Subscribe to Updates
Get the latest creative news from FooBar about art, design and business.
- ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ
- ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದರಂತೆ ಸಿದ್ದರಾಮಯ್ಯನವರ ತಾಯಿ ಬೋರಮ್ಮ!
- ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ
- ಆತುರದ ಮಾತಾಡಿದ್ರೆ ಸಿಎಂ ಪಟ್ಟ ಕೈತಪ್ಪುವ ಸಾಧ್ಯತೆ: ಡಿಕೆಶಿಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ
- ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ನನ್ನ ಜೀವನ ತೆರೆದ ಪುಸ್ತಕ ಎಂದ ಸಿಎಂ
- ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ
- ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ
- ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
Author: admin
1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯನ್ನು ಹೊಡೆದು ಕೊಂದಿರುವ ಘಟನೆ ಭಾನುವಾರ ಜೊಲ್ಲಾಪುರದ ಕಲಾಂಬಾ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೈಲಿನ ಬಾತ್ ರೂಮ್ ನಲ್ಲಿ ಸ್ನಾನ ಮಾಡುತ್ತಿದ್ದ. ವೇಳೆ ವಾಗ್ವಾದ ನಡೆದು ಇತರ ಕೈದಿಗಳು 59 ವರ್ಷದ ಮನ್ನಾ ಅಲಿಯಾಸ್ ಮೊಹಮ್ಮದ್ ಅಲಿ ಖಾನ್ ಅಲಿಯಾಸ್ ಮನೋಜ್ ಕುಮಾರ್ ಭವರ್ಲಾಲ್ ಗುಪ್ತಾ ಮೇಲೆ ಹಲ್ಲೆಗೈದಿದ್ದಾರೆ. ಮೊಹಮ್ಮದ್ ಅಲಿ ಖಾನ್ ಸರಣಿ ಸ್ಫೋಟ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಯಾಗಿದ್ದಾನೆ. ಮೊಹಮ್ಮದ್ ಅಲಿ ಖಾನ್ ಹಾಗೂ ಕೆಲ ವಿಚಾರಣಾಧೀನ ಕೈದಿಗಳ ನಡುವೆ ಇದ್ದಕ್ಕಿದ್ದಂತೆ ವಾಗ್ವಾದ ನಡೆದಿದೆ. ಈ ವೇಳೆ ಒಳಚರಂಡಿಯಲ್ಲಿಟ್ಟಿದ್ದ ಕಬ್ಬಿಣದ ರಾಡ್ ನಿಂದ ಖಾನ್ ತಲೆಗೆ ಬಲವಾಗಿ ಹೊಡೆದಿದ್ದಾರೆ. ಈ ವೇಳೆ ತೀವ್ರ ರಕ್ತಸ್ತ್ರಾವದಿಂದ ನೆಲದ ಮೇಲೆ ಕುಸಿದು ಬಿದ್ದಿದ್ದಾನೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾದರೂ ಚಿಕಿತ್ಸೆ ಫಲಕಾರಿಯಾಗದೇ ಖಾನ್ ಮೃತಪಟ್ಟಿದ್ದಾನೆ ಎಂಬುದಾಗಿ ವೈದ್ಯರು ತಿಳಿಸಿದ್ದಾರೆ. ದಾಳಿಕೋರರನ್ನು ಪ್ರತೀಕ್ ಅಲಿಯಾಸ್…
ಬೆಂಗಳೂರು ವಿಶ್ವ ವಿದ್ಯಾನಿಲಯದ ಆವರಣದಲ್ಲಿರುವ ಬಿಸಿಎಂ(ಪುರುಷ) ಹಾಸ್ಟೆಲ್ ನಲ್ಲಿ ಕಳಪೆ ಊಟ ಸೇವಿಸಿ 10ರಿಂದ 15 ವಿದ್ಯಾರ್ಥಿಗಳಿಗೆ ಆರೋಗ್ಯ ಸಮಸ್ಯೆ ಉಂಟಾಗಿದ್ದು, ಇದನ್ನು ಖಂಡಿಸಿ ಹಾಸ್ಟೆಲ್ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ವಿದ್ಯಾರ್ಥಿ ಗೌತಮ್ ಮಾತನಾಡಿ, ‘ಬಿಸಿಎಂ ಹಾಸ್ಟಲ್ ನಲ್ಲಿ ಕಳಪೆ ಊಟ-ಉಪಹಾರ ವಿತರಣೆಯಿಂದ ಪ್ರತಿದಿನ ಸಮಸ್ಯೆ ಸೃಷ್ಟಿಯಾಗುತ್ತಿದೆ. ರವಿವಾರ ಊಟ ಸೇವಿಸಿದ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ-ಭೇದಿ, ಹೊಟ್ಟೆನೋವು ಕಾಣಿಸಿಕೊಂಡಿದೆ. ಇನ್ನು ಕೆಲವು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ಹೇಳಿದರು. ಹಾಸ್ಟೆಲ್ ನಲ್ಲಿ ಸಿಬ್ಬಂದಿಗಳು ಬೇಕಾಬಿಟ್ಟಿ ಅಡುಗೆ ಮಾಡುತ್ತಾರೆ. ಅಲ್ಲದೆ ವಿದ್ಯಾರ್ಥಿಗಳು ತಟ್ಟೆಗೆ ಹಾಕಿಕೊಂಡ ಊಟ ಕಳಪೆಯಾಗಿರುವ ಹಿನ್ನೆಲೆಯಲ್ಲಿ ಶೇ.80ರಷ್ಟು ಬಿಸಾಕುತ್ತಾರೆ. ಈ ಸಮಸ್ಯೆಯನ್ನು ನಿಲಯಪಾಲಕರ ಗಮನಕ್ಕೆ ತಂದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಬಿಸಿಎಂ ಹಾಸ್ಟಲ್ ಗೆ ಹೋಗುವ ದಾರಿಯಲ್ಲಿ ಬೀದಿ ದೀಪಗಳಿಲ್ಲದೆ ನಾಯಿಗಳ ಹಾವಳಿ ಹೆಚ್ಚಾಗಿದ್ದು ಒಂದು ತಿಂಗಳಿನಲ್ಲಿ 5 ವಿದ್ಯಾರ್ಥಿಗಳಿಗೆ ನಾಯಿ ಕಚ್ಚಿದೆ. ಹೀಗಾಗಿ ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ ಎಂದು…
ಮಾಧ್ಯಮ ಕ್ಷೇತ್ರದ ದಿಗ್ಗಜ ರೂಪರ್ಟ್ ಮರ್ಡೋಕ್ ಅವರು ಶನಿವಾರ ತಮ್ಮ 93ನೇ ವಯಸ್ಸಿನಲ್ಲಿ ತಮಗಿಂತ 25 ವರ್ಷ ಕಿರಿಯರಾದ ನಿವೃತ್ತ ಕಣ ಜೀವಶಾಸ್ತ್ರಜ್ಞೆ 67 ವರ್ಷ ವಯಸ್ಸಿನ ಎಲೆನಾ ಝುಕೋವಾ ಅವರನ್ನು ವಿವಾಹವಾದರು. ಇದು ಮರ್ಡೋಕ್ ಅವರ ಐದನೇ ವಿವಾಹ. ಮೊರಗಾ ಎಂಬ ಕ್ಯಾಲಿಫೋರ್ನಿಯಾ ವೈನ್ ಯಾರ್ಡ್ ಎಸ್ಟೇಟ್ ನಲ್ಲಿ ವಿವಾಹ ನಡೆಯಿತು. ವಿವಾಹದ ಚಿತ್ರಗಳನ್ನು ಮರ್ಡೋಕ್ ಮಾಲೀಕತ್ವದ ಬ್ರಿಟನ್ ಪತ್ರಿಕೆ ‘ದ ಸನ್’ಪತ್ರಿಕೆಯಲ್ಲಿ ಪ್ರಕಟಿಸಲಾಗಿದೆ. ನವಜೋಡಿ ಫೋಟೊಗೆ ಫೋಸ್ ನೀಡುತ್ತಾ ನಗುತ್ತಿರುವ ಚಿತ್ರಗಳು ಪ್ರಕಟವಾಗಿವೆ. ಈ ವಿವಾಹ ಸಂಭ್ರಮದಲ್ಲಿ ನ್ಯೂ ಇಂಗ್ಲೆಂಡ್ ಪೇಟ್ರಿಯಾಟ್ಸ್ ಯುಎಸ್ ಫುಟ್ಬಾಲ್ ತಂಡದ ಮಾಲೀಕ ರಾಬರ್ಟ್ ಕ್ರಾಫ್ಟ್ (82) ಮತ್ತು ಅವರ 50 ವರ್ಷ ವಯಸ್ಸಿನ ಪತ್ನಿ ದಾನಾ ಬ್ಲೂಂಬರ್ಗ್ ಪಾಲ್ಗೊಂಡಿದ್ದರು ಎಂದು ವರದಿ ವಿವರಿಸಿದೆ. ಇದಕ್ಕೂ ಮುನ್ನ ಮರ್ಡೋಕ್ ನಾಲ್ಕು ಬಾರೀ ವಿವಾಹವಾಗಿದ್ದು, ಇತ್ತೀಚೆಗೆ ರೋಲಿಂಗ್ ಸ್ಟೋನ್ ಮುಖ್ಯಸ್ಥ ಮೈಕ್ ಜಾಗರ್ ಅವರ ಸುಧೀರ್ಘ ಕಾಲದ ಗೆಳತಿ ಜೆರ್ರಿ ಹಾಲ್ ಅವರನ್ನು ವಿವಾಹವಾಗಿದ್ದರು. ಕಳೆದ…
ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿದ್ದ ಕ್ಯಾಬಿನ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಕೇರಳದ ಕೋಝಿಕ್ಕೋಡ್ ನಿಂದ ಬಹ್ರೇನ್ ಗೆ ತೆರಳುತ್ತಿದ್ದ ವಿಮಾನ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಕೇರಳ ಮೂಲದ ಅಬ್ದುಲ್ ಮುಸಾವಿರ್ ನಡುಕಂಡಿ(25) ಎಂದು ಗುರುತಿಸಲಾಗಿದೆ. ಆರೋಪಿ ಕೋಝಿಕ್ಕೋಡ್ ನಿಂದ ವಿಮಾನ ಟೇಕಾಫ್ ಆಗುವಾಗ ತಕ್ಷಣವೇ ವಿಮಾನದ ಹಿಂಭಾಗಕ್ಕೆ ತೆರಳಿ ಕ್ಯಾಬಿನ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಬಳಿಕ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಭದ್ರತಾ ದೃಷ್ಟಿಯಿಂದ ಪೈಲಟ್ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (CSMIA) ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಹಿಂದೂ ಹೆಣ್ಣು ಮಕ್ಕಳನ್ನು ಲವ್ ಜಿಹಾದ್ ನಿಂದ ರಕ್ಷಿಸುವುದಕ್ಕಾಗಿ ಶ್ರೀರಾಮ ಸೇನೆ ಆರಂಭಿಸಿರುವ ಸಹಾಯವಾಣಿಗೆ 4 ದಿನದಲ್ಲಿ 17 ಬೆದರಿಕೆ ಕರೆಗಳು ಬಂದಿವೆ. ಮೇ29ರಂದು ಹಿಂದೂ ಯುವತಿಯರ ರಕ್ಷಣೆಗಾಗಿ ಶ್ರೀರಾಮ ಸೇನೆ ಸಹಾಯವಾಣಿಯನ್ನು ತೆರೆದಿತ್ತು. ಕೇವಲ ನಾಲ್ಕು ದಿನಗಳಲ್ಲಿ 400ಕ್ಕೂ ಹೆಚ್ಚು ಅಧಿಕ ಕರೆಗಳು ಸಹಾಯವಾಣಿಗೆ ಬಂದಿದೆ. ಈ ಬಗ್ಗೆ ಮಾತನಾಡಿರುವ ಶ್ರೀರಾಮ ಸೇನೆ ರಾಜ್ಯ ಉಪಾಧ್ಯಕ್ಷ ಗಂಗಾಧರ ಕುಲಕರ್ಣಿ, ಸಹಾಯವಾಣಿಗೆ 37 ಕರೆಗಳು ಬಂದಿವೆ. 42 ಪ್ರೋತ್ಸಾಹಕ ಕರೆಗಳಾಗಿವೆ. 52 ಲವ್ ಜಿಹಾದ್ ಸಂತ್ರಸ್ತರ ಕರೆಗಳಾಗಿವೆ. ಇವುಗಳಲ್ಲಿ ಹೊರ ರಾಜ್ಯದ ಸಂತ್ರಸ್ತರಿಂದಲೂ ಕರೆ ಬಂದಿದೆ. ಈ ನಡುವೆ ಬೆದರಿಕೆ ಕರೆಗಳು ಕೂಡ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಫೇಸ್ ಬುಕ್ ಮತ್ತು ವಾಟ್ಸಾಪ್ ನಂತಹ ಸಾಮಾಜಿಕ ಜಾಲತಾಣದಲ್ಲೂ ಸಹಾಯವಾಣಿ ಬ್ಲಾಕ್ ಮಾಡಿಸಲಾಗಿದೆ. ನಮ್ಮ ಸಹಾಯವಾಣಿ ಸರಿಯಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ವಿರೋಧಿಗಳಿಗೆ ಬೆಂಕಿ ಬಿದ್ದಿದೆ ಎಂದು ಕಿಡಿಕಾರಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಟಿ20 ವಿಶ್ವಕಪ್ನ ನಾಲ್ಕನೇ ಪಂದ್ಯದಲ್ಲಿ ಸೋಮವಾರ ದಕ್ಷಿಣ ಆಫ್ರಿಕಾ ತಂಡವು ಶ್ರೀಲಂಕಾವನ್ನು ಆರು ವಿಕೆಟ್ ಗಳಿಂದ ಸುಲಭವಾಗಿ ಸೋಲಿಸಿದೆ. ನ್ಯೂಯಾರ್ಕ್ ನ ನಸ್ಸವ್ ಕೌಂಟಿ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಶ್ರೀಲಂಕಾ 19.1 ಓವರ್ ಗಳಲ್ಲಿ ಕೇವಲ 77 ರನ್ ಗಳಿಗೆ ಆಲೌಟ್ ಆಯಿತು. ಸುಲಭ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 16.2 ಓವರ್ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು 80 ರನ್ ಗಳಿಸಿತು. ಶ್ರೀಲಂಕಾ ಪರ ಕುಶಾಲ್ ಮೆಂಡಿಸ್ (19), ಕಮಿಂದು ಮೆಂಡಿಸ್ (11), ಮತ್ತು ಮ್ಯಾಥ್ಯೂಸ್(16), ಮಾತ್ರ ಎರಡಂಕಿ ತಲುಪಿದರು. ಬಿಗಿ ಬೌಲಿಂಗ್ ದಾಳಿ ನಡೆಸಿದ ದಕ್ಷಿಣ ಆಫ್ರಿಕಾ ಪರ ನೋರ್ಜೆ ನಾಲ್ಕು ಓವರ್ ಗಳಲ್ಲಿ ಕೇವಲ 7 ರನ್ ನೀಡಿ ನಾಲ್ಕು ವಿಕೆಟ್ ಕಬಳಿಸಿದರು. ರಬಡ 21ಕ್ಕೆ 2, ಮಹಾರಾಜ್ 22ಕ್ಕೆ 2 ವಿಕೆಟ್ ಕಿತ್ತು ಎದುರಾಳಿ ತಂಡದ ಪತನಕ್ಕೆ ಕಾರಣರಾದರು. ಆಫ್ರಿಕಾ ತಂಡ ಕ್ವಿಂಟನ್ ಡಿಕಾಕ್ (20), ರೀಝಾ ಹೆಂಡ್ರಿಕ್, ಈಡನ್ ಮ್ಯಾಕ್ರಮ್ ಹಾಗೂ…
ಧಾರವಾಡ: ಬಿಜೆಪಿಯ ಭದ್ರಕೋಟೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕೈ- ಕಮಲ ಪಕ್ಷಗಳ ಮಧ್ಯೆ ತೀವ್ರ ಜಿದ್ದಾಜಿದ್ದಿ ಇದೆ. ಸತತ ನಾಲ್ಕು ಬಾರಿ ಗೆದ್ದಿರುವ ಪ್ರಹ್ಲಾದ್ ಜೋಶಿ ಅವರಿಗೆ ಕಾಂಗ್ರೆಸ್ನ ಹೊಸ ಮುಖ ವಿನೋದ್ ಅಸೂಟಿ ಭಾರೀ ಪೈಪೋಟಿ ನೀಡಿದ್ದಾರೆ. ಸದ್ಯ ಜೋಶಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಆದ್ರೆ ಈಗ ಸದ್ಯ ಜೋಶಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಹೌದು ಕಾಂಗ್ರೆಸ್ ನ ಹೊಸ ಮುಖ ವಿನೋದ್ ಅಸೂಟಿ ವಿರುದ್ಧ 17242 ಮತಗಳ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಇನ್ನೂ ಕಾಂಗ್ರೆಸ್ ನಿಂದ ಕಣಕ್ಕಳಿದಿರುವ ವಿನೋದ್ ಅಸೂಟಿ 66458 ಮತಗಳಲ್ಲಿ ಇದ್ದಾರೆ. ಜೋಶಿ 83700 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇನ್ನೂ 2019ರ ಲೋಕಸಭಾ ಚುನಾವಣೆಯಲ್ಲಿ ಶೇ. 70.12ರಷ್ಟು ಮತದಾನವಾಗಿತ್ತು. ಆಗ ಬಿಜೆಪಿಯಿಂದ ಪ್ರಹ್ಲಾದ್ ಜೋಶಿ 2.05 ಲಕ್ಷ ಮತಗಳ ಅಂತರದ ಗೆಲುವು ಕಂಡಿದ್ದರು. ಈ ಬಾರಿ ಶೇ.74.37ರಷ್ಟು ಮತದಾನವಾಗಿದೆ. ಆದರೆ, ಹೆಚ್ಚುವರಿ ಮತಗಳು ಯಾರ ಪರ ಇವೆ ಎಂಬುದು ಫಲಿತಾಂಶದ ಬಳಿಕ ಗೊತ್ತಾಗಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ…
ಲೋಕಸಭಾ ಚುನಾವಣೆಯ ಫಲಿತಾಂಶ ರಣರೋಚಕವಾಗಿದೆ. ದೇಶಾದ್ಯಂತ ಮತಎಣಿಕೆ ಬಿರುಸಿನಿಂದ ನಡೆಯುತ್ತಾ ಇದ್ದು, ಯಾರ್ ಗೆಲ್ತಾರೆ? ಯಾರ್ ಸೋಲ್ತಾರೆ ಅನ್ನೋ ಕುತೂಹಲ ಮುಗಿಲು ಮುಟ್ಟಿದೆ. 543 ಲೋಕಸಭಾ ಕ್ಷೇತ್ರದಲ್ಲಿ ಇಡೀ ದೇಶದ ಕಣ್ಣು ಬಿದ್ದಿರೋದು ವಾರಣಾಸಿ ಲೋಕಸಭಾ ಕ್ಷೇತ್ರದ ಮೇಲೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ಪರ್ಧಿಸಿರುವ ವಾರಣಾಸಿ ಲೋಕಸಭಾ ಕ್ಷೇತ್ರದ ಫಲಿತಾಂಶ ಭಾರೀ ಕುತೂಹಲ ಕೆರಳಿಸಿದೆ. ಉತ್ತರಪ್ರದೇಶದಲ್ಲಿ ಸದ್ಯ ಎನ್ ಡಿಎ, ಇಂಡಿಯಾ ಮೈತ್ರಿಕೂಟ ಅಭ್ಯರ್ಥಿಗಳ ಮಧ್ಯೆ ಜಿದ್ದಾಜಿದ್ದಿನ ಹೋರಾಟ ನಡೆಯುತ್ತಿದೆ. ಸದ್ಯದ ಮಾಹಿತಿ ಪ್ರಕಾರ ನರೇಂದ್ರ ಮೋದಿ ಅವರ ವಿರುದ್ಧ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ – 18629 ಬಿಜೆಪಿ ಅಭ್ಯರ್ಥಿ ನರೇಂದ್ರ ಮೋದಿ – 14540 ವಾರಣಾಸಿ ಲೋಕಸಭಾ ಕ್ಷೇತ್ರದ ಮತ ಎಣಿಕೆಯಲ್ಲಿ ಮೋದಿ ಅವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ 4089 ಮತಗಳ ಅಂತರದಲ್ಲಿ ಮುನ್ನಡೆಯಲ್ಲಿದ್ದಾರೆ. 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್…
ಲೋಕಸಭಾ ಚುನಾವಣೋತ್ತರ ಸಮೀಕ್ಷೆಗಳು ಯಾವತ್ತಿಗೂ ತಪ್ಪಾಗೋದಿಲ್ಲ. ಎನ್ ಡಿಎ ಪಕ್ಷ ಹೆಚ್ಚು ಸ್ಥಾನಗಳಿಸಲಿದೆ. ಮೋದಿ ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದು ಸ್ಯಾಂಡಲ್ ವುಡ್ ನಟ ಚೇತನ್ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಚೇತನ್, 2014-2019ರಲ್ಲಿ ಇದ್ದ ಮೋದಿ ಅಲೆ ಈಗ ಇಲ್ಲ. ಮೋದಿ ಬ್ರ್ಯಾಂಡ್ ಕಡಿಮೆ ಆಗಿರಬಹುದು. ಆದ್ರೇ ಬಿಜೆಪಿಗೆ ದೊಡ್ಡ ಮಟ್ಟದ ಫಲಿತಾಂಶ ಬರಲಿದೆ ಎಂಬುದಾಗಿ ಭವಿಷ್ಯ ನುಡಿದಿದ್ದಾರೆ. ಲೋಕಸಭಾ ಚುನಾವಣೆಯ ಮತದಾನ ಮುಕ್ತಾಯದ ನಂತ್ರ ಚುನಾವಣೋತ್ತರ ಸಮೀಕ್ಷೆಗಳ ವರದಿಯನ್ನು ನೋಡಿದ್ರೇ, ಎಲ್ಲಾ ಸಮೀಕ್ಷೆ ಒಂದೇ ರೀತಿಯಲ್ಲಿ ಇದೆ. ಅದರಲ್ಲಿ ಯಾವುದೇ ಗೊಂದಲಗಳಿಲ್ಲ. ಈ ಸಮೀಕ್ಷೆಗಳು ಯಾವತ್ತಿಗೂ ತಪ್ಪಾಗುವುದಿಲ್ಲ ಎಂದಿದ್ದಾರೆ. 2004ರ ಸಮೀಕ್ಷೆಯಲ್ಲಿ ದೊಡ್ಡ ಮಟ್ಟದಲ್ಲಿ ಬಿಜೆಪಿಗೆ ಸ್ಥಾನ ಬರಲಿದೆ ಎಂಬುದಾಗಿ ಹೇಳಲಾಗಿತ್ತು. ಅದರಂತೆಯೇ ಆಯ್ತು. ಈಗ ಚುನಾವಣೋತ್ತರ ಸಮೀಕ್ಷೆಯಲ್ಲಿ 2019ರ ಚುನಾವಣೆಗಿಂತ ಹೆಚ್ಚು ಸ್ಥಾನ ಬರಲಿದೆ ಅಂತ ಸಮೀಕ್ಷೆಗಳು ಹೇಳಿದ್ದಾವೆ. ಅದೇ ರೀತಿ ಫಲಿತಾಂಶ ಬರಲಿದೆ ಎಂದರು. ಲೋಕಸಭಾ ಚುನಾವಣೋತ್ತರ ಸಮೀಕ್ಷಾ ವರದಿ ಪ್ರಕಾರ 370ಕ್ಕೂ ಹೆಚ್ಚು ಸ್ಥಾನ ಎನ್…
ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ದೇಶದೆಲ್ಲೆಡೆ ಸುಗಮವಾಗಿ ನಡೆಯುತ್ತಿದ್ದು ಅಭ್ಯರ್ಥಿಗಳು ಗೆಲುವಿನ ಲೆಕ್ಕಚಾರದಲ್ಲಿ ಇದ್ದಾರೆ. ಅದರಂತೆ ಇಂದು ಮಧ್ಯಾಹ್ನದ ವೇಳೆಗೆ ಬಹುತೇಕ ಫಲಿತಾಂಶ ಹೊರ ಬೀಳಲಿದೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಭಾರೀ ಮುನ್ನಡೆಯಲ್ಲಿದ್ದಾರೆ. ಈಗಾಗಲೇ ಮತ ಎಣಿಕೆ ಕಾರ್ಯ ಶುರುವಾಗಿದ್ದು ಚಿಕ್ಕೋಡಿಯ ಕುಡಚಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಮಾಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಭಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆ. 39,836 ಮತಳಿಂದ ಪ್ರಿಯಾಂಕಾ ಜಾರಕಿಹೊಳಿ ಜಾರಕಿಹೊಳಿ ಮುನ್ನುಗ್ಗಿತ್ತಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ ಆಗಿರುವ ಅಣ್ಣಾಸಾಹೇಬ ಜೊಲ್ಲೆ ಅವರು 31,303 ಪಡೆದ ಮತಗಳಿಂದ ಹಿನ್ನಡೆಯಲ್ಲಿದ್ದಾರೆ. ಪ್ರಿಯಾಂಕಾ ಜಾರಕಿಹೊಳಿ ಅವರು ಒಟ್ಟು 8,533 ಮತಗಳಿಂದ ಮುನ್ನಡೆಯಲ್ಲಿದ್ದಾರೆ. ಕುಡಚಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ವೇಳೆ ಪ್ರಿಯಾಂಕಾ ಜಾರಕಿಹೊಳಿ 7,000 ಮತಗಳಿಂದ ಮುನ್ನಡೆಯಲ್ಲಿದ್ದರು. ಈಗಾಗಲೇ ಮಂಡ್ಯ, ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…