Subscribe to Updates
Get the latest creative news from FooBar about art, design and business.
- ಪಾವಗಡ: ಮಾಜಿ ಸಚಿವ, ಹಿರಿಯ ರಾಜಕಾರಣಿ ವೆಂಕಟರಮಣಪ್ಪ ನಿಧನ: ಗಣ್ಯರಿಂದ ಅಂತಿಮ ದರ್ಶನ
- ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ
- ಕೆ.ಎಚ್. ಮುನಿಯಪ್ಪಗೆ ಡಿಸಿಎಂ, ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನಕ್ಕೆ ಒತ್ತಾಯ: ಹೈಕಮಾಂಡ್ಗೆ ಕುರ್ಣೇಗಾಲ ಬೆಟ್ಟಸ್ವಾಮಿ ಆಗ್ರಹ
- ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ
- ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶ್ರೀ ಗುರು ಸಿದ್ದೇಶ್ವರ ದೇವಸ್ಥಾನದ ಜೀರ್ಣೋದ್ದಾರಕ್ಕೆ 1 ಲಕ್ಷ ರೂ. ಧನಸಹಾಯ
- ಮಾಜಿ ಸಚಿವ ವೆಂಕಟರಮಣಪ್ಪ ನಿಧನ: ಡಾ.ಜಿ.ಪರಮೇಶ್ವರ ಅಂತಿಮ ನಮನ
- ಮಿಡಿಗೇಶಿ ಬಳಿ ಭೀಕರ ಬೈಕ್ ಅಪಘಾತ: ಪತ್ನಿ ಸ್ಥಳದಲ್ಲೇ ಸಾವು, ಪತಿಗೆ ತೀವ್ರ ಗಾಯ
- ಜೂನ್ 5 ರಂದು ತುಮಕೂರಿನಲ್ಲಿ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ: ಹೆಸರು ನೋಂದಣಿಗೆ ಜೂನ್ 3 ಕೊನೆ ದಿನ
Author: admin
ನಾವು ಸೇವಿಸುವ ಆಹಾರಗಳಲ್ಲಿ ಪೌಷ್ಟಿಕಾಂಶಗಳ ಕೊರತೆ ಉಂಟಾದರೆ ಅದು ನಮ್ಮ ದೇಹದ ಅಪೌಷ್ಟಿಕತೆಗೆ ಕಾರಣವಾಗುತ್ತದೆ. ಆದ್ದರಿಂದ ನಾವು ಯಾವುದೇ ಆಹಾರ ಸೇವನೆ ಮಾಡಿದರೂ ಮೊದಲು ಅದರಲ್ಲಿರುವ ಪೌಷ್ಟಿಕ ಸತ್ವಗಳ ಮತ್ತು ಖನಿಜಾಂಶಗಳ ಕಡೆಗೆ ನಮ್ಮ ಗಮನ ಕೊಡಬೇಕು. ಮೊಟ್ಟೆಯ ಪ್ರಸ್ತಾಪದಲ್ಲೂ ಅಷ್ಟೇ. ನೋಡಲು ಚಿಕ್ಕದಿದ್ದರೂ ಮೊಟ್ಟೆಗಳಲ್ಲಿ ಅಗತ್ಯಕ್ಕಿಂತಲೂ ಹೆಚ್ಚಾದ ಪೌಷ್ಟಿಕ ಸತ್ವಗಳು ಅಡಗಿವೆ. ಸಮತೋಲನ ಆಹಾರ ಪದ್ಧತಿಯಲ್ಲಿ ಮೊಟ್ಟೆಗಳಿಗೆ ವಿಶೇಷ ಸ್ಥಾನವನ್ನು ಕೊಡಲಾಗಿದೆ. ಮೊಟ್ಟೆಗಳು ಪ್ರೋಟೀನ್ ಅಂಶದ ಉತ್ತಮ ಮೂಲಗಳು ಎಂದು ಪ್ರತಿಯೊಬ್ಬರಿಗೂ ತಿಳಿದಿದೆ. ಮೊಟ್ಟೆಗಳಲ್ಲಿ ಮನುಷ್ಯನ ಹೃದಯದ ಆರೋಗ್ಯಕ್ಕೆ ಸಹಕಾರಿಯಾಗಿರುವ ಒಳ್ಳೆಯ ಕೊಬ್ಬಿನ ಅಂಶಗಳು ಎಂದೇ ಖ್ಯಾತಿಯಾದ” ಅಪರ್ಯಾಪ್ತ ಕೊಬ್ಬಿನ ಅಂಶಗಳು” ಮತ್ತು ಬಹು ಮುಖ್ಯವಾದ ಪೌಷ್ಟಿಕಾಂಶಗಳಾದ ವಿಟಮಿನ್ ‘ ಬಿ6 ‘, ವಿಟಮಿನ್ ‘ ಬಿ12 ‘ ಮತ್ತು ವಿಟಮಿನ್ ‘ ಡಿ ‘ ಅಂಶಗಳು ಸೇರಿವೆ. ಮೊಟ್ಟೆಯು ವಿವಿಧ ಅಗತ್ಯ ಪೋಷಕಾಂಶಗಳನ್ನು ಸಹ ಹೊಂದಿರುತ್ತವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಸುದ್ದಿಗೋಷ್ಠಿಯಲ್ಲಿ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ ದಿವ್ಯಸಾನಿಧ್ಯ ವಹಿಸಿ ಮಾತನಾಡಿ, “ಸಿದ್ದರಬೆಟ್ಟದ ಕ್ಷೇತ್ರದ ಬಾಳೆಹೊನ್ನೂರು ಖಾಸಾ ಶಾಖಾ ಮಠದ 18ನೇ ವರ್ಷದ ವಾರ್ಷಿಕೋತ್ಸವ, ಶ್ರೀಜಗದ್ಗುರು ರೇಣುಕಾಚಾರ್ಯರ, ಶ್ರೀ ಜಗಜ್ಯೋತಿ ಬಸವೇಶ್ವರರ ಜಯಂತ್ಯೋತ್ಸವ ಹಾಗೂ 25ಕ್ಕೂ ಹೆಚ್ಚು ಸಾಮೂಹಿಕ ವಿವಾಹಗಳು, ಜನಾಜಾಗೃತಿ ಧರ್ಮ ಸಮಾರಂಭವನ್ನು ಆಯೋಜನೆ ಮಾಡಲಾಗಿದೆ. ಧಾರ್ಮಿಕ ಮತ್ತು ಸಮಾಜಿಕವಾಗಿ ಕಾರ್ಯಕ್ರಮ ನಡೆಸಿಕೊಂಡು ಬಂದಿದ್ದೇವೆ. ಮಠದ ಭಕ್ತರನ್ನು ವಿಶೇಷವಾಗಿ ಪ್ರೀತಿ ವಾತ್ಸಲ್ಯದಿಂದ ಕಾಣುವ ಉದ್ದೇಶಪೂರ್ವಕವಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ದೇಶದ ಸಂಸ್ಕೃತಿ, ಜೂ.೮ ಪುಸ್ತಕದ ದಾಸೋಹ, ತಂತ್ರಜ್ಞಾನದ ಬಳಕೆಯಿಂದ ಪುಸ್ತಕದ ಕಡೆ ಗಮನ ಹರಿಸುವುದು ಈಗಿನ ಯುವ ಪೀಳಿಗೆಯಲ್ಲಿ ಕಡಿಮೆಯಾಗಿದೆ. ಪುಸ್ತಕದ ದಾಸೋಹವನ್ನು 3 ವರ್ಷದಿಂದಲೂ ನಡೆಸಿಕೊಂಡು ಬಂದಿದ್ದು, ಪ್ರತಿ ವರ್ಷ 10ಸಾವಿರಕ್ಕೂ ಅಧಿಕ ಪುಸ್ತಕವನ್ನು ವಿತರಣೆ ಮಾಡಲಾಗಿದೆ. ಇದರಿಂದ ಬಡಕುಟುಂಬದ ಉಜ್ವಲ ಭವಿಷ್ಯಕ್ಕೆ ಕಾರಣಾವಾಗುತ್ತದೆ. ಸಿದ್ದೇಶ್ವರ ಸ್ವಾಮಿಗೆ ಬಿಲ್ಪಾರ್ಚನೆ, ರುದ್ರಾಭಿಷೇಕ, ಪಲ್ಲಕ್ಕಿ ಉತ್ಸವ, ವಾರ್ಷಿಕೋತ್ಸವದ ಧಾರ್ಮಿಕ ಸಮಾರಂಭ ನಡೆಯುತ್ತದೆ. ಸಾಮೂಹಿಕ ದೀಕ್ಷಾವನ್ನು ನೀಡಲಾಗುವುದು. ರಂಭಾಪುರಿ ಜಗದ್ಗುರುಗಳ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಸಲಾಗುವುದು.…
ಸರಗೂರು: ವಿಶ್ವ ಪರಿಸರ ದಿನವನ್ನು ವಿಶ್ವಾದ್ಯಂತ ಪರಿಸರದ ಬಗ್ಗೆ ಜಾಗೃತಿ ಮತ್ತು ನಮ್ಮ ಪರಿಸರದ ರಕ್ಷಣೆಯನ್ನು ಉತ್ತೇಜಿಸಲು ಆಚರಿಸಲಾಗುತ್ತದೆ. ಜೀವಿಗಳ ಪೋಷಣೆಯಲ್ಲಿ ಪರಿಸರ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂದು ಆಗತ್ತೂರು ಶಾಲೆಯ ದೈಹಿಕ ಶಿಕ್ಷಕ ಬಂಗಾರಯ್ಯ ತಿಳಿಸಿದರು. ತಾಲ್ಲೂಕಿನ ಸಾಗರೆ ಗ್ರಾಪಂ ವ್ಯಾಪ್ತಿಯ ಆಗತ್ತೂರು ಗ್ರಾಮದಲ್ಲಿ ಬುಧವಾರ ದಂದು ವಿಶ್ವ ಪರಿಸರ ದಿನಾಚರಣೆಯಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಹಾಗೂ ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಪರಿಸರದ ಸಮೃದ್ಧಿ ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಪ್ರತಿಯೊಂದು ಜೀವಿಯ ಜೀವನದ ಅಸ್ತಿತ್ವಕ್ಕೆ ಕಾರಣವಾಗಿದೆ. ಮಾನವ ಸೇರಿದಂತೆ ಇತರೆ ಪ್ರಾಣಿ, ಪಕ್ಷಿಗಳು, ಸೇರಿದಂತೆ ಪ್ರತಿಯೊಂದು ಜೀವ ಸಂಕುಲ ಆಹಾರ, ಗಾಳಿ, ನೀರು ಇತರೆ ಅಗತ್ಯತೆಗಳಿಗಾಗಿ ಪರಿಸರವನ್ನ ಅವಲಂಬಿಸಿದೆ ಎಂದರೆ ತಪ್ಪಾಗಲಾರದು. ಆದರೆ ಇತ್ತೀಚಿನ ದಿನಗಳಲ್ಲಿ ಮಾನವನು ಆಧುನಿಕ ಬದುಕಿನ ಗೀಳಿಗೆ ಬಿದ್ದು ಪರಿಸರವನ್ನು…
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಗೆಲುವು ಸಾಧಿಸಿದ ಬೆನ್ನಲ್ಲೇ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ. “ಚಿಕ್ಕಬಳ್ಳಾಪುರದಲ್ಲಿ ಸುಧಾಕರ್ ಒಂದು ಮತದ ಮುನ್ನಡೆ ಸಾಧಿಸಿದದೂ ನಾನು ರಾಜೀನಾಮೆ ನೀಡುತ್ತೇನೆ” ಎಂದು ಪ್ರದೀಪ್ ಈಶ್ವರ್ ಸವಾಲು ಹಾಕಿದ್ದರು. ಇದೀಗ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಡಾ.ಕೆ. ಸುಧಾಕರ್ ಜಯ ಗಳಿಸಿದ್ದು, ಇದರ ಬೆನ್ನಲ್ಲೇ ಮಂಗಳವಾರ ರಾತ್ರಿ ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಪ್ರದೀಪ್ ಈಶ್ವರ್ ಮನೆ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಜೂನ್ 9ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣವಚನ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿಯವರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ. ದೇಶದ ರಾಜಕೀಯದಲ್ಲಿ ಕಿಂಗ್ ಮೇಕರ್ ಪಟ್ಟದಲ್ಲಿರುವ ಚಂದ್ರಬಾಬು ನಾಯ್ಡು ಇದೀಗ ಜೂನ್ 9 ರಂದು ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಟಿಡಿಪಿ(TDP) ಪಕ್ಷ 158 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಅಧಿಕಾರರೂಡ ಜಗನ್ ಮೋಹನ್ ರೆಡ್ಡಿ ವೈಎಸ್ಆರ್(YSR) ಕಾಂಗ್ರೆಸ್ ನೆಲಕಚ್ಚಿದೆ. NDA ಮೈತ್ರಿಕೂಟ ಪಕ್ಷವಾದ ಟಿಡಿಪಿ 133, ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ 21 ಹಾಗೂ ಬಿಜೆಪಿ 7 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಕಳೆದ ಬಾರಿ ಭರ್ಜರಿ ಬಹುಮತದೊಂದಿಗೆ ಸರ್ಕಾರ ರಚಿಸಿದ್ದ ಜಗನ್ ರೆಡ್ಡಿ ನೇತೃತ್ವದ YSRCP ಪಕ್ಷ ಕೇವಲ 15 ಸ್ಥಾನಗಳಿಗೆ ಕುಸಿದಿದೆ. ಒಟ್ಟು 178 ಸ್ಥಾನಗಳ ಪೈಕಿ ಅಭೂತಪೂರ್ವ ಗೆಲುವು ಕಂಡಿರುವ ಟಿಡಿಪಿ ಯಾವುದೇ ಅಡೆತಡೆ ಇಲ್ಲದೆ ಸರ್ಕಾರ ರಚಿಸಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
2024 ರ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಫಲಿತಾಂಶ ಹೊರಬಿದ್ದ ಮೇಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರರ ಸ್ಥಾನ ಗಟ್ಟಿಯಾಗಿದೆಯೇ? ಹೀಗೊಂದು ಚರ್ಚೆ ಪಕ್ಷದ ಪಾಳಯದಲ್ಲಿ ಹುಟ್ಟಿಕೊಂಡಿದ್ದು, ಹೌದು ಎನ್ನುತ್ತಿದೆ ಮೂಲಗಳು. ಹಾಗಾದ್ರೆ, ಚುನಾವಣೆಯ ಫಲಿತಾಂಶ ವಿಜಯೇಂದ್ರರ ಸ್ಥಾನವನ್ನು ಗಟ್ಟಿಗೊಳಿಸಿದ್ದೇಗೆ? ವಿಜಯೇಂದ್ರ ನಿಜಕ್ಕೂ ಮಾಡಿದ್ದೇನು?. ರಾಜ್ಯದಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಪ್ರದರ್ಶನ ನೀಡಿದೆ. ರಾಜ್ಯದಲ್ಲಿ ಬಿಜೆಪಿ ವಿಪಕ್ಷ ಸ್ಥಾನದಲ್ಲಿ ಕುಳಿತಿದ್ರೂ ಸಹ 28 ಕ್ಷೇತ್ರಗಳ ಪೈಕಿ 17 ಕ್ಷೇತ್ರಗಳಲ್ಲಿ ಗೆದ್ದು ಬೀಗುವ ಮೂಲಕ, ಕಾಂಗ್ರೆಸ್ ಪಕ್ಷವನ್ನು ಕಟ್ಟಿಹಾಕುವಲ್ಲಿ ಕೇಸರಿ ಪಡೆ ಸಫಲವಾಗಿದೆ. ಇನ್ನು ಇಂತಹ ಪ್ರದರ್ಶನ ಮಾಡಲು ಪಕ್ಷಕ್ಕೆ ಸಾರಥಿ ಬಹಳ ಮುಖ್ಯ. ಆ ಸಾರಥಿಯ ಸ್ಥಾನದಲ್ಲಿ ಕುಳಿತಿರುವ ಬಿ.ವೈ. ವಿಜಯೇಂದ್ರ ಅದರಲ್ಲಿ ಸಕ್ಸಸ್ ಆಗಿದ್ದಾರೆ. ಕಳೆದ ಆರೇಳು ತಿಂಗಳಿಂದ ಬಿಜೆಪಿ ಸಾರಥ್ಯ ವಹಿಸಿಕೊಂಡಿರುವ ಬಿ.ವೈ. ವಿಜಯೇಂದ್ರ, ಹೈಕಮಾಂಡ್ನ ನಂಬಿಕೆಯನ್ನು ಉಳಿಸಿಕೊಂಡಿದ್ದಾರೆ. ಪಕ್ಷ ಸಂಘಟನೆ ಮಾಡಿ ಪಕ್ಷಕ್ಕೆ ಲೋಕ ಕದನದಲ್ಲಿ ಬಿಜೆಪಿ ಪರ ವಾತಾವರಣ ಸೃಷ್ಠಿಸಿದ್ದಾರೆ. ಕಾಂಗ್ರೆಸ್ ಕಳೆದ…
ಇಡೀ ವಿಶ್ವವೇ ಕುತೂಹಲದಿಂದ ಎದುರು ನೋಡ್ತಿದ್ದ ಭಾರತ ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಮಿತ್ರಪಕ್ಷಗಳ ಜೊರೆ ಸೇರಿ ಬಿಜೆಪಿ 3ನೇ ಬಾರಿ ಅಧಿಕಾರಕ್ಕೇರಲು ಸರ್ವ ಸನ್ನದ್ಧವಾಗಿದೆ. ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್ಡಿಎ, ಪ್ರಧಾನಿ ನರೇಂದ್ರ ಮೋದಿ ಅವರ ಲೆಕ್ಕಾಚಾರಗಳು ಹಾಗೂ ಮತದಾನೋತ್ತರ ಸಮೀಕ್ಷೆಗಳ ಭವಿಷ್ಯವನ್ನು ಮತದಾರ ಪ್ರಭು ತಲೆಕೆಳಗೆ ಮಾಡಿದ್ದಾನೆ. ಐತಿಹಾಸಿಕ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬರುವಷ್ಟು ಸರಳ ಬಹುಮತವನ್ನು ಎನ್ಡಿಎ ಪಡೆದಿದೆ. 400 ಕ್ಷೇತ್ರಗಳನ್ನು ಗೆಲ್ಲುವ ಪ್ರಧಾನಿ ಮೋದಿಯ ಕನಸು ಭಗ್ನವಾಗಿದೆ. 543 ಸಂಖ್ಯಾಬಲದ ಲೋಕಸಭೆಯಲ್ಲಿ ಅಧಿಕಾರ ಹಿಡಿಯಲು 272 ಸ್ಥಾನಗಳ ಬೇಕು. ಬಿಜೆಪಿಯಾಗಲಿ, ಕಾಂಗ್ರೆಸ್ ಆಗಲಿ ಸ್ಪಷ್ಟ ಬಹುಮತ ಪಡೆದಿಲ್ಲ. ಆದರೆ ಎನ್ಡಿಎಗೆ ಸರಳ ಬಹುಮತ ಸಿಕ್ಕಿದೆ. ಎನ್ಡಿಎ 293, ಇಂಡಿಯಾ ಒಕ್ಕೂಟ 233 ಹಾಗೂ ಇತರೆ 17 ಕ್ಷೇತ್ರಗಳಲ್ಲಿ ಗೆಲುವು ಸಿಕ್ಕಿದೆ. 2014.. 2019ರಲ್ಲಿ ಪ್ರಚಂಡ ಜಯಗಳಿಸಿದ್ದ ಕೇಸರಿ ಪಡೆ 2024ರ ಚುನಾವಣೆಯಲ್ಲಿ ನಿರೀಕ್ಷಿಸಿದಷ್ಟು ದೊಡ್ಡಮಟ್ಟದ ಗೆಲುವು ಸಿಕ್ಕಿಲ್ಲ. ಕಳೆದ 2 ಬಾರಿ ಕೊಟ್ಟಷ್ಟು ಖುಷಿಯನ್ನು…
ನಟ ಪ್ರಕಾಶ್ ರಾಜ್ ಅವರು ಮೊದಲಿನಿಂದಲೂ ನರೇಂದ್ರ ಮೋದಿ ನೇತೃತ್ವದ ಸರ್ಕಾರವನ್ನು ವಿರೋಧಿಸುತ್ತಲೇ ಬಂದಿದ್ದಾರೆ. ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಆ ಬಗ್ಗೆ ಪ್ರಕಾಶ್ ರಾಜ್ ಪ್ರತಿಕ್ರಿಯಿಸಿದ್ದಾರೆ. ಈ ಬಾರಿ ಬಿಜೆಪಿಯ ಎನ್ ಡಿಎ 400ಕ್ಕೂ ಹೆಚ್ಚು ಸೀಟ್ ಪಡೆಯುತ್ತದೆ ಎಂದು ಬಹುತೇಕರು ಹೇಳಿದ್ದರು. ಬಿಜೆಪಿ ನಾಯಕರು ಇದನ್ನು ಆಗಾಗ ಪುನರುಚ್ಚರಿಸಿದ್ದರು. ಆದರೆ ಆ ರೀತಿ ಆಗಿಲ್ಲ. ಅದೇ ವಿಚಾರವನ್ನು ಇಟ್ಟುಕೊಂಡು ಪ್ರಕಾಶ್ ರಾಜ್ ಅವರು ಈಗ ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮಾಡಿರುವ ನಟ ಪ್ರಕಾಶ್ ರಾಜ್, ವೀಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಯುವತಿಯೊಬ್ಬಳ ‘ಅಬ್ಕಿ ಬಾರ್ 400 ಪಾರ್’ ಘೋಷಣೆಯನ್ನು ಹಂಚಿಕೊಂಡು ಪ್ರಧಾನಿಯ ಕಾಲೆಳೆದಿದ್ದಾರೆ. ಪ್ರಕಾಶ್ ರಾಜ್ ಸಾಮಾಜಿಕ ಜಾಲತಾಣದಲ್ಲಿ, ‘ಚಕ್ರವರ್ತಿ ನಗ್ನನಾಗಿದ್ದಾನೆ. ಈಗ ಬೇರೊಬ್ಬರ ಬೆಂಬಲದಲ್ಲಿ ನಡೆಯಲು ಒತ್ತಾಯಿಸುತ್ತಿದ್ದಾನೆ. ಅವರ ಅಂಹಕಾರವನ್ನು ಪಂಕ್ಚರ್ ಮಾಡಿದ್ದಕ್ಕಾಗಿ ಮತ್ತು ಅವರ ಸ್ಥಾನವನ್ನು ತೋರಿಸಿದ್ದಕ್ಕಾಗಿ ಭಾರತ ಮತ್ತು ಜವಾಬ್ದಾರಿಯುತ ನಾಗರಿಕ ಸಮಾಜಕ್ಕೆ ಧನ್ಯವಾದಗಳು. ನಾವು ನಮ್ಮ ಪರವಾಗಿ ಚೆನ್ನಾಗಿ ಹೋರಾಡಿದ್ದೇವೆ. ನಾವು ಮುಂದುವರೆಯುತ್ತೇವೆ’…
ಶಿವಮೊಗ್ಗದ ಲೋಕಸಭಾ ಕ್ಷೇತ್ರದಲ್ಲಿ ಗೀತಾ ಶಿವರಾಜ್ ಕುಮಾರ್ ಅವರ ಸೋಲಿನ ಬಳಿಕ ಕುಮಾರ್ ಬಂಗಾರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಸೋಲು-ಗೆಲುವಿನ ನಡುವೆಯೇ ಬಂಗಾರಪ್ಪ ಕುಟುಂಬದ ಅಸಮಾಧಾನ ಮತ್ತೆ ಭುಗಿಲೆದ್ದಿದೆ. ಮಧು ಬಂಗಾರಪ್ಪ ಹಾಗೂ ಗೀತಾ ಶಿವರಾಜ್ ಕುಮಾರ್ ಅವರಿಗೆ ತಿರುಗೇಟು ಕೊಟ್ಟ ಕುಮಾರ್ ಬಂಗಾರಪ್ಪ, ಶಿವಣ್ಣನಿಗೂ ಟಾಂಗ್ ಕೊಟ್ಟಿದ್ದಾರೆ. ಶಿವಮೊಗ್ಗ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಅವರಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಶಾಸಕ ಕುಮಾರ ಬಂಗಾರಪ್ಪ, ಗೀತಾ ಶಿವರಾಜ್ ಕುಮಾರ್ ವಿರುದ್ಧ ಕಿಡಿಕಾರಿದ್ದಾರೆ. ಕುಮಾರ್ ಬಂಗಾರಪ್ಪ ಸೋಶಿಯಲ್ ಮೀಡಿಯಾ ಪೋಸ್ಟ್ ಸಂಚಲನ ಮೂಡಿಸಿದೆ. ಕರ್ನಾಟಕ ಕಂಡ ಧೀಮಂತ ರಾಜಕಾರಣಿ, ಬಡವರ ಬಂಧು ಎಂಬ ಸಾರ್ಥಕ ಬಿರುದಾವಳಿಯನ್ನು ತಮ್ಮ ಹೆಸರಿನೊಡನೆ ನಡೆಸಿಕೊಂಡು ಬದುಕಿದವರು ಸಾರೆಕೊಪ್ಪ ಬಂಗಾರಪ್ಪ. ಹಿಂದುಳಿದ ವರ್ಗಗಳಿಗೆ ಆಶಾಕಿರಣವಾಗಿದ್ದ. ಒಬ್ಬ ಧಿರೋದ್ದಾತ ನಾಯಕನನ್ನು ನನ್ನ ತಮ್ಮ ಹಾಗೂ ತಂಗಿ ತಮ್ಮ ಸ್ವಾರ್ಥ ಸಾಧನೆಗಾಗಿ, ಕೇವಲ ಒಂದು ಲೋಕಸಭಾ ಕ್ಷೇತ್ರಕ್ಕೆ ಅಂದರೆ ಶಿವಮೊಗ್ಗ ಕ್ಷೇತ್ರಕ್ಕೆ ಸೀಮಿತಗೊಳಿಸಿದ್ದು ಇವರ ಸಂಕುಚಿತ…
ಭಾರೀ ನಿರೀಕ್ಷೆ ಹುಟ್ಟಿಸಿದ್ದ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟ ಆಗಿದೆ. ಕರ್ನಾಟಕದಲ್ಲಿ ಕಳೆದ 20 ವರ್ಷಗಳಲ್ಲಿ ಕಾಂಗ್ರೆಸ್ ಅಭೂತಪೂರ್ವ ಸಾಧನೆ ತೋರಿದೆ. ಉತ್ತರದಲ್ಲಿ ಖರ್ಗೆ ಖದರ್ ತೋರಿದ್ದಾರೆ. ಆದ್ರೆ ಕಾಂಗ್ರೆಸ್ ಡಬಲ್ ಡಿಜಿಟ್ ನಿರೀಕ್ಷೆ ಹುಸಿಯಾಗಿದೆ. ಪ್ರಮುಖ ನಾಯಕರು ಹಾಗೂ ಅವರ ಮಕ್ಕಳಿಗೆ ಸೋಲಿನ ಆಘಾತವಾಗಿದೆ. ಅದರಲ್ಲಿ ಲೋಕಸಭಾ ಚುನಾವಣೆಯಲ್ಲಿ ಗಮನ ಸೆಳೆದ ಕ್ಷೇತ್ರದಲ್ಲಿ ಬೆಳಗಾವಿ ಒಂದು. ಇಲ್ಲಿ ಕಣಕ್ಕಿಳಿದಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಗೆಲುವಿನ ನಿರೀಕ್ಷೆಯಲ್ಲಿದ್ದರು. ಆದ್ರೆ ಬೆಳಗಾವಿಯ ಮನೆ ಮಗನಿಗೆ ಮತದಾರರು ಕೈ ಕೊಟ್ಟಿದ್ದಾರೆ. ಕ್ಷೇತ್ರಕ್ಕೆ ವಲಸಿಗರಾದ್ರೂ ಅನುಭವಿ ಜಗದೀಶ್ ಶೆಟ್ಟರ್ಗೆ ಮಣೆ ಹಾಕಿದ್ದರು. ಮಗನ ಸೋಲು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಆಘಾತ ತಂದಿದೆ. ಮತ್ತೊಂದೆಡೆ ಬಾಗಲಕೋಟೆ ಕ್ಷೇತ್ರದಲ್ಲಿ ಸತತ ಸೋಲಿನಿಂದ ಕಂಗೆಟ್ಟಿದ್ದ ಕಾಂಗ್ರೆಸ್ ಈ ಬಾರಿ ಸಚಿವ ಶಿವಾನಂದ ಪಾಟೀಲ್ ಪುತ್ರಿ ಹೊಸ ಮುಖ ಸಂಯಕ್ತಾ ಪಾಟೀಲ್ ರನ್ನು ಕಣಕ್ಕಿಳಿಸಿತ್ತು. ಬಂಡಾಯದ ಬಿಸಿ ಹಾಗೂ ಇನ್ನಿತರ ಕಾರಣಗಳಿಂದ ಸಂಯುಕ್ತ ಪಾಟೀಲ್ಗೆ ಸೋಲಾಗಿದೆ.…