Author: admin

ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿದ ಕರ್ನಾಟಕ ಅಭ್ಯರ್ಥಿಗಳು ಪಟ್ಟಿ ಕೆಳಗಿನಂತಿವೆ: ಚಾಮರಾಜನಗರ (ಕಾಂಗ್ರೆಸ್) – ಸುನಿಲ್ ಬೋಸ್ ಹಾಸನ (ಕಾಂಗ್ರೆಸ್) – ಶ್ರೇಯಸ್ ಪಟೇಲ್ ಬಳ್ಳಾರಿ (ಕಾಂಗ್ರೆಸ್) – ಇ.ತುಕಾರಾಂ ಮಂಡ್ಯ (ಜೆಡಿಎಸ್) – ಎಚ್.ಡಿ. ಕುಮಾರಸ್ವಾಮಿ ಚಿಕ್ಕಬಳ್ಳಾಪುರ (ಬಿಜೆಪಿ) – ಡಾ.ಕೆ. ಸುಧಾಕರ್ ಬೆಳಗಾವಿ (ಬಿಜೆಪಿ) – ಜಗದೀಶ್ ಶೆಟ್ಟರ್ ಉತ್ತರ ಕನ್ನಡ (ಬಿಜೆಪಿ) – ವಿಶ್ವೇಶ್ವರ ಹೆಗಡೆ ಕಾಗೇರಿ ಚಿತ್ರದುರ್ಗ (ಬಿಜೆಪಿ) – ಗೋವಿಂದ ಕಾರಜೋಳ ತುಮಕೂರು (ಬಿಜೆಪಿ) – ವಿ.ಸೋಮಣ್ಣ ಕೋಲಾರ (ಜೆಡಿಎಸ್) – ಮಲ್ಲೇಶ್ ಬಾಬು ಬೆಂಗಳೂರು ಗ್ರಾ. (ಬಿಜೆಪಿ) – ಡಾ.ಸಿ.ಎನ್.ಮಂಜುನಾಥ್ ಹಾವೇರಿ (ಬಿಜೆಪಿ) – ಬಸವರಾಜ್ ಬೊಮ್ಮಾಯಿ ಬೀದರ್ (ಕಾಂಗ್ರೆಸ್) – ಸಾಗರ್ ಖಂಡ್ರೆ ಬೆಂಗಳೂರು ದಕ್ಷಿಣ (ಬಿಜೆಪಿ) – ತೇಜಸ್ವಿ ಸೂರ್ಯ ಚಿಕ್ಕೋಡಿ (ಕಾಂಗ್ರೆಸ್) – ಪ್ರಿಯಾಂಕಾ ಜಾರಕಿಹೊಳೆ ಮೈಸೂರು-ಕೊಡಗು (ಬಿಜೆಪಿ) – ಯದುವೀರ್ ಒಡೆಯರ್ ಉಡುಪಿ -ಚಿಕ್ಕಮಗಳೂರು (ಬಿಜೆಪಿ) – ಕೋಟಾ ಶ್ರೀನಿವಾಸಪೂಜಾರಿ ಬೆಂಗಳೂರು ಕೇಂದ್ರ (ಬಿಜೆಪಿ) – ಮೋಹನ್ ಬಾಗಲಕೋಟೆ…

Read More

ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಗೆಲುವಿನ ಹಿನ್ನೆಲೆಯಲ್ಲಿ ಕೊರಟಗೆರೆ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ ನಡೆಯಿತು. ಬಿಜೆಪಿ ಮುಖಂಡ ಬಿ.ಹೆಚ್. ಅನಿಲ್ ಕುಮಾರ್ ಹಾಗೂ ಜೆಡಿಎಸ್ ಮುಖಂಡ ನರಸಿಂಹರಾಜು ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಯಿತು. ಕೊರಟಗೆರೆ ಪಟ್ಟಣದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಿಂದ ಪಾಂಚಜನ್ಯ ಕಛೇರಿಯವರೆಗೂ ಮುಖ್ಯ ರಸ್ತೆಯಲ್ಲಿ ಬೈಕ್ ರ್ಯಾಲಿ ನಡೆಸುವ ಮೂಲಕ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ನಂತರ ಪಾಂಚಜನ್ಯ ಕಛೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಬಿಜೆಪಿ ಮುಖಂಡ ಅನಿಲ್ ಕುಮಾರ್ ಹಾಗೂ ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ನರಸಿಂಹರಾಜು, “ಈ ಬಾರಿ ನಾವು ಕೊರಟಗೆರೆ ಕ್ಷೇತ್ರದಿಂದ ಸುಮಾರು 25 ಸಾವಿರ ಅಂತರ ನೀಡಿದ್ದೇವೆ. ಇದೇ ರೀತಿ ನಾವು ಮುಂದಿನ ದಿನಗಳಲ್ಲಿ ಕೆಲಸ ಮಾಡಿದರೆ ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಧೂಳಿಪಟ ಮಾಡುತ್ತೇವೆ. ಆದ್ದರಿಂದ ಇದೇ ರೀತಿ, ಎರಡೂ ಪಕ್ಷಗಳು ಪವಿತ್ರ ಮೈತ್ರಿ ಮಾಡಿಕೊಳ್ಳುವ ಮೂಲಕ ಸ್ಥಳೀಯ ಚುನಾವಣೆ ಯಲ್ಲಿ ಜಯಭೇರಿ ಬಾರಿಸುತ್ತೇವೆ. ಜಿಲ್ಲೆಯಲ್ಲಿ…

Read More

ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಮತ ಎಣಿಕೆ ಕೇಂದ್ರದ ಬಳಿ ದುಷ್ಕರ್ಮಿಗಳಿಂದ ವಾಮಾಚಾರ ನಡೆದಿದೆ. ಮರದ ಪೊದೆಯಲ್ಲಿ ಎರಡು ಮೊಟ್ಟೆಗಳನ್ನು ಇಟ್ಟು ವಾಮಾಚಾರ ಮಾಡಿದ್ದಾರೆ ಎನ್ನಲಾಗಿದೆ. ಚುನಾವಣೆಯ ಫಲಿತಾಂಶದಲ್ಲಿ ಗೆಲವು ಸಾಧಿಸಲು ಯಾರಾದರೂ ಹೀಗೆ ಮಾಡಿದ್ದರಾ ಎಂಬ ಅನುಮಾನ ಮೂಡಿದೆ. ಮೊಟ್ಟೆಯನ್ನು ತಂದಿಟ್ಟವರು ಯಾರು? ನಿಜಕ್ಕೂ ಅಲ್ಲಿ ವಾಮಾಚಾರ ನಡೆದಿದ್ಯಾ ಅಥವಾ ಮರದಡಿ ಕುಳಿತಾಗ ಮರೆತು ಬಿಟ್ಟು ಹೋಗಿದ್ದರಾ ಎಂಬುದು ತಿಳಿದು ಬಂದಿಲ್ಲ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಪ್ರಲ್ಹಾದ್ ಜೋಶಿ ಗೆಲುವು ಸಾಧಿಸಿದ್ದಾರೆ. ಐದನೆಯ ಬಾರಿಯೂ ಮತದಾರರು ಪ್ರಲ್ಹಾದ್ ಜೋಶಿ ಅವರನ್ನು ಗೆಲ್ಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್ ಜೋಶಿ 6,82,400 ಮತ ಗಳಿಸಿದರೆ, ಕಾಂಗ್ರೆಸ್‌ ಅಭ್ಯರ್ಥಿ ವಿನೋದ್ ಅಸೂಟಿ 5,87,397 ಮತ ಪಡೆದು, 95,003 ಮತಗಳ ಅಂತರದಲ್ಲಿ ಸೋಲು ಅನುಭವಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ನವದೆಹಲಿ: ದೇಶದಲ್ಲಿ ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಆಭರಣ ಪ್ರಿಯರಿಗೆ ಬಿಗ್‌ ಶಾಕ್‌ ಎದುರಾಗಿದೆ. ಇಂದಿನ ವಹಿವಾಟು ಆರಂಭದಲ್ಲೇ ಚಿನ್ನದ ಬೆಲೆಯಲ್ಲಿ 500 ರೂಪಾಯಿ ಏರಿಕೆಯಾಗಿದ್ದು, 10 ಗ್ರಾಂಗೆ 72,200 ರೂ.ಗೆ ತಲುಪಿತ್ತು. ಬೆಳ್ಳಿ ಬೆಲೆ 100 ರೂ.ಹೆಚ್ಚಳವಾಗಿದೆ. ಈ ಮೂಲಕ ಕೆಜಿಗೆ 92,000 ರೂ. ತಲುಪಿದೆ. ಎಂಸಿಎಕ್ಸ್‌ ನಲ್ಲಿ ಚಿನ್ನ 10 ಗ್ರಾಂಗೆ 549 ರೂ.ಗಳಷ್ಟು ಏರಿಕೆಯಾಗಿ 72,279 ರೂ.ಗಳಿಗೆ ತಲುಪಿತು. ಬೆಳ್ಳಿ 121 ರೂ. ಏರಿಕೆಯಾಗಿದ್ದು, ಪ್ರತಿ ಕೆಜಿಗೆ 92,154 ರೂ. ಆಗಿತ್ತು. ಸದ್ಯ ದೆಹಲಿಯಲ್ಲಿ 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 72,550 ರೂ.ಗೆ ತಲುಪಿದ್ದರೆ, 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 66,240 ರೂ.ಗೆ ಆಗಿದೆ. ಮುಂಬೈನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 72,100 ರೂ. ಹಾಗೂ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 66090 ರೂ. ಗೆ ತಲುಪಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ತಿರುವನಂತಪುರಂ: ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದಂತೆ ಕೇರಳದಲ್ಲಿ ಕಮಲ ಅರಳುವ ಸೂಚನೆಗಳು ಬಂದಿವೆ. ತ್ರಿಶ್ಶೂರ್ ಮತ್ತು ತಿರುವನಂತಪುರಂ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಸಿನಿಮಾ ನಟರೂ ಆಗಿರುವ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ, ತ್ರಿಶ್ಶೂರಿನಲ್ಲಿ ಪ್ರಚಾರ ನಡೆಸುವಾಗ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ, ಈ ತ್ರಿಶ್ಶೂರ್ ಞಾನ್ ಇಂಙ್ ಎಡುಕ್ಕುವಾ, ಈ ತ್ರಿಶ್ಶೂರ್ ಎನಿಕ್ ತರಣಂ (ನಾನು ಈ ತ್ರಿಶ್ಶೂರ್ ನ್ನು ತೆಗೆದುಕೊಳ್ಳುತ್ತೇನೆ, ನೀವು ನನಗೆ ಈ ತ್ರಿಶ್ಶೂರ್ ಕೊಡಬೇಕು) ಎಂದು ಸಿನಿಮಾ ಸ್ಟೈಲ್ ನಲ್ಲಿ ಈ ಡೈಲಾಗ್ ಹೇಳಿದ್ದರು. ಈ ಸುದ್ದಿ ಪ್ರಕಟವಾಗುವ ಹೊತ್ತಿಗೆ ಸುರೇಶ್ ಗೋಪಿ 69183 ಮತಗಳ ಮುನ್ನಡೆ ಸಾಧಿಸಿದ್ದಾರೆ. ತ್ರಿಶ್ಶೂರ್ ಗೆ ಕೇಂದ್ರ ಸಚಿವ ಸ್ಥಾನ, ಮೋದಿ ಗ್ಯಾರಂಟಿ ಎಂಬ ಘೋಷಣೆಯೊಂದಿಗೆ 65 ವರ್ಷದ ನಟ ತ್ರಿಶೂರ್ನಲ್ಲಿ ಮತಯಾಚನೆ ಮಾಡಿದ್ದರು. 2016 ರ ಅಕ್ಟೋಬರ್ ನಲ್ಲಿ ಸುರೇಶ್ ಗೋಪಿ ಬಿಜೆಪಿ ಸೇರಿದ್ದರು. ಅಂದಿನಿಂದ ಗೋಪಿ ಕೇರಳದ ಬಿಜೆಪಿಯ ಸ್ಟಾರ್ ಪ್ರಚಾರಕರಲ್ಲಿ ಒಬ್ಬರಾಗಿದ್ದರು. ನಮ್ಮತುಮಕೂರಿನ…

Read More

ವಿಧಾನಸಭೆ ಬಳಿಕ, ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಟಿಕೆಟ್ ವಂಚಿತರಾಗಿ, ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದ ಕಾರಣಕ್ಕೆ ಪಕ್ಷದಿಂದ ಉಚ್ಚಾಟನೆಗೊಂಡಿರುವ ಬಿಜೆಪಿ ಹಿರಿಯ ನಾಯಕರ ರಘುಪತಿ ಭಟ್ ಪರವಾಗಿ ಮೈಸೂರು- ಕೊಡುಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಸಾಮಾಜಿಕ ಜಾಲತಾಣದಲ್ಲಿ ಬ್ಯಾಟ್ ಬೀಸಿದ್ದಾರೆ. ಹಿಜಾಬ್ ವಿಚಾರವಾಗಿ ಉಂಟಾಗಿದ್ದ ವಿವಾದವನ್ನು ಪ್ರಸ್ತಾಪಿಸಿದ್ದ ಉಡುಪಿಯ ವಿದ್ಯಾರ್ಥಿನಿ ಅಲಿಯಾ ಅಸ್ಸಾದಿ, ಉಚ್ಚಾಟನೆಗೊಂಡಿರುವ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಟೀಕಿಸಿರುವ ಸಂಗತಿ, ಹಿಂದುತ್ವವಾದಿಗಳಿಗೆ ಬಂದಿರುವ ದುರದೃಷ್ಟಕರ ಪರಿಸ್ಥಿತಿ ಎಂದು ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ. ಬಿಜೆಪಿಯ ಮೂಲ ಕಾರ್ಯಸೂಚಿಯಾದ ಹಿಂದುತ್ವದ ಪರ ಹೋರಾಡಿದವರ ಪರವಾಗಿ ಪಕ್ಷ ನಿಲ್ಲುವುದಿಲ್ಲ ಎಂಬ ಕಾರ್ಯಕರ್ತರ ಆರೋಪಗಳನ್ನು ಪ್ರತಾಪ್ ಸಿಂಹ ಒತ್ತಿ ಹೇಳಿದ್ದಾರೆ ಎನ್ನಲಾಗಿದೆ. ಅದೇ ವೇಳೆ ರಘುಪತಿ ಭಟ್ ಗೆ ಎಂಎಲ್‌ಎ ಹಾಗೂ ಎಂಎಲ್‌ ಸಿ ಟಿಕೆಟ್ ಕೂಡ ಸಿಗದೆ ಇರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. “ಉಡುಪಿಯ ಶಿಕ್ಷಣ ಸಂಸ್ಥೆಯೊಂದರಲ್ಲಿ ಸಮವಸ್ತ್ರ ಸಂಹಿತೆಯನ್ನು ಮುರಿದು ಬುರ್ಖಾ ಧರಿಸಿ ಕ್ಲಾಸಿಗೆ ಬಂದ ಜಿಹಾದಿ ಮನಸ್ಥಿತಿಯ…

Read More

ತುಮಕೂರು: ಎರಡು ಕಡೆ ವಿಧಾನಸಭೆ ಚುನಾವಣೆಯಲ್ಲಿ ಸೋತ ನನಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಿಕೊಟ್ಟ ರಾಷ್ಟ್ರದ ನಾಯಕರು ಹಾಗೂ ಪಕ್ಷದ ಮುಖಂಡರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ನೂತನ ಸಂಸದ ವಿ. ಸೋಮಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಶಿವಕುಮಾರ ಸ್ವಾಮೀಜಿಯವರು ಹಾಗೂ ಆದಿಚುಂಚನಗಿರಿಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಆಶೀರ್ವಾದದಿಂದ, ಪುನಃ ನನ್ನನ್ನು ರಾಜಕೀಯವಾಗಿ ಗೆಲುವು ಸಾಧಿಸಲು ಹಾಗೂ ಜನರ ಕೆಲಸ ಮಾಡಲು ಅವಕಾಶ ಸಿಕ್ಕಿದೆ ಎಂದರು. ದೇಶದ ವ್ಯವಸ್ಥೆಯಲ್ಲಿ ಮೋದಿಯವರ ಜನ ಪರ ಕಾರ್ಯಕ್ರಮಗಳು ಹಾಗೂ ಈ ಹಿಂದಿನ ಸಂಸದ ಬಸವರಾಜ್ ಅವರ ಮಾರ್ಗದರ್ಶನದಲ್ಲಿ ಗೆಲುವು ಲಭಿಸಿದೆ ಎಂದರು. ರಾಜ್ಯದ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಎರಡು ಪಕ್ಷದ ಮುಖಂಡರಿಗೆ ಧನ್ಯವಾದ ತಿಳಿಸುತ್ತೇನೆ. ಹೊರಗಿನವರು ಎಂದು ನನಗೆ ಚುನಾವಣೆ ಸಂದರ್ಭದಲ್ಲಿ ಹೇಳಿದ್ದು ಒಳ್ಳೆಯದೇ ಆಯಿತು ಎಂದರು. ಈ ರೀತಿ ಹೇಳಿದವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಮತದಾರರು ಅಂತಿಮವಾಗಿ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದರು. ಇಂಡಿಯಾ ಒಕ್ಕೂಟವು ನಡೆಸಿದ ಅಪಪ್ರಚಾರ…

Read More

ಶಿವಮೊಗ್ಗ: ಬೆಳಗ್ಗೆ ಮಟನ್ ಶಾಪ್‌ ಗೆ ಹೋಗಿದ್ದ ಗ್ರಾಹಕ ತಾನು ಖರೀದಿ ಮಾಡಿದ ಮಟನ್‌ ಗೆ ಒಂದೆರಡು ಪೀಸ್ ಹೆಚ್ಚಾಗಿ ಹಾಕುವಂತೆ ಗಲಾಟೆ ಮಾಡಿದ್ದಾನೆ. ಈ ವೇಳೆ ಜಗಳ ನಡೆದು ಅಂಗಡಿಯಲ್ಲಿದ್ದ ಅಪ್ರಾಪ್ತ ಬಾಲಕ ಗ್ರಾಹಕನ ತಲೆಗೆ ಕತ್ತಿಯಿಂದ ಹೊಡೆದಿರುವ ಘಟನೆ ಶಿವಮೊಗ್ಗದ ಟಿಪ್ಪು ನಗರದ ಮಟನ್ ಸ್ಟಾಲ್ ನಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ. ಮಟನ್ ಅಂಗಡಿಯ ಬಳಿ ಕುಡಿದು ಗಲಾಟೆ ಮಾಡಿದ ಹಿನ್ನೆಲೆ ನಡೆದ ಹಲ್ಲೆ ಮಾಡಿದ್ದಾನೆಂದು ಆರೋಪಿಸಲಾಗಿದೆ. ಶಿವಮೊಗ್ಗದ ಗಾಡಿ ಕೊಪ್ಪದ ತಾಂಡ ನಿವಾಸಿ ಮಲ್ಲೇಶ್(45) ಹಲ್ಲೆಗೊಳಗಾದ ವ್ಯಕ್ತಿ ಎನ್ನಲಾಗಿದ್ದು, ಕುಡಿದ ಮತ್ತಿನಲ್ಲಿ ಮಲ್ಲೇಶ್ ಮಟನ್ ಅಂಗಡಿಗೆ ಹೋಗಿದ್ದನು. ಅಂಗಡಿಯಲ್ಲಿದ್ದ 16 ವರ್ಷದ ಅಪ್ರಾಪ್ತ ಬಾಲಕನಿಗೆ ಮಟನ್ ಪಡೆದ ಮೇಲೆ ಇನ್ನೂ ಹೆಚ್ಚು ಹಾಕುವಂತೆ ಗಲಾಟೆ ಮಾಡಿದ್ದನು. ಈ ವೇಳೆ ಗಲಾಟೆ ತಾರಕಕ್ಕೇರಿದ್ದು, ಕೈ ಕೈ ಮಿಲಾಯಿಸಿ ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಕೈಯಲ್ಲಿದ್ದ ಮಟನ್ ಕತ್ತರಿಸುವ ಕತ್ತಿಯಿಂದ ಯುವಕ ಗ್ರಾಹಕನ ತಲೆಗೆ ಹೊಡೆದಿದ್ದಾನೆ. ಹೊಡೆದ ಪರಿಣಾಮ ತಲೆಯಿಂದ…

Read More

ಏರ್ ಶೋ ಸಂದರ್ಭ ಎರಡು ಯುದ್ದ ವಿಮಾನಗಳು ಪರಸ್ಪರ ಡಿಕ್ಕಿ ಹೊಡೆದು ನೆಲಕ್ಕಪ್ಪಳಿಸಿದ ಪರಿಣಾಮ, ಓರ್ವ ಪೈಲಟ್ ಸಾವನ್ನಪ್ಪಿ ಮತ್ತೋರ್ವ ತೀವ್ರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಫೋರ್ಚುಗಲ್ ನಲ್ಲಿ ನಡೆದಿದೆ. ಈ ಕುರಿತು ಭಯಾನಕ ವೀಡಿಯೋ ವೈರಲ್ ಆಗಿದ್ದು, ಅದರಲ್ಲಿ ಬೆಜಾ ಏರ್ ಶೋ ಸಂದರ್ಭದಲ್ಲಿ ಆರು ವಿಮಾನಗಳು ಹಾರಾಟ ನಡೆಸುತ್ತಿದ್ದು, ಈ ವೇಳೆ ನಿಯಂತ್ರಣ ಕಳೆದುಕೊಂಡ ಒಂದು ವಿಮಾನ ಅಡ್ಡಾದಿಡ್ಡಿ ಹಾರಲಾರಂಭಿಸಿದೆ. ನಂತರ ಹಾರಾಟದಲ್ಲಿದ್ದ ಮತ್ತೊಂದು ವಿಮಾನಕ್ಕೆ ನೇರವಾಗಿ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಎರಡು ವಿಮಾನಗಳು ನೆಲಕ್ಕೆ ಉರುಳಿವೆ. ಈ ಘಟನೆ ನಡೆದ ಬಳಿಕ ಏರ್ ಶೋ ಅನ್ನು ಸ್ಥಗಿತಗೊಳಿಸಲಾಗಿದೆ. ಈ ಭೀಕರವಾದ ಅಪಘಾತದಿಂದಾಗಿ ಒಂದು ವಿಮಾನದ ಪೈಲೆಟ್ ಸಾವನ್ನಪ್ಪಿದ್ದು ಗಂಭೀರವಾಗಿ ಗಾಯಗೊಂಡಿರುವ ಮತ್ತೋರ್ವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ರಸ್ತೆ ಮಧ್ಯೆ ಅಪಾಯಕಾರಿಯಾದ ದೈತ್ಯ ಹಾವು ನೋಡಿದ್ರೆ ಯಾರಿಗೇ ಆದ್ರೂ ಒಂದು ಸಾರಿ ಭಯ ಆದೀತು. ಅಂತೆಯೇ ಟ್ರಾಫಿಕ್ ಮಧ್ಯೆ ಏಕಾಏಕಿ ಕಾಣಿಸಿಕೊಂಡ ದೈತ್ಯ ಹಾವಿನ ವೀಡಿಯೋ ಒಂದು ವೈರಲ್ ಆಗಿದೆ. ಹೌದು, @Rainmaker1973 ಎಂಬ ಟ್ವಿಟರ್​ ಖಾತೆಯಲ್ಲಿ ಈ ಬೃಹತ್​​ ಗಾತ್ರದ ಹಾವಿನ ವೀಡಿಯೋ ವೈರಲ್ (Anaconda Video Viral) ಆಗಿದ್ದು, ಬ್ರೆಜಿಲ್ ನ ಪೋರ್ಟೊ ವೆಲ್ಹೋ ನಗರದ ಬಳಿ ಕಂಡು ಬಂದಿರುವ ಈ ಹಾವು ಸರಿ ಸುಮಾರು ನಾಲ್ಕು ಮೀಟರ್ ಉದ್ದ ಮತ್ತು 30 ಕೆಜಿ ತೂಕವಿರಬಹುದು ಎಂದು ಅಂದಾಜಿಸಲಾಗಿದೆ. ಜೂನ್​​ 2ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಒಂದೇ ದಿನದಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ವೈರಲ್​​ ವಿಡಿಯೋದಲ್ಲಿ ಹಾವು ತನ್ನಷ್ಟಕ್ಕೆ ತೆವಳುತ್ತಾ ಯಾರಿಗೂ ತೊಂದರೆ ಮಾಡದೇ ರಸ್ತೆ ದಾಟಿ ಕಾಡಿನೊಳಗೆ ಹೋಗಿರುವುದು ಕಾಣಬಹುದು. ಈ ದೈತ್ಯ ಹಾವು ಪ್ರತ್ಯಕ್ಷವಾಗುತ್ತಿದ್ದಂತೆ ಸಾಕಷ್ಟು ಜನರು ಸೇರಿದ್ದು, ಹಾವಿಗೆ ಯಾವುದೇ ತೊಂದರೆ ಮಾಡದೇ ತಮ್ಮ ಮೊಬೈಲ್​ ಮೂಲಕ ಈ…

Read More