Subscribe to Updates
Get the latest creative news from FooBar about art, design and business.
- ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ
- ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದರಂತೆ ಸಿದ್ದರಾಮಯ್ಯನವರ ತಾಯಿ ಬೋರಮ್ಮ!
- ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ
- ಆತುರದ ಮಾತಾಡಿದ್ರೆ ಸಿಎಂ ಪಟ್ಟ ಕೈತಪ್ಪುವ ಸಾಧ್ಯತೆ: ಡಿಕೆಶಿಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ
- ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ನನ್ನ ಜೀವನ ತೆರೆದ ಪುಸ್ತಕ ಎಂದ ಸಿಎಂ
- ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ
- ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ
- ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
Author: admin
ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ದೇಶದೆಲ್ಲೆಡೆ ಸುಗಮವಾಗಿ ನಡೆಯುತ್ತಿದ್ದು ಅಭ್ಯರ್ಥಿಗಳು ಗೆಲುವಿನ ಲೆಕ್ಕಚಾರದಲ್ಲಿ ಇದ್ದಾರೆ. ಅದರಂತೆ ಇಂದು ಮಧ್ಯಾಹ್ನದ ವೇಳೆಗೆ ಬಹುತೇಕ ಫಲಿತಾಂಶ ಹೊರ ಬೀಳಲಿದೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಭಾರೀ ಮುನ್ನಡೆಯಲ್ಲಿದ್ದಾರೆ. ಈಗಾಗಲೇ ಮತ ಎಣಿಕೆ ಕಾರ್ಯ ಶುರುವಾಗಿದ್ದು ಚಿಕ್ಕೋಡಿಯ ಕುಡಚಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಮಾಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಭಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆ. 39,836 ಮತಳಿಂದ ಪ್ರಿಯಾಂಕಾ ಜಾರಕಿಹೊಳಿ ಜಾರಕಿಹೊಳಿ ಮುನ್ನುಗ್ಗಿತ್ತಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ ಆಗಿರುವ ಅಣ್ಣಾಸಾಹೇಬ ಜೊಲ್ಲೆ ಅವರು 31,303 ಪಡೆದ ಮತಗಳಿಂದ ಹಿನ್ನಡೆಯಲ್ಲಿದ್ದಾರೆ. ಪ್ರಿಯಾಂಕಾ ಜಾರಕಿಹೊಳಿ ಅವರು ಒಟ್ಟು 8,533 ಮತಗಳಿಂದ ಮುನ್ನಡೆಯಲ್ಲಿದ್ದಾರೆ. ಕುಡಚಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ವೇಳೆ ಪ್ರಿಯಾಂಕಾ ಜಾರಕಿಹೊಳಿ 7,000 ಮತಗಳಿಂದ ಮುನ್ನಡೆಯಲ್ಲಿದ್ದರು. ಈಗಾಗಲೇ ಮಂಡ್ಯ, ಕೋಲಾರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಬಿಜೆಪಿ ಪ್ರಾಬಲ್ಯ ಇರುವ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಮಿತ್ರ ಪಕ್ಷಗಳು ಮಿಂಚಿನ ಓಟವನ್ನು ಆರಂಭಿಸಿವೆ. ಮೊದಲ ಸುತ್ತಿನ ಮತದಾನದ ಮುಕ್ತಾಯದ ವೇಳೆಗೆ ಬಿಜೆಪಿ ನೇತೃತ್ವದ ಎನ್ ಡಿಎ 293, ಕಾಂಗ್ರೆಸ್ ನೇತೃತ್ವದ ಐಎನ್ ಡಿಐಎ 214 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದುಕೊಂಡಿವೆ. ಸಹಜವಾಗಿಯೇ ಇದು ಕುತೂಹಲ ಕೆರಳಿಸಿದೆ. ಸಿಎಂ ಆದಿತ್ಯನಾಥ್ ಉತ್ತರ ಪ್ರದೇಶದಲ್ಲಿ ಭಾರಿ ನಿರೀಕ್ಷೆ ಮೂಡಿಸಿದ್ದರು. ತಮ್ಮ ರಾಜ್ಯದಲ್ಲಿ ಪ್ರಧಾನಿ ಮೋದಿಗೆ ಭಾರಿ ದೊಡ್ಡ ಮುನ್ನಡೆ ತಂದುಕೊಡುವ ನಿರೀಕ್ಷೆ ಇತ್ತು. ಆದರೆ ಆ ಎಲ್ಲ ನಿರೀಕ್ಷೆಗಳು ಇದೀಗ ತಲೆ ಕೆಳಗಾಗುವ ಸಾಧ್ಯತೆ ಕಂಡು ಬರುತ್ತಿದೆ. ಎಸ್ ಪಿ 30, ಕಾಂಗ್ರೆಸ್ 6, ರಾಷ್ಟ್ರೀಯ ಲೋಕ ದಳ 2 ಸ್ಥಾನವನ್ನು ಪಡೆದುಕೊಂಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕೆ ಕಾರ್ಯ ಮುಂದುವರಿದಿದ್ದು, ಸತತವಾಗಿ 10 ನೇ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಮುನ್ನಡೆ ಕಾಯ್ದುಕೊಂಡಿದ್ದಾರೆ. 10ನೇ ಸುತ್ತಿನಲ್ಲಿ 58320 ಮತಗಳಿಂದ ಭಾರೀ ಮುನ್ನಡೆ ಸೋಮಣ್ಣ- 232428 ಮತಗಳ ಮುನ್ನಡೆ ಮುದ್ದಹನುಮೇಗೌಡ (ಕಾಂಗ್ರೆಸ್)- 174108 ಮತಗಳು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ದೇಶಾದ್ಯಂತ ಲೋಕಸಭಾ ಚುನಾವಣೆಯ ಮತಎಣಿಕೆ ನಡೆಯುತ್ತಾ ಇದ್ದು, ಚುನಾವಣಾ ಫಲಿತಾಂಶ ಕುತೂಹಲ ಕೆರಳಿಸಿದೆ. ರಾಜ್ಯದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾದ ಹಾಸನ ಚುನಾವಣೆ ರಿಸಲ್ಟ್ ಇಡೀ ದೇಶದ ಗಮನ ಸೆಳೆದಿದೆ. ಆರಂಭಿಕ ಮತಎಣಿಕೆಯ ಮಾಹಿತಿ ಪ್ರಕಾರ ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶೇಯಸ್ ಪಟೇಲ್ ಅವರು ಮುನ್ನಡೆ ಸಾಧಿಸಿದ್ದರು. ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಹಿನ್ನೆಡಯಲ್ಲಿದ್ದರು. ಇದಾದ ಬಳಿಕ ಮತ್ತೆ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳ ಮಧ್ಯೆ ಜಿದ್ದಾಜಿದ್ದಿನ ಹೋರಾಟ ನಡೆಯುತ್ತಿದೆ. ಮೂರನೇ ಸುತ್ತಿನ ಮತಎಣಿಕೆ ಜೆಡಿಎಸ್ 105314 ಕಾಂಗ್ರೆಸ್ 102890 ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ – 2,424 ಮತಗಳಿಂದ ಮುನ್ನಡೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿಜೆಪಿ ಅಭ್ಯರ್ಥಿ ಯದುವೀರ್ ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಮುನ್ನಡೆ ಸಾಧಿಸಿದ್ದಾರೆ. ಮೈಸೂರು-ಕೊಡಗು ಕ್ಷೇತ್ರ. ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ -51588 ಬಿಜೆಪಿ ಅಭ್ಯರ್ಥಿ ಯದುವೀರ್-58596 ಯದುವೀರ್ 7008 ಮತಗಳ ಮುನ್ನಡೆ ಲೋಕಸಭಾ ಶಿವಮೊಗ್ಗ ಚುನಾವಣಾ ಮತ ಎಣಿಕೆ: ಬಿಜೆಪಿ-ಬಿ.ವೈ.ರಾಘವೇಂದ್ರ-33, 780 ಕಾಂಗ್ರೆಸ್-ಗೀತಾ ಶಿವರಾಜಕುಮಾರ್-22497 ಪಕ್ಷೇತರ- ಕೆ.ಎಸ್.ಈಶ್ವರಪ್ಪ-2145 11283 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಮುನ್ನಡೆ ಸಾಧಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ದೇಶದಾದ್ಯಂತ ಲೋಕಸಭೆ ಚುನಾವಣೆಯ ಅತ್ಯಂತ ಪ್ರಮುಖ ಘಟ್ಟದ ಮತ ಎಣಿಕೆ ಇಂದು (ಮಂಗಳವಾರ) ಬೆಳಗ್ಗೆ 7:30ಕ್ಕೆ ಸ್ಟ್ರಾಂಗ್ ರೂಂಗಳನ್ನು ತೆರೆಯುವ ಮೂಲಕ ಆರಂಭವಾಗಿದೆ. ಬೆಳಗ್ಗೆ 8ಕ್ಕೆ ಅಂಚೆ ಮತಗಳ ಎಣಿಕೆ ಕಾರ್ಯ ಆರಂಭಿಸಲಾಗಿದೆ ಎಂದು ವರದಿ ತಿಳಿಸಿದೆ. ದೇಶದ ವಿವಿಧೆಡೆಯ ಎಣಿಕೆ ಕೇಂದ್ರಗಳಲ್ಲಿ ಬಿಗಿ ಭದ್ರತೆಯಲ್ಲಿ ಮತ ಎಣಿಕೆ ನಡೆಯುತ್ತಿದೆ. ಸುಮಾರು 64.2 ಕೋಟಿ ಮತದಾರರು ನೀಡಿರುವ ತೀರ್ಪು ಸಂಜೆಯೊಳಗೆ ಸ್ಪಷ್ಟವಾಗಲಿದೆ. ಏಪ್ರಿಲ್ 19ರಿಂದ ಆರಂಭವಾಗಿದ್ದ ಲೋಕಸಭೆ ಚುನಾವಣೆಯ ಮತದಾನ ಜೂನ್ 1ರವರೆಗೂ ಜರುಗಿತ್ತು. ಹೀಗಾಗಿ ಸುದೀರ್ಘವಾಗಿ ನಡೆದ ಚುನಾವಣಾ ಪ್ರಕ್ರಿಯೆ ಎಂಬ ದಾಖಲೆಯನ್ನೂ ಬರೆದಿದೆ. ಹಲವು ಅಡೆತಡೆಗಳು, ಸಾಕಷ್ಟು ಸವಾಲುಗಳ ಮಧ್ಯೆ ಕೇಂದ್ರ ಚುನಾವಣಾ ಆಯೋಗ ಯಶಸ್ವಿಯಾಗಿ ಚುನಾವಣಾ ಪ್ರಕ್ರಿಯೆ ಮುಗಿಸಿತ್ತು. ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳು ಹಲವು ಕಡೆಗಳಲ್ಲಿ ಮುನ್ನಡೆ ಸಾಧಿಸುತ್ತಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರ ಸ್ವಾಮಿ ಸುಮಾರು 30,000 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಹುತೇಕ ಗೆಲುವಿನ ಕಡೆಗೆ ನಾಗಾಲೋಟವನ್ನು ಮುಂದುವರಿಸಿದ್ದಾರೆ. ಮತ್ತೊಂದು ಕಡೆ ಬಿಜೆಪಿಗೆ ಸೆಡ್ಡು ಹೊಡೆದು ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧೆ ಮಾಡಿದ್ದ ಬಿಜೆಪಿಯ ಮಾಜಿ ನಾಯಕ ಕೆ.ಎಂ.ಈಶ್ವರಪ್ಪ ದೊಡ್ಡ ಹಿನ್ನಡೆ ಅನುಭವಿಸಿದ್ದಾರೆ. ಕೇವಲ 1,250 ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದಾರೆ. ಬಿಜೆಪಿ ವಿರುದ್ಧ ಸಿಡಿದೆದ್ದು ಈ ಸಲ ಬಿಜೆಪಿಗೆ ಪಾಠ ಕಲಿಸುತ್ತೇನೆಂದು ಸವಾಲು ಹಾಕಿಕೊಂಡು ಈಶ್ವರಪ್ಪ ಸ್ಪರ್ಧೆ ಮಾಡಿದ್ದನ್ನು ಸ್ಮರಿಸಬಹುದು. ಜಗದೀಶ್ ಶೆಟ್ಟರ್ ಅಳಿವು ಉಳಿವಿನ ಹೋರಾಟವಾಗಿತ್ತು. ಅವರು ಬೆಳಗಾವಿಯಲ್ಲಿ ಮುನ್ನಡೆ ಸಾಧಿಸಿಕೊಂಡಿದ್ದಾರೆ. ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದ ಅವರು ವಿಧಾನ ಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು. ಬಳಿಕ ಕಾಂಗ್ರೆಸ್ ಜೊತೆಗಿನ ಸಖ್ಯ ಸಾಕು ಅಂತ ಮತ್ತೆ ಬಿಜೆಪಿ ಸೇರಿಕೊಂಡಿದ್ದನ್ನು ಸ್ಮರಿಸಬಹುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ತುಮಕೂರು: ಜಿಲ್ಲೆಯ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಶುಭ ಕಲ್ಯಾಣ್ ಹಾಗೂ ಸಾಮಾನ್ಯ ವೀಕ್ಷಕರಾದ ಕೆ.ವಾಸವ ಮತ್ತು ಮತಎಣಿಕೆ ವೀಕ್ಷಕರಾದ ಸಿಮ್ಮಿ ನಾಹಿದ್ ಅವರ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ಬಾಗಿಲು ತೆರೆಯಲಾಯಿತು. ಇಬ್ಬರು ನಾಯಕರ ಭವಿಷ್ಯದ ಲೋಕಸಭೆ ಮತ ಎಣಿಕೆಗೆ ಕೌಂಟ್ ಡೌನ್ ಆರಂಭವಾಗಿದೆ. ಬೆಳಗ್ಗೆ 8 ಗಂಟೆಗೆ ಸ್ಟ್ರಾಂಗ್ ರೂಮ್ ಓಪನ್ ಮೊದಲು ಅಂಚೆ ಮತ ಏಣಿಕೆ ಮಾಡಲಾಯಿತು. ತುಮಕೂರು ವಿವಿ ವಿಜ್ಞಾನ ಕಾಲೇಜು, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಎರಡು ಕಡೆ ಮತ ಎಣಿಕೆ ನಡೆಯುತ್ತಿದೆ. ವಿವಿ ವಿಜ್ಞಾನ ಕಾಲೇಜಿನಲ್ಲಿ ಚಿಕ್ಕನಾಯಕನಹಳ್ಳಿ, ತಿಪಟೂರು,ತುರುವೇಕೆರೆ, ಮಧುಗಿರಿ ತಾಲ್ಲೂಕಿನ ಮತ ಎಣಿಕೆಯಾಗುತ್ತಿದೆ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ತುಮಕೂರು ನಗರ, ಗ್ರಾಮಾಂತರ ಕೊರಟಗೆರೆ, ಗುಬ್ಬಿ ತಾಲ್ಲೂಕಿನ ಮತ ಎಣಿಕೆಯಾಗುತ್ತಿದೆ. ಪ್ರತಿ ವಿಧಾನ ಸಭಾ ಕ್ಷೇತ್ರಕ್ಕೂ 14 ಮತ ಎಣಿಕೆ ಟೇಬಲ್ ಗಳಂತೆ ಒಟ್ಟು 112 ಟೇಬಲ್ ನಲ್ಲಿ ಮತ ಎಣಿಕೆ ನಡೆಸಲಾಗುತ್ತಿದೆ. * 448 ಸಿಬ್ಬಂದಿಯಿಂದ ನಡೆಯಲಿರುವ ಮತ ಎಣಿಕೆ ಕಾರ್ಯ * ಪ್ರತ್ಯೇಕ 18…
NEET UG 2024 ಮೇ 5 ರಂದು ನಡೆಯಿತು ಇದರಲ್ಲಿ 24 ಲಕ್ಷಕ್ಕೂ ಹೆಚ್ಚು ಅರ್ಜಿದಾರರಿದ್ದರು. ಅದರ ಉತ್ತರದ ಕೀಯನ್ನು ಮೇ 29 ರಂದು ನೀಡಲಾಯಿತು ಮತ್ತು ತಾತ್ಕಾಲಿಕ NEET ಯುಜಿ ಉತ್ತರ ಕೀಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಮೆಡಿಕಲ್ ಅರ್ಜಿದಾರರಿಗೆ ಮೇ 31 ರವರೆಗೆ ಅವಕಾಶ ನೀಡಲಾಯಿತು. ಇದೀಗ ಜೂನ್ 14 ರಂದು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ಪದವಿಪೂರ್ವ (NEET UG) 2024 ಫಲಿತಾಂಶವನ್ನು ಘೋಷಿಸಲು ನಿರ್ಧರಿಸಿದೆ. NTA ಫಲಿತಾಂಶಗಳ ಜೊತೆಗೆ ಕಟ್–ಆಫ್ ಅಂಕಗಳನ್ನು ಬಹಿರಂಗಪಡಿಸುತ್ತದೆ ಎಂದು ತಿಳಿಸಿದ್ದಾರೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಪರಿಶೀಲಿಸುವಾಗ ತಮ್ಮ NEET ಪ್ರವೇಶ ಕಾರ್ಡ್ ಅನ್ನು ಇಟ್ಟುಕೊಳ್ಳಬೇಕಾಗುತ್ತದೆ. ಸ್ಕೋರ್ ಗಳನ್ನು ನೀವು ಚೆಕ್ ಮಾಡಲು ನಿಮ್ಮ ಐಡಿ ಇರಲೇಬೇಕು. ಯಾಕೆಂದರೆ ನಿಮ್ಮ ರೋಲ್ ನಂಬರ್ ಅಗತ್ಯ ಇದೆ. ಪರೀಕ್ಷಾ ಕೇಂದ್ರ ಮತ್ತು ಇತರ ವಿವರಗಳಂತಹ ಸಂಗತಿಗಳು ಮಾನ್ಯವಾಗಿದೆಯೇ ಎಂದು ಪರಿಶೀಲಿಸಲು ವಿದ್ಯಾರ್ಥಿಗಳು ತಮ್ಮ ಸ್ಕೋರ್ ಕಾರ್ಡ್ಗಳನ್ನು ತಮ್ಮ ಪ್ರವೇಶ ಕಾರ್ಡ್ಗಳಿಗೆ ಹೋಲಿಕೆ ಮಾಡಿಕೊಂಡು…
ಸತತವಾಗಿ ಚಿನ್ನ ಕುಸಿಯುತ್ತಿದ್ದು ಈ ಮೂಲಕ ಭಾರೀ ಇಳಿಕೆ ಕಾಣುತ್ತಿದೆ. ಚಿನ್ನ ಕೊಳ್ಳುವವರಿಗೆ ಇಂದು ತುಸು ಸಮಾಧಾನದ ಸುದ್ದಿ ಹೊರ ಬಿದ್ದಿದೆ. ಇಂದು (ಸೋಮವಾರ) 1 ಗ್ರಾಂ 22 ಕ್ಯಾರಟ್ ಮತ್ತು 24 ಕ್ಯಾರಟ್ ಚಿನ್ನದ ಬೆಲೆ ಕ್ರಮವಾಗಿ ₹ 40 ಮತ್ತು ₹ 44 ಇಳಿಕೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ ನ 22 ಕ್ಯಾರಟ್ ಚಿನ್ನದ ಬೆಲೆ 66,500 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,550 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,350 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ ಗೆ 66,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ ಗೆ 9,300 ರುಪಾಯಿಯಲ್ಲಿ ಇದೆ. ಕಳೆದ 1 ವಾರದಿಂದ ಚಿನ್ನದ ಬೆಲೆ ನಿರಂತರವಾಗಿ ಇಳಿಕೆ ಕಾಣಲು ಆರಂಭ ಆಯಿತು. ಕೆಲವು ದಿನಗಳ ಹಿಂದೆ ಚಿನ್ನ ಮತ್ತಷ್ಟು ಕುಸಿತ ಕಂಡು ಈಗ ಹೊಸ ಹೊಸ ದಾಖಲೆ ಬರೆಯುತ್ತಿದೆ.…