Subscribe to Updates
Get the latest creative news from FooBar about art, design and business.
- ಹಿರಿಯ ಪತ್ರಕರ್ತ ಬಾಬುರಾವ ಯಡ್ರಾಮಿ ಅವರಿಗೆ ರಾಜ್ಯಮಟ್ಟದ ‘ಕನ್ನಡ ಜಂಗಮ’ ಪ್ರಶಸ್ತಿ
- KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್: ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ
- ಲೈಂಗಿಕ ಬೇಡಿಕೆ ಈಡೇರಿಸದಿದ್ದರೆ ಮಹಿಳೆಯ ವಿಡಿಯೋ ವೈರಲ್ ಬೆದರಿಕೆ: ವ್ಯಕ್ತಿಯ ಬಂಧನ, ಆತನ ಪತ್ನಿಯ ವಿರುದ್ಧವೂ ಪ್ರಕರಣ ದಾಖಲು
- ಸಿದ್ದರಾಮಯ್ಯ ಚುನಾವಣಾ ರಾಜಕೀಯದಲ್ಲೇ ಉಳಿಯಲು ಮನವೊಲಿಸುತ್ತೇವೆ: ಶಾಸಕ ಕೆ.ಎಂ. ಶಿವಲಿಂಗೇಗೌಡ
- ಕರ್ನಾಟಕ ರಾಜ್ಯ ನಾಯಕ ಹಿತರಕ್ಷಣಾ ವೇದಿಕೆ: ರಾಜ್ಯ ಉಪಾಧ್ಯಕ್ಷರಾಗಿ ಎಂ. ದಾಸಪ್ಪ ಆಗತ್ತೂರು ನೇಮಕ
- ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!
- ಅಕ್ರಮ ಸಾರಾಯಿ ಮಾರಾಟಕ್ಕೆ ತಕ್ಷಣ ಕಡಿವಾಣ ಹಾಕಿ: ಗೌತಮ್ ಪಿ. ಮೇತ್ರೆ ಆಗ್ರಹ
- ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
Author: admin
ಭಾರತೀಯರಲ್ಲಿ ಉಪವಾಸ ಎನ್ನುವುದು ಒಂದು ಸಂಪ್ರದಾಯ. ಒಂದು ದಿನ ಉಪವಾಸ ಮಾಡುವುದು ಆರೋಗ್ಯಕ್ಕೆ ಒಳ್ಳೆಯದು ಎಂಬ ಮಾತು ಕೇಳುತ್ತಿರುತ್ತೇವೆ. ಆದರೆ ಮೂರು ದಿನಗಳ ಕಾಲ ನೀರನ್ನು ಕುಡಿಯದೆ ಉಪವಾಸ ಮಾಡುವುದರಿಂದ ದೇಹದ ಮೇಲೆ ಅಪಾಯಕಾರಿ ಪರಿಣಾಮ ಬೀರುತ್ತದೆ ಎಂಬುದು ಸಂಶೋಧನೆಯಲ್ಲಿ ತಿಳಿದುಬಂದಿದೆ. ಇಷ್ಟು ದಿನ ನಿರ್ಜಲ ವ್ರತವನ್ನು ಆಚರಿಸಿದಾಗ ದೇಹದಲ್ಲಿ ಶಕ್ತಿಯ ಕೊರತೆ ಉಂಟಾಗಿ ದೇಹದಲ್ಲಿ ಸಂಗ್ರಹವಾಗಿರುವ ಗ್ಲೈಕೋಜನ್ ಕಡಿಮೆಯಾಗುತ್ತದೆ. ಇದರಿಂದಾಗಿ ರಕ್ತದಲ್ಲಿನ ಸಕ್ಕರೆಯ ಪ್ರಮಾಣವು ಕಡಿಮೆಯಾಗುತ್ತದೆ. ನಿರ್ಜಲ ಉಪವಾಸ ಮುಂದುವರಿದಂತೆ ದೇಹದಲ್ಲಿ ಕೀಟೋಸಿಸ್ ಪ್ರಮಾಣವು ಹೆಚ್ಚಾಗಲು ಪ್ರಾರಂಭಿಸುತ್ತದೆ. ಇದರಿಂದ ದೇಹದಲ್ಲಿ ಸಂಗ್ರಹವಾದ ಕೊಬ್ಬು ಕೂಡ ಕಡಿಮೆಯಾಗಲು ಪ್ರಾರಂಭಿಸುತ್ತದೆ. ಉಪವಾಸದ ಸಮಯದಲ್ಲಿ ಇನ್ಸುಲಿನ್ ಮಟ್ಟವು ಸಂಭಾವ್ಯವಾಗಿ ಕಡಿಮೆಯಾಗುತ್ತದೆ. 72 ಗಂಟೆಗಳ ಕಾಲ ಉಪವಾಸವು ಒಟ್ಟು 7,000 ಕ್ಯಾಲೋರಿಗಳ ನಷ್ಟಕ್ಕೆ ಕಾರಣವಾಗುತ್ತದೆ. ಇದು ಸರಿಸುಮಾರು ಎರಡು ಪೌಂಡ್ಗಳಷ್ಟು ಕೊಬ್ಬಿನ ನಷ್ಟಕ್ಕೆ ಸಮನಾಗಿರುತ್ತದೆ ಎನ್ನಲಾಗಿದೆ. ಬದಲಾಯಿಸಲಾಗದ ಮೂತ್ರಪಿಂಡದ ಗಾಯ, ಹೈಪೊಟೆನ್ಷನ್, ಆರ್ಹೆತ್ಮಿಯಾ, ಮತ್ತು ಹೈಪರ್ಯುರಿಸೆಮಿಯಾ, ಕಡಿಮೆ ಸೋಡಿಯಂ, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಕ್ಯಾಚೆಕ್ಸಿಯಾ / ನೇರ…
ಚೂಯಿಂಗ್ ಗಮ್ ಅನ್ನು ನುಂಗುವುದರಿಂದ ಯಾವುದೇ ಅಡ್ಡ ಪರಿಣಾಮವಿದೆಯೇ? ದೇಹದ ಭಾಗಗಳ ಮೇಲೆ ಇದು ಯಾವುದಾದರು ಪರಿಣಾಮ ಬಿರುತ್ತದೆಯೇ? ಚೂಯಿಂಗ್ ಗಮ್ ಸುಮಾರು 7 ವರ್ಷಗಳ ಕಾಲ ಹೊಟ್ಟೆಯಲ್ಲಿ ಇರುತ್ತದೆ ಎಂಬ ಮಾತಿದೆ. ಚೂಯಿಂಗ್ ಗಮ್ ಅನ್ನು ನುಂಗುವುದರಿಂದ ಅದು ಹೊಟ್ಟೆಯ ಮೂಲಕ ಹಾದುಹೋದ ನಂತರ ಕರುಳನ್ನು ನಿರ್ಬಂಧಿಸಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಚ್ಯೂಯಿಂಗ್ ಗಮ್ ಜೀರ್ಣವಾಗುವುದಿಲ್ಲ ಎಂದು ಹೇಳಲಾಗುತ್ತದೆ. ಏಕೆಂದರೆ.. ಇದು ಕರಗದ ವಸ್ತುವಿನಿಂದ ಮಾಡಲ್ಪಟ್ಟಿದೆ. ಆದರೂ, ಅದನ್ನು ನುಂಗಿದರೆ, ಅದು ಕೆಲವು ಗಂಟೆಗಳಲ್ಲಿ ಅಥವಾ ಕೆಲವು ದಿನಗಳ ನಂತರವೂ ಮಲದಲ್ಲಿ ಸ್ವತಃ ಹಾದುಹೋಗುತ್ತದೆ ಎಂದು ಹೇಳಲಾಗುತ್ತದೆ. ಚೂಯಿಂಗ್ ಗಮ್ ಅನ್ನು ಯಾವಾಗಲೂ ಸೀಮಿತ ಪ್ರಮಾಣದಲ್ಲಿ ಸೇವಿಸಬೇಕು. ಚೂಯಿಂಗ್ ಗಮ್ ಅನ್ನು ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಹಾನಿಗೊಳಿಸುತ್ತದೆ. ಇದು ಆರೋಗ್ಯಕ್ಕೆ ಹಾನಿಕಾರಕ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಚಾನೆಲ್ Subscribe ಮಾಡಿ:…
ಹಲ್ಲು ನೋವನ್ನು ಮನೆಮದ್ದುಗಳಿಂದ ಸುಲಭವಾಗಿ ಗುಣಪಡಿಸಬಹುದು. ಅಡುಗೆ ಮನೆಯಲ್ಲೇ ಇರುವ ಕೆಲವು ವಸ್ತುಗಳನ್ನು ಬಳಸಿ ಮದ್ದು ತಯಾರಿಸಬಹುದು.. ಲವಂಗದಿಂದ ಹಲ್ಲು ನೋವನ್ನು ನಿವಾರಿಸಬಹುದು. ಹಲ್ಲುನೋವು ಸಮಸ್ಯೆಗೆ ಲವಂಗದ ಎಣ್ಣೆ ತುಂಬಾ ಒಳ್ಳೆಯದು. ಲವಂಗದ ಎಣ್ಣೆಯಿಂದ ಹಲ್ಲುನೋವು ನಿವಾರಣೆಯಾಗುತ್ತದೆ. ಲವಂಗದ ಎಣ್ಣೆಯು ಯುಜೆನಾಲ್ ಎಂಬ ಸಂಯುಕ್ತವನ್ನು ಹೊಂದಿರುತ್ತದೆ. ಇದು ಹಲ್ಲುನೋವು, ಸೋಂಕುಗಳು, ಬ್ಯಾಕ್ಟೀರಿಯಾದ ಬೆಳವಣಿಗೆಯನ್ನು ತಡೆಯುತ್ತದೆ. ಇದಲ್ಲದೆ, ಲವಂಗ ಎಣ್ಣೆಯು ಬ್ಯಾಕ್ಟೀರಿಯಾ ವಿರೋಧಿ, ಆಂಟಿಫಂಗಲ್ ಮತ್ತು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ಹಲ್ಲುನೋವು ಕಡಿಮೆ ಮಾಡಲು ಇದು ಉಪಯುಕ್ತವಾಗಿದೆ. ಲವಂಗದ ಎಣ್ಣೆ ತಯಾರಿಸುವ ವಿಧಾನ ಲವಂಗವನ್ನು ತೆಗೆದುಕೊಂಡು ಚೆನ್ನಾಗಿ ರುಬ್ಬಿಕೊಳ್ಳಿ, ಗಾಜಿನ ಪಾತ್ರೆಯಲ್ಲಿ ಹಾಕಿ, ಲವಂಗವನ್ನು ಮುಚ್ಚುವಷ್ಟು ಆಲಿವ್ ಎಣ್ಣೆಯನ್ನು ಸುರಿಯಿರಿ ಮತ್ತು ಅದನ್ನು ಮುಚ್ಚಿ. ನಂತರ ಒಂದು ವಾರ ಅಥವಾ ಎರಡು ವಾರಗಳ ಕಾಲ ನೇರ ಸೂರ್ಯನ ಬೆಳಕಿನಲ್ಲಿ ಇರಿಸಿ, ಅದನ್ನು ಫಿಲ್ಟರ್ ಮಾಡಿ ಮತ್ತು ಲವಂಗ ಎಣ್ಣೆಯನ್ನು ಮತ್ತೊಂದು ಗಾಜಿನ ಪಾತ್ರೆಯಲ್ಲಿ ಸುರಿಯಿರಿ ಮತ್ತು ಅದನ್ನು ಬಳಸಿ.. ನೋವು ಎಲ್ಲಿದೆಯೋಮ…
ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು (ಎಎಸ್ಐ) ನಡೆಸಿದ ಉತ್ಖನನದ ವೇಳೆ ‘ಶೇಷಶಾಯಿ ವಿಷ್ಣು’ ವಿಗ್ರಹ ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯ ಸಿಂಧಖೇಡ್ ರಾಜಾ ಪಟ್ಟಣದಲ್ಲಿ ಪತ್ತೆಯಾಗಿದೆ. ಲಖುಜಿ ಜಾಧವರಾವ್ ಮಹಾರಾಜ್ ಛತ್ರಿ ಎಂಬ ಸಭಾಮಂಟಪವನ್ನು ಅನ್ವೇಷಿಸುವಾಗ ಶಿಲ್ಪ ಪತ್ತೆಯಾಗಿದೆ ಎಂದು ನಾಗ್ಪುರದ ಪುರಾತತ್ವಶಾಸ್ತ್ರಜ್ಞರು ತಿಳಿಸಿದ್ದಾರೆ. ಸಭಾಮಂಟಪದ ಪತ್ತೆಗೆ ಉತ್ಖನನದ ವೇಳೆ ಆಳವಾಗಿ ಪರಿಶೀಲನೆ ನಡೆಸಿದಾಗ ಮೊದಲಿಗೆ ಲಕ್ಷ್ಮಿ ದೇವಿಯ ವಿಗ್ರಹ ಪತ್ತೆಯಾಗಿದೆ, ನಂತರ ಶೇಷಶಾಯಿ ವಿಷ್ಣುವಿನ (ಮಲಗಿದ ರೂಪದಲ್ಲಿರುವ) ಬೃಹತ್ ವಿಗ್ರಹ ಪತ್ತೆಯಾಗಿದೆ. ಈ ಶಿಲ್ಪವು ಕ್ಲೋರೈಟ್ ಶಿಸ್ಟ್ ಶಿಲೆಯಿಂದ ಮಾಡಲ್ಪಟ್ಟಿದೆ. ಈ ರೀತಿಯ ಶಿಲ್ಪಗಳನ್ನು ಹೆಚ್ಚಾಗಿ ದಕ್ಷಿಣ ಭಾರತದಲ್ಲಿ ಹೊಯ್ಸಳು ತಯಾರಿಸುತ್ತಿದ್ದರು. ಇದರಲ್ಲಿ ವಿಷ್ಣು, ಶೇಷ ನಾಗನ ಮೇಲೆ ಮಲಗಿರುವ ಮತ್ತು ಲಕ್ಷ್ಮಿ ದೇವಿಯು ಕುಳಿತುಕೊಂಡು ವಿಷ್ಣುವಿನ ಪಾದಗಳನ್ನು ಒತ್ತುತ್ತಿರುವ ದೃಶ್ಯವಿದೆ. ವಿಗ್ರಹದ ಸುತ್ತಲೂ ವಿಷ್ಣು ದಶಾವತಾರ, ಸಮುದ್ರಮಂಥನವನ್ನು ಚಿತ್ರಿಸಲಾಗಿದೆ. ಸಮುದ್ರಮಂಥನದ ಅಶ್ವ, ಐರಾವತ ಮುಂತಾದವುಗಳೂ ವಿಗ್ರಹದ ಮೇಲೆ ಕಾಣಸಿಗುತ್ತವೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ನಟಿ ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ ಭಾನುವಾರ ವಿವಾಹವಾಗಿದೆ.ಇತ್ತೀಚೆಗಷ್ಟೇ ನಟಿಯ ಕುಟುಂಬಕ್ಕೆ ಅವರ ಮದುವೆಯಲ್ಲಿ ಸಂತೋಷವಿಲ್ಲ ಎಂಬ ವದಂತಿಗಳು ಹಬ್ಬಿದ್ದವು. ಈ ವರದಿಗಳಿಗೆ ಅಂತ್ಯ ಹಾಡುವ ಮೂಲಕ, ಶತ್ರುಘ್ನ ಸಿನ್ಹಾ ಇತ್ತೀಚೆಗೆ ಜಹೀರ್ ಮನೆಯಲ್ಲಿ ಕಾಣಿಸಿಕೊಂಡರು. ಮದುವೆ ಕಾರ್ಯಕ್ರಮದ ಕೆಲವು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನಟಿ ಸೋನಾಕ್ಷಿ ಸಿನ್ಹಾ ಬಹುಕಾಲದ ಗೆಳೆಯ ಜಹೀರ್ ಇಕ್ಬಾಲ್ ಜತೆ ಮದುವೆ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆದಿದೆ, ಸೋನಾಕ್ಷಿ ಸಿನ್ಹಾ ಮದುವೆಯ ಬಳಿಕ ಜಹೀರ್ ಇಕ್ಬಾಲ್ ಅವರ ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳಲಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ. ಇದೀಗ ಈ ಬಗ್ಗೆ ಜಹೀರ್ ಅವರ ತಂದೆ, ಉದ್ಯಮಿ ಇಟ್ಬಾಲ್ ರತ್ನಾಸಿ ಅವರು ಸ್ಪಷ್ಟನೆ ಕೊಟ್ಟಿದ್ದಾರೆ. ಜಹೀರ್ ಮದುವೆ ಸ್ಪೆಷಲ್ ಮ್ಯಾರೇಜ್ ಆಕ್ಟ್ ಅಡಿಯಲ್ಲಿ ನಡೆಯಲಿದೆ. ಮದುವೆ ಬಳಿಕ ಸೋನಾಕ್ಷಿ ಇಸ್ಲಾಂಗೆ ಮತಾಂತರಗೊಳ್ಳುವುದಿಲ್ಲ. ಈ ಮದುವೆ ಹಿಂದೂ ಅಥವಾ ಮುಸ್ಲಿಂ ಆಚರಣೆಗಳನ್ನು ಹೊಂದಿರುವುದಿಲ್ಲ ಮತ್ತು ವಿಭಿನ್ನವಾಗಿರಲಿದೆ ಎಂದಿದ್ದಾರೆ. ನಟಿ ಸೋನಾಕ್ಷಿ ಮತ್ತು ಇಕ್ಬಾಲ್ 2022ರಲ್ಲಿ ಬಿಡುಗಡೆಯಾದ…
ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್ ಊಟ ಸೇರದೆ ನಿದ್ದೆ ಬಾರದೇ ಒದ್ದಾಡುತ್ತಿದ್ದಾರೆ.. ಕ್ವಾರಂಟೀನ್ ಬ್ಯಾರಕ್ನಲ್ಲಿ ದರ್ಶನ್ರನ್ನು ಇರಿಸಲಾಗಿದ್ದು, ಕಳೆದ ರಾತ್ರಿ ಅವರಿಗೆ ಸರಿಯಾಗಿ ನಿದ್ದೆ ಬಂದಿಲ್ಲ. ಜೊತೆ ಜೈಲೂಟವೂ ಅವರಿಗೆ ಸೇರುತ್ತಿಲ್ಲ ಎನ್ನಲಾಗಿದೆ.ಸರಿಯಾಗಿ ಜೈಲೂಟ ಸೇವಿಸದಿದ್ದರಿಂದ ನಿದ್ದೆ ಕೂಡಾ ಬಾರದೆ ಅವರು ಒದ್ದಾಡಿದ್ದಾರೆ ಎಂದು ತಿಳಿದುಬಂದಿದೆ.. ಇನ್ನು ದರ್ಶನ್ ಪತ್ನಿ ದರ್ಶನ್ ಅವರಿಗೆ ಬೇಲ್ ಕೊಡಿಸಲು ಕಸರತ್ತು ಮಾಡುತ್ತಿದ್ದಾರೆ.. ಅದಕ್ಕಾಗಿ ಖ್ಯಾತ ವಕೀಲ ಸಿ.ವಿ.ನಾಗೇಶ್ ಅವರನ್ನು ನೇಮಿಸಿದ್ದಾರೆ.ನಾಗೇಶ್ ಅವರು ದರ್ಶನ್ ಅವರ ಪರವಾಗಿ ಬೇಲ್ ಅಪ್ಲಿಕೇಷನ್ಗೆ ಸಿದ್ಧತೆ ನಡೆಸಿದ್ದಾರೆ.ಶೀಘ್ರದಲ್ಲೇ ದರ್ಶನ್ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗುತ್ತದೆ.ಆದ್ರೆ ಕೋರ್ಟ್ ಅವರಿಗೆ ಜಾಮೀನು ಕೊಡುತ್ತಾ ಇಲ್ಲವಾ ಅನ್ನೋದೇ ಕುತೂಹಲ.ದರ್ಶನ್ಗೆ ಜಾಮೀನು ಸಿಕ್ಕರೆ ಅವರ ಮೇಲೆ ಹೂಡಿಕೆ ಮಾಡಿರುವ ಚಿತ್ರ ನಿರ್ಮಾಪಕ ನಿಟ್ಟುಸಿರು ಬಿಡಲಿದ್ದಾರೆ.ಆದ್ರೆ ಸಿ.ವಿ.ನಾಗೇಶ್ ಯಾವ ರೀತಿ ವಾದ ಮಾಡುತ್ತಾರೆ.? ಕೋರ್ಟ್ ಅದಕ್ಕೆ ಮನ್ನಣೆ ಕೊಡುತ್ತದಾ ನೋಡಬೇಕು.. ಇನ್ನೂ ಎಲ್ಲಾ 17 ಆರೋಪಿಗಳನ್ನೂ ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿಡಲಾಗಿದೆ.. ಆದ್ರೆ ಒಂದೇ…
ಹದಿನೇಳು ವರ್ಷದ ಪರ್ವೀನಾ ಎಂಬ ಬಾಲಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹರಿಯಾಣದ ಫರಿದಾಬಾದ್ನಲ್ಲಿ ನಡೆದಿದೆ.ಘಟನೆಗೆ ಸಂಬಂಧಿಸಿದಂತೆ ಈಕೆಯ ತಾಯಿ ಅನೀತಾ ಬೇಗಂಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.. ಸೌದಿಯಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿಯ ತಂದೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಬಾಲಕಿಯ ತಾಯಿಯನ್ನು ಬಂಧಿಸಲಾಗಿದೆ.. ಘಟನೆಯ ವಿವರ: ಅನೀತಾ ಬೇಗಂನ ಗಂಡ ತಾಹೀರ್ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಾರೆ. ತಾಹೀರ್ ಪತ್ನಿ ಹಾಗೂ ಮಗಳು ಫರೀದಾಬಾದ್ನಲ್ಲಿ ವಾಸಿಸುತ್ತಿದ್ದರು.ಗಂಡ ಯಾವಾಗಲೂ ಕರೆ ಮಾಡಿ ಇಬ್ಬರನ್ನೂ ಮಾತನಾಡಿಸುತ್ತಿದ್ದ.ಆದ್ರೆ ಕೆಲ ದಿನಗಳಿಂದ ಪತ್ನಿ ಮಾತ್ರ ಮಾತನಾಡುತ್ತಿದ್ದಳು. ಮಗಳ ಬಗ್ಗೆ ಕೇಳಿದರೆ ಏನೇನೋ ಸಬೂಬು ಹೇಳುತ್ತಿದ್ದಳು.ಇದರಿಂದ ಅನುಮಾನಗೊಂಡ ತಾಹೀರ್ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಪೊಲೀಸರು ಮನೆಗೆ ಹೋಗಿ ವಿಚಾರಣೆ ಮಾಡಿದಾಗ ಮಗಳು ಪರ್ವೀನಾ ಅಲ್ಲಿ ಇರಲಿಲ್ಲ. ಅನುಮಾನಗೊಂಡ ಪೋಲಿಸರು ಬಾಲಕಿಯ ತಾಯಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದಾಗ ಮನೆಯಲ್ಲೇ ಮಗಳನ್ನು ಹೂತುಹಾಕಿದ್ದಾಗಿ ಆಕೆ ಹೇಳಿಕೊಂಡಿದ್ದಾಳೆ. ನಾನು ಮಗಳನ್ನು ಕೊಲೆ ಮಾಡಿಲ್ಲ. ಮಗಳು ಪರ್ವೀನಾ ಹುಡುಗನೊಬ್ಬನನ್ನು ಪ್ರೀತಿಸುತ್ತಿದ್ದಳು. ಹೀಗಾಗಿ…
ತೆಂಗಿನ ಎಣ್ಣೆಯ ಅನೇಕ ಆರೋಗ್ಯ ಪ್ರಯೋಜನಗಳಿಂದಾಗಿ ಅಪಾರ ಜನಪ್ರಿಯತೆಯನ್ನು ಗಳಿಸಿದೆ. ಇದನ್ನು ಪ್ರತಿನಿತ್ಯ ಸೇವಿಸುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು. ಪ್ರತಿದಿನ ಬೆಳಗ್ಗೆ ಬರಿ ಹೊಟ್ಟೆಯಲ್ಲಿ ಒಂದು ಚಮಚ ತೆಂಗಿನೆಣ್ಣೆಯನ್ನು ಸೇವಿಸಿದರೆ ಒಂದು ತಿಂಗಳೊಳಗೆ ದೇಹಕ್ಕೆ ಹಲವಾರು ಅದ್ಭುತವಾದ ಲಾಭಗಳು ಸಿಗುತ್ತವೆ. ಚಯಾಪಚಯ ವರ್ಧನೆ; ತೆಂಗಿನ ಎಣ್ಣೆಯಲ್ಲಿ ಮಧ್ಯಮ ಸರಪಳಿ ಕೊಬ್ಬಿನಾಮ್ಲಗಳು ಇರುವುದರಿಂದ ನಮ್ಮ ದೇಹಕ್ಕೆ ಸುಲಭವಾಗಿ ಲಭ್ಯವಿರುವ ಶಕ್ತಿಯ ಮೂಲವನ್ನು ಒದಗಿಸುತ್ತದೆ. ಇದು ನಮ್ಮ ಚಯಾಪಚಯವನ್ನು ವೇಗಗೊಳಿಸುತ್ತದೆ. ತೆಂಗಿನ ಎಣ್ಣೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಜ್ವರ ಮತ್ತು ರೋಗಗಳನ್ನು ದೂರವಿಡುತ್ತದೆ. ಜೀರ್ಣಕ್ರಿಯೆ; ತೆಂಗಿನ ಎಣ್ಣೆ ಸೇವನೆಯು ಕರುಳಿನ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದರ ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳು ಅನಗತ್ಯ ಕರುಳಿನ ಬ್ಯಾಕ್ಟೀರಿಯಾವನ್ನು ಕೊಲ್ಲುತ್ತವೆ. ಇದು ಹೊಟ್ಟೆಯುಬ್ಬರ, ಮಲಬದ್ಧತೆ ಮತ್ತು ಇತರ ಜೀರ್ಣಕಾರಿ ಅಸ್ವಸ್ಥತೆಗಳನ್ನು ಸಹ ನಿವಾರಿಸುತ್ತದೆ. ತೆಂಗಿನ ಎಣ್ಣೆಯು ಅಜೀರ್ಣಕ್ಕೆ ಕಾರಣವಾಗುವ ವಿವಿಧ ಬ್ಯಾಕ್ಟೀರಿಯಾ ಮತ್ತು ಶಿಲೀಂಧ್ರಗಳ ವಿರುದ್ಧ ಹೋರಾಡುತ್ತದೆ. ತೆಂಗಿನ ಎಣ್ಣೆಯಲ್ಲಿ ವಿಟಮಿನ್…
ಜೆಡಿಎಸ್ ವಿಧಾನಪರಿಷತ್ ಸದಸ್ಯ ಡಾ ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯದ ಆರೋಪದ ಪ್ರಕರಣವನ್ನು ಸಿಐಡಿಗೆ(CID) ವರ್ಗಾವಣೆ ಮಾಡಲಾಗಿದೆ. ಈಗಾಗಲೇ ಬಂಧನವಾಗಿರುವ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಹಿತೇಂದ್ರ ಆದೇಶ ಹೊರಡಿಸಿದ್ದಾರೆ ಎಂದು ವರದಿ ತಿಳಿಸಿದೆ. ಕಾನೂನು ಸುವ್ಯವಸ್ಥೆಯ ಎಡಿಜಿಪಿ ಹಿತೇಂದ್ರ ಸೂರಜ್ ರೇವಣ್ಣ ವಿರುದ್ಧದ ಪ್ರಕರಣವನ್ನು ಸಿಐಡಿಗೆ ವಹಿಸಿದ್ದು, ಈ ಸಂಬಂಧ ಹಾಸನ ಎಸ್ಪಿ, ಸಿಐಡಿ ಡಿಜಿಪಿಗೆ ಪತ್ರ ಬರೆದಿದ್ದಾರೆ. ಖುದ್ದು ಸಿಐಡಿ ಕಚೇರಿಗೆ ತೆರಳಿ ಕೇಸ್ ಫೈಲ್ ನೀಡುವಂತೆ ಸೂಚನೆ ನೀಡಿದ್ದಾರೆ. ಅಲ್ಲದೇ ತನಿಖೆಗೆ ತಯಾರಿ ಮಾಡಿಕೊಳ್ಳಲು ಸಿಐಡಿ ಅಧಿಕಾರಿಗಳಿಗೆ ಸಹ ಸೂಚಿಸಿದ್ದಾರೆ. ಈ ಸಂಬಂಧ ಗೃಹ ಸಚಿವ ಡಾ ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಕಂಪ್ಲೇಂಟ್ ಬಂದಿದೆ, ಎಫ್ಐಆರ್ ಸಹ ದಾಖಲಾಗಿದೆ. ಪ್ರಕರಣದ ತನಿಖೆ ಸಿಐಡಿಗೆ ವಹಿಸುತ್ತೇವೆ. ಇಂತಹ ಪ್ರಕರಣಗಳನ್ನ ಸಿಐಡಿಗೆ ಕೊಡಬೇಕಾಗುತ್ತದೆ ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಡಿಎಸ್ಪಿಯೊಬ್ಬರು ಮಹಿಳಾ ಪೊಲೀಸ್ ಪೇದೆ ಜೊತೆ ಲಾಡ್ಜ್ ವೊಂದರಲ್ಲಿ ಸಿಕ್ಕಿಬಿದ್ದು, ತನ್ನ ಉನ್ನತ ಹುದ್ದೆಯಿಂದೆ ಕೆಳದರ್ಜೆಯ ಪೊಲೀಸ್ ಪೇದೆ ಹುದ್ದೆಗೆ ಹಿಂಬಡ್ತಿ ಪಡೆದ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ. ಉನ್ನಾವೋದ ಬಿಘಪುರ್ ಠಾಣೆಯಲ್ಲಿ ಶಂಕರ್ ಕನೌಜಿಯಾ ಎಂಬವರು ಮೊದಲು ಸರ್ಕಲ್ ಆಫೀಸರ್ ಆಗಿ ಸೇವೆ ಸಲ್ಲಿಸಿದ್ದರು. ಆ ಬಳಿಕ ಡಿಎಸ್ಪಿ ಆಗಿ ಬಡ್ತಿ ಪಡೆದಿದ್ದರು. ಡಿಎಸ್ಪಿ ಆಗಿ ಹುದ್ದೆಗೇರಿದ ಬಳಿಕ ಅವರು ಮಹಿಳಾ ಪೇದೆಯೊಬ್ಬರ ಜೊತೆ ಸಂಬಂಧ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ. ಡಿಎಸ್ಪಿ ಶಂಕರ್ ಕನೌಜಿಯಾ ತನಗೆ ಕೌಟುಂಬಿಕ ವಿಚಾರದ ಕಾರಣದಿಂದ ತುರ್ತಾಗಿ ಒಂದು ವಾರದ ರಜೆ ಬೇಕಾಗಿದೆ ಎಂದು ರಜೆಯನ್ನು ತೆಗೆದುಕೊಂಡಿದ್ದರು. ರಜೆ ತೆಗೆದುಕೊಂಡು ಮನೆಗೆ ಹೋಗುವ ಬದಲು ಮಹಿಳಾ ಪೇದೆ ಜೊತೆ ನೇರವಾಗಿ ಕಾನ್ಪುರದ ಹೊಟೇಲ್ ವೊಂದರಲ್ಲಿ ತೆರಳಿ ಚೆಕ್ ಇನ್ ಆಗಿದ್ದಾರೆ ಎನ್ನಲಾಗಿದೆ.. ಈ ವೇಳೆ ತನ್ನ ಎರಡು ಮೊಬೈಲ್ ಫೋನ್ ನ್ನು ಸ್ವಿಚ್ಡ್ ಆಫ್ ಮಾಡಿಕೊಂಡಿದ್ದಾರೆ. ಇತ್ತ ಗಂಡ ಮನೆಗೆ ಬಾರದೇ ಇರುವುದರಿಂದ ಶಂಕರ್ ಅವರಿಗೆ…