಹಾಗೂ ಕೇರಳದ ಬೀಚ್‍ ಗಳ ಚಿತ್ರವನ್ನು ಹಂಚಿಕೊಂಡಿದೆ. ‘ಮಾಲ್ದೀವ್ಸ್ ಸರಕಾರದ ನಿರ್ಧಾರಕ್ಕೆ ಧನ್ಯವಾದಗಳು. ಇದೀಗ ಇಸ್ರೇಲಿಯನ್ನರು ಲಕ್ಷದ್ವೀಪ ಸಹಿತ ಭಾರತದ ಸುಂದರ ಬೀಚ್‍ ಗಳನ್ನು ಸಂದರ್ಶಿಸಬಹುದು’ ಎಂದು ಭಾರತದಲ್ಲಿನ ಇಸ್ರೇಲ್ ಕಾನ್ಸುಲ್ ಜನರಲ್ ಕೋಬಿ ಶೊಶಾನಿ `ಎಕ್ಸ್’ ಮಾಡಿದ್ದು ಜನವರಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಲಕ್ಷದ್ವೀಪದ ಪ್ರಾಕೃತಿಕ ಸೌಂದರ್ಯವನ್ನು ಶ್ಲಾಘಿಸಿದ ಪೋಸ್ಟ್ ಅನ್ನು…

Read More

ಭಾರತೀಯ ಮೂಲದ 23 ವರ್ಷದ ತೆಲುಗು ವಿದ್ಯಾರ್ಥಿನಿಯೊಬ್ಬರು ಇತ್ತೀಚೆಗೆ ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಹೈದರಾಬಾದ್ ಮೂಲದ ಮತ್ತು ಸ್ಯಾನ್ ಬರ್ನಾರ್ಡಿನೊದ ಕ್ಯಾಲಿಫೋರ್ನಿಯಾ ಸ್ಟೇಟ್ ಯೂನಿವರ್ಸಿಟಿಯಲ್ಲಿ ಅಧ್ಯಯನ ಮಾಡುತ್ತಿರುವ ನಿತಿಶಾ ಕಂದುಲಾ ಮೇ 28 ರಿಂದ ನಾಪತ್ತೆಯಾಗಿದ್ದಾರೆ. ನಿತೀಶಾ ಅವರು ಕೊನೆಯ ಬಾರಿಗೆ ಲಾಸ್ ಏಂಜಲೀಸ್​ ನಲ್ಲಿ ಕಾಣಿಸಿಕೊಂಡಿದ್ದರು ಎಂದು ವಿಶ್ವವಿದ್ಯಾಲಯವು ಎಕ್ಸ್​ ನಲ್ಲಿ ಪೋಸ್ಟ್​ ಮಾಡಿದೆ. ಸ್ಥಳೀಯ ಪೊಲೀಸರು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದು, ವಿದ್ಯಾರ್ಥಿನಿಯ ಪತ್ತೆಗಾಗಿ ಸಾರ್ವಜನಿಕರಿಂದ ಸಹಾಯ ಕೋರಿದ್ದಾರೆ. ತೆಲಂಗಾಣ ಮೂಲದ ವಿದ್ಯಾರ್ಥಿಯೊಬ್ಬ ನಾಪತ್ತೆಯಾದ ಒಂದು ತಿಂಗಳೊಳಗೆ ಇಂಥ ಮತ್ತೊಂದು ಘಟನೆ ನಡೆದಿರುವುದು ಕಳವಳ ಮೂಡಿಸಿದೆ. ತೆಲಂಗಾಣ ಮೂಲದ ರೂಪೇಶ್ ಚಂದ್ರ ಚಿಂತಾಕಿಂಡಿ ಕಳೆದ ತಿಂಗಳು ಚಿಕಾಗೋದಲ್ಲಿ ನಾಪತ್ತೆಯಾಗಿದ್ದರು. ಈ ವಿದ್ಯಾರ್ಥಿ ಬಗ್ಗೆ ಈವರೆಗೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More