Author: admin

ತುಮಕೂರು: ಶಿರಾ ತಾಲ್ಲೂಕು ಆಡಳಿತ ಸೌಧದಲ್ಲಿ ಶಾಸಕ ಹಾಗೂ ನವದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ನೇತೃತ್ವದಲ್ಲಿ ಸೋಮವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ೩೮೧ ಅಹವಾಲು ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಈವರೆಗೂ ಜಿಲ್ಲೆಯ ಪಾವಗಡ, ಗುಬ್ಬಿ, ಕೊರಟಗೆರೆ, ಕುಣಿಗಲ್ ತಾಲೂಕುಗಳಿಗಿಂತ ಈ ಜನಸ್ಪಂದನ ಕಾರ್ಯಕ್ರಮದಲ್ಲಿ ಹೆಚ್ಚಿನ ಅಹವಾಲುಗಳು ಸ್ವೀಕೃತವಾಗಿವೆ. ೩೮೧ ಅರ್ಜಿ ಸ್ವೀಕಾರ: ಈ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ೩೦೭, ನಗರಸಭೆ ೧೫, ಕೃಷಿ ಇಲಾಖೆ ೧೦, ಶಿಕ್ಷಣ ಇಲಾಖೆ ೨, ಸಮಾಜ ಕಲ್ಯಾಣ ಇಲಾಖೆ ೧, ಅರಣ್ಯ ಇಲಾಖೆ ೧, ಸಣ್ಣ ನೀರಾವರಿ ೨, ಭೂ ದಾಖಲೆಗಳ ಇಲಾಖೆ ೯, ಆರೋಗ್ಯ ೧, ಕೆಎಸ್ ಆರ್ ಟಿಸಿ ೫, ತಾಲ್ಲೂಕು ಪಂಚಾಯತಿ ೨೨, ಆಹಾರ ೪, ಇತರೆ ೨ ಸೇರಿದಂತೆ ಒಟ್ಟು ೩೮೧ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ವಯೋವೃದ್ಧರಿಗೂ ಸ್ಪಂದಿಸದ ಅಧಿಕಾರಿಗಳು: ಸರ್ಕಾರಿ ಸೌಲಭ್ಯಗಳನ್ನು ದೊರಕಿಸಿಕೊಡಲು ವಯೋವೃದ್ಧರ ಮನವಿಗಳಿಗೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲವೆಂದು ಶಿರಾ ತಾಲ್ಲೂಕಿನ ಜನತೆ ಜನಸ್ಪಂದನ…

Read More

18ನೇ ಲೋಕಸಭೆಯ ಮೊದಲ ಅಧಿವೇಶನ ನಡೆಯುತ್ತಿದೆ. ಅಧಿವೇಶನದ ಮೊದಲ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಸಂಸದರು ಪ್ರಮಾಣ ವಚನ ಸ್ವೀಕರಿಸಿದ್ದರು. ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕರಿಸಲೆಂದು ತಮ್ಮ ಸೀಟಿನಿಂದ ಮೇಲೇಳುತ್ತಿದ್ದಂತೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸಂವಿಧಾನ ಪುಸ್ತಕ ಕೈಯಲ್ಲಿ ಹಿಡಿದು ಸಂವಿಧಾನ ಸುದೀರ್ಘವಾಗಿ ಬಾಳಲಿ ಎಂದು ಘೋಷಣೆ ಕೂಗಿರುವ ಘಟನೆ ನಡೆಯಿತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರಕ್ಕಾಗಿ ತಮ್ಮ ಸೀಟಿನಿಂದ ಎದ್ದೇಳುತ್ತಿದ್ದಂತೆ ಸಂವಿಧಾನ ಪುಸ್ತಕ ಹಿಡಿದು ಎದ್ದು ನಿಂತ ರಾಹುಲ್ ಗಾಂಧಿ, ನಾವು ಸಂವಿಧಾನವನ್ನು ರಕ್ಷಿಸುತ್ತೇವೆ. ಯಾವುದೇ ಕಾರಣಕ್ಕೂ ಸಂವಿಧಾನಕ್ಕೆ ಅಪಮಾನವಾಗುವುದಕ್ಕೆ ಇಂಡಿಯಾ ಒಕ್ಕೂಟ ಬಿಡುವುದಿಲ್ಲ ಎಂದು ಕೂಗಿ ಕೂಗಿ ಹೇಳಿದರು. ಸಂವಿಧಾನ ಪುಸ್ತಕ ತೋರಿಸುತ್ತಾ ಮಾತನ್ನು ಆರಂಭಿಸಿದ್ದ ರಾಹುಲ್, ನರೇಂದ್ರ ಮೋದಿ ಮತ್ತು ಅಮಿತ್ ಶಾ ಸಂವಿಧಾನದ ಮೇಲೆ ದಾಳಿ ನಡೆಸುತ್ತಿದ್ದು, ಇದು ಎಂದಿಗೂ ಸ್ವೀಕಾರಾರ್ಹವಲ್ಲ ಎಂದು ಕಿಡಿಕಾರಿದರು. ಆದರೆ…

Read More

ಉತ್ತರ ಕನ್ನಡದ ಅನಂತಕುಮಾರ್ ಅವರು ಬಿಜೆಪಿ ಫೈರ್ ಬ್ರಾಂಡ್ ಆಗಿದ್ದು ಮೂರು ಬಾರಿ ಸಂಸದರಾಗಿದ್ದರು. ಈ ಬಾರಿ ಅವರಿಗೆ ಟಿಕೆಟ್ ಸಿಕ್ಕಿರಲಿಲ್ಲ! ಇದೀಗ ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಇಂದು ಮುಂಜಾನೆ ಈ ಘಟನೆ ನಡೆದಿದೆ! ಮನೆಯ ಮೇಲ್ಭಾಗದ ಜಿಮ್ ಮಾಡುವ ಕೊಠಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದೆ. ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ಮೌಲ್ಯದ ಜಿಮ್ ವಸ್ತುಗಳು ನಾಶವಾಗಿವೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಶಿರಸಿಯ KHB ಕಾಲೋನಿಯಲ್ಲಿ ಇರುವ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ಸಂಭವಿಸಿದೆ. ಮಾಜಿ ಸಂಸದರು ಮತ್ತು ಕುಟುಂಬದವರು ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ಘಟನೆ ನಡೆದಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಬಂದು ಬೆಂಕಿ ಆರಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಆಗಿರಬಹುದೆಂದು ಶಂಕಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ನಿಮಗೂ ಸ್ನ್ಯಾಕ್ಸ್ ‘ನೊಂದಿಗೆ ಮೇಯನೇಸ್ ತಿನ್ನುವ ಅಭ್ಯಾಸವಿದ್ದರೆ ಈ ಸುದ್ದಿ ತಪ್ಪದೇ ಓದಿ. ಮೇಯನೇಸ್ ತಿನ್ನುವುದರಿಂದ ಆರೋಗ್ಯಕ್ಕೆ ಎಷ್ಟು ಹಾನಿಯಾಗುತ್ತದೆ ಎಂದು ನಿಮಗೆ ತಿಳಿದಿದೆಯೇ.? ಕೆಲವು ವರದಿಗಳ ಪ್ರಕಾರ, ಒಂದು ಟೀಸ್ಪೂನ್ ಮೇಯನೇಸ್ ಸುಮಾರು 1.6 ಗ್ರಾಂ ಸ್ಯಾಚುರೇಟೆಡ್ ಕೊಬ್ಬನ್ನ ಹೊಂದಿರುತ್ತದೆ, ಇದು ರಕ್ತದೊತ್ತಡ ಮತ್ತು ಹೃದ್ರೋಗಕ್ಕೆ ಕಾರಣವಾಗಬಹುದು. ಇದಲ್ಲದೆ, ಇದು ದೇಹದಲ್ಲಿ ಕೊಬ್ಬನ್ನ ಹೆಚ್ಚಿಸುತ್ತದೆ. ಆದ್ದರಿಂದ ನೀವು ಈಗಾಗಲೇ ಹೃದ್ರೋಗದ ಅಪಾಯ ಹೆಚ್ಚುತ್ತದೆ. ಅತಿಯಾಗಿ ಮೇಯನೇಸ್ ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗುತ್ತದೆ. ಇದು ಮಧುಮೇಹದ ಅಪಾಯವನ್ನ ಹೆಚ್ಚಿಸುತ್ತದೆ. ದೇಹದಲ್ಲಿ ರಕ್ತದಲ್ಲಿನ ಸಕ್ಕರೆ ಸಮಸ್ಯೆಗಳನ್ನು ಹೊಂದಿರುವುದು ಅನೇಕ ಸಮಸ್ಯೆಗಳನ್ನ ಉಂಟು ಮಾಡಬಹುದು. ನಿಮಗೆ ಮಧುಮೇಹದ ಸಮಸ್ಯೆ ಇದ್ದರೆ ಮೇಯನೇಸ್ ತಿನ್ನಬೇಡಿ. ಮೇಯನೇಸ್’ನಲ್ಲಿ ಕೊಬ್ಬು ತುಂಬಾ ಹೆಚ್ಚಾಗಿದೆ. ಈ ಕಾರಣದಿಂದಾಗಿ ತೂಕವು ವೇಗವಾಗಿ ಹೆಚ್ಚಾಗಲು ಪ್ರಾರಂಭಿಸುತ್ತದೆ. ಹೆಚ್ಚು ಮೇಯನೇಸ್ ತಿನ್ನುವುದು ರುಮಟಾಯ್ಡ್ ಸಂಧಿವಾತದ ಅಪಾಯವನ್ನ ಹೆಚ್ಚಿಸುತ್ತದೆ. ಏಕೆಂದರೆ ಮೇಯನೇಸ್ ಸಾಕಷ್ಟು ಒಮೆಗಾ -6 ಕೊಬ್ಬಿನಾಮ್ಲಗಳನ್ನ ಹೊಂದಿರುತ್ತದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಕೆಲವೊಮ್ಮೆ ಸತ್ತಂತಹ ವ್ಯಕ್ತಿಗಳು ಮತ್ತೆ ಜೀವಂತವಾಗಿರುವ ಘಟನೆಗಳನ್ನು ನಾವು ಟಿವಿಯಲ್ಲಿ ನೋಡಿರುತ್ತೇವೆ. ಇದೀಗ ಅಂತಹದ್ದೇ ಒಂದು ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ನಾಲ್ಕು ದಿನಗಳ ಹಿಂದೆ ಪತ್ನಿಯ ಅಂತ್ಯಸಂಸ್ಕಾರ ಮುಗಿಸಿ ದುಃಖದಲ್ಲಿದ್ದ ಪತಿಗೆ ಬಿಗ್ ಶಾಕ್ ಕಾದಿತ್ತು. ಸತ್ತ ಪತ್ನಿ 600 ಕಿ.ಮೀ ದೂರದಲ್ಲಿ ಜೀವಂತವಾಗಿ ಪತ್ತೆಯಾಗಿರುವ ಘಟನೆ ಝಾನ್ಸಿಯಲ್ಲಿ ನಡೆದಿದೆ. ಗೋರಖ್‌ಪುರದ ಬನ್ಸಾಗಾವ್ ಎಂಬ ಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ರಾಮ್ ಸುಮೆರ್ (60) ಎಂಬ ವ್ಯಕ್ತಿ ಜೂ.15 ತನ್ನ ಪತ್ನಿ ಪೂಲ್‌ಮತಿ ಕಾಣೆಯಾಗಿದ್ದಾಳೆ ಎಂದು ಪೊಲೀಸ್ ದೂರು ನೀಡಿದ್ದ. ಇದಾದ ನಾಲ್ಕು ದಿನಕ್ಕೆ ಉರುವಾ ಬಜಾರ್ ಪ್ರದೇಶದಲ್ಲಿ ಮಹಿಳೆಯ ಮೃತದೇಹವೊಂದು ಪತ್ತೆಯಾಗಿತ್ತು. ಅದನ್ನು ನೋಡಿದ ಸುಮೇರ್ ತನ್ನ ಪತ್ನಿಯ ಮೃತದೇಹ ಎಂದು ಗುರುತಿಸಿದ್ದ. ಬಳಿಕ ಮೃತದೇಹದ ಅಂತ್ಯ ಸಂಸ್ಕಾರ ನೆರವೇರಿಸಿದ್ದ. ಆ ಮಹಿಳೆಯನ್ನು ಕತ್ತು ಹಿಸುಕಿ ಸಾಯಿಸಲಾಗಿತ್ತು. ಇನ್ನು ಈ ಕೊಲೆ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು ಪೂಲ್‌ಮತಿಯ ಮೊಬೈಲ್ ಫೋನ್ ನಂಬರ್ ಪರಿಶೀಲನೆ ನಡೆಸಿದ್ದರು. ಪೂಲ್‌ಮತಿಯ ಮೊಬೈಲ್ 600…

Read More

ಪುತ್ತೂರು: ಮೊದಲ ಸೀಸನ್’ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ “ಬ್ರೈಟ್ ಭಾರತ್” ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್’ಗಳನ್ನು ಬಹುಮಾನವಾಗಿ ನೀಡುವ ಮತ್ತೊಂದು ಹೊಸ ಯೋಜನೆಯನ್ನು ಬಿಡುಗಡೆಗೊಳಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!? ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್ ನಂಬರ್, ಇಷ್ಟು ಮಾಹಿತಿಯನ್ನು 8861623074 ಈ ನಂಬರ್‌ಗೆ ವಾಟ್ಸಪ್ ಮಾಡಬಹುದು ಅಥವಾ ಕರೆಮಾಡಿ ಮಾಹಿತಿ ಪಡೆದುಕೊಳ್ಳಬಹುದು. ಬ್ರೈಟ್ ಭಾರತ್ ಯೋಜನೆಯ ಬಗ್ಗೆ ಮಾಹಿತಿ: ವಿಶೇಷವಾಗಿ ಇದೊಂದು ಉಳಿತಾಯ ಯೋಜನೆಯಾಗಿದ್ದು, ಪ್ರತಿ ತಿಂಗಳ ತಮ್ಮ ಉಳಿತಾಯದ ಸಾವಿರ ರೂಪಾಯಿಯನ್ನು ಇಪ್ಪತ್ತು ತಿಂಗಳು…

Read More

ತುಮಕೂರು: ಹೇಮಾವತಿ ಲಿಂಕ್ ಕೇನಾಲ್ ಕಾಮಗಾರಿ ವಿರೋಧಿಸಿ ಇಂದು ನಡೆದ ತುಮಕೂರು ಬಂದು ಬಹುತೇಕ ಯಶಸ್ವಿಯಾಗಿದೆ. ಬೆಳಗ್ಗೆಯಿಂದಲೂ ತುಮಕೂರು ನಗರದಲ್ಲಿ ವಾಹನ ಸಂಚಾರ ವಿರಳವಾಗಿತ್ತು. ನಂತರ ತುಮಕೂರು ಬಂದು ಬೆಂಬಲಿಸಿ ಬಹುತೇಕ ಎಲ್ಲಾ ವಾಣಿಜ್ಯ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಇನ್ನುಳಿದಂತೆ ಬ್ಯಾಂಕ್ ಗಳು ಹಾಗೂ ಆಸ್ಪತ್ರೆಗಳು ತೆರೆದಿದ್ದವು. ಬೆಳಗ್ಗೆ ಸುಮಾರು 10 ಗಂಟೆ ಬೆಳಗ್ಗೆ ತುಮಕೂರಿನ ಟೌನ್ ಹಾಲ್  ಬಳಿ ಜಮಾಯಿಸಿದ  ಹೋರಾಟಗಾರರು ರಸ್ತೆ ತಡೆ ನಡೆಸಿದರು. ಹೇಮಾವತಿ ಲಿಂಕ್ ಕೆನಾಲ್ ವಿರೋಧಿ ಹೋರಾಟ ಸಮಿತಿ ವತಿಯಿಂದ ಕರೆ ನೀಡಲಾಗಿದ್ದ ಬಂದ್ಗೆ   ರೈತ ಸಂಘ ಹಾಗೂ ವಿವಿಧ ಮಠಗಳ ಮಠಾಧೀಶರು ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಮುಂಜಾಗ್ರತ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್  ವ್ಯವಸ್ಥೆ ಮಾಡಲಾಗಿತ್ತು. ಹೋರಾಟಕ್ಕೆವಕೀಲರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದವು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296…

Read More

ಸೌದಿ ಅರೇಬಿಯಾದಲ್ಲಿ ಹಜ್ ಯಾತ್ರಿಕರ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಬಿಸಿಲಿನ ಬೇಗೆಯಿಂದ ಈ ವರ್ಷ 1,301 ಹಜ್ ಯಾತ್ರಿಕರು ಸಾವನ್ನಪ್ಪಿದ್ದಾರೆ. ಭಾನುವಾರ, ಸೌದಿ ಆರೋಗ್ಯ ಸಚಿವ ಫಹದ್ ಬಿನ್ ಅಬ್ದುರ್ರಹ್ಮಾನ್ ಅಲ್-ಜಲಾಜೆಲ್ ಅವರು 1,301 ಸತ್ತವರಲ್ಲಿ 83 ಪ್ರತಿಶತದಷ್ಟು ಅನಧಿಕೃತ ಯಾತ್ರಿಕರು ಎಂದು ಹೇಳಿದ್ದಾರೆ. ರಾಜ್ಯ ಟಿವಿ ಅಲ್ ಅಖ್ಬರಿಯಾ ಅವರೊಂದಿಗೆ ಮಾತನಾಡಿದ ಸಚಿವರು, 95 ಯಾತ್ರಿಕರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಅವರಲ್ಲಿ ಕೆಲವರನ್ನು ರಾಜಧಾನಿ ರಿಯಾದ್‌ನಲ್ಲಿ ಚಿಕಿತ್ಸೆಗಾಗಿ ವಿಮಾನದಲ್ಲಿ ಕಳುಹಿಸಲಾಗಿದೆ ಎಂದು ಹೇಳಿದರು. ಸೌದಿಯಲ್ಲಿ ಹಜ್ ಯಾತ್ರಿಕರ ಮರಣವನ್ನು ಗುರುತಿಸುವುದು ಅತ್ಯಂತ ಕಷ್ಟಕರವಾದ ಕೆಲಸವಾಗಿದೆ ಎಂದು ಅವರು ಹೇಳಿದರು, ಏಕೆಂದರೆ ಸತ್ತ ಯಾತ್ರಿಕರಲ್ಲಿ ಯಾವುದೇ ಗುರುತಿನ ದಾಖಲೆಗಳಿಲ್ಲ. ಗುರುತಿಸಲಾಗದ ಯಾತ್ರಾರ್ಥಿಗಳನ್ನು ಮೆಕ್ಕಾದಲ್ಲಿ ಸಮಾಧಿ ಮಾಡಲಾಗಿದೆ ಎಂದು ಸಚಿವರು ಹೇಳಿದರು. ಸತ್ತವರಲ್ಲಿ 660 ಕ್ಕೂ ಹೆಚ್ಚು ಈಜಿಪ್ಟ್ ನಾಗರಿಕರು ಸೇರಿದ್ದಾರೆ ಎಂದು ಕೈರೋದಲ್ಲಿ ಇಬ್ಬರು ಸೌದಿ ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಇವರಲ್ಲಿ 31 ಮಂದಿಯನ್ನು ಹೊರತುಪಡಿಸಿ ಎಲ್ಲರೂ ಅನಧಿಕೃತ ಯಾತ್ರಿಗಳು. ಸೌದಿ…

Read More

ಉಡುಪಿ: ಭಾರತೀಯ ದಂಡ ಕ್ರಿಯಾ ಸಂಹಿತೆ ಬದಲಾಗಿ ಜಾರಿಗೊಳ್ಳುತ್ತಿರುವ ಹೊಸ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಿಂದ ಪೊಲೀಸರಿಗೆ ಹೆಚ್ಚಿನ ಅಧಿಕಾರ ದೊರೆಯಲಿದೆ. ಇದರಿಂದ ಸಂತ್ರಸ್ತರು ನ್ಯಾಯ ವಂಚಿತರಾಗಲಿದ್ದಾರೆ. ಇದು ಸಂವಿಧಾನ ನಮಗೆ ನೀಡಿರುವ ನ್ಯಾಯ ಪಡೆಯುವ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಉಡುಪಿಯ ಹಿರಿಯ ನ್ಯಾಯವಾದಿ ಎಂ.ಶಾಂತಾರಾಮ್ ಶೆಟ್ಟಿ ಆತಂಕ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ವಕೀಲರ ಸಂಘ, ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಸಹಯೋಗದೊಂದಿಗೆ ಉಡುಪಿ ಪತ್ರಿಕಾ ಭವನದಲ್ಲಿ ಜೂ.24ರಂದು ಸೋಮವಾರ ಹಮ್ಮಿಕೊಳ್ಳಲಾದ ಸಂವಾದ ಕಾರ್ಯಕ್ರಮದಲ್ಲಿ ಭಾರತೀಯ ದಂಡ ಕ್ರಿಯಾ ಸಂಹಿತೆ ಬದಲಾಗಿ ಜಾರಿಗೊಳ್ಳುತ್ತಿರುವ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಹಾಗೂ ಇತರ ಎರಡು ಕಾನೂನುಗಳ ಕುರಿತು ಅವರು ಮಾತನಾಡುತಿದ್ದರು. ಬ್ರಿಟೀಷರ ಕಾಲದಲ್ಲಿ ಜಾರಿಗೆ ಬಂದ ಭಾರತೀಯ ದಂಡ ಸಂಹಿತೆ (ಐಪಿಸಿ), ಕ್ರಿಮಿನಲ್ ಪ್ರೋಸಿಜರ್ ಕೋಡ್(ಸಿಆರ್‌ಪಿಸಿ), ಭಾರತ ಸಾಕ್ಷ ಅಧಿನಿಯಮ(ಇಂಡಿಯನ್ ಎವಿಡೆನ್ಸ್ ಆ್ಯಕ್ಟ್) ತುಂಬಾ ಪ್ರಮುಖವಾದ ಕಾನೂನುಗಳು. ಇದುವೇ ನಿಜವಾದ ಕ್ರಿಮಿನಲ್ ಜಸ್ಟಿಸ್ ಸಿಸ್ಟಮ್.…

Read More

ಇನ್ನೇನು ಕೆಲವು ದಿನಗಳಲ್ಲಿ ಜೂನ್ ತಿಂಗಳು ಮುಗಿದು ಜುಲೈ ತಿಂಗಳು ಆರಂಭವಾಗಲಿದೆ. ಸದ್ಯ ಪ್ರತಿ ತಿಂಗಳಂತೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮುಂದಿನ ತಿಂಗಳು ಜುಲೈ ನಲ್ಲಿ ಬ್ಯಾಂಕ್ ರಜೆ ಘೋಷಿಸಿದೆ. ಮುಂದಿನ ತಿಂಗಳು, ಅಂದರೆ 2024ರ ಜುಲೈನಲ್ಲಿ 12 ದಿನಗಳು ಬ್ಯಾಂಕ್ ಗಳು ಬಂದ್ ಆಗಲಿವೆ. ಒಟ್ಟು ರಾಷ್ಟ್ರೀಯ ಮತ್ತು ಪ್ರಾದೇಶಿಕ ರಜಾದಿನಗಳ ಕಾರಣ ಜುಲೈ ತಿಂಗಳಲ್ಲಿ ಒಟ್ಟು 12 ದಿನಗಳ ಕಾಲ ಬ್ಯಾಂಕ್‌ಗಳು ಬಂದ್ ಇರಲಿದೆ. ಇವುಗಳಲ್ಲಿ ಭಾನುವಾರ, ಎರಡನೇ ಮತ್ತು ನಾಲ್ಕನೇ ಶನಿವಾರಗಳು ಮತ್ತು ಇತರ ಕೆಲವು ದಿನಗಳನ್ನು ಆರ್ ಬಿಐ ಬ್ಯಾಂಕ್ ರಜೆ ಎಂದು ಘೋಷಿಸುತ್ತದೆ. ಈ ರಜಾದಿನಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. ಕೆಲವು ರಾಷ್ಟ್ರೀಯ ರಜಾದಿನಗಳಲ್ಲಿ ಎಲ್ಲಾ ಬ್ಯಾಂಕುಗಳು ಕ್ಲೋಸ್ ಆಗಿರುತ್ತೆ. ಕೆಲವು ರಾಜ್ಯಗಳಲ್ಲಿ ಸ್ಥಳೀಯ ಹಬ್ಬಗಳ ಆಧಾರದ ಮೇಲೆ ಬ್ಯಾಂಕ್ ರಜಾದಿನಗಳನ್ನು ಹೊಂದಿವೆ. ಜುಲೈ ತಿಂಗಳ ಬ್ಯಾಂಕ್ ರಜಾ ಪಟ್ಟಿ ಇಂತಿವೆ : ಜುಲೈ 3: ಬೆಹ್ ದೈನ್ ಖ್ಲಾಮ್ ಸಂದರ್ಭದಲ್ಲಿ ಶಿಲ್ಲಾಂಗ್…

Read More